Author: editor.udayarashmi@gmail.com

ಆಲಮಟ್ಟಿ: ಅಯೋಧ್ಯೆಯಲ್ಲಿ ರಾಮಮಂದಿರದ ರಾಮದೇವರ ಪ್ರಾಣಪ್ರತಿಷ್ಠಾಪನೆ ನಿಮಿತ್ತ ಇದೇ ೨೨, ಸೋಮವಾರ ತಾಲ್ಲೂಕಿನ ಸುಕ್ಷೇತ್ರ ಯಲಗೂರದಲ್ಲಿ ಶ್ರೀ ಯಲಗೂರೇಶನ ಸನ್ನಿಧಾನಲ್ಲಿ ಇಡೀ ದಿನ ನಿರಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಅಂದು ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಯಲಗೂರೇಶನಿಗೆ ಅಭಿಷೇಕ, ಮನ್ಯುಸೂಕ್ತ ಪಾರಾಯಣ, ವಾಯಸ್ತುತಿ ಪುನಶ್ಚರಣ, ಲೋಕಕಲ್ಯಾಣಾರ್ಥ ಸುಂದರಕಾAಡ ಪಾರಾಯಣ ಪುಣ್ಯಾವಾಚನ, ರಾಮನಾಮ ಜಪ ನಡೆಯಲಿದೆ.ನಂತರ ಶ್ರೀ ರಾಮನಾಮ ತಾರಕ ಹೋಮ ಮತ್ತು ಮನ್ಯುಸೂಕ್ತ ಹೋಮ, ಮಹಾಪೂಜೆ, ರಾಮದೇವರ ಮೆರವಣಿಗೆ, ಪ್ರಸಾದ ವಿತರಣೆ ಮತ್ತು ಸಂಜೆ ದೀಪೋತ್ಸವ ರಾಮಸಂಕೀರ್ತನೆ, ಸಂಗೀತ ಕಾರ್ಯಕ್ರಮ ಹಾಗೂ ದೇವಸ್ಥಾನ ಪ್ರಾಂಗಣದಲ್ಲಿ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದೇವಸ್ಥಾನ ಕಮಿಟಿಯ ಅಧ್ಯಕ್ಷ ಅನಂತ ಓಂಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಅಖಂಡ ವಿಜಯಪುರ ಜಿಲ್ಲೆಯ ಜನರ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆ ತುಂಬಿಸಬೇಕು ಎಂದು ರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನಿಂಗರಾಜ ಆಲೂರ ಆಗ್ರಹಿಸಿದರು.ಶನಿವಾರ ಆಲಮಟ್ಟಿಯಲ್ಲಿರುವ ಶ್ರೀರಾಮಲಿಂಗೇಶ್ವರ ದೇವಸ್ಥಾನದಿಂದ ಪಾದಯಾತ್ರೆಯಲ್ಲಿ ಎಸ್‌ಬಿಐ ಬ್ಯಾಂಕ್ ಮಾರ್ಗವಾಗಿ ಕೃಷ್ಣಾ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರರ ಕಚೇರಿಗೆ ತೆರಳಿ ಮನವಿ ಅರ್ಪಿಸಿ ಮಾತನಾಡಿದರು.ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಲಕ್ಷಾಂತರ ಎಕರೆ ಜಮೀನು, ನೂರಾರು ಊರುಗಳು ಮುಳುಗಡೆಯಾಗಿ ಲಕ್ಷಾಂತರ ಕುಟುಂಬಗಳು ಸಂತ್ರಸ್ಥರಾಗಿರುವ ಜಿಲ್ಲೆಯ ಜನ-ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಪರದಾಡುವಂತೆ ಮಾಡಲು ಅಧಿಕಾರಿಗಳು ಕೃತಕ ಅಭಾವ ಸೃಷ್ಠಿಸುತ್ತಿದ್ದಾರೆ. ರಾಜ್ಯದಲ್ಲಿ ಮುಂಗಾರು-ಹಿಂಗಾರು ಮಳೆಗಳು ಸಮರ್ಪಕವಾಗಿ ಸುರಿಯದಿದ್ದರೂ ಕೃಷ್ಣೆಯ ಉಗಮಸ್ಥಾನ ಮಹಾಬಲೇಶ್ವರ ಮತ್ತು ಕೃಷ್ಣೆಯ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಮಳೆಯಾಗಿದ್ದರಿಂದ ಕೃಷ್ಣೆಗೆ ನೀರು ಹರಿದುಬಂದು ಜನತೆಯ ದಾಹ ನೀಗಿಸುವಂತಾಗಿದೆ ಎಂದರು.ಬರದ ಜಿಲ್ಲೆಯೆಂದೇ ಖ್ಯಾತಿ ಪಡೆದಿರುವ ವಿಜಯಪುರ ಜಿಲ್ಲೆಯಲ್ಲಿ ಬೃಹತ್ ಜಲಾಶಯ ನಿರ್ಮಿಸಿ ನೂರಾರು ಟಿಎಮ್‌ಸಿ ನೀರು ಸಂಗ್ರಹ ಮಾಡಿಕೊಂಡಿದ್ದರೂ…

Read More

ವಿಜಯಪುರ: ಅಖಿಲ ಭಾರತ ವಾಲ್ಮೀಕಿ ಸೇವಾ ಸಂಘದ ವತಿಯಿಂದ ಕೊಲ್ಹಾರ ಜಿಲ್ಲೆಯ ವೆಮಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮೇಡಿಹಾಳ್ ಗ್ರಾಮದ ವಾಲ್ಮೀಕಿ ಸಮಾಜದ ನೀಲಮ್ಮ ಎಂಬ ಮಹಿಳೆಯ ಮೇಲೆ ದೌರ್ಜನ್ಯ ಎಸಗಿ ಚಿತ್ರ ಹಿಂಸೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲು ಅಪರ ಜಿಲ್ಲಾಧಿಕಾರಿ ಮಹಾದೇವ ಮುರುಗಿ ಮುಖಾಂತರ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಕೋಲ್ಹಾರ್ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಡಿಹಾಳ ಗ್ರಾಮದ ವಾಲ್ಮೀಕಿ ಸಮಾಜದ ನೀಲಮ್ಮ ಎಂಬ ದಲಿತ ಮಹಿಳೆಯು ಮದುವೆ ಮತ್ತಿತರ ಕಾರ್ಯಕ್ರಮಗಳಲ್ಲಿ ಎಲೆ ಎತ್ತುವ ಕೆಲಸ ಮಾಡುತ್ತಾ ಬಿಡುವಿನ ವೇಳೆಯಲ್ಲಿ ಮನೆಗೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಅದೇ ಗ್ರಾಮದ ಸವರ್ಣೀಯ ಸಮುದಾಯದ ಪ್ರಕಾಶ ಮತ್ತು ಮಮತಾ ದಂಪತಿಗಳು ನೀಲಮ್ಮನನ್ನು ಮನೆಗೆಲಸಕ್ಕೆ ಕರೆದಿದ್ದಾರೆ. ಅವಳು ಅನಾರೋಗ್ಯ ಕಾರಣ ಕೆಲಸಕ್ಕೆ ಹೋಗಿಲ್ಲ. ಇದನ್ನೇ ನೆಪ ಮಾಡಿಕೊಂಡು ದಂಪತಿಗಳು ಇಬ್ಬರು ಸೇರಿ ನೀಲಮ್ಮನ ಮನೆಗೆ ನುಗ್ಗಿ ಮನಸೋ ಇಚ್ಛೆ…

Read More

ಕೆಂಭಾವಿ: ಎರಡು ದಿನಗಳ ಕಾಲ “ದಿ ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡೀಸೆಬಿಲಿಟಿ “(ಎ ಪಿ ಡಿ ) ಸಂಸ್ಥೆ ಮತ್ತು ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ” ಪುನಃಚೇತನ ಮೇಳ” ವನ್ನು ಹಮ್ಮಿಕೊಳ್ಳಗಿತ್ತು.ವಿಕಲಚೇತನ ಮಕ್ಕಳಿಗೆ ಮತ್ತು ವಿಕಲಚೇತನ ವ್ಯಕ್ತಿಗಳಿಗೆ ಆರೋಗ್ಯ ತಪಾಸಣೆಯನ್ನು ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಮೇಳದಲ್ಲಿ ಆರೋಗ್ಯ ತಪಾಸಣೆಯನ್ನು ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ ಮಾಡಿದರು.ಕು. ಸ್ವಾತಿಕಾ ಬಿ ಆರ್ ಅವರು ವಿಕಲಚೇತನ ಮಕ್ಕಳಿಗೆ ವ್ಯಾಯಾಮ ಕಲಿಸಿಕೊಟ್ಟರು. ಇದೆ ಸಂದರ್ಭದಲ್ಲಿ ಮಹೇಶ್ ಎಂಬ ಮಗುವಿಗೆ ಎ ಪಿ ಡಿ .ಸಂಸ್ಥೆಯಿಂದ ಗಾಲಿ ಕುರ್ಚಿಯನ್ನು ವಿತರಿಸಲಾಯಿತು.ಸುರಪುರ ತಾಲೂಕು ಸಂಯೋಜಕ ಸುನಿಲ್ ಹುಲ್ಯಾಳ ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಮಾಂತೇಶ್ ಕುಂಬಾರ, ಸ್ವಾಗತವನ್ನು ಶ್ರೀಮತಿ ಲಕ್ಷ್ಮೀ ರಾಮಣ್ಣ ಹಾಲರ್, ಸಹಾಯಕರಾದ ಶ್ರೀಮತಿ ಮೀನಾಕ್ಷಿ, ಶ್ರೀ ಬಸವರಾಜ್ ಬೇವಿನಾಳ ವಂದನಾರ್ಪಣೆ ಮಾಡಿದರು.ಶಿಬಿರದಲ್ಲಿ ಇಂಜೆಕ್ಷನ್,ಮಾತ್ರೆ , ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಣೆ ಮಾಡಲಾಯಿತು.ಒಟ್ಟು 70 ಜನ ಶಿಬಿರದಲ್ಲಿ ಪಾಲ್ಗೊಂಡಿದ್ದರು. 41 ಮಕ್ಕಳು ಆರೋಗ್ಯ ತಪಾಸಣೆಯ…

Read More

ಮುದ್ದೇಬಿಹಾಳ: ಜ.೨೧ ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವ ದಾಸೋಹ ದಿನಾಚರಣೆ ಪ್ರಯುಕ್ತ, ಶ್ರೀ ಕುಮಾರೇಶ್ವರ ಜೀವನ ವಿಕಾಸ ಫೌಂಡೇಶನ್ ಮತ್ತು ವೀರಶೈವ ಲಿಂಗಾಯತ ಸಮಾಜದ ವತಿಯಿಂದ, ತ್ರಿವಿಧ ದಾಸೋಹಿ ಶತಾಯುಷಿ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳು ಸಿದ್ದಗಂಗಾ ಮಠ ತುಮಕೂರು, ಮತ್ತು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ವಿಜಯಪುರ ಇವರ ಸ್ಮರಣೋತ್ಸವ ಹಾಗೂ ಲಿಂಗೈಕ್ಯ ಚನ್ನಣ್ಣ ದೇಸಾಯಿ ಅವರ ಸ್ಮರಣಾರ್ಥವಾಗಿ ಪಟ್ಟಣದ ತಹಶಿಲ್ದಾರರ ಕಚೇರಿಯ ಹತ್ತಿರದ ಹೆಮರೆಡ್ಡಿ ಮಲ್ಲಮ್ಮ ವೃತ್ತದ ಬಳಿ ಇರುವ ಗಾರ್ಡನ್ ಜಾಗೆಯಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಮತ್ತು ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಮತ್ತು ಭಾಜಪಾ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಅವರ ಅಭಿಮಾನಿ ಬಳಗದಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಪ್ರಮುಖರಾದ ದೇವೇಂದ್ರ ವಾಲಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಿಂದಗಿ: ಪಟ್ಟಣದ ಯುವನಟ, ನಿರ್ದೇಶಕ, ನಿರ್ಮಾಪಕ ವಿಶ್ವಪ್ರಕಾಶ ಮಲಗೊಂಡ ಅವರ ಮಲಗೊಂಡ ಫಿಲಂ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣಗೊಂಡ ತುಷಾರ್ ಚಿತ್ರಕ್ಕೆ ಬಾಗಲಕೋಟೆಯ ಸಿದ್ದನಕೊಳ್ಳದಲ್ಲಿ ಜರುಗಿದ ೨೦೨೪ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾವೈಕ್ಯ ಸಾರುವ ಹಾಗೂ ಸಾಮಾಜಿಕ ಸಂದೇಶವುಳ್ಳ ಒಳ್ಳೆಯ ಚಿತ್ರ ಎಂದು ಪರಿಗಣಿಸಿ ಅವಾರ್ಡ್ ನೀಡಲಾಗಿದೆ.ಇದೇ ಸಂದರ್ಭದಲ್ಲಿ ಶ್ರೀ ಸಿದ್ದನಕೊಳ್ಳ ಮಠದ ಡಾ.ಶಿವಕುಮಾರ ಸ್ವಾಮಿಗಳು, ಚಿತ್ರನಟ ಶೋಭರಾಜ್, ಕೆಜಿಎಫ್ ಸಿನಿಮಾ ಖ್ಯಾತಿಯ ಸಾಹಿತಿ ಹಾಗೂ ಚಿತ್ರ ನಿರ್ದೇಶಕ ಕಿನ್ನಾಳ ರಾಜ್, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ, ಕೆಪಿಸಿಸಿ ಸದಸ್ಯೆ ರಕ್ಷಿತಾ ಇಟಿ, ಉದ್ಯಮಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದಣ್ಣ ಮೇಟಿ, ನಟ ನಿರ್ದೇಶಕ ನಿರ್ಮಾಪಕ ಡಾ.ಪ್ರಭು ಗಂಜಿಹಾಳ ಸೇರಿದಂತೆ ಅನೇಕರು ಇದ್ದರು.

Read More

ವಿಜಯಪುರ ಆಕ್ಸ್ಫರ್ಡ್ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಅಮ್ಮ ಮಡಿಲು ಚಾರಿಟೇಬಲ್ ಸಂಸ್ಥೆ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ಸಿಂದಗಿ: ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವ ಜೊತೆಗೆ ಸಂಸ್ಕಾರ, ಸಂಸ್ಕೃತಿಯನ್ನು ಬೆಳೆಸುತ್ತದೆ ಎಂದು ವಿಜಯಪುರ ಆಕ್ಸ್ಫರ್ಡ್ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಅಮ್ಮ ಮಡಿಲು ಚಾರಿಟೇಬಲ್ ಸಂಸ್ಥೆಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಪಟ್ಟಣದ ಕಲಬುರಗಿ ರಸ್ತೆಯ ಹೊರವಲಯದಲ್ಲಿರುವ ಲೋಯಲ್ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿಅವರು ಮಾತನಾಡಿದರು.ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಬೆಳೆಸಿ ಸಮಾಜದ ಉತ್ತಮ ಆಸ್ತಿಯನ್ನಾಗಿ ರೂಪಿಸುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಶಿಕ್ಷಣ ನೌಕರಿಗಾಗಿ ಅಲ್ಲ. ಅದು ಜ್ಞಾನಕ್ಕಾಗಿ. ಶಿಕ್ಷಣ ಕಲಿತು ನಾನು ರೈತ ಎಂದು ಹೇಳಿಕೊಳ್ಳಲು ನಾಚಿಕೊಳ್ಳಬೇಡಿ. ಯಾವುದಾದರೂ ಕೆಲಸ ಆಗಲಿ ಅದನ್ನು ಶ್ರದ್ಧೆಯಿಂದ ಮಾಡಿ ಅದರಲ್ಲಿ ತೃಪ್ತಿಯನ್ನು ಕಾಣಬೇಕು ಎಂದು ಬಬಲೇಶ್ವರ ನುಡಿದರು.ಈ ವೇಳೆ ವಿಜಯಪುರ ಜೆಸ್ವಿಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಫಾದರ್ ಫ್ರಾನ್ಸಿಸ್ ಮೆನೇಜಸ್, ಫಾದರ್ ಮ್ಯಾಕ್ಸಿಮ್, ಫಾದರ್ ರಾಬರ್ಟ್, ಪತ್ರಕರ್ತ ಸಲೀಮ್…

Read More

– ಸಂತೋಷ ಬಂಡೆ, ಶಿಕ್ಷಕರು ವಿಜಯಪುರ: ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಳಿ ಜೋಳ ಬೆಳೆಯಲಾಗುತ್ತದೆ. ಇದು ಈ ಭಾಗದ ಬಹುಮುಖ್ಯವಾದ ಬೆಳೆಗಳಲ್ಲಿ ಒಂದಾಗಿದೆ. ಈ ಜೋಳದ ತೆನೆ ಕಾಳು ಕಟ್ಟುವ ಹಂತದಲ್ಲಿದ್ದುದನ್ನು ಹಾಲ್ದೆನೆ ಅಥವಾ ಸೀತನಿ ಎಂದು ಕರೆಯುವರು.ಸೀತನಿ ಸೇವನೆಯಿಂದ ಆರೋಗ್ಯಕ್ಕೆ ಹಲವಾರು ಲಾಭಗಳು ಉಂಟು. ಸಾಮಾನ್ಯವಾಗಿ ಒಂದು ನೂರು ಗ್ರಾಂ ಸೀತನಿ ಸೇವಿಸಿದರೆ 316 ಗ್ರಾಂ ಕ್ಯಾಲೋರಿ, 10 ಗ್ರಾಂ ಪ್ರೊಟೀನ್, 3 ಗ್ರಾಂ ಫ್ಯಾಟ್, 6 ಗ್ರಾಂ ಫೈಬರ್, 69 ಗ್ರಾಂ ಕಾರ್ಬೋಹೈಡ್ರೇಟ್ಸ್ ಲಭಿಸಲಿದೆ ಎನ್ನುವದು ಶಿಕ್ಷಕರಾದ ಸಂತೋಷ ಬಂಡೆ ಅವರ ಅಭಿಪ್ರಾಯವಾಗಿದೆ.ಇದರಲ್ಲಿರುವ ವಿಟ್ಯಾಮಿನ್ “ಬಿ” ಚರ್ಮ ಮತ್ತು ಕೂದಲಿಗೆ ಒಳ್ಳೆಯ ಪೋಷಕಾಂಶ ಒದಗಿಸುತ್ತದೆ. ಸೀತನಿಯಲ್ಲಿರುವ ಮ್ಯಾಗ್ನೀಶಿಯಂ ಎಲುಬು ಮತ್ತು ಹೃದಯಕ್ಕೆ ಹೆಚ್ಚು ಪ್ರಯೋಜನಕಾರಿ. ಇದೊಂದು ಫೈಬರಿನ ಮೂಲ ಎಂದರೆ ತಪ್ಪಾಗದು ಎಂದು ಶಿಕ್ಷಕ ರಾಘವೇಂದ್ರ ಮೊಗಳ ಅಭಿಪ್ರಾಯ ವ್ಯಕ್ತಪಡಿಸಿದರು.ಸೀತನಿಯು ರಕ್ತದಲ್ಲಿನ ಸಕ್ಕರೆ ಅಂಶ ನಿಯಂತ್ರಿಸಲು ಮತ್ತು ಮುಖ್ಯವಾಗಿ ದೇಹದ ತೂಕ ಹೆಚ್ಚಾಗದಂತೆ ನೋಡಿಕೊಳ್ಳುವುದು. ಜೋಳದ ಹಾಲ್ತೆನೆಗಳನ್ನು…

Read More

ವಿಜಯಪುರ: ರಾಮ ಮಂದಿರ ಉದ್ಘಾಟನೆಯ ಅಮೂಲ್ಯ ಕ್ಷಣಕ್ಕೆ ಸಾಕ್ಷಿಯಾಗಲು, ಜನವರಿ 22 ಸೋಮವಾರದಂದು ಸಿದ್ಧಸಿರಿ ಸೌಹಾರ್ದ ಸಹಕಾರಿಯ 158 ಶಾಖೆಗಳಿಗೆ ರಜೆ ಘೋಷಿಸಿ, ಸಿದ್ಧಸಿರಿ ಸೌಹಾರ್ದದ ಅಧ್ಯಕ್ಷರು, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಆದೇಶ ಹೊರಡಿಸಿದ್ದಾರೆಂದು ಜಂಟಿ ವ್ಯವಸ್ಥಾಪಕ ನಿರ್ದೇಶಕ ರಾಘವ್ ಅಣ್ಣಿಗೇರಿ ತಿಳಿಸಿದ್ದಾರೆ.500 ವರ್ಷಗಳ ತಪಸ್ಸು, ಕೊಟ್ಯಂತರ ಹಿಂದೂ ಕಾರ್ಯಕರ್ತರು, ಸ್ವಾಮೀಜಿಗಳು, ಸಾಧು-ಸಂತರ ಕನಸು ನನಸಾಗುತ್ತಿದೆ. ಜ.22 ನಮ್ಮ ದೇಶದ ಭವಿಷ್ಯದ, ಭಾರತದ ಸ್ವಾಭಿಮಾನದ ಸಂಕೇತ, ಹಿಂದುತ್ವದ ಸ್ವಾಭಿಮಾನದ ಸಂಕೇತ, ಮೊಘಲರ ದಬ್ಬಾಳಿಕೆಯ ಗುಲಾಮಗಿರಿ ತೊಲಗಿಸಿದ ಸಂಕೇತದ ದಿನವಾಗಿದೆ. ಈ ದಿನ ಅವಿಸ್ಮರಣೀಯಗೊಳಿಸಲು, ಅಯೋಧ್ಯ ರಾಮ ಮಂದಿರ ಉದ್ಘಾಟನೆಯ ದಿನವಾದ ಜ.22 ರಂದು ನಡೆಯುವ ವಿಜಯೋತ್ಸವ ಸಮಾರಂಭಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ರಾಜ್ಯದ ವಿವಿಧೆಡೆ ಕಾರ್ಯನಿರ್ವಹಿಸುತ್ತಿರುವ 158 ಸಿದ್ಧಸಿರಿ ಸೌಹಾರ್ದ ಶಾಖೆಗಳ ನೌಕರರಿಗೆ ರಜೆ ನೀಡಲಾಗಿದೆ.ಈ ರಜೆ ದಿನವನ್ನು ಸದ್ಬಳಕೆ ಮಾಡಿಕೊಂಡು ಪ್ರತಿಯೊಬ್ಬ ಸಿಬ್ಬಂದಿಯೂ ತಮ್ಮ ಗ್ರಾಮ, ಪಟ್ಟಣ, ನಗರಗಳಲ್ಲಿ ಜರುಗುವ ಶ್ರೀರಾಮ ಉತ್ಸವದಲ್ಲಿ ಭಾಗ ವಹಿಸಬೇಕು. ಅಲ್ಲದೆ, ತಮ್ಮ…

Read More