Author: editor.udayarashmi@gmail.com

ವಿಜಯಪುರ: ಜಿಲ್ಲೆಯಲ್ಲಿ ಬರುವ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳನ್ನು ಜನ-ಜಾನುವಾರುಗಳ ಕುಡಿಯುವ ನೀರಿನ ಸಲುವಾಗಿ ತುಂಬಿಸುತ್ತಿದ್ದು, ಕಾಲುವೆ ಕೊನೆಯವರೆಗೆ ನಿಗದಿತ ಪ್ರಮಾಣದಲ್ಲಿ ನೀರನ್ನು ಒದಗಿಸಲು ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಾಲುವೆ ಜಾಲದ ವ್ಯಾಪ್ತಿಯ ದಡದ ೧೦೦ ಅಡಿ ಪ್ರದೇಶವನ್ನು ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.ಮುಳವಾಡ ಏತ ನೀರಾವರಿ ಹಂತ-೨ರ ಪೂರ್ವ ಕಾಲುವೆ, ಪಶ್ಚಿಮ ಕಾಲುವೆಗಳ ಜಾಲದ ಅಡಿಯಲ್ಲಿ ಬರುವ ಬಿಜಾಪುರ ಮುಖ್ಯ ಕಾಲುವೆ, ಬಸವನಬಾಗೇವಾಡಿ ಶಾಖಾ ಕಾಲುವೆ ತಿಡಗುಂದಿ ಶಾಖಾ ಕಾಲುವೆ, ಹೂವಿನಹಿಪ್ಪರಗಿ ಶಾಖಾ ಕಾಲುವೆ, ಸಾಲವಾಡಗಿ ಶಾಖಾ ಕಾಲುವೆ, ಟಕ್ಕಳಕಿ ಶಾಖಾ ಕಾಲುವೆ, ದಿಂಡವಾರ ಶಾಖಾ ಕಾಲುವೆ ಹಾಗೂ ಅದರಡಿಯಲ್ಲಿ ಬರುವ ಉಪ ಕಾಲುವೆಗಳ ಮೂಲಕ ಜಿಲ್ಲೆಯಲ್ಲಿ ಬರುವ ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳನ್ನು ಕಾಲುವೆ ಜಾಲಗಳ ಕೊನೆಯ ಭಾಗದವರೆಗೆ ನೀರು…

Read More

೧೦ ಹೆಚ್‌ಪಿವರೆಗಿನ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ಉಚಿತ ವಿದ್ಯುತ್ ವಿಜಯಪುರ: ಬಜೆಟ್‌ನಲ್ಲಿ ಘೋಷಿಸಿದಂತೆ ನೇಕಾರರಿಗೆ ೧೦ ಹೆಚ್‌ಪಿ ವರೆಗಿನ ಉಚಿತ ವಿದ್ಯುತ್ ಒದಗಿಸುವುದನ್ನು ಸರ್ಕಾರ ಆದೇಶ ಹೊರಡಿಸುವ ಮೂಲಕ ನೇಕಾರರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲು ಕ್ರಮ ವಹಿಸಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ, ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ತಿಳಿಸಿದರು.ವಿಜಯಪುರ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಉಚಿತ ಒದಗಿಸುವುದರಿಂದ ರಾಜ್ಯದ ಶೇ.೮೦ ರಷ್ಟು ಸಣ್ಣ ಪ್ರಮಾಣದ ನೇಕಾರರಿಗೆ ಅನುಕೂಲವಾಗಲಿದೆ. ೧೦ ಹೆಚ್‌ಪಿವರೆಗೆ ವಿದ್ಯುತ್ ಸಂಪರ್ಕ ಹೊಂದಿರುವ, ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ಇಂಧನ ವೆಚ್ಚ, ಫಿಕ್ಸ್ ಚಾರ್ಜ್, ಎಫ್‌ಎಸಿ, ಸೇರಿದಂತೆ ಸಂಪೂರ್ಣ ಬಿಲ್ ಮೊತ್ತ ಪಾವತಿಸುವುದು ರಿಯಾಯಿತಿ ನೀಡಿ ಸರ್ಕಾರದಿಂದ ಭರಿಸುವ ಮೂಲಕ ನೇಕಾರರಿಗೆ ಆರ್ಥಿಕ ಅಭಿವೃದ್ದಿಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.ರಾಜ್ಯದಲ್ಲಿ ೧೦.೦೧ ರಿಂದ ೨೦ ಹೆಚ್‌ಪಿವರೆಗೆ ವಿದ್ಯುತ್ ಸಂಪರ್ಕ ಹೊಂದಿರುವ ಅತಿ ಕಡಿಮೆ…

Read More

ಮುದ್ದೇಬಿಹಾಳ: ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಮುದ್ದೇಬಿಹಾಳ ಪ್ರೀಮಿಯರ್ ಲೀಗ್-೬ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಅ೨೨ ರಂದು ಸಂಜೆ ೫:೩೦ ಕ್ಕೆ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು ಕ್ರೀಡಾಭಿಮಾನಿಗಳು ಭಾಗಿಯಾಗಿ ಪಂದ್ಯಾವಳಿಗಳನ್ನು ಯಶಸ್ವಿಗೊಳಿಸುವಂತೆ ಸಲಹಾ ಸಮಿತಿಯ ಸದಸ್ಯ ಮಹೆಬೂಬ ಗೊಳಸಂಗಿ ಹೇಳಿದರು.ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉದ್ಘಾಟನಾ ಸಮಾರಂಭದ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು, ಮೌಲಾನಾ ಅಲ್ಲಾಭಕ್ಷ ಖಾಜಿ ವಹಿಸಲಿದ್ದು, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಸ್ಕಿ ಫೌಂಡೇಶನ ಅಧ್ಯಕ್ಷ ಸಿ.ಬಿ.ಅಸ್ಕಿ ಉದ್ಘಾಟನೆಗೊಳಿಸಲಿದ್ದು, ಯಾಸೀನ ಸೋಠೆ ಜ್ಯೋತಿ ಬೆಳಗಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ವಿ.ಎಂ.ನಾಗಠಾಣ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜೀವ ತಿಪರೆಡ್ಡಿ, ಮಲ್ಲಿಕಾರ್ಜುನ ಮದರಿ, ಜಾವೇದ ಇನಾಮದಾರ, ಅಫ್ತಾಬ ಮನಿಯಾರ, ರಾಜು ಕರಡ್ಡಿ, ಪ್ರಭುರಾಜ ಕಲ್ಬುರ್ಗಿ, ಎಸ್.ಎಸ್.ಹುಲ್ಲೂರ, ಶಾಂತಗೌಡ ಪಾಟೀಲ ನಡಹಳ್ಳಿ, ಪ್ರತಿಭಾ ಅಂಗಡಗೇರಿ, ಬ್ಲಾಕ್ ಕಾಂಗ್ರೇಸ್…

Read More

ಇಂಡಿ: ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ ಎಂ ಎಂ ಪಡಶೆಟ್ಟಿ ಅವರು ವಿಮರ್ಶೆ,ಜಾನಪದ, ಸಂಶೋಧನೆ, ಗ್ರಂಥ ಸಂಪಾದನೆ, ಜೀವನ ಚರಿತ್ರೆ,ವೈಚಾರಿಕ ಲೇಖನಗಳ ಮೂಲಕ ಕನ್ನಡದ ಸಹೃದಯರಿಗೆ ದಣಿವರಿಯದ ಜಾನಪದ ತಜ್ಞರಾಗಿ ಪ್ರೇರಕ ಶಕ್ತಿಯಾಗಿದ್ದಾರೆ ಎಂದು ಶಿಕ್ಷಕ ವೈ ಜಿ ಬಿರಾದಾರ ಹೇಳಿದರು.ಅವರು ಇಂಡಿಯ ಭೀಮಾಂತರಂಗ ಜಗಲಿ, ಆನ್ ಲೈನ್ ಸಾಹಿತ್ಯಿಕ-ಸಾಂಸ್ಕೃತಿಕ ಸಂಸ್ಥೆಯಿಂದ ಹಮ್ಮಿಕೊಂಡ ಉಪನ್ಯಾಸ ಮಾಲಿಕೆ-2 ರಲ್ಲಿ ಜಾನಪದ ವಿದ್ವಾಂಸ ಡಾ ಎಂ ಎಂ ಪಡಶೆಟ್ಟಿ:ಬದುಕು ಬರಹ ಕುರಿತು ಉಪನ್ಯಾಸ ನೀಡುತ್ತಾ ಈ ಮಾತುಗಳನ್ನು ಹೇಳಿದರು.ಗಟ್ಟಿ ಸಾಹಿತ್ಯ ಸೃಷ್ಟಿಯ ಡಾ.ಎಂ ಎಂ ಪಡಶೆಟ್ಟಿ ಅವರುರೈತಾಪಿ ಕುಟುಂಬದಲ್ಲಿ ಜನಿಸಿ, ಸ್ವಯಂ ಪ್ರತಿಭೆ ಮತ್ತು ಪರಿಶ್ರಮಗಳಿಂದ ಸಾಧನೆಯ ಮೆಟ್ಟಿಲುಗಳನ್ನೇರಿದವರು. ಸರಳತೆ, ಪ್ರಾಮಾಣಿಕತೆ, ಸಹೃದಯತೆಗಳಂತಹ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡ ಅವರ ಆಸಕ್ತಿಯ ವ್ಯಾಪ್ತಿ ಜಾನಪದದಷ್ಟೆ ವಿಶಾಲವಾಗಿದೆ ಎಂದು ಹೇಳಿದರು.ಸಿಂದಗಿಯಲ್ಲಿ ನೆಲೆ ಪ್ರಕಾಶನ ಆರಂಭಿಸಿದ ಅವರು ಗೆಳೆಯರ ಜೊತೆ ಬೆರೆತು ಸಾಹಿತ್ಯದ ಬೆಳಕನ್ನು ಸಾರಸ್ವತ ಲೋಕಕ್ಕೆ ನೀಡಿದವರು. ಕೆಲಸ ಮಾಡುತ್ತ ಮಾಡುತ್ತ ಬೆಳೆದು ನಿಂತವರು. ನಿರಂತರ…

Read More

ಕೊಲ್ಹಾರ: ದೇಶದ ರಕ್ಷಣೆಯಲ್ಲಿ ನಮ್ಮ ಪ್ರಾಣ ತ್ಯಾಗ ಮಾಡಿದ ಯೋಧರ ನೆನಪಿನಲ್ಲಿ ನನ್ನ ಮಣ್ಣು ನನ್ನ ದೇಶ ಕಳಸ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕಾ ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿಗಳು ಆರ್ ಎಸ್ ಪಾಟೀಲ್ ಹೇಳಿದರು.ಪಟ್ಟಣದ ತಾಲ್ಲೂಕ ಪಂಚಾಯಿತಿ ಆವರಣದಲ್ಲಿ ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕ ಪಂಚಾಯಿತಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ, ನನ್ನ ದೇಶ ನನ್ನ ಮಣ್ಣು ಕಾರ್ಯಕ್ರಮದ ನಿಮಿತ್ತ ಪ್ರತಿ ಗ್ರಾಮ ಪಂಚಾಯತಿಯಿಂದ ಮಣ್ಣು ಸೇರಿ ವಿವಿಧ ಕಾರ್ಯಕ್ರಮಗಳನ್ನು ತಾಲೂಕು ಮಟ್ಟದಲ್ಲಿ ಹಾಗೂ ಗ್ರಾ.ಪಂ.ಮಟ್ಟದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆಯವರ ನಿರ್ದೇಶನದಂತೆ ಹಾಗೂ ತಾಲೂಕ ಪಂಚಾಯಿತಿ ಕಾರ್ಯನಿವಾಹಕ ಅಧಿಕಾರಿ ಎಫ್.ಹೆಚ್.ಪಠಾಣರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.ಈ ಸಮಯದಲ್ಲಿ ತಾಲೂಕು ಕಂದಾಯ ಇಲಾಖೆಯ ಕೃಷ್ಣಾ ಗುಡೂರ, ಕೃಷಿ ಇಲಾಖೆಯ ಅಧಿಕಾರಿ ಪೂರೋಹಿತ, ಶಿಶು ಅಭಿವೃದ್ಧಿ ಅಧಿಕಾರಿಗಳು, ಅಂಚೆ…

Read More

ಕೊಲ್ಹಾರ: ಕೆನೆ ಮೊಸರಿನ ಖ್ಯಾತಿಯ ಕೊಲ್ಹಾರದ ಆರಾಧ್ಯದೇವ ಹಣಮಂತ ದೇವರ ದರ್ಶನವನ್ನು ಪಾಟ್ನಾ ಹೈಕೋರ್ಟಿನ ನ್ಯಾಯಮೂರ್ತಿಗಳು ಪಡೆದುಕೊಳ್ಳಲು ಶನಿವಾರ ಆಗಮಿಸಿದ್ದರು.ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪಾಟ್ನಾ ಹೈಕೋರ್ಟಿನ ನ್ಯಾಯಮೂರ್ತಿಗಳಾದ ಪವನಕುಮಾರ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಶನಿವಾರ ದಿವಸ ಬೆಳಿಗ್ಗೆ ಆಗಮಿಸಿ ಒಂದು ಘಂಟೆಯ ಕಾಲ ದೇವರಿಗೆ ಅಭಿಷೇಕವನ್ನು ಮಾಡಿಸಿ ಮಹಾಮಂಗಳಾರತಿ ಪೂಜೆಯನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಪವನಕುಮಾರ, ಮಳೆರಾಜು, ಬಾಬು ಕೇಶವ ಮತ್ತು ಕುಟುಂಬ ಸದಸ್ಯರು ದೇವರ ದರ್ಶನವನ್ನು ಪಡೆದುಕೊಂಡರು.ಅರ್ಚಕರಾದ ಮಲ್ಲಿಕಾರ್ಜುನ ಹೂಗಾರ ಆಡಳಿತ ಮಂಡಳಿಯ ಸಂಗನಬಸಪ್ಪ ಗಾಣಿಗೇರ, ಸಂಕಪ್ಪ ಕಾಖಂಡಕಿ, ಬಸಪ್ಪ ಚೌದರಿ, ಸಂಗಪ್ಪ ಕ ಗಣಿ, ಪ್ರಭುಕುಮಾರ ಗಣಿ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Read More

ಇಂಡಿ: ತಾಲ್ಲೂಕಿನ ಹಿರೇಮಸಳಿ ಗ್ರಾಮದ ಇಂದಿರಾನಗರದಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಚರಂಡಿ ವ್ಯವಸ್ಥೆಯಿಲ್ಲ, ಶೌಚಾಲಯವಿಲ್ಲ, ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ. ಹೀಗೆ ಮೂಲಭೂತ ಸೌಲಭ್ಯಗಳಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಸಾಕಷ್ಟು ಸಲ ಮನವಿ ಪತ್ರ ಸಲ್ಲಿಸಿದರೂ ಕೂಡಾ ಯಾವದೇ ಪ್ರಯೋಜನವಾಗಿಲ್ಲ ಎಂದು ಅಲ್ಲಿಯ ನಿವಾಸಿಗಳಾದ ಸೈಫನ್ ಚಟ್ಟರಕಿ, ರಸೂಲ ನಾಟೀಕಾರ, ಶಾಬುದ್ದೀನ ಜೇಟಗಿ, ಶ್ರೀಶೈಲ ತಳವಾರ, ಅನೀಲ ಕಪಾಲಿ ಹಾಗೂ ಕೆಆರೆಸ್ ಪಕ್ಷದ ಪದಾಧಿಕಾರಿಗಳು ಆರೋಪಿಸಿದ್ದಾರೆ.ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಜರುಗಿಸದಿದ್ರೆ ಶೀಘ್ರದಲ್ಲಿಯೇ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Read More

ಇಂಡಿ: ಅಸ್ವಚ್ಚತೆಯ ಕಾರಣದಿಂದ ಸಾಂಕ್ರಾಮಿಕ ರೋಗಗಳಿಗೆ ಅನೇಕರು ತುತ್ತಾಗುತ್ತಿದ್ದಾರೆ. ಆದ್ದರಿಂದ ಎಲ್ಲರೂ ಸ್ವಚ್ಚತೆಗೆ ಮೊದಲ ಆದ್ಯತೆ ನೀಡಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಸುನಂದಾ ಅಂಬಲಗಿ ಹೇಳಿದರು.ಶನಿವಾರ ತಾಲೂಕಿನ ಹಂಜಗಿ ಗ್ರಾಮದಲ್ಲಿ ವಿಶ್ವ ಕೈ ತೊಳೆಯುವ ದಿನ ಅರಿವು ಮೂಡಿಸುವ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.ಕೈಗಳು ತೋಳೆಯುವುದರಿಂದ ಸೋಂಕು ಮತ್ತು ರೋಗಗಳನ್ನು ತಡೆಯಬಹುದು. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಕೈ ತೊಳೆಯುವದು ಬಹಳ ಪ್ರಮುಖವಾಗಿದೆ.ಸಾರ್ವಜನಿಕ ಸ್ಥಳಗಳಲ್ಲಿರುವ ವಸ್ತುಗಳು ಮುಟ್ಟಿದಾಗ ಆಗಾಗ ಕಣ್ಣು, ಮೂಗು, ಬಾಯಿ ಸ್ಪರ್ಶಿಸುತ್ತದ್ದರೆ ಅಡುಗೆ ಮಾಡುವ ಮೊದಲು ಶೌಚಾಲಯಕ್ಕೆ ಹೋಗಿ ಬಂದ ನಂತರ ಸೇಹಿತರಿಗೆ ಹ್ಯಾಂಡಶೇಖ ಕೊಟ್ಟ ಬಳಿಕ ಕೈ ತೊಳೆಯಬೇಕು ಇಲ್ಲವಾದರೆ ವೈರಾಣು ಇರುವ ಕೈಗಳಿಂದ ಮೂಗು, ಬಾಯಿ ಮುಟ್ಟಿಕೊಳ್ಳುವುದರಿಂದ ಶೀತ, ಮನಂಜೆಟಿಸ್, ಹೆಪಟೈಟಸ್, ಮತ್ತು ಅತೀ ಸಾರದಂತಹ ತೀವ್ರತರವಾದ ಸೋಂಕು ಹರಡಬಹುದು ಜೊತೆಗೆ ಇತರರಿಗೂ ವೈರಾಣು ಹರಡಿಸುತ್ತದೆ.ಕೈಗಳು ತೋಳೆಯುವುದರಿಂದ ಶೇಕಡಾ ೪೦ ರಷ್ಟು ಸಾಂಕ್ರಾಮಿಕ ಕಾಯಿಲೆಗಳನ್ನು ತಡೆಯಬಹುದು. ಶೇಕಡಾ ೫೭ರಷ್ಟು ಜಠರ ಕರುಳಿನ ಸಮಸ್ಯೆಯನ್ನು ತಡೆಯಬಹುದು. ಉಸಿರಾಟದ…

Read More

ಇಂಡಿ: ಪಟ್ಟಣದ ಗುರುಕಿರಣ ಝಳಕಿ ಅಂಡರ್ ೧೪ ರ ಕ್ರಿಕೆಟ್ ಆಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಚಿದಾನಂದಗೌಡ ಬಿರಾದಾರ ಈತನಿಗೆ ಕ್ರಿಕೆಟ್ ತರಬೇತಿ ನೀಡಿದ್ದಾರೆ. ಗುರುಕಿರಣ ಸಾಧನೆಗೆ ಶಿಕ್ಷಕಿ ತಾಯಿ ಸರೋಜಿನಿ ಮಾವಿನಮರದ, ತಂದೆ ಶಿಕ್ಷಕ ಲಕ್ಷ್ಮಣ ಝಳಕಿ ಸೇರಿದಂತೆ ಗುಲಬರ್ಗಾ ವಿಭಾಗದ ಟೀಮ್ ಮ್ಯಾನೇಜರ ಸಂತೋಷ ಕೊಬಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.

Read More