Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಒಂದೂವರೆ ಎಕರೆ ಚೆಂಡು ಹೂ ಬೆಳೆಗೆ ತಂಬಿಗೆಯಿಂದ ನೀರು ಪೂರೈಕೆ! *- ಜಿ ಎನ್ ಬೀರಗೊಂಡ (ಮುತ್ತು)*ಢವಳಗಿ: ರಾಜ್ಯದಲ್ಲಿ ಬರಗಾಲ ಆವರಿಕೊಂಡಿದ್ದರಿಂದ ರೈತರು ತೀವ್ರ ಕಂಗಾಲಾಗಿದ್ದು ಮುಂದೇನು? ಎಂಬ ಚಿಂತೆಯಲ್ಲಿ ವರುಣನ ಆಗಮನದ ನಿರೀಕ್ಷೆಯಲ್ಲಿ ಆಕಾಶದತ್ತ ಚಿತ್ತ ನೆಟ್ಟಿದ್ದಾರೆ.ರೈತರ ಜಮೀನಲ್ಲಿದ್ದ ಬೋರು, ಬಾವಿಗಳು ನೀರಿಲ್ಲದೆ ಬತ್ತಿ ಹೊಗಿವೆ. ಜನ- ಜಾನುವಾರಗಳಿಗೆ ಕುಡಿಯಲು ನೀರಿಲ್ಲದೆ ಕಂಗಾಲಾಗಿದ್ದಾರೆ.ರೈತನೋರ್ವ ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಚೆಂಡು ಹೂ ನಾಟಿ ಮಾಡಿದ್ದಾನೆ. ಆದರೆ ಸರಿಯಾದ ಮಳೆ ಮತ್ತು ವಿದ್ಯುತ್ ಅಭಾವದ ಕಾರಣ ಮೂರು ತಿಂಗಳಿಂದ ಉತ್ತಮವಾಗಿ ಬೆಳೆದ ಚೆಂಡು ಹೂವು ಬಾಡಬಾರದು ಎಂದು ಒಣಗುತ್ತಿರುವ ಚೆಂಡು ಹೂವಿನ ಗಿಡದ ಬುಡಕ್ಕೆ ಬಕೆಟ್ ನಿಂದ ತಂಬಿಗೆಯ ಮೂಲಕ ನೀರು ಹಾಕಿ ಚೆಂಡು ಹೂವಿನ ಉಳಿವಿಗೆ ನಿರಂತರ ಶ್ರಮಿಸುತ್ತಿದ್ದಾನೆ.ಹೌದು, ಮುದ್ದೇಬಿಹಾಳ ತಾಲ್ಲೂಕಿನ ರೂಡಗಿ ಗ್ರಾಮದ ರೈತ ಮುತ್ತು ರಾಮಣ್ಣ ಕೋರಿ ಅವರು, ಅಗಸಬಾಳ ಸರ್ವೇಯಲ್ಲಿರುವ ತಮ್ಮ ಜಮೀನಿನಲ್ಲಿ ಒಂದುವರಿ ಎಕರೆಯಲ್ಲಿ ಚೆಂಡು ಹೂವಿನ ಬೆಳೆ ಹಾಕಿದ್ದಾನೆ. ಆದರೆ ಮಳೆ ಇಲ್ಲದ…
ಪೊಲೀಸ್ ಮತ್ತು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಖಡಕ್ ಸೂಚನೆ ವಿಜಯಪುರ: ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆಯ ಟೇಲ್ ಎಂಡ್(ಕೊನೆಯ ಭಾಗದ) ವರೆಗೆ ನೀರು ಹರಿಸಲು ಅಡ್ಡಿಪಡಿಸುವವರ ವಿರುದ್ಧ ಕಟ್ಟುನಿಟ್ಟಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಪೊಲೀಸ್ ಮತ್ತು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇಂದು ಸೋಮವಾರ ಗೃಹ ಕಚೇರಿಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ಕರ್ನಾಟಕ ನೀರಾವರಿ ಇಲಾಖೆಯ ಅಧಿಕಾರಿಗಳು, ಯತ್ನಾಳ, ಜಾಲಗೇರಿ, ಇಟ್ಟಂಗಿಹಾಳ, ಲೋಹಗಾಂವ, ಸೋಮದೇವರಹಟ್ಟಿ ಮುಂತಾದ ಗ್ರಾಮಸ್ಥರೊಂದಿಗೆ ಸುದೀರ್ಘ ಸಭೆ ನಡೆಸಿದ ಸಚಿವರು ಈ ಸೂಚನೆ ನೀಡಿದ್ದಾರೆ.ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಪೂರ್ವ ಕಾಲುವೆಗೆ ನೀರು ಹರಿಸಿದರೂ ಕಾಲುವೆಯ ಕೊನೆಯ ಭಾಗ ಟೇಲ್ ಎಂಡ್ ವರೆಗೂ ನೀರು ಸಿಗದ ಕಾರಣ ಯತ್ನಾಳ ಮತ್ತು ಇಟ್ಟಂಗಿಹಾಳ ಮುಂತಾದ ಗ್ರಾಮಗಳಿಗೆ ನೀರು ಬರುತ್ತಿಲ್ಲ.…
ಇಂಡಿ: ನಗರದ ವಿಜಯಪುರ ರಸ್ತೆಯಲ್ಲಿರುವ ಭಾರತ ಗ್ಯಾಸ್ ಅಡುಗೆ ಅನಿಲ ಘಟಕವನ್ನು ನಗರದಿಂದ ಹೊರಗೆ ಸ್ಥಳಾಂತರ ಮಾಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ಕಂದಾಯ ಉಪವಿಭಾಗ ಕಛೇರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಸೋಮವಾರ ಪಟ್ಟಣದ ತಾಲೂಕು ಆಡಳಿತ ಸೌಧದ ಉಪವಿಭಾಗ ಅಧಿಕಾರಿಗಳ ಕಾರ್ಯಾಲಯಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ತೆರಳಿ, ನಗರದಲ್ಲಿ ಇರುವ ಭಾರತ ಗ್ಯಾಸ್ ಘಟಕ, ನಗರದಾಚೆ ಸ್ಥಳಾಂತರ ಮಾಡಬೇಕು ಎಂದು ಮನವಿ ಸಲ್ಲಿಸಿದರು.ಅಲ್ಲಿ ಸಂಬಂಧಿಸಿದ ಭಾರತ ಗ್ಯಾಸ್ ಏಜೆನ್ಸಿ ಮತ್ತು ಕಾರ್ಮಿಕರು ಕ್ರಮಬದ್ಧವಾಗಿ, ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಸರ್ಕಾರದ ನಿಯಮ ಗಾಳಿಗೆ ತೂರಿ ಬೇಕಾಬಿಟ್ಟಿ ಬೇಜವಾಬ್ದಾರಿತನದಿಂದ, ಕಾರ್ಯನಿರ್ವಹಿಸುತ್ತಿದ್ದು, ಸುತ್ತಮುತ್ತಲಿನ ಜನರು ಭಯದಲ್ಲಿ, ಜೀವ ಕೈಯಲ್ಲಿ ಹಿಡಿದು ಜೀವನ ಸಾಗಿಸುತ್ತಿದ್ದಾರೆ. ಈಗಾಗಲೇ ಪುರಸಭೆ ಮುಖ್ಯ ಅಧಿಕಾರಿಗಳಿಗೆ ಈ ಬಗ್ಗೆ ದೂರು ಸಲ್ಲಿಸಲಾಗಿದ್ದು, ಕ್ರಮ ವಹಸಿದೇ ಮೌನವಾಗಿದ್ದು, ಜನಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದಿರುವುದು ಮೇಲ್ನೊಟಕ್ಕೆ ಕಂಡು ಬಂದಿರುತ್ತದೆ. ನಗರದ ಜನರ ಹಿತ ದೃಷ್ಟಿಯಿಂದ ಭಾರತ ಗ್ಯಾಸ್…
ಇಂಡಿ: ಶಕ್ತಿದೇವತೆ ಆರಾಧನೆಯ ನವರಾತ್ರಿ ಉತ್ಸವಕ್ಕೆ ಪಟ್ಟಣ ಸೇರಿದಂತೆ ತಾಲೂಕಿನಾದಂತ ನವರಾತ್ರಿಯ ಸಂಭ್ರಮ ಭಾನುವಾರ ಆರಂಭಗೊಂಡಿತು.ಅಂಬಾಭವಾನಿ ದೇವಸ್ಥಾನದಲ್ಲಿ ಒಂಬತ್ತು ದಿನಗಳ ವಿಶೇಷ ಪೂಜೆ, ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅದ್ದೂರಿಯ ಸಿದ್ಧತೆ ಹಮ್ಮಿಕೊಳ್ಳಲಾಯಿತು.ಶ್ರೀ ಭುವನೇಶ್ವರಿ ಯುವಕ ಮಂಡಳಿ ಕುಂಬಾರ ಓಣಿ, ಶ್ರೀ ಭುವನೇಶ್ವರಿ ಯುವಕ ಮಂಡಳಿ ಹೂಗಾರ ಓಣಿ, ದುರ್ಗಾ ಪರಮೇಶ್ವರಿ ಮಿತ್ರ ಮಂಡಳಿ ಭೀರಪ್ಪ ನಗರ, ಶ್ರೀ ಅಂಬಾಭವಾನಿ ಯುವಕ ಮಂಡಳಿ ಚಾವಡಿ ಓಣಿ ಇವರಿಂದ ನಗರದ ಪ್ರಮುಖ ಬೀದಿಗಳಲ್ಲಿ ಅಲಂಕೃತ ವಾಹನದಲ್ಲಿ ದೇವಿಯ ಭವ್ಯ ಮೆರವಣೆಗೆ ನಡೆಯಿತು.ಅದಲ್ಲದೆ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿದ ಗೋಪುರದ ಕಳಸಾಹರೋಹಣ ಕಾರ್ಯಕ್ರಮ ನಡೆಯಿತು.ಈ ವೇಳೆ ದೇವಸ್ಥಾನ ಸಮಿತಿಯ ಅಧ್ಯಕ್ಷ ಅರುಣ ಕೋಳೆಕರ, ನಾಗನಾಥ ಹಂಚಾಟೆ, ಬಾಪು ಮಹೀಂದ್ರಕರ, ಬಾಳು ಕಠಾರೆ, ಗಣೇಶ ಮಹೀಂದ್ರಕರ, ರಮೇಶ ಸುಲಾಖೆ, ಮನೋಜ ಕೋಳೆಕರ, ವಿಜಯ ಪತಂಗೆ, ಸುಭಾಸ ಬಳಮಕರ, ಬಾಬುರಾವ ಸುಲಾಖೆ ಸೇರಿದಂತೆ ಸುನೀಲ ಸುಲಾಖೆ, ಉಮೇಶ ಮಹಾವೀರ ಕೋಳೆಕರ, ಅಮರ ಕೋಳೆಕರ, ಶೀತಲ ಅಂಬರಕರ, ಉಮೇಶ…
ಕಲಕೇರಿ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಪಾಪದ ಹೊರೆ ಕಡಿಮೆಯಾಗಿ ಪುಣ್ಯದ ಫಲ ಪ್ರಾಪ್ತಿಯಾಗುತ್ತದೆ. ಅಲ್ಲದೇ ಮಠಮಾನ್ಯಗಳಲ್ಲಿ ನಡೆಯುವ ಪುರಾಣ ಪುಣ್ಯಕಥೆಗಳನ್ನು ಆಲಿಸುವುದರಿಂದ ಮನುಷ್ಯನ ಆರೋಗ್ಯ ಮತ್ತು ಆಯಸ್ಸು ಹೆಚ್ಚುತ್ತದೆ ಎಂದು ಮಾಗಣಗೇರಿಯ ಡಾ.ವಿಶ್ವಾರಾಧ್ಯ ಶಿವಾಚಾರ್ಯರು ಹೇಳಿದರು.ಕಲಕೇರಿ ಗ್ರಾಮದ ಭವಾನಿ ದೇವಸ್ಥಾನದಲ್ಲಿ ಶರನ್ ನವರಾತ್ರಿಯ ದಸರೆಯ ಪ್ರಯುಕ್ತ ರವಿವಾರ ಸಂಜೆ ಹಮ್ಮಿಕೊಂಡ ೩೦ನೇ ವರ್ಷದ ಪರಮೇಶ್ವರಿ ದೇವಿಯ ಪುರಾಣ ಪ್ರಾರಂಭೋತ್ಸವ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಶಿಷ್ಟರ ರಕ್ಷಣೆ ಮತ್ತು ದುಷ್ಠರ ದಮನ ದೇವಿ ಪುರಾಣದ ಮೂಲ ಉದ್ದೇಶವಾಗಿದೆ. ಆಧುನಿಕ ಜೀವನದ ಜಂಜಾಟಗಳಿಂದ ಹೊರ ಬರಲು ಮನಸ್ಸಿನ ಸಂತೃಪ್ತಿಗಾಗಿ ಮಾನಸಿಕ ನೆಮ್ಮದಿ ಹೊಂದಲು ಪುರಾಣ ಪ್ರವಚನ ಆಲಿಸುವುದು ಅತ್ಯವಶ್ಯವಾಗಿದೆ ಎಂದು ಅವರು ಹೇಳಿದರು.ಕಲಕೇರಿಯ ಗುರುಮರುಳಾರಾಧ್ಯರ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ಮಾತನಾಡಿದರು. ಹಿರೂರಿನ ಜಯಸಿದ್ದೇಶ್ವರ ಸ್ವಾಮೀಜಿ ಪುರಾಣವನ್ನು ನಡೆಸಿಕೊಟ್ಟರು. ಕಲಕೇರಿ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ಆಶಿರ್ವಚನ ನೀಡಿದರು. ಗದ್ದುಗೆಮಠದ ಗುರುಮಡಿವಾಳೇಶ್ವರ ಶಿವಾಚಾರ್ಯರು, ಜಾಲಹಳ್ಳಿಮಠದ ಡಾ.ವ್ಹಿ ಕೆ ಜಾಲಹಳ್ಳಿಮಠ, ಕುಮಾರಸ್ವಾಮಿ ಜಾಲಹಳ್ಳಿಮಠ ಅಧ್ಯಕ್ಷತೆಯನ್ನು ವಹಿಸಿದ್ದರು,…
ಚಡಚಣ: ಸಮೀಪದ ನಿವರಗಿ ಗ್ರಾಮದ ಶ್ರೀ ಸಂಗಮೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ಸಾಕ್ಷಿ ರಾಜೇಂದ್ರ ತೇಲಿ ಇವರು ಜಿಲ್ಲಾ ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ತ್ರಿವಿಧ ಜಿಗಿತ ಮತ್ತು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.ಈ ಸಾಧನೆಗೆ ಶಾಲೆಯ ಮುಖ್ಯ ಗುರು ರವಿಕುಮಾರ ನಾಯಕ, ದೈಹಿಕ ಶಿಕ್ಷಕ ಟಿ.ಐ.ಕುಂಬಾರ, ಭೋಧಕ ಮತ್ತು ಭೋಧಕೇತರ ಸಿಬ್ಬಂದಿ ವರ್ಗ, ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ಬಸವನ ಬಾಗೇವಾಡಿ: ಪಟ್ಟಣದ ಶಿವಾಜಿ ಗಲ್ಲಿಯಲ್ಲಿರುವ ಅಂಬಾಭವಾನಿ ದೇವಸ್ಥಾನದಲ್ಲಿ ಭಾನುವಾರ ನವರಾತ್ರಿ ಉತ್ಸವದಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗುವ ಮೂಲಕ ನವರಾತ್ರಿ ಉತ್ಸವಕ್ಕೆ ಸಂಭ್ರಮದ ಚಾಲನೆ ದೊರೆಯಿತು.ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ ನೆರವೇರಿಸಲಾಯಿತು.ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಪುರಸಭೆ ಸದಸ್ಯರಾದ ನೀಲಪ್ಪ ನಾಯಕ, ರವಿ ಪಟ್ಟಣಶೆಟ್ಟಿ, ಅಶೋಕ ಗುಳೇದ, ಪಿಕೆಪಿಎಸ್ ಬ್ಯಾಂಕ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ, ಪುರಸಭೆ ಮಾಜಿ ಸದಸ್ಯ ಅಂಬೋಜಿ ಪವಾರ ಅವರು ಉತ್ಸವದ ಮೆರವಣಿಗೆಗೆ ಚಾಲನೆ ನೀಡಿದರು.ದೇವಸ್ಥಾನ ಅರ್ಚಕ ಚಿದಾನಂದ ಹಿರೇಮಠ ಇತರರು ಇದ್ದರು.ನಂತರ ದೇವಸ್ಥಾನದಿಂದ ಡೊಳ್ಳಿನ ಮೇಳ, ಸುಮಂಗಲೆಯರ ಆರತಿಯೊಂದಿಗೆ ಅಂಬಾಭವಾನಿ ದೇವಿಯ ಉತ್ಸವ ಮೂರ್ತಿ ಹಾಗೂ ಪ್ರತಿಷ್ಠಾಪನೆ ಮಾಡುವ ದೇವಿಯ ಮೂರ್ತಿ, ಶಿವಾಜಿ, ಬಸವ ಮೂರ್ತಿಗಳ ಮೆರವಣಿಗೆಯೊಂದಿಗೆ ಅಂಬಾಭವಾನಿಯ ಪಲ್ಲಕ್ಕಿಯು ಬಸವೇಶ್ವರ ದೇವಸ್ಥಾನದ ಬಸವ ತೀರ್ಥ ಬಾವಿಗೆ ತೆರಳಿತು. ಪಲ್ಲಕ್ಕಿ ಉತ್ಸವದಲ್ಲಿ ದೇವಸ್ಥಾನ ಕಮೀಟಿ ಅಧ್ಯಕ್ಷ ಯಮನೂರಿ ಬಿದರಕುಂದಿ, ಬಸವರಾಜ…
ಮೋರಟಗಿ: ಚುನಾವಣೆ ಪೂರ್ವದಲ್ಲಿ ಗ್ರಾಮೀಣ ಭಾಗದ ಜನತೆಗೆ ಕೊಟ್ಟ ಭರವಸೆಗಳನ್ನು ಹಂತ ಹಂತವಾಗಿ ಇಡೇರಿಸುವುರ ಜೊತೆಗೆ ಸರಕಾರದ ಸೌಲಭ್ಯಗಳನ್ನು ತಮ್ಮ ಮನರ ಬಾಗಿಲಿಗೆ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಸಾರ್ವಜನಿಕರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ್ ಮನಗೂಳಿ ಹೇಳಿದರು.ಸಮೀಪದ ಹಂಚಿನಾಳ ಗ್ರಾಮದಲ್ಲಿ ೨೦೨೨-೨೩ನೇ ಸಾಲಿನ ಜಲಜೀವನ್ ಮಷೀನ್ ಯೋಜನೆಯಡಿಯಲ್ಲಿ ಅಂದಾಜು ಮೊತ್ತ ೭೧.೨೯ಲಕ್ಷರೂ ನಲ್ಲಿ ಸಂಪರ್ಕ ಯೋಜನೆ ಹಾಗೂ ೨೦೨೯-೨೦ನೇ ಸಾಲಿನ ಶಾಸಕರ ಪ್ರದೇಶಾಭಿವ್ರದ್ದಿ ಯೋಜನೆಯ ೩ ಲಕ್ಷ ಅನುದಾನದ ಅಡಿಯಲ್ಲಿ ಶ್ರೀಮರಗಮ್ಮ ದೇವಸ್ಥಾನದ ಹತ್ತಿರ ಸಮುದಾಯ ಭವನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ನೀರು ಪ್ರತಿಯೊಂದು ಪ್ರಾಣಿಗಳಿಗೂ, ಮನುಷ್ಯನಿಗೂ, ಹಾಗೂ ಮಳೆರಾಯ ಧರೆಗೆ ಇಳಿಯದ ಪರಿಸ್ಥಿತಿಯಲ್ಲಿ ಹೊಲದಲ್ಲಿರುವ ಬೆಳೆಗಳಿಗೂ, ಅತೀ ಅವಶ್ಯವಿರುವಂತದ್ದು. ಜಲಹಾನಿಯಾಗಬಾರದು ಎನ್ನುವ ನಿಟ್ಟಿನಲ್ಲಿ ಸರಕಾರ ಇವತ್ತು ರಾಜ್ಯಾದಂತ ಜನಜೀವನ್ ಮಷೀನ್ ಯೋಜನೆಯ ಅಡಿಯಲ್ಲಿ ಮನೆ ಮನೆಗೆ ನಲ್ಲಿ ಸಂಪರ್ಕ ಕಾಮಗಾರಿಗಳನ್ನು ಹಮ್ಮಿಕೊಂಡಿದೆ. ಗ್ರಾಮದ ಹಿರಿಯರು ಯುವಕರು ಗುತ್ತಿಗೆದಾರರಿಗೆ ಸಹಕಾರ ನೀಡಿ ಸರಕಾರದ ಯೋಜನೆಗಳು…
ದೇವರಹಿಪ್ಪರಗಿ: ಬೀದಿ ಬೆಳಗುವ ದೀಪಗಳು ಹಲವು ದಿನಗಳಿಂದ ಕಾರ್ಯನಿರ್ವಹಿಸದೇ ಇದ್ದು, ಪಾದಯಾತ್ರಿಗಳ ಅನುಕೂಲಕ್ಕಾಗಿ ಕೂಡಲೇ ಬೀದಿದೀಪಗಳನ್ನು ಅಳವಡಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.ಪಟ್ಟಣದ ಅಂಬೇಡ್ಕರ್ ವೃತ್ತದ ಹೈಮಾಸ್ಕ್ ದೀಪ ಸೇರಿದಂತೆ ಇಂಡಿ ರಸ್ತೆಯಲ್ಲಿನ ಕ.ರ.ವೇ ವೃತ್ತದವರೆಗೆ ಬೀದಿ ದೀಪಗಳು ಕಳೆದ ಹಲವು ದಿನಗಳಿಂದ ಬಂದಾಗಿವೆ. ಈ ಬಗ್ಗೆ ಹಲವು ಬಾರಿ ಸ್ಥಳೀಯ ಆಡಳಿತದ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ.ಈ ಬಗ್ಗೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಭಾಸ್ಕರ್ ಗುಡಿಮನಿ ಅಸಮಾಧಾನ ವ್ಯಕ್ತಪಡಿಸಿ, ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ದಿ:೧೪ ಅಕ್ಟೋಬರ್ ದಂದು ೧೦ ಲಕ್ಷ ಜನರೊಂದಿಗೆ ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ ದಿನವಾಗಿದೆ. ಆದರೆ ಇಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿದ ಆವರಣದಲ್ಲಿಯೇ ಕತ್ತಲೇ ಆವರಿಸಿ ಬೆಳಕು ಇರದಂತಾಗಿದೆ. ಇಲ್ಲಿನ ಹೈಮಾಸ್ಕ್ ದೀಪ ಹಲವಾರು ದಿನಗಳಿಂದ ಸರಿಯಾಗಿ ಬೆಳಗುತ್ತಿಲ್ಲ. ಒಂದು ದಿನ ದಿನ ಇದ್ದರೆ ಮೂರು ದಿನ ಬಂದಾಗುತ್ತದೆ. ಜೊತೆಗೆ ಇಂಡಿ ರಸ್ತೆಯಲ್ಲಿನ ಬಹುತೇಕ ಬೀದಿದೀಪ ಬಂದಾಗಿವೆ. ಈ ಬಗ್ಗೆ ಅಧಿಕಾರಿಗಳು ವಾರದ ಹಿಂದೆಯೇ ಗಮನ ಸೆಳೆಯಲಾಗಿದೆ. ಆದರೆ…
