Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಕೆಎಸ್ಕ್ಯುಎಎಸಿ ವತಿಯಿಂದ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ ಎನ್ಎಂಎಂಎಸ್ ಪರೀಕ್ಷೆಯು ಡಿ.೧೭ರಂದು ನಡೆಯಲಿದ್ದು, ಈ ಪರೀಕ್ಷೆಗೆ ನೊಂದಾಯಿಸಲು ಶಾಲಾ ಲಾಗಿನ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ೮ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಮೂಲಕ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಮಾಧ್ಯಮಿಕ ಹಂತದಲ್ಲಿ ಶಾಲೆಯಿಂದ ಹೊರಗುಳಿಯುವಂತೆ ತಡೆಯುವುದು ಹಾಗೂ ವಿದ್ಯಾಬ್ಯಾಸದ ಮುಂದವರಿಕೆಗೆ ಪ್ರೇರೆಪಿಸುವುದು ಈ ಯೋಜನೆ ಉದ್ದೇಶವಾಗಿದೆ.ಆಸಕ್ತ ವಿದ್ಯಾರ್ಥಿಗಳು ಶಾಲೆಯ ಮುಖ್ಯ ಶಿಕ್ಷಕರು-ಪ್ರಾಂಶುಪಾಲಕರ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ : ೧೭-೧೦-೨೦೨೩ ಕೊನೆಯ ದಿನಾಂಕವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಶ್ರೀಮತಿ ಎ.ಪಿ.ಚವ್ಹಾಣ ನೋಡಲ್ ಅಧಿಕಾರಿಗಳು ಮೊ: ೯೪೪೮೬೪೫೦೬೬ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧಿಕಾರಿಗಳಿಗೆ ಜಿಪಂ ಸಿಇಓ ರಾಹುಲ್ ಶಿಂಧೆ ಸೂಚನೆ ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರ ಕಚೇರಿಗೆ ಧಿಡೀರ ಭೇಟಿ ನೀಡಿ, ಇಲಾಖೆಯ ವಿವಿಧ ಯೋಜನೆಗಳ ಪ್ರಗತಿಯನ್ನು ಪರಿಶೀಲನೆ ನಡೆಸಿದರು.ಮಹಾತ್ಮ ಗಾಂಧಿ ನರೇಗಾ ಯೋಜನೆ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ, ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (ದ್ರಾಕ್ಷಿ,ದಾಳಿಂಬೆ,ಲಿAಬೆ) ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆ ಲಾಭವನ್ನು ಜಿಲ್ಲೆಯ ಅರ್ಹ ರೈತರಿಗೆ ತಲುಪಿಸಲು ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಮತ್ತು ರೈತರ ಅನುಕೂಲಕ್ಕಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ವಿಜಯಪುರ ಜಿಲ್ಲೆಯ ೧೨ ತಾಲೂಕುಗಳನ್ನು ಬರ ಘೋಷಣೆಯಾದ ಹಿನ್ನೆಲೆಯಲ್ಲಿ ರೈತರು ವಲಸೆ ಹೋಗದಂತೆ ತಡೆಯಲು ಹಾಗೂ ಅವರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗುರಿಗಿಂತ ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವ ಮೂಲಕ ಗ್ರಾಮೀಣ ಜನರಿಗೆ ಹೆಚ್ಚು ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ತಿಳಿಸಿದರು.ಸಮಗ್ರ…
ವಿಜಯಪುರ: ಇಸ್ರೇಲ್ನಿಂದ ಸುರಕ್ಷಿತವಾಗಿ ವಿಜಯಪುರಕ್ಕೆ ಮರಳಿದ ವಿಜಯಪುರದ ಕೃಷಿ ವಿಶ್ವವಿದ್ಯಾಲಯದ ಹವಾಮಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಮೇಶ ಕೆ.ಜಿ.ಅವರನ್ನು ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬರಮಾಡಿಕೊಂಡು ಕುಶಲೋಪರಿ ವಿಚಾರಿಸಿದರು.ಇಸ್ರೇಲ್ದಿಂದ ತಾಯ್ನಾಡಿಗೆ ಮರಳಲು ಯುದ್ಧಪೀಡಿತ ಪ್ರದೇಶದಿಂದ ವಿವರಗಳನ್ನು ಪಡೆದುಕೊಂಡು, ಸುರಕ್ಷಿತವಾಗಿ ಆಗಮಿಸಲು ಸಹಾಯ ಮಾಡಿದ ವಿಜಯಪುರ ಜಿಲ್ಲಾಡಳಿತ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುಮೇಶ ಕೆ.ಜಿ.ಅವರು ಕೃತಜ್ಞತೆ ಸಲ್ಲಿಸಿದರು.
ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಕು. ನವ್ಯ ರಮೇಶ ಕತ್ತಿ ಅವರನ್ನು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಗೆ ಆಯ್ಕೆ ಮಾಡಲಾಗಿದೆ.ಅಕ್ಟೋಬರ್ ೧೮ರಂದು ಮೈಸೂರಿ ವಿವಿಯ ಸಭಾಂಗಣದಲ್ಲಿ ನಡೆಯುವ ಚಿಗುರು ಕವಿಗೋಷ್ಠಿಯಲ್ಲಿ ಕವಿತೆ ವಾಚಿಸಲು ಅವಕಾಶ ನೀಡಲಾಗಿದೆ ಎಂದು ದಸರಾ ಕವಿಗೋಷ್ಠಿ ಉಪಸಮಿತಿಯ ಕಾರ್ಯಾಧ್ಯಕ್ಷೆ ಡಾ.ವಿಜಯಕುಮಾರಿ ಕರಿಕಲ್ ತಿಳಸಿದ್ದಾರೆ.ಕು.ನವ್ಯ ಕತ್ತಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದು ಈಗಾಗಲೇ ನವ್ಯ ಸ್ಟೋರೀಸ್, ದ ಮ್ಯಾಜಿಕ್ ಕೇವ್ ಅಂಡ್ ಅದರ ಸ್ಟೋರೀಸ್ ಎಂಬ ಎರಡು ಮಕ್ಕಳ ಕಥಾ ಸಂಕಲನಗಳನ್ನು ಪ್ರಕಟಿಸಿದ್ದಾಳೆ.
ಬಸವನಬಾಗೇವಾಡಿ: ಬರದ ನಾಡು ಎಂದು ಕುಖ್ಯಾತಿ ಪಡೆದಿರುವ ವಿಜಯಪುರ ಜಿಲ್ಲೆಗೆ ಈಗ ಕರೆಂಟಿಗೂ ಬರ ಬಂದೊದಗಿದೆ. ಈ ವರ್ಷ ಬೀಕರ ಬರಗಾಲ ಆವರಿಸಿ ಮುಂಗಾರು ಬೆಳೆ ಹಾಳಾಗುತ್ತಿದ್ದರೂ ಸಹ ಸಮರ್ಪಕ ವಿದ್ಯುತ್ ಕೊಡದೆ ಸರಕಾರ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಕೂಡಲೆ ಹೊರರಾಜ್ಯದಿಂದಾದರೂ ಖರೀದಿಸಿ ಕೃಷಿಗೆ ನೀರುಣಿಸಲು ಸಮರ್ಪಕ ವಿದ್ಯುತ್ ಒದಗಿಸಬೇಕೆಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ರಾಜ್ಯ ಸರಕಾರದ ವಿರುದ್ದ ಹರಿ ಹಾಯ್ದಿದ್ದಾರೆ.ಮನಗೂಳಿ ಹೆಸ್ಕಾಂ ಇಲಾಖೆಗೆ ರೈತರೊಂದಿಗೆ ತೆರಳಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಜಿ.ವ್ಹಿ.ಸಂಪನ್ನವರ ಇವರಿಗೆ ಶುಕ್ರವಾರದಂದು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈಗ ಕಾಲುವೆಗಳಿಗೆ ನೀರು ಹರಿಸಲು ಐ.ಸಿ.ಸಿ ಅಧ್ಯಕ್ಷ ಆರ್.ಬಿ.ತಿಮ್ಮಾಪುರ ರವರು ಎಲ್ಲಾ ಕಾಲುವೆಗಳಿಗೆ ನೀರು ಹರಿಸಲು ವಾರಬಂದಿ ಬದಲಾಯಿಸಿ ಒಂದು ಕಡೆ ಆದೇಶ ನೀಡಿದ್ದಾರೆ. ಇನ್ನೊಂದು ಕಡೆ ಮಸೂತಿ ಜಾಕವೇಲ್ ಬಳಿ ವಿದ್ಯುತ್ ಸರಬರಾಜು ಮಾಡುವ ಸಿಟಿ ಉಪಕರಣ ಸುಟ್ಟಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸಬೂಬು…
ವಿಜಯಪುರ: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರಕಾರ ನೇಮಕಾತಿಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿಜಯಪುರ ಜಿಲ್ಲಾ ವ್ಹಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಬಿ. ಎಂ. ಕೋಕರೆ ಆಗ್ರಹಿಸಿದ್ದಾರೆ.ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಔಷಧಿಯ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದ ಆಶ್ರಯದಲ್ಲಿ ಬುಧವಾರ ಪ್ರಾರಂಭವಾದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕಲಬುರಗಿ ವಲಯ ಪುರುಷರ ಹಾಗೂ ಮಹಿಳೆಯರ ವಿಭಾಗದ ವ್ಹಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.ವಿಜಯಪುರ ಜಿಲ್ಲೆಯ ಜನ ವ್ಹಾಲಿಬಾಲ್ ಪ್ರೀಯರಾಗಿದ್ದಾರೆ. ಈ ಹಿಂದೆಯೂ ವಿಜಯಪುರದಲ್ಲಿ ಆರೇಳು ರಾಷ್ಟ್ರೀಯ ವ್ಹಾಲಿಬಾಲ್ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದೇವೆ. ಈಗ ಬಿ.ಎಲ್.ಡಿ.ಇ ಸಂಸ್ಥೆಯೂ ಕೂಡ ಅತ್ಯುತ್ತಮ ಪಂದ್ಯಾವಳಿ ಆಯೋಜಿಸಿದೆ. ಎಲ್ಲ ಕ್ರೀಡಾಪಟುಗಳು ಮತ್ತು ತರಬೇತುದಾರರು ದೇಶದ ಸಲುವಾಗಿ ಆಟವಾಡಬೇಕು. ವೈಯಕ್ತಿಕ ಹಿತಾಸಕ್ತಿಗಿಂತ ದೇಶದ ಹಿತಾಸಕ್ತಿಯನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಇದೇ ರೀತಿ ರಾಜ್ಯ ಸರಕಾರ ಕೂಡ ಪಂಜಾಬ ಮಾದರಿಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಉತ್ತಮ ಸಾಧನೆ…
ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಇದೇ ಅ.15ರಂದು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದು, ದೇವರಹಿಪ್ಪರಗಿ ತಾಲೂಕಿನ ಸುಕ್ಷೇತ್ರ ಕೊಂಡಗುಳಿ ಗ್ರಾಮದಲ್ಲಿ ಶ್ರೀ ದೇವಿ ಪುರಾಣ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಜಯಪುರ ಜಿಲ್ಲಾ ಆಪ್ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮುಖ್ಯಮಂತ್ರಿ ಚಂದ್ರು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಉತ್ತರ ಕರ್ನಾಟಕ ವಲಯದ ಉಸ್ತುವಾರಿ ಅರ್ಜುನ್ ಹಲಗಿಗೌಡರ್, ರಾಜ್ಯ ಉಪಾಧ್ಯಕ್ಷರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿಗಳಾದ ರೋಹನ್ ಐನಾಪುರ್ ಮತ್ತಿತರ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.ಅ.15 ರವಿವಾರ ಬೆಳಗ್ಗೆ 11:00 ಗಂಟೆಗೆ ಮುಖ್ಯಮಂತ್ರಿ ಚಂದ್ರು ಅವರು,ನಗರದ ಜಲನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ತದನಂತರ ಜಿಲ್ಲೆಯ ಆಪ್ ಪಕ್ಷದ ನೂತನ ಪದಾಧಿಕಾರಿಗಳನ್ನ ಉದ್ದೇಶಿಸಿ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3:00 ಘಂಟೆಗೆ ದೇವರಹಿಪ್ಪರಗಿ ತಾಲೂಕು ಕೊಂಡಗುಳಿ…
ವಿಜಯಪುರ: ತಾಲೂಕಿನ ನಾಗಠಾಣ ಗ್ರಾಮದ ಶಿಕ್ಷಕ ಸಂತೋಷ ಬಂಡೆ ಅವರ ಅವಳಿ ಹೆಣ್ಣುಮಕ್ಕಳಾದ ಅನುಶ್ರೀ-ಶ್ರೀನಿಧಿ ಅವರ 5ನೇ ವರ್ಷದ ಜನ್ಮದಿನದ ನಿಮಿತ್ತ ನಾಗಠಾಣದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ ಅಕ್ಟೋಬರ್ 15, ರವಿವಾರ ಸಂಜೆ 5.15ಕ್ಕೆ ‘ಮೂಲ’ ಕಥಾ ಸಂಕಲನದ ಲೋಕಾರ್ಪಣೆ, ಡಾ ಎ ಪಿ ಜೆ ಅಬ್ದುಲ್ ಕಲಾಂ ಅವರ ಜಯಂತಿ ಆಚರಣೆ, ವಿಶ್ವ ಕೈತೊಳೆಯುವ ದಿನ ಹಾಗೂ ಒಂದು ನೂರು ಸಸಿ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕೋಶಾಧ್ಯಕ್ಷ ಡಾ ಸಂಗಮೇಶ ಮೇತ್ರಿ ಕಾರ್ಯಕ್ರಮ ಉದ್ಘಾಟಿಸುವರು. ಇಂಡಿ ತಾಲೂಕಿನ ನಾದ ಕೆ ಡಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಚಿದಂಬರ ಬಂಡಗರ ಅವರು ‘ಮೂಲ’ ಕಥಾ ಸಂಕಲನವನ್ನು ಲೋಕಾರ್ಪಣೆ ಮಾಡುವರು. ವಿಜಯಪುರದ ಸಾಹಿತಿ ಸಂಗೀತಾ ಮಠಪತಿ ಕೃತಿ ಪರಿಚಯಿಸುವರು. ಹಿರಿಯರಾದ ಸುಭಾಷ ಬಂಡೆ ಅಧ್ಯಕ್ಷತೆ ವಹಿಸುವರು. ರಾಯಚೂರಿನ ಅಂಚೆ ಸಹಾಯಕ ರಾಮಣ್ಣ ವಾಲ್ಮೀಕಿ, ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳಮುಖ್ಯ ಅತಿಥಿಗಳಾಗಿ ಆಗಮಿಸುವರು.ಆಸಕ್ತರು…
ತಮಿಳುನಾಡಿಗೆ ಅ.31ರವರೆಗೆ ನೀರು ಬಿಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ ಸೂಚನೆ ಬೆಂಗಳೂರು: ತಮಿಳುನಾಡಿಗೆ ಅ.16ರಿಂದ 31ರವರೆಗೆ ಪ್ರತಿನಿತ್ಯ 3,000 ಕ್ಯೂಸೆಕ್ ನೀರನ್ನು ಬಿಡುಗಡೆಗೊಳಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಬುಧವಾರ ಸೂಚಿಸಿದೆ.ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ದೆಹಲಿಯಲ್ಲಿ ಸಿಡಬ್ಲ್ಯುಸಿ ಸಭೆ ನಡೆದಿದ್ದು, ಸಭೆಯಲ್ಲಿ ಕರ್ನಾಟಕ 2023ರ ಅ.16ರಿಂದ 31ರವರೆಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕು. ಈ ಆದೇಶ ಅ.16ರ ಬೆಳಗ್ಗೆ 8:00 ಗಂಟೆಯಿಂದ ಅನ್ವಯವಾಗಲಿದ್ದು, ಅದನ್ನು 2023ರ ಅ.31ರವರೆಗೂ ಕಾಯ್ದುಕೊಳ್ಳಬೇಕು ಎಂದು ಕಾವೇರಿ ಜಲನಿಯಂತ್ರಣ ಪ್ರಾಧಿಕಾರವು ಹೇಳಿಕೆಯಲ್ಲಿ ತಿಳಿಸಿದೆ.ನೀರಿನ ಕೊರತೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬಿಳಿಗುಂಡ್ಲು ಜಲಾಶಯಕ್ಕೆ ನೀರು ಬಿಡುಗಡೆಗೊಳಿಸುವುದು ಅಸಾಧ್ಯವೆಂದು ಕರ್ನಾಟಕವು ಸಿಡಬ್ಲ್ಯುಆರ್ಸಿ ಮುಂದೆ ವಾದ ಮಂಡಿಸಿತ್ತು.ತಮಿಳುನಾಡಿಗೆ ನೀರು ಬಿಡುವ ಕುರಿತಾದ ಸುಪ್ರೀಂಕೋರ್ಟ್ ಹಾಗೂ ಕಾವೇರಿ ಜಲನಿರ್ವಹಣಾ ಪ್ರಾಧಿಕಾರದ ಆದೇಶದ ವಿರುದ್ಧ ಕರ್ನಾಟಕ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿತ್ತು. ರಾಜ್ಯದ ವಿವಿಧ ಭಾಗಗಳಲ್ಲಿ ತೀವ್ರ ಬರಪರಿಸ್ಥಿತಿ ಸೃಷ್ಟಿಯಾಗಿದ್ದು ತಮಿಳುನಾಡಿಗೆ ಕಾವೇರಿ…
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೆಲವು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವುದು ನಮ್ಮ ವೈಫಲ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಡಿ.ವಿ. ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ.ಗುರುವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲಿನ ನಂತರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಪಕ್ಷ ಕಟ್ಟಿವಲ್ಲಿ ವಿಫಲವಾಗಿದ್ದೇವೆ” ಎಂದು ಹೇಳಿದರು.”ನಮ್ಮ ಕೆಲವು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವುದು ನಮ್ಮ ವೈಫಲ್ಯವಾಗಿದೆ. ಸೋಲಿನ ನಂತರ ಪಕ್ಷ ಕಟ್ಟುವಲ್ಲಿ ನಾವು ವಿಫಲವಾಗಿದ್ದೇವೆ. ಅದರಿಂದಾಗಿಯೇ ನಾಯಕರು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ” ಎಂದರು.ನಮ್ಮವರು ಅನೇಕರು ಬಿಜೆಪಿ ಬಿಟ್ಟು ಹೋಗುತ್ತಿರುವುದು ನಿಜ, ಅವರನ್ನು ಮನವರಿಕೆ ಮಾಡಿ ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ನಡೆಯುತ್ತಿಲ್ಲ ಎಂದ ಅವರು, ನಮ್ಮ ಶಾಸಕರ ಅನುದಾನ ವಾಪಸ್ ಪಡೆದಿರೋದು ಸರಿಯಲ್ಲ. ಅನುದಾನ ವಾಪಸ್ಸು ಪಡೆದಿರುವ ಹಿಂದೆ ಕಮಿಷನ್ ಪಡೆಯುವ ಉದ್ದೇಶವಿದೆ. ಇನ್ನೂ ಹೆಚ್ಚಿನ ಕಮಿಷನ್ ಪಡೆಯುವ ಸಲುವಾಗಿ ಶಾಸಕರ ಅನುದಾನ ವಾಪಸ್ಸು ಪಡೆದಿರಬಹುದು ಎಂದು ದೂರಿದರು.
