Author: editor.udayarashmi@gmail.com

ವಿಜಯಪುರ: ಪೂಜ್ಯ ಶಿವಯ್ಯ ಮಹಾಸ್ವಾಮೀಜಿ ಆಶೀರ್ವಾದದ ನೆರಳಲ್ಲಿ ಭಕ್ತರೆಲ್ಲರೂ ಸೇರಿ ಪ್ರಾರಂಭ ಮಾಡಿರುವ ಶ್ರೀ ಗುರು ಚಕ್ರವರ್ತಿ ಸದಾಶಿವ ಶಿವಯೋಗೀಶ್ವರ ಸೌಹಾರ್ದ ಸಹಕಾರಿ ಸಂಸ್ಥೆಯು ಶ್ರೀಮಠದ ಭಕ್ತರ ಪಾಲಿನ ಭಾಗ್ಯನಿಧಿ ಆಗಲಿ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಸಚಿವ ಎಂ.ಬಿ.ಪಾಟೀಲ ಹೇಳಿದರು. ಗುರುವಾರ ನಗರದ ಸ್ಟೇಷನ್ ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಸದಾಶಿವ ಶಿವಯೋಗೀಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಸ್ಥೆಯ ವಿಜಯಪುರ ಶಾಖೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.ಸಾನಿಧ್ಯ ವಹಿಸಿದ್ದ ಶಿವಯ್ಯ ಮಹಾಸ್ವಾಮೀಜಿ ಮಾತನಾಡಿ, ಹಣವನ್ನು ಉಳಿಸುವ, ಬಳಸುವ, ಅದನ್ನು ಬಳಸಿ ಬೆಳೆಸುವ ಜವಾಬ್ದಾರಿ ತಮ್ಮೆಲ್ಲರ ಮೇಲಿದೆ. ಸದಾಶಿವನ ಆಶೀರ್ವಾದದ ನೆರಳಲ್ಲಿ ಈ ಸಂಸ್ಥೆ ಭಕ್ತರ ಕಾಮಧೇನು ಆಗಲಿ ಎಂದು ಹಾರೈಸಿದರು.ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಶಾಸಕ ವಿಠಲ ಕಟಕದೋಂಡ, ಮಾಜಿ ಶಾಸಕ ರಾಜು ಆಲಗೂರ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಕೆಪಿಸಿಸಿ…

Read More

ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಮಂತ್ರಣ ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದಲ್ಲಿ ಜ.22 ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿಗೆ ಇಂದು ಆಮಂತ್ರಣ ನೀಡಿತು.ಈ ಬಗ್ಗೆ ಸ್ವತಃ ಪ್ರಧಾನಿಗಳು ಟ್ವೀಟ್ ಮಾಡಿದ್ದು, ತಮ್ಮ ಜೀವಮಾನದಲ್ಲಿ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಲಿರುವುದಕ್ಕೆ ಧನ್ಯನಾಗಿದ್ದೇನೆ ಎಂದು ಹೇಳಿದ್ದಾರೆ.ತಮಗೆ ಆಮಂತ್ರಣ ನೀಡಿದ್ದನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಜೈ ಶ್ರೀರಾಮ್! ಇಂದು ಅತ್ಯಂತ ಭಾವನಾತ್ಮಕ ದಿನವಾಗಿದೆ ಎಂದು ಹೇಳಿದ್ದಾರೆ.ಪ್ರಧಾನಿಗೆ ಆಮಂತ್ರಣ ನೀಡಿದ ತೀರ್ಥ ಕ್ಷೇತ್ರ ಟ್ರಸ್ಟ್ ನ ಭಾಗವಾಗಿ ರಾಜ್ಯದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು ಭಾಗಿಯಾಗಿದ್ದರು. ಜ.22 ರಂದು ಅಯೋಧ್ಯೆಯ ಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ ಎಂದು ಅ.25 ರಂದು ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗ್ವತ್ ಹೇಳಿದ್ದರು

Read More

ವಿಪಕ್ಷ ನಾಯಕ ಆಯ್ಕೆ ಮಾಡದ ಶೋಚನಿಯ ಸ್ಥಿತಿಯಲ್ಲಿ ಬಿಜೆಪಿ ಹುಬ್ಬಳ್ಳಿ: ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಒಂದು ರಾಷ್ಟ್ರೀಯ ಪಕ್ಷದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ಸ್ಪಷ್ಟ ಉದಾಹರಣೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ‌ ಹೆಸರು ಕೇಳಿ ಬರುತ್ತಿದ್ದು, ಯಾರು ಅಧ್ಯಕ್ಷರು ಎನ್ನುವುದು ಬಹಿರಂಗವಾಗಿ ಹೇಳುತ್ತಿಲ್ಲ. ದೆಹಲಿ ವರಿಷ್ಠರು ಒಂದು ಹೆಸರು ತೇಲಿಬಿಟ್ಟರು, ಅದರ ಪ್ರತಿಕ್ರಿಯೆಗಳನ್ನು ನೋಡಿ ಅದು ಫೇಲ್ ಆಯಿತು. ಹಾಗಾಗಿ ಈಗ ಮತ್ತೆ ಬೇರೆ ಹೆಸರಿನ ಪ್ರಯೋಗ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಶೋಭಾ ಕರಂದ್ಲಾಜೆ ಊಹಾಪೋಹ ಅಂತ ಹೇಳಿದ್ದಾರೆ. ರಾಜ್ಯಧ್ಯಕ್ಷರನ್ನು, ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನಿಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು” ಎಂದರು.ಡಿಕೆಶಿ-ಹೆಚ್‌ಡಿಕೆ ನಡುವಿನ ಕಿತ್ತಾಟದ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, ”ಬೆಂಗಳೂರು…

Read More

ನವದೆಹಲಿ: ಎಲ್ಲಾ ತರಗತಿಗಳ ಶಾಲಾ ಪಠ್ಯಪುಸ್ತಕಗಳಲ್ಲಿ ‘INDIA’ ಬದಲಿಗೆ ‘ಭಾರತ’ ಎಂದು ಸೇರಿಸಬೇಕು, ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರಚಿಸಿರುವ ಸಮಾಜ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಗೆ ಶಿಫಾರಸು ಮಾಡಲಾಗಿದೆ.ಸಮಿತಿಯ ಅಧ್ಯಕ್ಷ ಸಿ ಐ ಐಸಾಕ್ ಪ್ರಕಾರ, ಸಮಿತಿಯು ಪಠ್ಯಪುಸ್ತಕಗಳಲ್ಲಿ ‘INDIA’ ಹೆಸರನ್ನು ‘ಭಾರತ್’ ಎಂದು ಬದಲಿಸಲು ಸಲಹೆ ನೀಡಿದೆ, ಪಠ್ಯಕ್ರಮದಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ ಮತ್ತು ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಅನ್ನು ಸೇರಿಸಲು ಹೇಳಲಾಗಿದೆ.ಆದಾಗ್ಯೂ, ಸಮಿತಿಯ ಶಿಫಾರಸುಗಳ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಎನ್‌ಸಿಇಆರ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ.”ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಲ್ಲಿ ಭಾರತ್ ಎಂಬ ಹೆಸರನ್ನು ಬಳಸಬೇಕೆಂದು ಸಮಿತಿಯು ಸರ್ವಾನುಮತದಿಂದ ಶಿಫಾರಸು ಮಾಡಿದೆ. ಪಠ್ಯಪುಸ್ತಕಗಳಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ವನ್ನು ಪರಿಚಯಿಸಲು ನಾವು ಶಿಫಾರಸು ಮಾಡಿದ್ದೇವೆ” ಎಂದು ಐಸಾಕ್ ಪಿಟಿಐಗೆ ತಿಳಿಸಿದರು.ಸಮಿತಿಯು ಪಠ್ಯಪುಸ್ತಕಗಳಲ್ಲಿ ವಿವಿಧ ಯುದ್ಧಗಳಲ್ಲಿನ ಹಿಂದೂ ರಾಜರ ಗೆಲುವನ್ನು ಹೈಲೈಟ್ ಮಾಡಲು…

Read More

ರೂ.17,901.73 ಕೋಟಿ ಬರ ಪರಿಹಾರಕ್ಕೆ ಮನವಿ | 216 ತಾಲ್ಲೂಕುಗಳಲ್ಲಿ ಬರಗಾಲ ಘೋಷಣೆ ಬೆಂಗಳೂರು: ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸ್ಪಂದಿಸಿ, ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ರಾಜ್ಯ ಸರ್ಕಾರವು ರೂ.17,901.73 ಕೋಟಿಗಳ ಹೆಚ್ಚಿನ ಸಹಾಯಕ್ಕಾಗಿ ಕೇಂದ್ರ ಸರ್ಕಾರವನ್ನು ಕೋರಿದೆ.ಕರ್ನಾಟಕದ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನೊಳಗೊಂಡ ನಿಯೋಗವು ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿತು. ಈ ಸಭೆಗಳಲ್ಲಿ, ಅವರು ರಾಜ್ಯದ ಭೀಕರ ಸ್ಥಿತಿಯ ಕುರಿತು ಸಮಗ್ರವಾದ ಮಾಹಿತಿ ‌ನೀಡಿದರು.ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ಒಟ್ಟು ₹17,901.73 ಕೋಟಿ ಬರ ಪರಿಹಾರಕ್ಕೆ ಮನವಿ ಮಾಡಿದ್ದೇವೆ, ಶೀಘ್ರವೇ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.ಸೆಪ್ಟೆಂಬರ್ 22 ರ…

Read More

ಯಡ್ರಾಮಿ: ನಾಡಿನ ಪ್ರತಿಷ್ಠಿತ ದಿನಪತ್ರಿಕೆಯಾದ ’ವಿಜಯವಾಣಿ’ ಕಲಬುರ್ಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಬಾಬುರಾವ ಹಲಕರಟಿ, ಯಡ್ರಾಮಿ ಅವರನ್ನು ಸ್ಥಳಿಯ ಮುರುಗೇಂದ್ರ ಶಿವಯೋಗಿ ವಿರಕ್ತಮಠದಲ್ಲಿ ಶ್ರೀಮಠದ ಪೀಠಾಧಿಪತಿ ಸಿದ್ಧಲಿಂಗ ಸ್ವಾಮೀಜಿ ಸನ್ಮಾನಿಸಿದರು.ಮಂಗಳವಾರ ಸಂಜೆ ಬಾಬುರಾವ ಯಡ್ರಾಮಿ ದಂಪತಿಯನ್ನು ಶ್ರೀಮಠದ ವತಿಯಿಂದ ಗೌರವಿಸಿದ ಶ್ರೀಗಳು, ಬಾಬುರಾವ ಅವರು ತಮ್ಮ ಸರಳ – ಸಜ್ಜನಿಕೆಯ ವ್ಯಕ್ತಿತ್ವ ಮತ್ತು ಪ್ರತಿಭೆಯಿಂದ ನಾಡಿನ ನಂ.೧ ಪತ್ರಿಕೆಯ ಉನ್ನತ ಹುದ್ದೆಯನ್ನು ಅಲಂಕರಿಸಿದ್ದು ಅವರ ಹುಟ್ಟೂರು ಯಡ್ರಾಮಿಗೆ ದೊಡ್ಡ ಗೌರವ ತಂದಿದೆ. ತಮ್ಮ ಸೇವಾವಧಿಯಲ್ಲಿ ಬಾಬುರಾವ ಅವರು ಯಡ್ರಾಮಿ ತಾಲೂಕಿನ ಕೀರ್ತಿಯನ್ನು ಇನ್ನಷ್ಟು ಬೆಳಗುವಂತೆ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು.ಪಟ್ಟಣದ ಸಗರಾದ್ರಿ ಸಾಂಸ್ಕೃತಿಕ ಸಂಗಮದ ಕಾರ್ಯದರ್ಶಿ ಪ್ರಕಾಶ ಸಾಹು ಬೆಲ್ಲದ ಬಾಬುರಾವ ವ್ಯಕ್ತಿತ್ವದ ಕುರಿತು ಗುಣಗಾನ ಮಾಡಿದರು.ಲಕ್ಷ್ಮೀಕಾಂತ ಸೋನಾರ, ಮಲ್ಲಿಕಾರ್ಜುನ ಯಾದಗಿರಿ, ಮಂಜುನಾಥ್, ಸಿದ್ದರಾಮ ಸಣ್ಣಳ್ಳಿ, ಸೋಮಯ್ಯ ಹೊಸಮಠ ಸೇರಿದಂತೆ ಹಲವರಿದ್ದರು.

Read More

ಆಲಮಟ್ಟಿ: ಆಲಮಟ್ಟಿ ಜಲಾಶಯ 519.60ಮೀ ನಿಂದ 524.256 ಮೀ ಎತ್ತರದಿಂದ ನೀರಾವರಿಗೊಳ್ಳುವ ವಿಜಯಪುರ ಜಿಲ್ಲೆಯ ಪಾಲಿನ ನೀರನ್ನು ಪಡೆಯಲು ಮತ್ತು ನೀರಾವರಿ ಯೋಜನೆಗಳ ನೀರಿನ ಮರುಹಂಚಿಕೆಗಾಗಿ ಜನಜಾಗೃತಿಯ ಜತೆಗೆ ಧರಣಿ ಸತ್ಯಾಗ್ರಹ ಶೀಘ್ರ ಆರಂಭಿಸಲಾಗುವುದು ಎಂದು ಕೃಷ್ಣಾ ಕಣಿವೆ ರೈತ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹಾಗೂ ಕೃಷ್ಣಾ ಕಾಡಾ ಮಾಜಿ ಅಧ್ಯಕ್ಷ ಬಸವರಾಜ ಕುಂಬಾರ ಹೇಳಿದರು.ಆಲಮಟ್ಟಿಯಲ್ಲಿ ಬುಧವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಯುಕೆಪಿ ಮೂರನೇ ಹಂತದ ನೀರಾವರಿ ಯೋಜನೆಗಳ ಕಾಲುವೆಯ ಕಾಮಗಾರಿಗಳು ಜಿಲ್ಲೆಯಲ್ಲಿ ಪೂರ್ಣಗೊಂಡಿವೆ. ಆದರೆ ಅದಕ್ಕೆ ನೀರಿನ ಭರವಸೆಯಿಲ್ಲ. ಕಾನೂನಾತ್ಮಕ ಸಮಸ್ಯೆಗಳು ಸಾಕಷ್ಟಿವೆ.ತ್ಯಾಗ ಮಾಡಿದ ವಿಜಯಪುರ ಜಿಲ್ಲೆಗಿಂತಲೂ ನಾರಾಯಣಪುರ ಅಚ್ಚುಕಟ್ಟು ಪ್ರದೇಶದಲ್ಲಿ ಅತಿ ಹೆಚ್ಚು ನೀರಾವರಿಯಾಗಿದೆ. ಈ ತಾರತಮ್ಯ ನಿವಾರಿಸಿ, ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿನ ಪ್ರಸ್ತುತ ಅನುಷ್ಠಾನಗೊಂಡಿರುವ ಯೋಜನೆಗಳನ್ನು ಪರಿಗಣಿಸಿ ಪ್ರತಿ ಯೋಜನೆಗೂ ನೀರಿನ ಮರುಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.ನವ್ಹಂಬರ್ ತಿಂಗಳಲ್ಲಿ ಆಲಮಟ್ಟಿಯಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು, ಮತ್ತೊಂದೆಡೆ ಜಿಲ್ಲೆಯಾದ್ಯಂತ ಸಂಚರಿಸಿ ನೀರಾವರಿಗಾಗಿ ಜಾಗೃತಿ ಮೂಡಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು…

Read More

ಆಲಮಟ್ಟಿ: ಇಲ್ಲಿನ ರೈಲ್ವೆ ನಿಲ್ದಾಣ ಹತ್ತಿರದ ಹಜರತ್ ಸೈಯ್ಯದ್ ಶಹಾ ಮೆಹೆಬೂಬ್ ಸುಬಾನಿ ದರ್ಗಾದ ಉರುಸು ಇದೇ 26 ರಿಂದ ಎರಡು ದಿನ ನಡೆಯಲಿದೆ.ಗುರುವಾರ ಸಂಜೆ ಚಿಮ್ಮಲಗಿ ಮಠದ ಹತ್ತಿರ ಇರುವ ಇಬ್ರಾಹಿಂಸಾಬ್ ತೆಲಗಿ ಅವರ ಮನೆಯಿಂದ ಕುದುರೆ ಹಾಗೂ ವಿವಿಧ ವಾದ್ಯ ವೈಭವಗಳೊಂದಿಗೆ ಗಂಧವು ಆಲಮಟ್ಟಿಯ ಬಳಿಯ ದರ್ಗಾಕ್ಕೆ ತರಲಾಗುತ್ತದೆ.ಇದೇ 27 ಶುಕ್ರವಾರ, ಉರುಸಿನ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬೆಳಿಗ್ಗೆಯಿಂದಲೇ ಆರಂಭಗೊಳ್ಳಲಿವೆ. ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿದ್ದು, ನಂತರ ವಿವಿಧ ದಾನಿಗಳಿಗೆ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು ದರ್ಗಾ ಕಮಿಟಿಯ ಪ್ರಕಟಣೆ ತಿಳಿಸಿದೆ.

Read More

ಜಯ್ ನುಡಿ ನಾಲ್ಕು ರಸ್ತೆಗಳ ನಡುವೆ ನಿಂತು ಯಾವ ಕಡೆ ಪಯಣ ಬೆಳೆಸಿದರೆ ನನಗೆ ಕೆಲಸದಲ್ಲಿ ಲಾಭ ಸಿಗಬಹುದು? ಯಾವ ವೃತ್ತಿಯನ್ನು ಆಯ್ಕೆ ಮಾಡಿಕೊಂಡರೆ ಬದುಕನ್ನು ನೆಮ್ಮದಿಯಿಂದ ಕಳೆಯಬಹುದು? ಜೀವನ ಕಟ್ಟಿಕೊಳ್ಳಲು ಸುಲಭವಾಗಬಹುದು? ಈ ರಸ್ತೆಯಲ್ಲಿ ಹೆಜ್ಜೆ ಹಾಕಿದರೆ ಸರಿ ಆಗಬಹುದಾ? ಇಲ್ಲ ಆ ರಸ್ತೆಯಲ್ಲಿ ನಡೆಯೋದು ಒಳ್ಳೆಯದಾ? ಹೀಗೆ ಜೀವನದ ಮುಖ್ಯ ತಿರುವುಗಳಲ್ಲಿ ನಿರ್ಣಯ ಕೈಗೊಳ್ಳುವಾಗ ಮನಸ್ಸಿನಲ್ಲಿ ಹತ್ತು ಹಲವು ಪ್ರಶ್ನೆಗಳು ಕಾಡುತ್ತವೆ. ಗೊಂದಲವನ್ನು ಸೃಷ್ಟಿ ಮಾಡುತ್ತವೆ. ಈ ದಾರಿ ನನಗೆ ಹೇಳಿ ಮಾಡಿಸಿದ್ದು ಅಂತ ಒಂದು ಕ್ಷಣ ಅನಿಸಿದರೆ ಮರುಕ್ಷಣವೇ ಛೇ! ಇಲ್ಲ ಈ ದಾರಿಯಲ್ಲಿ ಬದುಕಿನುದ್ದಕ್ಕೂ ಸಾಗಲು ಸಾಧ್ಯವಿಲ್ಲ ಎನಿಸಿಬಿಡುತ್ತದೆ. ಹೀಗೆ ಆಯ್ಕೆಯಲ್ಲಿ ಗೊಂದಲ ಉಂಟಾದರೆ ಮನಸ್ಸು ದೃಢಗೊಳ್ಳದಿದ್ದರೆ ಬದುಕು ಬದಲಿಸುವ ನಿರ್ಣಯವನ್ನು ತೆಗೆದುಕೊಳ್ಲುವುದಾದರೂ ಹೇಗೆ? ಗೆಲುವಿನ ಹಾದಿಯ ಜಾಡು ಹಿಡಿಯುವುದಾದರೂ ಹೇಗೆ ಅಂತಿರೇನು? ಅಂದ ಹಾಗೆ ಎಂಥ ಎತ್ತರಕ್ಕೇರಿದವರಿಗೂ ಈ ರೀತಿಯ ಗೊಂದಲ ಎದುರು ನಿಂತಿಲ್ಲ ಅಂತಿಲ್ಲ. ಗೊಂದಲದ ಗೂಡಿಂದ ಗೆಲುವಿನ ಬಾನಿಗೆ ನೆಗೆಯಬೇಕೆ? ಹಾಗಾದರೆ…

Read More

ಬ್ರಹ್ಮದೇವನಮಡು: ಶರಣರ ವಚನಗಳ ಮೂಲಕ ಮಾನವೀಯ ಮೌಲ್ಯಗಳು ಜೀವನದಲ್ಲಿ ರೂಡಿಸಿಕೊಳ್ಳಬೇಕು ಎಂದು ಕೆಂಭಾವಿಯ ಸಾಹಿತಿ ಸಂಶೋಧಕ ನಿಂಗನಗೌಡ ದೇಸಾಯಿ ಹೇಳಿದರು.ಸಿಂದಗಿ ತಾಲೂಕು ಮುರಡಿ ಗ್ರಾಮದ ಗುರು ಘಂಟಾಕರ್ಣ ಶಿವಯೋಗಿಗಳ ೧೯ನೇ ಪುಣ್ಯಾರಾಧನೆಯ ನಿಮಿತ್ಯ ಸಾಲೋಟಗಿಯ ಶಿವಯೋಗೇಶ್ವರರಪುರಾಣ ಪ್ರವಚನ ಮಹಾಮಂಗಲ ಹಾಗೂ ಧರ್ಮಸಭೆಯಲ್ಲಿ ಅವರು ಮಾತನಾಡಿ, ಪ್ರತಿಯೊಬ್ಬರು ಕಾಯಕದ ಜೀವನ ಸಾಗಿಸುವದರ ಜೊತೆಗೆ ಜೀವನದಲ್ಲಿ ಧಯೆ, ಧರ್ಮ,ಪ್ರೀತಿ, ವಿಶ್ವಾಸ, ಧಾನ ಧರ್ಮ ಅಳವಡಿಸಿಕೊಂಡುನಮ್ಮ ಶರಣರ ಆಶಯದಂತೆ ಬದುಕು ಮಾಡಬೇಕು ಎಂದು ಹೇಳಿದರು.ದಿವ್ಶಸಾನಿಧ್ಶ ವಹಿಸಿ ಕಡಕೋಳ ಮಡಿವಾಳೇಶ್ವರ ಮಹಾಮಠದ ಡಾ.ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿ,ಗುರು ಘಂಟಾಕರ್ಣ ಶಿವಯೋಗಿಗಳು ಹಾಕಿ ಕೊಟ್ಟಿರುವ ಸನ್ಮಾರ್ಗದಲ್ಲಿ ನಡೆಯುವ ಮೂಲಕ ಪ್ರತಿಯೊಬ್ಬರು ಸುಂದರ ಮತ್ತು ಸಂತೋಷದ ಜೀವನ ನಡೆಸಬೇಕು. ಶರಣರು- ಸಂತರು ನಡೆದಾಡಿದ ನೆಲದ ಮೇಲೆ ನಾವು ಸುಂದರ ಬದುಕು ಕಟ್ಟಿಕೊಂಡು ಧರ್ಮ ತಳಹದಿಯ ಮೇಲೆ ನಡೆಯಬೇಕು. ಕಡಕೋಳದ ಮಡಿವಾಳೇಶ್ವರರು ತಮ್ಮದೇಯಾದ ಒಂದು ಅನುಭವ ಮಂಟಪ ಸ್ಥಾಪಿಸಿಕೊಂಡು ಸ್ವರಚಿತ, ಸತ್ವಯುತ ಹಾಡುಗಳನ್ನು,ವಚನಗಳನ್ನು ಜೋಡಿಸಿ ಈ ಸಮಾಜದ ಅಂಕುಡೊಂಕುಗಳನ್ನು ನಿರ್ಭಿಡೆಯಿಂದ ಖಂಡಿಸಿದ್ದಾರೆಅಂತಹ…

Read More