Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ಕಳೆದ ಹತ್ತಾರು ವರ್ಷಗಳಿಂದ ಸಿಂದಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯಲ್ಲಿ ಪಾದಾಧಿಕಾರಿಗಳ ಆಯ್ಕೆಯಾಗಿರುವುದಿಲ್ಲ. ನಮ್ಮೆಲ್ಲರ ದುಡಿಮೆ, ಪ್ರಯತ್ನ ಹೋರಾಟದ ಮೂಲಕ ಇಂದು ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಭಾನುವಾರ ಸಾಯಂಕಾಲದಂದು ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡ ನೂತನ ಪದಾಧಿಕಾರಿಗಳ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ನೀವು ಸನ್ಮಾನಗೊಂಡಿದ್ದೀರಿ ಎಂದರೆ ನಿಮ್ಮ ಜವಾಬ್ದಾರಿ ಹೆಚ್ಚಾದಂತೆ. ನೂತನ ಅಧ್ಯಕ್ಷರಿಗೆ ಮತ್ತು ಪದಾಧಿಕಾರಿಗಳಿಗೆ ಅವರದೇ ಯಾದ ಜವಾಬ್ದಾರಿ ನೀಡಬೇಕೆಂಬ ಉದ್ದೇಶದಿಂದ ಆಯ್ಕೆಮಾಡಲಾಗಿದೆ. ಮುಂಬರುವ ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವಲ್ಲಿ ತಳಮಟ್ಟದಿಂದ ನಾವೆಲ್ಲರೂ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸೋಣ ಎಂದರು.ಯಾರಲ್ಲಿಯೂ ಕಾರ್ಯದರ್ಶಿ, ಸಹ ಕಾರ್ಯದರ್ಶಿ ಸದಸ್ಯರಾಗಿದ್ದೇವೆ ಎಂಬ ಅಸಮಾಧಾನ ಬೇಡ ಕಾಂಗ್ರೆಸ್ ಪಕ್ಷದಲ್ಲಿ ಕೆಳ ಹಂತದಿಂದ ಪಕ್ಷನಿಷ್ಠೆಯಿಂದ ದುಡಿದು ಶಾಸಕ, ಸಂಸದ, ವಿಪ ಸದಸ್ಯರಾದ ಉದಾಹರಣೆಗಳು ಸಾಕಷ್ಟಿವೆ. ನಿರಂತರವಾಗಿ ಚರ್ಚೆಯ ಮೂಲಕ ಸಂಘಟನೆ ಬಲಗೊಳ್ಳಲಿ ಎಂದು ಸಲಹೆ ನೀಡಿದರು.ಇದೇ ವೇಳೆ ಜಿ.ಪಂ ಮಾಜಿ ಉಪಾಧ್ಯಕ್ಷ ಮಲ್ಲಣ್ಣ ಸಾಲಿ,…
ಸಿಂದಗಿ: ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ಚಿಕ್ಕಸಿಂದಗಿಯ ಚಂದ್ರಕಾಂತ ಬೂದಿಹಾಳ ಅವರನ್ನು ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವುಕುಮಾರ ಅವರ ಅದೇಶದ ಮೇರೆಗೆ ತಾಲೂಕ ಬ್ಲಾಕ್ ಕಾಂಗ್ರೆಸ್ ತಾಲೂಕಾಧ್ಯಕ್ಷ ಸುರೇಶ ಪೂಜಾರಿ ಹಾಗೂ ಶಾಸಕ ಅಶೋಕ ಮನಗೂಳಿ ಅವರ ನೇತೃತ್ವದಲ್ಲಿ ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.
ಮುದ್ದೇಬಿಹಾಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಚೇರಿಯ ವತಿಯಿಂದ ವಿಜಯಪುರದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕೇಸಾಪುರ ಗ್ರಾಮದ ಸಿದ್ಧಾರ್ಥ ಪಬ್ಲಿಕ್ ಶಾಲೆಯ ೭ನೇ ತರಗತಿಯ ವಿದ್ಯಾರ್ಥಿ ಗೌತಮ ಕಾಳೆ ೮೦ಮೀ ಅಡತಡೆ ಓಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಶಾಲೆಯ ಮುಖ್ಯ ಗುರು ವಿನಾಯಕ ದೊಡಮನಿ ಸೇರಿದಂತೆ ಎಲ್ಲ ಶಿಕ್ಷಕರು, ಸಿಬ್ಬಂದಿ ಹಾಗೂ ಪೋಷಕರು ರಾಜ್ಯದಲ್ಲಿಯೂ ಗೌತಮ್ ಮಿಂಚುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಮುದ್ದೇಬಿಹಾಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಚೇರಿಯ ವತಿಯಿಂದ ವಿಜಯಪುರದಲ್ಲಿ ನಡೆದ ಜಿಲ್ಲಾಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯದ ೯ನೇ ತರಗತಿಯ ವಿದ್ಯಾರ್ಥಿ ಸಾಗರ ಚಿಮ್ಮಲಗಿ ಗುಂಡು ಎಸೆತ ಮತ್ತು ಬಲ್ಲೆ ಎಸೆತ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಶಾಲೆಯ ಮುಖ್ಯ ಗುರುಮಾತೆ ನೀಲಮ್ಮ ತೆಗ್ಗಿನಮಠ, ದೈಹಿಕ ಶಿಕ್ಷಕ ಬಿ.ಕೆ.ನಾಯಕ ಸೇರಿದಂತೆ ಎಲ್ಲ ಶಿಕ್ಷಕರು, ಸಿಬ್ಬಂದಿ ಹಾಗೂ ಪೋಷಕರು ರಾಜ್ಯದಲ್ಲಿಯೂ ಸಾಗರ ಮಿಂಚುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಸುಳ್ಳು ಪೋಸ್ಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಪ್ರಕರಣ ದಾಖಲು ಬೆಂಗಳೂರು: ನಗರದ ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿದ್ದಾರೆ ಎಂದು ಸುಳ್ಳು ಪೋಸ್ಟ್ ಹಂಚಿಕೊಂಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಶಕುಂತಲಾ ನಟರಾಜ್, ಎಕ್ಸ್ ಖಾತೆಯಲ್ಲಿ ಹಾಕಿದ ಪೋಸ್ಟ್ನಲ್ಲಿ ಬೆಂಗಳೂರಿನ ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಸುಳ್ಳು ಪೋಸ್ಟ್ ಹಂಚಿಕೊಂಡಿದ್ದರು. ಬಾಯ್ಕಾಟ್ ಲುಲುಮಾಲ್ ಎಂದು ಬರೆದುಕೊಂಡಿದ್ದರು. ಪೋಸ್ಟ್ನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದರು.ಶಕುಂತಲಾ ನಟರಾಜ್ ಸುಳ್ಳು ಪೋಸ್ಟ್ ಹಾಕಿದ್ದಾರೆ ಮತ್ತು ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿ ಇಲ್ಲಿಯ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಫೋಟೊ ಉದ್ದೇಶಪೂರ್ವಕವಾಗಿ ತೊಂದರೆ ಸೃಷ್ಟಿಸುವುದಾಗಿದೆ ಮತ್ತು ಎಡಿಟ್ ಮಾಡಿದ್ದಾಗಿದೆ. ಪೋಸ್ಟ್ ಮೂಲಕ ಜನರನ್ನು ಕೆರಳಿಸುವ ಯತ್ನ ಮಾಡಲಾಗುತ್ತಿದೆ ಎಂದು ಪೊಲೀಸರು ಕಂಡುಕೊಂಡಿದ್ದಾರೆ…
ನವದೆಹಲಿ: ಚಂದ್ರಯಾನ-3 ಮಿಷನ್ನ ಯಶಸ್ಸಿನ ಸ್ಮರಣಾರ್ಥ ಕೇಂದ್ರ ಸರ್ಕಾರವು ಪ್ರತಿ ವರ್ಷ ಆಗಸ್ಟ್ 23 ಅನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಘೋಷಿಸಿದ್ದು ಈ ಕುರಿತು ಅಧಿಸೂಚನೆ ಹೊರಡಿಸಿದೆ.ಚಂದ್ರನ ಮೇಲ್ಮೈ ಮೇಲೆ ಆಗಸ್ಟ್ 23ರಂದು ವಿಕ್ರಮ್ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳಿಸಲಾಗಿತ್ತು. ಈ ಮೂಲಕ ಚಂದ್ರನ ಮೇಲೆ ಇಳಿದ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶವಾಯಿತು. ಅದೇ ಸಮಯದಲ್ಲಿ, ಭಾರತವು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವಾಗಿದೆ.ಅಧಿಸೂಚನೆಯ ಪ್ರಕಾರ, ಈ ದಿನವು ಬಾಹ್ಯಾಕಾಶ ಕಾರ್ಯಾಚರಣೆಯಲ್ಲಿ ದೇಶದ ಪ್ರಗತಿಯಲ್ಲಿ ಪ್ರಮುಖ ಮೈಲಿಗಲ್ಲು. ಇದು ಬಾಹ್ಯಾಕಾಶ ಕ್ಷೇತ್ರಕ್ಕೆ ಉತ್ತೇಜನ ನೀಡಲಿದೆ. ಯುವಕರು ಈ ಕ್ಷೇತ್ರಕ್ಕೆ ಬರಲು ಉತ್ತೇಜನ ನೀಡಲಾಗುವುದು. ಇದನ್ನು ಗಮನದಲ್ಲಿಟ್ಟುಕೊಂಡು ಪ್ರತಿ ವರ್ಷ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೊದಲ ಮಿಷನ್ ಆಗಿ ಇತಿಹಾಸವನ್ನು ಸೃಷ್ಟಿಸಿದೆ. ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ಕೆಲವೇ ದೇಶಗಳಲ್ಲಿ ಭಾರತ…
ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತ ಸೆಮಿಫೈನಲ್ ಗೆ ಹತ್ತಿರ ಶನಿವಾರ, ಅಕ್ಟೋಬರ್ 14ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್ನ 12ನೇ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದ ನಂತರ, ಭಾರತ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.2023ರ ಏಕದಿನ ವಿಶ್ವಕಪ್ನಲ್ಲಿ ತಮ್ಮ ಗೆಲುವಿನ ಓಟವನ್ನು ಮುಂದುವರೆಸಿರುವ ಆತಿಥೇಯ ಭಾರತ ತಂಡ ಸತತ ಮೂರನೇ ಗೆಲುವು ಸಾಧಿಸಿ ಅಜೇಯವಾಗಿ ಮುನ್ನುಗ್ಗುತ್ತಿದೆ.ಇನ್ನು ವಿಶ್ವಕಪ್ ಇತಿಹಾಸದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ ಅಜೇಯ 8ನೇ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಮೇಲುಗೈ ಸಾಧಿಸಿದೆ.ಪಾಕಿಸ್ತಾನ ವಿರುದ್ಧ ಮಾರಕ ಬೌಲಿಂಗ್ ಪ್ರದರ್ಶನದ ನಂತರ, ರೋಹಿತ್ ಶರ್ಮಾ ಮತ್ತು ಶ್ರೇಯಸ್ ಅಯ್ಯರ್ ಅವರ ಅಮೋಘ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ತಂಡವನ್ನು 7 ವಿಕೆಟ್ಗಳಿಂದ ಹೀನಾಯವಾಗಿ ಸೋಲಿಸಿತು.ಈ ಮೂಲಕ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಪ್ರಸ್ತುತ +1.821ರ ಅದ್ಭುತ ನೆಟ್ ರನ್ರೇಟ್ (NRR) ನೊಂದಿಗೆ ಮೂರು…
ವಿಜಯಪುರ: ವಿದ್ಯುತ್ ತಂತಿ ತುಂಡಾಗಿ ಬಿದ್ದು ಐದು ಎಕರೆ ಕಬ್ಬು ನಾಶವಾಗಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ನಡೆದಿದೆ.ರೋಣಿಹಾಳ ಗ್ರಾಮದ ರೈತರಾದ ಶಿವಲಿಂಗಪ್ಪ ರುದ್ರಪ್ಪ ನ್ಯಾಮಗೊಂಡ ಹಾಗೂ ಶಿವಲಿಂಗವ್ವ ಭಾವಿ ಇವರಿಗೆ ಸೇರಿದ ಕಬ್ಬು ಬೆಳೆಯು ಸಂಪೂರ್ಣ ಅಗ್ನಿಗೆ ಆಹುತಿಯಾಗಿದೆ.ಗದ್ದೆ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದರ ಪರಿಣಾಮ, ಕಟಾವಿಗೆ ಬಂದಿದ್ದ ಐದು ಎಕರೆಯಲ್ಲಿನ ಕಬ್ಬಿನ ಬೆಳೆ ಸುಟ್ಟು ನಾಶವಾಗಿದೆ. ತಕ್ಷಣವೇ ಬೆಂಕಿಯನ್ನು ನಂದಿಸಲು ಸ್ಥಳೀಯರೆಲ್ಲ ಸೇರಿ ಪ್ರಯತ್ನಿಸಿದರಾದರೂ ಬೆಳೆ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.ಕೈಗೆ ಬಂದ ಕಬ್ಬು ಸುಟ್ಟು ಹೋಗಿದ್ದು, ನಷ್ಟದಿಂದ ರೈತರು ಕಂಗಾಲಾಗಿದ್ದಾರೆ.ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.ಈ ಘಟನೆಗೆ ಹೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ರೈತರು ಆರೋಪಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಟ್ರಾನ್ಸಫರ್ ಸೇರಿ ಎಲ್ಲದರಲ್ಲೂ ಭ್ರಷ್ಟಾಚಾರ | ಬಹಿರಂಗವಾಗಿಯೇ ಕಮಿಷನ್ ದಂಧೆ | ಲಂಚ ಕೊಟ್ಟವರಿಗೆ ಬಿಲ್ ಬಿಡುಗಡೆ ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಗುತ್ತಿಗೆದಾರರು ಜೊತೆಯಾಗಿ ಲೂಟಿ ಮಾಡುತ್ತಿದ್ದು, ಕಾಂಟ್ರಾಕ್ಟರ್ ಅಸೋಸಿಯೇಷನ್ ಸರ್ಕಾರದ ಕಮಿಷನ್ ಕಲೆಕ್ಷನ್ ಸೆಂಟರ್ ಆಗಿದೆ. ಅಕ್ರಮ ಹಣ ಪತ್ತೆಯಾಗಿರುವ ಕುರಿತು ಇಡಿ ಹಾಗೂ ಸಿಬಿಐ ಎರಡೂ ತನಿಖೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಈ ಕುರಿತು ಶನಿವಾರ ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಂದಾಗಿನಿಂದ ಟ್ರಾನ್ಸಫರ್ ನಿಂದ ಹಿಡಿದು ಎಲ್ಲದರಲ್ಲೂ ಭ್ರಷ್ಟಾಚಾರ ಇದೆ. ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಇದು. ಗ್ರಾಮದಿಂದ ಹಿಡಿದು ವಿಧಾನಸೌಧದವರೆಗೂ ಭ್ರಷ್ಟಾಚಾರ ಇದೆ. ಬಹಿರಂಗವಾಗಿಯೇ ಕಮಿಷನ್ ದಂಧೆ ನಡೆಯುತ್ತಿದೆ.ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಯಾದ ತಕ್ಷಣವೇ ಗುತ್ತಿಗೆದಾರನ ಸಂಬಂಧಿಕರ ಮನೆಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣ ಸಿಕ್ಕಿರುವುದು ಇದೇ ಮೊದಲು. ಸರ್ಕಾರ 10% ಕಮಿಷನ್ ಪಡೆದಿರುವುದು ಸಾಬೀತಾಗಿದೆ. ಇನ್ನಷ್ಟು ಗುತ್ರಿಗೆದಾರರ ಮನೆ…
ಮುದ್ದೇಬಿಹಾಳ: ವಿಜಯಪುರದಲ್ಲಿ ನಡೆದ ವಿಭಾಗಮಟ್ಟದ ಸ್ಪರ್ಧೆಯಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯ ಬಿದರಕುಂದಿ ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಲಮಾಣಿ ೧೦೦ ಮೀ ಓಟದ ಸ್ಪರ್ಧೆಯಲ್ಲಿ ಹಾಗೂ ಶಾರ್ಟ್ ಪುಟ್ ಸ್ಪರ್ಧೆಯಲ್ಲಿ ವಿಜೇತನಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಗುಂಡು ಎಸೆತದಲ್ಲಿ -ಪ್ರಥಮ, ೧೦೦ಮೀ ಓಟದಲ್ಲಿ- ದ್ವಿತೀಯ, ಲಾಂಗ್ ಜಂಪ್ – ದ್ವಿತೀಯ ಸ್ಥಾನಗಳನ್ನು ಗಿಟ್ಟಿಸಿಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯ ದೈಹಿಕ ಶಿಕ್ಷಕ ಬಿ.ಕೆ.ಲಮಾಣಿ ಹಾಗೂ ಎನ್.ಎಸ್.ಬಿರಾದಾರ್, ಮುಖ್ಯ ಗುರುಮಾತೆ ಎನ್.ಬಿ.ತೆಗ್ಗಿನಮಠ ಸೇರಿದಂತೆ ಎಲ್ಲ ಶಿಕ್ಷಕರು ಹಾಗೂ ಎಸ್ಡಿಎಂಸಿ ಅಧ್ಯಕ್ಷ ಗುಂಡಪ್ಪ ಕೊಟಗಿ, ರಾಜ್ಯದಲ್ಲಿಯೂ ಪ್ರಜ್ವಲ್ ಮಿಂಚುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
