Author: editor.udayarashmi@gmail.com

ಸಿಂದಗಿ: ಪುಸ್ತಕದ ವಿದ್ಯೆ ಮಸ್ತಕಕ್ಕೆ ಬಂದರೆ ಅವನು ವಿದ್ಯಾವಂತ. ಆದರೆ ಮಸ್ತಕಕ್ಕೆ ಬಂದ ವಿದ್ಯೆ ಸಿದ್ಧಿ ಮಾಡಿಕೊಂಡರೆ ಮಾತ್ರ ಅವನು ಜ್ಞಾನಿ ಎಂದು ರಾಮನರಸಿಂಹ ಸಂಸ್ಕೃತ ವಿದ್ಯಾಲಯದ ಕುಲಪತಿ ನರಹರಿ ಆಚಾರ್ಯ ಮುತ್ತಗಿ ಹೇಳಿದರು.ಪಟ್ಟಣದ ಆರ್.ಡಿ. ಪಾಟೀಲ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಅತಿಥಿ ಸ್ಥಾನವನ್ನು ವಹಿಸಿ ಮಾತನಾಡಿ ಅವರು, ವಾರ್ಷಿಕ ಸ್ನೇಹ ಸಮ್ಮೇಳನ ಎಂಬುದು ಕೇವಲ ಕುಣಿತಕ್ಕೆ ಚೀರಾಟಕ್ಕೆ ವೇದಿಕೆಯಾಗದೆ ಸಮ್ಮಿಲನಕ್ಕೆ ವೇದಿಕೆಯಾಗಬೇಕು. ನಮ್ಮಲ್ಲಿ ಕೆಲವು ವಿಷಯಗಳು ಮೀಲನವಾಗಿ ಬದಲಾವಣೆಯಾದಾಗ ಮಾತ್ರ ವಾರ್ಷಿಕ ಸ್ನೇಹ ಸಮ್ಮೇಳನವು ಸಾರ್ಥಕವಾಗುತ್ತದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಅನೇಕ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕು. ಇಂತಹ ಅನೇಕ ವಿಷಯಗಳು ವಿಲೀನವಾಗಬೇಕು. ಆದರೆ ಇಂದಿನ ಸಮಾಜದಲ್ಲಿ ನಾವು ಕೇವಲ ವಿದ್ಯಾವಂತರಾಗೋದಕ್ಕೆ ಮಾತ್ರ ಬದುಕುತ್ತಿದ್ದೇವೆ ವಿನಃ ಜ್ಞಾನದ ಕಡೆಗೆ ಹೋಗುತ್ತಿಲ್ಲ. ಆದಕಾರಣ ನಾವು ಜ್ಞಾನಿಗಳಾಗಬೇಕೇ ಹೊರತು ಕೇವಲ ವಿದ್ಯಾವಂತರಾಗಬಾರದು. ಆ ನಿಟ್ಟಿನಲ್ಲಿ ನಮ್ಮ ಹೆಜ್ಜೆ ಸಾಗಬೇಕು ಎಂದರುಈ ವೇಳೆ ಕಾರ್ಯಕ್ರಮದ ಸಾನಿಧ್ಯ ವಹಿಸಿದ ಸಾರಂಗಮಠದ…

Read More

ದ.ರಾ.ಬೇಂದ್ರೆ ಹಾಗೂ ಡಾ.ಚಂದ್ರಶೇಖರ ಕಂಬಾರ ಜನ್ಮದಿನಾಚರಣೆ | ಬೇಂದ್ರೆ ಹಾಗೂ ಕಂಬಾರರ ಕಾವ್ಯಗಳ ಅನುಸಂಧಾನ ಸಿಂದಗಿ: ಕಂಬಾರರ ಸಾಹಿತ್ಯ ಜನಪದದ ಮೂಲದಿಂದ ಹುಟ್ಟಿದ್ದು ಅವರ ಇಡಿ ಸಾಹಿತ್ಯ ಜನಪದೀಯ ತಳಹದಿಯ ಮೇಲೆ ನಿಂತಿದೆ ಎಂದು ಶ್ರೀ ಪದ್ಮರಾಜ ಮಹಿಳಾ ಪಪೂ ಕಾಲೇಜಿನ ಉಪನ್ಯಾಸಕಿ ಹೇಮಾ ಹಿರೇಮಠ ಹೇಳಿದರು.ಪಟ್ಟಣದ ಸಿಎಂ ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವರಕವಿ ದ.ರಾ.ಬೇಂದ್ರೆ ಹಾಗೂ ಡಾ.ಚಂದ್ರಶೇಖರ ಕಂಬಾರ ಅವರ ಜನ್ಮದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಬೇಂದ್ರೆ ಹಾಗೂ ಕಂಬಾರರ ಕಾವ್ಯಗಳ ಅನುಸಂಧಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಯುವ ಜನಾಂಗ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿದೆ. ಕಂಬಾರರ ಕಾವ್ಯಗಳ ಮೂಲಕ ಕನ್ನಡವನ್ನು ಕಟ್ಟುವ ಕಾರ್ಯವಾಗಬೇಕು ಎಂದು ಸಲಹೆ ನೀಡಿದರು.ಈ ವೇಳೆ ಡಾ.ನಾಗರಾಜ ಮುರುಗೋಡ ಮಾತನಾಡಿ, ದ.ರಾ.ಬೇಂದ್ರೆಯವರ ಬದುಕಿನ ಪಯಣ ಸಾಕಷ್ಟು ನೋವಿನಿಂದ ಕೂಡಿದ್ದು, ಅವರ ನೋವು ನಲಿವಿನ ಜೀವನವನ್ನು ತಾವೆಲ್ಲರೂ ಅವರ ಸಾಹಿತ್ಯದ ಮುಖಾಂತರ ತಿಳಿದುಕೊಳ್ಳಬಹುದು. ಬೇಂದ್ರೆ ಅವರ ಸರಳ ಬದುಕು…

Read More

ಬಸವನಬಾಗೇವಾಡಿ: ಪಟ್ಟಣದ ನೂತನ ಪುರಸಭೆಯ ಕಾರ್ಯಾಲಯದ ಸಭಾಂಗಣದಲ್ಲಿ ಫೆ. ೧ ರಂದು ಬೆಳಗ್ಗೆ ೧೧ ಗಂಟೆಗೆ ಫೆ.೧೦ ರಿಂದ ೧೪ ರವರೆಗೆ ಬಸವನಬಾಗೇವಾಡಿ ತಾಲೂಕಿನಲ್ಲಿ ಜರುಗಲಿರುವ ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧ ಚಿತ್ರ ಮೆರವಣಿಗೆಗೆ ಸಂಬಂಧಿಸಿದಂತೆ ತಯಾರಿ ಕುರಿತು ಚರ್ಚೆ ಮಾಡಲು ಪೂರ್ವಭಾವಿ ಸಭೆ ಕರೆಯಲಾಗಿದೆ. ಈ ಸಭೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಎಲ್ಲ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪ್ರಮುಖರು ಹಾಜರಾಗಿ ಸಲಹೆ-ಸೂಚನೆ ನೀಡಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಸವನಬಾಗೇವಾಡಿ: ಈ ಬಾರಿ ಒಣ ಮೆಣಸಿನಕಾಯಿ ಬೆಳೆದ ರೈತರ ಪಾಲಿಗೆ ಒಣ ಮೆಣಸಿನಕಾಯಿ ಅತಿ ಖಾರವಾಗಿ ಪರಿಣಮಿಸಿದೆ. ಮಳೆ ಮತ್ತು ನೀರಿನ ಕೊರತೆ ರೋಗ ಭಾದೆಯಿಂದ ಇಳುವರಿಯು ಈ ವರ್ಷ ಅತಿ ಕಡಿಮೆ ಬಂದಿದೆ. ಈ ವರ್ಷ ಏಕಾ ಏಕಿ ಮೆಣಸಿನಕಾಯಿ ಬೆಲೆ ಪಾತಾಳಕ್ಕೆ ಹೋಗಿದ್ದರಿಂದ ರೈತರು ಸಾಲ ಸೂಲ ಮಾಡಿ ಬಿತ್ತನೆ ಮಾಡಿ ತೀವ್ರ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಮಧ್ಯಸ್ತಿಕೆ ವಹಿಸಿ ಬೆಂಬಲ ಬೆಲೆ ಘೋಷಿಸಿ ರೈತರ ಹಿತ ಕಾಯಬೇಕು ಎಂದು ತಾಲೂಕಿನ ಉಕ್ಕಲಿ ಗ್ರಾಮದ ರೈತ ರಾಹುಲ ಕಲಗೊಂಡ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.ಈ ಬಾರಿ ರೈತರು ಹೆಚ್ಚಾಗಿ ಮೆಣಸಿನಕಾಯಿ ಬೆಳೆಯನ್ನು ಬೆಳೆದಿದ್ದಾರೆ. ದಾಖಲೆ ಮಟ್ಟದ ಬೆಲೆ ಕುಸಿತ ಕಂಡಿದ್ದರಿಂದ ಹಲವಾರು ರೈತರು ಮೆಣಸಿನಕಾಯಿಯನ್ನು ಹೊಲದಲ್ಲಿ ಇಟ್ಟುಕೊಂಡು ಮುಂದಿನ ದಿನಗಳಲ್ಲಿ ಹೆಚ್ಚಿನ ಬೆಲೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಒಂದಡೇ ಬರಗಾಲ ಮತ್ತೊಂದು ಕಡೆ ಬೆಳೆಗಳ ಬೆಲೆ ಕುಸಿತವಾಗಿದೆ. ಸರ್ಕಾರ ಕೂಡಲೇ ರೈತರ ಸಮಸ್ಯೆಗೆ ಸ್ಪಂದಿಸಿ ಒಣ ಮೆಣಸಿನಕಾಯಿಗೆ ಬೆಂಬಲ ಬೆಲೆ ನಿಗದಿ…

Read More

ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದಲ್ಲಿ ಫೆ.೨ ರಿಂದ ೪ ರವರೆಗೆ ಜಗದ್ಗುರು ಲಿಂ.ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ೧೧ ಪುಣ್ಯಾರಾಧನೆ, ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ಪಟ್ಟಾಧಿಕಾರ ದಶಮಾನೋತ್ಸವ ಹಾಗೂ ಸಂಗನಬಸವ ಕಲ್ಯಾಣ ಮಂಟಪ ಲೋಕಾರ್ಪಣೆ, ನೂತನ ರಥೋತ್ಸವ ಲೋಕಾರ್ಪಣೆ, ಸಾಮೂಹಿಕ ವಿವಾಹ, ೨೦೦೮ ತಾಯಂದಿರಿಂದ ಕುಂಭೋತ್ಸವ, ೫೦೦೮ ತಾಯಂದಿರಿಗೆ ಉಡಿತುಂಬುವ ಕಾರ್ಯಕ್ರಮ, ೨೫ ಮಠಾಧೀಶರ ಮಂಟಪ ಪೂಜೆ, ಸಂಗನಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಮನಗೂಳಿ ಸಂಸ್ಥಾನ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಸಿದ್ದತೆ ಭರದಿಂದ ನಡೆದಿದೆ. ಈಗಾಗಲೇ ಕಾರ್ಯಕ್ರಮದಂಗವಾಗಿ ಜ.೧೭ ರಿಂದ ಕಲಬುರಗಿ ಶರಣಬಸವೇಶ್ವರ ಪುರಾಣ ಜರಗುತ್ತಿದೆ. ಕಾರ್ಯಕ್ರಮಕ್ಕೆ ವಿಶಾಲವಾದ ಶಾಮಿಯಾನ, ಆಗಮಿಸುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ನಾಡಿನ ಅನೇಕ ಪೂಜ್ಯರು, ಡಿಸಿಎಂ, ಅನೇಕ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಮುಖಂಡರು ಆಗಮಿಸಲಿದ್ದಾರೆ ಎಂದರು.ಫೆ.೨…

Read More

ವಿಜಯಪುರ: ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಕಳೆಯಬಾರದು. ಸಮಯ ಅಮೂಲ್ಯವಾದದ್ದು, ಯಾವ ವ್ಯಕ್ತಿಯಲ್ಲಿ ಸಂಸ್ಕೃತಿ, ಸಂಸ್ಕಾರ ಇರುತ್ತದೆಯೋ ಅಂತಹ ವ್ಯಕ್ತಿಗಳಲ್ಲಿ ವಿನಯತೆ ಇರುತ್ತದೆ ಎಂದು ಜ್ಞಾನಯೋಗಾಶ್ರಮದ ಶ್ರೀಗಳಾದ ಬಸವಲಿಂಗ ಶ್ರೀಗಳು ಹೇಳಿದರು.ಬಂಜಾರಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ‘ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೋಡುವ’ ಸಮಾರಂಭ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು. ಸಂಸ್ಕೃತಿ ಮತ್ತು ಸಂಸ್ಕಾರ ಹೊಂದಿರುವ ಶಿಕ್ಷಕ ಎಂದಿಗೂ ಅಪವ್ಯಯ ಆಗಲು ಸಾಧ್ಯ ಇಲ್ಲ. ನಿರಂತರ ಪರಿಶ್ರಮ ಶ್ರದ್ಧೆಯಿಂದ ಪ್ರಯತ್ನಪಟ್ಟಲ್ಲಿ ನಿಮ್ಮ ಗುರಿ ಸುಲಭವಾಗುತ್ತದೆ. ಶಿಕ್ಷಣವು ಮಾನವವೀಯತೆಯ ಮೌಲ್ಯಗಳನ್ನು ಬೆಳೆಸುತ್ತದೆ. ವ್ಯಕ್ತಿ ಹೆಚ್ಚು ಹೆಚ್ಚು ಶಿಕ್ಷಣ ಪಡೆದಂತೆ ಆತನ ಜ್ಞಾನವು ವೃದ್ಧಿಯಾಗಿ ಸಂಸ್ಕಾರ ಕಲಿಯುತ್ತಾನೆ ಎಂದು ಹೇಳಿದರು.ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಿಜಯಪುರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಕೆ.ಹೊಸಮನಿಯವರು ಮಾತನಾಡುತ್ತ. ಆತ್ಮವಿಶ್ವಾಸ, ಬದ್ಧತೆ, ದಕ್ಷತೆ, ಸ್ಥಿರತೆ ಈ ನಾಲ್ಕು ಅಂಶಗಳನ್ನು ಜೀವನದಲ್ಲಿ ಸಾಧಿಸಬೇಕು. ಇದಕ್ಕೆ ಪ್ರಮುಖವಾಗಿ ಏಕಾಗ್ರತೆ ಇರಬೇಕು. ವಿದ್ಯೆಯೊಂದಿಗೆ ವಿದ್ಯಾರ್ಥಿಗಳಿಗೆ…

Read More

ವಿಜಯಪುರ: ಧಾರವಾಡದ ಸಿಡಾಕ್, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ರಾಜ್ಯ ಕೌಶಲ್ಯಾಭಿವೃದ್ದಿ ನಿಗಮದ ವತಿಯಿಂದ ನಿರುದ್ಯೋಗ ಯುವಕ-ಯುವತಿಯರಿಗೆ ೧೦ ದಿನಗಳ ಉದ್ಯಮಶೀಲತಾಭಿವೃದ್ದಿ ತರಬೇತಿ ಕಾರ್ಯಕ್ರಮ ವಿಜಯಪುರದಲ್ಲಿ ಏರ್ಪಡಿಸಲಾಗಿದೆ.ಶಿಬಿರದಲ್ಲಿ ಉದ್ಯಮದ ಆಯ್ಕೆ ವಿಧಾನ, ಬ್ಯಾಂಕ್ ಮತ್ತು ಕೈಗಾರಿಕಾ ಇಲಾಖೆಯಿಂದ ದೊರೆಯುವ ಸಹಾಯ-ಸೌಲಭ್ಯ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಸುವ ವಿಧಾನ, ಜಿಎಸ್‌ಟಿ, ಪ್ಯಾಕೇಜಿಂಗ್ ಮತ್ತು ಬ್ರಾಂಡಿಂಗ್ ಸೇರಿದಂತೆ ಸಮಗ್ರ ಮಾಹಿತಿ ಒದಗಿಸಲಾಗುವುದು. ಆಸಕ್ತರು ಮೊ: ೮೮೮೪೧೮೪೪೯೩ ಸಂಖ್ಯೆಗೆ ಸಂಪರ್ಕಿಸಿ ದಿನಾಂಕ : ೦೭-೦೨-೨೦೨೪ರೊಳಗಾಗಿ ನೊಂದಾಯಿಸಿಕೊಳ್ಳುವಂತೆ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಫೆ.೧ ರಂದು ಮಧ್ಯಾಹ್ನ ೩ ರಿಂದ ೪ ಗಂಟೆಯವರೆಗೆ ಕಬ್ಬಿನಲ್ಲಿ ಗೊಣ್ಣೆ ಹುಳುವಿನ ನಿರ್ವಹನೆ ಮತ್ತು ಫೆ.೨ ರಂದು ಮಧ್ಯಾಹ್ನ ೩ ರಿಂದ ೪ ಗಂಟೆಯವರೆಗೆ ಸಮಗ್ರ ಕೃಷಿ ಪದ್ಧತಿ ವಿಷಯಗಳ ಕುರಿತು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತರಬೇತಿ ಆಯೋಜಿಸಲಾಗಿದೆ.ಆಸಕ್ತ ರೈತರು ಈ ಗೂಗಲ್ ಮೀಟ್ ಲಿಂಕ್ https://meet.google.com/xjy-juqo-mxy ಬಳಸಿ ತರಬೇತಿಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಶ್ರೀಮತಿ ಲಕ್ಷ್ಮೀ ಕಾಮಗೊಂಡ ಮೊ: ೮೨೭೭೯೩೦೬೧೯ ಸಂಖ್ಯೆಗೆ ಸಂಪರ್ಕಿಸುವಂತೆ ಉಪ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More

ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ-ಅರೆಅಲೆಮಾರಿ ಪ್ರವರ್ಗ-೧ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: ೧೫-೦೨-೨೦೨೪ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಜಾಥಾದ ಸ್ತಭ್ದಚಿತ್ರಕ್ಕೆ ಇಂಡಿ ಉಪವಿಭಾಗದ ಬಸನಾಳ ಗ್ರಾಮದಲ್ಲಿ ಅತ್ಯಂತ ವಿಜೃಂಭಣೆಯಿಂದ ಸ್ವಾಗತಿಸಲಾಯಿತು.ಸರ್ಕಾರದ ಆದೇಶದ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ “ಸಂವಿಧಾನ ಜಾಗೃತಿ ಜಾಥಾ” ರಾಜ್ಯಾಧ್ಯಾಂತ ಹಮ್ಮಿಕೊಂಡಿದ್ದು, ಅದರಂತೆ ವಿಜಯಪುರ ಜಿಲ್ಲೆಯಲ್ಲಿ ದಿನಾಂಕ: ೩೧.೦೧.೨೦೨೪ರಂದು ಇಂಡಿ ಉಪವಿಭಾಗದ ಬಸನಾಳ ಗ್ರಾಮ ಪಂಚಾಯತಿಯಲ್ಲಿ ಸಂವಿಧಾನ ಜಾಗೃತಿ ಕುರಿತು ಗ್ರಾಮಸ್ಥರಲ್ಲಿ ಅರಿವು ಮೂಡಿಸಲಾಯಿತು. ನಂತರ ತಾಂಬಾ, ಬೆನಕನಹಳ್ಳಿ, ಅಥರ್ಗಾಕ್ಕೆ ಸಂಜೆ ಬಂದು ಗ್ರಾಮ ಪಂಚಾಯತಿಗಳ ವತಿಯಿಂದ “ಸಂವಿಧಾನ ಜಾಗೃತಿ ಜಾಥಾ” ದ ಸ್ಥಬ್ಧ ಚಿತ್ರವನ್ನು ಅತ್ಯಂತ ವಿಜೃಂಭಣೆಯಿಂದ ಸ್ವಾಗತ ಮಾಡಿಕೊಂಡು, ಕಾರ್ಯಕ್ರಮ ನೇರವೇರಿಸಲಾಯಿತು.ಸದರಿ ಗ್ರಾಮ ಪಂಚಾಯತಿಗಳ ಆವರಣದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮಸ್ಥರು ಸೇರಿ ಅತ್ಯಂತ ವಿಜೃಂಬಣೆಯಿಂದ “ಸಂವಿಧಾನ ಜಾಗೃತಿ ಜಾಥಾ”ದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ ಜೆ ಇಂಡಿ, ಅಧೀಕ್ಷಕ ಚನ್ನಲಿಂಗಪ್ಪ ಚೌದರಿ, ಸೇರಿದಂತೆ ಗ್ರಾಮದ ಗಣ್ಯರು, ಮುಖಂಡರು ಭಾಗವಹಿಸಿದ್ದರು.ಹತ್ತಳ್ಳಿ ಗ್ರಾಮ…

Read More