Author: editor.udayarashmi@gmail.com

ವಿಜಯಪುರ: ಜಿಲ್ಲಾಡಳಿತದ ಮೂಲಕ ಅ.೨೮ ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ನಿರ್ಧರಿಸಲಾಯಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿ ಸಭಾಂಗಣದಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಅ.೨೮ರ ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ವಿವಿಧ ಕಲಾತಂಡಗಳೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ, ಬೆಳಿಗ್ಗೆ ೧೦:೩೦ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಜಯಂತಿ ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಜಯಂತಿ ಕಾರ್ಯಕ್ರಮಕ್ಕೆ ಅತಿಥಿಗಳಿಗೆ ಆಹ್ವಾನ, ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ, ಎಸ್ ಎಸ್. ಎಲ್. ಸಿ ಹಾಗೂ ಪಿ. ಯು. ಸಿ ಯಲ್ಲಿ ಹೆಚ್ಚು ಅಂಕಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದು…

Read More

ಸಿಂದಗಿ: ರೈತರ ಹೊಲಗಳಲ್ಲಿ ಮಣ್ಣಿನ ಪರೀಕ್ಷೆ, ಕೀಟನಾಶಕ, ರಸಗೊಬ್ಬರ ಪ್ರಮಾಣದ ಬಗ್ಗೆ ನೇರವಾಗಿ ರೈತರಿಗೆ ಜಮೀನುಗಳಿಗೆ ಬಂದು ಪರೀಕ್ಷೆ ಮಾಡುತ್ತದೆ. ಜಮೀನುಗಳಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಸವೆತ, ಅತಿಯಾದ ಬೇಳೆ ಬೆಳವಣಿಗೆ, ಕೀಟ ಹಾಗೂ ರೋಗದಂತಹ ನೈಸರ್ಗಿಕ ವಿಪತ್ತುಗಳಿಗೆ ಪರಿಹಾರ ಒದಗಿಸುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಆವರಣದಲ್ಲಿ ಕೃಷಿ ಸಂಜೀವಿನಿ ವಾಹನಕ್ಕೆ ಚಾಲನೆ ನೀಡಿ, ಯಾಂತ್ರಿಕರಣ ಯೋಜನೆಯಡಿಯ ಪಲಾನುಭವಿಗಳಿಗೆ ವಿವಿಧ ಕೃಷಿ ಪರಿಕರಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಲ್ಲಿ ರೈತರು ಖರೀದಿ ಮಾಡಿದ ರಸಗೊಬ್ಬರಗಳಲ್ಲಿ ಮಿಶ್ರಣವಾಗಿರುವ ಸಾಂದ್ರತೆ ಪರಿಶೀಲನೆ ಮಾಡಲಾಗುತ್ತದೆ. ಒಟ್ಟಿನಲ್ಲಿ ರೈತನಿಗೆ ಕೃಷಿ ಸಂಜೀವಿನಿ ಯೋಜನೆ ಬಹಳ ಉಪಕಾರಿಯಾಗಿದ್ದು, ರೈತರಿಗೆ ಈ ಯೋಜನೆ ಬಗ್ಗೆ ಅರಿವು ಮೂಡಿಸಲು ಕೃಷಿ ಇಲಾಖೆ ಯೋಜನೆಯನ್ನು ರೂಪಿಸಿಕೊಂಡಿದೆ. ಆದ್ದರಿಂದ ರೈತರು ಕೃಷಿ ಸಂಜೀವಿನಿ ಯೋಜನೆಯ ಸದುಪಯೋಗಿಸಿಕೊಳ್ಳಿ ಎಂದು ಸಲಹೆ ನೀಡಿದರು.ಈ ಸಹಾಯಕ ಕೃಷಿ ನಿರ್ದೇಶಕರು, ಕ್ಷೇತ್ರದ ರೈತ ಪಲಾನುಭವಿಗಳು, ವಿವಿಧ ಅಧಿಕಾರಗಳು, ಸೇರಿದಂತೆ…

Read More

ಮುದ್ದೇಬಿಹಾಳ: ಪಟ್ಟಣದಲ್ಲಿ ಕೆಲವು ದ್ವಿಚಕ್ರ ವಾಹನಗಳ ಸವಾರರು ತಮ್ಮ ವಾಹನಗಳ ಸೈಲೆನ್ಸ್ರ್ ನ್ನು ಬದಲಾಯಿಸಿ ವಿಚಿತ್ರವಾಗಿ ಶಬ್ಧಮಾಡುವ ಸೈಲೆನ್ಸ್ರ್ ನ್ನು ಅಳವಡಿಸಿ ಸಾರ್ವಜನಿಕರಿಗೆ ಉಪದ್ರವ ನೀಡುತ್ತಿದ್ದು ಈ ಕೂಡಲೇ ತಮ್ಮ ಚಾಳಿಯನ್ನು ಬಿಟ್ಟು ವಾಹನಗಳ ಕಂಪನಿ ಜೊತೆಗೆ ಬರುವ ಸೈಲೆನ್ಸ್ರ್ ನ್ನು ಅಳವಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಮುಲಾಜಿಲ್ಲದೇ ಎಫ್‌ಐಆರ್ ದಾಖಲಿಸುತ್ತೇನೆ ಎಂದು ಪಿಎಸ್‌ಐ ಸಂಜೀವ ತಿಪರೆಡ್ಡಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಮಂಗಳವಾರ ವಿಚಿತ್ರವಾಗಿ ಶಬ್ಧಮಾಡುವ ಕೆಲ ವಾಹನಗಳನ್ನು ಸೀಜ್ ಮಾಡಿ ಸೈಲೆನ್ಸ್ರ್ ಗಳನ್ನು ಬಿಚ್ಚಿಸಿ ನಂತರ ಸಂಯುಕ್ತ ಕರ್ನಾಟಕದೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಬಗ್ಗೆ ಹಲವಾರು ದೂರುಗಳು ಬಂದಿವೆ. ಕೆಲ ಯುವಕರು ಇದನ್ನು ಫ್ಯಾಶನ್ ಅನ್ಕೊಂಡಿದ್ದಾರೆ. ಆದರೆ ಇದು ಕಾನೂನು ಬಾಹಿರವಾಗಿದ್ದು ಇದರಿಂದ ಸಾರ್ವಜನಿಕರಿಗೆ ಉಪದ್ರವವಾಗುತ್ತದೆ. ಇದಕ್ಕೆ ಕಾನೂನಿನಲ್ಲಿ ಕಠಿಣ ಶಿಕ್ಷೆ ಇದೆ. ಇಂತಹ ವಾಹನಗಳನ್ನು ಹೊಂದಿದವರು ಈ ಕೂಡಲೇ ಶಬ್ಧಮಾಲಿನ್ಯ ಮಾಡುವ ಸೈಲೆನ್ಸ್ರ್ ಗಳನ್ನು ಬದಲಾಯಿಸಿಕೊಳ್ಳಬೇಕು. ಇನ್ನು ಮುಂದೆ ಎಲ್ಲಿಯಾದರೂ ಇಂತಹ ವಾಹನಗಳು ಕಂಡಲ್ಲಿ ಯಾರೇ ಆದರೂ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳುವದಾಗಿ…

Read More

ವಿಜಯಪುರ: ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಝಳಕಿ ಗ್ರಾಮದ ೨೭ ವಯಸ್ಸಿನ ಅಭಿನಂದನ ತಂದೆ ದಿಲೀಪಕುಮಾರ ಕಾಸರ ಎಂಬ ವ್ಯಕ್ತಿ ಕಾಣೆಯಾಗಿದ್ದು, ವಿಜಯಪುರ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ ಎಂದು ಆದರ್ಶ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಅವರು ತಿಳಿಸಿದ್ದಾರೆ.ಕಾಣೆಯಾದ ವ್ಯಕ್ತಿ ಅಂದಾಜು ೨೭ ವರ್ಷ ವಯಸ್ಸು ಇದ್ದು, ಎತ್ತರ ೫.೫ ಅಡಿ, ಸಾಧಗೆಂಪು ಮೈಬಣ್ಣ, ಕಪ್ಪು ಕೂದಲು, ನೀಲಿ ಬಣ್ಣದ ಪ್ಯಾಂಟ್ ಕಾಲರಿನ ಟೀ ಶರ್ಟ್ ಧರಿಸಿದ್ದು, ಕನ್ನಡ, ಇಂಗ್ಲೀಷ ಮತ್ತು ಹಿಂದಿ ಭಾಷೆ ಮಾತನಾಡುವ ಈ ವ್ಯಕ್ತಿ ಕಂಡುಬಂದಲ್ಲಿ ಸಂಬಂಧಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ದೂ. ೦೮೩೫೨-೨೫೦೧೫೨, ಸಿಪಿಐ ಗೋಲಗುಂಬಜ್ ವೃತ್ತ ದೂ. ೦೮೩೫೨-೨೫೦೨೫೨ ಮತ್ತು ಆದರ್ಶ ನಗರ ಪೋಲಿಸ್ ಠಾಣೆ ದೂ.೦೮೩೫೨-೨೬೩೩೩೩ ಮೊ.೯೪೮೦೮೦೪೨೫೦ ಸಂಖ್ಯೆಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕೃಷಿ ಮಹಾವಿದ್ಯಾಲಯ ಖಾಲಿ ಇರುವ ಎರಡು ಗ್ರಂಥಾಲಯ ಸಹಾಯಕರ ಹುದ್ದೆಗಳ ತಾತ್ಕಾಲಿಕ ನೇಮಕಾತಿಗಾಗಿ ಅ.೩೧ ರಂದು ಮದ್ಯಾಹ್ನ ೨:೩೦ ಗಂಟೆಗೆ ಕೃಷಿ ಮಹಾವಿದ್ಯಾಲಯ ಡೀನ್ ಕೊಠಡಿಯಲ್ಲಿ ಸದರ್ಶನ ಏರ್ಪಡಿಸಲಾಗಿದೆ.ಸಂದರ್ಶನಕ್ಕೆ ಹಾಜರಾಗುವ ಆಸಕ್ತ ಅಭ್ಯರ್ಥಿಗಳು ಬ್ಯಾಚುಲರ್ ಆಫ್ ಲೈಬ್ರರಿ ಸೈನ್ಸ್ ಅಥವಾ ಬಿ.ಲಿಬ್.ಐ.ಎಸ್‌ಸಿ, ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್ ಅಥವಾ ಎಮ್.ಲಿಬ್.ಐ.ಎಸ್‌ಸಿ, ಹಾಗೂ ವರ್ಗೀಕರಣ ಮತ್ತು ಕ್ಯಾಟಲಾಗ್ ಪುಸ್ತಕಗಳಲ್ಲಿ ಅನುಭವ ಮತ್ತು ಗ್ರಂಥಾಲಯ,ಕಾಲೇಜು,ಸಂಶೋಧನಾ ಸಂಸ್ಥೆಯಲ್ಲಿ ಅರ್ಹತೆ ಪಡೆದಿರುವ ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲ ಮೂಲ ದಾಖಲೆಗಳ ಎರಡು ಝರಾಕ್ಸ್ ಪ್ರತಿ ಮತ್ತು ಭಾವಚಿತ್ರ ಅರ್ಜಿ ನಮೂನೆಗೆ ಲಗತ್ತಿಸಿ ಸಂದರ್ಶನದ ಸಮಯದಲ್ಲಿ ಹಾಜರಿರಬೇಕು ಅರ್ಜಿ ಮುಂಚಿತವಾಗಿ ಕಳುಹಿಸಲು ಅವಕಾಶವಿರುವುದಿಲ್ಲ ಎಂದು ಡೀನ್ ಕೃಷಿ ಮಹಾವಿದ್ಯಾಲಯ ವಿಜಯಪುರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೋರಾಟ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ. ಕಿತ್ತೂರು ಚನ್ನಮ್ಮ ಅವರು ಬ್ರಿಟಿಷ್ರ ವಿರುದ್ಧ ಹೋರಾಟ ನಡೆಸಿದರು. ಅವರ ಹೋರಾಟ,ತ್ಯಾಗ-ಬಲಿದಾನ ಹಾಗೂ ಅವರ ದೇಶ ಭಕ್ತಿ ಸ್ಮರಿಸಿಕೊಳ್ಳುವ ಮೂಲಕ ಗೌರವ ಸಲ್ಲಿಸೋಣ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಭಾನುವಾರ ಕಿತ್ತೂರು ಚನ್ನಮ್ಮ ಅವರ ವಿಜಯ ವೀರಜ್ಯೋತಿ ಯಾತ್ರೆಯ ರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತನಾಡಿದರು. ಐತಿಹಾಸಿಕ ಕಿತ್ತೂರು ಉತ್ಸವವು ಇದೇ ಅಕ್ಟೋಬರ್ ೨೩ ರಿಂದ ೨೫ ವರೆಗೆ ಕಿತ್ತೂರಿನಲ್ಲಿ ನಡೆಯುವುದು. ಕಿತ್ತೂರು ಉತ್ಸವದ ಅಂಗವಾಗಿ ಅಕ್ಟೋಬರ್ ೧೩ ರಂದು ಕಿತ್ತೂರು ಚನ್ನಮ್ಮಾಜಿಯವರ ವಿಜಯ ವೀರಜ್ಯೋತಿ ಯಾತ್ರೆಯು ಬೆಂಗಳೂರಿನಿಂದ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿತ್ತೂರು ಚನ್ನಮ್ಮಾಜೀಯವರ ವಿಜಯ ವೀರಜ್ಯೋತಿ ಯಾತ್ರೆಗೆ ಚಾಲನೆ ನೀಡಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ವಿಜಯಪುರದ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ವಿಜಯಪುರ ತಹಶೀಲ್ದಾರ ಶ್ರೀಮತಿ ಕವಿತಾ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ…

Read More

ಲೆಕ್ಕ ಪರಿಶೋಧಕ ಶಾಂತವೀರ ಮಣೂರ ಅವರಿಂದ ಆದಾಯ ತೆರಿಗೆ ಮತ್ತು ಜಿ.ಎಸ್.ಟಿ. ಕುರಿತು ಉಪನ್ಯಾಸ ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಮತ್ತು ಯುವ ಭಾರತ ಸಮಿತಿ, ವಿಜಯಪುರ ಇವರ ಸಹಯೋಗದಲ್ಲಿ ಅ.೧೯ ಗುರುವಾರ ಬೆಳಿಗ್ಗೆ ೧೦-೩೦ಕ್ಕೆ ನಗರದ ಅಂಬೇಡ್ಕರ್ ಸರ್ಕಲ್ ಹತ್ತಿರವಿರುವ ಪ್ರವಾಸೋದ್ಯಮ ಇಲಾಖೆಯ ಸರಕಾರಿ ಆರ್ಟ ಗ್ಯಾಲರಿಯಲ್ಲಿ ಛಾಯಾಗ್ರಾಹಕರಿಗಾಗಿ ಆದಾಯ ತೆರಿಗೆ ಮತ್ತು ಜಿ.ಎಸ್.ಟಿ. ಕುರಿತು ವಿಶೇಷ ಕಾರ್ಯಾಗಾರ, ಉಪನ್ಯಾಸ ಮತ್ತು ಚರ್ಚಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಉದ್ಘಾಟಕರಾಗಿ ಯುವ ಭಾರತ ಸಮಿತಿ ಅಧ್ಯಕ್ಷ ಉಮೇಶ್ ಕಾರಜೋಳ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ವಿಜಯಪುರದ ಜಾರಿ ಸರಕುಗಳು ಮತ್ತು ಸೇವಾ ತೆರಿಗೆ ಇಲಾಖೆಯ ಸಿ.ಟಿ.ಓ. ಸುರೇಶ. ಎಂ. ಗೊಳಸಂಗಿ, ಲೆಕ್ಕ ಪರಿಶೋಧಕ ಶಾಂತವಿರೇಶ ಮಣೂರ ಮತ್ತು ಜಿಎಸ್‌ಟಿಪಿ ಸರಕುಗಳು ಮತ್ತು ಸೇವಾ ತೆರಿಗೆ ಸಲಹೆಗಾರ ಸಿದ್ದನಗೌಡ ಬಿರಾದಾರ ಆಗಮಿಸಲಿದ್ದಾರೆ.ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಮೇಶ ಚವ್ಹಾಣ ಉಪಸ್ಥಿತರಿರಲಿದ್ದಾರೆ.ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಛಾಯಾಗ್ರಾಹಕರು,…

Read More

ಹಿರಿಯ ಸಾಹಿತಿ ಸಿದ್ಧರಾಮ ಉಪ್ಪಿನ ಗೆ ’ಉದಯರಶ್ಮಿ’ ಸಂಪಾದಕರಿಂದ ಸನ್ಮಾನ ವಿಜಯಪುರ: ಆಲಮೇಲದ ಹಿರಿಯ ಬಂಡಾಯ ಸಾಹಿತಿ ಸಿದ್ಧರಾಮ ಉಪ್ಪಿನ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ ಅವರು ಸನ್ಮಾನಿಸಿ, ಗೌರವಿಸಿದರು. ’ಉದಯರಶ್ಮಿ’ ಸಂಪಾದಕರೂ ಆಗಿರುವ ಇಂದುಶೇಖರ ಅವರ ಸ್ವಗೃಹ ’ರಮ್ಯರಶ್ಮಿ’ಗೆ ಭಾನುವಾರ ಆಗಮಿಸಿದ ಸಾಹಿತಿ ಉಪ್ಪಿನ ಅವರು ಪತ್ರಿಕೆಯ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭ ಮಾತನಾಡಿದ ಅವರು, ಪ್ರಸ್ತುತ ಸಾಲಿನ ’ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ಯ ಆಯ್ಕೆಯಲ್ಲಿ ಸರಕಾರವು ತಾರತಮ್ಯ ಧೋರಣೆ ಅನುಸರಿಸದೆ, ಅಪಸ್ವರಗಳಿಗೆ ಆಸ್ಪದ ನೀಡದಂತೆ ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ನೀಡಬೇಕು. ಅರ್ಹ ಸಾಹಿತಿಗಳಿಗೆ, ಸಾಧಕರಿಗೆ ಗೌರವ ಸಿಗಬೇಕೆಂಬ ಆಶಯ ವ್ಯಕ್ತಪಡಿಸಿದರು.ಪತ್ರಕರ್ತ ಶಿವಕುಮಾರ ಉಪ್ಪಿನ, ಚಲನಚಿತ್ರ ನಟ ಸಂತೋಷ ಉಪ್ಪಿನ ಇದ್ದರು.

Read More

ಜ.2ರ ಸಿದ್ದೇಶ್ವರ ಶ್ರೀ ಗುರುನಮನ ಕಾರ್ಯಕ್ರಮದ ರೂಪುರೇಷೆ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಮುಂಬರುವ ಜನೇವರಿ 2 ರಂದು ನಡೆಯಲಿರುವ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮದ ರೂಪುರೇಷೆಗಳ ಸುತ್ತೂರು ಮತ್ತು ಕನೇರಿ ಮಠದ ಶ್ರೀಗಳ ಚರ್ಚಿಸಿ ಕುರಿತು ಜ್ಞಾನಯೋಗಾಶ್ರಮ ಸಮಿತಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ನಗರದ ಜ್ಞಾನಯೋಗಾಶ್ರಮದಲ್ಲಿ ಸೋಮವಾರ ರಾತ್ರಿ ನಾನಾ ಸ್ವಾಮೀಜಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಮತ್ತು ಜ್ಞಾನಯೋಗಾಶ್ರಮದ ಕುರಿತು ಯಾವ ಕೆಲಸ ವಹಿಸಿದರೂ ಭಕ್ತಿಪೂರ್ವಕವಾಗಿ ಮಾಡುತ್ತೇನೆ ಎಂದು ಹೇಳಿದರು.ಸಿದ್ಧೇಶ್ವರ ಸ್ವಾಮೀಜಿಯವರ ಜೀವನ ವಿಭಿನ್ನವಾಗಿತ್ತು. ಅವರೊಬ್ಬ ಸಂತ ಮಾತ್ರವಲ್ಲ, ಸರಳ, ಶ್ರೇಷ್ಠ ಹಾಗೂ ಅರ್ಥಪೂರ್ಣ ಬದುಕು ಸಾಗಿಸಿದರು. ಅವರ ಜೀವನದ ಪಯಣದಲ್ಲಿ ವಿಶೇಷವಾಗಿ ಗ್ರಾಮೀಣ ಜನರ, ರೈತರ ಬದುಕಿನ ಬಗ್ಗೆ ಕಾಳಜಿ ಮತ್ತು ಬದ್ಧತೆ…

Read More

ವಿಜಯಪುರ: ಬರ ಸಮಸ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು ಮತ್ತು ವಿದ್ಯುತ್ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಇಂದು ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅವರು, ರೈತರ ಸಮಸ್ಯೆಗಳಿಗೆ ಕೂಡಲೆ ಸ್ಪಂದಿಸಿದರು. ಅಲ್ಲದೇ, ಸಂಬಂಧಿಸಿದ ಅಧಿಕಾರಿಗಳಿಗೆ ಮೊಬೈಲ್ ಕರೆ ಮಾಡಿ ಕೂಡಲೇ ಕ್ರಮ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಿದರು.ತಿಡಗುಂದಿ ಸುತ್ತಮುತ್ತಲಿನ ನಾನಾ ಗ್ರಾಮಗಳಿಂದ ಆಗಮಸಿದ್ದ ರೈತರು, ಮುಳವಾಡ ಏತ ನಿರಾವರಿ ಯೋಜನೆಯ ತಿಡಗುಂದಿ ಅಕ್ವಾಡಕ್ಟ್ ಮೂಲಕ ಕೆರೆಗಳಿಗೆ ನೀರು ಹರಿಸಬೇಕು. ಇದರಿಂದ ಮಖಣಾಪುರ, ಡೋಮನಾಳ, ತಿಡಗುಂದಿ, ಬೊಮ್ಮನಳ್ಳಿ, ಮಿಂಚನಾಳ, ಗುಣಕಿ ಸೇರಿದಂತೆ ನಾನಾ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಸಚಿವರ ಬಳಿ ಅಳಲು ತೋಡಿಕೊಂಡರು. ಆಗ ಕೂಡಲೇ ಸ್ಪಂದಿಸಿದ ಸಚಿವರು ಕೆಬಿಜೆಎನ್ಎಲ್ ಸೂಪರಿಂಟೆಂಡೆಂಟ್…

Read More