Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ಕಾಲುಬಾಯಿ ರೋಗವು ವೈರಾಣುವಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಈ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಲಸಿಕೆಯನ್ನು ವರ್ಷದಲ್ಲಿ ಎರಡು ಬಾರಿ ನೀಡಲಾಗುತ್ತದೆ. ಇದೀಗ ಸೆ.೨೬ರಿಂದ ಆರಂಭಿಸಿ ಅ.೨೫ರವರೆಗೆ ಉಚಿತ ಲಸಿಕೆ ನೀಡಲಾಗುತ್ತದೆ ಇದರ ಸದುಪಯೋಗವನ್ನು ರೈತರು ಬಾಂಧವರು ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಪಶು ಇಲಾಖೆಯ ಆವರಣದಲ್ಲಿ ೪ನೆಯ ಸುತ್ತಿನ ಉಚಿತ ಲಸಿಕಾ ಅಭಿಯಾನವನ್ನು ಜಿಲ್ಲಾ ಪಂಚಾಯತ, ವಿಜಯಪುರ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಹಮ್ಮಿಕೊಂಡ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಅವರು, ಕಾಲುಬಾಯಿ ರೋಗ ಬಂದಾಗ ಚಿಕಿತ್ಸೆಯ ಬದಲಾಗಿ ಲಸಿಕೆಯೇ ಮುಖ್ಯವಾಗಿದೆ ಎಂಬುದನ್ನು ರೈತರು ಅರಿಯಬೇಕು. ಪಶು ವೈದ್ಯರು ತಮ್ಮ ಮನೆ ಮನೆಗೆ ಲಸಿಕಾಕರಣಕ್ಕೆ ಬಂದಾಗ ರೈತರು ತಮ್ಮ ಜಾನುವಾರುಗಳಿಗೆ ಮರೆಯದೇ ಲಸಿಕೆ ಕೋಡಿಸಬೇಕು ಎಂದು ಸಲಹೆ ನೀಡಿದರು.ಇದೇ ವೇಳೆ ತಾಲೂಕು ಸಹಾಯಕ ನಿರ್ದೇಶಕ ಡಾ.ರಾಮು ರಾಠೋಡ ಮಾತನಾಡಿ, ಕಾಲುಬಾಯಿ ರೋಗವು ಎತ್ತು, ಹೋರಿ,…
ಬಸವನಬಾಗೇವಾಡಿ: ನಮ್ಮ ದೇಶ, ಸನಾತನ ಧರ್ಮ ಉಳಿಯಬೇಕು. ದೇಶ, ಧರ್ಮ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಹಿಂದು ಸಮಾಜವನ್ನು ಜಾಗೃತಿ ಮಾಡುವ ಜೊತೆಗೆ ದೇಶ, ಧರ್ಮವನ್ನು ಉಳಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳೋಣವೆಂದು ಶ್ರೀರಾಮಸೇನೆಯ ಪ್ರಮೋದ ಮುತಾಲಿಕ ಹೇಳಿದರು.ಪಟ್ಟಣದ ಬಸವಜನ್ಮಸ್ಮಾರಕದ ಮಹಾದ್ವಾರದ ಪಕ್ಕದಲ್ಲಿ ಹಿಂದು ಮಹಾಗಣಪತಿ ಪ್ರತಿಷ್ಠಾಪಿಸಿ ಗಣಪತಿ ಮೂರ್ತಿಗೆ ಸೋಮವಾರ ಪೂಜೆ ಸಲ್ಲಿಸಿ, ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿದ ನಂತರ ಮಾತನಾಡಿದ ಅವರು, ನಮ್ಮಲ್ಲಿಯೇ ಬೇಧ ನಿರ್ಮಾಣ ಮಾಡಿ ನಾವು ಒಡೆದ ಹೋದ ಪರಿಣಾಮದಿಂದ ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನ ದಲ್ಲಿ ಸಾರ್ವಜನಿಕ ಗಣಪತಿಯನ್ನು ಕೂಡಿಸಬಾರದು ಎಂದು ಕೋರ್ಟಿಗೆ ಹೋಗುತ್ತಾರೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಗಣಪತಿ ಕೂಡಿಸಬಾರದು ಎಂದು ಸುಪ್ರಿಂಕೋರ್ಟಿಗೆ ಹೋಗಿ ತಡೆಯಾಜ್ಞೆಯನ್ನು ತರುತ್ತಾರೆ. ನಮ್ಮ ದೇಶದಲ್ಲಿ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದ ಈ ಪದ್ಧತಿಯನ್ನು ವಿರೋಧಿಸುತ್ತಾರೆ. ನಾವು ಬಾಯಿ ಮುಚ್ಚಿಕೊಂಡು ಕುಳಿತುಕೊಂಡರೆ ನಾವು ಈ ದುಷ್ಟರ ವಿರುದ್ಧ ದನಿ ಎತ್ತದೇ ಹೋದರೆ ಮುಂದಿನ ದಿನಗಳಲ್ಲಿ ನಮ್ಮ ಮನೆಗಳಲ್ಲಿ ಕೂಡಿಸುವ ಗಣಪತಿಗೂ ವಿರೋಧ ಮಾಡುತ್ತಾರೆ…
ಬಸವನಬಾಗೇವಾಡಿ: ಹಾನಗಲ್ಲ ಕುಮಾರೇಶ ಸ್ವಾಮೀಜಿ ಸಮಾಜ ಸೇವೆಯಲ್ಲಿ ಬಹುದೊಡ್ಡ ಕೂಡುಗೆ ನೀಡಿದ್ದರು. ಅವರ ಬದುಕೇ ಒಂದು ವ್ಯಾಖ್ಯಾ ನ ಎಂದು ಹುಬ್ಬಳ್ಳಿ-ಹಾನಗಲ್ ಮೂರುಸಾವಿರಮಠದ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.ಸ್ಥಳೀಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಬಸವೇಶ್ವರ ಇಂಟರ್ ನ್ಯಾಷನಲ್ ಸ್ಕೂಲ್ (ಸಿಬಿಎಸ್ಸಿ) ಆವರಣದಲ್ಲಿ ಹಾನಗಲ್ಲ ಕುಮಾರ ಮಹಾಸ್ವಾಮೀಜಿಯವರ ೧೫೬ನೇ ಜಯಂತ್ಯೋತ್ಸವದ ನಿಮಿತ್ತ ಶ್ರೀಕುಮಾರ ಮಹಾಸ್ವಾಮೀಜಿಯವರ ಜೀವನ ದರ್ಶನ ಪ್ರವಚನದ ಸಾನಿಧ್ಯವಹಿಸಿ ಮಾತನಾಡಿದ ಅವರು, ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ ಸಂತರ, ಶರಣರ, ಮಹಾನ್ ಪುರುಷರ ಜೀವನಾದರ್ಶಗಳು ಇತಿಹಾಸದಲ್ಲಿ ಉಳಿದುಕೊಳ್ಳುತ್ತವೆ. ಉದ್ಧಾತ ಚಿಂತನೆ ಮಾಡಿದಂತಹ ಮಹಾನ್ ವಿರಾಗಿ ಶ್ರೀಕುಮಾರೇಶ ಎಂದರು.ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಪ್ರವಚನದಿಂದ ಮನಸ್ಸು ಪರಿಶುದ್ಧವಾಗುತ್ತದೆ. ಹೆಚ್ಚು ಹೆಚ್ಚು ಜನರು ಪ್ರವಚನವನ್ನು ಆಲಿಸಿ ಮನುಸ್ಸನ್ನು ಪಾವನಗೊಳಿಸಿಕೊಳ್ಳಬೇಕು. ಕೆಲವು ಕಡೆಗಳಲ್ಲಿ ಗುರು-ವಿರಕ್ತರಲ್ಲಿ ಭೇದ-ಭಾವವಿರುತ್ತದೆ ಆದರೆ ಬಸವನಬಾಗೇವಾಡಿಯಲ್ಲಿ ಇಲ್ಲ ಎಂದು ಹೇಳಿದರು.ಬಿಳ್ಳೂರು ವಿರಕ್ತಮಠದ ಮುರುಘೇಂದ್ರ ಮಹಾಸ್ವಾಮೀಜಿ ಪ್ರವಚನವನ್ನು ಉದ್ಘಾಟಿಸಿ ಮಾತನಾಡಿದರು.ಶಾಸಕ ಭೀಮನಗೌಡ(ರಾಜುಗೌಡ) ಪಾಟೀಲ ಕುದರಿಸಾಲವಾಡಗಿ, ಚನ್ನಬಸವ ಸ್ವಾಮೀಜಿ, ಸಿದ್ಧರಾಮ…
ಬಸವನಬಾಗೇವಾಡಿ: ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ 156ನೇ ಜಯಂತೋತ್ಸವ ನಿಮಿತ್ಯ ಸಮೀಪದ ಇವಣಗಿ, ಹಂಚಿನಾಳ ಹಾಗೂ ನರಸಲಗಿ ಗ್ರಾಮಗಳಲ್ಲಿ ವಿವಿಧ ಮಠಾಧೀಶರಿಂದ ದುಶ್ಚಟಗಳ ಭಿಕ್ಷೆ- ಸದ್ಗುಣಗಳ ದೀಕ್ಷೆ ಜನ ಜಾಗೃತಿ ಅಭಿಯಾನ ಹಾಗೂ ಧರ್ಮ ಸಭೆ ಜರುಗಿತು.ಶ್ರೀ ಕುಮಾರ ಶಿವಯೋಗಿಗಳ ಜಯಂತೋತ್ಸವ ಸಮಿತಿಯ ಅಧ್ಯಕ್ಷ ಬೀಳಗಿಯ ಕಲ್ಮಠದ ಗುರುಪಾದೇಶ್ವರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಪಾದಯಾತ್ರೆಯು ಇವಣಗಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಸ್ವಾಗತಕ್ಕಾಗಿ ತರಲಾದ 7 ಕ್ವಿಂಟಾಲ್ ಹೂವುಗಳಿಂದ ಪುಷ್ಪವೃಷ್ಟಿ ಮಾಡುವ ಮೂಲಕ ಮಠಾಧೀಶರನ್ನು ಅದ್ದೂರಿಯಾಗಿ ಸ್ವಾಗತಿಸಿಕೊಂಡರು. ಅಪಾರ ಸಂಖ್ಯೆಯ ಸುಮಂಗಲೆಯರು ಕುಂಭ ಹೊತ್ತು ಪಾಲ್ಗೊಂಡರು.ಗ್ರಾಮದ ಲಕ್ಕಮ್ಮದೇವಿ ದೇವಸ್ಥಾನದ ಆವರಣದಲ್ಲಿ ಜರುಗಿದ ಧರ್ಮ ಸಭೆಯಲ್ಲಿ ಬಿಳೂರಿನ ಮುರುಘೇಂದ್ರ ಸ್ವಾಮಿಜಿ ಮಾತನಾಡಿ, ಪ್ರತಿಯೊಬ್ಬರೂ ಇಂತಹ ದಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಜೀವನವನ್ನು ಸುಂದರವಾಗಿಸಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಕರಿಬಂಟನಾಳದ ಶಿವಕುಮಾರ ಸ್ವಾಮೀಜಿ, ಆನಂದ ದೇವರು, ವಿರುಪಾಕ್ಷ ದೇವರು, ದಾನೇಶ್ವರ ದೇವರು, ಷಡಕ್ಷರಿ ದೇವರು ಹಾಗೂ ವಿವಿಧ ಪಕ್ಷದ ಮುಖಂಡರು ಸೇರಿದಂತೆ ವಿವಿಧ…
ಇಂಡಿ: ಮನುಷ್ಯ ಕುಲವೊಂದೇ ಎಂಬುದನ್ನು ಪ್ರವಾದಿಗಳು ಹೇಳಿದ್ದು ಅರ್ಥಮಾಡಿಕೊಳ್ಳಬೇಕು.ಭಾರತದಂತಹ ದೇಶ ಮುನ್ನಡೆಸಲು ಎಲ್ಲರೂ ಜೊತೆಗೂಡಿದರೆ ಮಾತ್ರ ಸಾಧ್ಯ.ಭಾರತೀಯರು ಇದನ್ನು ಅರ್ಥೈಸಿಕೊಳ್ಳಬೇಕು ಎಂದು ಮುಖ್ಯ ಅತಿಥಿ ಸೀರಾಜ ಜಂಖಾನಿ ಹೇಳಿದರು.ಪಟ್ಟಣದ ಮಾಡಲ್ ಪಬ್ಲಿಕ್ ಶಾಲೆಯಲ್ಲಿ ಮಹಮ್ಮದಿಯಾ ನಾತ್ ಕಮಿಟಿ ವತಿಯಿಂದ ತಾಲೂಕಾ ಮಟ್ಟದಲ್ಲಿ ಪ್ರವಾದಿ ಕುರಿತು ರಸಪ್ರಶ್ನೆ ಹಾಗೂ ನಾತ್ ಪಠಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಎಷ್ಟೋ ಜನರು ಪ್ರವಾದಿ ಮಹಮ್ಮದ್ರ ಬಗ್ಗೆ ಅಪಪ್ರಚಾರವನ್ನು ಮಾಡುತ್ತಿದ್ದರು. ಬದುಕಿನುದ್ದಕ್ಕೂ ಅಪಪ್ರಚಾರ ಮಾಡಿದ್ದರೂ ಅವೆಲ್ಲವನ್ನೂ ಮಾನವೀಯ ಮೌಲ್ಯಗಳ ನೆಲೆಗಟ್ಟಿನ ಮೂಲಕ ಎದುರಿಸಿದರು ಎಂದು ಹೇಳಿದರು.ಮುಪ್ತಿ ಅಬ್ದುಲ್ ರಹೆಮಾನ ಅರಬ, ಮೌಲಾನಾ ಜಿಯಾವುಲಹಕ್ ಉಮರಿ ಹಾಗೂ ಕಾಂಗ್ರೆಸ್ ಬ್ಲಾಕ್ ತಾಲೂಕು ಮಾಜಿ ಅಧ್ಯಕ್ಷ ಇಲಿಯಾಸ ಬೊರಾಮಣಿ ಮಾತನಾಡಿ, ಪ್ರವಾದಿಗಳ ಸಂದೇಶಗಳು ಜನರ ಮನಮುಟ್ಟಬೇಕಾಗಿದೆ. ಗುಡಿ-ಮಸೀದಿಗಳಿಗೆ ಸೀಮಿತಗೊಳಿಸಬೇಡಿ, ಪ್ರವಾದಿ ಅವರ ಸಂದೇಶ ಸಾರ್ವಕಾಲಿಕವಾದುದು. ಅವರ ಜೀವನವೇ ನಮಗೆಲ್ಲ ದಾರಿದೀಪ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಹಮ್ಮದಿಯಾ ನಾತ್ ಕಮೀಟಿ ಜಿಲ್ಲಾ ಅಧ್ಯಕ್ಷ ಸೈಯದ್ ಮುಸ್ತಫಾ ಕಾದರಿ, ಜಹಾಂಗೀರ ಹಿಪ್ಪರಗಿ, ಅಬ್ದುಲನಬಿ ಜಮಾದಾರ,…
ವಿಜಯಪೂರ: ಸಂಗನಬಸವ ಶಿಶುನಿಕೇತನ ಶಾಲೆ ವಿದ್ಯಾರ್ಥಿ ಸಾಯಿ ಸಮರ್ಥ ಹೆಗಡೆ ಗುಂಡು ಎಸೆತ ಮತ್ತು ಟ್ರೈಯತ್ಲನ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಇದೆ ತಿಂಗಳ 27 ರಿಂದ 29 ವರೆಗೆ ಮಂಗಳೂರಿನಲ್ಲಿ ನಡೆಯುವಂತಹ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾನೆ. ವಿಜಯಪುರ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸೆ.10 ರಂದು ವಿಜಯಪೂರ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ (ರಿ) ವತಿಯಿಂದ ನಡೆದ ರಾಜ್ಯಮಟ್ಟದ ಆಯ್ಕೆ ಸ್ಪರ್ಧೆಯಲ್ಲಿ ಸಾಯಿ ಸಮರ್ಥ್ ಹೆಗಡೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿ ಸಾಧನೆಗೆ ಸಿದ್ದೇಶ್ವರ ಸಂಸ್ಥೆಯ ಚೇರಮನ್ ಬಸಯ್ಯ. ಎಸ್. ಹೀರೆಮಠ, ನಾಮಿನಿ ಚೇರಮನ್ ಸಂಗನಗೌಡ.ಎಚ್.ನಾಡಗೌಡ, ಕಾರ್ಯದರ್ಶಿ ಸದಾನಂದ ದೇಸಾಯಿ, ಜಂಟಿ ಕಾರ್ಯದರ್ಶಿ ಮಲ್ಲಿಕಾರ್ಜುನ ಸಜ್ಜನ, ಖಜಾಂಚಿ ಬಸವರಾಜ ಸುಗೂರ, ಶಾಲಾ ಆಡಳಿತಾಧಿಕಾರಿ ಡಾ. ಎಚ್.ವೆಂಕಟೇಶ, ಶಾಲಾ ಮುಖ್ಯೋಪಾದ್ಯಾಯಿನಿ ವಿಜಯಲಕ್ಷ್ಮೀ ಪಟ್ಟೆದ, ಉಪ ಮುಖ್ಯೋಪದ್ಯಯಿನಿ ಶ್ರೀದೇವಿ ಕನ್ನಾಳ, ತರಬೇತಿದಾರರಾದ ಸಂತೋಷ ಶಿವಣಗಿ, ದೈಹಿಕ ಶಿಕ್ಷಕರಾದ ಚನ್ನಬಸು ಬನಜಗೆರ, ಅರುಣಾ ಮಹಾಲಿಂಗಾಪುರ, ಕವಿತಾ ಸಿಂದಗಿ, ಮುತ್ತು ಮಾದರ, ಪ್ರವೀಣ ವಠಾರ ಹರ್ಷ ವ್ಯಕ್ತಪಡಿಸಿದ್ದಾರೆ.
ವಿಜಯಪುರ: ವಿಶ್ವ ಹೃದಯ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 29 ರಂದು ಶುಕ್ರವಾರ ಹೃದಯ ಆರೋಗ್ಯ ತಪಾಸಣೆ ಉಚಿತ ಶಿಬಿರ ಮತ್ತು ವೈದ್ಯರ ಸಮಾಲೋಚನೆ ಆಯೋಜಿಸಲಾಗಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆಸ್ಪತ್ರೆಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಸೆಪ್ಟೆಂಬರ್ 29 ರಂದು ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನ 2 ಗಂಟೆಯ ವರೆಗೆ ಈ ಶಿಬಿರ ನಡೆಯಲಿದೆ. ಈ ಸಂದರ್ಭದಲ್ಲಿ ವೈದ್ಯರ ಸಂದರ್ಶನ, ಬಿಪಿ, ಸಕ್ಕರೆ ಖಾಯಿಲೆ ಪರೀಕ್ಷೆ ಮತ್ತು ಇಸಿಜಿ ಯನ್ನು ಉಚಿತವಾಗಿ ಮಾಡಲಾಗುವುದು. ಅಲ್ಲದೇ, ರಿಯಾಯಿತಿ ದರದಲ್ಲಿ ಇನ್ನುಳಿದ ತಪಾಸಣೆಗಳನ್ನು ನಡೆಸಲಾಗುವುದು. ವಿಜಯಪುರ ಮತ್ತು ಸುತ್ತ ಮುತ್ತಲಿನ ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೋ: 8951178777 ಮತ್ತು 9481087009 ಸಂಪರ್ಕಿಸಬಹುದಾಗಿದೆ.
ಶ್ರೀ ಸಿದ್ದೇಶ್ವರ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆ ವಿಜಯಪುರ: ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆ ಹೆಮ್ಮರವಾಗಿ ಬೆಳೆದು ನಿಂತಿದ್ದು, ಧಾರ್ಮಿಕ, ಸಾಮಾಜಿಕ ಕಾರ್ಯಗಳೊಂದಿಗೆ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ತನ್ನದೆಯಾದ ಮಹತ್ತರ ಕಾರ್ಯ ಮಾಡಲಾಗುತ್ತಿದೆ ಎಂದು ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಹೇಳಿದರು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಡಾ.ಫ.ಗು.ಹಳಕಟ್ಟಿ ಸಭಾಭವನದಲ್ಲಿ ಈಚೆಗೆ ನಡೆದ ೨೦೨೨-೨೩ನೇ ಸಾಲಿನ ಶ್ರೀ ಸಿದ್ದೇಶ್ವರ ಸಂಸ್ಥೆಯ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಕೌಲಗಿ ಹಾಗೂ ವಿಜಯಪುರ ನಗರದಲ್ಲಿ ಶಾಲಾ-ಕಾಲೇಜುಗಳ ಮೂಲಕ ಮಕ್ಕಳಿಗೆ ಜ್ಞಾನಾರ್ಜನೆ ನೀಡುತ್ತಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೂ ಅನುಕೂಲ ಆಗಲೆಂದು ಬರುವ ಶೈಕ್ಷಣಿಕ ವರ್ಷದಿಂದಲೇ, ಪ್ರತಿ ವರ್ಷ ಒಂದೊಂದು ತಾಲ್ಲೂಕಿನಲ್ಲಿ ಪಬ್ಲಿಕ್ ಶಾಲೆ ಆರಂಭಿಸಿ, ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.ತಾಳಿಕೋಟಿ ಪಟ್ಟಣದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಗೆ ದೇಣಿಗೆ ನೀಡಲಾದ ೩ ಎಕರೆ ೧೭ ಗುಂಟಾ ಜಮೀನಿನ ಪೈಕಿ, ೨…
ನ್ಯಾಯವಾದಿ ಚೇತನ ಶಿವಶಿಂಪಿ ಅವರಿಂದ ಸರ್ಕಾರಕ್ಕೆ ದೂರು ಸಲ್ಲಿಕೆ ಮುದ್ದೇಬಿಹಾಳ: ತಾಲೂಕಿನ ಢವಳಗಿ ಗ್ರಾಮದ ಬಸವ ಬಾಲ ಭಾರತಿ ಶಾಲೆಯ ಶಿಕ್ಷಕರ ಕಳೆದ ೧೦ ತಿಂಗಳ ವೇತನವನ್ನು ಯಾವುದೇ ಆದೇಶವಿಲ್ಲದೇ ಬಟವಡೆ ಮಾಡಿ ಇಲ್ಲಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ ತಮ್ಮ ಅಧಿಕಾರವನ್ನು ದುರುಪಯೋಗ ಪಡೆದುಕೊಂಡಿದ್ದು ಇವರನ್ನು ಸೇರಿದಂತೆ ವೇತನ ಬಟವಡೆಗೆ ಸಂಬಂಧಿಸಿದ ಇಲಾಖಾ ನೌಕರರನ್ನು ಕೂಡಲೆ ಅಮಾನತ್ತು ಮಾಡಿ ಎಲ್ಲರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ನ್ಯಾಯವಾದಿ ಚೇತನ ಶಿವಶಿಂಪಿ ಅವರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ, ಜಿಲ್ಲಾ ಪಂಚಾಯತ ಸಿಇಓ ರಾಹುಲ ಸಿಂಧೆ ಹೀಗೆ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಉಪನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಸದರಿ ಶಾಲೆ ವಿದ್ಯಾರ್ಥಿಗಳಿಲ್ಲದೇ ಸುಮಾರು ವರ್ಷಗಳ ಕಾಲ ಮುಚ್ಚಲ್ಪಟ್ಟಿದ್ದು ಸಂಸ್ಥೆಯವರು ತಮ್ಮ ರಕ್ತ ಸಂಬಂಧಿಗಳನ್ನು ಶಿಕ್ಷಕರನ್ನಾಗಿ…
ಡಿಸಿಸಿ ಬ್ಯಾಂಕ್ ಗೆ ರೂ.14.30 ಕೋಟಿ ನಿವ್ವಳ ಲಾಭ :ಸಚಿವ ಶಿವಾನಂದ ಪಾಟೀಲ ವಿಜಯಪುರ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿ ನೂರಾ ನಾಲ್ಕು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಬ್ಯಾಂಕಿನ ಶತಮಾನೋತ್ಸವವನ್ನು ಬರುವ ಜನೇವರಿಯಲ್ಲಿ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರೂ ಆದ ರಾಜ್ಯ ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ನಗರದ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.1919 ರಲ್ಲಿ ಸ್ಥಾಪಿತವಾದ ಈ ಬ್ಯಾಂಕ್ 104 ವರ್ಷಗಳ ನಿರಂತರ, ಸಮರ್ಪಕ ಸೇವೆ ಪೂರ್ಣಗೊಳಿಸಿ ಈಗ 105 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಬ್ಯಾಂಕಿನ ಈಗಿನ ಆಡಳಿತ ಮಂಡಳಿಯು ಬ್ಯಾಂಕಿನ ಶತಮಾನೋತ್ಸವ ನೂತನ ಕಟ್ಟಡ ನಿರ್ಮಾಣಕ್ಕೆ 2019 ರ ಜುಲೈ 28 ರಂದು ಚಾಲನೆ ನೀಡಿದ್ದು, ಈಗ ಭವ್ಯ ಕಟ್ಟಡ ನಿರ್ಮಾಣಗೊಂಡು ಪ್ರಸ್ತುತ ಲೋಕಾರ್ಪಣೆಗೆ ಸಿದ್ಧವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.ಶತಮಾನೋತ್ಸವದ ಸವಿನೆನಪಿನಲ್ಲಿ ನಿರ್ಮಿಸಲಾದ…
