Author: editor.udayarashmi@gmail.com

ಸಾರ್ವಜನಿಕರು-ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಾ.೯ರಂದು ನಗರದಲ್ಲಿ ನಡೆಯಲಿರುವ ಭೀಮ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಅಧಿಕಾರಿಗಳು ಕೈಜೋಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಭೀಮ ಗಾಯನ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ ಅವರ ಜೀವನ, ಸಾಧನೆ ಸಮಾನತೆಯ ಹೋರಾಟ, ಅಸ್ಪಶ್ಯತೆ ನಿವಾರಣೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ಅಂದು ನಡೆಯಲಿದೆ. ಸಮಾನತೆಯ ಸ್ವರ ಸಂಭ್ರಮ, ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಅಭಿವ್ಯಕ್ತಿಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ ಎಂದು ಎಡಿಸಿ ಡಾ. ಔದ್ರಾಮ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು.ಚಿಂತಾಮಣಿಯ ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘ ಈವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು. ಡಾ. ಬಿ.ಆರ್. ಅಂಬೇಡ್ಕರ ಅವರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಲೊಯಲಾ ಐ.ಟಿ.ಐ ಆವರದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳವನ್ನು ಮಾ.೯ ರಂದು ಬೆಳಗ್ಗೆ ೯ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಆಯೋಜಿಸಲಾಗಿದೆ.ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಹಾಗೂ ೨೦೨೬ನೇ ಸಾಲಿನಲ್ಲಿ ೨ನೇ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಮತ್ತು ಉದ್ದಿಮೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನಾಲ್ಕು ಪ್ರತಿಗಳ ರೆಸ್ಯೂಮ್, ಬಯೋಡೇಟಾ, ವಿದ್ಯಾರ್ಹತೆಯ ಎಲ್ಲಾ ದಾಖಲೆಗಳು ಹಾಗೂ ಪಾಸ್‌ಪೋರ್ಟ್ ಸೈಜ್ ಫೋಟೊಗಳೊಂದಿಗೆ ಮೇಳಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೯೮೪೪೭೯೩೭೦,೯೯೦೦೬೨೭೧೯೭ ಅನ್ನು ಸಂಪರ್ಕಿಸಬಹುದಾಗಿದೆ ಅಥವಾ ಹತ್ತಿರದ ಯಾವುದೇ ಸರ್ಕಾರಿ, ಅನುದಾನಿತ, ಖಾಸಗಿ ಐ.ಟಿ.ಐಗಳನ್ನು ಸಂಪರ್ಕಿಸಬಹುದು ಎಂದು ಸದಾಶಿವ ಹಿಟ್ನಳ್ಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ,ಬಬಲೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಜಿಲ್ಲೆಯಾದ್ಯಂತ ಮಾ.೨ ರಿಂದ ಮಾ. ೮ವರೆಗೆ ಹೋಳಿ ಹಬ್ಬ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಶೇಷ ದಂಡಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ ೦೧ ರಿಂದ ೧೮ರವರೆಗೆ ಮಹಾನಗರ ಪಾಲಿಕೆಯ ವಲಯ ಆಯುಕ್ತರಾದ ಹುಚ್ಚೇಶ ಚಿತ್ತರಗಿ ಅವರನ್ನು, ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ ೧೯ ರಿಂದ ೩೫ರವರೆಗೆ ಮಹಾನಗರ ಪಾಲಿಕೆಯ ವಲಯ ಆಯುಕ್ತರಾದ ಮೋಹನ ಜಾಧವ ಅವರನ್ನು ವಿಶೇಷ ದಂಡಾಧಿಕಾರಿಗಳಾಗಿ ನೇಮಕ ಮಾಡಿ ಆದೇಶಿಸಲಾಗಿದೆ.ಈ ಅವಧಿಯಲ್ಲಿ ಜಿಲ್ಲೆಯ ೧೩ ತಾಲೂಕಿನ ತಹಶೀಲ್ದಾರರು ಕೇಂದ್ರ ಸ್ಥಾನದಲ್ಲಿರುವಂತೆಯೂ ಹಾಗೂಉಪ ವಿಭಾಗೀಯ ದಂಡಾಧಿಕಾರಿಗಳು, ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದು, ಅವುಗಳ ಈಡೇರಿಕೆಗಾಗಿ ಮಾ.೧೧ ರಿಂದ ೧೫ರವರೆಗೆ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳುವ ನಿರ್ಧಾರವನ್ನು ಕೈಗೊಂಡಿದ್ದು, ಶಾಸಕ ಅಶೋಕ ಮನಗೂಳಿ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದು ನೌಕರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ತಿಳಿಸಿದರು.ಈ ಸಂದರ್ಭದಲ್ಲಿ ಆಲಮೇಲ ತಾಲೂಕ ಅಧ್ಯಕ್ಷ ರವಿ ಬಿರಾದಾರ, ದೇವರ ಹಿಪ್ಪರಗಿ ತಾಲೂಕ ನೌಕರರ ಸಂಘದ ಅಧ್ಯಕ್ಷ ಸಿ.ಬಿ.ಗಡಿಗಿ ಸಿಂದಗಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ದೇಶಮುಖ, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಮಹಾಂತೇಶ ಹಿರೇಮಠ ಪದಾಧಿಕಾರಿಗಳಾದ ಪಿ.ವಾಯ್.ಚೌಡಕಿ, ಸಿದ್ದು ಕಡಬಗಾವ, ಸಂತೋಷ್ ಕಾಳಶೆಟ್ಟಿ, ಭಾಷಾಸಾಬ್ ನದಾಫ್, ಪಂಡಿತ್ ವಾಷಿನ್, ಜಗದೀಶ ಡೋಣೂರ ರಾಜಶೇಖರ ನರಗೋದಿ, ಚಂದಕವಾಟೆ ವೈದ್ಯಾಧಿಕಾರಿ ಡಾ.ಗುಣಕಿ, ಡಾ.ವಿದ್ಯಾ ಹಿರೇಪೇಟ, ಸುರೇಶ ಬಬಲೇಶ್ವರ, ಅಶೋಕ ಕಡ್ಲಗೊಂಡ, ಲವ ಗಾಣಿಗೇರ, ಪ್ರಕಾಶ ನಾಯಕ ಸೇರಿದಂತೆ ಅನೇಕರು ಇದ್ದರು. “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ವೃಂದಗಳಲ್ಲಿ ಒಟ್ಟು…

Read More

ಮೊದಲ ಪುಟ ಸಿಂದಗಿ: ವಿಜ್ಞಾನ ಹಾಗೂ ಪರಿಸರ ವಸ್ತು ಪ್ರದರ್ಶನಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.ಸಿಂದಗಿ ನಗರದ ಶಾಂತವೀರ ನಗರದಲ್ಲಿರುವ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ಯ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸಾಧಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳ ಪ್ರತಿಭೆಗಳನ್ನು ಹೊರಹಾಕುವ ಮೆಟ್ಟಿಲಾಗುತ್ತದೆ. ಮಕ್ಕಳು ಸಂಸ್ಕಾರದ ಜೊತೆಗೆ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು. ಮಕ್ಕಳು ತಂದೆ-ತಾಯಿಗಳ ಕನಸನ್ನು ಈಡೇಸುವಲ್ಲಿ ಶ್ರಮವಹಿಸಬೇಕು ಎಂದರು.ಈ ವೇಳೆ ಶಿಕ್ಷಕ ಸಿದ್ಧಲಿಂಗ ಚೌಧರಿ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ವಿಷಯದ ತತ್ವಗಳನ್ನು ಅರ್ಥ ಮಾಡಿಕೊಳ್ಳಲು ವಿಜ್ಞಾನ ಮತ್ತು ವಸ್ತು ಪ್ರದರ್ಶನ ಮೇಳ ಕಾರ್ಯಕ್ರಮ ಸಹಕಾರಿಯಾಗುತ್ತದೆ. ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನಗಳಿಸುವ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ೨೦೦೦ ಹಾಗೂ ತಾಲೂಕಿಗೆ ಪ್ರಥಮ ಬರುವ ವಿದ್ಯಾರ್ಥಿಗೆ ರೂ.೧೦ಸಾವಿರ ಪ್ರೋತ್ಸಾಹಧನ ನೀಡುವುದಾಗಿ ವಾಗ್ದಾನ ಮಾಡಿದರು.ಇದೇ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನಿಂತ ನೀರಿನಲ್ಲಿ ಮುಳುಗಿ ಬಾಲನೊಬ್ಬ ಸಾವನ್ನಪ್ಪಿದ ಘಟನೆ ಪಟ್ಟಣದ ಕುಂಟೋಜಿ ರಸ್ತೆಯ ಬಸವ ಇಂಟರ್‌ನ್ಯಾಶನಲ್ ಶಾಲೆಯ ಬಳಿಯ ಜಮೀನೊಂದರಲ್ಲಿ ನಡೆದಿದೆ.ಮೃತ ಬಾಲಕನನ್ನು ಸುದೀಪ ಗಂಗನಹಳ್ಳಿ(೧೫) ಎಂದು ಗುರುತಿಸಲಾಗಿದೆ. ಕುರಿ ಕಾಯಲು ಬಂದಿದ್ದ ಈತ ನೀರಿಗೆ ಹೇಗೆ ಬಿದ್ದ ಎಂಬುದು ನಿಗೂಢವಾಗಿದ್ದು ತನಿಖೆಯಿಂದ ಬಹಿರಂಗವಾಗಬೇಕಿದೆ.ನೀರಿಗೆ ಬಿದ್ದಿರುವ ವಿಷಯ ಅಗ್ನಿಶಾಮಕದವರಿಗೆ ತಿಳಿಸಿದಾಗ ಘಟನಾ ಸ್ಥಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತ ಬಾಲಕನನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು.ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಮೋಹನ ನಾಯಿಕ್ ಹೇಳಿದರು.ಪಟ್ಟಣದ ಕಲ್ಮೇಶ್ವರ ಹಿರೇಮಠ ಆವರಣದಲ್ಲಿ ಸೂಗಮ್ಮ ಹಿರೇಮಠ ಎಂಬುವವರಿಗೆ ೧.೩೫ ಲಕ್ಷ ರೂ.ಗಳ ವೆಚ್ಚದ ವಾತ್ಸಲ್ಯ ಮನೆ ಹಸ್ತಾಂತರಿಸಿ ಮಾತನಾಡಿದರು. ಯೋಜನೆಯಡಿ ಈಗಾಗಲೇ ಸಿಂದಗಿ ಕಾರ್ಯಕ್ಷೇತ್ರದಲ್ಲಿ ೫ ಮನೆಗಳನ್ನು ನಿರ್ಮಿಸಿ ನೀಡಲಾಗಿದೆ. ಕೆರೆಗಳ ಹೂಳೆತ್ತುವ ಕಾರ್ಯ, ಶೈಕ್ಷಣಿಕ ಸಂಸ್ಥೆಗಳಿಗೆ ಶಿಕ್ಷಕರ ನೇಮಕಾತಿ ಹಾಗೂ ನಿರ್ಗತಿಕ ಮಹಿಳೆಯರಿಗೆ ಮಾಸಾಶನ ವಿತರಣೆಯಂತಹ ಹಲವಾರು ಜನೋಪಯೋಗಿ ಕಾರ್ಯ ಮಾಡಲು ಮುಂದಾಗಿದೆ ಇದರ ಸದುಪಯೋಗವನ್ನು ಪಡೆದವರು ಜೀವನ ರೂಪಿಸಿಕೊಂಡು ಸರಳವಾಗಿ ಬದುಕು ಸಾಗಿಸುತ್ತಿದ್ದಾರೆ ಎಂದರು.ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಹಾಗೂ ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಮಾತನಾಡಿ, ಯೋಜನೆಯ ಕಾರ್ಯವನ್ನು ಶ್ಲಾಘಿಸಿದರು.ತಾಲ್ಲೂಕು ಯೋಜನಾಧಿಕಾರಿ ಬಿನೋಯ್, ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಕೆ.ಕುದರಿ, ಕಾಸುಗೌಡ ಬಿರಾದಾರ, ಪಂಚಾಕ್ಷರಿ ಮಿಂಚನಾಳ, ಸೋಮಶೇಖರ ಹಿರೇಮಠ, ವಿಶ್ವನಾಥ ಸದಲಗೆ, ಸೋಮು ದೇವೂರ,…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಮಹಿಳೆಯರಿಗೆ ಸಿಕ್ಕ ಸಮಾನ ಅವಕಾಶ ಸರಿಯಾಗಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕರ ಪತ್ನಿ, ಸಿಂದಗಿ ಇನ್ನರವೀಲ್ ಕ್ಲಬ್ ಅದ್ಯಕ್ಷೆ ನಾಗರತ್ನ ಮನಗೂಳಿ ಹೇಳಿದರು.ಅವರು ಬಾನುವಾರ ಪಟ್ಟಣದ ನಿರ್ಮಲಾಯ ಸಮಾಜ ಸೇವಾ ಸಂಸ್ಥೆ ಹಾಗೂ ಬಾಂದವ್ಯ ಮಹಿಳಾ ಸ್ವಸಹಾಯ ಸಂಘಟನೆ ಒಕ್ಕೂಟದಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮನೆ ಗೆದ್ದು ಮಾರು ಗೆಲ್ಲು ಎನ್ನುವಂತೆ ಮಹಿಳೆಯರು ಮೊದಲು ಮನೆಯವರ ಮನಸು ಗೆದ್ದು ನಂತರ ಸಮಾಜ ನಾಡು ಗೆಲ್ಲುವಂತ ಸಾಧನೆ ಮಾಡಬೇಕು. ಬಾಲ್ಯ ವಿವಾಹ ತಡೆಗಟ್ಟಲು ಮಹಿಳೆಯರೆ ಮುಂದಾಗಬೇಕು ಎಂದು ಹೇಳಿದರು.ಕೆನರಾ ಬ್ಯಾಂಕಿನ ಕ್ಷೇತ್ರಾಧಿಕಾರಿ ಓಂಕಾರ ಭೋಸಲೆ ಮಾತನಾಡಿ, ಕೆಂದ್ರ ಸರ್ಕಾರ ಸ್ವ ಉದ್ಯೋಗ ಮಾಡುವ ಮಹಿಳಾ ಸಂಘಟನೆಗಳಿಗೆ ಅನೇಕ ಸೌಲಭ್ಯ ಕಲ್ಪಿಸಿದೆ. ಅದಕ್ಕೆ ಸರಿಯಾಗಿ ಉದ್ಯೋಗ ಮಾಡುವ ಸಂಘಗಳಿಗೆ ಕೆನರಾ ಬ್ಯಾಂಕಿನಿಂದ 1 ಲಕ್ಷದಿಂದ 5 ಕೋಟಿ ವರೆಗೂ ಸಾಲ ನೀಡಲಾಗುತ್ತಿದೆ. ಅದಕ್ಕೆ ವಿಮಾ ಸೌಲಭ್ಯವು ಇದ್ದು ಇದರ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಇನ್ನೊಬ್ಬರಿಗೆ ಪ್ರೇರಣೆಯಾಗಬೇಕು…

Read More

ವಿಜಯಪುರದಲ್ಲಿ ಬಿಜೆಪಿ ಬೂತ್ ಮಟ್ಟದ ಏಜೆಂಟರಿಗೆ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟಿಸಿದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿಜೆಪಿ ಪಕ್ಷದ ಬಗ್ಗೆ ಯಾವ ಕಾಂಗ್ರೆಸ್ ನಾಯಕರು ಅಂದು ಹಾಸ್ಯ ಮಾಡಿದ್ದರೋ ಅದೇ ನಾಯಕರು ಇಂದು ತಮ್ಮ ಮಕ್ಕಳನ್ನು ಬಿಜೆಪಿಗೆ ಕಳುಹಿಸುತ್ತಿದ್ದಾರೆ ಎಂದುರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.ವಿಜಯಪುರದ ಸಾಯಿ ವಿಹಾರ ಮಂಗಲ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ನಗರ ಮಂಡಳ ವತಿಯಿಂದ ಬೂತ್ ಮಟ್ಟದ ಏಜೆಂಟರಿಗೆ ಆಯೋಜಿಸಲಾಗಿದ್ದ ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಬಿಜೆಪಿ ಪರವಾದ ಅಲೆ ಇದೆ, ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಪಣಾ ಮನೋಭಾವ, ಅಭಿವೃದ್ಧಿಪರ ದೃಷ್ಟಿಕೋನದ ನಾಯಕತ್ವದಿಂದ ಬಿಜೆಪಿ ಬಲಿಷ್ಠವಾಗಿದೆ, ಕಾಂಗ್ರೆಸ್ ಇಷ್ಟಪಡುತ್ತಿದ್ದ ಅನೇಕರು ಸಹ ಇಂದು ಬಿಜೆಪಿಗೆ ಒಲವು ಬೆಳೆಸಿಕೊಳ್ಳುತ್ತಿದ್ದಾರೆ, ಅಂದು ಆರಂಭದ ದಿನದಲ್ಲಿ ಬೆರಳಣಿಕೆಯಷ್ಟು ಸೀಟುಗಳನ್ನು ಗೆಲ್ಲದ ಬಿಜೆಪಿಯನ್ನು ನೋಡಿ ನಗುತ್ತಿದ್ದ ಕಾಂಗ್ರೆಸ್ ನಾಯಕರೇ ಇಂದು ತಮ್ಮ ಮಕ್ಕಳನ್ನು ಬಿಜೆಪಿಗೆ ಕಳುಹಿಸುತ್ತಿದ್ದಾರೆ ಎಂದರು.ಕಾಂಗ್ರೆಸ್ ವೆಂಟಿಲೇಟರ್‌ನಲ್ಲಿರುವ ಹಡಗು, ಶೀಘ್ರವೇ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಪಟ್ಟಣದ ಶ್ರೀ ಎ. ಬಿ. ಜತ್ತಿ ಪ್ರೌಢ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳ ಶುಭ ಹಾರೈಕೆ ಸಮಾರಂಭ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಬಿ. ಬಿ. ಪಾಟೀಲ, ಆಡಳಿತಾಧಿಕಾರಿ ವಿ. ಎಸ್. ಬಗಲಿ, ಎಸ್.ಎ. ಬಿರಾದಾರ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಗಂಗಾಧರ, ಉಪಪ್ರಾಚಾರ್ಯ ಜೆ. ಎಂ. ಪಾಟೀಲ, ಡಿ. ಬಿ. ಪಾಟೀಲ, ಬಿ. ಸಿ. ನಾವಿ, ಕುಮಾರಿ ಸೋನುಬಾಯಿ ಕುಂಬಾರ ಇದ್ದರು.ವಿದ್ಯಾರ್ಥಿಗಳು ಸಿದ್ದಪಡಿಸಿದ ಕೈ ಬರಹ ಪತ್ರಿಕೆಯನ್ನು ಬಿಡುಗಡೆಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಶಾಲೆಯ ಎಲ್ಲ ಚಟುವಟಿಕೆಗಲ್ಲಿ ಭಾಗವಹಿಸಲು ಹಾಗೂ ಮಂಬರುವ ಎಸ್ ಎಸ್ ಎಲ್ ಸಿ ಪರೀಕ್ಷಗೆ ಶುಭಹಾರೈಸುವ ಮೂಲಕ ವಿದ್ಯಾರ್ಥಿಗಳಲ್ಲಿ ಚೈತನ್ಯ ತುಂಬಿದರು.

Read More