Author: editor.udayarashmi@gmail.com

ಬಂದ್ ಗೆ ಭಾರಿ ಬೆಂಬಲ ವ್ಯಕ್ತ | ಜನಜೀವನ ಅಸ್ತವ್ಯಸ್ತ ಸಾಧ್ಯತೆ | ಬಿಜೆಪಿ-ಜೆಡಿಎಸ್ ಬೆಂಬಲ ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬರಗಾಲ ಇರುವಾಗ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಸೆ. 29 ಶುಕ್ರವಾರ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆಯುತ್ತಿರುವ ಬಂದ್‌ನಲ್ಲಿ ಪಾಲ್ಗೊಳ್ಳಲು ಹಲವು ಸಂಘಟನೆಗಳು ಮುಂದೆ ಬಂದು ಬೆಂಬಲ ಸೂಚಿಸಿವೆ. ರಾಜ್ಯದ ನಾನಾ ಭಾಗಗಳಲ್ಲಿರುವ ಸ್ಥಳೀಯ ಸಂಘಟನೆಗಳು ಕೂಡಾ ಕೈಜೋಡಿಸಿವೆ. ಇದರಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಂದ್ ಯಶಸ್ವಿಯಾಗುವ ಲಕ್ಷಣಗಳು ಕಾಣುತ್ತಿವೆ.ಜನಜೀವನ ಅಸ್ತವ್ಯಸ್ತ ಸಾಧ್ಯತೆ: ಕರ್ನಾಟಕ ಬಂದ್ ನಿಂದ ವಿಶೇಷವಾಗಿ ರಾಜ್ಯದ ದಕ್ಷಿಣ ಭಾಗದಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.ನಗರದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಎಲ್ಲ ವರ್ಗದ ಜನರು ಭಾಗವಹಿಸುವ ಸಾಧ್ಯತೆ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.…

Read More

ಬಿಜೆಪಿ ಲೀಡರ್ ಲೆಸ್ ಪಾರ್ಟಿ | ಬಿಜೆಪಿ ಮೈತ್ರಿಯಿಂದ ಜೆಡಿಎಸ್‌ಗೆ ಲಾಭ ಬೆಂಗಳೂರು: ಬಿಜೆಪಿಯಿಂದ ಹಲವು ಪ್ರಭಾವಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ , ಕಾಂಗ್ರೆಸ್ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ಹೊಸ ಬಾಂಬ್ ಸಿಡಿಸಿದ್ದಾರೆ.ಲೋಕಸಭಾ ಚುನಾವಣೆ ಎದುರಿಸಲು ಜೆಡಿಎಸ್- ಬಿಜೆಪಿ ಮೈತ್ರಿಗೆ ಸಿದ್ಧತೆ ನಡೆಸುತ್ತಿದ್ದರೆ, ಇತ್ತ ಕಾಂಗ್ರೆಸ್​ ಸಹ ಜೆಡಿಎಸ್​ ಹಾಗೂ ಬಿಜೆಪಿ ನಾಯಕರಿಗೆ ಆಪರೇಷನ್ ಹಸ್ತ ನಡೆಸುತ್ತಿದೆ. ಈಗಾಗಲೇ ಕೆಲ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಪ್ರಭಾವಿ ನಾಯಕರುಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಜಗದೀಶ್ ಶೆಟ್ಟರ್​ ಹೇಳಿದ್ದಾರೆ.ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಲವು ತಿಂಗಳಿನಿಂದ ಹಲವು ಮಾಜಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಿನ್ನೆ ರಾಮಣ್ಣ ಲಮಾಣಿ ಮತ್ತು ಎಂ.ಪಿ‌. ಕುಮಾರಸ್ವಾಮಿ ಮತ್ತೆ ಸಂಪರ್ಕ ಮಾಡಿದಾಗ ಡಿಕೆ ಶಿವಕುಮಾರ್ ಬಳಿ ಕರೆದೊಯ್ದಿದ್ದೆ. ಮುಂದಿನ ವಾರ ಅವರನ್ನು ಅಧಿಕೃತವಾಗಿ ಕಾಂಗ್ರೆಸ್​ಗೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.”ಬಿಜೆಪಿಯಲ್ಲಿ ಬೇಜಾರಾದವರು ಬಹಳಷ್ಟು ಜನ ಇದ್ದಾರೆ.…

Read More

ವಿಶ್ವ ಹಿಂದೂ ಪರಿಷತ್ ಆಯೋಜನೆ | ಸೆ.೩೦ ರಿಂದ ಅ.೧೬ ವರೆಗೆ ಶೌರ್ಯ ಜಾಗರಣ ರಥಯಾತ್ರೆ ಮುದ್ದೇಬಿಹಾಳ: ವಿಶ್ವ ಹಿಂದೂ ಪರಿಷದ್ ೬೦ ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆ ರಾಷ್ಟçದಾದ್ಯಂತ ಸೆ.೩೦ ರಿಂದ ಅ.೧೬ ರವರೆಗೆ ಶೌರ್ಯ ಜಾಗರಣ ರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬ ಹಿಂದುವೂ ಕೈಜೋಡಿಸಿ ತನು ಮನದಿಂದ ಭಾಗವಹಿಸುವಂತೆ ಪರಿಷದ್ ನ ಬೆಳಗಾವಿ ಮಠ ಮಂದಿರಗಳ ಪ್ರಮುಖ ಶ್ರೀಮಂತ ದುದ್ದಗಿ ವಿನಂತಿಸಿದರು.ಪಟ್ಟಣದ ಬಜಾರ ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.ಸಾವಿರಾರು ವರ್ಷಗಳಿಂದ ರಾಷ್ಟ್ರದ ಪರಕೀಯರ ಆಕ್ರಮಣಗಳು ನಡೆಯುತ್ತಲೇ ಇದ್ದರೂ ಅದನ್ನು ದಿಟ್ಟವಾಗಿ, ಸಮರ್ಪಕವಾಗಿ ಎದುರಿಸುತ್ತ ನಮ್ಮ ಸನಾತನ ಧರ್ಮವನ್ನು ಈ ಪವಿತ್ರ ಭರತ ಭೂಮಿಯನ್ನು ಸಂರಕ್ಷಿಸುವಲ್ಲಿ ಸಾವಿರಾರು ಪರಾಕ್ರಮಿಗಳು ತಮ್ಮ ಜೀವನವನ್ನೇ ಸಮರ್ಪಿಸಿ, ಅವಶ್ಯ ಬಂದಾಗ ಬಲಿದಾನವೂ ಆಗಿ ನಮಗೆ ಶ್ರೇಷ್ಠ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ. ಅವರ ತ್ಯಾಗ ಬಲಿದಾನಗಳ ಪರಿಣಾಮವಾಗಿ ನಮ್ಮ ಸನಾತನ ಧರ್ಮವು ಸುರಕ್ಷಿತವಾಗಿ ನಮ್ಮ ಕಾಲಖಂಡದವರೆಗೆ ತಲುಪಿದ್ದು, ಇದನ್ನು ಸಂರಕ್ಷಿಸುವ…

Read More

ಚಿತ್ರಕಲಾವಿದ ದಿ.ಸೋಮಶೇಖರ ಸಾಲಿ ಜನ್ಮಶತಮಾನೋತ್ಸವ | ಚಿತ್ರಕಲಾ ಪ್ರದರ್ಶನ ವಿಜಯಪುರ: ಅಖಂಡ ವಿಜಯಪುರ ಜಿಲ್ಲೆಯ ಶ್ರೇಷ್ಠ ಕಲಾವಿದ ದಿ.ಸೋಮಶೇಖರ ಸಾಲಿ ಅವರ ಕಲಾಕೃತಿಗಳು ತರುಣ ಕಲಾವಿದರಿಗೆ ಸ್ಪೂರ್ತಿಯಾಗಿವೆ. ಅವರ ಜನ್ಮಶತಮಾನೋತ್ಸವವನ್ನು ಅವರದೇ ಕಲಾಕೃತಿಗಳ ಪ್ರದರ್ಶನ ಮೂಲಕ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಅಭಿಪ್ರಾಯಪಟ್ಟರು.ಗುರುವಾರ ನಗರದ ಸರಕಾರಿ ಆರ್ಟ್ ಗ್ಯಾಲರಿಯಲ್ಲಿ ಸೋಮಶೇಖರ ಸಾಲಿ ಪ್ರತಿಷ್ಠಾನವು ಅವರ ಜನ್ಮಶತಮಾನೋತ್ಸವ ಅಂಗವಾಗಿ ಹಮ್ಮಿಕೊಂಡ ದಿ.ಸೋಮಶೇಖರ ಸಾಲಿ ಅವರ ಸಮಗ್ರಕಲಾಕೃತಿಗಳ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.ದಿ.ಸೋಮಶೇಖರ ಸಾಲಿ ಅವರು ತಮ್ಮ ಸಹಜ ಸರಳ ಬದುಕಿನಲ್ಲಿ ಇಷ್ಟೊಂದು ಅದ್ಭುತ ಚಿತ್ರಗಳನ್ನು ರಚಿಸಿ ನಾಡಿಗೆಬಹುದೊಡ್ಡ ಕೊಡುಗೆ ನೀಡಿರುತ್ತಾರೆ. ಈ ಬಹುಮುಖ ವ್ಯಕ್ತಿತ್ವದ ಕಲಾವಿದರ ಈ ಕಲಾ ಪ್ರದರ್ಶನದ ಪಯಣ ನಾಡಿನಾದ್ಯಂತ ಯಶಸ್ವಿಯಾಗಿ ನಡೆಯಲೆಂದು ಅವರು ಹಾರೈಸಿದರು.ಅಧ್ಯಕ್ಷತೆ ವಹಿಸಿದ ಹಿರಿಯ ಕಲಾವಿದ ಪಿ.ಎಸ್. ಕಡೇಮನಿ ಮಾತನಾಡಿ, ದಿ.ಸೋಮಶೇಖರ ಸಾಲಿ ಅವರು ಲಲಿತಕಲಾ ಅಕಾಡೆಮಿ ಅಧ್ಯಕ್ಷರಾಗಿದ್ದಾಗ ಸಂಚಾರಿ ಕಲಾ ವಾಹನ ಪರಿಕಲ್ಪನೆ ಜಾರಿಗೆ ತಂದು, ಅದು ರಾಜ್ಯದ ಎಲ್ಲ…

Read More

ವಿಜಯಪುರ: ನಗರದ ಕಾಳಿದಾಸ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ ಪ್ರತಿ ತಿಂಗಳು ನಡೆಸುತ್ತಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸೆ.೨೯ ರಂದು ಕಾಳಿದಾಸ ಶಿಕ್ಷಣ ಸಂಸ್ಥೆ ಸಭಾಭವನದಲ್ಲಿ ವಿಶ್ವಕ್ಕೆ ಸ್ವಾಮಿ ವಿವೇಕಾನಂದರ ಆಧ್ಯಾತ್ಮಿಕ ಕೊಡುಗೆ ಕುರಿತು ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.ವಿಶ್ವಕ್ಕೆ ಸ್ವಾಮಿ ವಿವೇಕಾನಂದರ ಆಧ್ಯಾತ್ಮಿಕ ಕೊಡುಗೆ ಕುರಿತು ಉಪನ್ಯಾಸವನ್ನು ಸಾಹಿತಿ ಸುಭಾಷ ಯಾದವಾಡ ನಡೆಸಿಕೊಡಲಿದ್ದಾರೆ. ಶಿಕ್ಷಣ ಮತ್ತು ಸಾಹಿತ್ಯ ಉಪನ್ಯಾಸವನ್ನು ವಿಶ್ರಾಂತ ಉಪ ನಿಬಂಧಕರಾದ ಬಿ.ಆರ್. ಬನಸೋಡೆ ಮಾಡಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್.ಎ ಜಿದ್ದಿ ಅಧ್ಯಕ್ಷತೆ ವಹಿಸಲಿದ್ದಾರೆಂದು ಸಂಸ್ಥೆಯ ಆಡಳಿತಾಧಿಕಾರಿ ಆರ್.ಎಸ್.ವಾಡೇದ ಹಾಗೂ ಪ್ರಾಚಾರ್ಯ ಕೆ.ಆರ್.ಜಾಧವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮುದ್ದೇಬಿಹಾಳ: ಈದ್ ಮಿಲಾದ್ ನಬಿ ಹಬ್ಬದ ಅಂಗವಾಗಿ ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ವತಿಯಿಂದ ತಾಲೂಕು ಸರ್ಕಾರಿಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಿದರು.ಈ ವೇಳೆ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ನೂರ ಅಹಮದ್ ಸಣ್ಣಕ್ಕಿ, ರಮೇಶ್ ದೊಡಮನಿ, ಬ್ಲಾಕ್ ಅಧ್ಯಕ್ಷ ಆಸೀಫಅಲಿ ನಿಡಗುಂದಿ, ನಿಂಗಪ್ಪ ಚಲವಾದಿ, ಮರಿಯಪ್ಪ ಸಾಲವಾಡಗಿ, ರಾಜು ನದಾಫ್, ಇಬ್ರಾಹಿಂ ವಾಲಿಕಾರ್, ತೌಫಿಕ್ ಜಾಗೀರ್ದಾರ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಮೆಹಬೂಬಿ ಭಾಗವಾನ್ ತಾಲೂಕು ಉಪಾಧ್ಯಕ್ಷರಾದ ಕಾಲಿಮಾ ಬೀಳಗಿ, ಬಿಸ್ಮಿಲ್ಲಾ ಭಾಗವಾನ್, ಅಬ್ಬು ಬಾಗವಾನ ಸೇರಿದಂತೆ ಮತ್ತೀತರರು ಇದ್ದರು.

Read More

ವಿಜಯಪುರ: ಕಾಯಕ ದಾಸೋಹದ ಶರಣ ತತ್ವದಡಿ ೧೨ನೇ ಶತಮಾನದಲ್ಲಿ ಶಿವಶರಣ ಹಡಪದ ಅಪ್ಪಣ್ಣನವರು ಕಾಯಕ ದಾಸೋಹಿಗಳಾಗಿದ್ದರು. ಅವರು ಶ್ರೇಷ್ಠ ವಚನಕಾರರು ಆಗಿದ್ದರು. ಅವರ ತತ್ವಗಳನ್ನು ಆಧರಿಸಿ ಪ್ರಧಾನಿ ನರೇಂದ್ರ ಮೋದಿ ಶರಣರಿಗೆ ಗೌರವ ಸೂಚಿಸುವ ಸಲುವಾಗಿ ಅಂಚೆ ಇಲಾಖೆಯಿಂದ ವೃತ್ತಿ ನಿರತ ಕ್ಷೌರಿಕನ ಅಂಚೆ ಚೀಟಿಯನ್ನು ದೇಶಕ್ಕೆ ಸಮರ್ಪಿಸಿ ಬಿಡುಗಡೆ ಮಾಡಿದ್ದಕ್ಕಾಗಿ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವಿಜಯಪುರ ತಾಲೂಕು ಘಟಕ ಅಧ್ಯಕ್ಷ ದಯಾನಂದ ಹಡಪದ, ಉಪಾಧ್ಯಕ್ಷ ಮಹಾರಾಜ ಹಡಪದ, ಕಾರ್ಯದರ್ಶಿ ಬಸವರಾಜ ಹಡಪದ, ಪ್ರಧಾನ ಕಾರ್ಯದರ್ಶಿ ರಾಜು ಬ. ಹಡಪದ (ಯಂಕಂಚಿ), ಖಜಾಂಚಿ ಬಸವರಾಜ ಹಡಪದ (ಹಲಸಂಗಿ) ಪಿಎಂ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಸಿಂದಗಿ: ಮಾನವನ ದೇಹದ ಜೀವಸೆಲೆಯಾದ ರಕ್ತವನ್ನು ದಾನವಾಗಿ ನೀಡುವುದು ಒಂದು ಜೀವವನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ ಎಂದು ಮಕ್ಕಳ ತಜ್ಞ ಡಾ. ಚನ್ನವೀರ (ಮುತ್ತು) ಮನಗೂಳಿ ಹೇಳಿದರುಪಟ್ಟಣದ ಕಲ್ಯಾಣ ನಗರದ ನಿವಾಸಿಗಳು ಈದ್-ಮಿಲಾದ್ ನಿಮಿತ್ಯ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ರಕ್ತದಾನ ಅತ್ಯಂತ ಪವಿತ್ರವಾದ ದಾನ. ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಮತ್ತೊಬ್ಬ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ. ಆ ಕಾರಣದಿಂದಲೇ ರಕ್ತದಾನವನ್ನು ಜೀವದಾನ ಎಂದು ಕರೆಯಲಾಗುತ್ತದೆ ಎಂದರು.ಈ ವೇಳೆ ರಕ್ತನಿಧಿ ಪ್ರಯೋಗಾಲಯ ಅಧಿಕಾರಿ ರಾಜಶೇಖರ ನರಗೋದಿ, ಶಿವನಗೌಡ ಬಿರಾದಾರ, ವಕೀಲರ ಸಂಘದ ಅಧ್ಯಕ್ಷ ಎಸ್.ಬಿ ದೊಡಮನಿ ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲದ ಕಾರಣ ಅಗತ್ಯದ ಮತ್ತು ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ರಕ್ತದಾನಿಗಳ ರಕ್ತವನ್ನೇ ರೋಗಿಗಳು ಅವಲಂಬಿಸಿರುತ್ತಾರೆ. ದಿನದ ಪ್ರತಿಕ್ಷಣವೂ ದೇಶದ ಯಾವುದಾದರೂ ಭಾಗದಲ್ಲಿ ಯಾರೊಬ್ಬರಿಗಾದರೂ ರಕ್ತದ ಆವಶ್ಯಕತೆ ಇರುತ್ತದೆ. ವ್ಯಕ್ತಿಯು ಜೀವನದಲ್ಲಿ ಒಮ್ಮೆಯಾದರೂ ರಕ್ತದಾನ ಮಾಡಲೇಬೇಕು. ರಕ್ತದಾನ ಮಾಡುವುದು ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯ ಕರ್ತವ್ಯ…

Read More

ಇಂಡಿ: ಹಾಲು ಉತ್ಪಾದನೆ ಹಾಗೂ ಶೇಖರಣೆಯಲ್ಲಿ ಪ್ರಥಮ ಸ್ಥಾನ ತಾಲೂಕಿನ ಭತಗುಣಕಿ ಗ್ರಾಮದ ಹಾಲು ಉತ್ಪಾದಕ ಸಂಘಕ್ಕೆ ಸಲ್ಲುತ್ತದೆ ಎಂದು ವಿಜಯಪುರ ಹಾಗೂ ಬಾಗಲಕೋಟ ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ದೀಕ್ಷಿತ ಕುಮಾರ್ ಹೇಳಿದರು.ತಾಲೂಕಿನ ಭತಗುಣಕಿ ಗ್ರಾಮದ ಹಾಲು ಉತ್ಪಾದಕ ಸಂಘದ 2023-24 ನೇ ಸಾಲಿನ ಸರ್ವ ಸಾಧಾರಣ ಸಭೆಯಲ್ಲಿ ಸಂಘದ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಅವರಿಗೆ ಪ್ರಮಾಣ ಪತ್ರ ನೀಡಿ ಅವರು ಮಾತನಾಡಿದರು.ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಸಂಭಾಜಿ ಮಿಸಾಳೆ ಮಾತನಾಡಿ, ಅವರು, 2022/23 ನೇ ಸಾಲಿನಲ್ಲಿ ರೈತರಿಂದ ಸುಮಾರು 8,32,500 ಲೀಟರ್ ಹಾಲು ಶೇಖರಣೆ ಮಾಡಿದ್ದು, ಸಂಘವು ಉನ್ನತ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದೆ.ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಹಸುಗಳ ಆರೋಗ್ಯ ದೃಷ್ಟಿಯಿಂದ ಸಂಘದ ಸ್ವಂತ ಲಾಭಾಂಶದಲ್ಲಿ ರೈತರಿಗೆ ಪ್ರತಿ ಲೀಟರ್ ಗೆ ₹3 ಹೆಚ್ಚುವರಿಯಾಗಿ ವಿತರಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಸವರಾಜ ಹಳಕೆ, ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರಾಮ ತಳಕೇರಿ, ಅಪ್ಪಸಾಹೇಬ ಪವಾರ, ಶಿವಪುತ್ರ ಜೇವರಗಿ, ಗಂಗಾಧರ ಘಾಟಗೆ, ಶಿವಾಜಿ…

Read More

ಆಲಮೇಲ: ಕಡಣಿ ಬೆರಗು ಪ್ರಕಾಶನವು ದಿ. ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ಅವರ ಹೆಸರಿನಲ್ಲಿ ಪ್ರತಿವರ್ಷ ನೀಡುವ ಬೆರಗು ಪ್ರಶಸ್ತಿ-೨೦೨೩ ನೀಡಲು ೨೦೨೨ನೇ ಸಾಲಿನಲ್ಲಿ ಪ್ರಕಟವಾದ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆವ್ಹಾನಿಸಿದೆ. ಪ್ರಶಸ್ತಿಯು ೫ಸಾವಿರ ರೂ. ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ಆಸಕ್ತ ಲೇಖಕರು ತಮ್ಮ ಕೃತಿಯ ಎರಡು ಪ್ರತಿಗಳನ್ನು ಅಕ್ಟೋಬರ್ ೧೫ ರೊಳಗೆ ಸಲ್ಲಿಸಬೇಕು. ಪಿಎಚ್.ಡಿ ಪ್ರಬಂಧ ಹೊರತುಪಡಿಸಿ ಕನ್ನಡದ ಎಲ್ಲಾ ಪ್ರಕಾರದ ಪುಸ್ತಕಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.ಹಸ್ತಪ್ರತಿ ಮತ್ತು ಪುಸ್ತಕ ಕಳಿಸುವ ವಿಳಾಸ: ವಿಜಯಲಕ್ಷ್ಮಿ ರಮೇಶ ಕತ್ತಿ, ಪ್ರಕಾಶಕರು ಬೆರಗು ಪ್ರಕಾಶನ ಸಂಸ್ಥೆ, ವಿನಾಯಕ ನಗರ ಆಲಮೇಲ -೫೮೬ ೨೦೨, ತಾ: ಆಲಮೇಲ, ಜಿಲ್ಲೆ: ವಿಜಯಪುರ, ಮೊ: ೭೭೯೫೩೪೧೩೩೫

Read More