Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ತಾಲೂಕಿನ ಯರಗಲ್(ಬಿಕೆ) ಗ್ರಾಮದ ಪಿಕೆಪಿಎಸ್ ಅಧ್ಯಕ್ಷರಾಗಿ ಅಬ್ಬಾಸಲಿ ನ್ಯಾವನೂರ ಹಾಗೂ ಉಪಾಧ್ಯಕ್ಷರಾಗಿ ಶಂಕರಲಿಂಗ ಶಿವೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಸಂತೋಷ ಸದಲಗಿ ತಿಳಿಸಿದರು.ಅವಿರೋಧ ಆಯ್ಕೆಯಾಗುತ್ತಿದ್ದಂತೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಗ್ರಾಮದ ಪ್ರಮುಖರು ಸನ್ಮಾನ ಮಾಡಿದರು.ಸನ್ಮಾನ ಸ್ವೀಕರಿಸಿದ ನೂತನ ಅಧ್ಯಕ್ಷ ಅಬ್ಬಾಸಲಿ ನ್ಯಾವನೂರ ಮಾತನಾಡಿ, ಸರ್ವ ಸದಸ್ಯರು ಹಾಗೂ ಪ್ರಗತಿಪರ ರೈತರು ಗ್ರಾಮದ ಹಿರಿಯರು ರಾಜಕೀಯ ದುರಿಣರು ಸೇರಿಕೊಂಡು ನಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ನಮ್ಮ ಮೇಲೆ ಇಟ್ಟಂತಹ ಭರವಸೆ, ವಿಶ್ವಾಸವನ್ನು ಪ್ರಾಮಾಣಿಕವಾಗಿ ಉಳಿಸಿಕೊಂಡು ಹೋಗಿ ಪಿಕೆಪಿಎಸ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ರೈತ ಪರ ಯೋಜನೆಗಳನ್ನು ತಂದು ರೈತರಿಗೆ ಅನುಕೂಲ ಮಾಡಿ ಜನಪರ ಕಾಳಜಿ ವಹಿಸಿ ಕರ್ತವ್ಯ ನಿರ್ವಹಿಸತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಮಹಾಂತಗೌಡ ಪಾಟೀಲ, ನಿರ್ದೇಶಕರಾದ ಕವಿತಾ ಕಲಶೆಟ್ಟಿ, ವ್ಯವಸ್ಥಾಪಕ ರಮೇಶ ಬಿರಾದಾರ, ಗುರಲಿಂಗಪ್ಪಗೌಡ ಪಾಟೀಲ, ರಾಯಗೊಂಡಪ್ಪ ಗೌಡ ಬಿರಾದಾರ್. ಜಯಶ್ರೀ ದು ಮುಡ್ಡಿ. ಸಂತೋಷ ಯಂಕಂಚಿ. ಶೇಕಪ್ಪ ಹೇರ, ಮಡಿವಾಳಪ್ಪ ಕಡ್ಲಗೊಂಡ…
ಸಿಂದಗಿ: ಇಡೀ ರಾಜ್ಯಕ್ಕೆ ಆವರಿಸಿದ ಬರಗಾಲದ ಬವಣೆಯನ್ನು ಅಧ್ಯಯನವನ್ನು ಮಾಡುವುದಾಗಲಿ, ಬರಗಾಲವನ್ನು ನೀಗಿಸುವಂತಹ ಯಾವುದೇ ರೀತಿಯ ಕಾರ್ಯಕ್ರಮವನ್ನು ಹಾಕಿಕೊಳ್ಳದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಕೂಗುವಂತದ್ದಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗುರ ಹೇಳಿದರು.ಪಟ್ಟಣದಲ್ಲಿ ಬುಧುವಾರದಂದು ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ಬರಗಾಲದ ಬವಣೆಯ ಛಾಯೆಯೇ ಮೂಡುತ್ತದೆ. ಪಂಚ ರಾಜ್ಯ ಚುನಾವಣೆಯ ಸಲುವಾಗಿ ಈ ಕಾಂಗ್ರೆಸ್ ಸರಕಾರ ಎಟಿಎಂ ಸರಕಾರವಾಗಿದೆ. ಮಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅಸಪರ್ಕವಾಗಿ ವಿದ್ಯುತ್ನ್ನು ನೀಡುತ್ತಿರುವುದು ಖಂಡಿಸಬೇಕಾಗಿದೆ. ಜನರಿಗೆ ಉಚಿತ ವಿದ್ಯುತ್ ಎಂದು ಹೇಳಿ ರಾಜ್ಯವನ್ನು ಕತ್ತಲಲ್ಲಿ ಕೆಡವಿದೆ. ಕನಿಷ್ಠ ೫ಗಂಟೆ ರೈತರಿಗೆ ಕರೆಂಟ್ ನೀಡುತ್ತಿಲ್ಲ. ಕೂಡಲೇ ಸರಕಾರ ಎಚ್ಚೇತ್ತುಕೊಳ್ಳದೇ ಹೋದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.ಈ ವೇಳೆ ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ,…
ಕೊಲ್ಹಾರ: ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಬರಗಾಲದಂತಹ ಭೀಕರ ಪರಿಸ್ಥಿತಿ ಇರುವಾಗ ಸಚಿವ ಶಿವಾನಂದ ಪಾಟೀಲರು ಹೈದರಾಬಾದನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ನೋಟಿನ ಕಂತೆಯನ್ನು ತಮ್ಮ ಕಾಲಡಿಯಲ್ಲಿ ತುಳಿದುಕೊಂಡು ಹಾಗೂ ನೋಟನ್ನು ಹಾರಿಸುವ ದೃಶ್ಯ ನೋಡಿಕೊಂಡು ಸುಮ್ಮನೆ ಇರುವುದು ಮತದಾರರಿಗೆ ಮತ್ತು ರಾಜ್ಯದ ಜನತೆಗೆ ಮಾಡಿದ ಅಪಮಾನ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಆರೋಪಿಸಿದರು.ಈ ಕುರಿತು ಪಟ್ಟಣದ ಅಗಶಿಯ ಹತ್ತಿರ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಮುಂದಾಳತ್ವವನ್ನು ವಹಿಸಿ ನಡೆದ ಪ್ರತಿಭಟನೆಯ ನಂತರ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಚಲಾವಣೆಯಲ್ಲಿರುವ ನೋಟುಗಳನ್ನು ಲಕ್ಷ್ಮಿ ಸ್ವರೂಪದಲ್ಲಿ ಕಾಣುವುದು ಸಂಪ್ರದಾಯ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರ ಕಣ್ಣ ಮುಂದೆಯೇ ಇಂಥ ಪ್ರಸಂಗ ನಡೆದರೂ ಸಂಪ್ರದಾಯ ವಿರೋಧಿ ಚಟುವಟಿಕೆಗೆ ಕುಮ್ಮಕ್ಕು ಕೊಟ್ಟಂತಾಗುತ್ತದೆ ಎನ್ನುವದನ್ನು ಮರೆತು ಅಹಂಕಾರದ ಪರಮಾವಧಿಯನ್ನು ಪ್ರದರ್ಶನ ಮಾಡಿದಂತಾಗಿದ್ದು, ಮುಖ್ಯಮಂತ್ರಿಗಳು ತಕ್ಷಣವೇ ಸಚಿವ ಶಿವಾನಂದ ಪಾಟೀಲರ ರಾಜಿನಾಮೆಯನ್ನು ಪಡೆದುಕೊಳ್ಳಬೇಕು. ಇಲ್ಲವಾದರೆ ಸಚಿವರೇ ನೈತಿಕ ಹೊಣೆಯಿಂದ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಚಂದ್ರಶೇಖರಯ್ಯ ಗಣಕುಮಾರ, ಪಟ್ಟಣ…
ಆಲಮಟ್ಟಿ: ಚಿಮ್ಮಲಗಿ ಪಶ್ಚಿಮ ಕಾಲುವೆಗೆ ಸರಿಯಾಗಿ ನೀರು ಹರಿಸಬೇಕು ಎಂದು ಆಗ್ರಹಿಸಿ ನಿಡಗುಂದಿ, ಗೋನಾಳ ಹಾಗೂ ಕಿರಿಶ್ಯಾಳ ಗ್ರಾಮದ ರೈತರು ಕೆಬಿಜೆನ್ನೆಲ್ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿದರು.ಚಿಮ್ಮಲಗಿ ಪಶ್ಚಿಮ ವಿತರಣಾ ಕಾಲುವೆ ೩೬ನೇ ಕಿಮೀದಿಂದ ೫೨ನೇ ಕಿಮೀದವರೆಗೆ ಸರಿಯಾಗಿ ನೀರು ಹರಿದು ಬರುತ್ತಿಲ್ಲ. ಚಿಮ್ಮಲಗಿ ಪಶ್ಚಿಮ ಕಾಲುವೆಯನ್ನೇ ನಂಬಿ ಬೆಳೆ ಬೆಳೆದ ಸಾವಿರಾರು ರೈತರು ಸಂಕಷ್ಟ ಎದುರಿಸುವಂತಾಗಿದೆ. ಸದ್ಯ ಅಳಿದುಳಿದ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ. ಮಾನವೀಯ ನೆಲೆಗಟ್ಟಿನ ಮೇಲೆ ಅರ್ಥೈಸಿಕೊಂಡು ಸಮರ್ಪಕವಾಗಿ ಕಾಲುವೆಯ ಕೊನೆಯಂಚಿನವರೆಗೆ ನೀರು ಹರಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.ರೈತ ಮುಖಂಡ ಗಂಗಾಧರ ವಾರದ, ಶಿವಪ್ಪ ಕೋತಿನ, ಹಣಮಂತ ಗುಂಡಿನಮನಿ, ಪರಶು ವಡವಡಗಿ, ನಿಂಗಪ್ಪ ಇಂಜಗನೇರಿ, ಎಂ.ಎಸ್.ನಿಡಗುಂದಿ, ದ್ಯಾಮಣ್ಣ ಹುಗ್ಗಿ, ಗುರಪ್ಪ ಹುಗ್ಗಿ, ಕೆ.ಎಚ್.ಹುಗ್ಗಿ, ಮುತ್ತಪ್ಪ ಗುಣಕಿ, ಎಂ.ಡಿ.ತಳೇವಾಡ, ಡಿ.ಎ.ಗುಣಕಿ ಇತರರಿದ್ದರು.
ಛಾಯಾಗ್ರಾಹಕರಿಗೆ ಆದಾಯ ತೆರಿಗೆ ಮತ್ತು ಜಿಎಸ್ಟಿ ಕುರಿತು ವಿಶೇಷ ಕಾರ್ಯಾಗಾರದಲ್ಲಿ ಚಾರ್ಟರ್ಡ್ ಅಕೌಂಟಂಟ್ ಶಾಂತವಿರೇಶ ಮಣೂರ ಉಪನ್ಯಾಸ ವಿಜಯಪುರ: ದೇಶ ಮುಂದುವರಿಯಲು ಪ್ರತಿಯೊಬ್ಬರೂ ತಮ್ಮ ಆದಾಯಕ್ಕೆ ತಕ್ಕಂತೆ ಸರಕಾರಕ್ಕೆ ತೆರಿಗೆ ಸಲ್ಲಿಸುವುದು ಅಗತ್ಯ. ಆದರೆ ಛಾಯಾಗ್ರಾಹಕರಿಗಿರುವ ಸೇವಾ ತೆರಿಗೆ ಶೇ.18 ಅವರಿಗೆ ಹೊರೆಯಾಗಿದ್ದು, ಸರಕಾರ ಅದನ್ನು ಶೇ. 5 ರ ವ್ಯಾಪ್ತಿಗೆ ತರಬೇಕು. ಅದಕ್ಕಾಗಿ ಛಾಯಾಗ್ರಾಹಕರು ಸಂಘಟನೆ ಮೂಲಕ ಸರಕಾರಕ್ಕೆ ಮನವಿ ಮಾಡುವಂತೆ ಯುವ ಭಾರತ ಸಮಿತಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಉಮೇಶ ಕಾರಜೋಳ ಸಲಹೆ ನೀಡಿದರು.ನಗರದ ಸರಕಾರಿ ಆರ್ಟ ಗ್ಯಾಲರಿಯಲ್ಲಿ ಗುರುವಾರ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಮತ್ತು ಯುವ ಭಾರತ ಸಮಿತಿ, ವಿಜಯಪುರ ಇವರ ಸಹಯೋಗದಲ್ಲಿ ಛಾಯಾಗ್ರಾಹಕರಿಗೆ ಆದಾಯ ತೆರಿಗೆ ಮತ್ತು ಜಿ.ಎಸ್.ಟಿ. ಕುರಿತು ವಿಶೇಷ ಕಾರ್ಯಾಗಾರ, ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಉಧ್ಘಾಟಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ವಿಜಯಪುರದ ಜಾರಿ ಸರಕುಗಳು ಮತ್ತು ಸೇವಾ ತೆರಿಗೆ ಇಲಾಖೆಯ ಸಿ.ಟಿ.ಓ. ಸುರೇಶ.ಎಂ.ಗೊಳಸಂಗಿ…
ವಿಜಯಪುರ: ವಿಶ್ವ ಅಂಗರಚನಾ ಶಾಸ್ತ್ರ ದಿನ ಅಂಗವಾಗಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ಅಂಗರಚನಾ ಶಾಸ್ತ್ರ ವಿಭಾಗದಿಂದ ನಗರದ ಐದು ಕಡೆಗಳಲ್ಲಿ ಬೀದಿ ನಾಟಕದ ಪ್ರದರ್ಶನ ಮಾಡಲಾಯಿತು.ಬುಧವಾರ ನಗರದ ಬಿ.ಎಲ್.ಡಿ. ಅಸ್ಪತ್ರೆ ಎದುರಿಗೆ, ಶ್ರೀ ಸಿದ್ದೇಶ್ವರ ದೇವಸ್ಥಾನ, ಗಾಂಧಿಚೌಕ, ರೈಲು ನಿಲ್ದಾಣ ಹಾಗೂ ಕೇಂದ್ರ ಬಸ್ ನಿಲ್ದಾಣದಲ್ಲಿ ಎಂ.ಬಿ.ಬಿ.ಎಸ್ ಪ್ರಥಮ ವರ್ಷದ 75 ವಿದ್ಯಾರ್ಥಿಗಳು ಬೀದಿ ನಾಟಕದ ಪ್ರದರ್ಶಿಸಿದರು. ದೇಹದಾನದ ಮಹತ್ವ ಮತ್ತು ಅದರಿಂದಾಗುವ ಪ್ರಯೋಜನಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ನರೇಶ ಪೊದ್ದಾರ ಮತ್ತು ಗೋರಖ ಭಾವಸಾರ ರಚಿಸಿ ನಿರ್ದೇಶಿಸಿರುವ ಈ ಬೀದಿ ನಾಟಕ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಪ್ರದರ್ಶನ ಮಾಡಲಾಯಿತು.ಈ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಐದು ಜನ ದೇಹದಾನ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ಮತ್ತೆ ಹಲವರು ದೇಹದಾನದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.ಈ ಸಂದರ್ಭದಲ್ಲಿ ಅಂಗರಚನಾ ಶಾಸ್ತ್ರದ ಮುಖ್ಯಸ್ಥ ಡಾ. ಆರ್. ಎಸ್.…
ಪಂಚರಾಜ್ಯ ಚುನಾವಣೆಯಲ್ಲಿ ಸೋಲಿನ ಭಯದಿಂದ ಮೋದಿ ಸರ್ಕಾರದ ಐಟಿ ದಾಳಿ | ತೆರಿಗೆ ವಂಚಕರ ವಿರುದ್ಧದ ಕ್ರಮಕ್ಕೆ ಸ್ವಾಗತ ಬೆಂಗಳೂರು: ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿ–ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಐಟಿ- ಇಡಿ ದಾಳಿಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ”ತಮ್ಮ ದುರುದ್ದೇಶ ಮತ್ತು ಭ್ರಷ್ಟತೆಯನ್ನು ಮುಚ್ಚಿಕೊಳ್ಳುವುದಕ್ಕಾಗಿಯೇ ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಗಳು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ, ಈ ಬಗ್ಗೆ ಯಾವುದಾದರೂ ಪುರಾವೆಗಳಿದ್ದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ಅವರು ಸ್ವತಂತ್ರರಿದ್ದಾರೆ. ತೆರಿಗೆ ವಂಚಕರ ವಿರುದ್ಧದ ಕ್ರಮಗಳನ್ನು ನಾವು ಸ್ವಾಗತಿಸುತ್ತೇವೆ” ಎಂದಿದ್ದಾರೆ.”ಗುತ್ತಿಗೆದಾರರು ಖೊಟ್ಟಿ ಖರೀದಿ ರಸೀದಿಗಳು ಮತ್ತು ಉಪಗುತ್ತಿಗೆದಾರರಿಂದ ಅಪ್ರಾಮಾಣಿಕವಾದ ಖರ್ಚುವೆಚ್ಚದ ದಾಖಲೆಗಳ ಮೂಲಕ ಅದಾಯವನ್ನು ಕಡಿಮೆಗೊಳಿಸಿ ತೆರಿಗೆ ವಂಚನೆ ಮಾಡಿರುವುದು…
ಪ್ರಶ್ನಿಸಿದ ಗ್ರಾಪಂ ಸದಸ್ಯ ಮನಿಯಾರ ಗೆ ಅವಾಚ್ಯ ಪದಗಳಿಂದ ನಿಂದನೆ-ಬೆದರಿಕೆ ಚಡಚಣ: ತಾಲೂಕಿನ ಸಮೀಪದ ದೇವರ ನಿಂಬರಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ ಮತ್ತು ಅಧ್ಯಕ್ಷ ಭೀಮನಗೌಡ ಬಿರಾದಾರ ಇವರಿಂದ ಅಧಿಕಾರ ದುರ್ಬಳಕೆಯಾಗುತ್ತಿದೆ ಎಂದು ಗ್ರಾಪಂ ಸದಸ್ಯ ಝಾಕೀರಸಾಬ ಮನಿಯಾರ ಆರೋಪಿಸಿದ್ದಾರೆ.ಗ್ರಾಮ ಪಂಚಾಯತಿಗೆ ಇಲಾಖೆಯಿಂದ ೧೫ ನೇ ಹಣಕಾಸಿನ ಅಡಿಯಲ್ಲಿ ಬಿಡುಗಡೆಗೊಂಡಿರುವ ಹಣ ದುರ್ಬಳಕೆಯಾಗಿದೆ. ವಿವಿಧ ಕಾಮಗಾರಿಗಳಿಗೆ ಹಣ ವೆಚ್ಚವಾಗಿದೆ ಎಂದು ಹೇಳುತ್ತಿದ್ದಾರೆ. ಎಲ್ಲ ಹಣ ಬೋಗಸ್ ರೀತಿಯಲ್ಲಿ ದುರ್ಬಳಕೆಯಾಗಿದೆ. ಸರ್ಕಾರದಿಂದ ಹತ್ತು ಹಲವು ಯೋಜನೆಗಳಿಗೆ ನೀಡಿದ್ದ ಅನುದಾನದ ಹಂಚಿಕೆಯನ್ನು ಕೇಳಲು ಹೋದರೆನನಗೆ ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಕೆಯೊಡ್ಡಿದ್ದಾರೆ. ಅಲ್ಲದೆ ಅಭಿವೃದ್ಧಿ ಅಧಿಕಾರಿ ನನ್ನ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಲು ಮುಂದಾಗುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.ಕೂಡಲೇ ಸಂಬಂದಿಸಿದ ಅಧಿಕಾರಿಗಳು ಇತ್ತ ಗಮನ ಹರಿಸಿ ಅನ್ಯಾಯದ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕಾನೂನು ಕ್ರಮ ಜರುಗಿಸಬೇಕೆಂದು ಸದಸ್ಯ ಮನಿಯಾರ ಆಗ್ರಹಿಸಿದ್ದಾರೆ.
ಚಡಚಣ: ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆಯ ವತಿಯಿಂದ ಆಯೋಜಿಸಿದ್ದ ವಿಶ್ವ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಮೀಪದ ಉಮರಜ ಗ್ರಾಮದ ಶಿಕ್ಷಕ ಸಾಹಿತಿ ಪ್ರಮೋದಕುಮಾರ ಮಠಪತಿ ಇವರ ಶೈಕ್ಷಣಿಕ ಮತ್ತು ಸಾಹಿತ್ಯ ಸೇವೆಯನ್ನು ಪರಿಗಣಿಸಿ ವೇದಿಕೆಯ ಅಧ್ಯಕ್ಷ ಪ್ರೊ ಎಲ್.ಎಚ್.ಪೆಂಡಾರಿಯವರು ಪ್ರಶಸ್ತಿ ಪ್ರಧಾನ ಮಾಡಿದರು.ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳಾದ ದಾವಣಗೆರೆಯ ಗಣೇಶ ಶೆಣೈ, ಚಿಕ್ಕಬಳ್ಳಾಪುರದ ಎ ಸರಸಮ್ಮಾ, ಅಮೇರಿಕಾದ ರೂಪ ಮಂಜುನಾಥ, ಗಡಿನಾಡ ಸಾಹಿತಿ ಗುರುಸಿದ್ಧಯ್ಯಾ ಸ್ವಾಮಿ, ನಿವೃತ್ತ ಡಿಡಿಪಿಐ ಡಾ. ಎನ. ಚಂದ್ರೇಗೌಡ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.ಪ್ರಮೋದಕುಮಾರ ಮಠಪತಿಯವರು ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮಾಚಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿಜಯಪುರ: ಅಭಿವೃದ್ಧಿ ಆಯುಕ್ತರು (ಕೈಮಗ್ಗ) ಜವಳಿ ಮಂತ್ರಾಲಯ ಭಾರತ ಸರ್ಕಾರ,ನೇಕಾರರ ಸೇವಾ ಕೇಂದ್ರ ಬೆಂಗಳೂರು ಇವರ ಸಹಯೋಗದಲ್ಲಿ ಅ.೧೯ ರಿಂದ ಅ.೨೫ ರವರೆಗೆ ನಡೆಯುವ ಜಿಲ್ಲಾ ಮಟ್ಟದ ಕೈಮಗ್ಗ ಮೇಳ-೨೦೨೩ ‘ತಾನಾ-ಬಾನಾ’ ಉದ್ಘಾಟನಾ ಕಾರ್ಯಕ್ರಮವನ್ನು ಅ.೧೯ರ ಮಧ್ಯಾಹ್ನ ೪ ಗಂಟೆಗೆ ನಗರದ ಜಿಲ್ಲಾ ಕೋರ್ಟ್ ಎದುರಿಗೆ ಇರುವ ಕೆಇಬಿ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಇವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಘನ ಉಪಸ್ಥಿತರಿರುವರು. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್.ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ…
