Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಆಲಮೇಲ: ವಿಜಯಪುರ ಜಿಲ್ಲೆಯ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆ(ರಿ) ಯು ರಾಜ್ಯಮಟ್ಟದ ಪ್ರೊ. ಎಚ್.ಟಿ.ಪೋತೆ ಕತೆ-ಕಾವ್ಯ ಪ್ರಶಸ್ತಿ ನೀಡಲು ಮಹಿಳಾ ಲೇಖಕಿಯರಿಂದ ಹಸ್ತಪ್ರತಿಗಳನ್ನು ಆವ್ಹಾನಿಸಿದೆ. ಪ್ರಶಸ್ತಿ ರೂ ೧೦ ಸಾವಿರ ನಗದು, ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿದೆ. ಆಯ್ಕೆಯಾದ ಹಸ್ತಪ್ರತಿಯನ್ನು ಪ್ರಕಾಶನದಿಂದ ಪ್ರಕಟಿಸಿ ಪ್ರಕಾಶನದ ೬ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಕತ್ತಿ ತಿಳಿಸಿದ್ದಾರೆ.ಮಹಿಳೆಯರು ಮಾತ್ರ ಈ ಸಲದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದ್ದು ಕನಿಷ್ಠ ೧೦ ಕತೆಗಳನ್ನೊಳಗೊಂಡ ಹಾಗೂ ೪೦ಕ್ಕೂ ಮೀರದ ಕವಿತೆಗಳ ಒಳಗೊಂಡ ಮುದ್ರಣಕ್ಕೆ ಸಿದ್ಧವಾದ ಹಸ್ತಪ್ರತಿಯನ್ನು ಕಳಿಸಬಹುದಾಗಿದೆ. ನುಡಿ ಅಥವಾ ಬರಹದಲ್ಲಿ ಟೈಪ್ ಮಾಡಿದ ತಮ್ಮ ಹಸ್ತಪ್ರತಿಯ ಎರಡು ಪ್ರತಿಗಳನ್ನು ಅಕ್ಟೋಬರ್ ೧೫ ರೊಳಗೆ ತಲುಪುವಂತೆ ಕಳಿಸಲು ಕೋರಲಾಗಿದೆ.ಹಸ್ತಪ್ರತಿ ಮತ್ತು ಪುಸ್ತಕ ಕಳಿಸುವ ವಿಳಾಸ: ವಿಜಯಲಕ್ಷ್ಮಿ ರಮೇಶ ಕತ್ತಿ, ಪ್ರಕಾಶಕರು, ಬೆರಗು ಪ್ರಕಾಶನ ಸಂಸ್ಥೆ, ವಿನಾಯಕ ನಗರ ಆಲಮೇಲ -೫೮೬ ೨೦೨, ತಾ: ಆಲಮೇಲ, ಜಿಲ್ಲೆ: ವಿಜಯಪುರ,…
ಕೊಲ್ಹಾರ ತಾಲೂಕು ಕಸಾಪ ನೂತನ ಪದಾಧಿಕಾರಿಗಳ ಪದಗ್ರಹಣ ಕೊಲ್ಹಾರ: ಕನ್ನಡ ನಾಡು, ನುಡಿ, ಜಲ, ಭೂಮಿ, ಭಾಷೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.ತಾಲೂಕಿನ ಮುಳವಾಡ ಗ್ರಾಮದ ಸತ್ಯ ಸಾಯಿ ರಂಗಮAದಿರದಲ್ಲಿ ಜರುಗಿದ ಕೊಲ್ಹಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಹೆಮ್ಮೆಯ ಸಂಸ್ಥೆಯಾಗಿದೆ. ನಾಡಿನ ಮೂಲೆ ಮೂಲೆಗಳಲ್ಲಿ ಕನ್ನಡ ಸಾಹಿತ್ಯವನ್ನು ಬಾಷಾಭಿಮಾನವನ್ನು ಹಬ್ಬಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ನಾಲ್ವಡಿ ಕೃಷ್ಣರಾಜ ಒಡೆಯರು, ಸರ್ ಎಂ.ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆ ಸಾಹಿತ್ಯ ಪರಿಷತ್ ಬೆಳವಣಿಗೆಯಲ್ಲಿ ಅಪಾರವಾಗಿದೆ ಎಂದರು.ಕೊಣ್ಣೂರ ಹಾಗೂ ಮುಳವಾಡ ಗ್ರಾಮದ ಸಿದ್ದಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಿ ಮಾತನಾಡಿದರು.ಮಸೂತಿ ಗ್ರಾಮದ ಜಗದೀಶ್ವರ ಹಿರೇಮಠದ ಪ್ರಭುಕುಮಾರ ಸ್ವಾಮೀಜಿ, ನಾಗರದಿನ್ನಿ ಗ್ರಾಮದ ಸದ್ಗುರು ಸದಾನಂದ ಆಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿ, ಕಲಗುರ್ಕಿ ಗ್ರಾಮದ ದಯಾನಂದ ಹೀರೆಮಠ ಸ್ವಾಮೀಜಿ,…
ಬ್ರಹ್ಮದೇವನಮಡು: ಸಿಂದಗಿ ತಾಲೂಕು ಗೋಲಗೇರಿ ಶ್ರೀ ಗೊಲ್ಲಾಳೇಶ್ವರ ಶಿಕ್ಷಣ ಪ್ರಸಾರ ಸಮಿತಿ ನೂತನ ಅಧ್ಶಕ್ಷರಾಗಿ ಡಂಬಳ ಗ್ರಾಮದ ಪ್ರಭುಗೌಡ ಸಂಗನಗೌಡ ಪಾಟೀಲ ಹಾಗೂ ಉಪಾಧ್ಶಕ್ಷರಾಗಿ ನಿಂಗನಗೌಡ ಗೋಲಪ್ಪಗೌಡ ಪಾಟೀಲ ಆಯ್ಕೆಯಾಗಿದ್ದಾರೆ.
ಆಲಮಟ್ಟಿ: ಸ್ಥಳೀಯ ಎಸ್.ವ್ಹಿ.ವ್ಹಿ. ಸಂಸ್ಥೆಯ ಎಂ.ಎಚ್.ಎಂ.ಪಪೂ ಕಾಲೇಜಿನ ಬಾಲಕಿಯರ ವಾಲಿಬಾಲ್ ತಂಡ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ವಿಜಯಪುರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಪಪೂ ಕಾಲೇಜುಗಳ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಆಲಮಟ್ಟಿ ಎಂ.ಎಚ್.ಎಂ.ಕಾಲೇಜಿನ ಬಾಲಕಿಯರ ತಂಡ ಫೈನಲ್ ಪಂದ್ಯದಲ್ಲಿ ತಮ್ಮ ಕ್ರೀಡಾ ಕೌಶಲ್ಯ, ಕಸರತ್ತಿನೊಂದಿಗೆ ಹೊಂದಾಣಿಕೆಯುತ, ರೋಚಕ ರೀತಿಯಲ್ಲಿ ಆಟವನ್ನಾಡಿ ಗೆಲುವು ಸಾಧಿಸಿದೆ. ಕೂಟದಲ್ಲಿ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಪ್ರವೇಶ ಪಡೆದಿದೆ. ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ತೋರಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಈ ತಂಡಕ್ಕೆ ಸಂಸ್ಥೆಯ ಅಧ್ಯಕ್ಷರಾಗಿರುವ ಗದುಗಿನ ತೋಂಟದ ಡಾ.ಸಿದ್ದರಾಮ ಮಹಾಸ್ವಾಮಿಗಳು, ಕಾರ್ಯದರ್ಶಿ ಪ್ರೊ,ಶಿವಾನಂದ ಪಟ್ಟಣಶೆಟ್ಟರ, ಪ್ರಾಂಶುಪಾಲ ಪಿ.ಎ.ಹೇಮಗಿರಿಮಠ ಸೇರಿದಂತೆ ಕಾಲೇಜು ಸಿಬ್ಬಂದಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಚಿಮ್ಮಡ: ಶರಣ ಸಂಪ್ರದಾಯದಲ್ಲಿ ದಾಸೋಹಕ್ಕೆ ವಿಶಿಷ್ಠಸ್ಥಾನವಿದೆ, ಆದರೆ ದಾಸೋಹದ್ದೇ ಜಾತ್ರೆ ನಡೆಯುವ ಮೂಲಕ ಚಿಮ್ಮಡ ಗ್ರಾಮ ಉತ್ತರ ಕರ್ನಾಟಕದ ಧರ್ಮಸ್ಥಳವಾಗಿದೆ ಎಂದು ಹಂದಿಗುಂದ ಆಡಿ ಸಿದ್ದೇಶ್ವರ ಮಠದ ಶಿವಾನಂದ ಮಹಾಸ್ವಾಮಿಗಳು ಹೇಳಿದರು.ಗ್ರಾಮದಲ್ಲಿ ಕಿಚಡಿ ಜಾತ್ರೆಯ ಅಂಗವಾಗಿ ಓಂಪ್ರಭುಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಿರ್ಮಿಸಲಾಗಿರುವ ಅನುಭವ ಮಂಟಪದಲ್ಲಿ ಗುರುವಾರ ನಡೆದ ಆದ್ಯಾತ್ಮಿಕ ಚಿಂತನಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವಕರು ಜಾತ್ರೆಯ ಚಟುವಟಿಕೆಯಲ್ಲಿ ಭಾಗವಹಿಸಿ ದೇವಸ್ಥಾನದ ಆವರಣವನ್ನು ನಂದನವನವಾಗಿಸಿದ್ದಾರೆ. ಯುವ ಸಮುದಾಯವನ್ನು ಯೋಗ್ಯವಾದ ಮಾರ್ಗದಲ್ಲಿ ಬಳಸಿಕೊಂಡರೆ ದೇಶವನ್ನೇ ವಿಶ್ವಗುರುವನ್ನಾಗಿಸಬಹುದು ಎಂದರು.ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿಯೇ ವಿಶಿಷ್ಟ ಜಾತ್ರೆಯೆಂಬ ಹೆಗ್ಗಳಿಕೆ ಹೊಂದಿರುವ ಚಿಮ್ಮಡ ಕಿಚಡಿ ಜಾತ್ರೆಯಲ್ಲಿ ಲಕ್ಷಾಂತರ ಜನರಿಗೆ ಏಕಕಾಲಕ್ಕೆ ದಾಸೋಹ ಹಮ್ಮಿಕೊಳ್ಳುವ ಮೂಲಕ ಸಮಾನತೆ ಒಡಮೂಡಿಸುತ್ತಿವೆ. ಜಾತ್ರೆಗಳು ಜನರ ಉತ್ಸವಗಳಾಗಬೇಕೆಂದು ಆಶೀರ್ವಚನ ನೀಡಿದರು.ತೇರದಾಳ ಶಾಸಕ ಸಿದ್ದು ಸವದಿ ಮಾತನಾಡಿದರು. ಸ್ಥಳೀಯ ವಿರಕ್ತಮಠದ ಪ್ರಭು ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಮಖಂಡಿ ಓಲೇಮಠದ ಡಾ.ಅಭಿನವಕುಮಾರ ಚನ್ನಬಸವ ಸ್ವಾಮಿಗಳು ಸಮ್ಮುಖ ವಹಿಸಿದ್ದರು.ರಬಕವಿ ಬ್ರಹ್ಮಾನಂದ ಮಠದ…
ಬಸವನಬಾಗೇವಾಡಿ: ಹಾನಗಲ್ ಕುಮಾರ ಸ್ವಾಮೀಜಿಯವರ 156ನೇ ಜಯಂತೋತ್ಸವ ಅಂಗವಾಗಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ನಡೆಯುತ್ತಿರುವ ದುಶ್ಚಟಗಳ ಭಿಕ್ಷೆ- ಸದ್ಗುಣಗಳ ದೀಕ್ಷೆ ಜನ ಜಾಗೃತಿ ಪಾದಯಾತ್ರೆಯು ಗುರುವಾರ ಪಟ್ಟಣದ ವೀರಭದ್ರೇಶ್ವರ ನಗರ, ಮುತ್ತಗಿ ಗ್ರಾಮ ಸೇರಿದಂತೆ ವಿವಿಧೆಡೆ ನಡೆಯಿತು.ನಂತರ ವೀರಭದ್ರೇಶ್ವರ ನಗರದ ಉದ್ಯಾನದಲ್ಲಿ ಜರುಗಿದ ಸಮಾರಂಭದಲ್ಲಿ ಸ್ಥಳೀಯ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಹಾನಗಲ್ ಕುಮಾರ ಸ್ವಾಮೀಜಿ ಅವರ ಜಯಂತ್ಯೋತ್ಸವ ಅಂಗವಾಗಿ ವಿವಿಧ ಮಠಾಧೀಶರ ನೇತೃತ್ವದಲ್ಲ ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಜನರು ಶ್ರದ್ಧಾ ಭಕ್ತಿಯಿಂದ ಸ್ವಾಗತ ಕೋರುತ್ತಿದ್ದಾರೆ. ಯುವಕರು ದುಶ್ಚಟಗಳಿಗೆ ದಾಸರಾಗದೇ ಆಧ್ಮಾತ್ಮಿಕ ವಿಚಾರಗಳನ್ನು ತಿಳಿದುಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.ಅಕ್ಕಲಕೋಟೆಯ ಚನ್ನಬಸವ ದೇವರು ಮಾತನಾಡಿದರು, ಜಯಂತೋತ್ಸವ ಸಮಿತಿ ಅಧ್ಯಕ್ಷ ಗುರುಪಾದೇಶ್ವರ ಶಿವಾಚಾರ್ಯ ಸ್ವಾಮೀಜಿ, ಸದಾಶಿವ ಸ್ವಾಮೀಜಿ, ಅಲ್ಲಮಪ್ರಭು ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ವೀರಬಸವ ದೇವರು, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಸಂಗಪ್ಪ ಅಡಗಿಮನಿ, ಜಗದೀಶ ಕೊಟ್ರಶೆಟ್ಟಿ, ಸಂಗಮೇ ಓಲೇಕಾರ, ರವಿಗೌಡ ಚಿಕ್ಕೊಂಡ,…
ಮುದ್ದೇಬಿಹಾಳ: ನಾವು ಹಬ್ಬ ಹರಿದಿನಗಳನ್ನು ಆಚರಿಸಿ ಪರಿಸರ ಘಾತಕ ಚಟುವಟಿಕೆಗಳಾದ ಪಟಾಕ್ಷಿ-ಸಿಡಿಮದ್ದು, ಪ್ಲಾಸ್ಟಿಕ್ ವಸ್ತುಗಳ ಅನಾವಶ್ಯಕ ಬಳಕೆ ಇತ್ಯಾದಿ ಚಟುವಟಿಕೆಗಳನ್ನು ನಡೆಸಿ ಪರಿಸರವನ್ನು ನಾಶ ಮಾಡುವುದರ ಬದಲು ಪರಿಸರವನ್ನು ಉಳಿಸುವ ಕಾರ್ಯ ಮಾಡಬೇಕಾಗಿದೆ ಎಂದು ಜ್ಞಾನ ಭಾರತಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಅನಂತಚತುದರ್ಶಿ ನಿಮಿತ್ತ ಪರಿಸರದ ಮೇಲೆ ಪ್ರೇಮ ಮೂಡಿಸುವ ಸಲುವಾಗಿ ಆಚರಿಸಿರುವ ವೃಕ್ಷ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ನಮ್ಮ ಕಾಲಕ್ಕೆ ಮಾತ್ರವೇ ಪರಿಸರ ಉಳಿದರೆ ಸಾಕೆಂದು ವಿಚಾರ ಮಾಡಬಾರದು. ಮುಂದಿನ ತಲೆಮಾರಿನವರಿಗೂ ಶುದ್ಧ ಪರಿಸರವನ್ನು ಉಳಿಸಿಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾವು ವೃಕ್ಷವನ್ನು ರಕ್ಷಿಸಿದರೆ ಆ ವೃಕ್ಷವು ಇಡೀ ಜೀವ ಸಂಕುಲವನ್ನೇ ಅನಂತವಾಗಿ ರಕ್ಷಿಸುತ್ತದೆ ಎಂದರು.ಈ ಸಂದರ್ಭದಲ್ಲಿ ತಾಲೂಕಿನ ದೈಹಿಕ ಶಿಕ್ಷಕರಾದ ಯು.ಸಿ.ಕೋನರೆಡ್ಡಿ, ಸಚಿನ ರಾಠೋಡ, ಮುತ್ತು ದೊಡಮನಿ, ಶಿಕ್ಷಕ ಬಿ.ಆರ್.ಬೆಳ್ಳಿಕಟ್ಟಿ, ಬಿ.ಟಿ.ಭಜಂತ್ರಿ, ಎಮ್.ಪಿ.ಪಡದಾಳಿ, ಆರ್.ಎಸ್.ಮಡಿವಾಳರ್, ಅಭಿಷೇಕ ಹುನಗುಂದ ಸೇರಿದಂತೆ ಇತರರು ಹಾಜರಿದ್ದರು.
ಸಿಂದಗಿ: ಕಾಲ ಕಾಲಕ್ಕೆ ಮಳೆಯಾಗದೇ ಇರುವುದರಿಂದ ರೈತರು ಜೀವನವನ್ನು ನಡೆಸುವುದು ತುಂಬಾ ಕಷ್ಟಕರವಾಗಿದೆ. ಆದ್ದರಿಂದ ಬ್ಯಾಂಕುಗಳಲ್ಲಿನ ಸಾಲ ಸೌಲಭ್ಯ ಪಡೆದುಕೊಂಡು ತಮ್ಮ ಜೀವನವನ್ನು ಬಲಪಡಿಸಿಕೊಳ್ಳಬೇಕು ಎಂದು ಪಿ.ಕೆ.ಪಿ.ಎಸ್ ಬ್ಯಾಂಕಿನ ಸದಸ್ಯ ಶಿವಪುತ್ರ ನಿಗಡಿ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ವಿವಿದೊದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ವತಿಯಿಂದ ಹಮ್ಮಿಕೊಂಡ ವಾರ್ಷಿಕ ಸರ್ವಸಾಧಾರಣ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಯಾವುದೇ ರೀತಿಯ ಸಬ್ಸಿಡಿ ಸಾಲಗಳು ರೈತರ ಗಮನಕ್ಕೆ ಬರದೆ ಇರುವದರಿಂದ ಸಬ್ಸಿಡಿ ಸಾಲಕ್ಕೆ ಮನವಿ ಮಾಡಿಕೊಳ್ಳಲು ಹಿನ್ನಡೆಯಾಗುತ್ತಿದೆ. ಮುಂದಿನ ದಿನಾಮಾನಗಳಲ್ಲಿ ಸಂಘದ ಅಧಿಕಾರಿಗಳು ಬ್ಯಾಂಕಿಗೆ ಬಂದಂತ ಯಾವುದೇ ರೀತಿಯ ಸಾಲ ಸೌಲಭ್ಯಗಳನ್ನು ನೋಟಿಸ್ ಬೋರ್ಡಿಗೆ ಅಂಟಿಸುವುದರ ಮೂಲಕ ರೈತರ ಗಮನಕ್ಕೆ ಬರುವಂತೆ ನೊಡಿಕೊಳ್ಳಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನ ಬಿರಾದಾರ ಮಾತನಾಡಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಶೈಲ ಹಿರೇಮಠ, ಉಪಾಧ್ಯಕ್ಷ ಸಂಗಣ್ಣ ಕಡಕೋಳ, ನಿರ್ದೇಶಕ ಬಸಯ್ಯ ಮಠ, ಬಸವರಾಜ ಪಾಟೀಲ, ಶ್ರೀಶೈಲ ಬಗಲಿ, ಕಬಿರಸಾಬ ದೇಸುಣಗಿ, ಸಂಜೀವ ಬಮ್ಮನಳ್ಳಿ,…
ಮುದ್ದೇಬಿಹಾಳ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ.೨೯ ರಂದು ಮದ್ಯಾಹ್ನ ೧ಗಂಟೆಗೆ ಅಂತರಾಷ್ಟ್ರೀಯ ಪೌಷ್ಠಿಕ ಅಆಹಾರ ಸಪ್ತಾಹ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಲಕ್ಷ್ಮಿ ಗರಗ ಉದ್ಘಾಟಿಸಲಿದ್ದು, ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತಕುಮಾರ ಬಳೂಲಗಿಡದ ಉಪಸ್ಥಿತರಿರಲಿದ್ದಾರೆ. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸಲಿದ್ದು, ಸರ್ಕಾರಿ ಸಹಾಯಕ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಂ.ಆರ್.ಪಾಟೀಲ, ಪ್ರಭಾರ ತಹಶೀಲ್ದಾರ ಸಿ.ಎ.ಗುಡದಿನ್ನಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುನಾಥ, ಪ್ರಭಾರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯುವರಾಜ ಹನಗಂಡಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ಮೇಲ್ವಿಚಾರಕಿ ಶರಣಮ್ಮ ಸಿದ್ದರೆಡ್ಡಿ ಪೌಷ್ಠಿಕ ಅಹಾರದ ಕುರಿತು,…
ಮುದ್ದೇಬಿಹಾಳ: ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆಗೆ ತಾಲೂಕಿನ ಬಸರಕೋಡ ಗ್ರಾಮದ ನಿವಾಸಿ, ರಾಜಕೀಯ ಮುಖಂಡ ಹೇಮರೆಡ್ಡಿ ಮೇಟಿ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.೧೦೫ ನೇ ವರ್ಷಕ್ಕೆ ಕಾಲಿರಿಸಿರುವ ಡಿಸಿಸಿ ಬ್ಯಾಂಕ್ ನ ೧೧ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಹೆಚ್ಚಿನ ಮತಗಳನ್ನು ಪಡೆದು ವಿಜಯ ಶಾಲಿಯಾಗುವ ವಿಶ್ವಾಸವನ್ನು ಮೇಟಿ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅಪರ ಸರ್ಕಾರಿ ವಕೀಲ ಎಂ.ಆರ್.ಪಾಟೀಲ, ಮುಖಂಡ ಮಲಕೇಂದ್ರಗೌಡ ಪಾಟೀಲ ಮತ್ತೀತರರು ಇದ್ದರು.
