Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಗರದ ಸರ್ವ ಗಜಾನನ ಮಂಡಳಿಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ನಾನು ಹಾಗೂ ಮಹಾಮಂಡಳವು ಸದಾ ಬೆಂಬಲವಾಗಿ ಇರುತ್ತೇವೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಭರವಸೆ ನೀಡಿದರು.ನಗರದ ಗಜಾನನ ಉತ್ಸವ ಮಹಾಮಂಡಳ ಶಿವಾಜಿ ವೃತ್ತ ವತಿಯಿಂದ 7ನೇ ದಿನದ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸರ್ವ ಗಜಾನನ ಮಂಡಳಿಯ ಅಧ್ಯಕ್ಷರಿಗೆ ಸನ್ಮಾನ ಸಲುವಾಗಿ ಗಾಂಧಿ ವೃತ್ತದಲ್ಲಿ ಜ್ಞಾನಯೋಗಿ ವೇದಿಕೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸುಮಾರು 30 ವರ್ಷಗಳಿಂದ ನಾನು ಧಾರ್ಮಿಕ ಕಾರ್ಯಕ್ರಮಕ್ಕೆ ವಿಜಯಪುರ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ದೇಣಿಗೆ ಕೊಡುವ ಪ್ರಾರಂಭ ಮಾಡಿದ ಹೆಮ್ಮೆ ನನಗಿದೆ. ಹಬ್ಬದ ವಾತಾವರಣದಲ್ಲಿ ಗಣೇಶನ ವಿಸರ್ಜನೆ ಶಾಂತಿಯುತವಾಗಿ ನೆರವೇರಲೆಂದು ಆಶಿಸಿದರು.ಮಾಳಿಂಗ ಮಹಾರಾಜರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಉದ್ಘಾಟನೆಯನ್ನು ಡಿವೈಎಸ್ಪಿ ಬಸವರಾಜ ಯಲಿಗಾರ ನೆರವೇರಿಸಿದರು.ಮಹಾಮಂಡಳದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು
ಹೂವಿನ ಹಿಪ್ಪರಗಿ: ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯವಿದೆ. ಮತ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ನಾನು ಶಾಸಕನಲ್ಲ ನಿಮ್ಮೆಲ್ಲರ ಸೇವಕ ಎಂದು ಶಾಸಕ ರಾಜುಗೌಡ ಪಾಟೀಲ ಹೇಳಿದರುಮತಕ್ಷೇತ್ರದ ಹೂವಿನ ಹಿಪ್ಪರಗಿ, ಅಂಬಳನೂರ, ಅಂಬಳನೂರ ತಾಂಡಾ, ಆರೆಶಂಕರ, ಬ್ಯಾಲಿಹಾಳ, ಗ್ರಾಮಗಳ ಸಿಸಿ ರಸ್ತೆಗಳ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹೂವಿನ ಹಿಪ್ಪರಗಿ ದೇವರ ಹಿಪ್ಪರಗಿ ಮತಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ. ಗ್ರಾಮೀಣ ಭಾಗದ ರಸ್ತೆಗಳು ಬಹಳಷ್ಟು ಹದಗೆಟ್ಟಿದ್ದು ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ನಾನು ವಿರೋಧ ಪಕ್ಷದಲ್ಲಿದ್ದು ಕ್ಷೇತ್ರದ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಕೇಳುವವರಿಗೆ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿ ಮಾಡಿ ತೋರಿಸುವೆ ಎಂದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಿವುಬಾಯಿ ಮಾದರ, ಸಂಗಮೇಶ ಹಳ್ಳೂರ, ಶಾಂತಗೌಡ ನಾಡಗೌಡ, ಸಿದ್ದು ಹಾದಿಮನಿ, ಪ್ರಕಾಶ ತೋಟದ, ಅಶೋಕ ಶಿವಯೋಗಿ, ನಿಂಗಣ್ಣ ಶಿವಯೋಗಿ, ಮುರುಗೇಶ ತಾಳಿಕೋಟಿ, ಚಂದು ಗುಂಡಣ್ಣವರ, ಮಹಾಂತೇಶ ಚಕ್ರವರ್ತಿ,…
ಮುದ್ದೇಬಿಹಾಳ: ತಾಲೂಕಿನ ಹಡಗಲಿ ಗ್ರಾಮದ ಬೀರಪ್ಪ ಹುಡೇದ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಹುಡೇದ ಕುಟುಂಬಸ್ಥರು ತಾಲೂಕು ಸರಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಬ್ರೆಡ್ ಮತ್ತು ಹಡಗಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಪೆನ್ ವಿತರಣೆ ಮಾಡಿದರು.ಈ ವೇಳೆ ಮುತ್ತು ಟಕ್ಕಳಕಿ ಮಾತನಾಡಿ, ನಮ್ಮ ಅಜ್ಜನವರ ನೆನಪು ನಮ್ಮ ಜೊತೆ ಅಜರಾಮರವಾಗಿ ಉಳಿಯಲೆಂದು ಅವರ ಪುಣ್ಯಸ್ಮರಣೆಯ ದಿನ ಪ್ರತಿವರ್ಷವೂ ಕೂಡಾ ಏನಾದರೂ ದಾನ, ಕೊಡುಗೆ ನೀಡಬೇಕು ಎಂದು ನಾವು ತಿರ್ಮಾನಿಸಿದ್ದೆವೆ ಎಂದರು.ಮುಖ್ಯಗುರು ಶಶಿಕಾಂತ ಚಲವಾದಿ, ಶಿಕ್ಷಕ ಮೋಹನ್ ಚವ್ಹಾಣ, ನೀಲಮ್ಮ ಹುಡೇದ, ಕಸ್ತೂರಿ ಹುನಗುಂದ, ದೇವಮ್ಮ ಪಾಟೀಲ, ಅಕ್ಕಮ್ಮ ಟಕ್ಕಳಕಿ, ಗುಳಮ್ಮ ಅಮಾತಿಗೌಡರ, ಜಯಶ್ರೀ ಚಿಕ್ಕನ್ನಳ್ಳಿ, ಭಾಗೀರಥಿ ಜೀನಗಿ, ಮುತ್ತು ಹುಡೇದ, ಹಣಮಂತ ಹುಡೇದ, ವಿದ್ಯಾ ಹುಡೇದ, ರೇಣುಕಾ ಹುಡೇದ ಸೇರಿದಂತೆ ಮತ್ತೀತರರು ಇದ್ದರು.
ಮುದ್ದೇಬಿಹಾಳ: ತಾಲೂಕು ಬರಗಾಲ ಪೀಡಿತವೆಂದು ಘೋಷಣೆಯಾಗಿದ್ದು, ನರೇಗಾ ಮಾನವ ದಿನಗಳು ೧೦೦ ರಿಂದ ೧೫೦ ಕ್ಕೆ ಹೆಚ್ಚಾಗುವ ನಿರೀಕ್ಷೆ ಇದೆ. ದುಡಿಮೆ ಅರಸಿ ವಲಸೆ ಹೋಗದೆ ನಿಮ್ಮಲ್ಲೇ ಕೆಲಸ ಮಾಡಿ ಆರ್ಥಿಕ ಸಾವಲಂಬಿಗಳಾಗಿ ಎಂದು ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾ.ಉ.) ಖುಬಾಸಿಂಗ್ ಜಾಧವ್ ಹೇಳಿದರು.ತಾಲೂಕಿನ ಮಡಿಕೇಶ್ವರ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ತಾಲೂಕು ನರೇಗಾ ಮಾಹಿತಿ, ಶಿಕ್ಷಣ ಹಾಗೂ ಸಂವಹನ ಕಾರ್ಯಕ್ರಮದಡಿ ನಡೆದ ವಿಶೇಷ ರೋಜಗಾರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಿರೀಕ್ಷಿತ ಮಳೆಯಾಗದೆ ರೈತರ ಜಮೀನುಗಳಲ್ಲಿ ಬೆಳೆಗಳು ಒಣಗುತ್ತಿವೆ. ಕೃಷಿ ಕೂಲಿ ಕಾರ್ಮಿಕರು ದುಡಿಮೆ ಇಲ್ಲದೆ ನಗರ ಪ್ರದೇಶಗಳಿಗೆ ವಲಸೆ ಹೋಗುತ್ತಿದ್ದಾರೆ. ಬರಪರಿಸ್ಥಿತಿಯಲ್ಲಿ ಜನರಿಗೆ ಉದ್ಯೋಗ ನೀಡಿ ಕುಟುಂಬ ನಿರ್ವಹಣೆಗೆ ಆರ್ಥಿಕ ಸಹಕಾರ ಮಾಡಲು ನರೇಗಾ ಯೋಜನೆ ಸನ್ನದ್ಧವಾಗಿದೆ. ಮಾನವ ದಿನಗಳು ೧೫೦ಕ್ಕೆ ಹೆಚ್ಚಾಗುವ ಸಾಧ್ಯತೆ ಇದ್ದು, ಅಧೀಕೃತ ಘೋಷಣೆಯೊಂದೇ ಬಾಕಿ ಇದೆ. ಕೆಲಸಕ್ಕಾಗಿ ಬೇಡಿಕೆ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಕೆಲಸ ನೀಡಲಾಗುವುದು. ಅದ್ದರಿಂದ ಗ್ರಾಮೀಣ ಪ್ರದೇಶದ ಕೂಲಿ…
ಮುದ್ದೇಬಿಹಾಳ: ವಿದ್ಯಾರ್ಥಿಗಳಾದವರು ಕಲಿಕೆಯ ಜೊತೆಗೆ ಇನ್ನೀತರ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾದಾಗ ಅಪಾರ ಜ್ಞಾನವನ್ನು ಬೆಳೆಸಿಕೊಳ್ಳಬಹುದು ಎಂದು ಶಿಕ್ಷಕ ಎ.ಎಸ್.ಬಾಗವಾನ ಹೇಳಿದರು.ಪಟ್ಟಣದ ಹೊರಪೇಟಗಲ್ಲಿಯಲ್ಲಿ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ರಸಪ್ರಶ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ರಸಪ್ರಶ್ನೆ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಜ್ಞಾನವನ್ನು ವೃದ್ದಿಸಲು ಸಹಕಾರಿಯಾಗುತ್ತವೆ. ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸಲು ಹಾಗೂ ವಿದ್ಯಾರ್ಥಿಗಳ ಮನೋಬಲವನ್ನು ಹೆಚ್ಚಿಸುವಲ್ಲಿ ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ. ಮತ್ತು ಗಣೇಶೋತ್ಸವ ಸಮಿತಿಯ ಈ ಕಾರ್ಯ ಅತೀ ಶ್ಲಾಘನೀಯವಾದದ್ದು ಎಂದರು.ರಸಪ್ರಶ್ನೆಗೆ ಬಹುಮಾನ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿದ ಕಾರಣ ಸೋಮು ಗಸ್ತಿಗಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕುಮಾರ ಶಿವಯೋಗಿಮಠ, ಸುಭಾಷ್ ಬಡಿಗೇರ, ಕಾಶಿಪತಿ ಪತ್ತಾರ, ಮುತ್ತಣ್ಣ ಮಡಿವಾಳರ, ಸೋಮಣ್ಣ ಗಸ್ತಿಗಾರ ಅತಿಥಿಗಳಾಗಿ ಆಗಮಿಸಿದ್ದರು.ಅರ್ಜುನ್ ನಾಯಕ್, ಶಿವು ಚಿಮ್ಮಲಗಿ, ಮಾನಸಪ್ಪ ನಾಯಕ, ಬಸು ನಾಯಕ, ದೇವು ನಾಯಕ, ಶಿಕ್ಷಕರಾದ ರಮೇಶ ಮಡಿವಾಳರ, ಡಿ.ಆರ್.ಬೆಳ್ಳಿಕಟ್ಟಿ, ಮುತ್ತು ತಮ್ಮದಡ್ಡಿ ಸೇರಿದಂತೆ ಮತ್ತೀತರರು ಇದ್ದರು.ಪ್ರಶಾಂತ ಕಲಾಲ ಕಾರ್ಯಕ್ರಮ ನಿರ್ವಹಿಸಿದರು.
ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್ ೨ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ನಿರ್ಧರಿಸಲಾಯಿತು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಮಹಾತ್ಮ ಗಾಂಧೀ ಜಯಂತಿ ಅಂಗವಾಗಿ ಅಕ್ಟೋಬರ್ ೧ರಂದು ಬೆಳಿಗ್ಗೆ ೭ ಗಂಟೆಗೆ ನಗರದ ರಾಣಿ ಬಗೀಚ ಹಾಗೂ ಕಣಕಿ ಬಜಾರದಿಂದ ಅಂಬೇಡ್ಕರ್ ವೃತ್ತದವರೆಗೆ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ಅಕ್ಟೋಬರ್ ೨ರಂದು ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ನಗರದ ಗಾಂಧಿವೃತ್ತದಲ್ಲಿ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಸೈನಿಕ್ ಶಾಲೆ ಹತ್ತಿರವಿರುವ ಲಾಲಬಹಾದ್ದೂರ ಶಾಸ್ತ್ರೀಜಿ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಬೆಳಿಗ್ಗೆ ೮ ಗಂಟೆ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿಭವನದಲ್ಲಿ ಈರ್ವರ ಮಹನೀಯರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.ವೇದಿಕೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಭಾವಚಿತ್ರಗಳಿಗೆ ಪುಷ್ಪನಮನ, ಸರ್ವಧರ್ಮ ಪ್ರಾರ್ಥನೆ, ನಾಡಗೀತೆ, ಉಪನ್ಯಾಸ ಕಾರ್ಯಕ್ರಮ, ವಿವಿಧ…
ವಿಜಯಪುರ: ವಿಜಯಪುರ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ಸೆ.೩೦ ಹಾಗೂ ಅಕ್ಟೊಬರ್ ೧ ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.ಆಯಾ ತಾಲೂಕುಗಳಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವೀತಿಯ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡನ್ನು ಕಡ್ಡಾಯವಾಗಿ ತರಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಂಯೋಜಕರಾದ ರಾಜು ಚವ್ಹಾಣ ಮೊ: ೭೦೧೯೧೬೭೨೪೩ ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ನಿರ್ವಹಿಸಲು ಸಂಬಂಧಿಸಿದ ಇಲಾಖೆಗಳು ಸರ್ವ ಸನ್ನದ್ಧವಾಗಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.ಇಂದು ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದ ವಿಕೋಪ ನಿರ್ವಹಣಾ ಯೋಜನೆ ವಿಜಯಪುರ ಹಾಗೂ ಕಂದಾಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿಪತ್ತು ನಿರ್ವಹಣಾ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಪ್ರಕೃತಿ ವಿಕೋಪಗಳನ್ನು ನಿರ್ವಹಿಸಲು ಮುಂಚಿತವಾಗಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಮಳೆಗಾಲದಲ್ಲಿ ಸಂಭವಿಸಬಹುದಾದ ಅತಿವೃಷ್ಟಿಯ ಕುರಿತು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ವಿಕೋಪಗಳ ಕುರಿತು ಸೂಕ್ತ ಅಧ್ಯಯನ ನಡೆಸಿ, ತುರ್ತು ಪರಿಹಾರೋಪಾಯಳನ್ನು ಹೇಗೆ ಕಾರ್ಯರೂಪಕ್ಕೆ ತರಬೇಕೆಂಬುದರ ಬಗ್ಗೆ ನೀಲನಕ್ಷೆ ಸಿದ್ಧವಾಗಿಟ್ಟುಕೊಂಡಿರಬೇಕು. ಸ್ದೇ ಜೀವ-ಜಾನುವಾರುಗಳ ಹಾನಿ ಸಂಭವಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಸಂಯೋಜಕರಾದ ಡಾ.ಪರಮೇಶ ಜಿ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ಅಶೋಕ ಕಲಘಟಗಿ, ಬೋಧಕ ವಿ.ವಿ.ಕಮಲಾಪುರ, ಜಿಲ್ಲಾ ವಿಪತ್ತು ನಿರ್ವಹನಾ ತಜ್ಞ ರಾಜೇಶ…
ವಿಜಯಪುರ: ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಯಲ್ಲಿ ಕೊಟ್ಪಾ ಕಾಯ್ದೆಯ ಸೆಕ್ಷನ್-೪ರ ನಾಮಫಲಕದ ಗೋಡೆ ಬರಹ ಬರೆಸುವುದು ಹಾಗೂ ನಾಮಫಲಕಗಳನ್ನು ಶಾಲಾ-ಕಾಲೇಜಿನ ಪ್ರವೇಶ ದ್ವಾರದಲ್ಲಿ ಅಳವಡಿಸುವುದು ಸೇರಿದಂತೆ ಜಿಲ್ಲೆಯಾದ್ಯಂತ ಕೊಟ್ಪಾ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕೊಟ್ಪಾ ಕಾಯ್ದೆ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೊಟ್ಪಾ ಕಾಯ್ದೆಯ ನಾಮಫಲಕ ಗೋಡೆ ಬರಹ ಬರೆಸಬೇಕು. ಶಾಲಾ ಕಾಲೇಜಿನ ಕಂಪೌಂಡಿನಿಂದ ೧೦೦ ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಪದಾರ್ಥಗಳ ಮಾರಾಟವಾಗದಂತೆ ನೋಡಿಕೊಳ್ಳಬೇಕು. ಶಾಲಾ-ಕಾಲೇಜಿನ ತಂಬಾಕು ನಿಯಂತ್ರಣ ಸಮಿತಿ ರಚಿಸಿ ನಿಯಮ ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೆಕು ಎಂದು ಹೇಳಿದರು.ಶಾಲಾ ಕಾಲೇಜು ಆವರಣದಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಬಳಕೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ತಂಬಾಕು ಉತ್ಪನ್ನಗಳ ಉಪಯೋಗದಿಂದಾಗುವ ದುಷ್ಟರಿಣಾಮ ಹಾಗೂ ಕೊಟ್ಪಾ ಕಾಯ್ದೆ-೨೦೦೩ರ ಕುರಿತು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು. ಕೊಟ್ಪಾ ಕಾಯ್ದೆ ಅಂಶಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಬಗ್ಗೆ…
೧೧ ಸಾವಿರ ಕುಟುಂಬಗಳಿಗೆ ದೀಪಾವಳಿ ಹಬ್ಬಕ್ಕೆ ಶಾಸಕ ಯತ್ನಾಳರಿಂದ ತಲಾ ರೂ.೨ ಸಾವಿರ ಕೊಡುಗೆ ವಿಜಯಪುರ: ಈಗ ಆದೀಲಶಾಹಿ ಬಿಜಾಪುರ ಅಲ್ಲ, ಸನಾತನ ಹಿಂದೂ ಧರ್ಮದ ವಿಜಯಪುರ ಆಗಿದೆ. ದೇಶದಲ್ಲಿ ನಿಜವಾದ ಹಿಂದೂ ರಾಷ್ಟ್ರ ನಮ್ಮ ವಿಜಯಪುರದಲ್ಲಿ ಆಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನ ಆವರಣದಲ್ಲಿ ಸೋಮವಾರ ಶ್ರೀ ಸ್ವಾಮಿ ವಿವೇಕಾನಂದ ಸೇನೆಯಿಂದ ಸನಾತನ ಹಿಂದೂ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ಸರ್ವ ಗಜಾನನ ಮಂಡಳಿಗಳಿಗೆ ಸನ್ಮಾನ ಹಾಗೂ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದು ಧರ್ಮಕ್ಕೆ ಬೈಯುವುದು ದೇಶದಲ್ಲಿ ಪ್ಯಾಶನ್ ಆಗಿದೆ. ಅಂತವರೆಲ್ಲರೂ ಹೈಬ್ರಿಡ್ ತಳಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು.ವಿಜಯಪುರದಲ್ಲಿ ಹಿಂದುತ್ವ ಸೋಲಿಸಲು ಸಾಕಷ್ಟು ಕುತಂತ್ರ ನಡೆಸಿದರೂ ಏನೂ ಆಗಲಿಲ್ಲ. ಅದಕ್ಕೆ ಕಾರಣ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳು. ನನ್ನ ನೀವು ಕೈಬಿಡುವುದಿಲ್ಲ ಎನ್ನುವುದು ಗೊತ್ತು. ಹೀಗಾಗಿ ಎಂದೂ ಕೂಡ ನಮ್ಮನ್ನು ಸೋಲಿಸಲು ಅವರಿಂದ ಆಗದು ಎಂದು ಹೇಳಿದರು.ಎಲ್ಲರೂ ಚುನಾವಣೆ ಸಂದರ್ಭದಲ್ಲಿ ಹಣ ಹಂಚುತ್ತಾರೆ, ಆಸೆ-ಆಮಿಷ…
