Author: editor.udayarashmi@gmail.com

ವಿಜಯಪುರ: ನೈರುತ್ಯ ರೈಲ್ವೇ ಇಲಾಖೆಯ ವಿಜಯಪುರ ಅಲಿಯಾಬಾದ್ ಗೂಡ್ಸ್ಶೆಡ್ ಉದ್ಘಾಟಣಾ ಕಾರ್ಯಕ್ರಮವನ್ನು ವಿಜಯಪುರ ಅಲಿಯಾಬಾದ್ ಗೂಡ್ಸ್ ಶೆಡ್‌ನಲ್ಲಿ ಅಕ್ಟೋಬರ್ ೧ರಂದು ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೧ ಗಂಟೆಗೆ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಮೂಲ ಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಸಂಸದ ರಮೇಶ ಜಿಗಜಿಗಣಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನವದೆಹಲಿಯ ವಿಶೇಷ ಪ್ರತಿನಿಧಿ ವಿಧಾನ ಪರಿಷತ್ತಿನ ಸದಸ್ಯರಾದ ಪ್ರಕಾಶ ಹುಕ್ಕೇರಿ, ಶಾಸಕರುಗಳಾದ ವಿಠ್ಠಲ ಕಟಕದೊಂಡ, ಶಾಸಕರಾದ ಹನಮಂತ ಆರ್ ನಿರಾಣಿ, ಪ್ರಕಾಶ ಆರ್ ರಾಠೋಡ, ಸುನೀಲಗೌಡ ಬಿ. ಪಾಟೀಲ, ಪಿ.ಹೆಚ್ ಪೂಜಾರ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ಹುಬ್ಬಳ್ಳಿ ವಿಬಾಗೀಯ ರೈಲ್ವೇ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್.ವಸ್ತ್ರದ ಅವರು ಸೆ.೩೦ ರಿಂದ ಅ.೧ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಸೆ.೩೦ರ ಮಧ್ಯಾಹ್ನ ೩:೩೦ಕ್ಕೆ ರಾಷ್ಟ್ರೀಯ ಮತದಾರ ದಿನಾಚರಣೆ, ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಮತ್ತು ಇತರೆ ಸ್ವೀಪ್ ಕಾರ್ಯ ಚಟುವಟಿಕೆಗಳ ಕುರಿತು ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಪರಿಶೀಲನೆ ಮತ್ತು ಸಮಾಲೋಚನಾ ಸಭೆ ನಡೆಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡುವರು.ಅ.೧ರಂದು ಶತಾಯುಷಿ ಮತದಾರರನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಂದು ರಾತ್ರಿ ವಿಜಯಪುರದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಇಂಡಿ: ಹ್ಯಾಟ್ರಿಕ್ ಗೆಲುವು ಸಾಧಿಸಿದ ಇಂಡಿ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಡಾ.ಪುರುಷೋತ್ತಮಾನಂದ ಸಾನಿಧ್ಯದಲ್ಲಿ, ತಾಲೂಕಿನ ಭಗೀರಥ ಸಮಾಜದಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಭಗೀರಥ ಮಹರ್ಷಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸುರೇಶ ಕರಂಡೆ ಹಾಗೂ ಹಿರಿಯ ಮುಖಂಡ ಮಳಸಿದ್ದ ಬ್ಯಾಳಿ ಜಂಟಿ ಸುದ್ದಿಗೋಷ್ಠಿ ನಡೆಸಿ ಹೇಳಿದರು.ಶುಕ್ರವಾರ ಪಟ್ಟಣದಲ್ಲಿ ಕರೆದ ಸುದ್ದಿ ಗೋಷ್ಠಿಯಲ್ಲಿ ಮಾತಾನಾಡಿದ ಅವರು, ಅಕ್ಟೋಬರ್-1 ಬೆಳಿಗ್ಗೆ 10 ಘಂಟೆಗೆ ತಡವಲಗಾ ಗ್ರಾಮದ ಜೋಡಗುಡಿ ಸಭಾಭವನದಲ್ಲಿಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಸಮುದಾಯದ ಎಸ್ ಎಸ್ ಎಲ್ ಸಿ ಹಾಗೂ ದ್ವಿತಿಯ ಪಿಯುಸಿಯಲ್ಲಿ ಪ್ರತಿಶತ 85 ಕ್ಕಿಂತಲೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ತಾಲೂಕಿನ ಉಪ್ಪಾರ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿಬೇಕೆಂದು ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಶ್ರೀಶೈಲ ಸೊನ್ನ, ಸಂಜೀವ ಮೊಟಗಿ, ಸೋಮಶೇಖರ್ ಬ್ಯಾಳಿ, ಸೋಮಶೇಖರ್ ಸೊನ್ನ, ಚಂದ್ರಾಮ ಶಿವಪೂರ, ಅರವಿಂದ ಕಟ್ಟಿ ಉಪಸ್ಥಿತರಿದ್ದರು.

Read More

ಇಂಡಿ: ಭಾರತೀಯ ಅಂಚೆ ಸೇವೆ ವಿಶ್ವದಲ್ಲಿ ಅತಿ ದೊಡ್ಡದಾದ ಸಂಪರ್ಕ ಜಾಲ ಹೊಂದಿದೆ. ಭಾರತ ದೇಶದ ಯಾವದೇ ಊರಿಗೆ ಹೋದರೂ ನಿಮಗೆ ಅಂಚೆ ಕಚೇರಿ ಕಾಣಸಿಗುವದರಿಂದ ಸಾರ್ವಜನಿಕರು ದೇಶದ ಎಲ್ಲಾ ಪ್ರದೇಶದೊಂದಿಗೆ ಸಂಪರ್ಕದಲ್ಲಿರಲು ಸಾದ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಿರ್ಮಿತ ನೂತನ ಅಂಚೆ ಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.ಪೂಜ್ಯ ಶ್ರೀ ವೃಷಭಲಿಂಗೇಶ್ವರ ಶ್ರೀಗಳು ಮಾತನಾಡಿ ಅಂಚೆ ಕಚೇರಿಯಿಂದ ಸಾರ್ವಜನಿಕರಿಗೆ ಸಾಕಷ್ಟು ಉಪಯೋಗವಿದೆ.ಅಂಚೆ ವ್ಯವಹಾರ, ನೊಂದಾಯಿತ ಪತ್ರ ವ್ಯವಹಾರ, ಶೀಘ್ರ ಅಂಚೆ, ಪಾರ್ಸಲ್ ಸೇವೆ, ಇ ಅಂಚೆ, ವಿಶೇಷ ಕೋರಿಯರ್ ಸೇವೆ, ಮ್ಯುಚುವಲ್ ಫಂಡ್,ರಾಷ್ಟ್ರೀಯ ಉಳಿತಾಯ ಪತ್ರ ವ್ಯವಹಾರ, ಕಿಸಾನ ವಿಕಾಸ ಪತ್ರ, ನಿಶ್ಚಿತ ಠೇವಣಿ, ಆವರ್ತಕ ಠೇವಣಿ ಸೇರಿದಂತೆ ಅನೇಕ ಉಪಯೋಗ ಸಾರ್ವಜನಿಕರಿಗೆ ನೀಡುತ್ತಿದ್ದು ಅಂಚೆ ಸೇವೆ ದೇಶಕ್ಕೆ ಮಾದರಿ ಸೇವೆಯಾಗಿದೆ ಎಂದರು.ಧಾರವಾಡ ವಲಯದ ಪೋಸ್ಟ ಮಾಸ್ಟರ್ ಚೀಫ್ ರಾಜೇಂದ್ರಕುಮಾರ, ಪೋಸ್ಟ ಮಾಸ್ಟರ ಜನರಲ್ ಕರ್ನಲ್ ಸುನೀಲಕುಮಾರ, ಸುಪರಿಟೆಂಡೆಂಟ್ ಆಫ್ ಪೋಸ್ಟ ಜಿ.ವಿ.ನಾಯಕ, ಗ್ರಾ.ಪಂ ಅಧ್ಯಕ್ಷೆ…

Read More

ಬ್ರಹ್ಮದೇವನಮಡು: ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ ಪ್ರವಾದಿ ಮಹ್ಮದ್ ಪೈಗಂಬರ್ ಆದಶ೯ಗಳನ್ನು ಎಲ್ಲರೂ ಮೈಗೊಡಿಸಿಕೊಳ್ಳಬೇಕು ಎಂದು ಟಿಪ್ಪು ಕ್ರಾಂತಿ ಸೇನೆ ರಾಜ್ಶ ಪ್ರದಾನ ಕಾಯ೯ದಶಿ೯ ದಸ್ತಗೀರ ಮುಲ್ಲಾ ಇಂಗಳಗಿ ಹೇಳಿದರು.ಸಿಂದಗಿ ತಾಲೂಕು ಹೊನ್ನಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಪ್ರಯುಕ್ತ ಟಿಪ್ಪು ಕ್ರಾಂತಿ ಸೇನೆ ಯುವ ಘಟಕ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಹಬ್ಬಗಳು ಭಾವೈಕ್ಶದ ಸಂಕೇತವಾಗಿದ್ದು, ಜಾತಿ ಧಮ೯ ಮರೆತು ಎಲ್ಲರೂ ಒಂದಾಗಿ ಆಚರಿಸಬೇಕು. ಎಲ್ಲ ಧಮ೯ಗಳು ಸೌಹಾದ೯ದಿಂದ ಜೀವನ ನಡೆಸುವ ಸಂದೇಶ ನೀಡಿವೆ. ಹಬ್ಬಗಳು ಪರಸ್ಪರ ಸ್ನೇಹ ಭಾಂಧವ್ಶ ಬೆಸೆಯುವ ವೇದಿಕೆಗಳಾಗಬೇಕಿದೆ ಎಂದರು.ಕುರಳಗೇರಾದ ದಗಾ೯ದ ಡಾ.ಎಂ.ಎಂ.ದಗಾ೯ ಸಾನ್ನಿಧ್ಶವಹಿಸಿದ್ದರು.ಕಾಂಗ್ರೆಸ್ ಯುವ ಮುಖಂಡ ಚಂದ್ರಶೇಖರ ಕೆಂಭಾವಿ, ಅಂಜುಮನ್ ಇಸ್ಲಾಂ ಕಮೀಟಿ ಅಧ್ಶಕ್ಷ ಅಮಿನಸಾಬ ಬುಡ್ಡೆಖಾನ, ಪತ್ರಕತ೯ ಮಲ್ಲು ಕೆಂಭಾವಿ, ಸಾಹೇಬಪಟೀಲ ಮುರಡಿ, ಸಂಗನಗೌಡ ಪಾಟೀಲ, ಅಮಿನಸಾಬ ಹೊಸಮನಿ, ದಸ್ತಗೀರಬಾಷ ಅಗಿಸಿಮನಿ, ಮುಸ್ತಾಪ್ ವಡಗೇರಿ, ಅನ್ವರ ನಾಯ್ಕೋಡಿ, ಇಮ್ರಾನ್ ಅಗಿಸಿಮನಿ, ನಬೀರಸೂಲ ಬಾಗೇವಾಡಿ, ಅಸ್ಲಾಂ ಮುರಡಿ, ಆರೀಫ್ ಉಸ್ತಾದ…

Read More

ವಿಜಯಪುರ: ವಿಜಯಪುರದ ವಿಶ್ವವಿಖ್ಯಾತ ಗೋಲಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಂತೆ ಸಂಸದ ರಮೇಶ ಜಿಗಜಿಣಗಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.ಐತಿಹಾಸಿಕ ವಿಜಯಪುರವು ೮೦ಕ್ಕೂ ಹೆಚ್ಚು ಎಎಸ್‌ಐ ಸಂರಕ್ಷಿತ ಸ್ಮಾರಕಗಳನ್ನು ಹೊಂದಿದ್ದು, ಅತಿ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ವಿಜಯಪುರ ಭಾರತದ ಅತಿ ದೊಡ್ಡ ಪ್ರವಾಸಿ ಕೇಂದ್ರವಾಗಿದೆ.ರೋಮ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ನಂತರದ ಗಾತ್ರದಲ್ಲಿ ಇದುವರೆಗೆ ನಿರ್ಮಿಸಲಾದ ಎರಡನೇ ಅತಿದೊಡ್ಡ ಗುಮ್ಮಟವಾಗಿದೆ. ಈ ಗುಮ್ಮಟದಲ್ಲಿ ಪ್ರತಿ ಶಬ್ದವು ಏಳು ಬಾರಿ ಪ್ರತಿಧ್ವನಿಸುತ್ತದೆ.ವಿಶ್ವವಿಖ್ಯಾತ ಗೋಲಗುಮ್ಮಟವನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸುವುದರಿಂದ ಜಿಲ್ಲೆಯ ಪ್ರವಾಸೋದ್ಯಮವು ಅಭಿವೃದ್ದಿ ಹೊಂದಿ, ಸಾವಿರಾರು ಜನರಿಗೆ ನೇರ ಹಾಗೂ ಪರೋಕ್ಷವಾಗಿ ಉದ್ಯೋಗವು ದೊರೆಯಲಿದೆ. ಹೋಟೆಲ್ ಉದ್ಯಮಕ್ಕೆ ಉತ್ತೇಜನ ಸೇರಿದಂತೆ ಪ್ರಮುಖ ಬೆಳೆಗಳಾದ ಲಿಂಬೆ, ದ್ರಾಕ್ಷಿ, ದಾಳಿಂಬೆ ಬೆಳೆಗಳ ರಫ್ತಿಗೆ ಉತ್ತೇಜನ ದೊರೆಯಲಿರುವುದರಿಂದ ವಿಶ್ವವಿಖ್ಯಾತ ಗೋಲಗುಮ್ಮಟವನ್ನು ವಿಶ್ವಪಾರಂಪರಿಕ ಪಟ್ಟಿಗೆ ಸೇರಿಸುವಂತೆ ಅವರು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Read More

ವಿಜಯಪುರ: ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಜಯಂತಿ ಅಂಗವಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಅಕ್ಟೋಬರ್ ೨ರಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯರಾತ್ರಿ ೧೨ ಗಂಟೆವರೆಗೆ ಸಾರಾಯಿ ಹಾಗೂ ಐಎಂಎಲ್ ಅಂಗಡಿಗಳಲ್ಲಿ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.

Read More

ವಿಜಯಪುರ: ಕಾರ್ಮಿಕ ಖಾತೆ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಅಕ್ಟೋಬರ್ ೦೨ರಂದು ರಾತ್ರಿ ೧೦ ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಅಕ್ಟೋಬರ್ ೦೩ರಂದು ಬೆಳಿಗ್ಗೆ ೯-೩೦ ರಿಂದ ೧೦-೩೦ರವರೆಗೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ೧೧-೩೦ರಿಂದ ೧೨-೩೦ ಗಂಟೆವರೆಗೆ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ಹಾಗೂ ೧೨-೩೦ರಿಂದ ೧-೩೦ರವರೆಗೆ ಮಾಲೀಕ ವರ್ಗದ ಸಂಘಟನೆಗಳ-ಆಡಳಿತ ವರ್ಗಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ವಿಜಯಪುರದಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ.

Read More

ಚಡಚಣ: ಪಟ್ಟಣದಲ್ಲಿ ತಮಿಳುನಾಡಿಗೆ ಕಾವೇರಿ ನೀರು ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳಿಂದ ತಹಶೀಲ್ದಾರ್ ಸಂಜಯ ಇಂಗಳೆ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ನಂತರ ಮಾತನಾಡಿದ, ಕರವೇ ಅಧ್ಯಕ್ಷ ಸೋಮಶೇಖರ ಬಡಿಗೇರ, ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್ ಪಿ ಬಗಲಿ ಹಾಗೂ ಮುಖಂಡ ಈರಣ್ಣ ಪಾಟೀಲ,ನೀರು ಜೀವನಾವಶ್ಯಕ ವಸ್ತು. ಇತ್ತೀಚಿನ ವರ್ಷಗಳಲ್ಲಿ, ವರ್ಷದಿಂದ ವರ್ಷಕ್ಕೆ ಹವಮಾನ ವೈಪರೀತ್ಯದಿಂದಾಗಿ ಸಕಾಲಕ್ಕೆ ಸಾಕಷ್ಟು ಮಳೆ ಪ್ರಮಾಣವೂ ಕಡಿಮೆಯಾಗಿದೆ. ಸರಕಾರವೇ ಎಲ್ಲ ತಾಲೂಕುಗಳಲ್ಲಿ ಬರಗಾಲವೆಂದು ಸಾರಿದೆ. ಜನರು ಜನ ಜನ ಜಾನುವಾರಗಳೊಂದಿಗೆ ಗುಳ ಹೋಗುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿಯಲ್ಲಿ ಎಷ್ಟೋ ವರ್ಷಗಳ ಹಿಂದೆ ಮಾಡಿಕೊಂಡ ಒಡಂಬಡಿಕಗೆ ಬದ್ದರಾಗಿ ಅದೇ ಪ್ರಮಾಣದಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದು ತೀರಾ ಅನ್ಯಾಯ. ಹೀಗೆ ಮುಂದುವರೆದರೆ ಬೆಂಗಳೂರು ಮಹಾನಗರಕ್ಕೆ ಕಾವೇರಿ ನೀರು ಪೂರೈಕೆ ಆಗದೇ ಮಹಾನಗರವೇ ಖಾಲಿಯಾಗಬೇಕಾದ ಪ್ರಸಂಗ ಬರಬಹುದು. ತಮಿಳರ ಪ್ರಭಾವಕ್ಕೆ ಒಳಗಾಗಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗದ ಹಾಗೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.ಈ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಶಾಖಿಲ…

Read More

ಯಡ್ರಾಮಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಗರಾದ್ರಿ ಸಾಂಸ್ಕೃತಿಕ ಸಂಗಮ ಟ್ರಸ್ಟ್ ಸಹಯೋಗದಲ್ಲಿ ಹುಣ್ಣಿಮೆ ಸಂಗಮ ಕಾರ‍್ಯಕ್ರಮ ಹಾಗೂ ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟಗಾರರ ಕುರಿತು ವಿಚಾರ ಸಂಕಿರಣ ವಿರಕ್ತಮಠದಲ್ಲಿ ಶುಕ್ರವಾರ ಆಯೋಜಿಸಲಾಗಿದೆ.ಕಾರ‍್ಯಕ್ರಮದಲ್ಲಿ ಯಡ್ರಾಮಿ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಅಧ್ಯಕ್ಷ ನಾಗಪ್ಪ ಎಂ. ಸಜ್ಜನ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಬಲವಂತ್ರಾಯಗೌಡ ಬಿರಾದಾರ, ಕ.ಸಾ.ಪ. ಪ್ರಧಾನ ಕಾರ್ಯದರ್ಶಿ ರೇವಣಸಿದ್ದಯ್ಯ ಪುರಾಣಿಕ, ಸಗರಾದ್ರಿ ಸಾಂಸ್ಕೃತಿಕ ಸಂಗಮ ಟ್ರಸ್ಟ್ ಕಾರ್ಯದರ್ಶಿ ಪ್ರಕಾಶ ಸಾಹು ಬೆಲ್ಲದ ಭಾಗವಹಿಸುವರು. ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯ ಮುಂಚೂಣಿ ಹೋರಾಟಗಾರರಾದ ಸರ್ದಾರ್ ಶರಣಗೌಡ ಇನಾಮದಾರ ದುಮ್ಮದ್ರಿ ಅವರ ಹೋರಾಟದ ಕುರಿತು ಶಿಕ್ಷಕ ಸಾಹಿತಿ ಅಮೃತ ದೊಡಮನಿ, ಕೆ. ಚೆನ್ನಬಸಪ್ಪ ಸಾಹು ಕುಳಗೇರಿ ಅವರ ಹೋರಾಟದ ಕುರಿತು ಸಾಹಿತಿ ಡಾ. ಕೆ,ಕೆ. ದೇಸಾಯಿ ಉಪನ್ಯಾಸ ನೀಡುವರು. ಇದೇ ವೇಳೆ, ಶಿಕ್ಷಕರಾದ ಬಸವರಾಜ ಪಾಟೀಲ…

Read More