Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ಶಿಕ್ಷಣ ಎನ್ನುವದು ಒಂದು ಸಂಘಟನಾ ಶಕ್ತಿ. ಅದಕ್ಕೆ ಒಗ್ಗೂಡಿಸುವ ಶಕ್ತಿ ಇರುತ್ತದೆ ಎಂದು ನಿವೃತ್ತ ಆಯುಕ್ತ ಎಸ್.ಜಿ. ಬಿರಾದಾರ ಹೇಳಿದರು.ಪಟ್ಟಣದ ಆಲಮೇಲ ರಸ್ತೆಯ ಹೊರ ವಲಯದಲ್ಲಿರುವ ಪಿಇಎಸ್ ಶಿಕ್ಷಣ ಸಂಸ್ಥೆಯ ಪಪೂ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲ ಶಿಕ್ಷಣದಿಂದ ನೈತಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜದೊಳಗೆ ಎಲ್ಲರೊಳಗೆ ಒಂದಾಗಿ ಬದುಕಬೇಕು. ಅಸಾಧ್ಯವೆಂಬುದು ತೊರೆದು ಸಾಧ್ಯ ಎಂಬ ಸಿದ್ಧಾಂತವನ್ನು ಮೈಗೂಡಿಸಿಕೊಂಡಾಗ ಮಾತ್ರ ವಿದ್ಯಾರ್ಥಿಯ ಬದುಕು ಹಸನಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳಾದವರು ಕಷ್ಟಪಟ್ಟು ಓದಿ ಯಶಸ್ಸು ಗಳಿಸಬೇಕೆಂದು ಸಲಹೆ ನೀಡಿದರು.ಅತಿಥಿಗಳಾದ ಎನ್.ಎಸ್.ಬಿರಾದಾರ, ಶರತ್ ನಾಡಗೌಡ ಮಾತನಾಡಿದರು.ಈ ವೇಳೆ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದ ೨೦ ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಡಾ.ಸಂತೋಷಕುಮಾರ ಕರ್ಜಗಿ ವಹಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಪಿ.ಇ.ಎಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ.ಪಿ. ಕರ್ಜಗಿ, ಆಯ್.ಬಿ. ಬಿರಾದಾರ, ಕೆ.ಎಚ್.ಸೋಮಾಪೂರ, ಪ್ರಾಚಾರ್ಯ ಆರ್.ಬಿ. ಗೋಡಕರ, ಜಿ.ಎಸ್.ಕಡಣಿ,…
ದೇವರಹಿಪ್ಪರಗಿ: ಮಧ್ಯಂತರ ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ರೈತಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿಗೆ ಸೋಮವಾರ ರೈತಸಂಘದ ಪದಾಧಿಕಾರಿಗಳು, ಕಾರ್ಯಕರ್ತರು ಆಗಮಿಸಿ, ಸರಕಾರದ ವಿರುದ್ಧ ಪ್ರತಿಭಟನೆ ಕೈಗೊಂಡರು.ಈ ಸಂದರ್ಭದಲ್ಲಿ ತಾಲ್ಲೂಕು ರೈತಸಂಘದ ಅಧ್ಯಕ್ಷ ಈರಪ್ಪ ಕುಳೇಕುಮಟಗಿ ಹಾಗೂ ಗೌರವಾಧ್ಯಕ್ಷ ಶಿವಾನಂದ ಹಿರೇಮಠ ಮಾತನಾಡಿ, ಬರಗಾಲ ಬವಣೆಯಿಂದ ಇದ್ದ ಬೆಳೆಗಳೆಲ್ಲ ಒಣಗಿ ಫಸಲು ಬಾರದಂತಾಗಿದೆ. ಸರಕಾರ ಬರಗಾಲ ಎಂದು ಘೋಷಣೆ ಮಾಡಿದರೂ ರೈತರ ಖಾತೆಗೆ ಒಂದು ಪೈಸಾ ಹಣ ಜಮಾ ಮಾಡಿಲ್ಲ. ಎಲ್ಲಿಯೂ ಬರ ಪರಿಹಾರ ಕಾರ್ಯ ಪ್ರಾರಂಭಿಸಿಲ್ಲ. ಕನಿಷ್ಠ ಬದುಕಿಗೋಸ್ಕರವಾದರೂ ಬರಪರಿಹಾರ ನೀಡಬೇಕಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ವಿಷಯದಲ್ಲಿ ಚೆಲ್ಲಾಟವಾಡುತ್ತಿವೆ. ತಕ್ಷಣವೇ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬರಪರಿಹಾರ ನೀಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ರೈತರ ಜಮೀನುಗಳಿಗೆ ಹೋಗುವ ದಾರಿ ಸಮಸ್ಯೆ ಇತ್ಯರ್ಥ ಪಡಿಸಬೇಕು.ಈ…
ಇಂಡಿ: ಇಂದು ಪ್ರತಿಯೊಬ್ಬರು ತಮ್ಮ ತಮ್ಮ ಮಕ್ಕಳನ್ನು ಅಕ್ಷರವಂತರಾಗಿ ಮಾಡಿದಾಗ ಮಾತ್ರ ದೇಶದ ಹಾಗೂ ಸಮಾಜದ ಪ್ರಗತಿಗೆ ಸಾಧ್ಯ ಎಂದು ಜೆಡಿ ಎಸ್ ಮುಖಂಡ ಬಿ.ಡಿ.ಪಾಟೀಲ ಹೇಳಿದರು.ಪಟ್ಟಣದ ಶ್ರೀ ಹಡಪದ ಅಪ್ಪಣ್ಣ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ೧೫ನೇಯ ವಾರ್ಷಿಕ ಸಮ್ಮೇಳನದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ನಗರದಲ್ಲಿ ಶ್ರೀ ಹಡಪದ ಅಪ್ಪಣ್ಣನವರ ಶಿಕ್ಷಣ ಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದರು.ಸಾನಿಧ್ಯ ವಹಿಸಿದ ಅಭಿನವ ರಾಚೋಟೇಶ್ವರ ಶ್ರೀಗಳು ಮಾತನಾಡಿದರು.ವೇದಿಕೆಯ ಮೇಲೆ ದಯಾನಂದ ಹಿರೇಮಠ, ಸಂಸ್ಥೆಯ ಅಧ್ಯಕ್ಷ ಸಂತೋಷ ಗೌಳಿ, ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದರಾಯ ಅಪ್ತಾಗಿರಿ, ಎನ್ ಎಸ್.ಕಟ್ಟಿಮನಿ, ಆಯ್,ಜಿ ಆಳೂರ, ಪಂಡಿತ ಬಿರಾದಾರ, ಮುಖ್ಯ ಗುರು ಎ.ಎಸ್.ಬೋರಾಮಣಿ, ಮುಖ್ಯ ಗುರುಮಾತೆಯರಾದ ಜಯಶ್ರೀ.ಟಿ.ಗೌಡ, ಕುಮಾರಿ ಭವಾನಿ ಗೌಡ, ಶ್ರೀದರ ಹಿಪ್ಪರಗಿ, ಸಿದ್ದಪ್ಪ ಗುನ್ನಾಪೂರ, ನಿರ್ದೇಶಕರಾದ ನಟರಾಜ್ ಗೌಳಿ, ಬಸವರಾಜ ನಾವಿ, ಧೂಳಪ ನಾವಿ, ಶಿವಾನಂದ ನಾವಿ, ನಾರಾಯಣ ರಾಠೋಡ, ಸಾಯಬಣ್ಣ ನಾವಿ, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.
ಇಂಡಿ: ಕನ್ನಡವೇ ಸತ್ಯ-ಕನ್ನಡವೇ ನಿತ್ಯ, ಕನ್ನಡ ಕನ್ನಡ ಬನ್ನಿ ನಮ್ಮ ಸಂಗಡ ಎಂಬ ಮುಂತಾದ ಕನ್ನಡ ಜಯಘೋಷಗಳೊಂದಿಗೆ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕನ್ನಡದ ಮನಸ್ಸುಗಳು ಕನ್ನಡ ರಥಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಿದವು.ರವಿವಾರ ಸಂಜೆ ಗ್ರಾಮದಲ್ಲಿ ತಾಲ್ಲೂಕು ಆಡಳಿತ ವರ್ಗ,ಗ್ರಾಮ ಪಂಚಾಯಿತಿ, ಹಿರೇರೂಗಿ ಕ್ಲಸ್ಟರ್ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಿ,ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆ ಮಾಡಲಾಯಿತು.ವಿವಿಧ ಮಹನೀಯರ ವೇಷಭೂಷಣ ತೊಟ್ಟ ಶಾಲಾ ಮಕ್ಕಳು, ಕುಂಭ-ಕಳಸ-ಆರತಿ ಹೊತ್ತ ಮಹಿಳೆಯರು, ಡೊಳ್ಳು ಕುಣಿತ, ಕರಡಿ ಮಜಲು, ಮಹಿಳೆಯರ ಕೋಲಾಟ ಮೆರವಣಿಗೆಯ ವಿಶೇಷವಾಗಿತ್ತು. ಕನ್ನಡ ಭಾವುಟ ಹಾರಾಡಿಸುತ್ತಾ ಕನ್ನಡಾಭಿಮಾನಿಗಳು ಕುಣಿದು ಕುಪ್ಪಳಿಸುತ್ತಾ, ರಸ್ತೆಯುದ್ಧಕ್ಕೂ ಕನ್ನಡ ಪರ ಘೋಷಣೆಗಳನ್ನು ಮೊಳಗಿಸಿದರು.ತಾಲೂಕ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಾಬು ರಾಠೋಡ ಮಾತನಾಡಿದರು.ಹಿರೇರೂಗಿ ಪಿಡಿಓ ಬಸವರಾಜ ಬಬಲಾದ, ಶಿಕ್ಷಕ ಸಂತೋಷ ಬಂಡೆ ಮಾತನಾಡಿದರು.ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡಗಡ್ಡಿ, ಕಂದಾಯ ನಿರೀಕ್ಷಕ ಎಚ್ ಎಸ್ ಗುನ್ನಾಪುರ, ಗ್ರಾಮ ಆಡಳಿತಾಧಿಕಾರಿ ಶ್ರೀಶೈಲ ಹಂಚಿನಾಳ, ಯುವ ಮುಖಂಡರಾದ ಪರಶುರಾಮ ಹೊಸಮನಿ, ಸಂತೋಷ ಕೋಟಗೊಂಡ,…
ವಿಜಯಪುರ: ಕಾಂಗ್ರೆಸ್ ಸರ್ಕಾರ ಸಿದ್ಧಸಿರಿ ಸಕ್ಕರೆ ಹಾಗೂ ಎಥೆನಾಲ್ ಕಾರ್ಖಾನೆ ಮುಚ್ಚಲು ನೀಡಿದ್ದ ನೋಟಿಸ್ ಹಾಗೂ ಮುಚ್ಚುವ ಷಡ್ಯಂತರಕ್ಕೆ ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯ ಸೋಮವಾರ ತಡೆ ನೀಡಿದೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕಾರ್ಖಾನೆ ಅಧ್ಯಕ್ಷರು ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು, ಕಾರ್ಖಾನೆಯನ್ನು ನಂಬಿರುವ ಸಾವಿರಾರು ರೈತರು, ಉದ್ಯೋಗಿಗಳ ಬಗ್ಗೆ ಎಳ್ಳಷ್ಟು ಕರುಣೆ ತೋರದೆ ಹಾಗೂ ರಾಜಕೀಯವಾಗಿ ಎದುರಿಸಲಾಗದೆ, ನೋಟಿಸ್ ನೀಡಿರುವವರ ಹುನ್ನಾರಕ್ಕೆ ಉಚ್ಛ ನ್ಯಾಯಾಲಯ ತಡೆ ನೀಡಿದೆ.ಕಳೆದ ಎರಡು ವರ್ಷಗಳಿಂದ ಇಲ್ಲದಿದ್ದ ಮಾಲಿನ್ಯ ಈಗ ಈ ಕುರುಡ ಸರ್ಕಾರಕ್ಕೆ ಕಾಣಿಸಿದೆ. ನೋಟಿಸ್ ಹಿಂದೆ ಇರುವ ಭ್ರಷ್ಟರ ವಿರುದ್ಧ ಹೋರಾಟ ಇನ್ನೂ ಇಮ್ಮಡಿಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.
ವಿಜಯಪುರ: ನಗರದ ಕನಕದಾಸ ಬಡಾವಣೆಯಲ್ಲಿರುವ ಐರಿಶ್ ಎಜುಕೇಶನಲ್ ಅಕ್ಯಾಡೆಮಿಯಲ್ಲಿ ರಾಜ್ಯೋತ್ಸವ ನಿಮಿತ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭ ಐರಿಶ್ ಶಾಲೆಯ ಮುಖ್ಯಸ್ಥೆ ಶ್ರೀಮತಿ ದೀಪಾ ಆದಿತ್ಯ ಗೋಟಸಗಿ ಮಾತನಾಡಿ, ಮಕ್ಕಳಿಗೆ ಕ್ರೀಯಾತ್ಮಕ ಚುಟವಟಿಕೆಗಳ ಶಿಕ್ಷಣ ಅವಶ್ಯಕತೆ ಇದೆ. ಮಕ್ಕಳ ಬೌದ್ದಿಕ ಮತ್ತು ದೈಹಿಕ ಶಿಕ್ಷಣದಿಂದ ಮಕ್ಕಳು ಸದೃಢವಾಗಿ ಬೆಳೆಯಬೇಕು. ಈಗಿಂದಲೇ ಮಕ್ಕಳಿಗೆ ಸಂಸ್ಕಾರ ನೀಡಿ ಒಳ್ಳೆಯ ಪ್ರಜೆಗಳನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲೆ ಇದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಮಕ್ಕಳಿಗಾಗಿ ವಿವಿಧ ಕಾರ್ಯಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು. ಮಕ್ಕಳು ಸಸ್ಯದ ಭಾಗಗಳ ಕಲಾ ಕೃತಿಗಳನ್ನು ಪ್ರದರ್ಶಿಸಿದರು.ಕಾರ್ಯಕ್ರಮದಲ್ಲಿ ವಿಜುಗೌಡ ಕಾಳಶೆಟ್ಟಿ , ಶಿಕ್ಷಕಿಯರಾದ ಶ್ರೀಮತಿ ಧನಲಕ್ಷ್ಮೀ ದೊಡಮನಿ, ಶೃತಿ ಗಾಯಕವಾಡ ಹಾಗೂ ಭೋದಕ ಭೋದಕೇತರ ಸಿಬ್ಬಂದಿ ಹಾಜರಿದ್ದರು.
ಕನಮಡಿಯಲ್ಲಿ 110ಕೆ.ವಿ. ವಿದ್ಯುತ್ ವಿತರಣೆ ಕೇಂದ್ರಕ್ಕೆ ಭೂಮಿಪೂಜೆ ಸಲ್ಲಿಸಿದ ಸಚಿವ ಎಂ.ಬಿ.ಪಾಟೀಲ ಮಾಹಿತಿ ವಿಜಯಪುರ: ಜಿಲ್ಲೆಯಲ್ಲಿ ನೀರಾವರಿ ಜೊತೆಗೆ ವಿದ್ಯುತ್ ಕ್ಷೇತ್ರದಲ್ಲಿಯೂ ಕ್ರಾಂತಿಕಾರಿ ಕೆಲಸಗಳಾಗಿದ್ದು ವಿಜಯಪುರವನ್ನು ದೇಶದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕನಮಡಿ ಗ್ರಾಮದಲ್ಲಿ ಕೆಪಿಟಿಸಿಎಲ್ ವತಿಯಿಂದ ನಿರ್ಮಿಸಲಾಗುತ್ತಿರುವ 110 ಕೆ.ವಿ. ವಿದ್ಯುತ್ ವಿತರಣೆ ಕೇಂದ್ರಕ್ಕೆ ಭೂಮಿಪೂಜೆ ರವಿವಾರ ಸಂಜೆ ನೆರವೇರಿಸಿ ಅವರು ಮಾತನಾಡಿದರು.ವಿದ್ಯುತ್ ಕ್ಷೇತ್ರದಲ್ಲಿ ಕಳೆದ 65 ವರ್ಷಗಳಲ್ಲಿ ಎಷ್ಟು ಕೆಲಸ ನಡೆದಿವೆಯೋ ಅಷ್ಟೇ ಪ್ರಮಾಣದ ಕೆಲಸಗಳು ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿವೆ. ರೈತರಿಗೆ ನೀರಿನ ಜೊತೆ ವಿದ್ಯುತ್ ಕೂಡ ಅಷ್ಟೇ ಅಗತ್ಯವಾಗಿದೆ. ಈಗ ಕನಮಡಿಯಲ್ಲಿ ಸುಮಾರು ರೂ. 20 ಕೋ. ವೆಚ್ಚದಲ್ಲಿ ವಿದ್ಯುತ್ ಕೇಂದ್ರ ನಿರ್ಮಿಸಲಾಗುತ್ತಿದ್ದು, ಸಪ್ಟೆಂಬರ್ ವೇಳೆಗೆ ಪೂರ್ಣವಾಗಲಿದೆ. ಆಗ ಈ…
ವಿಜಯಪುರ: ಗಮಕ ಕಲೆಯು ಪ್ರಾಚೀನ ಕಾಲದಿಂದಲೂ ಅಸ್ತಿತ್ವದಲ್ಲಿದ್ದು ೬೪ ಕಲೆಗಳಲ್ಲಿ ಒಂದಾಗಿದೆ. ಇದನ್ನು ಉಳಿಸಿ ಬೆಳೆಸುವ ಹೊಣೆ ಇಂದಿನ ಯುವ ಗಮಕ ಕಲಾದರ ಮೇಲಿದೆ ಎಂದು ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ಕನ್ನಡ ವಿಭಾಗ ಕರ್ನಾಟಕ ಗಮಕ ಕಲಾ ಪರಿಷತ್ತು (ರಿ) ಬೆಂಗಳೂರು, ಜಿಲ್ಲಾ ಘಟಕ ವಿಜಯಪುರ, ಸಹಯೋಗದಲ್ಲಿ “ಮಹಾಕವಿ ಕುಮಾರವ್ಯಾಸ ಜಯಂತಿ ಹಾಗೂ ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಮಕ ಇಂದು ಮರೆಯಾಗುತ್ತಿದ್ದು, ಅದರ ಉಳಿವು ಅಗತ್ಯವಾಗಿದೆ. ಶಾಲಾ ಕಾಲೇಜುಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಅಯೋಜಿಸುವ ಮೂಲಕ ಗಮಕ ಪರಂಪರೆಯನ್ನು ಮುಂದುವರೆಸುವ ಅಗತ್ಯವಿದೆ ಎಂದು ಹೇಳಿದರು.ಪ್ರಾಚಾರ್ಯ ಡಾ. ಆರ್.ಎಂ.ಮಿರ್ದೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಗಮಕ ಕಲೆಯು ಹೆಚ್ಚು ಹೆಚ್ಚು ಮುನ್ನೆಲೆಗೆ ಬರಬೇಕಾಗಿದೆ. ಇದು ಕಾಲೇಜು ಹಂತದಲ್ಲಿ ನಡೆಯುತ್ತಾ ಸಾಗಿದರೆ ವಿದ್ಯಾರ್ಥಿಗಳಿಗೆ ಪ್ರಾಚೀನ ಕನ್ನಡ ಕಾವ್ಯಗಳ…
Udayarashmi kannada daily newspaper
ವಿಜಯಪುರ: ಜಿಲ್ಲಾ ವ್ಯಾಪ್ತಿಯ ಅರ್ಹ ವಿಕಲಚೇತನರಿಗೆ ಪ್ರಸಕ್ತ ಸಾಲಿನಲ್ಲಿ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ವಿತರಿಸುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ ೧೫ ಕೊನೆಯ ದಿನವಾಗಿದೆ.ಕುಟುಂಬ ವಾರ್ಷಿಕ ಆದಾಯ ರೂ.೨ ಲಕ್ಷ ಒಳಗಿರಬೇಕು. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ಪಡೆದಿರಬೇಕು. ದೈಹಿಕ ವಿಕಲಚೇತನರ ಶೇ.೭೫ರಷ್ಟು ಇದಕ್ಕಿಂತ ಹೆಚ್ಚಿನ ವಿಕಲಚೇತನ ಹೊಂದಿದ ಯಂತ್ರ ಚಾಲಿತ ದ್ವಿಚಕ್ರ ವಾಹನ ಚಾಲನೆ ಮಾಡುವ ಸಾಮರ್ಥ್ಯ ಹೊಂದಿದ, ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಚಲಾಯಿಸಲು ಇತರೇ ಎಲ್ಲಾ ರೀತಿಯಲ್ಲಿ ಸದೃಢರಾಗಿರುವ ವಿಕಲಚೇತನರಾಗಿರಬೇಕು. ಸರ್ಕಾರದಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆದಿರಬಾರದು.ಹೆಚ್ಚಿನ ಮಾಹಿತಿಗಾಗಿ ವಿಜಯಪುರ – ರವಿ ರಾಠೋಡ ( ಮೊ.೯೦೩೫೫೫೩೩೩೭), ಇಂಡಿ – ಪರಶುರಾಮ ಭೋಸಲೆ (ಮೊ.೯೯೭೨೪೪೧೪೬೪), ಸಿಂದಗಿ – ಮುತ್ತುರಾಜ ಸಾತಿಹಾಳ (ಮೊ.೯೯೮೦೦೧೯೬೩೫), ಬಸವನ ಬಾಗೇವಾಡಿ – ಎಸ್. ಡಿ ಬಿರಾದಾರ (ಮೊ.೮೭೨೨೧೩೫೬೬೦) ಹಾಗೂ ಮುದ್ದೇಬಿಹಾಳ – ಎಸ್.ಕೆ. ಘಾಟಿ (ಮೊ.೯೭೪೦೬೮೨೯೭೯) ಕಚೇರಿ ದೂರವಾಣಿ ಸಂಖ್ಯೆ ೦೮೩೫೨-೭೯೬೦೬೦ಗೆ ಸಂಪರ್ಕಿಸುವಂತೆ…
