Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿAದಗಿ: ಕೊಪ್ಪಳ ಜಿಲ್ಲೆಯ ಮೂರನೇ ಬಾರಿಗೆ ಕನಕಗಿರಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಶಿವರಾಜ್ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಭೋವಿ ಸಮಾಜದ ಮಹಿಳಾ ಮುಖಂಡೆ ಸುನಂದಾ ಯಂಪುರೆ ಒತ್ತಾಯಿಸಿದ್ದಾರೆ.ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಭೋವಿ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಸಾಮಾಜಿಕವಾಗಿ ತೀರ ಹಿಂದುಳಿದ ದಲಿತ ಸಮುದಾಯವಾಗಿದ್ದು, ಅನೇಕ ಶತಮಾನಗಳಿಂದಲೂ ಶೋಷಣೆ, ಅನ್ಯಾಯ ಮತ್ತು ದೌರ್ಜನ್ಯಕ್ಕೆ ಒಳಗಾದ ಸಮುದಾಯವಾಗಿದ್ದು, ಇಂತಹ ಸಮುದಾಯವನ್ನು ಮುಖ್ಯವಾಹಿನಿಗೆ ತರಬೇಕಾದರೆ ಶಿವರಾಜ್ ತಂಗಡಿಗಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡುವುದು ಬಹಳ ಮುಖ್ಯ ಮುಖ್ಯವಾಗಿದೆ.ಶಿವರಾಜ ತಂಗಡಗಿಯವರು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅದ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ೩ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪಾತ್ರವಹಿಸಿಕೊಂಡಿದ್ದಾರೆ. ಈ ಹಿಂದೆ ಎರಡು ಬಾರಿ ಸಚಿವ ಸ್ಥಾನವನ್ನು ಯಾವುದೇ ಕಳಂಕ ಇಲ್ಲದೇ ಯಶಸ್ವಿಯಾಗಿ ನಿಭಾಯಿಸಿದ್ದು ಇವರ ಪಾರದರ್ಶಕ ಆಡಳಿತಕ್ಕೆ ಕೈಗನ್ನಡಿಯಾಗಿದೆ ಎಂದರು.ಈ ಎರಡು ವಿಷಯಗಳನ್ನು ಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿ ಭೋವಿ ಸಮಾಜವು ಮುಖ್ಯವಾಹಿನಿಗೆ…
ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಪಂಚಮಸಾಲಿ ಸಮಾಜ ಮುಖಂಡರ ಆಗ್ರಹ ವಿಜಯಪುರ: ಉತ್ತರ ಕರ್ನಾಟಕದವರಿಗೆ ಡಿಸಿಎಂ ಸ್ಥಾನ ಕೊಡಬೇಕು, ಈ ಎಲ್ಲ ಹುದ್ದೆಗಳು ದಕ್ಷಿಣ ಕರ್ನಾಟಕ ಭಾಗದವರಿಗೆ ಸೀಮಿತವೇ? ಈ ಹಿಂದಿನ ಸರ್ಕಾರದಲ್ಲಿರುವಂತೆ ಮೂರು ಡಿಸಿಎಂ ಹುದ್ದೆ ಸೃಷ್ಠಿಸಬೇಕು ಎಂದು ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿ ಒತ್ತಾಯಿಸಿದರು.ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕದವರಿಗೆ ಮಾತ್ರ ಡಿಸಿಎಂ ಮೊದಲಾದ ಪ್ರಭಾವಿ ಹುದ್ದೆಗಳು ಸೀಮಿತವಾಗಬಾರದು. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೇವಲ ತುಪ್ಪ ಸವರುವ ಕೆಲಸ ಮಾಡಲಾಗುತ್ತಿದೆ ಎಂಬ ಆತಂಕ ಕಾಡುತ್ತಿದೆ. ಕೂಡಲೇ ಡಿಸಿಎಂ ಹುದ್ದೆ ಸೃಷ್ಠಿಸಿ, ಅದರಲ್ಲೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ನಾಯಕ ಶಿವಾನಂದ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದರು.ಹಿರಿಯ ಶಾಸಕರಾಗಿರುವ ಶಿವಾನಂದ ಪಾಟೀಲರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು, ಇದು ಜನತೆಯ ಆಗ್ರಹ ಸಹ ಹೌದು. ಸಮಸ್ತ ಮಠಾಧೀಶರು ಸಹ ಇದೇ ನಿಲುವು ಹೊಂದಿದ್ದಾರೆ. ಶಿವಾನಂದ ಪಾಟೀಲ ಕೇವಲ ಪಂಚಮಸಾಲಿ ಸಮಾಜಕ್ಕೆ ಮಾತ್ರ…
ವಿಜಯಪುರ: ಬಂಜಾರಾ ಸಮಾಜದ ನಾಯಕ, ವಿಧಾನಪರಿಷತ್ ಸದಸ್ಯ ಪ್ರಕಾಶ ರಾಠೋಡ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಂಜಾರಾ ಸಮಾಜದ ಮುಖಂಡ, ಜಿ.ಪಂ.ಮಾಜಿ ಸದಸ್ಯ ರಾಜಪಾಲ ಚವ್ಹಾಣ ಒತ್ತಾಯಿಸಿದರು.ಶುಕ್ರವಾರ ನಗರದ ಖಾಸಗಿ ಹೊಟೇಲಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿಯನ್ನು ಜಾರಿಗೊಳಿಸಿದ ಅವೈಜ್ಞಾನಿಕ ನಿರ್ಧಾರದ ವಿರುದ್ಧ ಹಾಗೂ ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ಜಾಗೃತಿ ಮೂಡಿಸಿ ಅನೇಕ ಕಡೆ ಸುತ್ತಾಡಿ ಪಕ್ಷದ ಪರ ಪ್ರಬಲವಾಗಿ ಪ್ರಚಾರ ನಡೆಸಿದ ಪ್ರಕಾಶ ರಾಠೋಡರು ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಪ್ರಧಾನ ಪಾತ್ರ ವಹಿಸಿದ್ದಾರೆ, ಸಿದ್ಧರಾಮಯ್ಯ ಅವರ ಬಲಗೈ ಭಂಟನಾಗಿ, ಕಾಂಗ್ರೆಸ್ ನಿಷ್ಠಾವಂತ ಸದಸ್ಯನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.ರಾಜ್ಯದಲ್ಲಿ ೪೫ ಲಕ್ಷಕ್ಕೂ ಅಧಿಕ ಬಂಜಾರಾ ಸಮಾಜದ ಜನರಿದ್ದಾರೆ. ಬಂಜಾರಾ ಸಮಾಜಕ್ಕೆ ಪ್ರಾತಿನಿಧ್ಯ ದೊರಕಿಸುವ ನಿಟ್ಟಿನಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಅವರ ತಂದೆ ದಿ.ಕೆ.ಟಿ. ರಾಠೋಡ ಸಹ ಸಚಿವರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಹೀಗಾಗಿ ಈ ಬಾರಿ ಅವರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದರು. ಈಗಾಗಲೇ ಬಂಜಾರಾ ಸಮಾಜದ…
ವಿಜಯಪುರ: ಕಟ್ಟಿಗೆ ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ.ಟ್ರ್ಯಾಕ್ಟರ್ ಡಿಕ್ಕಿ ಬಳಿಕ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿದೆ. ಕ್ರೂಸರ್ ನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಅಮಸಿದ್ದ ಬಂಡೆ (27) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ದುರ್ಘಟನೆ ಆಗಿದೆ. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
