Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಅವರ ಮನವಿಗೆ ಸ್ಪಂದಿಸಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು, ಶಾಲಾ ಕೊಠಡಿ ನಿರ್ಮಾಣಕ್ಕೆ ರೂ.೧೨.೫ ಲಕ್ಷ ಮಂಜೂರು ಮಾಡಿಸಿದ್ದಾರೆ.ಫೆ.೩ ರಂದು ನಗರ ಶಾಸಕರು, ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯ ಕೌಜಲಗಿ ತಾಂಡಾ ಸರ್ಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂ.೪೬ ಹಾಗೂ ತೊರವಿಯ ಶಾಂತಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಗಳು ದುಸ್ಥಿತಿಯಲ್ಲಿದ್ದು, ಕುಸಿಯುವ ಸಂಭವವಿದೆ. ಇದರಿಂದ ಮಕ್ಕಳಿಗೆ ಪಾಠ ಮಾಡಲು ಮತ್ತು ಅವರ ಜೀವಕ್ಕೆ ಹಾನಿಯಾಗಬಹುದು. ಅಲ್ಲದೇ, ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಅಧಿಕವಾಗಿರುವುದರಿಂದ, ಕೊಠಡಿಗಳ ಕೊರತೆ ಇರುತ್ತದೆ. ಆದ್ದರಿಂದ ಈ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ತಮ್ಮ ಶಾಸಕರ ಅನುದಾನ ಮಂಜೂರು ಮಾಡುವಂತೆ ಕೋರಿದ್ದರು.ಅದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿ, ಕೌಜಲಗಿ ತಾಂಡಾ ಸರ್ಕಾರಿ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂ.೪೬ ಶಾಲಾ ಕೊಠಡಿ ನಿರ್ಮಾಣಕ್ಕೆ ರೂ.೧೨.೫ ಲಕ್ಷ ಅನುದಾನ ಮಂಜೂರಿಸಿ, ಹಣ ಬಿಡುಗಡೆಗೊಳಿಸಿ ನಿರ್ಮಿತಿ ಕೇಂದ್ರದಿಂದ ಅನುಷ್ಠಾನಗೊಳಿಸಲು…
ದೇವರಹಿಪ್ಪರಗಿ: ದೇಶದ ಭವಿಷ್ಯವಾಗಿರುವ ಯುವಶಕ್ತಿ ಸನ್ಮಾರ್ಗದತ್ತ ಸಾಗಲು ಶಿಕ್ಷಣ, ಸಂಸ್ಕಾರ ಹಾಗೂ ಮಾರ್ಗದರ್ಶನ ಅತ್ಯಗತ್ಯವಾಗಿವೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಎಸ್. ಎಸ್.ಪೂಜಾರಿ ಹೇಳಿದರು.ತಾಲ್ಲೂಕಿನ ಜಾಲವಾದ ಗ್ರಾಮದ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಇತ್ತೀಚಿಗೆ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಇವರ ಅಧ್ಯಕ್ಷತೆಯಲ್ಲಿ ಸದಸ್ಯ ಕಾರ್ಯದರ್ಶಿಗಳು ಹಮ್ಮಿಕೊಂಡಿದ್ದ ಮಾದಕ ದ್ರವ್ಯ ನಿರ್ಮೂಲನಾ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳಿಗೆ ತಿಳುವಳಿಕೆ ಹಾಗೂ ಮಾರ್ಗದರ್ಶನ ನೀಡಿದರು.ವಿದ್ಯಾರ್ಥಿಗಳು ಚನ್ನಾಗಿ ಅಭ್ಯಾಸ ಮಾಡಿ, ಆರೋಗ್ಯಯುತ ಜೀವನ ನಡೆಸಿ ಸಮೃದ್ಧ ನಾಡನ್ನು ನಿರ್ಮಿಸುವಲ್ಲಿ ಮುನ್ನಡಿ ಇಡಬೇಕು. ಇತ್ತೀಚಿನ ದಿನಗಳಲ್ಲಿ ದೇಶದ ಯುವಜನಾಂಗ ದುಶ್ಚಟಗಳ ದಾಸರಾಗಿ, ಆಸ್ತಿ-ಅಂತಸ್ತನ್ನು ಹಾಳು ಮಾಡಿಕೊಳ್ಳುವದರ ಜೊತೆಗೆ ತಮ್ಮ ಅತ್ಯಮೂಲ್ಯವಾದ ಬದುಕನ್ನೇ ಬರಡಾಗಿಸಿಕೊಳ್ಳುತ್ತಿರುವದು ಖೇದನೀಯ ಸಂಗತಿಯಾಗಿದೆ ಅದಕ್ಕಾಗಿ ಸುಂದರ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.ವಕೀಲ ಪ್ರವೀಣ ಜನಗೊಂಡ ಉಪಪ್ರಾಂಶುಪಾಲ ಎಮ್.ಕೆ.ಕುಡಚಿ, ಶಿಕ್ಷಕ ಎಸ್.ಜೆ.ನಾಟೀಕಾರ, ಎಮ್.ಡಿ.ಹಳ್ಳಿ, ಬಸವರಾಜ ಜನಗೊಂಡ ಸೇರಿದಂತೆ ಪ್ರೌಢಶಾಲೆಯ ಶಿಕ್ಷಕಸಿಬ್ಬಂದಿ, ಮಕ್ಕಳು ಇದ್ದರು.
ದೇವರಹಿಪ್ಪರಗಿ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ರೋಗಿಗಳಿಗೆ ಪಿಂಜಾರ್, ನದಾಫ ಸಮುದಾಯದ ಪ್ರಮುಖರು ಈದ್ಮಿಲಾದ್ ಹಬ್ಬದ ಪ್ರಯುಕ್ತ ಗುರುವಾರ ಹಣ್ಣು ಹಂಪಲು ವಿತರಿಸಿದರು.ಈ ಸಂದರ್ಭದಲ್ಲಿ ಪಿಂಜಾರ್,ನದಾಫ ಸಮಾಜ ಜಿಲ್ಲಾಧ್ಯಕ್ಷ ಹುಸೇನ್ ಗೌಂಡಿ ಮಾತನಾಡಿ, ಮಹಮ್ಮದ ಪೈಗಂಬರರ ಜೀವನದ ಮೌಲ್ಯಗಳು ನಮಗೆಲ್ಲ ಮಾದರಿಯಾಗಿವೆ. ಎಲ್ಲರೂ ಅವರ ತತ್ವಾದರ್ಶಗಳನ್ನು ಪಾಲಿಸಬೇಕೆಂದು ಮನವಿ ಮಾಡಿದರು.ಪಿಂಜಾರ್ನದಾಫ್ ತಾಲ್ಲೂಕು ಅಧ್ಯಕ್ಷ ಲಾಡ್ಲೆಮಶಾಕ್ ರೂಗಿ, ಸಲೀಂ ನದಾಫ, ಹಸನಸಾಬ ನದಾಫ, ರೆಹಮಾನ್ ನದಾಫ, ಸುನೀಲ ಕನಮಡಿ, ಹಾಗೂ, ವೈದ್ಯಾಧಿಕಾರಿ ಡಾ,ಯೋಗೇಶ, ಶಮಶಾದ್ ಫರುಕಾಬಾದ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳು ಇದ್ದರು.
ದೇವರಹಿಪ್ಪರಗಿ: ಪ್ರತಿಭೆ ಪರಿಶ್ರಮದಿಂದ ಬರುವಂತಾಗಿದ್ದು, ವಿದ್ಯಾರ್ಥಿಗಳು ಸಾಧಿಸಬೇಕೆಂಬ ಸಂಕಲ್ಪಕ್ಕೆ ಬದ್ಧರಾಗಬೇಕು ಎಂದು ಕೊಂಡಗೂಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದಾವಲಬಿ ಸೋಲಾಪುರ ಹೇಳಿದರು.ತಾಲ್ಲೂಕಿನ ಕೊಂಡಗೂಳಿ ಗ್ರಾಮದ ಎಮ್ಪಿಎಸ್ ಶಾಲೆಯಲ್ಲಿ ಗುರುವಾರ ಜರುಗಿದ ಕೊಂಡಗೂಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ರತಿಭೆಗೆ ಯಾರೂ ಹಣ ಕೊಡಬೇಕಿಲ್ಲ. ಅದು ತನ್ನಿಂದ ತಾನೇ ಉದಯಿಸುವ ಪ್ರಕ್ರಿಯೆ, ಪ್ರತಿಭೆಯನ್ನು ಗುರ್ತಿಸಿ ಬೆಳೆಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದರು.ವೀರಘಂಟಯ್ಯ ಗದ್ದಿಗೆಮಠ ಸಾನಿಧ್ಯ ವಹಿಸಿದ್ದರು. ಶಿಕ್ಷಣ ಸಂಯೋಜಕ ಐ.ಎಫ್.ಭಾಲ್ಕಿ, ಬಿಆರ್ಪಿ ಗಳಾದ ಜಗದೀಶ ಅಲ್ದಿಮಠ ಹಾಗೂ ಶ್ರೀದೇವಿ ರೆಬಿನಾಳ ಸಸಿಗೆ ನೀರು ಹನಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಸ್ಥಳೀಯ ಸಿಆರ್ಪಿ ಎಮ್.ಎನ್.ಒಡೆಯರ ಪ್ರಾಸ್ತಾವಿಕವಾಗಿ ಮಾತನಾಡಿದರು.ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶಿವಲೀಲಾ ಕುರುಮಲ್ಲಪ್ಪಗೋಳ, ಅಪ್ಪಾಸಾಹೇಬ ಬಸರಕೋಡ, ಈರಣ್ಣ ತಾವರಖೇಡ, ಸಿದ್ದಣ್ಣ ಸಿಂದಗೇರಿ, ಮಹಾಂತೇಶ ಗುಬ್ಬೇವಾಡ, ಪ್ರಾಥಮಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಚ್. ವಾಲೀಕಾರ, ಬಿ.ಬಿ.ಅಗ್ನಿ, ಶಿಕ್ಷಕರ ಸಂಘದ ಖಜಾಂಚಿ ಪರಶುರಾಮ ತಳಕೇರಿ, ಜಿ.ಬಿ.ಹೊಕ್ಕುಂಡಿ, ಷಣ್ಮಖಪ್ಪ ಅಂಬಲಿ, ಸೇರಿದಂತೆ…
ಕೊಲ್ಹಾರ: ತಾಲೂಕಿನ ಮಸೂತಿ ಗ್ರಾಮದ ಶ್ರೀ ವೀರೇಶ್ವರ ವಿದ್ಯಾವರ್ಧಕ ಸಂಘದ ಅನುದಾನಿತ ಶ್ರೀ ಗುರು ಸಂಗನಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಗದೀಶ್ವರ ಸಾಲಳ್ಳಿಯವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು ಹಾಗೂ ಜಿಲ್ಲಾ ಘಟಕ ವಿಜಯಪುರ ಇವರು ಕೊಡಮಾಡುವ ಪ್ರಸಕ್ತ ಸಾಲಿನ ಕಾರ್ಯಕ್ರಮ ಸಿಂದಗಿ ಪಟ್ಟಣದ ಭಾವಿಕಟ್ಟಿ ಕಲ್ಯಾಣ ಮಂಟಪದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಿಂದಗಿ ಸಾರಂಗಮಠದ ಡಾ|| ಪ್ರಭು ಸಾರಂಗದೇವ ಶಿವಾಚಾರ್ಯರು, ಶಾಸಕರಾದ ಅಶೋಕ ಮನಗೂಳಿ, ಕ.ರಾ.ಅ.ಪ್ರಾ.ಶಾ.ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎನ್ ರಾಜಗೋಪಾಲ್, ಜಿಲ್ಲಾಧ್ಯಕ್ಷ ಶಿವಾನಂದ ಹಿರೇಕುರುಬರ ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಪದಾಧಿಕಾರಿಗಳು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ದೇವರಹಿಪ್ಪರಗಿ: ಧರ್ಮವು ಉಸಿರಾಗಲಿ, ಹಸಿರಾಗಲಿ, ಹೆಸರಾಗಿ ಬೆಳಗಲಿ ಎಂದು ಸ್ಥಳೀಯ ಜಡೇಮಠದ ಜಡೇಸಿದ್ಧೇಶ್ವರ ಶ್ರೀಗಳು ಹೇಳಿದರು.ಪಟ್ಟಣದ ವೀರಭದ್ರೇಶ್ವರಸ್ವಾಮಿ ಜಯಂತ್ಯುತ್ಸವದ ಅಂಗವಾಗಿ ಗುರುವಾರ ಜರುಗಿದ ಧರ್ಮಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಪರಶಿವನ ಜಡೆಯಿಂದ ಅವತರಿಸಿದ ಶ್ರೀವೀರಭದ್ರಸ್ವಾಮಿ ದಕ್ಷಬ್ರಹ್ಮನ ಸಂಹಾರಮಾಡಿ, ದುಷ್ಟರನ್ನು ಸಂಹರಿಸಿ, ಶಿಷ್ಟರನ್ನು ರಕ್ಷಿಸಿದಾತ. ಅಂತೆಯೇ ಶಿವಶರಣೆ ಅಕ್ಕಮಹಾದೇವಿ ಸಹ ವೀರಭದ್ರನ ಅಂಗುಷ್ಠದಲ್ಲಿ ಗೋವಿಂದನಿದ್ದಾನೆಂದೂ ತಮ್ಮ ವಚನಗಳಲ್ಲಿ ಉಲ್ಲೇಖಿಸಿ ಅವನ ಮಹಿಮೆ ಸಾರಿದ್ದಾಳೆ ಎಂದರು.ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ವೀರಭದ್ರೇಶ್ವರರ ೧೧ನೇ ಕಾರ್ತಿಕೋತ್ಸವದ ರೂಪರೇಷೆಗಳ ಕುರಿತು ತಿಳಿಸುತ್ತಾ, ದಿ:೨೮ ನೇ ನವೆಂಬರ್ ರಂದು ಮಹಾಪುರಾಣ ಆರಂಭಗೊಳ್ಳುವುದು. ದಿ: ೧೮ ನೇ ಡಿಸೆಂಬರ್ದಂದು ಶ್ರೀಮದ್ ರಂಭಾಪುರಿ ಮಹಾಸನ್ನಿದಿ ಅವರ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧರ್ಮಸಭೆ ಜರುಗುವುದು. ದಿ:೧೯ನೇ ಡಿಸೆಂಬರ್ದಂದು ವೀರಭದ್ರಸ್ವಾಮಿಯ ಪಲ್ಲಕ್ಕಿ ಉತ್ಸವ ಜರುಗುವುದು. ಅದಕ್ಕಾಗಿ ಪಟ್ಟಣದ ಎಲ್ಲ ಪೂಜ್ಯರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.ಸ್ಥಳಿಯ ಸದಯ್ಯನಮಠದ ವೀರಗಂಗಾಧರಶ್ರೀಗಳು, ಶಿವಯೋಗಿ ದೇವರು ಆಶೀರ್ವಚನದ ಮೂಲಕ ವೀರಭದ್ರಸ್ವಾಮಿ ಜಯಂತಿಯ ವಿಶೇಷತೆಗಳನ್ನು ತಿಳಿಸಿದರು.ಪ್ರಭುದೇವ…
ಕೊಲ್ಹಾರ: ಕರ್ನಾಟಕ ರಾಷ್ಟç ಸಮೀತಿ ಪಕ್ಷದ ಕೊಲ್ಹಾರ ತಾಲೂಕಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಜಿಲ್ಲಾ ಸಮೀತಿಯ ಮುಖಂಡರಾದ ಪ್ರವೀಣ ರಾಯಗೊಂಡ, ಮಹಾಂತೇಶ ಮರನೂರ, ಶ್ರೀಮತಿ ರಜಿಯಾ ಬಿಜಾಪೂರ ಅವರ ಸಮ್ಮುಖದಲ್ಲಿ ರಚನೆ ಮಾಡಲಾಯಿತು.ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಅಶೋಕ ಸಂಗಪ್ಪ ಹುದ್ದಾರ, ಪಕ್ಷದ ತಾಲೂಕಾ ಅಧ್ಯಕ್ಷರಾಗಿ ಬಸವರಾಜ ಕುದರಿ, ಉಪಾಧ್ಯಕ್ಷರಾಗಿ ಪರಶುರಾಮ ಬೆಣ್ಣೂರ, ಪ್ರಧಾನ ಕಾರ್ಯದರ್ಶಿಗಳಾಗಿ ಅನೀಲ ಚೌದರಿ, ಕಾರ್ಯದರ್ಶಿಯಾಗಿ ಕಲ್ಲಪ್ಪ ಮಲ್ಲಿಕಾರ್ಜುನ ಗಣಿ, ಅದರಂತೆ ವಿವಿಧ ಸಮೀತಿಯ ಪದಾದಿಕಾರಿಗಳನ್ನು ಮತ್ತು ಕಾರ್ಯಕಾರಣಿ ಸದಸ್ಯರನ್ನು ನೇಮಕ ಮಾಡಲಾಯಿತು.
ದೇವರಹಿಪ್ಪರಗಿ: ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಪರಿಣಾಮಕಾರಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಸಾರ್ವಜನಿಕರು ಸಹ ಸಹಕಾರ ನೀಡಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ಇಂಡಿ ರಸ್ತೆಯಲ್ಲಿ ಬೆಳೆದ ಅನಗತ್ಯ ಕಳೆ ತೆಗೆಯುವ ಕಾರ್ಯಕೈಗೊಂಡು ಮಾತನಾಡಿದರು.ಪಟ್ಟಣದ ಸ್ವಚ್ಛತೆಗಾಗಿ ಪ್ರತಿವಾರ ಒಂದೊಂದು ಸ್ಥಳವನ್ನು ಆಯ್ಕೆಮಾಡಿಕೊಂಡು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಪೌರಕಾರ್ಮಿಕರು ಸಹ ತಮ್ಮ ಕರ್ತವ್ಯದ ಬಹುತೇಕ ಅವಧಿಯನ್ನು ಸ್ವಚ್ಛತೆಯಲ್ಲಿಯೇ ಕಳೆಯುತ್ತಿದ್ದಾರೆ. ಅದಾಗ್ಯೂ ಕೆಲವು ಪ್ರದೇಶಗಳು ಮಲೀನವಾಗಿ ಕಾಣುತ್ತಿವೆ.ಪಟ್ಟಣದ ಸೌಂದರ್ಯ ಹೆಚ್ಚಲು ಸ್ವಚ್ಛತೆ ಅಗತ್ಯವಾಗಿದೆ. ಅದಕ್ಕಾಗಿ ಸಾರ್ವಜನಿಕರು ಸಹ ಸಿಬ್ಬಂದಿಗೆ ಸಹಕಾರ ನೀಡಬೇಕು. ತಮ್ಮ ಮನೆಗಳ ಸುತ್ತಲೂ ನೈರ್ಮಲ್ಯ ಕಾಪಾಡಬೇಕು. ಆರೋಗ್ಯಯುತ ಜೀವನ ನಮ್ಮ ಆದ್ಯತೆಯಾಗಲಿ. ಅದಕ್ಕಾಗಿ ಪ್ರತಿ ಕುಟುಂಬ ಪಂಚಾಯಿತಿ ನೀಡಿದ ಡಬ್ಬಿಗಳಲ್ಲಿ ಒಣ ಹಾಗೂ ಹಸಿ ತ್ಯಾಜ್ಯವನ್ನು ವಿಂಗಡಿಸಿ ವಿಲೇವಾರಿ ಮಾಡುವ ಸಿಬ್ಬಂದಿಗೆ ಸಹಕರಿಸಬೇಕು ಎಂದರು.ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ, ನೈರ್ಮಲ್ಯ ಮೇಲ್ವಿಚಾರಕ ಮಾರ್ತಾಂಡ ಗುಡಿಮನಿ, ಇಮಾಮ್ ಮುಲ್ಲಾ, ಮುಬಾರಕ್ ಪಡೇಕನೂರ, ಅಶೋಕ ಮಲ್ಲಾರಿ,…
ವಿಜಯಪುರ: ಜಿಲ್ಲೆಯ ೧೧೦/೧೧ ಕೆವ್ಹಿ ಮಟ್ಟಿಹಾಳ ಟ್ಯಾಪ್ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ೧೧೦/೧೧ ಕೆವ್ಹಿ ಮಟ್ಟಿಹಾಳ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಬರುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಹಾಗೂ ವಿಜಯಪುರ ನಗರ ಕುಡಿಯುವ ನೀರಿನ ಸ್ಥಾವರಗಳಿಗೆ & ೩೩ಕೆವ್ಹಿ ಕಾರಜೋಳ ಎಲ್.ಆಯ್.ಎಸ್. ಮಾರ್ಗಗಳಿಗೆ ಅಕ್ಟೋಬರ್ ೦೧ ರಂದು ಬೆಳಿಗ್ಗೆ ೯ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬಸವನಬಾಗೇವಾಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ವಿಜಯಪುರ: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲೆಯ ವಿವಿಧ ೧೩ ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಅಕ್ಟೋಬರ್ ೭ರ ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮದ ಪಿಂಚಣಿದಾರರಿಗೆ ಹಲಗಣೇಶ್ವರ ದೇವಸ್ಥಾನದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿಗಳು ಹಾಗೂ ಸಿಂದಗಿ ತಾಲೂಕಿನ ಚಟ್ಟರಕಿ ಗ್ರಾಮದ ಪಿಂಚಣಿದಾರರಿಗೆ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಇಂಡಿ ಉಪ ವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.ಅದರಂತೆ,ವಿಜಯಪುರ ಗ್ರೇಡ್-೨ ತಹಶೀಲ್ದಾರ ಅವರು ಮದಭಾವಿ ಗ್ರಾಮದ ಸಾಧುವಿನ ಕಟ್ಟಿ ಆವರಣದಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಬಿಜ್ಜರಗಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ,ಬಸವನ ಬಾಗೇವಾಡಿ ತಹಶೀಲ್ದಾರ ಅವರು ನಾಗರಾಳ ಹುಲಿ ಗ್ರಾಮದ ಹನುಮಾನ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.ನಿಡಗುಂದಿ ಗ್ರೇಡ್ ೨ ತಹಶೀಲ್ದಾರ್ ಅವರು ಶೀಕಳವಾಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ, ಕೊಲ್ಹಾರ ತಹಶೀಲ್ದಾರ ಅವರು ಚಿಕ್ಕ ಗರಸಂಗಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಮುದ್ದೇಬಿಹಾಳ ಗ್ರೇಡ್ ೨…
