Author: editor.udayarashmi@gmail.com

ನಿಡಗುಂದಿ: ವಿಜಯಪುರ ಜಿಲ್ಲೆಯ ಪ್ರಸಿದ್ಧ ಜಾನಪದ ಕಲಾವಿದ, ತತ್ವಪದಕಾರ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಿಡಗುಂದಿ ತಾಲೂಕು ಮುದ್ದಾಪುರ ಗ್ರಾಮದ ದಿ.ವೀರಭದ್ರಪ್ಪ ದಳವಾಯಿಯವರ ನಿಧನ ಜಿಲ್ಲೆಯ ಜಾನಪದ ಲೋಕಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಎಸ್ ಪಾಟೀಲ (ಪಡಗಾನೂರ) ಸಂತಾಪ ತಿಳಿಸಿದ್ದಾರೆ.ಮೃತ ವೀರಭದ್ರಪ್ಪ ದಳವಾಯಿಯವರು ರಾಜ್ಯ – ರಾಷ್ಟ್ರ ಮಟ್ಟದಲ್ಲಿ ಕಲಾ ಪ್ರದರ್ಶನ ನೀಡಿ ತಂಬೂರಿಯ ತಾಕತ್ತು ಮೆರೆದಿದ್ದಾರೆ. ತತ್ವಪದ, ಭಜನೆಪದ, ಹಂತಿಪದ, ಹೋಳಿಪದ ಹೀಗೆ ಹಲವಾರು ಜನಪದ ಪ್ರಕಾರಗಳಲ್ಲಿ ಹಾಡಿ ಸೈ ಎನಿಸಿಕೊಂಡಿದ್ದಾರೆಮೃತರು ತತ್ವಪದ ಹಾಡುಗಾರರಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪ್ರದರ್ಶನ ನೀಡಿದ್ದಾರೆ. ಕಳೆದ ವರ್ಷ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ದೊರೆತಾಗ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ವತಿಯಿಂದ ಜ್ಞಾನಯೋಗಾಶ್ರಮದಲ್ಲಿ ಸನ್ಮಾನ ಸಮಾರಂಭ ಏರ್ಪಡಿಸಿ ಗೌರವಿಸಲಾಗಿದೆ.

Read More

ವಿಜಯಪುರ: ನಗರ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ರೂ.೨ ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಾ.ನಂ.೨ರ ಅಫಜಲಪೂರ ಟಕ್ಕೆ ಹನುಮಾನ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ (ಹೆಚ್ಚುವರಿ) ರೂ.೧೦ ಲಕ್ಷ, ವಾ.ನಂ.೫ರ ಆದರ್ಶ ನಗರದ ಬಸವಣ್ಣ ದೇವಸ್ಥಾನ ಹತ್ತಿರ ಒಳಾಂಗಣ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ (ಹೆಚ್ಚುವರಿ) ರೂ.೧೦ ಲಕ್ಷ, ವಾ.ನ.೬ರ ಕೆ.ಎಚ್.ಬಿ ಕಾಲೊನಿಯ ಸಾಯಿ ಬಾಬಾ ದೇವಸ್ಥಾನ ಹತ್ತಿರ ಒಳಾಂಗಣ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ (ಹೆಚ್ಚುವರಿ) ರೂ.೧೦ ಲಕ್ಷ, ವಾ.ನಂ.೬ರ ಕೆ.ಸಿ ನಗರದ ಹನುಮಾನ ದೇವಸ್ಥಾನ ಹತ್ತಿರ ಒಳಾಂಗಣ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ (ಹೆಚ್ಚುವರಿ) ರೂ.೫ ಲಕ್ಷ, ವಾ.ನಂ.೬ರ ಕಲಾಲ ಗಲ್ಲಿ ಸೂರ್ಯವಂಶ ಕ್ಷತ್ರೀಯ ಕಲಾಲ ಖಾಟಿಕ ಸಮಾಜ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ (ಹೆಚ್ಚುವರಿ) ರೂ.೧೦ ಲಕ್ಷ, ವಾ.ನಂ.೧೪ ಶಹಾಪೇಠ ಗಲ್ಲಿಯ ಮಹಾದೇವ ದೇವಸ್ಥಾನದ…

Read More

ಇಂಡಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ವೇಳೆ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಮತ್ತು ಹೋರ್ತಿ ಪಿಎಸ್ಐ ಹಾಗೂ ಪೊಲೀಸರು ದಾಳಿಗೈದು ಸಾವಿರಾರು ರೂ. ಮೌಲ್ಯದ ಅಕ್ಕಿ ವಶಕ್ಕೆ ಪಡೆದುಕೊಂಡಿರುವ ಘಟನೆ ತಾಲ್ಲೂಕಿನ ಇಂಚಗೇರಿ ಗ್ರಾಮದ ಬಳಿ ನಡೆದಿದೆ.ಮಂಜುನಾಥ ಅಳ್ಳೋಳ್ಳಿ ಬಂಧಿತ ಆರೋಪಿ. ರಾಹುಲ್ ಪವಾರ್ ಎಂಬಾತ ಪರಾರಿಯಾಗಿದ್ದಾನೆ. ಇನ್ನು ಬಂಧಿತ ಆರೋಪಿಯಿಂದ 14,952 ಮೌಲ್ಯದ 623 ಕೆಜಿ ಅಕ್ಕಿ, ಒಂದು ಬೈಕ್, ಒಂದು ತಾಡಪತ್ರಿ, ಒಂದು ಮಷಿನ್ ಜಪ್ತಿಗೈದಿದ್ದಾರೆ. ಅಲ್ಲದೇ, ಆರೋಪಿ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.ಹೊರ್ತಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಅಧಿಕಾರಿಗಳಿಗೆ ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಸೂಚನೆ ವಿಜಯಪುರ: ಕಾರ್ಮಿಕ ಕಲ್ಯಾಣಕ್ಕಾಗಿ ಸರ್ಕಾರ ರೂಪಿಸಿರುವ ಹಲವು ಯೋಜನೆ-ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ನೈಜ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಿಸಲು ಕ್ರಮ ವಹಿಸುವಂತೆ ಕಾರ್ಮಿಕ ಖಾತೆ ಸಚಿವರಾದ ಸಂತೋಷ್ ಲಾಡ್ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಹೊಸ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ನೋಂದಾಯಿಸಿರುವ ಕಾರ್ಮಿಕರಿಗೆ ಹಲವು ಯೋಜನೆಗಳಿದ್ದು, ಇದರ ಲಾಭ ನೈಜ ಫಲಾನುಭವಿಗೆ ತಲುಪುತ್ತಿರುವ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಕಾರ್ಮಿಕ ಇಲಾಖೆ ಯೋಜನೆಯ ದುರುಪಯೋಗವಾಗದಂತೆ ನೋಡಿಕೊಂಡು ನೈಜ ಕಾರ್ಮಿಕರಿಗೆ ಸವಲತ್ತುಗಳು ದೊರೆಯುವಂತೆ ಕ್ರಮ ವಹಿಸಬೇಕು. ಕಾರ್ಮಿಕರಿಗಿರುವ ವಿವಿಧ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.ಜಿಲ್ಲೆಯಲ್ಲಿ ಬಾಲಕಾರ್ಮಿಕರ ರಕ್ಷಣೆ  ಪ್ರಕರಣವನ್ನು ವಿಶೇಷವಾಗಿ ಪರಿಗಣನೆಗೆ ತೆಗೆದುಕೊಂಡು ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೇ ಕಾರ್ಯ ಕೈಗೊಳ್ಳಲಾಗಿದ್ದು, ಸರ್ವೇ ಅಂಕಿ ಅಂಶಗಳ ಪ್ರಕಾರ ಕೇವಲ ೧೨೩ ಮಕ್ಕಳು ಶಾಲೆಯಿಂದ…

Read More

ದೇವರಹಿಪ್ಪರಗಿ: ಕೃಷಿ ಚಟುವಟಿಕೆ ಹಾಗೂ ಕುಡಿಯುವ ನೀರಿನ ಅನುಕೂಲಕ್ಕಾಗಿ ಚಿಮ್ಮಲಗಿ ಮುಖ್ಯ ಕಾಲುವೆಯ ನಾಗಠಾಣ ಉಪಕಾಲುವೆಗೆ ನೀರು ಹರಿಸಿ ಈ ಭಾಗದ ಕೆರೆಗಳ ಭರ್ತಿಗೆ ಶಾಸಕ ರಾಜುಗೌಡ ಪಾಟೀಲ (ಕುದರಿ ಸಾಲವಾಡಗಿ) ಆಸಕ್ತಿ ವಹಿಸಿ ಕೂಡಲೇ ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ರೈತರು, ಗ್ರಾಮಸ್ಥರು ಆಗ್ರಹಿಸಿದ್ದಾರೆ.ಮಂಗಳವಾರ ಪತ್ರಿಕೆಯೊಂದಿಗೆ ತಾಲ್ಲೂಕು ರೈತಸಂಘದ ಅಧ್ಯಕ್ಷ ಅಜೀಜ್ ಯಲಗಾರ ಹಾಗೂ ಬಸವರಾಜ ಕಲ್ಲೂರ (ಮುಳಸಾವಳಗಿ) ಮಾತನಾಡಿ, ತಾಲ್ಲೂಕಿನಲ್ಲಿ ಹರಿಯುವ ಮುಳವಾಡ ಏತ ನೀರಾವರಿ ಕಾಲುವೆಗೆ ಸತತವಾಗಿ ನೀರು ಹರಿಸಲಾಗುತ್ತಿದೆ. ಆದರೆ ತಾಲ್ಲೂಕಿನ ಗಂಗನಳ್ಳಿ ಗ್ರಾಮದವರೆಗೆ ನೀರು ಸಂಪರ್ಕಿಸುವ ನಾಗಠಾಣ ಉಪಕಾಲುವೆ ನೀರು ಹರಿಯದೇ ಭಣಗುಡುತ್ತಿದೆ. ಈ ಕಾಲುವೆಯ ನೀರಿನ ಮೇಲೆ ಅವಲಂಬಿತವಾದ ಕೃಷಿಕರು ವ್ಯವಸ್ಥೆಯ ತಾರತಮ್ಯ ನೀತಿಯಿಂದ ನೀರಿಗಾಗಿ ಪರಿತಪಿಸುವಂತಾಗಿದೆ.ಚಿಮ್ಮಲಗಿ ಏತ ನೀರಾವರಿಯ ನಾಗಠಾಣ ಉಪಕಾಲುವೆಯಲ್ಲಿ ಸುಮಾರು ೧೪೬ ಕಿ.ಮೀ ನೀರು ಹರಿಯಬೇಕು. ನಿನ್ನೆಯಷ್ಟೇ ಮಾಜಿಶಾಸಕ ಸೋಮನಗೌಡ ಪಾಟೀಲ ಸಾಸನೂರ ಕೆಬಿಜೆಎನ್‌ಎಲ್ ಅಧಿಕಾರಿಗಳಲ್ಲಿ ಮನವಿಮಾಡಿ ೨ ಮೋಟಾರ್‌ಗಳ ಮೂಲಕ ನೀರು ಹರಿಸಲು ಕ್ರಮಕೈಗೊಂಡಿದ್ದಾರೆ. ಆದರೆ ಕಾಲುವೆಯ ಕೊನೆಯ…

Read More

ಟಾಸ್ಕಫೋರ್ಸ ಸಮಿತಿ ಸಭೆಯಲ್ಲಿಶಾಸಕ ಯಶವಂತರಾಯಗೌಡ ಪಾಟೀಲ ಸೂಚನೆ ಇಂಡಿ: ತಾಲೂಕಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬರುವ ದಿನಗಳಲ್ಲಿ ಮತ್ತು ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗಬಹುದು. ಹೀಗಾಗಿ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಲು ಶಾಸಕ ಯಶವಂತರಾಯಗೌಡ ಪಾಟೀಲರು ಸೂಚಿಸಿದರು.ಪಟ್ಟಣದ ಮಿನಿ ವಿಧಾನಸೌಧ ಸಭಾಭವನದಲ್ಲಿ ಕುಡಿಯುವ ನೀರಿನ ಕುರಿತು ಟಾಸ್ಕಫೋರ್ಸ ಸಮಿತಿಯಿಂದ ನಡೆದ ಗ್ರಾ.ಪಂ ಅಧ್ಯಕ್ಷ ಮತ್ತು ಪಿಡಿಒ ಇವರ ಸಭೆಯಲ್ಲಿ ಮಾತನಾಡಿದರು.೩೮ ಗ್ರಾ.ಪಂ ಗಳಲ್ಲಿ ಜಲಮೂಲ ಇಲ್ಲದ ಕಡೆ ಹೆಚ್ಚು ಕುಡಿಯುವ ನೀರಿನ ಸಮಸ್ಯೆ ಇರುವ ಮತ್ತು ಕಡಿಮೆ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ವಿಂಗಡಿಸಿ ಅದಕ್ಕೆ ತಕ್ಕಂತೆ ಕ್ರಮವಹಿಸಬೇಕಾಗಿದೆ. ಅಡವಿ ವಸ್ತಿಯವರಿಗೆ ಮತ್ತು ತಾಂಡಾಗಳಿಗೆ ತೊಂದರೆಯಾಗದಂತೆ ಮುನ್ನಚರಿಕೆ ವಹಿಸಲು ಕೇಳಿಕೊಂಡರು.ಲಚ್ಯಾಣ ಬಾಲಕಿಯರ ವಸತಿ ನಿಲಯಕ್ಕೆ ಬಿಸಿ ನೀರಿನ ವ್ಯವಸ್ಥೆ ಮತ್ತು ಝಳಕಿಯ ಪ್ರಥಮ ದರ್ಜೆ, ಪಾಲಿಟೆಕ್ನಿಕ್ ಮತ್ತು ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ತೊಂದರೆ ಇದ್ದು ತಮ್ಮ ಅನುದಾನದಲ್ಲಿ ತಲಾ ಐದು ಲಕ್ಷ ಅನುದಾನ ನೀಡುತ್ತಿದ್ದು, ಕೆಲಸ…

Read More

ಮಾನವ ಹಕ್ಕುಗಳ ಬಗ್ಗೆ ಅರಿವು ಮತ್ತು ರಕ್ಷಣೆ ಕಾರ್ಯಾಗಾರದಲ್ಲಿ ಎಎಸ್ಪಿ ಶಂಕರ ಮಾರಿಹಾಳ ಅಭಿಮತ ವಿಜಯಪುರ: ಮಾನವ ಹಕ್ಕುಗಳು ಪ್ರತಿಯೊಬ್ಬರಿಗೆ ದಯಪಾಲಿಸಲಾದ ಅತ್ಯಂತ ಮೂಲಭೂತ ಹಕ್ಕುಗಳಾಗಿವೆ. ಪ್ರತೀ ವ್ಯಕ್ತಿಗೂ ಹುಟ್ಟಿನಿಂದ ಅವರ ಮರಣದವರೆಗೂ ಕೆಲವು ಹಕ್ಕುಗಳು ಮತ್ತು ಸ್ವಾತಂತ್ರ್ಯ ಇರುತ್ತದೆ; ಅವುಗಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿರುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ನುಡಿದರು.ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿನಿರ್ದೇಶನದಂತೆ, ನಗರ ಪೋಲಿಸ ಉಪವಿಭಾಗದ ಡಿಎಸ್ಪಿ ಅವರು ನಗರದ ಪೊಲೀಸ ಚಿಂತನ ಸಭಾಂಗಣದಲ್ಲಿ ಪೋಲಿಸ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಏರ್ಪಡಿಸಿದ್ದ ಒಂದು ದಿನದ ಮಾನವ ಹಕ್ಕುಗಳ ಬಗ್ಗೆ ಅರಿವು ಮತ್ತು ರಕ್ಷಣೆ ಕಾರ್ಯಾಗಾರ ಮತ್ತು ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪೊಲೀಸ ಸಿಬ್ಬಂದಿ ಮಾನವ ಹಕ್ಕುಗಳ ಅರಿತುಕೊಂಡು, ಸಾರ್ವಜನಿಕರ ಜೊತೆ ಅವರ ಹಕ್ಕುಗಳ ಉಲ್ಲಂಘನೆಯಾಗದಂತೆ ನಡೆದುಕೊಂಡು ಸಮಾಜದ ಸ್ವಾಸ್ತ್ಯ ಕಾಪಾಡಬೇಕು. ಅಪರಾಧ ತಡೆಗಟ್ಟುವಿಕೆ ಮತ್ತು ಪತ್ತೆ, ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಯಲ್ಲಿ ಅಗತ್ಯವಿರುವವರಿಗೆ ಮಾನವೀಯ ಸಹಾಯವನ್ನು ಸಲ್ಲಿಸುವುದು ಮಾನವ…

Read More

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ಮನವಿ ವಿಜಯಪುರ: ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು, ಕಾರ್ಮಿಕರ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವಂತೆ ಅವರಿಗೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸುವ ಅಗತ್ಯವಿದೆ. ಅದನ್ನು ತಾವು ಮೊದಲ ಆದ್ಯತೆಯ ಮೇರೆಗೆ ಅಂತಹ ಮಕ್ಕಳಿಗೆ ವಿಶೇಷ ಸೌಲಭ್ಯ ಕಲ್ಪಿಸುವಂತೆ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ ವಿನಂತಿಸಿಕೊಂಡರು.ಮಂಗಳವಾರ ನಗರದಲ್ಲಿರುವ ಪಕ್ಷದ ಕಾರ್ಯಾಲಯಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್ ಅವರನ್ನುಪಕ್ಷದ ಪರವಾಗಿ ಸನ್ಮಾನಿಸಿ ಅವರು ಮಾತನಾಡಿದರು.ಕಾರ್ಮಿಕರ ಮಕ್ಕಳ ಹಾಗೂ ಅದರಲ್ಲಿಯೂ ವಿಶೇಷವಾಗಿ ತಂದೆ ತಾಯಿ ಕಳೆದುಕೊಂಡ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುವ ಯೋಜನೆಗಳನ್ನು ರೂಪಿಸಬೇಕೆಂದು ಸಚಿವ ಲಾಡ್ ಅವರಲ್ಲಿ ಮನವಿ ಮಾಡಿದರು.ಮನವಿಗೆ ಸ್ಪಂದಿಸಿದ ಸಚಿವ ಲಾಡ್ ಅವರು, ಅಂತಹ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.ಜಿಲ್ಲಾಧ್ಯಕ್ಷ ರಾಜು ಆಲಗೂರ, ಶಾಸಕ ವಿಠಲ್ ಕಟಕದೊಂಡ್, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಮುಖಂಡರು…

Read More

ಕಾವೇರಿ ಪ್ರಾಧಿಕಾರದ ತೀರ್ಪು ಖಂಡಿಸಿ ಹೋರಾಟ ಮುಂದುವರಿಕೆ | ಮು.ಚಂದ್ರು ಸ್ಪಷ್ಠನೆ ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅವೈಜ್ಞಾನಿಕ ತೀರ್ಪು ಖಂಡಿಸಿ ಹೋರಾಟ ಮುಂದುವರಿದಿದ್ದು, ಸಮಸ್ಯೆ ಬಗೆಹರಿಯುವ ತನಕ ಪ್ರತಿನಿತ್ಯ ಮೌನ ಧರಣಿ ಮುಂದುವರಿಸಲು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಹಾಗೂ ರೈತ ಮುಖಂಡ ಕುರುಬೂರು ಚಂದ್ರಶೇಖರ್‌ ಅವರ ನೇತೃತ್ವದ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ತೀರ್ಮಾನಿಸಿದೆ.ಗಾಂಧಿ ಜಯಂತಿಯ ಅಂಗವಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ನಡೆದ ಮೌನ ಧರಣಿ ಬಳಿಕ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಸಂಘಟನೆಗಳು ಸರದಿಯಂತೆ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ‘ಕಾವೇರಿ ನಮ್ಮದು’ ಧರಣಿ ಸತ್ಯಾಗ್ರಹ ನಡೆಸಲಿವೆ.ಶಿಸ್ತುಬದ್ಧ ಹೋರಾಟದ ದೃಷ್ಟಿಯಿಂದ ನಾಲ್ವರನ್ನು, ಎಎಪಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಮೋಹನ್‌, ಹೋರಾಟಗಾರರಾದ ಗುರುದೇವ್‌ ನಾರಾಯಣ್‌, ಹತ್ತಳ್ಳಿ ದೇವರಾಜ್‌, ಕೆ.ಕೆ.ಮೋಹನ್‌ ಅವರನ್ನು ಉಸ್ತುವಾರಿಗಳಾಗಿ ನೇಮಕ ಮಾಡಲಾಗಿದೆ. ಧರಣಿ…

Read More

– ಮಂಡ್ಯ ಮ.ನಾ.ಉಡುಪಸ್ಫೂರ್ತಿ ಒಂದೂರಿನಲ್ಲಿ ಒಬ್ಬ ರಾಜನಿದ್ದ. ಅವನ ಸೇನೆಯಲ್ಲಿ ನೂರಾರು ಕುದುರೆ, ಒಂಟೆ, ಆನೆ, ಕಾಲಾಳುಗಳಿದ್ದವು. ರಾಜನಿಗೆ ಒಂದು ಆನೆಯ ಮೇಲೆ ಬಲು ಪ್ರೀತಿ. ಯುದ್ಧವಾಗಲಿ, ಮತ್ತೇನೇ ಆಗಲಿ, ತಾಳ್ಮೆಯಿಂದ ಶ್ರದ್ಧೆಯಿಂದ ತನ್ನ ಕೆಲಸ ಮಾಡಿಕೊಂಡು ಬರುತ್ತಿತ್ತು.ಹೀಗಿರುವಾಗ ಆನೆಗೆ ಕೂಡ ವಯಸ್ಸಾಗ್ತಾ ಬಂತು. ಕೆಲ್ಸ ಮಾಡೋ ಕ್ಷಮತೆ ಕುಂದಿದಂತೆ ಕಾಣ ತೊಡಗಿತು. ರಾಜ ಇನ್ನು ಈ ಆನೆಗೆ ತೊಂದರೆ ಕೊಡುಬಾರದೆಂದು ಅದಕ್ಕೆ ಕೆಲಸ ಕೊಡುವುದನ್ನು ನಿಲ್ಲಿಸಲು ಹೇಳಿದ. ಆನೆ ಮಂಕಾಗತೊಡಗಿತು. ಒಮ್ಮೆ ನೀರು ಕುಡಿಯಲು ಹೋದ ಆನೆ ಕೆಸರಿನಲ್ಲಿ ಸಿಕ್ಕಿಕೊಂಡು ಬಿಟ್ಟಿತು. ಎಷ್ಟೇ ಪ್ರಯತ್ನ ಪಟ್ಟರೂ ಹೊರ ಬರಲು ಸಾಧ್ಯವಾಗದೆ ಘೀಳಿಡಲುತೊಡಗಿತು. ರಾಜ ಸೈನಿಕರ ಜೊತೆ ಬಂದು ಎಷ್ಟೇ ಪ್ರಯತ್ನ ಪಟ್ಟರೂ ಆನೆ ಕೆಸರಲ್ಲಿ ಹೂತುಕೊಳ್ಳುತ್ತಲೇ ಹೋಯ್ತು. ರಾಜ ನೊಂದುಕೊಂಡ. ಮಂತ್ರಿಗಳ ಮುಖ ನೋಡಿದ. ಮಂತ್ರಿ ಸೈನಿಕನೊಬ್ಬನನ್ನು ಕರೆದು ಯುದ್ಧ ಕಹಳೆಯ ದನಿ ಹೊರಡಿಸಲು ಹೇಳಿದ. ಕಹಳೆಯ ದನಿ ಮೊಳಗಿದಂತೆಲ್ಲಾ ಆನೆ ಕಿವಿ ನಿಮಿರಿಸಿ ಕಣ್ಣರಳಿಸಿ ನೋಡಿ ತನ್ನೆಲ್ಲ ಶಕ್ತಿಯನ್ನು…

Read More