Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಿಂದ ಶ್ರೀಶೈಲಕ್ಕೆ ಪಾದಯಾತ್ರೆ ಕೈಗೊಂಡಿರುವ ನೂರಾರು ಭಕ್ತರಿಗೆ ಬಿಸಿಲಿನ ತಾಪ ತಗ್ಗಿಸಲು ಓಂ ಸಾಯಿ ಎಂಟರಪ್ರೈಜಸ್ ಮಾಲಿಕ ಶಿವಾನಂದ ಎಸ್. ಸುಕಂದ ಅವರು ಎಲ್ಲ ಭಕ್ತಾಧಿಗಳಿಗೆ ಟೋಪಿ ವಿತರಿಸಿದರು.ಪ್ರತಿ ವರ್ಷ ಶ್ರೀಶೈಲ ಪಾದಯಾತ್ರಿಗಳಿಗೆ ವಿವಿಧ ಸೇವೆ ನೀಡುತ್ತಿರುವ ಸುಕಂದ ಅವರು ಈ ಬಾರಿ ಟೋಪಿ ಹಾಗೂ ಕುಡಿಯಲು ನೀರಿನ ಬಾಟಲ್ ಸೇವೆ ನೀಡಿದರು.

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಕರ್ನಾಟಕ ಸರ್ಕಾರದ ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ ೬ ಶುಕ್ರವಾರ ದಂದು ಮಂಡಿಸಲಿದ್ದಾರೆ.೧೭ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.ರಾಜ್ಯದ ೨೩೦ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ ೦೬ ಮಾರ್ಚ್ ೨೦೨೬ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ ೨೩೦ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (ಐಇಆ) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.ವಿಧಾನಸೌಧದಲ್ಲಿ ನಡೆಯುವ ಬಜೆಟ್…

Read More

ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆ | ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ | ಡಿಸಿ ಡಾ.ಆನಂದ ಕೆ. ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನೀಡಲಾದ ಸಲಹೆ ಸೂಚನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಮನವಿ ಮಾಡಿದ್ದಾರೆ.ರಾಜ್ಯದ ಕೆಲ ಜಿಲ್ಲೆಗಳಲ್ಲಿ ೩ ರಿಂದ ೬ ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆಯಿದೆ. ತೀವ್ರ ತಾಪಮಾನವು ಸಾರ್ವಜನಿಕರ ಆರೋಗ್ಯದ ಮೇಲೆ, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ಮತ್ತು ಹೀಟ್ ಸ್ಟ್ರೋಕ್ ತಡೆಗಟ್ಟಲು ಮತ್ತು ತಗ್ಗಿಸಲು ಸಾರ್ವಜನಿಕರು ಗಮನ ಹರಿಸಬೇಕು ಎಂದವರು ತಿಳಿಸಿದ್ದಾರೆ.ಗರಿಷ್ಠ ತಾಪಮಾನದ ಅವಧಿಯಲ್ಲಿ ಅದರಲ್ಲೂ ಮಧ್ಯಾಹ್ನ ೧೨ ರಿಂದ ೩ಗಂಟೆರವರೆಗೆಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು ಎಂದವರು ತಿಳಿಸಿದ್ದಾರೆ.ಪೂರ್ವಾಹ್ನ ೧೧ ರಿಂದ ಸಂಜೆ ೪…

Read More

ಅಧಿಕಾರಿಗಳಿಂದ ಮಾ.೧೫ ಕ್ಕೆ ಕನ್ನೂರ ೧೧೦ ಕೆ.ವಿ ಘಟಕ ಉದ್ಘಾಟನೆ ಮಾಡುವ ಲಿಖಿತ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನ ಕನ್ನೂರನಲ್ಲಿ ಕಳೆದ ಒಂದು ವರ್ಷದ ಹಿಂದೆ ಉದ್ಘಾಟನೆ ಆಗಬೇಕಿರುವ ೧೧೦ ಕೆ.ವಿ ವಿದ್ಯತ್ ಘಟಕ ಇಲ್ಲಿಯವರೆಗೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನೀರ್ಲಕ್ಷ್ಯದಿಂದ ಆಗಿಲ್ಲ, ಎಂದು ಆಗ್ರಹಿಸಿ ರೈತರು ಸುಮಾರು ೩ ಗಂಟೆಗಳ ಕಾಲ ಪ್ರತಿಭಟನೆ ಮಾಡಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲೆಯ ತಿಡಗುಂದಿ ಕೆ.ಇ.ಬಿ.ಯ ಮುಂದೆ ಜಮಾಯಿಸಿದ ರೈತರು ಕಚೇರಿ ಗೇಟಿಗೆ ಹಸಿರು ಶಾಲು ಕಟ್ಟಿ ಘೋಷಣೆ ಕೂಗಿದರು.ಈ ವೇಳೆ ಜಿಲ್ಲಾಧ್ಯಕ್ಷರಾದ ಸಂಗಮೆಶ ಸಗರ ಮಾತನಾಡಿ, ಗುತ್ತಿಗೆದಾರನ ವಿಳಂಬ ನೀತಿಯಿಂದ ೨ ವರ್ಷದ ಹಿಂದೆ ಉದ್ಘಾಟನೆ ಆಗಬೇಕಿರುವ ಕನ್ನೂರಿನ ಹೊಸ ಕೆ.ಇ.ಬಿ ಇಲ್ಲಿಯವರೆಗೆ ಆಗಿಲ್ಲ ಎಂದರೆ ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕೂಡಾ ಪ್ರಮುಖ ಕಾರಣವಾಗಿದೆ ಎಂದರು.ಇಂದು ಸಾಯಂಕಾಲದ ಒಳಗಾಗಿ ಉದ್ಘಾಟನೆ ಮಾಡಬೇಕು, ಇಲ್ಲವಾದಲ್ಲಿ ಇಲ್ಲಿಯೇ ಟೆಂಟ್ ಹೊಡೆದು ಅಡುಗೆ ಮಾಡಿ ಹೋರಾಟ ಮಾಡಲಾಗುವುದು ಎಂದು…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಯುಕೆಪಿ ಕಚೇರಿ ಮೇಲೆ ಬೆಳಗ್ಗೆ ವಿಜಯಪುರ ಲೋಕಾಯುಕ್ತ ಎಸ್.ಪಿ ಮಹೇಶ ಇವರ ನೇತೃತ್ವದಲ್ಲಿ ದಾಳಿ ನಡೆದಿದೆ.ಅಲ್ಲಿ ಕೆಲಸ ಮಾಡುತ್ತಿರುವ ಕಿರಿಯ ಅಭಿತಂತರ ಪ್ರಕಾಶ ಗೆಡಬಂಡಿ ಇವರ ಕುರಿತು ಎಲ್ಲ ಕಾಗದ ಪತ್ರಗಳನ್ನು ಲೋಕಾಯುಕ್ತರು ತಪಾಸಣೆ ನಡೆಸಿದರು.ಅದರಂತೆ ಅದೇ ವೇಳೆ ಪ್ರಕಾಶ ಗಡಬಂದಿಯವರ ಬೆಂಗಳೂರಿನ ಮಹಾದೇವಪುರ ಬಡಾವಣೆಯಲ್ಲಿರುವ ಮನೆ, ಮತ್ತು ಬಾಲ್ಕಿಯಲ್ಲಿರುವ ಮನೆ ಮತ್ತು ಬಾಲ್ಕಿ ಯಲ್ಲಿರುವ ದೀಪಾಂಕರ ಶಾಲೆ ಮೇಲೆ ಲೋಕಾಯುಕ್ತರು ದಾಳಿ ಮಾಡಿ ಪ್ರಕಾಶ ಗೆಡಬಂಡಿಯವರ ಕುರಿತು ಇರುವ ಕಾಗದ ಪತ್ರಗಳನ್ನು ಕಲೆ ಹಾಕಿದ್ದು ಪ್ರಕರಣದ ದಾಳಿ ಮುಂದುವರೆದಿದೆ.ಲೋಕಾಯುಕ್ತ ಸಿಪಿಐ ನಿಂಗಪ್ಪ ಪೂಜಾರಿ, ಸಿಬ್ಬಂದಿ ಸಿದ್ದರಾಮ ನಾವಿ, ಚೇತನ ಹಿರೇಮಠ, ಚನಗೊಂಡ ಹಳಿಕಾರ ಮತ್ತಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಬೆಳಿಗ್ಗೆಯಿಂದ ಸಾಯಂಕಾಲವರೆಗೆ ಮಕ್ಕಳು, ಯುವಕರು ಹಾಗೂ ಸಮಾನ ಮನಸ್ಕರ ಬಳಗ ಬಣ್ಣದಾಟದಲ್ಲಿ ತೊಡಗಿದ್ದರು.ವಿವಿಧೆಡೆ ಬೆಳಿಗ್ಗೆ ಏಳು ಗಂಟೆಯಿಂದಲೇ ಮಕ್ಕಳು ಬಣ್ಣ ಹಿಡಿದು ಬೀದಿಗೆ ಬಂದು ಹೋಳಿ ಹುಣ್ಣಿಮಗೆ ಚಾಲನೆ ನೀಡಿದರು. ೧೦ಗಂಟೆಯ ಹೊತ್ತಿಗೆ ದೊಡ್ಡವರೂ ಹೊರ ಬಂದು ಬಣ್ಣದಾಟಕ್ಕೆ ಮೆರುಗು ನೀಡಿದರು. ಯುವಕ-ಯುವತಿಯರು ಗುಂಪು ಗುಂಪಾಗಿ ಸಮೀಪದ ಗೆಳೆಯುರ ಮನೆಗಳಿಗೆ ತೆರಳಿ ಬಣ್ಣ ಎರಚಿ ಸಂಭ್ರಮಿಸಿದರು. ಬಣ್ಣ ಹಚ್ಚಿಕೊಂಡು ಹಲಗೆ ಸದ್ದಿಗೆ ಹೆಜ್ಜೆ ಹಾಕುತ್ತಿದ್ದ ಯುವಕರ ಸಮೂಹ ಹೋಳಿಗೆ ವಿಶೇಷ ಮೆರುಗು ತಂದುಕೊಟ್ಟಿತು.ಪಟ್ಟಣದ ಬಂದಾಳ ರಸ್ತೆ, ಕಲ್ಯಾಣ ನಗರ, ವಿದ್ಯಾನಗರ, ಹಳೆ ಬಜಾರ, ಜ್ಯೋತಿ ನಗರ, ಗಣೇಶ ನಗರ, ಬಸವ ನಗರ, ಜೆಭೀಮ ನಗರ, ಕಾಳಿಕಾ ನಗರ ಸೇರಿದಂತೆ ಹೀಗೆ ಎಲ್ಲೆಡೆ ಸಂಭ್ರಮದ ವಾತವರಣವಿತ್ತು. ಹೋಳಿ ಹಬ್ಬದ ಮುನ್ನ ಹುಣ್ಣಿಮೆಯ ದಿನವಾದ ಮಂಗಳವಾರ ರಾತ್ರಿ ನಗರದ ವಿವಿಧ ಬಡಾವಣೆಗಳಲ್ಲಿ ಕಾಮ ದಹನ ಕಾರ್ಯಕ್ರಮ ನಡೆಯಿತು.…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಒಳ ಮೀಸಲಾತಿ ಹೋರಾಟದ ಹಿನ್ನೆಲೆ ಹಲವಾರು ಸಾವು ನೋವುಗಳನ್ನ ಕಂಡಿದ್ದು ಸಧ್ಯ ಮಾಡು ಇಲ್ಲವೇ ಮಡಿ ಹಂತಕ್ಕೆ ಬಂದು ತಲುಪಿದ್ದೇವೆ. ಹಾಗಾಗಿ ಮಾ.೬ ರಂದು ಮಾದಿಗ ಸಂಘಟನೆಗಳ ಒಕ್ಕೂಟದಿಂದ ಮುದ್ದೇಬಿಹಾಳ ಸಂಪುರ್ಣ ಬಂದ್ ಗೆ ಕರೆ ನೀಡುತ್ತಿದ್ದೇವೆ ಎಂದು ಡಿಎಸ್‌ಎಸ್ ಚಂದ್ರಕಾಂತ ಕಾದ್ರೊಳ್ಳಿ ಬಣದ ಜಿಲ್ಲಾಧ್ಯಕ್ಷ ಬಾಲಚಂದ್ರ ಹುಲ್ಲೂರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಂದ್ ದಿನ ಪಟ್ಟಣದ ಇಂದಿರಾ ವೃತ್ತದಲ್ಲಿ ಸಮಾಜದ ಎಲ್ಲ ಬಾಂಧವರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಅಲ್ಲಿಂದ ಮುಖ್ಯಬಜಾರ್, ಬಸವೇಶ್ವರ ವೃತ್ತ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ಬೃಹತ್ ಮೆರವಣಿಗೆ ನಡೆಸಿ ನಮ್ಮ ಹಕ್ಕುಗಳನ್ನು ಕೋರುತ್ತೇವೆ. ಈ ಬಂದ್ ಕರೆಗೆ ಪಟ್ಟಣದ ಎಲ್ಲ ಅಂಗಡಿಗಳ ಮಾಲೀಕರು ಸಂಪೂರ್ಣ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡರು.ಈ ವೇಳೆ ಸಂಘಟನೆಯ ರಾಜ್ಯ ಮುಖಂಡ ದುರ್ಗಪ್ಪ ದೊಡಮನಿ ಮಾತನಾಡಿ, ಒಳಮೀಸಲಾತಿ ಕೋರಿ ಈಗಾಗಲೇ ಹಲವಾರು ಹೋರಾಟಗಳನ್ನ ಮಾಡಿದ್ದೇವೆ. ಕೂಡಲಸಂಗಮದಿಂದ ಹಿಂದಿನ ಸಿಎಂ…

Read More

ಉದಯರಶ್ಮಿ ದಿನಪತ್ರಿಕೆ ವಿಶೇಷ ವರದಿ: ಶ್ರೀಕಂಠ ಈಶ್ವರ್ಹೆಚ್ ಡಿ ಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಜಿಲ್ಲೆಯವರೇ ಆಗಿದ್ದ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜ ಅರಸು ಅವರ ಸುದೀರ್ಘ ಅವಧಿಯ ದಾಖಲೆ ಮುರಿದು ಹೆಜ್ಜೆ ಇರಿಸಿರುವ ಸಿದ್ದರಾಮಯ್ಯ, ಹಣಕಾಸು ಸಚಿವರಾಗಿ 17ನೇ ಬಾರಿಗೆ ಹಾಗೂ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಸಹಜವಾಗಿಯೇ ತವರು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು, ಈ ಸಾಲಿನ ಬಜೆಟ್‌ನಲ್ಲಿ ವಿವಿಧ ಯೋಜನೆಗಳು ಘೋಷಣೆಯಾಗುವುದನ್ನು ಜನರು ಎದುರು ನೋಡುತ್ತಿದ್ದಾರೆ.ಕಳೆದ ಬಾರಿಯ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ನೀಡಿರುವ ಸಿಎಂ, ಈ ಬಾರಿ ಮೈಸೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕುಡಿಯುವ ನೀರು, ಆಸ್ಪತ್ರೆಗಳ ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಹೀಗಾಗಿ ಮೈಸೂರು ಜಿಲ್ಲೆಯ ಜನರು ಸಿದ್ದರಾಮಯ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಅದರಲ್ಲೂ ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕಿನ ಜನ ಸಿದ್ದರಾಮಯ್ಯ ಆಯವ್ಯಯವನ್ನೇ ಎದುರುನೋಡುತ್ತಿದ್ದಾರೆ.ರಸ್ತೆ…

Read More

ಕಲಾ ವಿಕಾಸ ಪರಿಷತ್ ನಿಂದ ಪಗ್ಮಭೂಷಣ ಪಂ.ಪುಟ್ಟರಾಜರ ೧೧೨ನೇ ಹುಟ್ಟುಹಬ್ಬ ಆಚರಣೆ ಉದಯರಶ್ಮಿ ದಿನಪತ್ರಿಕೆ ಗದಗ: ಶರಣರ ನೆನೆಯುವುದೇ ಘನಮುಕ್ತಿ ಪದಶಿವಧವಾ ಎನ್ನುವಂತೆ ಡಾ. ಪಂ. ಪುಟ್ಟರಾಜರ ಸ್ಮರಿಸಿಕೊಳ್ಳುವುದು ಮುಕ್ತಿಗೆ ಸಮಾನವಾಗಿದೆ ಎಂದು ಕಲಾ ವಿಕಾಸ ಪರಿಷತ್ತಿನ ಸಂಸ್ಥಾಪಕ ಕಾರ್ಯಾಧ್ಯಕ್ಷ ಪಂ. ಸಿ. ಕೆ. ಎಚ್. ಶಾಸ್ತ್ರಿ (ಕಡಣಿ) ಹೇಳಿದರು.ಅವರು ಮಂಗಳವಾರ ನಗರದ ವೀರಶೈವ ಜನರಲ್ ಲೈಬ್ರಿಯ ಆವರಣದಲ್ಲಿರುವ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯಾಲಯದಲ್ಲಿ ಉತ್ತರ ಕರ್ನಾಟಕ ಕಲಾವಿದರ ಹಾಗೂ ಕಲಾ ಪೋಷಕರ ಸಂಘಟನೆಯಾದ ಕಲಾ ವಿಕಾಸ ಪರಿಷತ್ತು ಏರ್ಪಡಿಸಿದ್ದ, ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ ೧೧೨ನೇ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿ, ಪೂಜ್ಯರ ಹುಟ್ಟುಹಬ್ಬವನ್ನು ಸುಮಾರು ೨೫ ವರ್ಷಗಳ ಹಿಂದೆ ಸಾರ್ವಜನಿಕವಾಗಿ ಆಚರಿಸುವ ಪರಂಪರೆಯನ್ನು ಹುಟ್ಟು ಹಾಕಿದ ಸಂಸ್ಥೆ ಕಲಾವಿಕಾಸ ಪರಿಷತ್ತು, ಪೂಜ್ಯರ ಸಾಹಿತ್ಯ, ಸಂಗೀತ, ಸಮಾಜಸೇವೆ ನಿರಂತರ ಸ್ಮರಣೆಗಾಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಹುಟ್ಟು ಹಾಕಿ, ಎರಡು ಸಂಸ್ಥೆಗಳ ಮೂಲಕ ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ಗುರುಗಳ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ಮಾದಿಗ ಸಮುದಾಯದ ಪ್ರಮುಖ ಬೇಡಿಕೆಯಾದ ಒಳಮೀಸಲಾತಿಯನ್ನು ಜಾರಿಗೆ ಮಾಡಬೇಕೆಂದು ಮಾದಿಗ ಸಮಾಜದ ಯುವ ಮುಖಂಡ ಪ್ರಭು ತಳಗೇರಿ ಆಗ್ರಹಿಸಿದ್ದಾರೆ.ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯ ಮಾಡಿರುವ ಅವರು, ದಲಿತ ಸಮುದಾಯದ 101 ಜಾತಿಗಳಿಗೆ ಅವರ ಜನಸಂಖ್ಯೆ ಅನುಸಾರ ಮೀಸಲಾತಿ ಸಿಗಲಿದೆ. ಕಳೆದ 40 ವರ್ಷ ಹೋರಾಟ ಮಾಡಿ ನಮ್ಮ ಹಿರಿಯರು ಸತ್ತು ಹೋಗಿದ್ದಾರೆ. ನಮ್ಮ ಮಾದಿಗರಿಗೆ ಹೊಟ್ಟೆ ಹಸಿದಿದೆ. ನಮಗೆ ಮೀಸಲಾತಿ ಕೊಡಿ. ನೀವು ಬೇರೆ ಜಾತಿಯವರಿಗೆ ಕೊಡುವುದು, ಬಿಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ, ಆಗಸ್ಟ್ 15ರೊಳಗೆ ನಮಗೆ ನ್ಯಾಯಯುತವಾಗಿ ನೀಡಬೇಕಾದ ಒಳ ಮೀಸಲಾತಿ ಘೋಷಿಸಬೇಕು‌ ಮತ್ತು ಕಾಂಗ್ರೆಸ್ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಒಳ ಮೀಸಲಾತಿ ಜಾರಿಗೊಳಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು.ಒಳಮೀಸಲಾತಿ ಅನುಷ್ಟಾನ ಮಾಡುವ ಜವಾಬ್ದಾರಿ ಹೊತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಈ ವಿಷಯದಲ್ಲಿ ವಿಳಂಭ ಧೋರಣೆ ಅನುಸರಿಸುತ್ತಿರುವುದು ಮೇಲ್ನೋಟಕ್ಕೆ ನಿಜವಾಗಿದೆ. ಹಾಗಾಗಿ ಮುಖ್ಯಮಂತ್ರಿಗಳು ಕೂಡಲೇ…

Read More