Author: editor.udayarashmi@gmail.com

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅಕ್ಟೋಬರ್ ೦೧ ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೦-೩೦ಕ್ಕೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ…

Read More

ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸ್ಪಷ್ಠನೆ ವಿಜಯಪುರ: ಜಿಲ್ಲೆಯ ಐತಿಹಾಸಿಕ ಸ್ಮಾರಕಗಳಿಗೆ ರಾಷ್ಟ್ರ, ಅಂತರ ರಾಷ್ಟೀಯ ಮಟ್ಟದಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೆ ಒತ್ತು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ರೋಟರಿ ಕ್ಲಬ್-ಮಾನ್ಯುಮೆಂಟಲ್ ಹೆರಿಟೇಜ್ ಸಿಟಿ, ಆರ್.ಕೆ.ಎಂ ಆಯರ್ವೇದ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ಮತ್ತು ಪಿಜಿ ರಿಸರ್ಚ ಸೆಂಟರ್ ಇವರ ಸಹಯೋಗದಲ್ಲಿ ಬುಧವಾರ ನಗರದ ಬೇಗಂ ತಲಾಬ್ ಕೆರೆ ಆವರಣದಲ್ಲಿ ಪ್ರವಾಸೋದ್ಯಮ ಮತ್ತು ಹಸಿರು ಹೂಡಿಕೆಗಳು ಘೊಷವಾಕ್ಯದೊಂದಿಗೆ ಹಮ್ಮಿಕೊಂಡ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಜಯಪುರ ನಗರದಲ್ಲಿರುವ ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಸ್ಮಾರಕಗಳ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಐತಿಹಾಸಿಕ ತಾಣಗಳ ರಕ್ಷಣೆ ಕುರಿತು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪ್ರವಾಸಿ ತಾಣಗಳ ಮಾಹಿತಿ…

Read More

ಇಂಡಿ: ದೇವಾಲಯಗಳು ಮನುಷ್ಯನ ಶ್ರದ್ಧಾ ಹಾಗೂ ನೆಮ್ಮದಿಯ ಕೇಂದ್ರಗಳು ಎಂದು ಸದ್ಗುರು ರಾಯಲಿಂಗೇಶ್ವರ ಮಠ ಕಕಮರಿಯ ಅಭಿನವ ಗುರು ಜಂಗಮ ಮಹಾರಾಜರು ಹೇಳಿದರು.ಪಟ್ಟಣದ ಸಾತಪುರ ವಸ್ತಿಯಲ್ಲಿ ನಿಯೋಜಿತ ಶ್ರೀ ಸದ್ಗುರು ರಾಯಲಿಂಗೇಶ್ವರ ಸಂಸ್ಥಾನಮಠ ಕಕಮರಿಯ ಶಾಖಾ ಮಠ ಸಾತಪುರ ವಸ್ತಿ ಮಠಕ್ಕೆ ಭೂಮಿ ಪೂಜೆ ನೇರವೇರಿಸಿ ಅವರು ಮಾತನಾಡಿದರು.ಮನುಷ್ಯನಿಗೆ ಹಣ ಐಶ್ವರ್ಯ ನೀಡದಿರುವ ಮನಶಾಂತಿಯನ್ನು ದೇವಾಲಯಗಳು ನೀಡುತ್ತಿವೆ ಎಂಬುದರಲ್ಲಿ ಎರಡು ಮಾತಿಲ್ಲ. ದೇವಾಲಯಗಳಲ್ಲಿ ಅರ್ಧ ತಾಸು ಕುಳಿತು ಭಗವಂತನನ್ನು ಧ್ಯಾನ ಮಾಡಿದರೆ ಮನಸ್ಸಿಗೆ ಸಮಾಧಾನ ಸಿಗುತ್ತದೆ ಎಂದರು.ಶಾಖಾ ಮಠದ ಪ್ರಕಾಶ ಗುಡ್ಲ ಮಾತನಾಡಿ, ಯಾವುದೇ ರೀತಿಯ ಫಲಾಪೇಕ್ಷೆ ಇಲ್ಲದೆ ದೇವಸ್ಥಾನಕ್ಕೆ ಸಾತಪುರ ವಸ್ತಿಯವರು ನಿವೇಶನವನ್ನು ದಾನರೂಪದಲ್ಲಿ ನೀಡಿರುತ್ತಾರೆ. ಅದಲ್ಲದೆ ದೇವಸ್ಥಾನದ ಸಮಿತಿಯವರೇ ಎಲ್ಲ ಖರ್ಚನ್ನು ಮಾಡಿದ್ದಾರೆ. ಮತ್ತು ಮುಂದಿನ ಖರ್ಚನ್ನು ಸಮಿತಿಯವರೇ ಮಾಡುತ್ತಿದ್ದಾರೆ. ದೇವಾಲಯ ನಿರ್ಮಿಸುವ ಇವರ ಸೇವಾಕಾರ್ಯ ಶ್ಲಾಘನೀಯ ಎಂದರು.ಇಂಡಿ ಪುರಸಭೆ ಮಾಜಿ ಅಧ್ಯಕ್ಷ ಮಾರತಂಡ ಗುಡ್ಲ , ಬಸಗೊಂಡ ಗುರುಗಳು, ಮಹಾದೇವ ರೂಗಿ, ಮಾಳಪ್ಪ ಜಕ್ಕಪ್ಪ ನಿಂಬಾಳ, ಸುರೇಶ…

Read More

ನಾಡಿನ ಹೆಮ್ಮೆಯ ಕಲಾವಿದ ದಿ.ಸೋಮಶೇಖರ ಸಾಲಿಯವರ ಜನ್ಮಶತಮಾನೋತ್ಸವ ನಿಮಿತ್ತ ವಿಶೇಷ ಲೇಖನ ಕನ್ನಡ ನಾಡಿನ ಹೆಸರಾಂತ ಮೂವರು ಕಲಾವಿದರಾದ. ಶ್ರೀ ಸೋಮಶೇಖರ ಸಾಲಿ, ಶ್ರೀ ಪಿ.ಆರ್ ತಿಪ್ಪೇಸ್ವಾಮಿ ಮತ್ತು ಶ್ರೀ ಬಿ. ಕೆ. ಹುಬಳಿಯವರ ಜನ್ಮಶತಮಾನೋತ್ಸವ ೨೦೨೩ರಲ್ಲಿರುವುದು ರಾಜ್ಯ ಕಲಾವಿದರಿಗೆ ಹೆಮ್ಮೆಯ ವಿಷಯ.ಕರ್ನಾಟಕ ಲಲಿತಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷರು, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಉಪಾಧ್ಯಕ್ಷರಾಗಿ, ಉತ್ತರ ಕರ್ನಾಟಕದ ಬಾಗಲಕೋಟೆಯ ಪ್ರತಿಷ್ಠಿತ ಬಸವೇಶ್ವರ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾಗಿ ಜೊತೆಯಲ್ಲಿ ಶ್ರೇಷ್ಠ ಕಲಾವಿದರಾಗಿ ಗುರುತಿಸಿಕೊಂಡಿದ್ದ ಶ್ರೀ ಸೋಮಶೇಖರ ಸಾಲಿಯವರ ಜನ್ಮ ಶತಮಾನೋತ್ಸವದ ತನ್ಮಿತ್ಯ ಅವರ ಕಲಾಕೃತಿಗಳ ಪ್ರರ್ದಶನದೊಂದಿಗೆ ಕಲಾಪಯಣವನ್ನು ರಾಜ್ಯದ ವಿವಿಧ ಭಾಗಗಳಾದ ವಿಜಯಪುರ, ಕಲಬುರಗಿ, ಧಾರವಾಡ, ಬಾಗಲಕೋಟೆ, ದಾವಣಗೇರೆ ಮತ್ತು ಅಂತಿಮವಾಗಿ ಶತಮಾನೋತ್ಸವದ ಸಮಾರೋಪ ಸಮಾರಂಭ ಮತ್ತು ಕಲಾ ಪ್ರರ್ದಶನವನ್ನು ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಲಾಗಿದೆ.ಪ್ರಪಂಚದಲ್ಲಿರುವ ಪ್ರತಿಯೊಬ್ಬ ಕಲಾವಿದನ ಕಲಾಕೃತಿಗಳು ಅವನ ಸಿಗ್ನೇಚರ್ (ಹೆಬ್ಬೆರಳ ಸಹಿ) ಇದ್ದಂತೆ. ಆತನ ಕಲಾಕೃತಿಗಳು ವೈಯಕ್ತಿಕ ಅನಿಸಿಕೆಗಳ ಅಭಿವ್ಯಕ್ತಿ. ವಿಮರ್ಶಕರಾದ ನಾವು ಅವುಗಳನ್ನು ನಮ್ಮ ಚಿತ್ತದ…

Read More

ಜಯಶ್ರೀ.ಜೆ. ಅಬ್ಬಿಗೇರಿ, ಉಪನ್ಯಾಸಕರು, ಬೆಳಗಾವಿ ಚಿಕ್ಕದನ್ನು ನಿರ್ವಹಿಸುವುದರಲ್ಲಿದೆ ದೊಡ್ಡ ಯಶಸ್ಸು! ಇದರ ಒಳಾರ್ಥವನ್ನು ಇನ್ನಷ್ಟು ತಿಳಿಯೋದಕ್ಕೆ ಮುಂದಕ್ಕೆ ಓದಿ. ಸಣ್ಣವುಗಳ ಒಟ್ಟು ರಾಶಿ ದೊಡ್ಡದುಬಹಳಷ್ಟು ಬಾರಿ ನಮಗೆಲ್ಲ ಅನಿಸೋದು ದೊಡ್ಡ ದೊಡ್ಡ ಕಾರ್ಯಗಳಲ್ಲಿ ಯಶಸ್ವಿಯಾಗಿ ನಿರ್ವಹಿಸುವುದರಲ್ಲಿ ದೊಡ್ಡ ಯಶಸ್ಸು ಅಡಗಿದೆ ಅಂತ. ಸ್ವಲ್ಪ ನಿಧಾನವಾಗಿ ಆಲೋಚಿಸಿದರೆ ದೊಡ್ಡದು ಯಾವುದರಲ್ಲಿ ಅಡಗಿದೆ ಎಂಬುದು ತಿಳಿಯುತ್ತದೆ. ದೊಡ್ಡದು ಮೂಲತಃ ಏನನ್ನು ಒಳಗೊಂಡಿದೆ ಎಂಬುದು ಇಲ್ಲಿ ಮೂಲ ಪ್ರಶ್ನೆ. ತೀರ ಸರಳ ಉತ್ತರವೆಂದರೆ ಚಿಕ್ಕ ಪುಟ್ಟಗಳ ಮೊತ್ತವೇ ದೊಡ್ಡದು.ಇನ್ನೂ ಸರಳವಾಗಿ ಹೇಳಬೇಕೆಂದರೆ ‘ಹನಿ ಹನಿ ಕೂಡಿದರೆ ಹಳ್ಳ ತೆನೆ ತೆನೆ ಕೂಡಿದರೆ ಬಳ್ಳ.’ ಹಾಗೆಯೇ ಸಣ್ಣ ಪುಟ್ಟವುಗಳ ಒಟ್ಟು ರಾಶಿಯೇ ದೊಡ್ಡದು. ಬದುಕಿನ ಚಿಕ್ಕ ಚಿಕ್ಕ ಅಂಶಗಳೇ ನಮ್ಮೆದುರಿಗೆ ನಿಂತು ಸವಾಲು ಹಾಕಿ ಸೆಡ್ಡು ಹೊಡೆಯುತ್ತವೆ. ಹಲವೊಂದು ಸಲ ಚಿಕ್ಕ ವಿಷಯಗಳು ನಮ್ಮ ಮೇಲೆ ದೊಡ್ಡ ಪರಿಣಾಮ ಬೀರುವುದು ನಮ್ಮ ಗಮನಕ್ಕೆ ಬೀಳದೇ ಇರುವುದಿಲ್ಲ. ಚಿಕ್ಕದಾಗಿ ಹೇಳಬೇಕೆಂದರೆ ‘ಸಣ್ಣ ಮುಗ್ಗರಿಸುವಿಕೆಯು ದೊಡ್ಡ ಬೀಳುವಿಕೆಯನ್ನು ತಡೆಯಬಲ್ಲುದು.’ಅಲಕ್ಷ್ಯ ಸಲ್ಲಬದುಕಿನ…

Read More

ರಾಜ್ಯದಲ್ಲೀಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ನಾನು ವಿರೋಧ ಪಕ್ಷದಲ್ಲಿದ್ದುದರಿಂದ ಕ್ಷೇತ್ರದ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಕೇಳುವವರಿಗೆ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿ ಮಾಡಿ ತೋರಿಸುವೆ.

Read More

ವಿಜಯಪುರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕಾಲು ಬಾಯಿ ಜ್ವರ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, 4 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮಕ್ಕೆ ಸೆ.26 ರಂದು ವಿಜಯಪುರ ತಾಲ್ಲೂಕಿನ ಅಹೇರಿ ಗ್ರಾಮದಲ್ಲಿ ನಾಗಠಾಣ ಶಾಸಕ ವಿಠಲ ಕಟಕದೊಂಡ ಗೋಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ತಮ್ಮ ಜಾನುವಾರಗಳ ಸುರಕ್ಷತೆಗಾಗಿ ರೈತರು ಈ ಅಭಿಯಾನದ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಉಪನಿರ್ದೇಶಕರಾದ ಡಾ. ಆಶೋಕ ಘೋಣಸಗಿ, ಮುಖ್ಯ ಪಶುವೈದ್ಯಾಧಿಕಾರಿ ಡಾ. ಬಿ.ಎಸ್.ಕನಮಡಿ, ಡಾ. ಸುಜಾತಾ ಎಸ್.ಎಂ ಹಾಗೂ ಡಾ. ಬಾಳಾಸಾಹೇಬ ಭಂಡಿ ಉಪಸ್ಥಿತರಿದ್ದರು.ಈ ಲಸಿಕಾ ಕಾರ್ಯಕ್ರಮವು ಸೆ. ರಿಂದ ಅ.25ರವರೆಗೆ ನಡೆಯುತ್ತದೆ.

Read More

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿ ಸಿಡಬ್ಲೂಆರ್ಸಿ ಆದೇಶ ಕನ್ನಡಿಗರ ಪಾಲಿಗೆ ಮರಣಶಾಸನ | ಸಂಕಷ್ಟ ಹಂಚಿಕೆ ಸೂತ್ರ ರೂಪಿಸಿದ ಹೊರತು ನೀರು ಬಿಡಬಾರದು ಬೆಂಗಳೂರು: ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲೂಆರ್ಸಿ) ತಮಿಳುನಾಡಿಗೆ ಇನ್ನೂ 18 ದಿನಗಳ ಕಾಲ ನಿತ್ಯವೂ 3,000 ಕ್ಯೂಸೆಕ್ ಹರಿಸಲು ಕರ್ನಾಟಕಕ್ಕೆ ಇಂದು ಆದೇಶ ನೀಡಿದೆ. ಇದು ನಿಜಕ್ಕೂ ಆಘಾತಕಾರಿ, ಕಾವೇರಿ ಮತ್ತು ಕನ್ನಡಿಗರ ಪಾಲಿಗೆ ಮರಣಶಾಸನ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ ಹಿನ್ನಡೆ ಆಗಿದೆ. ಹಿನ್ನಡೆ ಎನ್ನುವುದು ನಿರಂತರವಾಗಿದ್ದು, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (ಸಿಡಬ್ಲೂಎಮ್ಎ) ಮತ್ತು ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲೂಆರ್ಸಿ) ಸಂಕಷ್ಟ ಹಂಚಿಕೆ ಸೂತ್ರ ರೂಪಿಸಿದ ಹೊರತು ತಮಿಳುನಾಡಿಗೆ ನೀರು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.ರಾಜ್ಯ ಸರಕಾರದ ವೈಫಲ್ಯಗಳನ್ನು ತಮಿಳುನಾಡು…

Read More

ಮದ್ಯದಂಗಡಿಗಳ ಹೆಚ್ಚಳಸಾಮಾಜಿಕ ನ್ಯಾಯಕ್ಕೆ ಪೆಟ್ಟು ಕರ್ನಾಟಕ ಸರ್ಕಾರದ ಅಬಕಾರಿ ಇಲಾಖೆ ಆದಾಯ ಹೆಚ್ಚಿಸಿಕೊಳ್ಳುವ ವಿವಿಧ ಯೋಜನೆಗಳನ್ನು ರೂಪಿಸಿ ಅನೇಕ ಪರಿಣಾಮಕಾರಿ ವಿಧಾನಗಳನ್ನು ಅನುಸರಿಸಿ ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮಖವಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಾಮುಖ್ಯತೆ ಪಡೆದಿದೆ..ಉಚಿತ ಯೋಜನೆಗಳ ಜಾರಿಯ ಪರಿಣಾಮ ಆರ್ಥಿಕ ಪರಿಸ್ಥಿತಿಯ ಸುಧಾರಣೆಗೆ ಇದು ಅವಶ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಲಾಗುತ್ತಿದೆ. ಇದು‌ ಖಂಡಿತ ಸಹನೀಯವಲ್ಲ ಮತ್ತು ಆಕ್ಷೇಪಾರ್ಹ ನಡೆ..ರಾಜ್ಯದಲ್ಲಿ ಇರುವ ಸಾರ್ವಜನಿಕ ಗ್ರಂಥಾಲಯಗಳ ಸಂಖ್ಯೆ ಸುಮಾರು 1000.ರಾಜ್ಯದಲ್ಲಿ ಇರುವ ಮದ್ಯಪಾನ ಅಂಗಡಿಗಳ ಅಧಿಕೃತ ಸಂಖ್ಯೆ ಸುಮಾರು 12500. ಅನಧಿಕೃತವಾಗಿ ಇನ್ನೆಷ್ಟೋ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳ ಸಂಪೂರ್ಣ ವಿರೋಧಿ ನಡೆ..ಮದ್ಯಪಾನದ ಆದಾಯದ ಮೇಲೆಯೇ ಸರ್ಕಾರ ನಡೆಯುತ್ತದೆ ಎಂದಾದರೆ ಅದು ನಡೆಯುವುದು ಬೇಡ ಮಲಗಿಬಿಡಲಿ. ಬೇರೆ ಪರ್ಯಾಯ ಮಾರ್ಗ ಖಂಡಿತ ಇದೆ..ಹತ್ತು ವರ್ಷಗಳಷ್ಟು ದೀರ್ಘ ಅವಧಿಯ ಒಂದು ಕ್ರಿಯಾ ಯೋಜನೆ ಸಿದ್ದಪಡಿಸಿ ನಿಧಾನವಾಗಿ ಪ್ರತಿವರ್ಷ ಶೇಕಡಾ 10% ಮದ್ಯಪಾನದ ನಿಯಂತ್ರಣ ಮಾಡುತ್ತಾ ಬಂದರೆ ಹತ್ತು ವರ್ಷದಲ್ಲಿ ಅದನ್ನು ಸಂಪೂರ್ಣ ನಿಷೇಧ…

Read More

ವಿಜಯಪುರ: ಯುವಕರು ವಿವಿಧ ಕಾರಣಗಳಿಂದ ಮಾದಕ ದ್ರವ್ಯದ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಮಾದಕ ದ್ರವ್ಯಗಳ ಪಿಡುಗು ಸಮಾಜದಲ್ಲಿ ಆಳವಾಗಿ ಬೇರೂರಿದೆ. ಇಂದರಿಂದಾಗಿ ಯುವಪೀಳಿಗೆಯು ವಿನಾಶದತ್ತ ಸಾಗುತ್ತಿದ್ದು, ಈ ಮಾದಕ ದ್ರವ್ಯದಿಂದ ಸಮಾಜ ಮುಕ್ತವಾಗಬೇಕಾಗಿದೆ ಎಂದು ನ್ಯಾಯವಾದಿ ಎಂ.ಬಿ.ನಾಯಕ ಹೇಳಿದರು.ಮಂಗಳವಾರದಂದು ಬಿಜಾಪುರ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ‘ಮಾದಕ ದ್ರವ್ಯ ನಿರ್ಮೂಲನೆ’ ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನ ವಹಿಸಿ ಅವರು ಮಾತನಾಡಿದರು.ಇತ್ತೀಚಿನ ದಿನದಲ್ಲಿ ಅನೇಕ ಯುವಕ ಮತ್ತು ಯುವತಿಯರು ಮಾದಕ ದ್ರವ್ಯದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಹದಿಹರೆಯದವರಲ್ಲಿ ಮಾದಕ ವ್ಯಸನದ ಚಟ ಹೆಚ್ಚುತ್ತಿದ್ದು, ಸಮಾಜದ ನಿರ್ಲಕ್ಷ್ಯ ದಿಂದಾಗಿ ಇಂದು ಯುವ ಜನತೆ ಹೆಚ್ಚೆಚ್ಚು ಈ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಜೆಎಸ್‌ಎಸ್ ಆಸ್ಪತ್ರೆಯ ವೈದ್ಯ ಡಾ. ಅಕ್ಷಯ ವಾಘಮೋರೆ ಮಾತನಾಡಿ ಸರಿಸುಮಾರು ಜನರು ಕೊಕೈನ್, ಕ್ಯಾನಬೀಸ್, ಹಾಲೂಸಿನೋಜೆನ್ಸ್ ಮತ್ತು ನಿದ್ರಾಜನಕದಂತಹ ಮಾದಕ ದ್ರವ್ಯಗಳ ಸೇವನೆಗೆ ಒಳಗಾಗಿದ್ದು, ಮಾದಕ ದ್ರವ್ಯಗಳ ದೀರ್ಘಾವಧಿ ಬಳಕೆ ಆರೋಗ್ಯ, ಮಾನಸಿಕ ಅಸ್ವಸ್ಥತೆ, ಸಾವಿಗೆ…

Read More