Author: editor.udayarashmi@gmail.com

ಚಿಮ್ಮಡ: ಗ್ರಾಮದಲ್ಲಿ ಕಳೆದ ಎರಡು ದಿನಗಳ ಕಾಲ ಗ್ರಾಮದಲ್ಲಿ ಸಂಭ್ರಮ ಮೂಡಿಸಿದ್ದ ಆರಾದ್ಯದೈವ ಶ್ರೀ ಪ್ರಭುಲಿಂಗೇಶ್ವರ ಕಿಚಡಿ ಜಾತ್ರೆ ಹಲವಾರು ವಿಶೇಷಗಳೊಂದಿಗೆ ವಿಜ್ರಂಭಣೆಯಿಂದ ನೆರವೇರಿತು.ಬುಧವಾರ ಮುಂಜಾನೆಯೇ ಸರದಿಯಲ್ಲಿ ನಿಲ್ಲಲು ಪ್ರಾರಂಭಿಸಿದ ಕಿಚಡಿ ತಯಾರಿಸುವ ಸಾಮಗ್ರಿ ಒಯ್ಯುವ ಸೇವಾ ನಿರತ ಅಲಂಕೃತ ಟ್ರ್ಯಾಕ್ಟರ್ಗಳನ್ನು ಸಂಜೆಯ ಹೊತ್ತಿಗೆ ನೂರರ ಗಡಿ ದಾಟಿದ್ದವು. ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಿಂದ ಸುಮಾರು ಎರಡು ಕಿ. ಮಿ. ವರೆಗೆ ಸರದಿ ಸಾಲಿನಲ್ಲಿ ನಿಂತಿದ್ದವು ರಾತ್ರಿ ೧೦ ಘಂಟೆಯಿಂದ ಓಂ ಪ್ರಭುಲಿಂಗೇಶ್ವರ ಸೇವಾ ಸಮೀತಿಯ ಪ್ರಮುಖರಿಂದ ಕಿಚಡಿ ಪ್ರಸಾದದ ಸಾಮಗ್ರಿಯನ್ನು ದೂರದ ಗುಡ್ಡದ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಸಾಗಿಸಲಾಯಿತು. ಈ ಅಲಂಕೃತ ಟ್ರ್ಯಾಕ್ಟರ್ಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಒಂದೊಂದು ಟ್ರ್ಯಾಕ್ಟರ್ಗಳ ಶೃಂಗಾರಕ್ಕೆ ರೈತರು ಹತ್ತರಿಂದ ಐವತ್ತು ಸಾವಿರ ರೂ.ಗಳವರೆಗೆ ಖರ್ಚು ಮಾಡಿರುತ್ತಾರೆ.ಗುರುವಾರ ಬೆಳಿಗ್ಗೆ ೬ ಘಂ,ಗೆ ನಡೆಯುವ ರುದ್ರಾಭಿಷೇಕದೊದಿಗೆ ಪ್ರಾರಂಭಗೊಂಡ ಜಾತ್ರೆಯಲ್ಲಿ ಷಟಸ್ಥಲ ಧ್ವಜಾರೋಹಣ, ಅಡ್ಡ ಪಲ್ಲಕ್ಕಿ ಮಹೋತ್ಸವ ನಂತರ ನಡೆದ ಶಿವಾನುಭವಗೋಷ್ಟಿಯಲ್ಲಿ ನಾಡಿನ ಅನೇಕ ಶ್ರೀಮಠಗಳ ಮಠಾಧೀಶರು ಪಾಲ್ಗೊಂಡಿದ್ದರು.ಸಂಜೆ ಕರಡಿ…

Read More

ಶಾಸಕ ಯತ್ನಾಳರ ವಿರುದ್ಧ ಕಾಂಗ್ರೆಸ್ ಮುಖಂಡ ಅಬ್ದುಲ್‌ ಹಮೀದ ಮುಶ್ರೀಫ್ ವಾಗ್ದಾಳಿ ವಿಜಯಪುರ: ನಗರದಲ್ಲಿ ಇತ್ತೀಚೆಗೆ ಬ್ಯಾನರ್ ಹರಿದ ವಿಷಯ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಭೋಗಸ್ ಮತದಾನ ಮಾಡಿರುವುದನ್ನು ಸಿಬಿಐ ತನಿಖೆ ಮಾಡಿಸಬೇಕೆಂದು ನಗರ ಮತಕ್ಷೇತ್ರದ 2023ರ ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್‌ ಹಮೀದ ಮುಶ್ರೀಫ್ ಆಗ್ರಹಿಸಿದ್ದಾರೆ.ಭಾನುವಾರ ಮಾತನಾಡಿದ ಅವರು, ನಗರ ಶಾಸಕರು ಅನಾವಶ್ಯಕವಾಗಿ ಪಾಕಿಸ್ತಾನ ಹೆಸರಿನ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ನಗರದಲ್ಲಿ ಚಿಂಚೋಳಿ, ಬೀದರ್, ನಾಗಠಾಣ, ಸೇಡಂ ಹಲವಾರು ಕಡೆಯಿಂದ ಜನರನ್ನು ಕರೆಯಿಸಿ ಖೊಟ್ಟಿ ಮತದಾನ ಮಾಡಿಸಿ ಗೆದ್ದಿರುವುದು ಎಲ್ಲರಿಗೂ ಗೊತ್ತಿದೆ. ಅದಕ್ಕಾಗಿ ಎಲ್ಲ ಸಾಕ್ಷಿ ಸಮೇತ ಪ್ರಕರಣ ದಾಖಲಿಸಿದ್ದೇನೆ. ದಿನ ಬೆಳಗಾದರೆ ಸಾಕು ಶಾಸಕರ ಬಾಯಿಂದ ಬರೀ ಪಾಕಿಸ್ತಾನದ ಮಾತುಗಳೇ ಕೇಳಿ ಬರುತ್ತಿದ್ದು, ಅಭಿವೃದ್ಧಿ ಕಡೆ ಮೊದಲು ಗಮನ ಕೊಡಬೇಕು. ನಗರದ ಟಿಪ್ಪು ಸುಲ್ತಾನ ವೃತ್ತ, ಮನಗೂಳಿ ಅಗಸಿ ಮೇಲೆ ಪಾಕಿಸ್ತಾನ ದ್ವಜ ಹಾರಿಸಲು ಹಚ್ಚಿದವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಧೈರ್ಯವಿದ್ದರೆ ಸಿಬಿಐಗೆ ವಹಿಸಿ ನೋಡೋಣ ಎಂದು…

Read More

ಶತಾಯುಷಿ ಅಮ್ಮನಿಗೆ ಕಂದಾಯ ಇಲಾಖೆ ಮತ್ತು ಗ್ರಾಮಸ್ಥರಿಂದ ಗೌರವ ಸಮರ್ಪಣೆ ಕಲಕೇರಿ: ಅಂತರ ರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನದ ಆಚರಣೆ ಪ್ರಯುಕ್ತ ಶತಾಯುಷಿ ಮತದಾರರಿಗೆ ಅಭಿನಂದಿಸುವ ಸಲುವಾಗಿ ಕರ್ನಾಟಕ ಸರಕಾರ, ಚುನಾವಣಾ ಆಯೋಗದ ನಿರ್ದೇಶನದಂತೆ ಕಂದಾಯ ಇಲಾಖೆಯ ಪರವಾಗಿ ಗ್ರಾಮದ ಶತಾಯುಷಿ ೧೦೧ ವರ್ಷದ ಮಾತೋಶ್ರೀ ಶ್ರೀಮತಿ ಗುರುಬಾಯಿ ಶಿವಲಿಂಗಯ್ಯ ಚಿಕ್ಕಮಠ ಅವರನ್ನು ಗ್ರಾಮ ಆಡಳಿತಾಧಿಕಾರಿ ಪ್ರಕಾಶ ಹೊಸಕೇರಿ ಹಾಗೂ ಗ್ರಾಮಸ್ಥರಿಂದ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮ ನಡೆಯಿತು.ಈ ವೇಳೆ ಹಿರಿಯ ಮಾತೋಶ್ರೀ ಶ್ರೀಮತಿ ಗುರುಬಾಯಿ ಶಿವಲಿಂಗಯ್ಯ ಚಿಕ್ಕಮಠ ಅವರನ್ನು ಕಂದಾಯ ಇಲಾಖೆಯ ಪರವಾಗಿ ಗೌರವಿಸಿ ಮಾತನಾಡಿದ ಗ್ರಾಮ ಆಡಳಿತಾಧಿಕಾರಿ ಪ್ರಕಾಶ ಹೊಸಕೇರಿ ಅವರು, ಸರಕಾರದ ಆದೇಶದಂತೆ ತಾಳಿಕೋಟಿ ತಾಲೂಕಿನ ಕಲಕೇರಿಯ ೧೦೧ ವರ್ಷದ ಹಿರಿಯ ಮಾತೋಶ್ರೀಯವನ್ನು ಗೌರವಿಸಲಾಗುತ್ತಿದೆ, ಇದು ನಮ್ಮ ಸೌಭಾಗ್ಯವಾಗಿದ್ದು, ಹಿರಿಯರ ಮಾರ್ಗದರ್ಶನದಲ್ಲಿ ಅವರ ಆಶಿರ್ವಾದವನ್ನು ಪಡೆದು ನಮ್ಮ ಜೀವನವನ್ನು ಪಾವನಗೊಳಿಸಿಕೊಳ್ಳೋಣ ಎಂದು ಹೇಳಿದರು.ಇದೇ ವೇಳೆ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಎಸ್.ಬಿ.ಪಾಟೀಲ ಮತ್ತು ಆದರ್ಶ ಪದವಿ ಕಾಲೇಜಿನ…

Read More

ಮುದ್ದೇಬಿಹಾಳ: ಮಹಾತ್ಮ ಗಾಂಧೀಜಿಯವರು ಸತ್ಯ ಮತ್ತು ಅಹಿಂಸಾ ಮಾರ್ಗದ ಮೂಲಕ ಬ್ರಿಟೀಷರ ಕಪಿ ಮುಷ್ಠಿಯಲ್ಲಿದ್ದ ಭಾರತವನ್ನು ಸ್ವತಂತ್ರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತಕುಮಾರ ಬಳೂಲಗಿಡದ ಹೇಳಿದರು.ಪಟ್ಟಣದ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಹಾತ್ಮ ಗಾಂಧೀಜಿ ದೇಶದ ಹೆಮ್ಮೆ, ಜಗತ್ತಿನ ಆದರ್ಶ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯ. ಗಾಂಧೀಜಿ ಅವರ ಅತೀ ದೊಡ್ಡ ಕನಸು ಎಂದರೆ ಅದು ಸ್ವಚ್ಛ ಭಾರತ. ಅವರ ಕನಸನ್ನು ನನಸಾಗಿಲು ಇಂದು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳ ಸದುಪಯೋಗವಾಗಬೇಕು. ಸಾರ್ವಜನಿಕರು ಸಹ ಅಲ್ಲಲ್ಲಿ ಕಸ, ತ್ಯಾಜ್ಯ ವಿಲೇವಾರಿ ಮಾಡದೇ ನಿಗಧಿತ ಸ್ಥಳಗಳಲ್ಲಿ ವಿಲೇವಾರಿ ಮಾಡಿ ಸಹಕರಿಸುವಂತೆ ಸಲಹೆ ನೀಡಿದರು.ಈ ವೇಳೆ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಬಿ.ಗೌಡರ, ನ್ಯಾಯಾಲಯದ ಸಿಬ್ಬಂದಿಗಳಾದ ಸುರೇಶ ಬಳಗಾನೂರ, ಅರವಿಂದ ಕುಂಬಾರ, ವಿಜು ಶಿವಣಗಿ, ಗುರು ಲಾಳಿ, ನಾಗೇಶ ಮಾದಿಹಳ್ಳಿ, ಅಶೋಕ ಕುಂಬಾರ, ಇಸಾಕ ಒಚಿಟಿ, ಸುಶ್ಮಾ ಬಾಣಿ, ಮಹಾಂತೇಶ…

Read More

ಮುದ್ದೇಬಿಹಾಳ: ಅ.೩ ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕುರುಬ ಸಮಾಜದ ಅಡಿಯಲ್ಲಿ ರಾಷ್ಟçಮಟ್ಟದ ಕುರುಬ ಸಮಾಜದ ಕಾರ್ಯಕಾರಿಣಿ ಸಭೆ ಹಾಗೂ ಮುಖ್ಯಮಂತ್ರಿ ಸಿದ್ರಾಮಯ್ಯನವರಿಗೆ ಅಭಿನಂದನಾ ಸಮಾರಂಭಕ್ಕೆ ಮತಕ್ಷೇತ್ರದಿಂದ ತೆರಳುತ್ತಿರುವ ಹಾಲುಮತ ಸಮಾಜ ಬಾಂಧವರಿಗೆ ವಾಹನಗಳ ವ್ಯವಸ್ಥೆ ಕಲ್ಪಿಸಿದ ಅಸ್ಕಿ ಪೌಂಡೇಷನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಪೋಸ್ಟರಗಳನ್ನು ಬಿಡುಗಡೆಗೊಳಿಸುವ ಮೂಲಕ ಸೋಮವಾರ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಅವರು, ಹಾಲುಮತ ಸಮಾಜ ಹಾಲಿನಷ್ಟೇ ಪವಿತ್ರವಾಗಿದೆ. ಈ ರಾಜ್ಯದಲ್ಲಿ ಮಾತ್ರವಲ್ಲದೇ ಇಡೀ ದೇಶದಲ್ಲಿ ಕುರುಬ ಸಮಾಜ ೧೦ರಿಂದ ೧೨ ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಆದರೆ ಜನಸಂಖ್ಯಾನುಗುಣವಾಗಿ ಸರಕಾರದ ಸೌಲಭ್ಯಗಳು ದೊರಕುವಂತಾಗಬೇಕು ಅಂದಾಗ ಮಾತ್ರ ಈ ಸಮಾಜದ ಮಕ್ಕಳು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ಮತ್ತು ರಾಜಕೀಯವಾಗಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದರು.ಈ ವೇಳೆ ಕುರುಬ ಸಮಾಜದ ಮುಖಂಡ ಹಾಗೂ ಪಿಎಲ್ ಡಿ ಬ್ಯಾಂಕ ಅಧ್ಯಕ್ಷ ಬಿ.ಕೆ.ಬಿರಾದಾರ ಮಾತನಾಡಿ, ಸಮಾಜದ ಬಡವರಿಗೆ ಬೆಳಗಾವಿಯ ಕಾರ್ಯಕ್ರಮಕ್ಕೆ ಭಾಗವಹಿಸಲು ಸಿ.ಬಿ.ಅಸ್ಕಿಯವರು ಸೌಲಭ್ಯ ಕಲ್ಪಿಸಿದ್ದು ಸಮಾಜ ಅವರಿಗೆ ಋಣಿಯಾಗಿದೆ ಎಂದರು.ಈ ವೇಳೆ…

Read More

ಚಡಚಣ: ದೇಶಕ್ಕೆ ಗಾಂಧೀಜಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಅವರ ಕೊಡುಗೆ ಅಪಾರವಾಗಿದೆ ಎಂದು ನಂದರಗಿ ಗ್ರಾಪಂ ಸದಸ್ಯ ಅಪುಗೌಡ ಚ.ಪಾಟೀಲ ಹೇಳಿದರು.ಚಡಚಣ ತಾಲೂಕಿನ ನಂದರಗಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಅವರ ಜಯಂತಿನ್ನುದ್ದೇಸಿ ಮಾತನಾಡಿದ ಅವರು, ದೇಶಕ್ಕೆ ಗಾಂಧೀಜಿ ಮತ್ತು ಲಾಲ ಬಹಾದ್ದೂರ ಅವರ ಕೊಡುಗೆ ನಾವು ನಿಜಕ್ಕೂ ಸ್ಮರಿಸುವಂಥದ್ದು,ದೇಶದ ಯುವ ಪೀಳಿಗೆ ಅವರ ಆಚಾರ ವಿಚಾರಗಳನ್ನು ,ಧೈರ್ಯ ಸಾಹಸವನ್ನು, ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಳ್ಳಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

೧೧೪ ಗೋವುಗಳಿದ್ದ ಮೂರು ವಾಹನಗಳನ್ನು ತಡೆದ ಹಿಂದು ಸಂಘಟನೆಗಳ ಕಾರ್ಯಕರ್ತರು ಇಂಡಿ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಮೂರು ವಾಹನಗಳನ್ನು ತಡೆದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶನಿವಾರ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ.ಬಂಧಿತ ಚಾಲಕರನ್ನು ಮಹಾರಾಷ್ಟ್ರದ ಅಕಲೂಜ್‌ನ ಫರೀದ ತಂದೆ ಮಹ್ಮದ ಶೇಖ್, ಅಕಲೂಜ್‌ನ ಲೋಹಿದ್ ಶಾಕೀರ ಶೇಖ್ ಎಂದು ಗುರುತಿಸಿದ್ದು ಓರ್ವ ಚಾಲಕ ಪರಾರಿಯಾಗಿದ್ದಾನೆ.ಎಂಹೆಚ್ ೧೩ ಸಿಯು ೧೦೫೭, ಎಂಹೆಚ್ ೧೨ ಪಿಕ್ಯೂ ೭೫೭೩, ಎಂಹೆಚ್ ೧೩ ಸಿಯು ೧೩೨೩ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಡಿ ಪಟ್ಟಣದಿಂದ ಎರಡು ಕಿ.ಮೀ ದೂರದಲ್ಲಿರುವ ಇಟ್ಟಂಗಿ ಭಟ್ಟಿ ಸಮೀಪದಲ್ಲಿ ಮೂರು ವಾಹನಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಹಿಂದೂಪರ ಸಂಘಟನೆಗಳ ಕೆಲ ಕಾಯಕರ್ತರು ಸ್ಥಳಕ್ಕೆ ಭೇಟಿ ನೀಡಿ ವಾಹನ ಪರಿಶೀಲಿಸಿದ್ದು, ಅದರಲ್ಲಿ ಗೋವುಗಳು ಹಾಗೂ ಕರುಗಳು ಇರುವುದು ಕಂಡು ಬಂದಿದ್ದು, ಕೂಡಲೇ ಕಾರ್ಯಕರ್ತರು ಇಂಡಿ ಶಹರ ಠಾಣೆಗೆ ಮಾಹಿತಿ ನೀಡಿ ಠಾಣಾಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡು ಗೋವುಗಳನ್ನು…

Read More

ವಿಜಯಪುರ: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಗಟ್ಟಿಗೊಳ್ಳುವುದರೊಂದಿಗೆ ಮಾನಸಿಕ ಸದೃಢತೆ ಹೊಂದಲು ಯುವಕರು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.ಅವರು, ನಗರದ ಡಾ. ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ೨೦೨೩-೨೪ನೇ ಸಾಲಿನ ವಿಜಯಪುರ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ, ಮಾತನಾಡಿದರು.ಜಿಲ್ಲೆಯ ೧೩ ತಾಲ್ಲೂಕುಗಳಲ್ಲಿ ವಿಜೇತರಾದ ಕ್ರೀಡಾಪಟುಗಳು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಹೊಂದಿದ್ದು, ಕ್ರೀಡಾ ನಿಯಮಗಳಿಗೆ ಬದ್ಧರಾಗಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಕರೆ ನೀಡಿದರು.ಕ್ರೀಡೆ ಪ್ರತಿಯೊಬ್ಬ ಮನುಷ್ಯನ ಅವಿಭಾಜ್ಯ ಅಂಗವಾಗಿದ್ದು, ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯ ಬೆಳಸಿಕೊಳ್ಳಲು ಪ್ರತಿದಿನ ಕ್ರೀಡೆ ಯೋಗ ಪ್ರಾಣಾಯಾಮ, ಈಜು ಮುಂತಾದ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತೀ ಅವಶ್ಯವಾಗಿದೆ ಎಂದು ಹೇಳಿದರು.ಡಾ.ಜಾವೀದ ಜಮಾದಾರ ಮಾತನಾಡಿ, ಪ್ರತಿದಿನ ಕ್ರೀಡಾ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು. ಯುವಜನಾಂಗ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೇ ಸುಂದರ ಜೀವನ ರೂಪಿಸಿಕೊಳ್ಳಲು ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಒಲವು ಹೊಂದಬೇಕು ಎಂದರು.ರಾಜ್ಯ ಪ್ರಶಸ್ತಿ…

Read More

ವಿಜಯಪುರ: ನಗರದ ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಂಗವಾದ ಸಂಗನಬಸವ ಅಂತಾರಾಷ್ಟ್ರೀಯ ವಸತಿ ಶಾಲೆ, ಕವಲಗಿಯಲ್ಲಿ ‘ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ’ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡಲಾಯಿತು.ಶಾಲೆಯ ಪ್ರಾಂಶುಪಾಲರಾದ ಶರ್ಮಿಳಾ ಹೇಮಂತ್ “ಗಾಂಧೀಜಿ ಮತು ಶಾಸ್ತ್ರಿಜಿಯವರು ಪ್ರಾತಃಸ್ಮರಣೀಯರು. ಮಹಾತ್ಮ ಗಾಂಧೀಜಿಯ ಅಸ್ತçಗಳಾದ ಸತ್ಯ, ಅಹಿಂಸೆ ಮತ್ತು ಸ್ವಚ್ಛತೆಯ ಬಗ್ಗೆ ತಿಳಿಸುತ್ತಾ, ತುಂಬಾ ಸರಳ ಜೀವಿಯಾದ ಭಾರತದ ಎರಡನೆಯ ಪ್ರಧಾನ ಮಂತ್ರಿಯಾದ ಲಾಲ್ ಬಹಾದ್ದೂರ್ ಶಾಸ್ತ್ರಿಜಿಯವರ ಬಗ್ಗೆ ವರ್ಣಿಸುತ್ತಾ ಅವರ ಘೋಷವಾಕ್ಯವಾದ ‘ಜಯ್ ಜವಾನ್, ಜಯ್ ಕಿಸಾನ್’ (ಯೋಧ ಮತ್ತು ರೈತ) ಎಂಬುದನ್ನು ನೆನಪಿಸಿದರು.ವಿದ್ಯಾರ್ಥಿಗಳು ಎಲ್ಲಾ ಧರ್ಮಗಳ ಬೋಧನೆಯನ್ನು ತಿಳಿಸಿ ಸರ್ವಧರ್ಮ ಏಕತೆಯನ್ನು ಮಾರ್ಮಿಕವಾಗಿ ಸಾರಿದರು. ವಿದ್ಯಾರ್ಥಿಗಳಿಂದ ಸಮೂಹ ಗೀತೆ, ನೃತ್ಯಗಳು, ಭಾಷಣಗಳು & ಶಿಕ್ಷಕರಿಂದ ಭಜನ್‌ಗಳು, ಜರುಗಿದವು.ಕಾರ್ಯಕ್ರಮದಲ್ಲಿ ಶಾಲೆಯ ಉಪಪ್ರಾಚಾರ್ಯ ಅಣ್ಣಪ್ಪ ಶಿರೂರ, ಜ್ಯೂನಿಯರ್ ವಿಂಗ್‌ನ ಉಪಪ್ರಾಚಾರ್ಯ ಜ್ಯೋತಿ ಪಡಸಲಗಿ, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.ಆಂಗ್ಲ ಶಿಕ್ಷಕ ಗುರುದೇವ…

Read More

ದೇವರಹಿಪ್ಪರಗಿ: ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಜನ್ಮದಿನದ ಪ್ರಯುಕ್ತ ಜರುಗಿದ ರಂಗೋಲಿ ಸ್ಪರ್ಧೆಯಲ್ಲಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪಾಲ್ಗೊಂಡು ರಂಗೋಲಿ ಬಿಡಿಸಿ ನೋಡುಗರ ಗಮನ ಸೆಳೆದರು.ಪಟ್ಟಣದ ಡಾ.ಅಂಬೇಡ್ಕರ್ ವೃತ್ತದ ರಾಜ್ಯಹೆದ್ದಾರಿ ೪೧ರಲ್ಲಿ ಬೆಳಿಗ್ಗೆ ಮಹನೀಯರ ಜನ್ಮದಿನ ಹಾಗೂ ಪೌರಾಡಳಿತ ನಿರ್ದೇಶನಾಲಯ ಬೆಂಗಳೂರ ಅವರ ಶ್ರಮದಾನ ಮತ್ತು ಇಂಡಿಯನ್ ಸ್ವಚ್ಛತಾ ಲೀಗ್ ಕಾರ್ಯಕ್ರಮದ ಪ್ರಯುಕ್ತ ಆರಂಭಗೊಂಡ ರಂಗೋಲಿ ಬಿಡಿಸುವ ಸ್ಪರ್ಧೆಯಲ್ಲಿ ಸರ್ಕಾರಿ ಉರ್ದುಪ್ರೌಢಶಾಲೆ, ಬಿಎಲ್‌ಡಿಇ, ಮಹರ್ಷಿ ವಾಲ್ಮೀಕಿ, ಸಿದ್ಧೇಶ್ವರ ಸ್ವಾಮೀಜಿ, ಎಬಿ ಸಾಲಕ್ಕಿ, ಚೈತನ್ಯ ಪ್ರೌಢಶಾಲೆಗಳ ೨೮ ಕ್ಕೂ ಹೆಚ್ಚು ವಿದ್ಯಾರ್ಥಿನೀಯರು ಭಾಗವಹಿಸಿ ಸ್ವಚ್ಛ ಭಾರತ ಅಭಿಯಾನ, ಗಾಂಧೀಜಿ, ಪರಿಸರದ ಜಾಗೃತಿ, ರಾಷ್ಟçಧ್ವಜ ಸೇರಿದಂತೆ ವಿವಿಧ ಬಗೆಯ ಬಣ್ಣಬಣ್ಣದ ಚಿತ್ತಾರದ ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಿದರು. ಪ್ರಥಮ ಸ್ಥಾನವನ್ನು ಸರ್ಕಾರಿ ಉರ್ದುಪ್ರೌಢಶಾಲೆ ವಿದ್ಯಾರ್ಥಿನಿ ಸ್ವಾಲಿಯಾ ಮಸಳಿ, ದ್ವೀತಿಯ ಹಾಗೂ ತೃತಿಯ ಸ್ಥಾನಗಳನ್ನು ಕ್ರಮವಾಗಿ ಎಬಿ ಸಾಲಕ್ಕಿ ಪ್ರೌಢಶಾಲೆಯ ಸೃಷ್ಠಿ ಸಾಲವಾಡಗಿ, ರಕ್ಷಿತಾ ಚವ್ಹಾಣ ಪಡೆದರು. ನಂತರ ವಿಜೇತ ಹಾಗೂ ಭಾಗವಹಿಸಿದ ಎಲ್ಲ…

Read More