Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕ್ಯಾನ್ಸರ್ ತಡೆಗಟ್ಟಲು ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಹೇಳಿದರು.ಮೋರಟಗಿ ಸಮುದಾಯ ಆರೋಗ್ಯ ಕೇಂದ್ರ, ಸಿಂದಗಿ ತಾಲೂಕಿನ ಗಬಸಾವಳಗಿ ಆಯುಷ್ಮಾನ್ ಆರೋಗ್ಯ ಕೇಂದ್ರ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಘಟಕದ ಸಹಯೋಗದೊಂದಿಗೆ ಗಬಸಾವಳಗಿ ಗ್ರಾಮದಲ್ಲಿ ಹಮ್ಮಿಕೊಂಡ ವಿಶ್ವ ಕ್ಯಾನ್ಸರ್ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ಯಾನ್ಸರ್ ತಡೆಗಟ್ಟುವಿಕೆ, ಪತ್ತೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸಲು, ಕ್ಯಾನ್ಸರ್ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ಮತ್ತು ಈ ಮಾರಣಾಂತಿಕ ಕಾಯಿಲೆಯ ಜಾಗತಿಕ ಹೊರೆಯನ್ನು ಕಡಿಮೆ ಮಾಡಲು ಇದನ್ನು ಆಚರಿಸಲಾಗುತ್ತದೆ. ನಿಯಮಿತ ಆರೋಗ್ಯ ತಪಾಸಣೆ ದೈಹಿಕ ಚಟುವಟಿಕೆ ಹಾಗೂ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡದೆ ಇರುವದರಿಂದ ರೋಗವನ್ನು ತಡೆಗಟ್ಟಬಹುದು ಎಂದು ಹೇಳಿದರು.ಈ ವೇಳೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಆರ್.ಮಾಶಾಳ, ಹಿರಿಯ ಆರೋಗ್ಯ ಸುರಕ್ಷತಾಧಿಕಾರಿ ಜಿ.ಎಂ.ಸದಬ, ಗಬಸಾವಳಗಿ ಆಯುಷ್ಮಾನ್ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ವಿದ್ಯಾರಾಣಿ ಮಾತನಾಡಿದರು.ಇದೇ ಸಂದರ್ಭದಲ್ಲಿ 60ಕ್ಕೂ ಅಧಿಕ ಜನ…
ನಿವೃತ್ತ ಪ್ರಾಚಾರ್ಯ ಡಾ. ಎಸ್.ಬಿ.ಮಟೋಳಿ ಬಣ್ಣನೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ : ಕಲಾವಿದರಿಂದಲೇ ತುಂಬಿರುವ ಹುನ್ನೂರು ಬಯಲಾಟ ಮತ್ತು ನಾಟಕ ಕಲೆಯಲ್ಲಿ ಪಳಗಿದೆ ಎಂದು ಬನಹಟ್ಟಿ ಎಸ್ಟಿಸಿ ಕಾಲೇಜ್ ನಿವೃತ್ತ ಪ್ರಾಚಾರ್ಯ ಡಾ.ಎಸ್.ಬಿ.ಮಟೋಳಿ ಬಣ್ಣಿಸಿದರು.ಗ್ರಾಮದ ಶ್ರೀ ಗ್ರಾಮದೇವಿ ದೇವಸ್ಥಾನದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ಬಾಗಲಕೋಟೆ ಹಿರಿಯ ಸಾಹಿತಿ ಹಣಮಂತ ತಾಸಗಾಂವಕರ ಅವರ ಹುನ್ನೂರು ಬಯಲಾಟಗಳು ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡೆ, ಶಿಕ್ಷಣ ಇತರೆ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಹುನ್ನೂರು ಗ್ರಾಮದ ಕಲಾವಿದರು ಪ್ರದರ್ಶಿಸುವ ದೀಪಾವಳಿ ಬಯಲಾಟ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದೆ. ದೀಪಾವಳಿ ಬಯಲಾಟದ ಗ್ಯಾರಂಟಿ ಮತ್ತು ಬಾಲಿ ಪಾತ್ರದ ದಿ. ಪ್ರಹ್ಲಾದ ಗುರವ, ಚಿನ್ನಪ್ಪ ಕಾಮಗೊಂಡ ಅವರ ಅಭಿನಯ ಪ್ರೇಕ್ಷಕರಲ್ಲಿ ಹಚ್ಚ ಹಸಿರಾಗಿ ಉಳಿದಿದೆ. ಸಾಂಸ್ಕೃತಿಕವಾಗಿ ಮುಂಚೂಣಿಯಲ್ಲಿರುವ ಗ್ರಾಮದ ಬಯಲಾಟ, ನಾಟಕಗಳ ಕುರಿತು ಪುಸ್ತಕ ಹೊರ ತಂದಿರುವುದು ಔಚಿತ್ಯ ಪೂರ್ಣವಾಗಿದೆ ಎಂದರು.ಕೃತಿ ಪರಿಚಯಿಸಿದ ಹಿರಿಯ ಸಾಹಿತಿ ವಸಂತ ಅಗಸಿಮನಿ ಮಾತನಾಡಿ, ಹುನ್ನೂರಲ್ಲಿ ನಾಟಕ ಸಂಘಗಳು ನಡೆದು ಬಂದ ದಾರಿ, ಗ್ರಾಮದ…
ಉದಯರಶ್ಮಿ ದಿನಪತ್ರಿಕೆಕೊಲ್ಹಾರ: ಸಮಾಜ ಸಂಘಟನೆ ಮಾಡುವದು ಜನರ ಪ್ರೀತಿ, ವಿಶ್ವಾಸ, ನಂಬಿಕೆ ಉಳಿಸಿಕೊಂಡು ಸಾಗುವದು ಇಂದಿನ ದಿನಮಾನಗಳಲ್ಲಿ ಅವಶ್ಯಕವಾಗಿದೆ ಎಂದು ನಿಪ್ಪಾಣಿ ಕ್ಷೇತ್ರದ ಶಾಸಕಿ ಶ್ರೀಮತಿ ಶಶಿಕಲಾ ಜೊಲ್ಲೆ ಹೇಳಿದರು. ಪಟ್ಟಣದ ತೆರಪಿ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ನಂತರ ಕೊಲ್ಹಾರದ ಅವರ ಅಭಿಮಾನಿಗಳು ಹಾಗೂ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿಯವರು ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ನಾಡಿನ ಜನರು ಮೆಚ್ಚುವಂತಹ ಜನಪರವಾದ ಕೊರ್ತೀ ಕೊಲ್ಹಾರ ಸೇತುವೆ ನಿರ್ಮಾಣ, ಕೂಡಗಿ ಎನ್ ಟಿಪಿಸಿ ಸೇರಿದಂತೆ ಹಲವಾರು ಅಭಿವೃದ್ದಿ ಕಾಮಗಾರಿಗಳನ್ನು ಜಾರಿಗೆ ತಂದಿರುವದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದರು. ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ಸಮಾಜದಲ್ಲಿ ಯುವಜನತೆ ಪರಿಶ್ರಮದಿಂದ ತಾವು ಮಾಡುವ ಕಾಯಕದಲ್ಲಿ ನಿರತರಾದಾಗ ಯಶಸ್ವಿ ಹೆಜ್ಜೆಯತ್ತ ದಾಪುಗಾಲು ಹಾಕಲು ಸಾದ್ಯವಾಗುತ್ತದೆ ಎಂದರು. ಜೇನು ಹುಳಗಳು ಗೂಡು ಕಟ್ಟಿ ಸಿಹಿಯನ್ನು ಕೊಡುವಂತೆ ಬದುಕಿನಲ್ಲಿ ನಾವುಗಳು ಕೂಡಾ ಕಹಿ ನೆನಪು ಮರೆತು ಸರ್ವ ಜನರಲ್ಲಿ ಸಿಹಿಯಾದ…
ವಿಶ್ವಪರ್ವ ಕಾರ್ಯಕ್ರಮದಲ್ಲಿ ಅಧ್ಯಕ್ಷ ವಿಶ್ವನಾಥ ಶೇಷಾಚಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ : ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಸಿಬಿಎಸ್ಇ ಶಾಲೆ, ಬಿಎಡ್ ಕಾಲೇಜು ಹಾಗೂ ಎಲ್ ಕೆಜಿ, ಯುಕೆಜಿಯಿಂದಲೇ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಉತ್ಸಕನಾಗಿದ್ದೇನೆ ಎಂದು ಶ್ರೀ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ ಶೇಷಾಚಲ ಅವರು ಹೇಳಿದರು. ಪಟ್ಟಣದಲ್ಲಿ ಶ್ರೀ ವಿಶ್ವಭಾರತಿ ಶಿಕ್ಷಣ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಪರ್ವ 2026 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿಕ್ಷಣ ಅನ್ನೋದು ಆಹಾರ ಇದ್ದಂತೆ. ಒಂದು ದೇಶ ಬಲಿಷ್ಠವಾಗಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು. ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ಶಿಕ್ಷಣ ಮಾಡೆಲ್ ಇದ್ದಂತೆ. ಹೀಗಾಗಿ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಕಳೆದ ಮೂರು ವರ್ಷಗಳಿಂದ ನಾವು ಮೌಲ್ಯಾಧಾರಿತ ಶಿಕ್ಷಣ ನೀಡುತ್ತಾ ಬರುತ್ತಿದ್ದು, ಮಕ್ಕಳಿಗೆ ಯಾವುದರಲ್ಲಿಯೂ ಕೊರತೆ ಆಗದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ. ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ…
ಉದಯರಶ್ಮಿದಿನಪತ್ರಿಕೆ ಚಡಚಣ : ಸಮೀಪದ ಹಾವಿನಾಳ ಗ್ರಾಮದ ಶ್ರೀ ದತ್ತ ಇಂಡಿಯಾ ಶುಗರ್ಸ್ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಹಾನಿ ಸಂಭವಿಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.ಕಾರ್ಖಾನೆಯಲ್ಲಿ ಶೇಖರಿಸಿಟ್ಟಿದ್ದ ಅಪಾರ ಪ್ರಮಾಣದ ಬಗ್ಯಾಸ್ (ಕಬ್ಬಿನ ಸಿಪ್ಪೆ)ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿ ತನ್ನ ಕೆನ್ನಾಲಿಗೆಯಿಂದ ಕ್ಷಣಾರ್ಧದಲ್ಲಿ ಬಾಯಲರ್ ಅಗ್ನಿ ಪ್ರದೀಪನ ಯಂತ್ರೋಪಕರಣಗಳಿಗೂ ಕೂಡ ಬೆಂಕಿ ಆವರಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ನಷ್ಟವಾಗಿರುವ ಶಂಕೆ ವ್ಯಕ್ತವಾಗಿದೆ ನಿಖರ ಹಾನಿಯ ಅಂದಾಜನ್ನು ತಜ್ಞರ ಪರಿಶೀಲನೆಯ ಬಳಿಕ ತಿಳಿದುಬರಲಿದೆ.ಬೆಂಕಿಹೊತ್ತಿಕೊಳ್ಳಲು ಶಾರ್ಟ ಸಕ್ಯೂಟ್ ಅಥವಾ ತಾಂತ್ರೀಕ ದೋಷ ಕಾರಣವಿರಬಹುದು ಅಥವಾ ಕಿಡಿಗೇಡಿಗಳ ಪಾಲು ಇದೆ ಎಂಬುದನ್ನು ತನಿಖೆಯ ನಂತರ ತಿಳಿದು ಬರಲಿದೆ.ಆದರೆ, ಎರಡು ದಿನಗಳ ಹಿಂದೆಯಷ್ಟೇ ಕಬ್ಬು ನುರಿಸಲು ಸಾಗಿಸುವ ಬೆಲ್ಟ್ ತುಂಡಾಗಿದ್ದರಿಂದ ಕಾರ್ಖಾನೆಯ ಎಲ್ಲ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದ್ದರಿಂದ ಕಾರ್ಖಾನೆಯಲ್ಲಿ ಹೆಚ್ಚು ಕಾರ್ಮಿಕರಿಲ್ಲದ್ದರಿಂದ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ, ಭಾರೀ ಪ್ರಮಾಣದ ನಷ್ಟ…
B……ಅತೀ ಶೀಘ್ರದಲ್ಲಿಯೇ ನಗರದಲ್ಲಿ ರೂ.30ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆಗಳಿಗೆ ಚಾಲನೆ: ಶಾಸಕ ಮನಗೂಳಿ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರ ಮತ್ತು ಸಿಂದಗಿ ಮತಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ತಂದು ಅಭಿವೃದ್ಧಿ ಪಡಿಸಲಾಗುತ್ತಿದೆ. ಇನ್ನು ನನ್ನ ಅಧಿಕಾರದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ನಗರದ ಸ್ವಾಮಿ ವಿವೇಕಾನಂದ ವೃತ್ತದಿಂದ ಕನಕದಾಸ ವೃತ್ತದವವರೆಗಿನ ರೂ.2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಡಾಂಬರ್ ರಸ್ತೆ ಹಾಗೂ ವಿದ್ಯುತ್ ದೀಪಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವೇಶ್ವರ ವೃತ್ತದಿಂದ, ಸ್ವಾಮಿ ವಿವೇಕಾನಂದ ವೃತ್ತದವರೆಗೆ, ಚಿಕ್ಕಸಿಂದಗಿ ಬೈಪಾಸ್ದಿಂದ ಅಂಬೇಡ್ಕರ್ ವೃತ್ತದವರೆಗೆ, ಅಂಬೇಡ್ಕರ ವೃತ್ತದಿಂದ ಗಾಂಧಿ ವೃತ್ತದವರೆಗೆ, ಮೊರಟಗಿ ಬೈಪಾಸ್ವರೆಗೆ ಸೇರಿದಂತೆ ಸಿಂದಗಿ ನಗರದ ಸುತ್ತಲೂ ಬೀದಿ ದೀಪಗಳ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.ಹೆಗ್ಗೆರೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ರೂ.1ಕೋಟಿ 15ಲಕ್ಷ ಡಾಂಬರೀಕರಣಕ್ಕೆ ಅನುದಾನ ಮಂಜೂರಾಗಿದೆ. ಸೋಂಪುರ ರಸ್ತೆಯಿಂದ ಹಳೆಯ ಚಾಂದಕವಟೆ ಮಾರ್ಗಕ್ಕೆ ಸೇರುವ ರಸ್ತೆ ಹಾಗೂ ಬಂದಾಳ ರಸ್ತೆಗಳಿಗೆ ಬೀದಿ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಕೃಷಿ ಪತ್ತಿನ ಸಹಕಾರಿ ಸಂಘ ಆಲಮೇಲ ನೂತನವಾಗಿ ಆಯ್ಕೆಯಾದ ಎಲ್ಲಾ ಸದಸ್ಯರಿಗೆ ಬಿಜೆಪಿಯ ಜಿಲ್ಲಾ ಮುಖಂಡರಾದ ಹಾಗೂ KPR ಸಕ್ಕರೆ ಕಾರ್ಖಾನೆಯ ನಿರ್ದೇಶಕರಾದ ಮಲ್ಲಿಕಾರ್ಜುನ ಜೋಗುರ ಇವರು ಇಂದು ಆಲಮೇಲ ಕೆಪಿಆರ್ ಆಫೀಸ್ ನಲ್ಲಿ ಎಲ್ಲಾ ಸದಸ್ಯರಿಗೆ ಗೌರವ ಸನ್ಮಾನ ಸಮಾರಂಭ ನೆರವೇರಿಸಿದರು. ಸಂದರ್ಭದಲ್ಲಿ ಗೊಲ್ಲಾಳ ಉಪ್ಪಿನ ಸಿದ್ದಲಿಂಗ ಸುಬೇದಾರ್ ಬಾಬು ಮೇಟಿ ಮುತ್ತು ನಣದಿ ಪ್ರಶಾಂತ್ ನಾಸಿ ನಾಗರಾಜ್ ಆಳೂರ ಬಸವರಾಜ ನಂದೂರ ಕೃಷ್ಣಕುಮಾರ ಗೌಂಡಿ ವಿಜಯಕುಮಾರ್ ಶ್ರೀ ಗಿರಿ ಹಾಗೂ ಕೆಪಿಆರ್ ಸಿಬ್ಬಂದಿಗಳು ಭಾಗಿಯಾಗಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ : ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಮಂಗಳವಾರ ಬಬಲೇಶ್ವರ ತಾಲೂಕಿನ ಕಾಖಂಡಕಿ ಹಾಗೂ ಕಾರಜೋಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಬಬಲೇಶ್ವರ ತಾಲೂಕಾ ಪಂಚಾಯತಿ ಸಭಾಗಂಣದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಇ-ಹಾಜರಾತಿ, ನರೇಗಾ, ವಸತಿ, ಎಸ್ ಬಿಎಂ,ಇ-ಖಾತಾ, ಗ್ರಂಥಾಲಯ,ಕರ ವಸೂಲಾತಿ ಸೇರಿ ವಿವಿಧ ವಿಷಯಗಳ ಕುರಿತು ಪರಿಶೀಲನೆ ನಡೆಸಿ, ಗ್ರಾಮಗಳ ಅಭಿವೃದ್ಧಿಯಲ್ಲಿ ಪಿಡಿಓಗಳ ಪಾತ್ರ ಮುಖ್ಯವಾಗಿದ್ದು, ನೀರಿಕ್ಷೀತ ಪ್ರಗತಿಗೆ ಶ್ರಮವಹಿಸುವಂತೆಯೂ, ಅದರಲ್ಲೂ,ಪ್ರತಿನಿತ್ಯ ಎಲ್ಲಾ ಅಧಿಕಾರಿ,ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಿ ಇ ಹಾಜರಾತಿ ಮೂಲಕ ಹಾಜರಾತಿ ಸಲ್ಲಿಸಲು ಸೂಚಿಸಿದರು. ಬಬಲೇಶ್ವರ ಕಳೆದ ವರ್ಷ ಉತ್ತಮ ಸಾಧನೆ ಮಾಡಿದ್ದು, ಪ್ರಸಕ್ತ ಸಾಲಿಗೂ ಉತ್ತಮ ಪ್ರಗತಿ ಕಾಣಬೇಕೆಂದು ಸಲಹೆ ನೀಡಿದರು. ತಾಲೂಕಿನ ಕಾಖಂಡಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ, ಆರೋಗ್ಯ ಕೇಂದ್ರದಲ್ಲಿನ ತಪಾಸಣಾ ಕೊಠಡಿ, ಪ್ರಯೋಗಾಲಯ, ಹೆರಿಗೆ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ : ತಾಲೂಕಿನ ಚಿಕ್ಕಪಡಸಲಗಿ ಪುನರ್ವಸತಿ ಕೇಂದ್ರದಲ್ಲಿ ಹೊಸದಾಗಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾರಂಭಿಸಲು ಕೆಪಿಸಿಸಿ ಉಪಾಧ್ಯಕ್ಷ, ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿದರು. ಕ್ಷೇತ್ರದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಚಿಕ್ಕಪಡಸಲಗಿ ಪುನರ್ವಸತಿ ಕೇಂದ್ರದಲ್ಲಿ ಸರ್ಕಾರದಿಂದ ನಿರ್ಮಾಣಗೊಂಡಿರುವ ಸುಮಾರು 12 ರೂಮಗಳ ಸುಸಜ್ಜಿತವಾದ ನೂತನ ಕಟ್ಟಡದ ಜೊತೆಗೆ 3 ಎಕರೆ ಆಟದ ಮೈದಾನ ಹೊಂದಿದೆ. ಜಿಲ್ಲೆಯ ಉಪ ನಿರ್ದೇಶಕರು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಖುದ್ದಾಗಿ ವೀಕ್ಷಣೆ ಮಾಡಿ, ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಬೆಂಗಳೂರು ಇವರಿಗೆ ವರದಿಯನ್ನು ಸಲ್ಲಿಸಿರುತ್ತಾರೆ, ಕಾರಣ ತಾವುಗಳು ಚಿಕ್ಕಪಡಸಲಗಿ ಪುನರ್ ವಸತಿ ಕೇಂದ್ರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪಿಸಲು ಅತ್ಯವಶ್ಯವಾಗಿರುವುದರಿಂದ ತಾವುಗಳು ಅನುಮತಿ ಕೊಡಬೇಕೆಂದು ಮನವಿ ಮಾಡಿದರು. ಜೋತೆಗೆ ಚಿಕ್ಕಪಡಸಲಗಿ ಗ್ರಾಮಸ್ಥರಾದ ಪರಮಗೊಂಡ ದಾನಗೌಡˌ ಗಿರಮಲ್ಲ ನಂದಗಾಂವˌ ಮಲ್ಲು ಪಟ್ಟಣಶೆಟ್ಟಿˌ ಸದಾಶಿವ ದಾನಗೌಡˌ ಮಲ್ಕಯ್ಯ ಮಠಪತಿˌ ಸೇರಿದಂತೆ ಇತರರಿದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಗುರಿಯ ದಾರಿಯಲ್ಲಿ ಅನೇಕ ಅಡೆತಡೆಗಳು ಎದುರಾಗುತ್ತವೆ ಆದರೆ ಅವುಗಳ ಕಡೆ ಗಮನಕೊಡದೆ ಗುರಿಯತ್ತಲೇ ನಿಮ್ಮ ದೃಷ್ಟಿ ಕೇಂದ್ರೀಕರಿಸಬೇಕು ಎಂದು ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.ಸಿಂದಗಿ ತಾಲೂಕಿನ ರಾಂಪೂರ ಪಿಎ ಗ್ರಾಮದ ಜ್ಞಾನ ಸಿಂಚನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಒಂದು ಶಿಕ್ಷಣ ಸಂಸ್ಥೆಯನ್ನು ಕಟ್ಟುವುದು ಸುಲಭದ ಕೆಲಸವಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಇದ್ದುಕೊಂಡು ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳೆಸುವುದು ದೊಡ್ಡ ಸಾಧನೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿದರೆ ಯಶಸ್ಸು ನಿಮ್ಮದಾಗುತ್ತದೆ ಎಂದರು.ಕಾರ್ಯಕ್ರಮವನ್ನು ಬಬಲೇಶ್ವರದ ಶ್ರೀ ಶಾಂತವೀರ ಪಪೂ ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ ಅವಟಿ ಉದ್ಘಾಟಿಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ, ಇದು ಕೇವಲ ಬೀಳ್ಕೊಡುಗೆ ಸಮಾರಂಭವಲ್ಲ. ನಿಮ್ಮ ಬದುಕಿನ ಹೊಸ ಅಧ್ಯಾಯದ…
