Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಜಿಲ್ಲೆಯ ಬಬಲೇಶ್ವರ, ಮಮದಾಪುರ, ಹೂವಿನಹಿಪ್ಪರಗಿ, ಬಳ್ಳೊಳ್ಳಿ ಹಾಗೂ ದೇವರಹಿಪ್ಪರಗಿ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕೃಷಿ ಯಂತ್ರೋಪಕರಣಗಳನ್ನು ಆಸಕ್ತ ಎಫ್ಪಿಓ- ಸಂಸ್ಥೆಗಳಿಗೆ ಹಸ್ತಾಂತರಿಸಲು ಅರ್ಹ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಕೃಷಿ ಯಂತ್ರಧಾರೆ ಕೇಂದ್ರದಲ್ಲಿರುವ ಯಂತ್ರೋಪಕರಣಗಳನ್ನು ಹಸ್ತಾಂತರಿಸಿಕೊಂಡ ಸಂಸ್ಥೆಗಳು ಇಲಾಖೆ ನಿಗದಿಪಡಿಸಿದ ದರದಲ್ಲಿ ರೈತರಿಗೆ ಬಾಡಿಗೆ ಆಧಾರದ ಮೇಲೆ ನೀಡಬೇಕಾಗುತ್ತದೆ. ಆಸಕ್ತ ಅರ್ಹ ಸಂಸ್ಥೆಗಳು ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ವಿಭಾಗೀಯ ಉಪ ಕೃಷಿ ನಿರ್ದೇಶಕರು ಹಾಗೂ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ವಿಕಲಚೇತನರ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೧೯ ರಂದು ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಸಭೆಗೆ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು, ವಿಕಲಚೇತನರು ಭಾಗವಹಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬರ ಪರಿಸ್ಥಿತಿ ಕುರಿತ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮಾಹಿತಿ ಕುಡಿವ ನೀರಿನ ಸಮಸ್ಯೆಯಾಗದಂತೆಕ್ರೀಯಾಯೋಜನೆ | ೫೪,೬೩೪ ಲಕ್ಷ ರೂ. ಎನ್.ಡಿ.ಆರ್.ಎಫ್ ಸಹಾಯಕ್ಕಾಗಿ ಮನವಿ ವಿಜಯಪುರ: ಜನರ ಆಶೋತ್ತರಗಳಿಗೆ ಹಾಗೂ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾಯೋನ್ಮುಖರಾಗಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.ಅವರು ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ, ಕುಡಿಯುವ ನೀರಿನ ಪೂರೈಕೆ ಕುರಿತು ಸೋಮವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ೧೨ ತಾಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ತಿಕೋಟಾ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎನ್.ಡಿ ಆರ್.ಎಫ್ ಮಾನದಂಡದಿಂದಾಗಿ ಬರ ಎಂದು ಘೋಷಣೆ ಆಗದೇ ಇರುವುದರಿಂದ ಇತರ ಮಾನದಂಡಗಳನ್ನು ಪರಿಗಣಿಸಿ ತಿಕೋಟಾ ತಾಲೂಕನ್ನು ಬರ ಘೋಷಣೆ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ…
ವಿಜಯಪುರ: ನಗರದದ ಕೆ.ಎಚ್.ಬಿ ಕಾಲೋನಿಯ ಯೋಗ ಗಾರ್ಡನ್ ನಲ್ಲಿ ಶ್ರೀತುಳಸಿಗಿರೀಶ ಫೌಂಡೇಶನ್ ವತಿಯಿಂದ, ಸಾರ್ವಜನಿಕರನ್ನು ಭೇಟಿ ಮಾಡಿ ಮೋದಿಜೀ ಅವರ ನವವರ್ಷಗಳ ಸಾಧನೆಗಳನ್ನು ವಿವರಿಸಿ. ಮೋದಿ ಅವರನ್ನು ಬೆಂಬಲಿಸಲು ಕೋರಲಾಯಿತು.ಈ ನವರಾತ್ರಿಯ ಶುಭ ಸಂದರ್ಭದಲ್ಲಿ ಮೋದಿಜೀ ಅವರ ನವವರುಷಗಳ ಸಾಧನೆಯನ್ನು ಮನೆ ಮನೆಗಳಿಗೆ, ಮನ ಮನಗಳಿಗೆ ಮುಟ್ಟಿಸುವ ಕಾರ್ಯವನ್ನು ಶ್ರೀತುಳಸಿಗಿರೀಶ ಫೌಂಡೇಶನ್ ಮಾಡಲಿದೆ.ಬಸವರಾಜ ಬೈಚಬಾಳ, ರೋಹನ್ ಆಪ್ಟೆ, ಪ್ರೇಮ ಕೆ, ಗಿರಿಧರ ಎಚ್ ಮತ್ತಿತರರು ಉಪಸ್ಥಿತರಿದ್ದರು.
ವರ್ಗಾವಣೆ ದಂಧೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ವಿದ್ಯುತ್ ಕಡಿತ ಹಾಗೂ ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ ವಿಜಯಪುರ: ರಾಜ್ಯದಲ್ಲಿ ವರ್ಗಾವಣೆ ದಂಧೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ವಿದ್ಯುತ್ ಕಡಿತ ಹಾಗೂ ಜನವಿರೋಧಿ ನೀತಿ ವಿರೋಧಿಸಿ ಭಾರತೀಯ ಜನತಾ ಪಕ್ಷದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡಡ ರ್ಯಾಲಿ ವಿವಿಧ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ಈ ವೇಳೆ ಯಾವೊಬ್ಬ ಅಧಿಕಾರಿಯೂ ಸ್ಥಳದಲ್ಲಿ ಇರದ ಕಾರಣ ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಕೆಲ ಹೊತ್ತು ಧರಣಿ ನಡೆಸಿ ಅಸಮಾಧಾನ ಹೊರಹಾಕಿದರು.ಮನವಿ ಸ್ವೀಕರಿಸಲು ಓರ್ವ ಅಧಿಕಾರಿಯೂ ಇಲ್ಲ ಎಂದಾದರೆ ಹೇಗೆ? ಇದು ಯಾವ ವ್ಯವಸ್ಥೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮುಂದುವರೆದು ಮಾತನಾಡಿದ ಅವರು, ಬೆಂಗಳೂರಿನ ಅಂಬಿಕಾಪತಿ ಅವರ ಮನೆಯಲ್ಲಿ ಕೋಟಿ ಕೋಟಿ ರೂ. ಹಣ ಪತ್ತೆಯಾಗಿದೆ, ಇದು ಕೇವಲ ಒಂದು ಉದಾಹರಣೆ ಅಷ್ಟೇ, ಗುತ್ತಿಗೆದಾರರಿಗೆ…
ಇಂಡಿ: ರಾಜ್ಯ ಸರಕಾರ ಜನ ವಿರೋಧಿ ಅನುಸರಿಸುತ್ತಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.ಬಸವೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಾಸುಗೌಡ ಬಿರಾದಾರ, ತಾಲೂಕಿನ ರೈತರು ಬೆಳೆಗೆ ನೀರು ಪೂರೈಸಲು ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ರಾಜ್ಯದಲ್ಲಿ ಜನರ ಹಣವನ್ನು ಲೂಟಿ ಮಾಡಿ ಪಂಚರಾಜ್ಯಗಳ ಚುನಾವಣೆಗೆ ಅದನ್ನು ಕಳುಹಿಸುತ್ತಿದ್ದಾರೆ. ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಎಟಿಎಂ ಆಗಿದೆ. ರಸ್ತೆಗಳು ಹಾಳಾಗಿವೆ ಎಂದರು.ಇಂಡಿ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಮಾತನಾಡಿ, ಐಟಿ ದಾಳಿ ಮಾಡಿದಾಗ ಗುತ್ತಿಗೆದಾರರ ಮನೆಯಲ್ಲಿ ೪೦ ಕೋಟಿ ಹಣ ಸಿಕ್ಕಿದೆ. ಕಾಂಗ್ರೆಸಕ್ಕೂ ಇದಕ್ಕೂ ಸಂಬಂಧವಿದೆ ಎಂದರು.ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಇವರ ಪ್ರತಿಕೃತಿ ದಹನ ಮಾಡಿದರು.ಮುಖಂಡರಾದ ರಾಜ್ಯ ಒಬಿಸಿ ಮೋರ್ಚಾದ ಶೀಲವಂತ ಉಮರಾಣಿ, ಪುರಸಭೆ ಸದಸ್ಯರಾದ ಅನೀಲಗೌಡ ಬಿರಾದಾರ, ದೇವೆಂದ್ರ ಕುಂಬಾರ, ಸಿದ್ದಲಿಂಗ ಹಂಜಗಿ, ಬಾಳು ಮುಳಜಿ, ಅನೀಲ ಜಮಾದಾರ, ಸೋಮು ನಿಂಬರಗಿಮಠ,…
ವಿಜಯಪುರ: ನಗರದ ಸಮೀಪದ ಕವಲಗಿಯಲ್ಲಿರುವ ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆಯ ಶಿಕ್ಷಕಿಯರು ನವರಾತ್ರಿಯ ಎರಡನೆಯ ದಿನದಂದು ಬಿಳಿ ಸೀರೆಯಲ್ಲಿ ಮಿಂಚಿದ್ದು ಹೀಗೆ..
ಪತ್ರಕರ್ತರ 37 ನೇ ರಾಜ್ಯ ಸಮ್ಮೇಳನದ ಸ್ಮರಣಸಂಚಿಕೆ ಬಿಡುಗಡೆ ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕಳೆದ ಫೆ. 4 ಮತ್ತು 5 ರಂದು ನಡೆದ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಸವಿ ನೆನಪಿಗಾಗಿ ಹೊರತಂದ ಕರ್ನಾಟಕ ಪತ್ರಕರ್ತ ಸ್ಮರಣ ಸಂಚಿಕೆಯ ಬಿಡುಗಡೆ ಸೋಮವಾರ ಇಲ್ಲಿನ ಜಿಪಂ ಸಭಾಂಗಣಲ್ಲಿ ನಡೆಯಿತು.ರಾಜ್ಯದ ಬೃಹತ್ ಕೈಗಾರಿಕೆ, ಮೂಲಭೂತ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಟಿ. ಚೂರಿ ಮಾತನಾಡಿ, 37ನೇ ಪತ್ರಕರ್ತರ ರಾಜ್ಯ ಸಮ್ಮೇಳನ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನತೆಯ ಸಹಕಾರದಿಂದ ಅತ್ಯಂತ ಯಶಸ್ವಿಯಾಗಿ ಜರುಗಿದ್ದು, ಸಮ್ಮೇಳನದ ಸವಿನೆನಪಿಗಾಗಿ ಸಂಘವು ಹೊರತಂದಿರುವ ‘ಪತ್ರಕರ್ತ’ ಸ್ಮರಣಸಂಚಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಇಂದು ಬಿಡುಗಡೆಗೊಳಿಸಿರುವುದು ಅತೀವ ಸಂತಸ ತಂದಿದೆ ಎಂದರು.ಸಮ್ಮೇಳನದ ಯಶಸ್ವಿಗೆ ಸಹಕರಿಸಿದ ಜಿಲ್ಲಾಡಳಿತಕ್ಕೆ, ಎಲ್ಲ ಜನಪ್ರತಿನಿಧಿಗಳಿಗೆ, ಜಿಲ್ಲೆಯ…
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸಿಂದಗಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಿಂದಗಿ: ಸಕಲ ಜೀವಾತ್ಮಗಳಿಗೆ ಲೇಸನ್ನೇ ಬಯಸಿದ ಹನ್ನೆರಡನೆಯ ಶತಮಾನದ ಶರಣರ ವಚನಗಳ ಸಾರದಲ್ಲಿ ಕಾಯಕ ನಿಷ್ಠೆ, ಸ್ವಾವಲಂಬಿತನ, ಸ್ವಾತಂತ್ರ್ಯ ಮತ್ತು ಹಕ್ಕುಗಳ ಸಮ ಸಮಾಜದ ಆಶಯಗಳ ಮದ್ದು ಅಡಗಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಶರಣಪ್ಪ ಕಂಚ್ಯಾಣಿ ಹೇಳಿದರು.ಸೋಮವಾರ ನಗರದಲ್ಲಿನ ಸಾರಂಗಮಠ-ಗಚ್ಚಿನಮಠದ ಆವರಣದಲ್ಲಿ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸಿಂದಗಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಅವರು, ವಚನಗಳಲ್ಲಿನ ತತ್ವಾದರ್ಶ, ಸಂದೇಶ, ಆಚಾರ ವಿಚಾರಗಳಿಗೆ ಜನ-ಮನ ಕಿವಿಗೊಡುವಂತೆ, ಆಲಿಸಿ, ಪಾಲಿಸುವುದರ ಮೂಲಕ ಅದನ್ನು ಭವಿಷ್ಯದ ಮಕ್ಕಳಿಗೆ ಪಸರಿಸುವ ಉದ್ದೇಶವನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹೊಂದಿದೆ. ಈ ದಿಸೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಬಸವಣ್ಣನವರ ಚಿಂತನೆಗೆ ಮಾರು ಹೋಗಿ, ಎಲ್ಲೆಡೆ ಅವರ ವಚನಗಳನ್ನು ಪಠಿಸುತ್ತ, ಅವರ…
ವಿಜಯಪುರ: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಅ.20 ರ ಶುಕ್ರವಾರ ಬೆ.11.30ಗಂ. ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.ಮುಖ್ಯ ಅತಿಥಿಯಾಗಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಬಿ.ಎಲ್.ಡಿ.ಇ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎಂ.ಬಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಪತಿ ಡಾ.ಆರ್.ಎಸ್.ಮುಧೋಳ ವರದಿ ವಾಚನ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಯನ್ನು ಪರಿಗಣಿಸಿ, ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುವುದು.ಈ ಘಟಿಕೋತ್ಸವದಲ್ಲಿ ಒಟ್ಟು 349 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತಿದ್ದು, ಇವುಗಳಲ್ಲಿ 9 ಡಾಕ್ಟರೇಟ್, 1 ಎಂ.ಸಿ.ಎಚ್. ಯೂರಾಲಜಿ ವಿಭಾಗ, 113 ವೈದ್ಯಕೀಯ ಸ್ನಾತಕೋತ್ತರ ಪದವಿ, 4 ಫೆಲೋಶಿಪ್, 205 ಎಂ.ಬಿ.ಬಿ.ಎಸ್., 13 ಬಿ.ಎಸ್.ಸಿ. (ಎಂ.ಐ.ಟಿ.), 3 ಎಂ.ಎಸ್.ಸಿ. ಹಾಗೂ 1 ಎಂ.ಎಚ್.ಎ. ಅಲೈಡ್ ಹೆಲ್ತ್ ಸೈನ್ಸ್ನ ಸ್ನಾತಕೋತ್ತರ ಪದವಿಗಳು ಒಳಗೊಂಡಿವೆ. ಹಾಗೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 17 ಚಿನ್ನದ ಪದಕಗಳು…
