Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಜನಪರ ಕಾರ್ಯಗಳ ಮೂಲಕ ಈ ಬಾರಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಎಲ್ಲ ಗ್ರಾಮ ಪಂಚಾಯಿತಿಗಳ ಸಾಧನೆಗಳು ಹೆಮ್ಮೆ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಆಹೇರಿ, ಮುತ್ತಗಿ, ನಾಗರಬೆಟ್ಟ, ಯಂಕಂಚಿ, ಚವಡಿಹಾಳ, ಬಿಜ್ಜರಗಿ, ಹೊನಗನಹಳ್ಳಿ, ಕೂಡಗಿ, ಆಲಮಟ್ಟಿ, ಮಿಣಜಗಿ, ರಾಮನಹಳ್ಳಿ, ಚಿಕ್ಕರೂಗಿ ಮತ್ತು ನಿವರಗಿ ಗ್ರಾಮ ಪಂಚಾಯಿತಿಗಳು ಈ ಬಾರಿ ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ. ಈ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಮಾಡಿರುವ ಮಾದರಿ ಕೆಲಸಗಳು ಮತ್ತು ಇವುಗಳ ಯಶಸ್ಸಿಗೆ ಗ್ರಾಮಸ್ಥರ ನೀಡಿರುವ ಸಂಪೂರ್ಣ ಸಹಕಾರ ಶ್ಲಾಘನೀಯವಾಗಿದೆ. ಈ ಗ್ರಾಮಗಳ ಜನತೆ, ಗ್ರಾ. ಪಂ. ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.ಈ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಅಭಿವೃದ್ಧಿ…
ಜಗತ್ತಿಗೆ ಸಮಾನತೆ, ಭಾತೃತ್ವ, ಏಕತೆ ಮತ್ತು ಶಾಂತಿಯನ್ನು ಸಾರಿದ ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಂ ಅವರ ಜನ್ಮದಿನದ ಸಂಕೇತವಾಗಿ ಈದ್ ಮಿಲಾದ ಆಚರಣೆ ಮಾಡಲಾಗುತ್ತದೆ. ಜಗತ್ತಿನಾದ್ಯಂತವಾಗಿ ಆಚರಿಸುವ ಒಂದು ವಿಶೇಷ ಹಬ್ಬ ಇದಾಗಿದೆ.*• ಪ್ರವಾದಿ ಮುಹಮ್ಮದರ ಜನನ:* ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಂ ಜನನ ಕ್ರಿಸ್ತಶಕ ೫೭೦, ಇಸ್ಲಾಮಿಕ್ ಹಿಜರಿ ಕ್ಯಾಲೆಂಡರಿನ ರಬೀವುಲ್ ಅವ್ವಲ್ ತಿಂಗಳ ಹನ್ನೆರಡನೇ ತಾರೀಕಿನಂದು ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಮ್ ಸೌದಿ ಅರೇಬಿಯಾದ ಮೆಕ್ಕಾ ನಗರದಲ್ಲಿ ಖ್ಯಾತ ಅರಬ್ ಕುಟುಂಬದಲ್ಲಿ ಜನಿಸಿದರು. ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲರ ತಂದೆ ಅಬ್ಬುಲ್ಲಾ ತಾಯಿ ಆಮೀನಾ ದಂಪತಿಯ ಪುತ್ರನಾಗಿ ಜನಿಸಿದರು.ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಂ ತಾಯಿ ಆಮೀನಾ ಗರ್ಭವತಿಯಾಗಿದ್ದಾಗಲೇ ತಂದೆ ಅಬ್ಬುಲ್ಲಾ ಅವರು ಮರಣ ಹೊಂದಿದರು.ಅಜ್ಜ ಮುತ್ತಲಿಬ್ ಮತ್ತು ಚಿಕ್ಕಪ್ಪ ಅಬುತಾಲೀಬ್ ಅವರ ಪಾಲನೆಯಲಿ ಬೆಳೆದರು. ಹುಟ್ಟನಿಂದ ಮುಹಮ್ಮದರಿಗೆ ಅಜ್ಜ ಮುತ್ತಲಿಬ್ ಅಂದರೆ ಬಹಳ ಪ್ರೀತಿ ಅವರೇ ಮುಹಮ್ಮದ ಎಂದು ನಾಮಕರಣ ಮಾಡಿದರು. ಅವರೇ ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿವಸಲ್ಲಮ್…
ತಮಿಳುನಾಡಿನ ಏಜೆಂಟರಂತೆ ಸಿಎಂ-ಡಿಸಿಎಂ ವರ್ತನೆ :ಬಿಎಸ್ ವೈ ಆರೋಪ ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು ಮತ್ತು ಡಿಎಂಕೆ ಏಜೆಂಟ್ ಎಂದು ಕರೆದರು.ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.ಈ ವೇಳೆ ಮಾತನಾಡಿದ ಅವರು, ತಮಿಳುನಾಡು ಏಜೆಂಟರಂತೆ ವರ್ತಿಸಬಾರದು ಎಂಬುದು ನಮ್ಮ ಸಿಎಂ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರಿಗೆ ತಿಳಿದಿರಬೇಕು. ವಾಸ್ತವ ಸಂಗತಿಗಳನ್ನು ಅರಿತುಕೊಳ್ಳಬೇಕು. ನಮ್ಮ ಬಹುತೇಕ ಎಲ್ಲಾ ಜಲಾಶಯಗಳಲ್ಲಿ ನೀರಿಲ್ಲ ಮತ್ತು ಕುಡಿಯುವ ಉದ್ದೇಶಕ್ಕೂ ಇರುವ ನೀರು ನಮಗೆ ಸಾಕಾಗುತ್ತಿಲ್ಲ. ಪ್ರಧಾನಿ ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದ್ದು, ಅವರು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದರು.ಸಿಎಂ ಸಿದ್ದರಾಮಯ್ಯ ಮತ್ತು ಜನಸಂಪನ್ಮೂಲ ಸಚಿವ…
ವಿಜಯಪುರ: ದೈಹಿಕವಾಗಿ, ಮಾನಸಿಕವಾಗಿ ಸದೃಡಗೊಳ್ಳಲು ಕ್ರೀಡೆ ಅವಶ್ಯಕವಾಗಿದೆ. ಅದರಂತೆ ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ ಎಂದು ವಾಲಿಬಾಲ್ ತಂಡದ ಮುಖ್ಯಸ್ಥ ಗುರುಶಾಂತ್ ಶ್ರೀಶೈಲ ಗಡ್ಡದ ಹೇಳಿದರು.ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಗಂಗನಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಬಸವೇಶ್ವರ ಜಾತ್ರಾ ನಿಮಿತ್ತವಾಗಿ ಹಮ್ಮಿಕೊಂಡಿರುವ ವಾಲಿಬಾಲ್ ಪಂದ್ಯಾವಳಿಯ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಕರು ಕ್ರೀಡೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಸಮಾನವಾಗಿ ಸ್ವೀಕರಿಸುವ ಮನೋಭಾವ ಕ್ರೀಡಾ ಪಟುಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಸತತ ನಾಲ್ಕು ದಿನಗಳ ಕಾಲ ನಡೆದಿರುವ ಪಂದ್ಯಾವಳಿಯಲ್ಲಿ ಗುರು ಅಣ್ಣಾ ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ಸ್ ಪಟ್ಟ ಗಿಟ್ಟಸಿಕೊಂಡಿತು. ಸತತ ಪರಿಶ್ರಮದೊಂದಿಗೆ ಗುರು ಅಣ್ಣಾ ತಂಡ ಜೊತೆಗೆ ಫೈನಲ್ ಪಂದ್ಯದಲ್ಲಿ ಎದುರಾಳಿ ತಂಡ ಇಸ್ರೋ ತಂಡವನ್ನು ರೋಚಕವಾಗಿ ಸೋಲಿಸಿ ಬಿಸಿ ಮುಟ್ಟಿಸಿದರು. ಗುರು ಅಣ್ಣಾ ತಂಡದ ಆಟಗಾರರಾಗಿರುವ ತಂಡದ ನಾಯಕ ಶಿವಾನಂದ ಅಲ್ದಿ, ಸಿದ್ದು ಕರ್ಜಗಿ ಉಪ ನಾಯಕ. ಸಂಜೀವ ನಾಯ್ಕೋಡಿ.…
ಮುದ್ದೇಬಿಹಾಳ: ಪಟ್ಟಣದ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಯರ ಹಿತರಕ್ಷಣೆಗೆ ಮುಂದಾಗಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ನ ತಾಲೂಕು ಘಟಕದ ವತಿಯಿಂದ ಪಿಎಸ್ ಮನ್ನಾಬಾಯಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.ಇಲ್ಲಿ ಉಢಾಫೆ ಹುಡುಗರ ಹಾವಳಿ ಹೆಚ್ಚಾಗಿದ್ದು, ಅವರು ಪ್ರತಿದಿನ ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅವರ ಹಿತರಕ್ಷಣೆಗೆ ಧಕ್ಕೆ ಉಂಟಾಗುತ್ತಿದ್ದು ಇದನ್ನು ತಡೆಗಟ್ಟುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.ಈ ವೇಳೆ ಅಧ್ಯಕ್ಷ ಮುತ್ತು ಚಲವಾದಿ, ರಾಜಅಹ್ಮದ ನಾಯ್ಕೋಡಿ, ಕಯುಮ ಚೌದರಿ, ಪರಶುರಾಮ ಚಲವಾದಿ, ಮಹೆಬೂಬ ಬಾಗವಾನ(ಆರ್.ಕೆ), ಸಮೀಪ ದ್ರಾಕ್ಷಿ, ಮಲ್ಲಪ್ಪ ಹುಡೇದ, ಅಬ್ದುಲ ಸಲಾಂ ಮುಲ್ಲಾ ಸೇರಿದಂತೆ ಮತ್ತೀತರರು ಇದ್ದರು.
ಮುದ್ದೇಬಿಹಾಳ: ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ (ಗ್ರಾ.ಉ.) ಖೂಬಾಸಿಂಗ ಜಾಧವ್ ಅವರು ಹಿರೇಮುರಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರೇಮುರಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಬೇಟಿ ನೀಡಿ ಮೂಲ ಸೌಕರ್ಯ ಹಾಗೂ ಶಾಲೆಯ ಸ್ಥಿತಿಗತಿ ಕುರಿತು ಪರಿಶೀಲಿಸಿದರು.ಮಕ್ಕಳ ದಾಖಲಾತಿ, ಶಾಲಾ ಸ್ವಚ್ಛತೆ ಹಾಗೂ ಮೂಲ ಸೌಕರ್ಯಗಳ ಬಗ್ಗೆ ಮುಖ್ಯ ಶಿಕ್ಷಕ ಚಂದ್ರಶೇಖರ ಚಟ್ಟಿ ಅವರ ಜೊತೆ ಚರ್ಚಿಸಿದರು. ಶಿಥಿಲ ವ್ಯವಸ್ಥೆಯಲ್ಲಿದ್ದ ಬಿಸಿಯೂಟ ಅಡುಗೆಕೋಣೆ ಪರಿಶೀಲಿಸಿ ನರೇಗಾ ಯೋಜನೆಯಡಿ ಬಿಸಿಯೂಟ ಅಡುಗೆಕೋಣೆ, ಪೌಷ್ಠಿಕ ತೋಟ ಹಾಗೂ ಹೆಣ್ಣು ಮಕ್ಕಳಿಗೆ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡುವ ಕುರಿತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿ ಮುಂದಿನ ಕ್ರಿಯಾ ಯೋಜನೆಯಲ್ಲಿ ಕಾಮಗಾರಿಗಳನ್ನು ಅಳವಡಿಸುವಂತೆ ಸೂಚಿಸಿದರು. ಈಗಾಗಲೇ ನರೇಗಾ ಯೋಜನೆಯಡಿ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವುದಾಗಿ ಪಿಡಿಒ ಅವರು ತಿಳಿಸಿದರು. ಶಾಲಾ ಮಕ್ಕಳ ದಾಖಲಾತಿ, ಅವರಿಗೆ ವಿತರಿಸುವ ಆಹಾರ ಸಾಮಗ್ರಿ ಹಾಗೂ ಸ್ವಚ್ಛತೆ ಬಗ್ಗೆ ಪರಿಶೀಲಿಸಿದರು. ವೇಳಾಪಟ್ಟಿಗನುಣವಾಗಿ ಸರಿಯಾದ ಸಮಯಕ್ಕೆ ರುಚಿ-ಶುಚಿಯಾದ ಅಡುಗೆ ಮಾಡಿ…
ತಿಕೋಟಾ: ಮಕ್ಕಳು ಮಾನವ ಲೋಕದ ಸುಂದರ ಕುಸುಮಗಳು ಅಂತಹ ಕುಸುಮಗಳಲ್ಲಿ ಅಡಗಿರುವ ಸೂಪ್ತ ಪ್ರತಿಭೆಗಳನ್ನು ಹೊರಗೆಳೆಯುವದೇ ಈ ಪ್ರತಿಭಾ ಕಾರಂಜಿಯಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಸಾಂಸ್ಕೃತಿಕ ಕಲೆಗಳ ಅನಾವರಣ ಆಗುವ ಈ ಕಾರ್ಯಕ್ರಮ ಅತ್ಯಂತ ಸುಮಧುರವಾದುದು ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ದೊಂಡಿಬಾ ಕಟಕದೊಂಡ ಹೇಳಿದರು.ವಿಜಯಪುರ ಗ್ರಾಮೀಣ ವಲಯದ ಆಹೇರಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಆಹೇರಿ (ಜಂ)ಯ ಗುರುದೇವ ಪ್ರೌಢ ಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ ಸಂಯೋಜಕ ರವೀಂದ್ರ ಚಿಕ್ಕಮಠ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಯನ್ನು ಹೊರಗೆ ಹಾಕುವ ಈ ಪ್ರತಿಭಾ ಕಾರಂಜಿ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದೆ ಎಂದರು.ಕಾರ್ಯಕ್ರಮದಲ್ಲಿ ದಿವ್ಯಸಾನಿದ್ಯವನ್ನು ಆಹೇರಿಯ ಪರಮಪೂಜ್ಯ ಚಲ್ಲಾಲಿಂಗ ಮಹಾಸ್ವಾಮಿಗಳು ಆಹೇರಿ ಅವರು ವಹಿಸಿದ್ದರು.ಅಧ್ಯಕ್ಷತೆಯನ್ನು ಎಲ್. ಪಿ. ರಾಠೋಡ (ಗುರುದೇವ ವಿದ್ಯಾವರ್ಧಕ ಸಂಘ) ವಹಿಸಿದರು. ಗ್ರಾಮ ಪಂಚಾಯತಿ ಅಧ್ಯಕ್ಷ ಬಾಬು ನಾಯಕ್, ರಮೇಶ್ ರಾಠೋಡ, ಅಶ್ವಿನಿ ರಾಠೋಡ. ಪಿಡಿಓ…
ವಿಶ್ವ ಹಿಂದೂ ಪರಿಷತ್ ಆಯೋಜನೆ | ಸೆ.೩೦ ರಿಂದ ಅ.೧೬ ವರೆಗೆ ಶೌರ್ಯ ಜಾಗರಣ ರಥಯಾತ್ರೆ ಮುದ್ದೇಬಿಹಾಳ: ವಿಶ್ವ ಹಿಂದೂ ಪರಿಷದ್ ೬೦ ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆ ರಾಷ್ಟçದಾದ್ಯಂತ ಸೆ.೩೦ ರಿಂದ ಅ.೧೬ ರವರೆಗೆ ಶೌರ್ಯ ಜಾಗರಣ ರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬ ಹಿಂದುವೂ ಕೈಜೋಡಿಸಿ ತನು ಮನದಿಂದ ಭಾಗವಹಿಸುವಂತೆ ಪರಿಷದ್ ನ ಬೆಳಗಾವಿ ಮಠ ಮಂದಿರಗಳ ಪ್ರಮುಖ ಶ್ರೀಮಂತ ದುದ್ದಗಿ ವಿನಂತಿಸಿದರು.ಪಟ್ಟಣದ ಬಜಾರ ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.ಸಾವಿರಾರು ವರ್ಷಗಳಿಂದ ರಾಷ್ಟçದ ಮೇಲೆ ಪರಕೀಯರ ಆಕ್ರಮಣಗಳು ನಡೆಯುತ್ತಲೇ ಇದ್ದರೂ ಅದನ್ನು ದಿಟ್ಟವಾಗಿ, ಸಮರ್ಪಕವಾಗಿ ಎದುರಿಸುತ್ತ ನಮ್ಮ ಸನಾತನ ಧರ್ಮವನ್ನು ಈ ಪವಿತ್ರ ಭರತ ಭೂಮಿಯನ್ನು ಸಂರಕ್ಷಿಸುವಲ್ಲಿ ಸಾವಿರಾರು ಪರಾಕ್ರಮಿಗಳು ತಮ್ಮ ಜೀವನವನ್ನೇ ಸಮರ್ಪಿಸಿ, ಅವಶ್ಯ ಬಂದಾಗ ಬಲಿದಾನವೂ ಆಗಿ ನಮಗೆ ಶ್ರೇಷ್ಠ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ. ಅವರ ತ್ಯಾಗ ಬಲಿದಾನಗಳ ಪರಿಣಾಮವಾಗಿ ನಮ್ಮ ಸನಾತನ ಧರ್ಮವು ಸುರಕ್ಷಿತವಾಗಿ ನಮ್ಮ ಕಾಲಖಂಡದವರೆಗೆ ತಲುಪಿದ್ದು, ಇದನ್ನು…
ಕಾವೇರಿ ನೀರಿನ ಕಿಚ್ಚು | ಕೃಷ್ಣಾ ತೀರದಲ್ಲೂ ಕಾವು | ಬೆಂಬಲಕ್ಕೆ ನಿಂತ ಅನ್ನದಾತರು ಆಲಮಟ್ಟಿ: ಮಳೆಯ ಕೊರತೆಯ ಮಧ್ಯೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ, ತಾಲ್ಲೂಕು ರೈತ ಹಿತರಕ್ಷಣಾ ಸಂಘದ ಕಾರ್ಯಕರ್ತರು ಆಲಮಟ್ಟಿಯಲ್ಲಿ ಬುಧವಾರ, ಪ್ರತಿಭಟನೆ ನಡೆಸಿ ಕೆಬಿಜೆಎನ್ ಎಲ್ ಮುಖ್ಯ ಎಂಜಿನಿಯರ್ ಮೂಲಕ ಜಲಸಂಪನ್ಮೂಲ ಸಚಿವರಿಗೆ ಮನವಿ ಸಲ್ಲಿಸಿದರು.ಸಂಘದ ಅಧ್ಯಕ್ಷ ತಿರುಪತಿ ಬಂಡಿವಡ್ಡರ ಮಾತನಾಡಿ, ಕಾವೇರಿ ತೀರದ ರೈತರ ಬವಣೆಗೆ ಕೃಷ್ಣಾ ತೀರದ ರೈತರೆಲ್ಲಾ ಬೆಂಬಲಕ್ಕೆ ನಿಲ್ಲುತ್ತೇವೆ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.ನೀರು ಹರಿಸುವುದರಿಂದ ಜನ, ಜಾನುವಾರುಗಳ ತೊಂದರೆಯಾಗುವುದಲ್ಲದೇ, ಈಗಾಗಲೇ ಕಾವೇರಿ ನೀರನ್ನು ನಂಬಿ ಬಿತ್ತಿದ ಬೆಳೆ ಕೂಡಾ ಹಾಳಾಗುತ್ತದೆ, ರಾಜ್ಯದ ರೈತರ ಹಿತವನ್ನು ಕಾಪಾಡಬೇಕು ಎಂದರು.ಈ ಸಂದರ್ಭದಲ್ಲಿ ಗುರುರಾಜ ವಡ್ಡರ, ಶಿವಪ್ಪ ಬೇವಿನಮಟ್ಟಿ, ಶ್ರೀಶೈಲ ಗುಳಬಾಳಮಠ, ರಾಮಚಂದ್ರಪ್ಪ ವಡ್ಡರ, ಲಕ್ಷ್ಮಣ ಖರಗದಾರಿ, ಪ್ರಶಾಂತ ಮನಗೂಳಿ, ಹರೀಶ ಮ್ಯಾಗೇರಿ, ಕೆ.ಎಂ. ಬಿರಾದಾರ, ವಿಠ್ಠಲ ಬಂಡಿವಡ್ಡರ…
ಬಸವನಬಾಗೇವಾಡಿ: ಪಟ್ಟಣದ ಸಿಬಿಎಸ್ಇ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ಬಸವೇಶ್ವರ ದೇವಾಲಯ ಸಿಬಿಎಸ್ಇ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ನೂತನವಾಗಿ ರಚನೆಗೊಂಡ ಆಡಳಿತ ಮಂಡಳಿಯ ಸನ್ಮಾನ ಸಮಾರಂಭ ಬುಧವಾರ ಸಂಜೆ ಜರುಗಿತು.ಉಭಯ ಶಾಲೆಯ ಸನ್ಮಾನ ಸ್ವೀಕರಿಸಿ ಶಾಲಾ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಅನಿಲ ಅಗರವಾಲ ಮಾತನಾಡಿ, ಅಖಂಡ ತಾಲೂಕಿನಲ್ಲಿಯೇ ಈ ಶಾಲೆಯು ಉತ್ತಮ ಹೆಸರು ಪಡೆದುಕೊಂಡಿದೆ. ಶಿಕ್ಷಕರು ತಮ್ಮ ಪಠ್ಯದೊಂದಿಗೆ ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳನ್ನು ತೊಡಗಿಸಬೇಕು. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತಯಾರಿ ಆಗುವ ನಿಟ್ಟಿನಲ್ಲಿ ನಿರಂತರವಾಗಿ ಶಿಕ್ಷಕ ಬಾಂಧವರು ಶ್ರಮಿಸಬೇಕೆಂದರು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿ, ಇಂದು ಶಾಲೆಯು ಸಾಕಷ್ಟು ಅಭಿವೃದ್ಧಿಯಾಗಿದೆ. ಮುಂಬರುವ ದಿನಗಳಲ್ಲಿ ಕಾಲೇಜು, ಪದವಿ ಕಾಲೇಜು ಆಗುವ ಜೊತೆಗೆ ವಸತಿ ಶಾಲೆಯಾಗುವಂತಾಗಿ ಈ ಭಾಗದ ಗ್ರಾಮೀಣ ಭಾಗದ ಮಕ್ಕಳಿಗೆ ಸದುಪಯೋಗವಾಗುವಂತಾಗಲಿ ಎಂದ ಅವರು, ಶಾಲಾಭಿವೃದ್ಧಿಗೆ ಸದಾ ಸಹಕಾರ ಕೊಡಲು ಬದ್ಧ ಎಂದರು.ನೂತನ ಆಡಳಿತ ಮಂಡಳಿಯ ಉಪಾಧ್ಯಕ್ಷ ಎಸ್.ಎಸ್.ಝಳಕಿ ಮಾತನಾಡಿ, ಈ…
