Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಶ್ವ ಹೃದಯ ದಿನಾಚರಣೆ ಮತ್ತು ವಿಶ್ವ ರೇಬಿಸ್ ದಿನಾಚರಣೆ ಜನಜಾಗೃತಿ ಜಾಥಾಕ್ಕೆ ಚಾಲನೆ ವಿಜಯಪುರ: ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ವಿಶ್ವಾದ್ಯಂತ ಪ್ರತಿ ವರ್ಷ ೧೭.೩ ಮಿಲಿಯನ್ ಜನರು ಸಾವಿಗಿಡಾಗುತ್ತಿದ್ದಾರೆ. ನಿಯಮಿತ ಯೋಗಾಭ್ಯಾಸ ಅಳವಡಿಸಿಕೊಂಡು ನಿತ್ಯವೂ ಹೃದಯದ ಕುರಿತು ಕಾಳಜಿ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಕರೆ ನೀಡಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ ಎನ್.ಸಿ.ಡಿ.ಘಟಕ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಜಿಲ್ಲಾ ಶಾಖೆ ಡಾ|| ಬಿದರಿಯವರ ಅಶ್ವಿನಿ ಆಸ್ಪತ್ರೆ ಹಾಗೂ ಅಶ್ವಿನಿ ಇನ್ಸಿಟ್ಯೂಟ್ ವಿವಿದ ನರ್ಸಿಂಗ್ ಕಾಲೇಜಗಳು ಇವರ ಸಹಯೋಗದಲ್ಲಿ ಸೆ.೩೦ರ ಶನಿವಾರ ಆಯೋಜಿಸಲಾದ ವಿಶ್ವ ಹೃದಯ ದಿನಾಚರಣೆ ಮತ್ತು ವಿಶ್ವ ರೇಬಿಸ್ ದಿನಾಚರಣೆ ಜನಜಾಗೃತಿ ಜಾಥಾಕ್ಕೆ ಅಶ್ವಿನಿ ಆಸ್ಪತ್ರೆಯ ಮುಖ್ಯಸ್ಥ ಚಿಕ್ಕಮಕ್ಕಳ ತಜ್ಞ ಡಾ|| ಎಲ್.ಎಚ್ ಬಿದರಿಯವರೊಂದಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಜಗತ್ತಿನಾದ್ಯಂತ ಹೆಚ್ಚು ಮನುಷ್ಯ…
ವಿಜಯಪುರ: ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ ವತಿಯಿಂದ ಕರ್ನಾಟಕದಲ್ಲಿ ರಿಟೇಲ್ ಮಾರಾಟ ವಿತರಕರ ಆಯ್ಕೆಗೆ ಅರ್ಜಿ ಆಹ್ವಾನಿಸಿದೆ.ವಿತರಕರ ಆಯ್ಕೆಗೆ ಡಿಫೆನ್ಸ್ ಕೆಟಗರಿರವರು (ಡಿಫೆನ್ಸ್ ವಿಭಾಗ) ಅರ್ಜಿಯನ್ನು ದಿನಾಂಕ : ೧೭-೧೦-೨೦೨೩ರೊಳಗಾಗಿ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ನಲ್ಲಿ https://www.petrolpumpdealerchayan.in ವೀಕ್ಷಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲೆಯ ಎರಡು ನಮ್ಮ ಕ್ಲಿನಿಕ್ಗಳನ್ನು ಸಂಜೆ ವೇಳೆ ಆರಂಬಿಸಲಾಗುತ್ತಿದ್ದು, ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆ ಮಾಡಲಾಗಿದ್ದು, ವಿಜಯಪುರ ನಗರದ ಅಡಕಿಗಲ್ಲಿ (ಜೋರಾಪುರ ಪೇಟೆ) ಆಯುಷ ಆಸ್ಪತ್ರೆ ಆವರಣ ಮತ್ತು ಬಸವನಬಾಗೇವಾಡಿಯ ಬಸವ ನಗರದ ನಮ್ಮ ಕ್ಲಿನಿಕ್ಗಳ ವೇಳಾಪಟ್ಟಿ ಬದಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ತಿಳಿಸಿದ್ದಾರೆ.ಪ್ರಸ್ತುತ ಬೆಳಿಗ್ಗೆ ೯ ರಿಂದ ಸಂಜೆ ೪-೩೦ರವರೆಗೆ ಕಾರ್ಯನಿರ್ವಹಿಸುತ್ತಿರುವ ಈ ಕ್ಲಿನಿಕ್ಗಳು ಇನ್ನೂ ಮುಂದೆ ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೧೨ ಹಾಗೂ ಸಂಜೆ ೪ ರಿಂದ ರಾತ್ರಿ ೮ ಗಂಟೆವರೆಗೆ ಕಾರ್ಯನಿರ್ವಹಿಸಲಿವೆ. ರಾಜ್ಯದ ೪೧೫ ನಮ್ಮ ಕ್ಲಿನಿಕ್ಗಳ ಪೈಕಿ ಆಯ್ದ ೫೨ ನಮ್ಮ ಕ್ಲಿನಿಕ್ಗಳಲ್ಲಿ ಪ್ರಾಯೋಗಿಕವಾಗಿ ವೇಳೆ ಬದಲಾವಣೆ ಮಾಡಲಾಗಿದ್ದು, ನಗರ ಪ್ರದೇಶದಲ್ಲಿ ವಾಸಿಸುವ ಬಡ, ದುರ್ಬಲ, ಕೂಲಿಕಾರ್ಮಿಕರು ಮತ್ತು ದುಡಿಯುವ ವರ್ಗದ ಜನರು ಈ ಕ್ಲಿನಿಕ್ಗಳಲ್ಲಿ ದೊರೆಯುವ ಆರೋಗ್ಯ ಸೇವೆಯನ್ನು ಬಳಕೆ ಮಾಡಿಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಅಸೋಸಿಯೇಶನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್ಪೋರ್ಟ್ ಅಂಡರ್ ಟೆಕ್ಕಿಂಗ್ ವತಿಯಿಂದ ಸೆ.೨೧ ರಿಂದ ೨೩ರವರೆಗೆ ಗುಜರಾತಿನ ಅಹಮದಾಬಾದ್ನಲ್ಲಿ ಹಮ್ಮಿಕೊಳ್ಳಲಾದ ಅಂತರ ನಿಗಮದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ತೃತೀಯ ಸ್ಥಾನ ಪಡೆದುಕೊಂಡಿದೆ.ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತಾಳಿಕೋಟೆ ಘಟಕದ ಅಮರೇಶ ಎಸ್.ಮೇಟಿ, ಬಸವನಬಾಗೇವಾಡಿ ಘಟಕದ ಎಸ್.ಆರ್.ಶೇಖ ಹಾಗೂ ಆಯ್.ಆಯ್.ಐರೊಡಗಿ ಅವರ ಸಾಧನೆಯನ್ನು ಮೆಚ್ಚಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಮೊಹ್ಮದ ಫೈಜ್ ಹಾಗೂ ಅಧಿಕಾರಿ ಸಿಬ್ಬಂದಿಗಳು ಕ್ರೀಡಾಪಟುಗಳನ್ನು ಸನ್ಮಾನಿಸಿ ಗೌರವಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಅಕ್ಟೋಬರ್ ೫ ಹಾಗೂ ೬ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಕ್ಟೋಬರ್ ೫ ರಂದು ಜಿಲ್ಲೆಯಲ್ಲಿರುವ ಅಂಗನವಾಗಿ ಕೇಂದ್ರ, ಮಕ್ಕಳ ಪಾಲನಾ ಸಂಸ್ಥೆ, ದತ್ತು ಕೇಂದ್ರ, ವಸತಿ ನಿಲಯ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ. ಅಕ್ಟೊಬರ್ ೬ ರಂದು ಮಕ್ಕಳ ರಕ್ಷಣಾ ವ್ಯವಸ್ಥೆಗಳ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅಕ್ಟೋಬರ್ ೦೧ ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦-೩೦ಕ್ಕೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ…
ವಿಜಯಪುರ: ವಿಜಯಪುರ ಐತಿಹಾಸಿಕ ನಗರವಾಗಿದ್ದು, ದೇಶ ವಿದೇಶದ ಪ್ರವಾಸಿಗರು ಭೇಟಿ ನೀಡುವ ಪ್ರವಾಸಿ ತಾಣವೂ ಆಗಿರುವುದರಿಂದ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದರು. ಅವರು ವಿಜಯಪುರ ನಗರದ ಸ್ವಚ್ಛತೆ ಕುರಿತು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದು, ಕೂಡಲೇ ತಡೆಗಟ್ಟುವ ನಿಟ್ಟಿನಲ್ಲಿ ಮನೆ-ಮನೆಗೆ ತೆರಳಿ ಹಸಿ ಮತ್ತು ಒಣ ಕಸ ಬೇರ್ಪಡಿಸಿ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ ವಾಹನಕ್ಕೆ ಕಸ ಹಾಕಬೇಕು. ನಗರದ ಪ್ರತಿ ವಾರ್ಡಗಳಲ್ಲಿರುವ ವಾಣಿಜ್ಯ ಹಾಗೂ ವಸತಿ ಸಮುಚ್ಛಯಗಳ ಕಟ್ಟಡಗಳ ಪ್ರತಿ ಮನೆಗೆ ತೆರಳಿ ಹಸಿ ಮತ್ತು ಒಣ ಕಸ ಪ್ರತ್ಯೇಕಿಸಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಹಾಗೂ ಪ್ರತಿ ವಾರ್ಡಗಳಲ್ಲಿಯೂ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡುಸಬೇಕು.ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡುತ್ತಿರುವ ಅಂಗಡಿ ಹಾಗೂ ಸಂಗ್ರಹಿಸಿಟ್ಟಿರುವ ಗೋದಾಮುಗಳ ಮೇಲೆ ದಾಳಿ ಮಾಡಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದು…
ವಿಜಯಪುರ: ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಆಯ್ಕೆಯಾದ ಹಿಂಬಾಕಿ ಉಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ಅಂತಿಮ ಆಯ್ಕೆ ಪಟ್ಟಿಯನ್ನು ವಿಜಯಪುರ ನಗರದ ಇಂಡಿ ರಸ್ತೆಯಲ್ಲಿರುವ ಜಿಲ್ಲಾ ಕ್ರೀಡಾಂಗಣದ ಎದುರಿಗಿರುವ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಅಕ್ಟೋಬರ್ ೦೩ ರಂದು ಪ್ರಕಟಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.ಎರಡು ಲಕ್ಷ ರೂ.ಗಳ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸುವ ಯೋಜನೆಯಡಿ ಪರಿಶಿಷ್ಟ ಜಾತಿಯ ೧೨, ಪರಿಶಿಷ್ಟ ಪಂಗಡದ ೦೫, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದ ೧೨ ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಮುದ್ದೇಬಿಹಾಳ ಶಿಶು ಅಬಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಇಂಗಳಗಿ ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾದ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದ್ದು, ಪ್ರಕಟಿತ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.ತಾತ್ಕಾಲಿಕವಾಗಿ ಆಯ್ಕೆಯಾದ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ : ೧೦-೧೦-೨೦೨೩ರೊಳಗೆ ಆಕ್ಷೇಪಣೆಗಳನ್ನು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಮಾರುತಿ ನಗರ, ಎಂ.ಜಿ.ಎಂ.ಕೆ. ಮೈದಾನದ ಹತ್ತಿರ, ಮುದ್ದೇಬಿಹಾಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಮುದ್ದೇಬಿಹಾಳ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ೨೦೨೩ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟ್ಲ್ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮನಿರ್ದೇಶನ ಸೇವಾ ಸಿಂಧು ಪೋರ್ಟ್ಲ್ ನಲ್ಲಿ ಅಕ್ಟೊಬರ್ ೦೧ ರಿಂದ ೧೫ರವರೆಗೆ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.
