Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಬಿಜಾಪುರ ಜಿಲ್ಲಾ ಆಫಸೆಟ್ ಪ್ರಿಂಟರ್ಸ್ ಅಸೋಸಿಯೇಶನ್ ವತಿಯಿಂದ ನಗರದ ಶಾಪೇಟೆಯಲ್ಲಿರುವ ಅಸೋಸಿಯೇಶನ್ ಕಚೇರಿಯಲ್ಲಿ ಸೋಮವಾರ ಮಹಾತ್ಮಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿಜಿ ಜಯಂತಿ ಅಂಗವಾಗಿ ಇಬ್ಬರೂ ಮಹನೀಯರ ಭಾವಚಿತ್ರಕ್ಕೆ ಗೌರವನ ನಮನ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.ಸೋಮವಾರ ಸಂಘದ ಕಚೇರಿಯಲ್ಲಿ ಆಯೋಜಿಸಲಾದ ಜಯಂತಿ ಕಾರ್ಯಕ್ರಮದಲ್ಲಿ ಅಸೋಸಿಯೇಶನ್ ಅಧ್ಯಕ್ಷ ಆನಂದ ಬಗಾದಿ ಅವರು ಮಾತನಾಡಿ, ಭಾರತವನ್ನು ಪರಕೀಯರ ಗುಲಾಮಗಿರಿಯಿಂದ ಮುಕ್ತಿಗೊಳಿಸಿ ಸ್ವಾತಂತ್ರ್ಯ ದೊರಕಿಸಿಕೊಡುವದರಲ್ಲಿ ಮುಖ್ಯವಾಗಿ ಶಾಂತಿ ಮತ್ತು ಅಹಿಂಸಾ ಮಾರ್ಗವನ್ನು ಅನುಸರಿಸಿ ಹೋರಾಟ ಮಾಡಿದ ಮಹಾತ್ಮಾ ಗಾಂಧಿಜಿ ಮತ್ತು ಭಾರತದ ದ್ವಿತೀಯ ಪ್ರಧಾನಿಯಾಗಿ ಸದೃಢ ಭಾರತವನ್ನು ಮಾರ್ಪಡಿಸಲು ಶ್ರಮವಹಿಸಿದ ನಾಯಕ ಲಾಲ ಬಹಾದ್ದೂರ ಶಾಸ್ತ್ರಿಜಿಯವರು ಎರಡು ಅಪರೂಪದ ರತ್ನಗಳು ಎಂದು ಹೇಳಿದರು.ಅಸೋಸಿಯೇಶನ್ ಸದಸ್ಯರಾದ ರವೀಂದ್ರ ಕುಲಕರ್ಣಿ, ಪ್ರಕಾಶ ಮಠ ಮಾತನಾಡಿದರು.ಕಾರ್ಯಕ್ರಮದಲ್ಲಿ ಸಂಘದ ಖಜಾಂಚಿ ಶಿವಮೂರ್ತಿ ಗೊಳಸಂಗಿಮಠ, ಕಾರ್ಯದರ್ಶಿ ಮಲ್ಲಿಕಾರ್ಜುನ ಆಲಗೂರ, ನಿರ್ದೇಶಕರಾದ ವಸಂತ ನಾಯಕರ, ಮಹಾಂತೇಶ ಹಿರೇಮಠ, ಶಿವಾನಂದ ಗುದ್ದಿ, ಸಂಗಮೇಶ ಹಿರೇಮಠ, ದಸ್ಯರಾದ ಈರಣ್ಣ ಅಣೆಪ್ಪನವರ, ಗೌತಮ ಪಾಟೀಲ, ಬಸವರಾಜ…
ಜಾಲವಾದ ಖಾಜಾಸಾಹೇಬ ದರ್ಗಾ ಉರುಸ್ | ಚಿಂತನಗೋಷ್ಠಿ | ಬಹುಮಾನ ವಿತರಣೆ ದೇವರಹಿಪ್ಪರಗಿ: ಧಾರ್ಮಿಕ ಚಿಂತನಗೋಷ್ಠಿಗಳು ಸಾಮಾಜಿಕ ಸಾಮರಸ್ಯಕ್ಕೆ ಸಹಕಾರಿಯಾಗಿವೆ ಎಂದು ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆಯ ನೇತ್ರತಜ್ಞ ಪ್ರಭುಗೌಡ ಲಿಂಗದಳ್ಳಿ(ಚಬನೂರ) ಹೇಳಿದರು.ತಾಲ್ಲೂಕಿನ ಜಾಲವಾದ ಗ್ರಾಮದಲ್ಲಿ ಖಾಜಾಸಾಹೇಬ ದರ್ಗಾ ಉರುಸ್ ಅಂಗವಾಗಿ ಭಾನುವಾರ ಜರುಗಿದ ಚಿಂತನಗೋಷ್ಠಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಸೌಹಾರ್ದಯುತ ಜೀವನಕ್ಕೆ ಜಾಲವಾದ ಗ್ರಾಮ ಮಾದರಿಯಾಗಿದೆ. ಇಂದಿನ ಉರುಸ್ ಕಾರ್ಯಕ್ರಮದಲ್ಲಿ ಜಾತ್ಯಾತೀತ ತತ್ವದಡಿ ಸಹೋದರರಂತೆ ಎಲ್ಲರೂ ಪಾಲ್ಗೊಂಡಿರುವುದು ಹೆಮ್ಮೆಯ ವಿಷಯ ಎಂದರು.ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ವಿಜಯಪುರ ಸಿಕ್ಯಾಬ್ ಮಹಿಳಾ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಯು.ಎನ್.ಕುಂಟೋಜಿ ಮಾತನಾಡಿದರು.ಸಾನಿಧ್ಯ ವಹಿಸಿದ್ದ ದೇವರಹಿಪ್ಪರಗಿ ಗದ್ದುಗೆಮಠದ ಮಡಿವಾಳೇಶ್ವರ ಸ್ವಾಮೀಜಿ, ಕಿರಿಯ ಮಹಾಂತಶ್ರೀ ಮಸಬಿನಾಳದ ಸಿದ್ಧರಾಮಸ್ವಾಮಿಜೀ ಆಶೀರ್ವಚನ ನೀಡಿದರು.ಜೆಡಿಎಸ್ ಧುರೀಣ ಸಚೀನಗೌಡ ಪಾಟೀಲ(ಕುದರಿ ಸಾಲವಾಡಗಿ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ, ಶಿಕ್ಷಕ ಕಬೂಲ್ ಕೊಕಟನೂರ, ಡಿ.ಎ. ಇನಾಮದಾರ, ಶಂಕರ ಮಣೂರ, ವೀರೇಶ ಕುದರಿ, ಲಕ್ಷಣ ಕೆಂಗಟುಗಿ, ಮಾಳು ಚಿತ್ತಾಪೂರ, ಸಿದ್ಧರಾಮ…
ಭಕ್ತಿ ಸಾಹಿತ್ಯೋತ್ಸವ | ದಯಾನಂದ ನೂಲಿ ಗೆ ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಬೆಳಗಾವಿ: ಪಂ.ಪುಟ್ಟರಾಜರು ಕನ್ನಡ ನಾಡು ಕಂಡ ಅಪರೂಪದ ಮಾಣಿಕ್ಯವಾಗಿದ್ದರು. ಕಣ್ಣಿದ್ದವರಿಗಿಂತ ಅಸಾಧ್ಯವಾದ ಧಿವ್ಯದೃಷ್ಠಿ ಹೊಂದಿದ್ದರು. ಭೌತಿಕ ಅಂಧತ್ವವನ್ನ ಮೀರಿ ಸಾವಿರಾರು ಅಂಧರ ಬೆಳಕಾಗಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಿದರು. ಸಾಹಿತ್ಯ, ಸಂಗೀತಕ್ಕೂ ಅಪಾರ ಸೇವೆ ಸಲ್ಲಿಸಿದ ಅವರು ಕನ್ನಡ, ಹಿಂದಿ, ಸಂಸ್ಕೃತ ಸೇರಿ ೮೫ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವುದು ಸಾಮಾನ್ಯ ಸಂಗತಿಯಲ್ಲ. ಅಂತಹವರ ಹೆಸರಿನಲ್ಲಿ ೨೩ ವರ್ಷಗಳಿಂದ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ ನೀಡುತ್ತಾ ಬಂದಿರುವ ಸೇವಾ ಸಮಿತಿಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಕಾರಂಜಿ ಮoದಂ ಗುರುಸಿದ್ಧ ಸ್ವಾಮೀಜಿ ಹೇಳಿದರು.ಗದುಗಿನ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಬೆಳಗಾವಿಯ ಸರಸ್ವತಿ ವಾಚನಾಲಯದಲ್ಲಿ ಆಯೋಜಿಸಿದ್ದ ‘ಪದ್ಮಭೂಷಣ’ ಡಾ. ಪಂ. ಪುಟ್ಟರಾಜ ಶಿವಯೋಗಿ ಭಕ್ತಿ ಸಾಹಿತ್ಯೋತ್ಸವ-೨೩ ಉಧ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಿ ಅವರು ಆಶೀರ್ವವಚನ ನೀಡಿದರು.ಭಕ್ತಿ ಸಾಹಿತ್ಯೋತ್ಸವದ ಪ್ರಮುಖ ಭಾಗವಾದ, ಡಾ. ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ…
ವಿಜಯಪುರ: ಸತ್ಯ-ನಿಷ್ಟೆ-ಅಹಿಂಸೆಯನ್ನು ಬೋಧಿಸಿದ, ದೇಶ ಸೇವೆ, ಸ್ವಾತಂತ್ರ್ಯ ಹೋರಾಟ, ಹೀಗೆ ವಿವಿಧ ಕ್ಷೇತ್ರಗಳಲ್ಲಿನ ಗಾಂಧೀಜಿ ಅವರ ಕೊಡುಗೆ ಸ್ಮರಿಸುವಂಥದ್ದು ಎಂದು ಬಬಲೇಶ್ವರ ಶಾಂತವೀರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಜೆ.ಆರ್.ಹಾವಿನಾಳ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ ಬಹಾದ್ದೂರ ಶಾಸ್ತ್ರಿ ಅವರ ಜಯಂತಿಯಲ್ಲಿ ಮಾತನಾಡಿದ ಅವರು, ದೇಶದ ಯುವ ಜನತೆಗೆ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶಗಳನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸತ್ಯ, ಅಹಿಂಸೆಯನ್ನು ಬೋಧಿಸಿದ ಅವರು ದೇಶದ ಸ್ವಾತಂತ್ರ್ಯ ಹೋರಾಟಗಾರದಲ್ಲಿ ಮುಂಚೂಣಿಯಾದವರು. ಅದರಂತೆ ಲಾಲ ಬಹಾದ್ದೂರ ಶಾಸ್ತ್ರಿಯವರ ಅವರ ಸಾಹಸ ಧೈರ್ಯ ಮೆಚ್ಚುವಂಥದ್ದು. ಈ ದೇಶಕ್ಕೆ ಅವರ ಕೊಡುಗೆಯು ಅಪಾರವಾದದ್ದು.ಇಂತಹ ಮಹಾನ್ ವ್ಯಕ್ತಿಗಳು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಮುನ್ನೆಡೆಯಬೇಕು. ಅವರ ಆಚಾರ ವಿಚಾರಗಳನ್ನು ಯುವಜನತೆ ಅಳವಡಿಸಿಕೊಂಡು ದೇಶಸೇವೆಗೆ ಮುಂದಾಗಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ.ಆರ್.ಎಂ.ಮಿರ್ದೆ, ಉಪ ಪ್ರಾಚಾರ್ಯ ಪ್ರೊ.ಎ.ಬಿ.ಪಾಟೀಲ, ಪಿಯುಸಿ…
ವಿಜಯಪುರ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಥ್ರೋ ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಕ್ರೀಡಾ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಈ ಪಂದ್ಯಾವಳಿ ಆಯೋಜಿಸಲಾಗಿತ್ತು.ಪಂದ್ಯಾವಳಿಯ ಬಳಿಕ ನಡೆದ ಸಮಾರಂಭದಲ್ಲಿ ಕ್ರೀಡಾಪಟುಗಳಿಗೆ ಟ್ರೋಫಿ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಕ ಹನಮಂತ ಪವಾರ, ದೈಹಿಕ ಶಿಕ್ಷಕರಾದ ಯಲ್ಲಪ್ಪ ಜಂಪ್ಲಿ, ಸಮೀರ ಬೆನಕನಹಳ್ಳಿ, ನಿರ್ಣಾಯಕ ಮತ್ತು ಜಿಲ್ಲಾ ಥ್ರೋ ಬಾಲ್ ಸಂಸ್ಥೆಯ ಅಧ್ಯಕ್ಷ ಕಾಲೇಜಿನ ವಿದ್ಯಾರ್ಥಿನಿಯರಾದ ಸೌಮ್ಯ, ಪೊಜಾ, ಮೇಘಾ, ರಶ್ಮಿ, ಶೀಫಾ ಮತ್ತು ಪಾರ್ವತಿ ಉಪಸ್ಥಿತರಿದ್ದರು.ವಿದ್ಯಾರ್ಥಿನಿಯರ ಈ ಸಾಧನೆಗೆ ಬಿ.ಎಲ್.ಡಿ.ಈ ಸಂಸ್ಥೆಯ ಆಡಳಿತ ಮಂಡಳಿ, ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ವಿಜಯಪುರ: ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯ ಅಂಗವಾಗಿ ನಗರದ ರಂಭಾಪುರ ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಎಸ್ಡಿಎಂಸಿ ಸದಸ್ಯರು 16 ಕುರ್ಚಿಗಳನ್ನು ಶಾಲೆಗೆ ನೀಡಿದ್ದಾರೆ. ಎಲ್ಲ ಸದಸ್ಯರ ಪರವಾಗಿ ರಾಮನಗೌಡ ಪಾಟೀಲ ಅವರು ಶಾಲಾ ಮುಖ್ಯೋಪಾಧ್ಯಾಯರಿಗೆ ಒಪ್ಪಿಸಿದರು.SDMC ಅದ್ಯಕ್ಷ ಸಂಗಮೇಶ ಗೋಡೆನವರ ಉಪಸ್ಥಿತರಿದ್ದರು.
ಮೋರಟಗಿ: ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮಹಾತ್ಮ ಗಾಂಧಿಜೀ ಜಯಂತಿ ಆಚರಿಸಲಾಯಿತು.ಎಸ್.ಡಿ.ಎಮ್.ಸಿ.ಅಧ್ಯಕ್ಷ ಹಾವಣ್ಣ ಕಕ್ಕಳಮೇಲಿ ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.ಪಿಕೆಪಿಎಸ್ ಅಧ್ಯಕ್ಷ ವೀರನಗೌಡ ಪಾಟೀಲ, ನಿರ್ದೆಶಕರಾದ ವಿದ್ಯಾಧರ ಮಳಗಿ, ಸಿದ್ದು ಮಡ್ಡಿ, ಇರಬಸಪ್ಪ ಮಳಗಿ, ಸಿಕಂದರ ಮುಲ್ಲಾ, ಶರಣಗೌಡ ಮಾಲಿಪಾಟೀಲ, ಭೂತಾಳಿ ಖಾನಾಪೂರ ಸೇರಿದಂತೆ ಹಲವರು ಇದ್ದರು.
ಚಡಚಣ: ಪಟ್ಟಣದ ತಹಶಿಲ್ದಾರ ಕಛೇರಿಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿ ನಿಮಿತ್ತ ತಾಲ್ಲೂಕು ಆಡಳಿತದ ತಹಶಿಲ್ದಾರ ಕಛೇರಿಯಲ್ಲಿ ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ಶಭೀರ ನಧಾಪ, ಕುತ್ಬುದಿನ ಪಟೇಲರು, ಕುಬೇರ ಸಿಂಧೆ, ಮುರಗೇಶ ಸಿಂಪಿ, ತೇಲಿ ಗುರುಗಳು ,ಸೋಮಶೇಖರ ಬಡಿಗೇರ, ಬಂದು ನಧಾಪ, ನಾರಾಯಣ ವಾಘಮೂರೆ ಮತ್ತು ಕಛೇರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ: ತ್ರಿಭಾಷಾ ಕವಿ, ಶಿವಯೋಗಿ ‘ಪದ್ಮಭೂಷಣ’ ಡಾ. ಪಂ. ಪುಟ್ಟರಾಜ ಕವಿ, ಗವಾಯಿಗಳವರ ಸಾಹಿತ್ಯ ಸೇವೆಯ ಸ್ಮರಣೆಗಾಗಿ ಡಾ. ಪಂ.ಪುಟ್ಟರಾಜ ಸೇವಾ ಸಮಿತಿ (ರಿ) ಗದಗ ವತಿಯಿಂದ ‘ಪದ್ಮಭೂಷಣ’ ಡಾ. ಪಂ.ಪುಟ್ಟರಾಜ ಶಿವಯೋಗಿ ಭಕ್ತಿ ಸಾಹಿತ್ಯೋತ್ಸವ-೨೩ ಸಮಾರಂಭವನ್ನು ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ (ರಿ) ಗದಗ ಸಂಯುಕ್ತ ಆಶ್ರಯದಲ್ಲಿ ಅ.೦೧ ರಂದು ಬೆಳಿಗ್ಗೆ ೧೦-೩೦ ರಿಂದ ಸಂಜೆ ೭-೩೦ ವರೆಗೆ ಬೆಳಗಾವಿ ನಗರದ ಸರಸ್ವತಿ ವಾಚನಾಲಯ ಕೋರೆಗಲ್ಲಿ ಶಹಪೂರದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦-೩೦ ನಡೆಯುವ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಬೆಳಗಾವಿ ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ ವಹಿಸಿಕೊಳ್ಳುವರು. ದುರದುಂಡೇಶ್ವರ ಶಾಖಾಮಠದಶಿವ ಪಂಚಾಕ್ಷರಿ ಸ್ವಾಮೀಜಿ ಇವರ ಸಮ್ಮುಖವಿರುತ್ತದೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಮಾರಂಭ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯೆ ಮಂಗಳಾ ಸುರೇಶ ಅಂಗಡಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಶರಣ ಸಾಹಿತ್ಯ ಪರಿಷತ್ತು ಗೋಕಾಕ ತಾಲೂಕಾಧ್ಯಕ್ಷ ಮಹಾಂತೇಶ ತಾಂವಶಿ ಆಗಮಿಸಲಿದ್ದಾರೆ.ಪಂ.ಪುಟ್ಟರಾಜ ಸೇವಾ ಸಮಿತಿ ಸಂಘಟನಾ ಕಾರ್ಯದರ್ಶಿಶಿವಬಸಯ್ಯ ಚರಂತಿಮಠ…
ಕಾಂಗ್ರೆಸ್ನಲ್ಲಿ ಲಿಂಗಾಯತರ ಕಡೆಗಣನೆ? ಮತ್ತೆ ಚಿಗುರೊಡೆದ ಲಿಂಗಾಯತ ಸಿಎಂ ಕೂಗು | ಪ್ರಮುಖ ಹುದ್ದೆಗಳಲ್ಲೂ ಮೂಲೆಗುಂಪು | ತಾರತಮ್ಯ ನೀತಿ ದಾವಣಗೆರೆ: ಕಾಂಗ್ರೆಸ್ನಲ್ಲಿ ಲಿಂಗಾಯತ ಸಿಎಂ ಕೂಗು ಮತ್ತೆ ಚಿಗುರೊಡೆದಿದೆ. ಜೊತೆಗೆ ಪ್ರಮುಖ ಹುದ್ದೆಗಳನ್ನು ನೀಡುವ ವಿಚಾರದಲ್ಲೂ ಲಿಂಗಾಯತರನ್ನು ಕಡೆಗಣಿಸುತ್ತಿರುವ ಆರೋಪ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಳಿ ಬಂದಿದೆ.ಕಾಂಗ್ರೆಸ್ನಲ್ಲಿ ಲಿಂಗಾಯತರಿಗೆ ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ ಎಂದು ದೂರಲಾಗುತ್ತಿದೆ.ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನೇರವಾಗಿಯೇ ಆರೋಪ ಮಾಡಿದ್ದಾರೆ.ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ನೀಡುತ್ತಿಲ್ಲ. ಲಿಂಗಾಯತ ಅಧಿಕಾರಿಗಳಿಗೆ ಪ್ರಮುಖ ಹುದ್ದೆಗಳೇ ಸಿಗುತ್ತಿಲ್ಲ ಎಂದು ಅಸಮಾಧಾನಗೊಂಡರು.ಜೊತೆಗೆ ಅವರು ಲಿಂಗಾಯತ ಸಿಎಂ ಪರ ಧ್ವನಿಯನ್ನು ಕೂಡ ಎತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಸರ್ಕಾರದ ಆಯಕಟ್ಟಿನ ಹುದ್ದೆಗಳು ನಮ್ಮ ಸಮಾಜದವರಿಗೆ ಕೊಟ್ಟಿಲ್ಲ. ಈ ಹಿಂದೆ ಎಲ್ಲರೂ ಚೆನ್ನಾಗಿದ್ದರು. ನಿಜಲಿಂಗಪ್ಪ, ಜೆ.ಎಚ್.ಪಾಟೀಲರು ಇದ್ದಾಗ ಎಲ್ಲರೂ ಚೆನ್ನಾಗಿದ್ದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯವಾದ ಹುದ್ದೆಗಳನ್ನು ಬಹಳಷ್ಟು ಜನರಿಗೆ ಕೊಟ್ಟಿಲ್ಲ. ಡಿಸಿಎಂ…
