Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ಪಟ್ಟಣದ ಕ್ರಿಯೇಟಿವ್ ಕಿಡ್ಸ್ ಹೋಮ್ನ ಮಕ್ಕಳು ರಾಷ್ಟ್ರದ ನಾಯಕರ ವೇಷಧರಿಸಿ ಗಮನ ಸೆಳೆದಿದ್ದಾರೆ ಎಂದು ಚಿಕ್ಕಮಕ್ಕಳ ತಜ್ಞ, ಕಾಂಗ್ರೆಸ್ ಯುವ ಮುಖಂಡ ಡಾ.ಚನ್ನವೀರ (ಮುತ್ತು) ಮನಗೂಳಿ ಹೇಳಿದರು.ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್ ಕಿಡ್ಸ್ ಹೋಮ್ನಲ್ಲಿ ಸೋಮವಾರ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ರಾಷ್ಟ್ರದ ನಾಯಕರ ವೇಷ ಭೂಷಣ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ರಾಷ್ಟ್ರದ ನಾಯಕರ ವೇಷಧಾರಿ ಮಾಡುವ ಮೂಲಕ ಮಕ್ಕಳಲ್ಲಿ ದೇಶ ಪ್ರೇಮ ತುಂಬವ ಕಾರ್ಯ ಮಾಡಿದೆ. ರಾಷ್ಟ್ರದ ನಾಯಕರ ಬಗ್ಗೆ ತಿಳಿಸಿಕೊಡುವ ಮೂಲಕ ಅವರ ತತ್ವ ಆದರ್ಶಗಳನ್ನು ಮಕ್ಕಳು ಮೈಗೂಡಿಸಿಕೊಂಡು ಭವ್ಯ ಭಾರತ ನಿರ್ಮಾಣದ ಕನಸು ನನಸಾಗುವಂತೆ ಕಾರ್ಯ ನಿರ್ವಹಿಸುತ್ತಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಶ್ರಾಂತ ಶಿಕ್ಷಕ ಹ.ಮ. ಪೂಜಾರ, ಅತಿಥಿಗಳಾಗಿ ಆಗಮಿಸಿದ ಡಾ.ಸಂಗಮೇಶ ಪಾಟೀಲ, ಡಾ.ಶಿವಾನಂದ ಹೊಸಮನಿ, ಪುರಸಭೆ ಸದಸ್ಯ ಬಸವರಾಜ ಯರನಾಳ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧಿ, ಕಸ್ತೂರ…
ಸಿಂದಗಿ: ಸ್ವಚ್ಛತಾ ಆಂದೋಲನ ಕೇವಲ ಜಾತ್ರೆ, ಸಮಾರಂಭ ಹಾಗೂ ಮಹಾನ್ ನಾಯಕರ ಜಯಂತಿಗಳಿಗೆ ಮಾತ್ರ ಸೀಮಿತವಾಗದೇ ಪ್ರತಿನಿತ್ಯ ನಮ್ಮ ಮನೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿ ಎಂದು ಗ್ರಾ.ಪಂ ಅಧ್ಯಕ್ಷೆ ಶಾಂತಾಬಾಯಿ ಉಮರಗಿ ಹೇಳಿದರು.ತಾಲೂಕಿನ ಗಬಸಾವಳಗಿ ಗ್ರಾಮದಲ್ಲಿ ಗಾಂಧಿ ಜಯಂತಿಯ ಪ್ರಯುಕ್ತ ಹಮ್ಮಿಕೊಂಡ ಸ್ವಚ್ಛತಾ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ವಾತವರಣವನ್ನು ನಾವು ಸ್ವಚ್ಚವಾಗಿಡಬೇಕು. ಮನೆಗೊಂದು ಮರ ನೆಟ್ಟು ಬರುವ ರೋಗಗಳನ್ನು ತಡೆಗಟ್ಟಬೇಕು. ಗ್ರಾಮೀಣ ಭಾಗದ ಜನತೆ ಜಾಗೃತರಾಗಿ ಸ್ವಚ್ಛತ್ವಗೆ ಮುಂದಾಗಿ ನಿಮ್ಮ ಮಕ್ಕಳ ಅರೋಗ್ಯ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.ಇದೇ ವೇಳೆ ಪಿಡಿಒ ಬಿ.ಆರ್ ಶಾಹಾಪುರ, ಕಾರ್ಯದರ್ಶಿ ಬಸಲಿಂಗಯ್ಯ ರಾಮಗಿರಿಮಠ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ವರ್ಗ ಸೇರಿದಂತೆ ಗ್ರಾಮಸ್ಥರಿದ್ದರು.
ಸಿಂದಗಿ: ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಚಳುವಳಿ ಹಾಗೂ ಹೋರಾಟಗಳನ್ನು ರೂಪಿಸಿ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದ ಮಹಾತ್ಮ ಗಾಂಧಿಯವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವರ ಹಾದಿಯಲ್ಲಿ ಸಾಗೋಣ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು. ಪಟ್ಟಣದ ತಾಲೂಕು ಆಡಳಿತ ಕಛೇರಿಯಲ್ಲಿ ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಆಚರಣೆಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಅವರ ಸತ್ಯ, ಸಮಾನತೆ, ಅಹಿಂಸೆ, ಶಾಂತಿಯ ಬಹುದೊಡ್ಡ ಪ್ರತಿಪಾದಕರಾಗಿದ್ದಾರೆ. ಇಂದು ವಿಶ್ವದಾದ್ಯಂತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.ಇದೇ ವೇಳೆ ನಗರ ಸುಧಾರಣಾ ವೇದಿಕೆ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿ, ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕೊಡುಗೆ ಅಪಾರವಾದದ್ದು, ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಗಳ ಮೂಲಕ ದೇಶದಲ್ಲಿ ಜನಸ್ನೇಹಿ ಆಡಳಿತವನ್ನು ನೀಡಿದ ಅಪರೂಪದ ಪ್ರಧಾನಿಯಾಗಿದ್ದಾರೆ. ಅವರ ಜೀವನ ಮತ್ತು ತತ್ವಾದರ್ಶಗಳನ್ನು…
ಮುದ್ದೇಬಿಹಾಳ: ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಅ.೩ ರಂದು ಬೆಳಿಗ್ಗೆ ೧೧ ಗಂಟೆಗೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯ ಮೂಲಕ ವಿವಿಧ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರಗೆ ಮನವಿ ಪತ್ರ ಸಲ್ಲಿಸುತ್ತಿದ್ದು, ತಾಲೂಕಿನ ಎಲ್ಲ ದಲಿತ ಬಾಂಧವರು ಭಾಗವಹಿಸಿ ಹೋರಾಟ ಯಶಸ್ವಿಗೊಳಿಸುವಂತೆ ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ವಿನಂತಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುದ್ದೇಬಿಹಾಳ ಹಾಗೂ ನಾಲತವಾಡ ಗ್ರಾಮದಲ್ಲಿನ ಅಂಬೇಡ್ಕರ್ ವೃತ್ತವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು, ಮುದ್ದೇಬಿಹಾಳ ಪಟ್ಟಣದ ಪುರಸಭೆ ಎದುರು ಕಾಯ್ದಿರಿಸಿದ ಜಾಗೆಯನ್ನು ದಲಿತರಿಗೆ ಮೀಸಲಿಡಬೇಕು, ಮೀನುಗಾರರ ಸಾಲ ಮನ್ನಾ ಮಾಡಬೇಕು, ಬಾರ್ ಮಾಲೀಕರಿಂದ ಲಂಚದ ಹಣಕ್ಕೆ ಬೇಡಿಕೆ ಇಟ್ಟ ಕಾರಣಕ್ಕಾಗಿ ಅಮಾನತ್ತುಗೊಂಡಿದ್ದ ಅಬಕಾರಿ ನಿರೀಕ್ಷಕಿ ಜ್ಯೋತಿಬಾಯಿ ಮೇತ್ರಿ ಅವರು ಮರಳಿ ಇಲ್ಲಿಗೆ ವರ್ಗಾವಣೆಯಾಗಿ ಬಂದಿರುವುದು ಕಾನೂನುಬಾಹಿರವಾಗಿದ್ದು ಇವರನ್ನು ಕೂಡಲೇ ಬೇರೆಡೆಗೆ ವರ್ಗಾವಣೆ ಮಾಡಬೇಕು, ತಾಲೂಕಿನ ಗಂಗೂರ ಗ್ರಾಮದ ರಿ.ಸ.ನಂ ೧೧/೨, ೧೧/೩, ೧೧/೪ ಈ ಜಮೀನುಗಳನ್ನು ಮಾದಿಗ ಸಮಾಜದ ಸ್ಮಶಾನಕ್ಕೆ ಸರ್ಕಾರ ಶೀಘ್ರವಾಗಿ…
ಆಲಮಟ್ಟಿ: ಸ್ಥಳಿಯ ಮಂಜಪ್ಪ ಹರ್ಡೇಕರ ಪ್ರೌಢ ಶಾಲೆಯಲ್ಲಿ ರಾಷ್ಟ್ರಪಿತ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಶಾಸ್ತ್ರಿಜಿಯವರ ಜನ್ಮದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯ ಗುರು ಎಸ್.ಆಯ್.ಗಿಡ್ಡಪ್ಪಗೋಳ, ಗ್ರಾಮಗಳೇ ದೇಶದ ಬೆನ್ನೆಲುಬು ಎಂದು ಅಂತಿದ್ದ ಗಾಂಧೀಜಿ ಸ್ವಚ್ಛತೆ ಬಗ್ಗೆ ತೀವ್ರ ಲಕ್ಷವಹಿಸಿದ್ದರು. ಮಹಾತ್ಮರ ಚರಿತ್ರೆಗಳನ್ನು ಇಂದಿನ ಮಕ್ಕಳು ಅವಲೋಕಿಸಿ ಅವರ ತತ್ವಾದರ್ಶಗಳನ್ನು ಸ್ವಲ್ಪವಾದರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಗಾಂಧೀಜಿಯವರಂತೆಯೇ ವಿಶಾಲ ಸಹೃದಯ ಹೊಂದಿದ ಶಾಸ್ತ್ರಿ ಜಿ ಕೂಡಾ ಸರಳಜೀವಿಗಳು. ಅವರ ಘೋಷಣೆ ‘ಜೈ ಜವಾನ ಜೈ ಕಿಸಾನ’ ಎಂಬಂತೆಯೇ ಅವರು ರೈತರ ಅಭಿವೃದ್ಧಿಗಾಗಿ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದರು.ದೈಹಿಕ ಶಿಕ್ಷಣದ ಶಿಕ್ಷಕ ಜಿ.ಎಂ.ಹಿರೇಮಠ ಮಾತನಾಡಿ, ಜಾತಿ-ಬೇಧ ಎಂದಿಗೂ ಸಹಿಸದ ಗಾಂಧೀಜಿ ಸತ್ಯ-ನೀತಿ-ಸದಾಚಾರಗಳಿಗೆ ಮನ ಒಲಿಸಿಕೊಂಡಿದ್ದರು. ಸ್ವಾತಂತ್ರ್ಯ ಹಾಗೂ ಸ್ವಾತಂತ್ರ್ಯದ ನಂತರವೂ ಮಾನವನ ಸೇವೆಗಾಗಿ ತಮ್ಮ ಬದುಕನ್ನು ಗಾಂಧೀಜಿ ಹಾಗೂ ಶಾಸ್ತ್ರಿಜಿ ತೇಯ್ದಿದಾರೆ. ಇಂಥ ಮಹಾತ್ಮರನ್ನು ನೆನೆಯುವದು ನಮ್ಮಲ್ಲರ ಕರ್ತ್ಯವ್ಯ ಎಂದರು.ಶ್ರೀಮತಿ, ಜಗದೇವಿ ಕೆ. ಶ್ರೀಮತಿ, ಕಾಲೇಖಾನ ಮೊದಲಾದವರು ಉಪಸ್ಥಿತರಿದ್ದರು.
ಸಿಂದಗಿ: ಮಕ್ಕಳು ಮೋಬೈಲಿಂದ ದೂರವಿದ್ದು, ಅಧ್ಯಯನದೆಡೆಗೆ ಹೆಚ್ಚಿನ ಗಮನ ಹರಿಸಬೇಕು. ತಮ್ಮ ದಿನ ನಿತ್ಯದ ಅಭ್ಯಾಸದ ವೇಳಾಪಟ್ಟಿಯನ್ನು ತಯಾರಿಸಿ ನಿರ್ದಿಷ್ಟ ಸಮಯ ಹಾಗೂ ಸ್ಥಳ ನಿಗದಿಪಡಿಸಿ ಓದಬೇಕು ಎಂದು ಹೊನ್ನೂಟಗಿ ಪಪೂ ಕಾಲೇಜಿನ ಉಪನ್ಯಾಸಕ ಬಸವರಾಜ ಕುಂಬಾರ ಹೇಳಿದರು.ಸೋಮವಾರ ಪಟ್ಟಣದ ಪ್ರೇರಣಾ ಪಬ್ಲಿಕ್ ಶಾಲೆಯ ಆವರಣದಲ್ಲಿ ಹಮ್ಮಿಕೊಂಡ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜಯಂತಿಯ ಪ್ರಯುಕ್ತ ಜ್ಞಾನ ಬಿಂದು ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶ ಕಂಡ ಅಪ್ರತಿಮ ಸಾಧಕ, ಸಂತ ತತ್ವಜ್ಞಾನಿ ಮಹಾತ್ಮಾ ಗಾಂಧೀಜಿ ಸತ್ಯ, ಅಹಿಂಸೆ, ತ್ಯಾಗದ ಮೂಲಕ ಸ್ವಾತಂತ್ರ್ಯವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತ ಮಾಡಿದರು. ಪ್ರಸ್ತುತ ಭಾರತ ತಾಂತ್ರಿಕ ಹಾಗೂ ವೈಜ್ಞಾನಿಕವಾಗಿ ಮುಂದುವರೆದರೂ ಆತ್ಮವಿಶ್ವಾಸದ, ಧೈರ್ಯದ ಕೊರತೆ, ಉತ್ತಮ ಸಂಸ್ಕಾರದ ಕೊರತೆ ವಿದ್ಯಾರ್ಥಿಗಳಲ್ಲಿ ಕಂಡುಬರುತ್ತಿದೆ. ಇದಕ್ಕೆ ವಿದ್ಯಾರ್ಥಿಗಳ ಆತ್ಮಹತ್ಯೆಯೇ ನೈಜ ಉದಾಹರಣೆ ಎಂದರು.ಇದೇ ವೇಳೆ ಸಿಂದಗಿ ಕ್ಷೇತ್ರಶಿಕ್ಷಣಾಧಿಕಾರಿ ಇಸಿಓ ಎ.ಎಮ್ ಮಾಡಗಿ ಮತ್ತು ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ ಮಾತನಾಡಿ, ಲಾಲ್ ಬಹಾದ್ದೂರ್…
ತಿಕೋಟಾ: ಸರಕಾರಿ ಸಂಯುಕ್ತ ಪ್ರೌಢಶಾಲೆ ಬಾಬಾನಗರ 2003-04 ನೇ ಸಾಲಿನ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳಿಂದ ಮರಳಿ ಗೂಡಿಗೆ ವಂದನಾರ್ಪಣೆ ಸಮ್ಮಿಲನ ಕಾರ್ಯಕ್ರಮ ರವಿವಾರ ನಡೆಯಿತು.ಮುಖ್ಯೋಪಾಧ್ಯಾಯ ಎಲ್.ಟಿ. ಮುಲ್ಲಾ ಮಾತನಾಡಿ ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಕಲಿಸಿದ ಶಿಕ್ಷಕರಿಗೆ ಗೌರವ ಸಮರ್ಪಿಸುವ ಮೂಲಕ ನಿಮ್ಮ ಗುರುವಿನ ಶ್ರೇಷ್ಠತೆಯನ್ನು ತಿಳಿಸಿದ್ದಿರಿ ಎಂದರು.ಅತಿಥಿಯಾಗಿ ಭಾಗವಹಿಸಿದ ಆರ್.ಎಸ್.ನಿಡೋಣಿ ಮಾತನಾಡಿ, ಅಕ್ಷರ ಜ್ಞಾನ ಕಲಿಸಿದರೆ ಅಷ್ಟೇ ಗುರು ಅಲ್ಲ, ಪ್ರತಿ ಸಣ್ಣ ಅರಿವಿನ ಬಗ್ಗೆ ತಿಳಿಸಿದವರು ಕೂಡ ಗುರು ಎಂದು ಹೇಳಿದರು.ಬದುಕು ರೂಪಿಸಿದ ಶಿಕ್ಷಕರಿಗೆ ಎಲ್ಲ ಶಿಕ್ಷಕರಿಗೆ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಎಸ್. ಎಲ್. ಇಂಗಳೇಶ್ವರ, ಎಸ್.ಜಿ.ಪುಕಾಳೆ, ಪರಶು ಕಡಪಟ್ಟಿ, ಮುತ್ತಪ್ಪ ತೇಲಿ, ಪ್ರೀತಿ ಬಿರಾದಾರ, ಶಿವಲೀಲಾ ಯಾಳಗಿ,ಮಲ್ಲು ಚೌಧರಿ, ಈರಯ್ಯ ವಿರಕ್ತಮಠ, ಶ್ರೀಶೈಲ ವಿರಕ್ತಮಠ, ದುಂಡಪ್ಪ ಶಿಂದೆ, ಕಿರಣ ಪಂಡರೆ, ರಾಜು ನಿಂಬರಗಿ, ಪ್ರಕಾಶ ಪೂಜಾರಿ, ಪಾಲೀಶ್ ಆಯತವಾಡ, ಕಲ್ಲಪ್ಪ ಕರಜಗಿ, ಶಂಕರ ತೇಲಿ, ಸಿದ್ದು ಮುತ್ತುರ, ಮತ್ತು ವಿದ್ಯಾರ್ಥಿನಿಯರಾದ ಬೋರಮ್ಮ ಮಸಳಿ,…
ಇಂಡಿ: ಸತ್ಯ ಹಾಗೂ ಅಹಿಂಸೆಯನ್ನು ಜಗತ್ತಿಗೆ ಸಾರಿದ ಮಹಾತ್ಮ ಗಾಂಧೀಜಿಯವರ ಜನ್ಮದಿನವನ್ನು ವಿಶ್ವ ಅಹಿಂಸಾ ದಿನವನ್ನಾಗಿ ಆಚರಿಸುತ್ತಿರುವುದು ಭಾರತೀಯರು ಹೆಮ್ಮ ಪಡುವ ವಿಚಾರ. ಅದಲ್ಲದೇ ಇಡೀ ಜಗತ್ತು ಮಹಾತ್ಮ ಗಾಂಧೀಜಿಯನ್ನು ಅನುಸರಿಸುತ್ತದೆ ಎಂದು ಉಪವಿಭಾಗ ಅಧಿಕಾರಿ ಆಬೀದ್ ಗದ್ಯಾಳ ಹೇಳಿದರು.ಸೋಮವಾರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಆಯೋಜಿಸಿರುವ ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹಾದ್ದೂರ ಜಯಂತಿ ಆಚರಿಸಿ ಮಾತನಾಡಿದರು.ಮಹಾತ್ಮ ಗಾಂಧೀಜಿ ಅವರ ಆದರ್ಶ ತತ್ವ ಎಲ್ಲರೂ ಪರಿಪಾಲನೆ ಮಾಡಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಗ್ರೇಡ್ ೨ ತಹಶಿಲ್ದಾರ ಧನಪಾಲ ಶೆಟ್ಟಿ , ಸಮಾಜ ಕಲ್ಯಾಣ ಅಧಿಕಾರಿ ಬಿ.ಜೆ ಇಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಆಲಗೂರ, ಆರ್.ಬಿ ಮೂಗಿ, ಎಸ್.ಆರ್ ಮುಜಗೊಂಡ, ಕಂದಾಯ ನಿರೀಕ್ಷಕ ಎಚ್.ಎಚ್ ಗುನ್ನಾಪುರ, ಸಂಕೇತ ಪಾಟೀಲ, ಗ್ರಾಮ ಲೆತ್ಕಾಧಿಕಾರಿ ಪ್ರಕಾಶ ಚವಡಿಹಾಳ, ವಿರೇಶ ಜೇ ಇನ್ನೂ ಅನೇಕ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವಿಜಯಪುರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರೀ ಅವರು ಈ ದೇಶಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡಿದ್ದು, ಇಂತಹ ಮಹಾನ್ ವ್ಯಕ್ತಿಗಳಲ್ಲಿರುವ ಪ್ರಾಮಾಣಿಕತೆ, ತ್ಯಾಗ, ನಿಷ್ಠೆಯಂತಹ ಉತ್ತಮ ಸಂದೇಶಗಳು, ತತ್ವಾದರ್ಶಗಳು ಹಾಗೂ ಜೀವನ ಮೌಲ್ಯಗಳನ್ನು ಮುಂದಿನ ಯುವಪಿಳಿಗೆಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಅ. ೨ರಂದು ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮಕ್ಕೆ ಚರಕದಲ್ಲಿ ನೂಲುವ ಮೂಲಕ ಚಾಲನೆ ನೀಡಿ, ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಮಾತನಾಡಿ, ಬ್ರಿಟೀಷ್ ದಾಸ್ಯದಿಂದ ದೇಶವನ್ನು ಮುಕ್ತಗೊಳಿಸುವಲ್ಲಿ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದು, ತಮ್ಮ ಬದುಕು, ಸರ್ವಸ್ವವನ್ನೇ ದೇಶಕ್ಕೆ ಅರ್ಪಿಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುವ ಮೂಲಕ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟಕ್ಕೆ ಮಾದರಿಯಾದವರು ಮಹಾತ್ಮ ಗಾಂಧೀಜಿಯವರು ಎಂದು…
ಜಿಲ್ಲಾಡಳಿತ & ಜಿಪಂ ವತಿಯಿಂದ ಗಾಂಧಿಭವನದಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ವಿಜಯಪುರ: ವಿಜಯಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಗಾಂಧಿಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾದ ಮಹಾತ್ಮಗಾಂಧೀಜಿ ಅವರ ೧೫೪ನೇ ಜಯಂತಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.ಜಯಂತಿ ಕಾರ್ಯಕ್ರಮವನ್ನು ಸಂಸದ ರಮೇಶ ಜಿಗಜಿಣಗಿ ಅವರು ಚರಕ ನೇಯುವ ಮೂಲಕ ಉದ್ಘಾಟಿಸಿ, ರಾಷ್ಟçಪಿತ ಮಹಾತ್ಮಗಾಂಧಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವನಮನ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ, ಭಗವತ್ ಗೀತೆ,ಕುರಾನ್,ಬೈಬಲ್ ಜೈನ್,ಸಿಖ್ ಧರ್ಮ ಪಠಣ, ಸೇವಾದಳದವರಿಂದ ಗಾಂಧಿಜಿಯವರ ಪ್ರಿಯ ಭಜನೆ ಹಾಡಲಾಯಿತು. ಕಾರ್ಯಕ್ರಮದಲ್ಲಿ ಛದ್ಮವೇಷಧಾರಿಯಾಗಿ ಬಂದ ಮಕ್ಕಳು ಕಾರ್ಯಕ್ರಮದ ಆಕರ್ಷಣೀಯ ಕೇಂದ್ರ ಬಿಂದುವಾಗಿದ್ದರು.ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ/ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ…
