Author: editor.udayarashmi@gmail.com

ವಿಜಯಪುರ: ಕಾರ್ಮಿಕ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹ್ಮದ ಮೊಹಸಿನ್ ಅವರು ಅಕ್ಟೋಬರ್ ೩ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಅಕ್ಟೋಬರ್ ೩ರಂದು ಬೆಳಿಗ್ಗೆ ೭ ಗಂಟೆಗೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ ೯-೩೦ ರಿಂದ ೧೦-೩೦ರವರೆಗೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಬೆಳಿಗ್ಗೆ ೧೧-೩೦ರಿಂದ ಮಧ್ಯಾಹ್ನ ೧೨-೩೦ರವರೆಗೆ ಕಾರ್ಮಿಕ ಸಂಘಟನೆಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨-೩೦ರಿಂದ ೧-೩೦ರವರೆಗೆ ಮಾಲೀಕ ವರ್ಗದ ಸಂಘಟನೆಗಳ, ಆಡಳಿತ ವರ್ಗದವರ ಸಭೆಯಲ್ಲಿ ಭಾಗವಹಿಸಿ, ಮಧ್ಯಾಹ್ನ ೨ ಗಂಟೆಗೆ ವಿಜಯಪುರದಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ.

Read More

ವಿಜಯಪುರ: ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ/ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ ೩ ವಿದ್ಯಾರ್ಥಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.”ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ಟಕ್ಕಳಕಿ ಗ್ರಾಮ ಜಿ.ಎಚ್.ಎಸ್. ಶಾಲೆಯ ವಿದ್ಯಾರ್ಥಿನಿ ಬಸಮ್ಮಾ ರು.ಬಿರಾದಾರ ಪ್ರಥಮ, ವಿಜಯಪುರ ನಗರದ ಕೆ.ಪಿ.ಎಸ್. ಶಾಲೆಯ ವಿದ್ಯಾರ್ಥಿನಿ ರುಕ್ಮಿಣಿ ಮ.ಬಿಸನಾಳ ದ್ವೀತಿಯ ಹಾಗೂ ಮುದ್ದೇಬಿಹಾಳ ತಾಲೂಕಿನ ಆಲೂರ ಗ್ರಾಮದ ಪಿ.ಎಸ್.ಪಾಟೀಲ ಸರಕಾರಿ ಪ್ರೌಢಶಾಲೆಯ ಲಕ್ಷ್ಮಿ ಸಿ.ಕೊಪ್ಪದ ಮತ್ತು ವಿಜಯಪುರ ನಗರದ ಜಲನಗರದ ಜಿ.ಎಚ್.ಎಸ್. ಶಾಲೆಯ ವಿದ್ಯಾರ್ಥಿನಿ ಸಾಕ್ಷಿ ಮೂರಮಾನ ತೃತೀಯ ಸ್ಥಾನ ಪಡೆದಿದ್ದಾರೆ.ಪದವಿಪೂರ್ವ ವಿಭಾಗದಲ್ಲಿ ಬಬಲೇಶ್ವರ ತಾಲೂಕಿನ ಅರ್ಜುಣಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿ ಕುಲ್ಹಳ್ಳಿ ಪ್ರಥಮ, ವಿಜಯಪುರ ನಗರದ ಸಿಕ್ಯಾಬ ಬಾಲಕರ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿನಿ ಸಾನಿಯಾ ರ.ಜಮಾದಾರ ದ್ವೀತಿಯ ಹಾಗೂ ವಿಜಯಪುರದ ಸೆಂಟ್ ಜೋಸೆಫ್…

Read More

ಸ್ವೀಪ್ ಕಾರ್ಯಚಟುವಟಿಕೆಗಳ ಪರಿಶೀಲನಾ ಸಭೆಯಲ್ಲಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚನೆ ವಿಜಯಪುರ: ಕಳೆದ ಚುನಾವಣೆಗಳಲ್ಲಿ ಅತಿ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸಿಕೊಂಡು ವಿಭಾಗವಾರು ಆಯ್ಕೆ ಮಾಡಿಕೊಂಡು ಸ್ವೀಪ್ ಸಮಿತಿ ವತಿಯಿಂದ ಕ್ರಿಯಾತ್ಮಕ ಚಟುವಟಿಕೆಗಳನ್ನು ಕೈಗೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅಧಿಕಾರಿಗಳಿಗೆ ಸೂಚಿಸಿದರು.ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ೨೦೨೩-೨೪ನೇ ಸಾಲಿನ ಸ್ವೀಪ್ ಕಾರ್ಯಚಟುವಟಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಂಬರುವ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಶೇಷ ಚೇತನ ಮತದಾರರು, ತೃತೀಯ ಲಿಂಗ ಮತದಾರರು, ದುರ್ಬಲ ವರ್ಗದ ಮತದಾರರನ್ನು ವಿಶೇಷ ಆಸಕ್ತಿ ವಹಿಸಿ ಸ್ವೀಪ್ ಕಾರ್ಯಚಟುವಟಿಕೆ ಕೈಗೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಮತದಾನ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.ಮತದಾರರಲ್ಲಿ ಜಾಗೃತಿ ಮೂಡಿಸಿದರು.ಜಿಲ್ಲೆಯಲ್ಲಿ ರಚನೆಯಾಗಿರುವ ೯೦೦ ಇಎಲ್‌ಸಿ ಕ್ಲಬ್‌ಗಳು ಹಾಗೂ ೨೦೭೨ ಚುನಾವಣಾ ಜಾಗೃತಿ ಕ್ಲಬ್‌ಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಮತದಾರರಲ್ಲಿ…

Read More

ಸ್ವಚ್ಛತೆಯೇ ಸೇವೆ-ತ್ಯಾಜ್ಯ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ಇಂಡಿ: ಪರಿಶುದ್ಧ ಬೆಳಕು, ಗಾಳಿ, ನೀರು ಮತ್ತು ಆಹಾರದಿಂದ ಮಾತ್ರ ಗುಣಮಟ್ಟದ ಆರೋಗ್ಯ ಕಾಪಾಡಲು ಸಾಧ್ಯ. ಹೀಗಾಗಿ ಪರಿಸರವನ್ನು ಮಾಲಿನ್ಯ ಮುಕ್ತವಾಗುವಂತೆ ಜಾಗೃತಿ ವಹಿಸಬೇಕು ಎಂದು ಹಿರೇರೂಗಿ ಗ್ರಾಮ ಪಂಚಾಯಿತಿ ಪಿಡಿಓ ಬಸವರಾಜ ಬಬಲಾದ ಹೇಳಿದರು.ಅವರು ಶನಿವಾರ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ವಿಜಯಪುರ, ತಾಲೂಕ ಪಂಚಾಯತ್ ಇಂಡಿ, ಗ್ರಾಮ ಪಂಚಾಯಿತಿ ವತಿಯಿಂದ ಜರುಗಿದ ಸ್ವಚ್ಛತೆಯೇ ಸೇವೆ-ತ್ಯಾಜ್ಯ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ಲಾಸ್ಟಿಕ್‌ ಮುಕ್ತ ಭಾರತದ ನಿರ್ಮಾಣ ಹಾಗೂ ಗ್ರಾಮದ ಸ್ವಚ್ಚತೆಗೆ ಎಲ್ಲರೂ ಒಟ್ಟಾಗಿ ಕೈಜೋಡಿಸೋಣ. ಮನೆಯಿಂದಲೇ ಸ್ವಚ್ಚತಾ ಕಾರ್ಯ ಆರಂಭಿಸಬೇಕು ಎಂದು ಕರೆ ನೀಡಿದರು.ಶಿಕ್ಷಕ ಸಂತೋಷ ಬಂಡೆ ಮತ್ತು ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಪರಶುರಾಮ ಹೊಸಮನಿ, ಉಪಾಧ್ಯಕ್ಷ ಸಂತೋಷ ಕೋಟಗೊಂಡ, ಸದಸ್ಯ ಗಡ್ಡೆಪ್ಪ ಗಿಣ್ಣಿ,ಚಂದ್ರಯ್ಯ ಹಿರೇಮಠ, ಶಿಕ್ಷಕ ಎಸ್ ಆರ್ ಚಾಳೆಕಾರ, ಸಿಬ್ಬಂದಿ ಅಕ್ಬರ ಕೋರಬು, ಶ್ರೀಧರ ಬಾಳಿ, ಶರಣು ನಾಟೀಕಾರ,…

Read More

ಸಹ ಪ್ರಾಧ್ಯಾಪಕ ಡಾ.ಹೆಚ್.ಎಂ.ಮುಜಾವರ ಬೀಳ್ಕೊಡುಗೆ ಸಮಾರಂಭ ವಿಜಯಪುರ: ಒಳೆಯ ಮನೋಭಾವವುಳ್ಳ ವ್ಯಕ್ತಿತ್ವ, ಕರ್ತವ್ಯದಲ್ಲಿ ಪ್ರಾಮಾಣಿಕತೆ, ಸೇವೆಯಲ್ಲಿ ಸಾರ್ಥಕತೆ ಮೆರೆದು ನೀವೃತ್ತಿ ಹೊಂದುತ್ತಿರುವ ಡಾ.ಹೆಚ್.ಎಂ. ಮುಜಾವರ ಅವರ ಸೇವೆ ಅನನ್ಯ ಎಂದು ಪ್ರಾಚಾರ್ಯ ಡಾ.ಆರ್.ಎಂ.ಮಿರ್ದೆ ಹೇಳಿದರು.ನಗರದ ಬಿ ಎಲ್ ಡಿ‌ ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕರಾದ ಡಾ.ಹೆಚ್.ಎಂ ಮುಜಾವರ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ವೃತ್ತಿಯಲ್ಲಿ ದಕ್ಷತೆ ಪ್ರಾಮಾಣಿಕತೆ ಮೆರೆದು ಮಹಾವಿದ್ಯಾಲಯದ ಸಿಬ್ಬಂದಿಗೆ ಪ್ರೇರಣೆದಾಯಕವಾಗಿದ್ದಾರೆ. ಎನ್ ಎನ್ಎಸ್ಎಸ್ ಸ್ವಯಂ ಸೇವಕ, ಸೇವಾದಳ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಯುವ ಪ್ರತಿಭಾವಂತರಿಗೆ ಸ್ಪೂರ್ತಿಯಾಗಿದ್ದಾರೆ. ಇಲ್ಲಿಯವರೆಗೆ ಅವರು ನಮಗೆ ನೀಡಿದ ಸಲಹೆ ಸೂಚನೆಗಳು ಎಂದೆಂದಿಗೂ ಅದರ್ಶಪ್ರಾಯವಾಗಿವೆ. ಮುಂದಿನ ನಿವೃತ್ತಿ ಜೀವನ ಸುಖಕರ ಸಾಗಲಿ ಎಂದು ಶುಭಹಾರೈಸಿದರು.ಈ ಸಂದರ್ಭದಲ್ಲಿ ಜಾವೀದ ಜಮಾದಾರ ಮಾತನಾಡಿದರು.ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಡಾ.ಕೆ.ಜಿ.ಪೂಜಾರಿ, ಉಪಪ್ರಾಚಾರ್ಯ ಪ್ರೊ.ಎ.ಬಿ.ಪಾಟೀಲ, ಡಾ.ಹೆಚ್.ಎಂ ಮುಜಾವರ ದಂಪತಿ, ಜಾವೀದ ಜಮಾದಾರ, ನೀವೃತ್ತ ಪ್ರಾಚಾರ್ಯ ಡಾ.ಯು.ಎಸ್ ಪೂಜೇರಿ, ಪ್ರೊ.ಸಿ.ಎನ.ಚೌಗಲೆ, ಡಾ. ಎಸ್.ಟಿ…

Read More

ಇಂಡಿ: ಶೈಕ್ಷಣಿಕ ಪರಿಸರವಿಲ್ಲದ ಅಥರ್ಗಾ ಗ್ರಾಮಕ್ಕೆ 1909 ರಲ್ಲಿ ಶಿಕ್ಷಕರಾಗಿ ಬಂದ ರೇವಣಸಿದ್ದರು ಇಡೀ ಗ್ರಾಮದಲ್ಲಿ ಕಲಿಕಾ ವಾತಾವರಣ ಹುಟ್ಟಿಸಿ,ದೈವಿ ಸ್ವರೂಪಿ ಶಿಕ್ಷಕರಾಗಿ, ಶಿಕ್ಷಕ ವೃತ್ತಿಯನ್ನು ದೈವತ್ವಕ್ಕೆ ಏರಿಸಿ ದೇವರಾಗಿ ಪೂಜಿಸಲ್ಪಡುತ್ತಿದ್ದಾರೆ ಎಂಬುದು ಈ ನೆಲದ ಶ್ರೇಷ್ಠತೆಯಾಗಿದೆ ಎಂದು ಸಾಹಿತಿ ಚಿದಂಬರ ಬಂಡಗರ ಹೇಳಿದರು.ಅವರು ಇಂಡಿಯ ಭೀಮಾಂತರಂಗ ಜಗಲಿ, ಆನ್ ಲೈನ್ ಸಾಹಿತ್ಯಿಕ-ಸಾಂಸ್ಕೃತಿಕ ಸಂಸ್ಥೆಯಿಂದ ಹಮ್ಮಿಕೊಂಡ ಉಪನ್ಯಾಸ ಮಾಲಿಕೆ-2 ರಲ್ಲಿ ಅಥರ್ಗಾದ ಗುರು ರೇವಣಸಿದ್ದರ ಕುರಿತು ಉಪನ್ಯಾಸ ನೀಡುತ್ತಾ ಈ ಮಾತುಗಳನ್ನು ಹೇಳಿದರು.ಸ್ವಯಂ ಪ್ರೇರಣೆಯಿಂದ ಅಥರ್ಗಾ ಗ್ರಾಮದ ಉದ್ಧಾರಕ್ಕೆ ಕಾಯಾ ವಾಚಾ ಮನಸಾ ಶ್ರಮಿಸಿದ ರೇವಣಸಿದ್ದರು ಮಕ್ಕಳನ್ನು, ಅನಕ್ಷರಸ್ಥರನ್ನು ಸಂಸ್ಕಾರಯುತಶಿಕ್ಷಣವಂತರನ್ನಾಗಿ ಮಾಡಿದ ಶ್ರೇಯಸ್ಸು ಇವರದು. ಗ್ರಾಮದಲ್ಲಿ ವಾಚನಾಲಯ ಆರಂಭಿಸಿ, ಪುಸ್ತಕ ಸಂಸ್ಕೃತಿ ಬೆಳೆಸಿದ ಇವರು ತಮ್ಮ ಸಂಬಳದಲ್ಲಿಯೇ ಪುಸ್ತಕ ಖರೀದಿಸಿ ಕೊಟ್ಟವರು ಎಂದು ಹೇಳಿದರು.ಪ್ರತಿದಿನ ನಸುಕಿನಲ್ಲಿ ಮಕ್ಕಳ ಮನೆ ಮನೆಗೆ ಹೋಗಿ,ಅವರನ್ನು ಎಬ್ಬಿಸಿ ಓದಿನಲ್ಲಿ ತೊಡಗುವಂತೆ ಮಾಡಿ,ದಕ್ಷ, ಪ್ರಾಮಾಣಿಕ ವಿದ್ಯಾರ್ಥಿಗಳನ್ನು ರೂಪಿಸಿದ ಉದ್ದಾರ ಪುರುಷ ರೇವಣಸಿದ್ದರು ಗ್ರಾಮದ ಜನತೆಯ ಒಡನಾಡಿಯಾಗಿ ಎಲ್ಲ…

Read More

ಹೃದಯದ ಆರೋಗ್ಯ ಕಾಪಾಡಿಕೊಳ್ಳಿ :ಡಾ.ಕಲ್ಯಾಣಪ್ಪಗೋಳ ವಿಜಯಪುರ: ನಗರದ ಪ್ರತಿಷ್ಠಿತ ಶ್ರೀ. ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಅತೀ ಶೀಘ್ರದಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆ ಮತ್ತು ಕಿಟ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ತಿಳಿಸಿದ್ದಾರೆ.ಆಸ್ಪತ್ರೆಯಲ್ಲಿ ಶುಕ್ರವಾರ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ತೆರೆದ ಹೃದಯ ಮತ್ತು ಕಿಡ್ನಿ ಟ್ರಾನ್ಸಪ್ಲ್ಯಾಂಟ್ ಶಸ್ತ್ರಚಿಕಿತ್ಸೆಗಳಿಗೆ ಈಗಾಗಲೇ ಪರವಾನಿಗೆ ದೊರಕಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಈ ಸೇವೆಗಳು ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ರೋಗಿಗಳು ನಾನಾ ಕಡೆ ಅಲೆದಾಡುವುದು ತಪ್ಪಲಿದೆ ಎಂದು ಅವರು ತಿಳಿಸಿದರು.ಶಿಬಿರ ಉದ್ಘಾಟಿಸಿದ ಹೃದಯ ಖ್ಯಾತ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ ಮಾತನಾಡಿ, ಮಧ್ಯ ವಯಸ್ಕರು ಬೆಳಿಗ್ಗೆ ಉಪಹಾರದ ಬದಲಿಗೆ ಜ್ಯೂಸ್ ಅಥವಾ ಕಾಫಿ ಸೇವಿಸಿ ಸುಮ್ಮನಾಗುತ್ತಾರೆ. ಸರಿಯಾದ ಸಮಯಕ್ಕೆ ಊಟವನ್ನೂ ಮಾಡುವುದಿಲ್ಲ. ಈ ಆಹಾರ…

Read More

ವಿಜಯಪುರ: ಪ್ರಾಣಿಗಳು ಕಚ್ಚಿದ ತಕ್ಷಣ ರೇಬೀಸ್ ಚುಚ್ಚುಮದ್ದು ಹಾಕಿಸಿಕೊಳ್ಳುವುದರಿಂದ ರೋಗವನ್ನು ತಡೆಗಟ್ಟಲು ಸಾಧ್ಯ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಜನರಲ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣೆವರ ಹೇಳಿದ್ದಾರೆ.ತಿಕೊಟಾ ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿಶ್ವ ರೇಬೀಸ್ ದಿನದ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಪ್ರಾಣಿಗಳು ಕಚ್ಚಿದಾಗ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳು, ಪಡೆಯಬೇಕಾದ ಚಿಕಿತ್ಸೆಗಳ ಕುರಿತು ಮಾಹಿತಿ ನೀಡಿದ ಅವರು, ನಾವು ಸಾಕುವ ಪ್ರಾಣಿಗಳಿಗೆ ರೇಬೀಸ್ ನಿರೋಧಕ ಚುಚ್ಚುಮದ್ದು ಹಾಕಿಸಬೇಕು ಅಲ್ಲದೇ, ಈ ಪ್ರಾಣಿಗಳ ಕಚ್ಚುವಿಕೆಗೆ ಒಳಗಾಗುವ ಜನರು ಕೂಡಲೇ ಚುಚ್ಚುಮದ್ದನ್ನು ಪಡೆಯಬೇಕು. ಈ ಹಿಂದೆ ಇದ್ದ ಚಿಕಿತ್ಸಾ ವಿಧಾನಕ್ಕೂ ಮತ್ತು ಈಗಿನ ಆಧುನಿಕ ಚಿಕಿತ್ಸಾ ಪದ್ದತಿಗಳಿಗೆ ವ್ಯತ್ಯಾಸವಿದೆ. ಹೀಗಾಗಿ ಆತಂಕಗೊಳ್ಳುವ ಅವಶ್ಯಕ ಇಲ್ಲ ಎಂದು ಮಂಜುನಾಥ ಕೋಟೆಣ್ಣವರ ಹೇಳಿದರು.ಸಹಾಯಕ ಪ್ರಾಧ್ಯಾಪಕ ಮಂಜುನಾಥ ಸಾವಂತ ಮಾತನಾಡಿ, ರೋಗ ಪರೀಕ್ಷೆ ವಿಧಾನ, ನಿರ್ವಹಣೆ, ಲಸಿಕೆ…

Read More

ವಿಜಯಪುರ: ಭಾವಸರ ಕ್ಷತ್ರಿಯ ಸಮಾಜದ ವಿಶೇಷ ಮಹಾಸಭೆಯು ಸರಾಫ್ ಬಜಾರ್‌ನಲ್ಲಿರುವ ಭಾವಸರ ಭವನದಲ್ಲಿ ಸಮಾಜದ ಅಧ್ಯಕ್ಷ ರಾಜೇಶ್ ದೇವಗಿರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ವಿಶೇಷ ಸಾಮಾನ್ಯ ಸಭೆಯಲ್ಲಿ ನೂತನ ಸಾಂಸ್ಕೃತಿಕ ಭವನದ ಉದ್ಘಾಟನಾ ಸಮಾರಂಭವನ್ನು ನವೆಂಬರ್ 24 ಮತ್ತು 25, 2023 ರಂದು ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.ಅಲ್ಲದೆ ನವೆಂಬರ್ 24 ಮತ್ತು 25 ರಂದು ವಿಜಯಪುರದ ಎಲ್ಲಾ ಭಾವಸಾರ ಸಮುದಾಯದವರು ನೌಕರ ವರ್ಗದ ಭಾವಸಾರ ಸಮಾಜ ಬಾಂಧವರು ಈ ಎರಡು ದಿನಗಳ ರಜೆಯನ್ನು ತೆಗೆದುಕೊಂಡು ಈ ಭವ್ಯವಾದ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.ಸಭೆಯಲ್ಲಿ ಕಾರ್ಯಕ್ರಮವನ್ನು ಅಭೂತಪೂರ್ವ ಯಶಸ್ವಿಯಾಗಲು ವಿವಿಧ ಸಮಿತಿಗಳನ್ನು ರಚಿಸಿ ಪದಾಧಿಕಾರಿಗಳನ್ನು ನೇಮಿಸಲಾಯಿತು.ಸ್ವಾಗತ ಸಮಿತಿ ಮುಖ್ಯಸ್ಥ – ವಿಷ್ಣುಪಂತ್ ದೇವಗಿರಿಸ್ಮರಣಾರ್ಥ ಕಡತ ಮತ್ತು ಪ್ರಚಾರ ಸಮಿತಿ ಮುಖ್ಯಸ್ಥ – ದೀಪಕ್ ಶಿಂತ್ರೆಹಣಕಾಸು ಸಮಿತಿ ಮುಖ್ಯಸ್ಥ – ಸುರೇಶ್ ಮಹೀಂದ್ರಕರ್ಆಹಾರ ವ್ಯವಸ್ಥೆ ಸಮಿತಿಯ ಮುಖ್ಯಸ್ಥ – ಅತುಲ್ ಪುಕಾಳೆ ಮತ್ತು ವಿಜಯ್ ನವಲೆಕುಂಭಮೇಳ ಸಮಿತಿ ಮುಖ್ಯಸ್ಥರು – ಶ್ರೀಮತಿ ಪದ್ಮಾ ಇಜಂತ್ಕರ್…

Read More

ಕೇಂದ್ರ-ರಾಜ್ಯ ಸರಕಾರ ವಿರುದ್ಧ ವ್ಯಾಪಕ ಆಕ್ರೋಶ | ಕೆಲವೆಡೆ ತಟ್ಟದ ಬಂದ್ ಬಿಸಿ | ಪ್ರಯಾಣಿಕರ ಪರದಾಟ ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕನ್ನಡ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್‌ ಹೋರಾಟವು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಯಶಸ್ವಿಯಾಗಿದೆ.ಮಂಗಳವಾರವಷ್ಟೇ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‌ಗೆ ಕರೆ ಕೊಟ್ಟಾಗ ವಿವಿಧ ಸಂಘಟನೆಗಳ ಮುಖಂಡರಿಗೆ, ರಾಜಕೀಯ ಪಕ್ಷಗಳ ಮುಖಂಡರಿಗೆ, ಸಾರ್ವಜನಿಕರಿಗೆ ಅಖಂಡ ಕರ್ನಾಟಕ ಬಂದ್‌ ಯಶಸ್ವಿಯಾಗುವ ವಿಶ್ವಾಸ ಇರಲಿಲ್ಲ. ಆದರೆ, ಕಡಿಮೆ ಅವಧಿಯಲ್ಲಿ ಆಯೋಜನೆಗೊಂಡ ಶುಕ್ರವಾರ ಬಂದ್‌ಗೆ ರಾಜಧಾನಿ ಬೆಂಗಳೂರು ಒಳಗೊಂಡಂತೆ ಬಹುತೇಕ ಜಿಲ್ಲೆಗಳಲ್ಲೂ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು.ವರ್ತಕರು, ಸಂಘಟನೆಗಳು, ಆಟೊ, ಖಾಸಗಿ ಬಸ್ ಚಾಲಕರು, ವಕೀಲರು, ವಿದ್ಯಾರ್ಥಿಗಳು ತೋರಿದ ಪ್ರತಿಕ್ರಿಯೆ ನಿರೀಕ್ಷೆಯನ್ನೂ ಮೀರಿಸಿತು. ಇಡೀ ಬಂದ್‌ನಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಕೆಲ ಭಾಗ, ಅಂತರರಾಜ್ಯ…

Read More