Author: editor.udayarashmi@gmail.com

ಬಿಎಲ್ಡಿಇ ಡೀಮ್ಡ್ ವಿವಿ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ವೈದ್ಯರ ಶ್ರಮ ಸಾರ್ಥಕ ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ಹೇಳಿದರು.ಬುಧವಾರ ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಅತ್ಯಾಧುನಿಕ ಸೌಲಭ್ಯಗಳು ಮತ್ತು ಜನಪರ ಆರೋಗ್ಯ ಸೇವೆಗಳ ಮೂಲಕ ಜನರನ್ನು ತಲುಪುತ್ತಿದೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಮತ್ತು ಸಚಿವರಾದ ಶ್ರೀ ಎಂ. ಬಿ. ಪಾಟೀಲ ಅವರು ವಿಜಯಪುರ ಜಿಲ್ಲೆಯ ಜನ ಚಿಕಿತ್ಸೆಗಳಿಗಾಗಿ ಬೇರೆ ಊರಿಗೆ ತೆರಳುವುದು ತಪ್ಪಬೇಕು. ಮಹಾನಗರಗಳಲ್ಲಿ ದೊರೆಯುವ ಆರೋಗ್ಯ ಸೇವೆಯನ್ನು ಜಿಲ್ಲೆಯ ಜನ ನಮ್ಮ ಆಸ್ಪತ್ರೆಯಲ್ಲಿಯೇ ಪಡೆಯುವಂತಾಗಲು ಎಲ್ಲ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಒದಗಿಸಿದ್ದಾರೆ. ಇದು ರೋಗಿಗಳ ಪಾಲಿಗೆ ವರದಾನವಾಗಿದೆ ಎಂದು ಅವರು ಹೇಳಿದರು.ಇದರಿಂದಾಗಿ ಈ…

Read More

ಊಟಕ್ಕೆಂದು ಹೋದ ಸ್ನೇಹಿತರು ಮಸಣ ಸೇರಿದರು | ರಸ್ತೆ ಬದಿ ನಿಂತವರಿಗೆ ಅಪ್ಪಳಿಸಿದ ಯಮಸ್ವರೂಪಿ ಲಾರಿ ವಿಜಯಪುರ: ಹೈವೇ ಪಕ್ಕ ನಿಂತವರ ಮೇಲೆ ಲಾರಿಯೊಂದು ಹಾಯ್ದು ಹೋಗಿರುವ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಬೈಕ್ ಸವಾರರು ಅಸುನೀಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 52 ಟೋಲ್ ನಾಕಾದ ಬಳಿ ಈ ದಾರುಣ ಘಟನೆ ಜರುಗಿದೆ.ಮೃತ ಯುವಕರನ್ನು ನಗರದ ವಜ್ರ ಹನುಮಾನ ನಗರದ ನಿವಾಸಿಗಳಾದ ಶಿವಾನಂದ ಚೌಧರಿ (25), ಸುನೀಲ ಖಾನಾಪೂರ (26), ಈರಣ್ಣ ಕೋಲಾರ( 26), ಪ್ರವೀಣ ಪಾಟೀಲ್ (31) ಹಾಗೂ ಸುನೀಲ ತಂದೆ ಪ್ರಭು ಖಾನಾಪೂರ (26 ) ಎಂದು ಗೊತ್ತಾಗಿದೆ.ಈ ನಾಲ್ವರೂ ಮೃತ ಯುವಕರು ಸ್ನೇಹಿತರಾಗಿದ್ದು ಊಟಕ್ಕೆಂದು ನಗರದ ಹೊರವಲಯದ ಹೊಟೇಲಿಗೆಂದು ತೆರಳಿ ಬೈಕ್ ಸಮೇತ ಹೈವೇ ಪಕ್ಕ ರಸ್ತೆ ಬದಿಗೆ ನಿಂತಾಗ ಯುವಕರ ಮೇಲೆ ವೇಗವಾಗಿ ಬಂದ ಲಾರಿಯೊಂದು ಇವರಿಗೆ ಡಿಕ್ಕಿಯಾದ ಪರಿಣಾಮ ಇವರೆಲ್ಲ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದಾರೆ.ಘಟನೆ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.ಅಪಘಾತದಲ್ಲಿ…

Read More

ವಿಜಯಪುರ: ನವರಾತ್ರಿ ಹಬ್ಬದ ನಾಲ್ಕನೆಯ ದಿನವಾದ ಬುಧವಾರ ನಗರದ ಸಿಲ್ಕಸಿಟಿ ಬಡಾವಣೆಯ ಮಹಿಳೆಯರು ಮಹಾಲಕ್ಷ್ಮಿ ಹಾಗೂ ಅಂಬಾಭವಾನಿ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.ವನಿತೆಯರೆಲ್ಲ ತಾಯಿ ಚಾಮುಂಡೇಶ್ವರಿಯ ನಾಲ್ಕನೆಯ ದಿನದ ಸ್ವರೂಪವಾದ ದೇವಿ ಕೂಷ್ಮಾಂಡ ವಸ್ತ್ರವರ್ಣವಾದ ನೀಲಿ ವಸ್ತ್ರಧಾರಿಗಳಾಗಿ ನವರಾತ್ರೋತ್ಸವದ ಸಂಭ್ರಮದಲ್ಲಿ ಭಾಗಿಯಾದರು.ಶೈಲಾ ಮಣೂರ, ಕಸ್ತೂರಿ ಶಹಾಪೇಟಿ, ಶಿಖಾಮಂಜರಿ ದಾಸ್, ಸಂಜೀವಿನಿ ಬೋರಾಡೆ, ಪಂಕಜಾ ಅಂಕಲಗಿ, ಸ್ನೇಹಾ ಪಾಟೀಲ, ಭಾಗ್ಯ ಶಹಾಪೇಟಿ, ಸವಿತಾ ತೇರದಾಳ, ನೀಲಾ ಪಾಟೀಲ, ಜ್ಯೋತಿ ಪಾಟೀಲ ಸೇರಿದಂತೆ ಹಲವರಿದ್ದರು.

Read More

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ಈಗಲೂ ಅಸ್ತಿತ್ವದಲ್ಲಿರುವ ಒಂದು ವೃತ್ತಿ ಅಥವಾ ಹೊಟ್ಟೆ ಪಾಡಿನ ಮಾರ್ಗ..ಸಣ್ಣ ವರ್ಗ ಅಥವಾ ವೃತ್ತಿಯೊಂದು ಅಸ್ತಿತ್ವದಲ್ಲಿದೆ. ಸಾಮಾನ್ಯ ಜನರಿಗೆ ಇದು ಅಷ್ಟು ಪರಿಚಿತವಲ್ಲ. ಎಲ್ಲೋ ಕೆಲವು ವೇಳೆ ಕೇಳಿರಬಹುದು ಅಥವಾ ಓದಿರಬಹುದು. ಆದರೆ ಸಮಾಜದ ಆಂತರ್ಯದಲ್ಲಿ ಈಗಲೂ ಚಲಾವಣೆಯಲ್ಲಿದೆ.ಭಾರತೀಯ ಸಮಾಜದಲ್ಲಿ ಸಾಮಾನ್ಯವಾಗಿ ವೇಶ್ಯಾ ವೃತ್ತಿಯನ್ನು ಅತ್ಯಂತ ಕೆಟ್ಟ ಕೀಳು ವೃತ್ತಿ ಅಥವಾ ದಂಧೆ ಎಂದು ಭಾವಿಸಲಾಗುತ್ತದೆ. ( ವಾಸ್ತವದಲ್ಲಿ ಮತ್ತು ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡರೆ ಅದು ನಿಜವಲ್ಲ. ಅದು ಬೇರೆ ವಿಷಯ ) ಆದರೆ ಅದಕ್ಕಿಂತಲೂ ಅತ್ಯಂತ ನೀಚ ವೃತ್ತಿಯೊಂದಿದೆ. ಇದು ಮಾನವೀಯ ಸಂಬಂಧಗಳ ಎಲ್ಲಾ ಮಿತಿಯನ್ನು ದಾಟಿ ಲೆಕ್ಕಕ್ಕೆ ಸಿಗುವುದಿಲ್ಲ. ಅಸಹ್ಯ ಎಂದು ಕರೆಯಬಹುದಾದ ವೃತ್ತಿ ಇದು.ಆಳ್ಕಟಿಗಳು ಅಥವಾ ಪಿಂಪಗಳು ಅಥವಾ ತಡೆಹಿಡುಕರು ಅಥವಾ ಮಾಮಾಗಳು ಎಂದು ಲೋಕಾಭಿರಾಮವಾಗಿ ಕರೆಯಲಾಗುವ ಜನರು ಮಾಡುವ ವೃತ್ತಿಯೇ ಇದು.ಮನುಷ್ಯರನ್ನು, ಅವರ ದೇಹವನ್ನು, ಅವರ ಭಾವನೆಗಳನ್ನು, ಅವರ ನಂಬಿಕೆಗಳನ್ನು, ಅವರ ಸಂಬಂಧಗಳನ್ನು, ಸಮಾಜದ ಮೌಲ್ಯಗಳನ್ನು ಮಾರಾಟ ಮಾಡಿ ಜೀವನ…

Read More

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿಕೆ ಗುತ್ತಿಗೆದಾರರ ಶೇ.75ರಷ್ಟು ಬಿಲ್ ಬಾಕಿ ಬಿಡುಗಡೆಗೆ ಮನವಿ | ಅಂಬಿಕಾಪತಿ ಮೇಲಿನ ಆರೋಪ ಸುಳ್ಳು | ಬಿಲ್ ಪೇಮೆಂಟ್‌ನಲ್ಲಿ ಅವ್ಯವಹಾರ ಬೆಂಗಳೂರು: ಈ ಸರಕಾರದಲ್ಲೂ ಭ್ರಷ್ಟಾಚಾರ ಇದೆ, ಇಲ್ಲ ಎಂದರೆ ನನ್ನಂತಹ ಮೂರ್ಖ ಇನ್ನೊಬ್ಬನಿಲ್ಲ. ಭ್ರಷ್ಟಾಚಾರ ಇಲ್ಲ ಎಂದು ನಾನು ಎಲ್ಲೂ ಹೇಳಿಲ್ಲ. ಅದನ್ನು ತಡೆಗಟ್ಟಬೇಕು ಎಂದು ಹೇಳಿದ್ದೇನೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿದ್ದಾರೆ.ಕೆ.ಕೆ.ಗೆಸ್ಟ್ ಹೌಸ್ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದಲ್ಲಿ ಭ್ರಷ್ಟಾಚಾರ ಇದೆ. ಆದರೆ, ಅದು ಅಷ್ಟಾಗಿ ಕಂಡುಬರುತ್ತಿಲ್ಲ ಎಂದರು.ಬಿಬಿಎಂಪಿಯ ಬಾಕಿ ಬಿಲ್ ವಿಚಾರ ಮಾತ್ರ ಸದ್ಯಕ್ಕೆ ಮಾತನಾಡಿದ್ದೇವೆ. ಶೇ.75ರಷ್ಟು ಬಿಲ್ ಬಾಕಿ ಬಿಡುಗಡೆ ಮಾಡಲು ಹೇಳಿದ್ದೇವೆ. ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಮಿಷನ್ ವಿಚಾರ ತನಿಖೆ ಮಾಡಿ ಎಂದಿದ್ದೇವೆ. ಶೇ.80ಕ್ಕಿಂತ ಹೆಚ್ಚು ಸಿನಿಯಾರಿಟಿ ಮೇಲೆ ಪೇಮೆಂಟ್ ಮಾಡುವ ಭರವಸೆ ಕೊಟ್ಟಿದ್ದಾರೆ. ಅಧಿಕಾರಿಗಳ ಮೇಲಿನ ಕಮಿಷನ್…

Read More

ಮಾದ್ಯಮ ಸ್ವಾತಂತ್ರ್ಯದ ಮೇಲಿನ ದಾಳಿಯ ವಿರುದ್ಧ ಪತ್ರಕರ್ತರಿಂದ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಅಹೋರಾತ್ರಿ ಪ್ರತಿಭಟನೆ ನವದೆಹಲಿ: ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗೆ ತಕ್ಷಣ ಮಧ್ಯಪ್ರವೇಶಿಸುವಂತೆ ಮಾದ್ಯಮ ಸಂಸ್ಥೆಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ಮಾದ್ಯಮ ಸ್ವಾತಂತ್ರ್ಯದ ಮೇಲಿನ ದಾಳಿಯ ವಿರುದ್ಧ ಪತ್ರಕರ್ತರು ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಅಹೋರಾತ್ರಿ ಪ್ರತಿಭಟನೆಯನ್ನು ಕೂಡ ನಡೆಸಿದ್ದಾರೆ.ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಇಂಡಿಯನ್ ವುಮೆನ್ ಪ್ರೆಸ್ ಕಾರ್ಪ್ಸ್, ಪ್ರೆಸ್ ಅಸೋಸಿಯೇಷನ್, ದೆಹಲಿ ಯೂನಿಯನ್ ಆಫ್ ಜರ್ನಲಿಸ್ಟ್ಸ್, ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್, ಡಿಜಿಪಬ್, ಫಾರಿನ್ ರೆಸ್ಪಾಂಡೆಂಟ್ ಕ್ಲಬ್, ವೆಟರನ್ ಜರ್ನಲಿಸ್ಟ್ ಗ್ರೂಪ್ ಮತ್ತು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿವೆ. ವಾಕ್ ಸ್ವಾತಂತ್ರ್ಯ, ಉದ್ಯೋಗ ಮತ್ತು ನಮಗೆ ನೀಡಿರುವ ಸಂವಿಧಾನದತ್ತ ಸ್ವಾತಂತ್ರ್ಯಗಳನ್ನು ರಕ್ಷಿಸಲು ರಾಷ್ಟ್ರಪತಿಗಳ ಮಧ್ಯಸ್ಥಿಕೆಯನ್ನು ಅವರು ಕೋರಿದ್ದಾರೆ.ಇಂದು ಭಾರತದಲ್ಲಿ ಸ್ವತಂತ್ರ ಮಾಧ್ಯಮಗಳು ಎದುರಿಸುತ್ತಿರುವ ಅಭೂತಪೂರ್ವ ಪರಿಸ್ಥಿತಿ ಬಗ್ಗೆ ರಾಷ್ಟ್ರಪತಿಗಳ ಗಮನ ಸೆಳೆಯಲಾಗಿದೆ.…

Read More

ಬೆಂಗಳೂರು: ರಾಜ್ಯದ ಬಹುತೇಕ ತಾಲೂಕುಗಳಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಬಾಕಿ ವೇತನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ. ರಾಜ್ಯದಾದ್ಯಂತ ಬಹುತೇಕ ತಾಲೂಕುಗಳಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹಣ ಬಿಡುಗಡೆಗೆ ಆಗ್ರಹಿಸಲಾಗಿದೆ.ಈ ಸಂಬಂಧ ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್ ಅವರಿಗೆ ಕರ್ನಾಟಕದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಪತ್ರ ಬರೆದಿದ್ದಾರೆ. 2023ರ ಆ.29ರಿಂದ ಕರ್ನಾಟಕಕ್ಕೆ ವೇತನ ಬಿಡುಗಡೆ ಬಾಕಿಯಿದೆ. ಇದರ ಮೌಲ್ಯ 478.46 ಕೋಟಿ ರೂಪಾಯಿಗಳಾಗಿದ್ದು, ಆಗಸ್ಟ್ ಮತ್ತು ಸೆಪ್ಟೆಂಬರ್‌ಗೆ, ಸೆ. 24 ರಂದು ಬರೀ 1.55 ಕೋಟಿ ರೂ. ಕೊನೆಯ ಬಾರಿಗೆ ವೇತನ ಬಿಡುಗಡೆಯಾಗಿದೆ ಎಂದು ಹೇಳಿದ್ದಾರೆ.ಕರ್ನಾಟಕದ ಗ್ರಾಮೀಣಾಭಿವೃದ್ಧಿ ಕಮಿಷನ್‌ ಈಗಾಗಲೇ ಪ್ರಸಕ್ತ ಮತ್ತು ಹಿಂದಿನ ವರ್ಷದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವಾರ್ಷಿಕ ಲೆಕ್ಕಪರಿಶೋಧನೆಯ ಅಂಕಿ ಅಂಶಗಳನ್ನು ಸಲ್ಲಿಸಿದೆ ಎಂದು ಮುಖ್ಯ ಕಾರ್ಯದರ್ಶಿ ತಮ್ಮ…

Read More

ಆತ್ಮೀಯ ಸಹೋದರ ಸ್ನೇಹಿತ, ಕಾರ್ಯನಿರತ ಪತ್ರಕರ್ತರ ಸಂಘದ ಕಲಬುರ್ಗಿ ಜಿಲ್ಲಾಧ್ಯಕ್ಷ ಶ್ರೀ ಬಾಬುರಾವ ಯಡ್ರಾಮಿ ಅವರು ನಾಡಿನ ಪ್ರತಿಷ್ಠಿತ ದಿನಪತ್ರಿಕೆ ’ವಿಜಯವಾಣಿ’ ಪತ್ರಿಕೆಯ ಕಲಬುರ್ಗಿ ಆವೃತ್ತಿಯ ಸ್ಥಾನಿಕ ಸಂಪಾದಕರಾಗಿ ಅಧಿಕಾರ ವಹಿಸಿಕೊಂಡಿರುವುದು ಸಂತಸ ಮತ್ತು ಹೆಮ್ಮೆಯ ಸಂಗತಿ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಆಪ್ತಬಂಧು ಬಾಬುರಾವ ಯಡ್ರಾಮಿ ಅವರಿಗೆ ’ಉದಯರಶ್ಮಿ’ ಪತ್ರಿಕಾ ಬಳಗದಿಂದ ಅಭಿಮಾನದ ಅಭಿನಂದನೆಗಳು. ಇಂದುಶೇಖರ ಮಣೂರಸಂಪಾದಕರು, ’ಉದಯರಶ್ಮಿ’ ದಿನಪತ್ರಿಕೆಜಿಲ್ಲಾ ಉಪಾಧ್ಯಕ್ಷರು, ಕಾರ್ಯನಿರತ ಪತ್ರಕರ್ತರ ಸಂಘ, ವಿಜಯಪುರ

Read More

ವಿಜಯಪುರ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದೆ. ಪೋಷಕರು ಮಕ್ಕಳನ್ನು ಒಳ್ಳೆಯ ಸಂಸ್ಕಾರಯುತ ವಾತಾವರಣದಲ್ಲಿ ಬೆಳೆಸಬೇಕು. ಮಕ್ಕಳು ಬಾಲ್ಯದಲ್ಲಿ ಕಲಿತುಕೊಳ್ಳುವ ಸಂಸ್ಕಾರ ಅವರ ಬದುಕಿಗೆ ಮುನ್ನುಡಿಯಾಗುತ್ತದೆ ಎಂದು ವಿಜಯಪುರ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕೋಶಾಧ್ಯಕ್ಷರಾದ ಡಾ ಸಂಗಮೇಶ ಮೇತ್ರಿ ಹೇಳಿದರು.ಅವರು ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಸಂತೋಷ ಬಂಡೆ ಅವರ ಮಕ್ಕಳಾದ ಅನುಶ್ರೀ-ಶ್ರೀನಿಧಿ ಅವರ 5ನೇ ವರ್ಷದ ಜನ್ಮದಿನದ ನಿಮಿತ್ತ ‘ಮೂಲ’-ಕಥಾ ಸಂಕಲನದ ಲೋಕಾರ್ಪಣೆ, ಡಾ ಎ ಪಿ ಜೆ ಅಬ್ದುಲ್ ಕಲಾಂ ಅವರ ಜಯಂತಿ, ವಿಶ್ವ ಕೈತೊಳೆಯುವ ದಿನ ಹಾಗೂ ಒಂದು ನೂರು ಸಸಿ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.’ಮೂಲ’ ಕಥಾ ಸಂಕಲನ ಲೋಕಾರ್ಪಣೆ ಮಾಡಿ ಮಾತನಾಡಿದ ನಾದ ಕೆ ಡಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಚಿದಂಬರ ಬಂಡಗರ, ಒಳ್ಳೆಯ ಪುಸ್ತಕಗಳು ನಮ್ಮ ಮನೆಯ ಸಂಪತ್ತು ಎಂಬ ಭಾವನೆ ಬೆಳೆದು ನಾಡಿನಾದ್ಯಂತ ಪುಸ್ತಕ ಸಂಸ್ಕ್ರತಿ ವ್ಯಾಪಿಸಬೇಕು…

Read More

ವಿಜಯಪುರ: ಔದ್ಯೋಗಿಕ ಕ್ರಾಂತಿಯ ಮೂಲಕ ರಾಜ್ಯದ ಅಭಿವೃದ್ಧಿಗೆ ಪಣ ತೊಟ್ಟಿದ್ದು, ಜಿಲ್ಲೆಯ ಪ್ರಗತಿಗೂ ಆದ್ಯತೆ ನೀಡುವುದಾಗಿ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ ಬಿ ಪಾಟೀಲ ಹೇಳಿದರು.ಬಂಡವಾಳ ಹೂಡಿಕೆಗಾಗಿ ಹಲವಾರು ದೇಶಗಳಿಗೆ ಭೇಟಿ ನೀಡಿ ನಗರಕ್ಕಾಗಮಿಸಿದ ಸಂದರ್ಭದಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಲು ಹಲವಾರು ದೇಶದ ಉದ್ಯಮಿಗಳು ಮುಂದೆ ಬರುತ್ತಿದ್ದಾರೆ. ಇನ್ನು ಐದು ವರ್ಷಗಳಲ್ಲಿ ನಮ್ಮ ರಾಜ್ಯ ಸಾಕಷ್ಟು ಬದಲಾವಣೆಯಾಗಲಿದೆ. ಮುಂಬರುವ ದಿನಗಳಲ್ಲಿ ದುಡಿಯುವ ಕೈಗಳಿಗೆ ಇಲ್ಲಿಯೇ ಉದ್ಯೋಗ ಸಿಗಲಿದ್ದು, ಒಂದಿಷ್ಟು ನಿರುದ್ಯೋಗ ಸಮಸ್ಯೆ ಪರಿಹಾರವಾಗಲಿದೆ. ಈಗ ಸದ್ಯ ರಾಜ್ಯದಲ್ಲಿ ಬರಗಾಲ ಕಾಡುತ್ತಿದ್ದು, ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ, ಮೇವು ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕುಡಿಯುವ ನೀರಿಗಾಗಿ ಕಾಲುವೆಗಳಿಗೆ ನೀರು ಹರಿಸಲು ತಿಳಿಸಿಲಾಗಿದೆ. ಕೆರೆಗಳ ಸಂರಕ್ಷಣೆ ಜೊತೆಗೆ ತುಂಬಿಸುವ ಕಾರ್ಯ ಮಾಡಲಾಗುವುದು ಎಂದರು.ವ್ಹಿಡಿಸಿಸಿ ಬ್ಯಾಂಕಿನ ನಿರ್ದೇಶಕ ಬಿ ಎಸ್ ಪಾಟೀಲ…

Read More