Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಜಮಖಂಡಿ : ಶಾಲಾ ಜೀವನವು ವ್ಯಕ್ತಿತ್ವ ರೂಪಿಸಿಕೊಳ್ಳುವ ಸುಂದರ ಘಟ್ಟ. ಕೇವಲ ಅಂಕ ಗಳಿಕೆ ಶಿಕ್ಷಣವಲ್ಲ, ನೈತಿಕ ಮೌಲ್ಯಗಳೊಂದಿಗೆ ಸಂಸ್ಕಾರವಂತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಹಸಿಲ್ದಾರ್ ಅನೀಲ್ ಬಡಿಗೇರ್ ಹೇಳಿದರು ಹೇಳಿದರು.ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ರಾಣಿ ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯ 21ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಎನ್ನುವುದು ನಿಂತ ನೀರಲ್ಲ, ಅದು ನಿರಂತರ ಪ್ರಕ್ರಿಯೆ. ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಡಿಜಿಟಲ್ ಯುಗದಲ್ಲಿ ಮಕ್ಕಳು ತಂತ್ರಜ್ಞಾನದ ಸದ್ಬಳಕೆ ಮಾಡಿಕೊಂಡು ಜ್ಞಾನವಂತರಾಗಬೇಕು,” ಎಂದು ಹೇಳಿದರು.ಮಾಜಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ಎಸ್. ಸಿಂಧೂರ ಮಾತನಾಡಿ,”ಗ್ರಾಮೀಣ ಭಾಗದ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಶಾಲಾ ವಾರ್ಷಿಕೋತ್ಸವಗಳ ಮುಖ್ಯ ಉದ್ದೇಶ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಈ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ:ಸಾರ್ವಜನಿಕರಲ್ಲಿ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇದೇ ಫೆಬ್ರವರಿ 9 ರಿಂದ 13 ರವರೆಗೆ ಜಿಲ್ಲೆಯಲ್ಲಿ ಐದು ದಿನಗಳವರೆಗೆ ಆರ್ಥಿಕ ಸಾಕ್ಷರತಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಹಣಕಾಸು ಸೇವೆಗಳ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ ) ನಿರ್ದೇಶನದಂತೆ ಜಿಲ್ಲಾ ಮಾರ್ಗದರ್ಶಿ (ಲೀಡ್ ಬ್ಯಾಂಕ್) ಕೆನರಾ ಬ್ಯಾಂಕ್ ಈ ಕಾರ್ಯಕ್ರಮ ಆಯೋಜಿಸಿದ್ದು ಇದೇ ಫೆಬ್ರವರಿ 9 ರಂದು ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ನಿರ್ವಹಣಾಧಿಕಾರಿಗಳಾದ ಶ ರಿಷಿ ಆನಂದ ಅವರು ಸಪ್ತಾಹದ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ಅಧಿಕೃತ ಚಾಲನೆ ನೀಡಲಿದ್ದಾರೆ. ಜಿಲ್ಲೆಯಾದ್ಯಂತ ಇರುವ 337 ಬ್ಯಾಂಕುಗಳ ಶಾಖೆಗಳಲ್ಲಿಯೂ ಆರ್ಥಿಕ ಸಾಕ್ಷರತಾ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕೆವೈಸಿ( ನಿಮ್ಮ ಗ್ರಾಹಕರನ್ನು ತಿಳಿಯಿರಿ ) ಎನ್ನುವದು ಆರ್ಥಿಕ ಸಾಪ್ತಹದ ವಿಷಯವಾಗಿರುವದು. ಕೆವೈಸಿ ಪ್ರಾಮುಖ್ಯತೆ, ಅಧಿಕೃತ ದಾಖಲೆಗಳ ಬಗ್ಗೆ ವಿವರ, ಕೆವೈಸಿ ಸಿಕೆವೈಸಿ, ಈಕೆವೈಸಿ ಬಗ್ಗೆ ತಿಳಿಸಿಕೊಡಲಾಗುವುದು ಎಂದು ಜಿಲ್ಲಾ ಅಗ್ರಣಿ ಬ್ಯಾಂಕ್ ಮುಖ್ಯ…
ಉದಯರಶ್ಮಿ ದಿನಪತ್ರಿಕೆಚಡಚಣ : ಸಮೀಪದ ಹೋರ್ತಿ ವಿದ್ಯುತ್ 33 ಕೆ ವ್ಹಿ ಮಾರ್ಗದ ಮೇಲೆ ಕಾಮಾಗಾರಿಯನ್ನು ಹಮ್ಮಿಕೊಂಡಿರುವ ನಿಮಿತ್ಯ ಫೆ.7ರ ಶನಿವಾರ ಮುಂಜಾನೆ 12 ಘಂಟೆಯಿಂದ ಸಾಯಂಕಾಲ 4 ಘಂಟೆವರೆಗೆ 33 ಕೆ.ವ್ಹಿ ಹೋರ್ತಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವ್ಹಿ ಮಾರ್ಗಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ ಆದ್ದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ವಿಜಯಕುಮಾರ ಹವಾಲ್ದಾರ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತಕರು (ವಿ ) ಹೆಸ್ಕಾಂ ಉಪ ವಿಭಾಗಾಧಿಕಾರಿ ಚಡಚಣ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ : ರಾಜ್ಯದಲ್ಲಿಯೇ ಗುಣಮಟ್ಟದ ತಂಬಾಕು ಬೆಳೆಯುವ ಜಿಲ್ಲ ಮೈಸೂರು ಜಿಲ್ಲೆ. ಇಲ್ಲಿನ ಹುಣಸೂರು, ಪಿರಿಯಾಪಟ್ಟಣ, ಕೆ ಆರ್ ನಗರ ಜೊತೆಗೆ ಹೆಚ್ ಡಿ ಕೋಟೆಯಲ್ಲೂ ಅತಿ ಹೆಚ್ಚಾಗಿ ಹೊಗೆಸೊಪ್ಪು ಬೆಳೆಯಲಾಗುತ್ತೆ. ಆದರೆ ಕಷ್ಟಪಟ್ಟು ಬೆಳೆದ ಬೆಳೆಗೆ ಬೆಲೆ ಸಿಗದೇ ಬೆಳೆಗಾರ ಚಿಂತಾಕ್ರಾಂತನಾಗಿದ್ದಾನೆ. ರಾಗಿ, ಜೋಳ, ಹತ್ತಿ ಬೆಳೆದಂತೆ ಸಿಕ್ಕ ಸಿಕ್ಕಲಿ ಹೊಗೆಸೊಪ್ಪು ಬೆಳೆಯಲು ಅನುಮತಿ ಇಲ್ಲ. ಅದರದ್ದೇ ಆದ ಚೌಕಟ್ಟಿದ್ದು, ಮಾನದಂಡವಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವುದರಿಂದ ತನ್ನದೇ ಆದ ತಂಬಾಕು ಮಂಡಳಿಗಳಿವೆ. ಇದರ ಮೂಲಕವೇ ತಂಬಾಕು ವ್ಯವಹಾರ, ಖರೀದಿ ಎಲ್ಲವೂ ನಡೆಯುತ್ತೆ. ತಂಬಾಕು ಮಂಡಳಿಯ ನಿಯಮದ ಪ್ರಕಾರ ರೈತನಿಗೆ ಮತ್ತೆ ಹೆಚ್ಚುವರಿ ಅಂತೇಳಿ 500 ಕೆಜಿ ಆಸುಪಾಸಿನಲ್ಲಿ ಹೊಗೆಸೊಪ್ಪು ಮಾರಾಟ ಮಾಡಲು ಅವಕಾಶ ಇರುತ್ತದೆ. ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯ ಅಧೀನದಲ್ಲಿ ತಂಬಾಕು ಮಂಡಳಿ ಸ್ವತಂತ್ರ್ಯವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರೂ ರೈತನಿಗೆ ಪ್ರಯೋಜನಕ್ಕಿಂತ ಬರೀ ಮೋಸವೇ ಆಗುತ್ತಿದೆ. ಭಾರತದಲ್ಲಿ ಅತಿಹೆಚ್ಚು ತಂಬಾಕು ಬೆಳೆಯುವ,…
ಚಡಚಣ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಮ್ಮನವರ ಕನಸಿನ ಕೂಸಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.ಲೋಣಿ ಬಿ.ಕೆ ವಲಯದ, ಲೋಣಿ ಬಿ.ಕೆ ಗ್ರಾಮದ ನಿರ್ಗತಿಕರಾದ ದುಂಡವ್ವ ತೇಲಿ ಮತ್ತು ದ್ರೌಪದಿ ತಳವಾರ ಇಬ್ಬರು ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.ಮತ್ತು ಪ್ರತಿ ತಿಂಗಳು ಮಾಶಾಸನ ವಿತರಣೆ, ಮತ್ತು ಮನೆ ಕಟ್ಟಿ ಕೊಡುವುದರಮುಖೇನ ಅದೇ, ನಿರ್ಗತಿಕರಿಗೆ ದಿನ ಬಳಕೆ ವಸ್ತುಗಳಾದ ಹಾಸಿಗೆ, ದಿಂಬು, ಪೌಷ್ಟಿಕ ಆಹಾರ ಕಿಟ್, ಬಟ್ಟೆ, ಸಾಮಗ್ರಿಗಳನ್ನು ಪ್ರತಿ ವರ್ಷ ವಿತರಣೆ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ವಿತರಣೆ ಮಾಡಲಾಗುತಿದ್ದು ವಲಯದ ಮೇಲ್ವಿಚಾರಕರಾದ ಮಹಾಂತೇಶ ವ್ಹಿ.ಎ. ಅವರು ಕಿಟ್ ವಿತರಣೆ ಮಾಡಿ ಮಾತನಾಡಿದರು.ಈ ಸಂದರ್ಭದಲ್ಲಿ ಲೋಣಿ ಗ್ರಾಮದ ಗಣ್ಯರಾದ ಕೆ.ಎಸ್.ಪಾಟೀಲ, ಒಕ್ಕೂಟದ ಅಧ್ಯಕ್ಷರು ಲಕ್ಷ್ಮಿ ಕಾಪಸೆ, ಸೇವಾಪ್ರತಿನಿಧಿ ಸಂಗೀತ ಉಟಗಿ ಸಿಎಸ್ಸಿ ಸೇವಾದಾರರು ಸಾಹೇರಬಾನು ಶೇಕ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆಚಡಚಣ : ವಿಜಯಪುರದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ಸಾವಿತ್ರಿಬಾಯಿ ಫುಲೆ / ಜ್ಯೋತಿಬಾ ಫುಲೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಚಡಚಣ ಶ್ರೀ ಸಂಗಮೇಶ್ವರ ಮಾಧ್ಯಮಿಕ ಶಾಲೆಯ ಶಿಕ್ಷಕ ತುಕಾರಾಮ ಕೋಳಿ ಅವರು ಆಯ್ಕೆಯಾಗಿದ್ದಾರೆ.ಅಕ್ಷರದವ್ವ ಎಂದೇ ಖ್ಯಾತರಾದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯ ಅಂಗವಾಗಿ ಆಯೋಜಿಸಲಾಗಿರುವ ಜಿಲ್ಲಾಮಟ್ಟದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮವು ಇದೇ ಫೆ. 8ರಂದು ವಿಜಯಪುರ ತಾಲೂಕಿನ ತಿಡಗುಂದಿಯ ಮಾನಸಗಂಗೋತ್ರಿ ಪ್ರತಿಷ್ಠಿತ ಕಾಲೇಜಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷ ಜಿ.ಎಸ್. ಕಾಂಬಳೆ ತಿಳಿಸಿದ್ದಾರೆ.ಮಾಡಲಾಗುತ್ತಿದೆ ಎಂದು ಸಮಿತಿ ತಿಳಿಸಿದೆ.ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆ, ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ, ಸಾಮಾಜಿಕ ಜಾಗೃತಿ ಹಾಗೂ ಶಿಸ್ತುಬದ್ಧ ಬದುಕಿನ ಮಹತ್ವವನ್ನು ಬೋಧಿಸುವ ಮೂಲಕ ಅವರು ಶಿಕ್ಷಕ ವೃತ್ತಿಗೆ ಗೌರವ ತಂದುಕೊಟ್ಟಿದ್ದಾರೆ. ಮಕ್ಕಳ ಸಮಗ್ರ ಅಭಿವೃದ್ಧಿಗೆ ನೀಡಿದ ಕೊಡುಗೆ ಹಾಗೂ ಸಮಾಜಮುಖಿ ಶೈಕ್ಷಣಿಕ…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲ್ಲೂಕಿನ ಜೇವೂರ ಗ್ರಾಮದ ಶಾಂತಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಬಸವಂತ ವಾಘಮೋರೆ ಅವರು ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿಜಯಪುರ ಜಿಲ್ಲೆಯ ತಿಡಗುಂದಿ ಪಟ್ಟಣದ ಮಾನಸ ಗಂಗೋತ್ರಿ ಮಾದರಿ ಪ್ರತಿಷ್ಠಿತ ವಸತಿ ಶಾಲೆಯಲ್ಲಿ ಫೆ. 8 ರಂದು ಭಾನುವಾರ ಬೆ. 10 ಗಂಟೆಗೆ ಆಯೋಜಿಸಿರುವ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕ ವಿಜಯಪುರ ವತಿಯಿಂದ ಸಾವಿತ್ರಿಬಾಯಿ ಫುಲೆ ರವರ ಸ್ಮರಣಾರ್ಥ ಕೊಡಮಾಡುವ “ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಶಿಕ್ಷಕ ಬಸವಂತ ವಾಘಮೋರೆ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಗಣಪತಿ ಕಾಂಬಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನವಿಗೆ ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್ ರಿಂದ ಪೂರಕ ಸ್ಪಂದನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ತಿಂಗಳಿಗೆ ಒಂದು ಪುಟ ಹೆಚ್ಚುವರಿ ಸರ್ಕಾರಿ ಜಾಹೀರಾತು ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ದಿನಪತ್ರಿಕೆಗಳ ಸಂಪಾದಕರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರಿಗೆ ಮನವಿ ಸಲ್ಲಿಸಲಾಯಿತು.ಬುಧವಾರ ವಿಧಾನಸೌಧದಲ್ಲಿ ಮನವಿ ಸಲ್ಲಿಸಿದ ಬಳಿಕ ಸಂಘದ ಅಧ್ಯಕ್ಷೆ ರಶ್ಮಿ ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರ ನೇತೃತ್ವದಲ್ಲಿ ಪ್ರಕಟವಾಗುತ್ತಿರುವ ದಿನಪತ್ರಿಕೆಗಳು ಸಾಮಾಜಿಕ ಜಾಗೃತಿ, ಮಹಿಳಾ ಸಬಲೀಕರಣ ಹಾಗೂ ಗ್ರಾಮೀಣ ಸಮಸ್ಯೆಗಳ ಕುರಿತಾಗಿ ನಿರಂತರವಾಗಿ ಧ್ವನಿ ಎತ್ತುತ್ತಿವೆ. ಇಂತಹ ಪತ್ರಿಕೆಗಳಿಗೆ ಸರ್ಕಾರದ ಮಟ್ಟದಲ್ಲಿ ಪ್ರೋತ್ಸಾಹ ಅಗತ್ಯವಿದ್ದು, ಹೆಚ್ಚುವರಿ ಜಾಹೀರಾತು ಸೌಲಭ್ಯ ದೊರೆತರೆ ಮಹಿಳಾ ಸಂಪಾದಕತ್ವದ ಪತ್ರಿಕೆಗಳು ಆರ್ಥಿಕವಾಗಿ ಬಲಿಷ್ಠವಾಗುವ ಜೊತೆಗೆ ಗುಣಮಟ್ಟದ ಪತ್ರಿಕೋದ್ಯಮಕ್ಕೂ ಉತ್ತೇಜನ ಸಿಗಲಿದೆ ಎಂದು ಹೇಳಿದರು.ಕಳೆದ ಏಳು ವರ್ಷಗಳಿಂದ ಸಂಘದ ವತಿಯಿಂದ ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರೂ ಸಮರ್ಪಕ ಸ್ಪಂದನೆ ದೊರಕಿಲ್ಲ. ಈ ಬಾರಿಯಾದರೂ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸುಪ್ರಸಿದ್ಧ ಯಲಗೂರ ಕ್ಷೇತ್ರದ ಶ್ರೀ ಯಲಗೂರೇಶನ ಕಾರ್ತಿಕೋತ್ಸವವು ಪಾಲ್ಗುಣ ಮಾಸ ಷಷ್ಠಿ, ಸಪ್ತಮಿ ೦೭ ಮತು ೮ ರಂದು ಅದ್ದೂರಿಯಾಗಿ ಜರುಗುವುದು. ಆ ದಿನ ಬೆಳಿಗ್ಗೆ ಪಂಚಾಮೃತ ಅಭಿಷೇಕ ಪವಮಾನ ಹೋಮ, ಮಹಾಪೂಜೆ, ಮುಂಜಾನೆ ೧೦ ಗಂಟೆಗೆ ದಿಂಡಿನ ಸ್ಪರ್ಧೆ, ತೀರ್ಥ ಪ್ರಸಾದ, ಹರಿದಾಸರ ಕೀರ್ತನೆ ಹಾಗೂ ಈ ಕೆಳಗಿನಂತೆ ಸಂಗೀತ ಕಾರ್ಯಕ್ರಮಗಳು ನಡೆಯುತ್ತಿದು ್ದ, ರಾತ್ರಿ ಕಾರ್ತಿಕೋತ್ಸವ ನಡೆಯಲಿದೆ. ಪಂ. ಬಸವರಾಜ ಭಜಂತ್ರಿ, ಸಹನಾಯಿ, ಶ್ರೀಮತಿ ಅದಿತಿ ದೇಸಾಯಿ, ಕುಮಾರ ಹೃಷಿಕೇಶ ಅರಬಟ್ಟಿ, ಕುಮಾರಿ ವೈಷ್ಣವಿ ಜೋಶಿ, ಶ್ರೀಮತಿ ಪ್ರೇಮಾ, ಸ್ನೇಹಾ ಕಡಿವಾಲ, ಡಾ.ಶ್ರೀಮತಿ ಸಂಗೀತಾ ಕಾಖಂಡಕಿ, ಶ್ರೀ ನಾರಾಯಣ ತಾಸಗಾವ, ಶ್ರೀ ಸಂತೋಷ ಗದ್ದನಕೇರಿ, ಶ್ರೀಮತಿ ಪರಿಮಳ ಗಿರಿಯಾಚಾರ್ಯ, ಶ್ರಿ ಬಿ.ಬಿ. ಕುಲಕರ್ಣಿ, ಕುಮಾರಿ ಭಾಗ್ಯ ಕುಲಕರ್ಣಿ, ಕುಮಾರಿ ಸುನಯನಾ ಮನೋಹರ ದೇಶಪಾಂಡೆ, ವಿಧೂಷಿ ಶ್ರೀಮತಿ ರೇಣುಕಾ ನಾಕೋಡ್, ಪಂ. ಶ್ರೀ ರಘುನಾಥ ನಾಕೋಡ್ ಮತು ್ತ ಪಂ. ಶ್ರೀ ರವಿಕಿರಣ ನಾಕೋಡ್, ಕುಮಾರಿ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ;ಇಲ್ಲಿ ಪಾರ್ವತಿ ಕಟ್ಟಾ ಸೇತುವೆ ಬಳಿಯಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ವ್ಯಕ್ತಿಯೊಬ್ಬ ಬಿದ್ದು ಮೃತಪಟ್ಟ ಘಟನೆ ಬುಧವಾರ ಜರುಗಿದೆ.ಮೃತ ವ್ಯಕ್ತಿ ಆಲಮಟ್ಟಿ ಆರ್.ಎಸ್. ಗ್ರಾಮದ ಮಹೇಂದ್ರಕುಮಾರ ಶಂಕ್ರಪ್ಪ ರಾಠೋಡ (43).ಈ ವ್ಯಕ್ತಿ ಕಳೆದ ಎರಡು ದಿನದಿಂದ ಕಾಣೆಯಾಗಿದ್ದ ಎನ್ನಲಾಗಿದೆ.ಬುಧವಾರ ಮೃತನ ಶವ ಕಾಲುವೆಯಲ್ಲಿ ತೇಲುತ್ತಿತ್ತು. ಸಂಜೆ ಪೊಲೀಸರ ಸಮ್ಮುಖದಲ್ಲಿ ಮೃತ ವ್ಯಕ್ತಿಯ ದೇಹ ಹೊರ ತೆಗೆಯಲಾಯಿತು.ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
