Author: editor.udayarashmi@gmail.com

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ೫೦ ಸಾವಿರ ಮತಗಳಿಂದ ಗೆಲ್ಲಬೇಕು ಎಂದು ಪ್ರಾರ್ಥಿಸಿ ತಾಲೂಕಿನ ಹುನಕುಂಟಿ ಗ್ರಾಮದ ಯಲಗೂರೇಶ ಸೀತಿಮನಿ ತಮ್ಮೂರಿನಿಂದ ಯಲಗೂರಿನ ಶ್ರೀ ಹನುಮಾನ ದೇವಸ್ಥಾನದ ಮಾರ್ಗವಾಗಿ ಮುದ್ದೇಬಿಹಾಳ ಪಟ್ಟಣದ ಬಜಾರಿನ ದ್ಯಾಮವ್ವ ದೇವಿ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರಗಳನ್ನು ಸಲ್ಲಿಸಿದರು.ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ, ಗೋವಾ ಕನ್ನಡಿಗರ ಹೋರಾಟ ಸಮೀತಿ ಅಧ್ಯಕ್ಷ ಸಿದ್ದಣ್ಣ ಮೇಟಿ, ಶಿವಶಂಕರಗೌಡ ಹಿರೇಗೌಡರ ಮಾತನಾಡಿ, ಭ್ರಷ್ಠ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆಯಲು ಅಮಾಯಕ ಹಳ್ಳಿಗಳ ಜನತೆ ಕೂಡ ದೇವರ ಮೊರೆಹೋಗುತ್ತಿರುವುದು ನೋಡಿದರೆ ಈಗಾಗಲೇ ಎಲ್ಲ ದೇವರುಗಳ ಆಶೀರ್ವಾದ ಸಿ.ಎಸ್.ನಾಡಗೌಡರಿಗೆ ಆಗಿದೆ ಎಂದರು.ಪ್ರಮುಖರಾದ ಅಶೋಕ ನಾಡಗೌಡ, ಸಿ.ಜಿ.ವಿಜಯಕರ, ಎಚ್.ವಾಯ್.ಪಾಟೀಲ ವಕೀಲರು, ಮಲ್ಲು ಅಪರಾಧಿ ಸೇರಿದಂತೆ ಅನೇಕ ಕಾರ್ಯಕರ್ತರು ಪಟ್ಟಣಕ್ಕೆ ಯಲಗೂರೇಶ ಅವರು ಆಗಮಿಸುತ್ತಿದ್ದಂತೆಯೇ ದೇವಸ್ಥಾನದವರೆಗೆ ಅವರ ಜೊತೆಯೇ ಸಾಗಿ ಪೂಜಾ ವಿಧಾನದಲ್ಲಿ ಸಾಥ್ ನೀಡಿದರು.

Read More

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ 120 ಮೀಟರ್ ಧ್ವಜ್ ಪ್ರದರ್ಶನ-ಮಾನವ ಸರಪಳಿ ನಿರ್ಮಿಸಿ ಜಾಗೃತಿ ವಿಜಯಪುರ: ಪ್ರಜಾಪ್ರಭುತ್ವ ಹಬ್ಬಕ್ಕೆ ಇನ್ನೂ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ಎಲ್ಲ ಅರ್ಹ ಮತದಾರರು ತಮ್ಮ ಪರಿವಾರದ ಅರ್ಹ ಮತದಾರರೊಂದಿಗೆ ಕಡ್ಡಾಯವಾಗಿ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಮನವಿ ಮಾಡಿಕೊಂಡರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಸಹಯೊಗದಲ್ಲಿ ರವಿವಾರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಂಡ ಮಾನವ ಸರಪಳಿ ನಿರ್ಮಾಣ ಹಾಗೂ ವಿನೂತನವಾದ ಬೃಹತ್ ಪ್ರಮಾಣದ ಪ್ರಜಾಪ್ರಭುತ್ವದ ಹಬ್ಬ ಮೇ.10 ಮತದಾನ ದಿನ ಎಂಬ ಶೀರ್ಷಿಕೆಯಡಿಯ 120 ಮೀಟರ್ ಧ್ವಜ ಪ್ರದರ್ಶನಕ್ಕೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ…

Read More

ವಿಜಯಪುರದಲ್ಲಿ ಹಾಡುಹಗಲೇ ನಡೆದ ಶೂಟೌಟ್ ಪ್ರಕರಣ | ಬೆಚ್ಚಿಬಿದ್ದ ನಗರ ಜನತೆ | ಬೆನ್ನಟ್ಟಿ ಕೊಂದ ಹಂತಕರು ವಿಜಯಪುರ: ಮಹಾನಗರ ಪಾಲಿಕೆಯ ಪಕ್ಷೇತರ ಸದಸ್ಯೆಯ ಪತಿ ಹಾಗೂ ರೌಡಿಶೀಟರೋರ್ವನನ್ನು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಶನಿವಾರ ನಗರದ ಚಂದಾಪುರ ಕಾಲೋನಿಯಲ್ಲಿ ನಡೆದಿದೆ.ಹೈದರ ಅಲಿ ನದಾಫ್ ಗುಂಡಿಗೆ ಬಲಿಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ. ಈತನ ಪತ್ನಿ ನಿಶಾತ್ ನದಾಫ್ ಅವರು ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಾರ್ಡ್ ನಂ.19ರ ಪಾಲಿಕೆಯ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ.ರೌಡಿಶೀಟರ್ ಆಗಿದ್ದ ಹೈದರ್ ನದಾಫ್ ಮೇಲೆ ಗುಂಡಿನ ದಾಳಿ‌ ನಡೆದ ಪರಿಣಾಮ ಹೈದರ್ ನದಾಫ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಶನಿವಾರ ಬೆಳಗ್ಗೆ ಮೃತ ಹೈದರ್ ನದಾಫ್ ವಿಜಯಪುರ ನಗರದ ಚಾಂದಪೂರ ಕಾಲೋನಿ ಬಳಿ‌ ಇರುವ ತನ್ನ ನಿವಾಸದಿಂದ ಹೊರಬಂದು ಕಾರು ಹತ್ತುತ್ತಿದ್ದ ವೇಳೆ, ಹೈದರ್ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿ ಕೊಳ್ಳಲು ಹೈದರ್ ಓಡಿ ಹೋಗಿದ್ದಾರೆ. ಆದರೆ…

Read More

ವಿಜಯಪುರದಲ್ಲಿ ಗುಂಡೇಟಿಗೆ ರೌಡಿಶೀಟರ್ ಹತ್ಯೆ ಪ್ರಕರಣ ವಿಜಯಪುರ: ನಗರದಲ್ಲಿ ನಡೆದಿರುವ ಕೊಲೆಯ ಹಿಂದಿನ ಸತ್ಯಾಸತ್ಯತೆ ಹೊರಗೆ ಬರಬೇಕೆಂದರೆ, ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ್ ಅಣ್ಣಿಗೇರಿ ಒತ್ತಾಯಿಸಿದ್ದಾರೆ. ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿರ್ಭೀತಿಯಿಂದ ಓಡಾಡುತ್ತಿರುವ ಗುಂಡಾಗಳನ್ನು ಹದ್ದು ಬಸ್ತಿನಲ್ಲಿಟ್ಟು ಕಠಿಣ ಕ್ರಮ ಕೈಗೊಳ್ಳಬೇಕೆಂದು, ಈಚೆಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದೆವು. ಇಂದು(ಶನಿವಾರ) ಹಾಡು ಹಗಲೇ ಗುಂಡಾಗಳು ಓರ್ವ ವ್ಯಕ್ತಿಯ ಮೇಲೆ ಗುಂಡುಗಳನ್ನು ಹಾರಿಸಿ, ಭೀಕರ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇದರಿಂದ ನಗರದಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ. ಕೊಲೆಯಾದ ವ್ಯಕ್ತಿ ಇತ್ತೀಚಿಗೆ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾರ ವಿರುದ್ಧ ನಿಲ್ಲಿಸಿ, ತನ್ನ ಧರ್ಮ ಪತ್ನಿಯನ್ನು ಗೆಲ್ಲಿಸಿದ್ದ? ಇವನ ಆರು ತಿಂಗಳ ಕಾಲ್ ರೆಕಾರ್ಡ್ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ, ಆಳವಾಗಿ ತನಿಖೆ ಮಾಡಿದರೆ ಸತ್ಯ ಹೊರ ಬೀಳಲಿದೆ. ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಈ ಕೊಲೆ ನಡೆದಿದ್ದು ಸಾಕಷ್ಟು ಅನುಮಾನಗಳಿಗೆ…

Read More

ಇಂಡಿ: ತಳವಾರ, ಹಡಪದ, ಮಡಿವಾಳದಂತಹ ಅನೇಕ ಸಮುದಾಯದ ಮೀಸಲಾತಿಗಾಗಿ ವಿಧಾನಸಭೆಯ ಜೊತೆಗೆ ಕೇಂದ್ರದ ಮೋದಿಜಿಯವರು ಮತ್ತು ಅಮೀತಶಹಾ ಸೇರಿದಂತೆ ಇನ್ನಿತರ ಜೊತೆ ಚರ್ಚಿಸಿ ಮೀಸಲಾತಿ ದೊರೆಯುವಲ್ಲಿ ಶ್ರಮಿಸಿದ್ದೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಪಟ್ಟಣದ ಧನಶೆಟ್ಟಿ ಮಂಗಲ ಕಾರ್ಯಾಲಯದ ಆವರಣದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಕೇಂದ್ರ ಸರಕಾರ ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣ ಪತ್ರ ನೀಡುವಾಗ ರಾಜ್ಯದಲ್ಲಿ ತಾಂತ್ರಿಕ ತೊಂದರೆ ಉಂಟಾಗಿತ್ತು.ಸಿAದಗಿ ಉಪ ಚುನಾವಣೆಯಲ್ಲಿ ಈ ಬಗ್ಗೆ ಭರವಸೆ ನೀಡಿ ತಳವಾರ ಸಮಾಜಕ್ಕೆ ನ್ಯಾಯ ಒದಗಿಸಿದ್ದೇವೆ ಎಂದರು.ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಒದಗಿಸುವಾಗ ಇತರೆ ೨ ಎ ಮೀಸಲಾತಿಗೆ ಅನ್ಯಾಯವಾಗದಂತೆ ಪಂಚಮಸಾಲಿ ಸಮುದಾಯವನ್ನು ೨ ಬಿ, ೨ ಡಿ ಮೀಸಲಾತಿ ಮಾಡಿ ಸೇರಿಸಲಾಗಿದೆ ಎಂದರು.ಗಾಣಿಗೇರ ಸಮುದಾಯಕ್ಕೆ ೨ ಎ ಮೀಸಲಾತಿ ತೆಗೆಯುವ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಬರುವ ದಿನಗಳಲ್ಲಿ ಪಂಚಮಸಾಲಿ,ಗಾಣಿಗ ಸೇರಿದಂತೆ ಎಲ್ಲ ಲಿಂಗಾಯತ ಸಮುದಾಯಗಳಿಗೆ ಒಂದಾಗುವAತೆ ಪ್ರಯತ್ನಿಸುತ್ತೇವೆ. ಯಾವ…

Read More

ಆಲಮೇಲ: ಉಪ ಚುನಾವಣೆಯ ನಂತರ ಸಿಕ್ಕ ೧೬ ತಿಂಗಳ ಅವಧಿಯಲ್ಲಿ ಜನತೆಗೆ ಕೊಟ್ಟ ಭರವಸೆಗಳನ್ನು ಪ್ರಾಮಾಣಿಕವಾಗಿ ಈಡೇರಿಸಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಶಾಸಕ ರಮೇಶ ಭೂಸನೂರ ಹೇಳಿದರು.ಅವರು ಸಮೀಪದ ಹೊಸತಾರಾಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಮಾತನಾಡಿದರು, ಅಲ್ಪ ಅವಧಿಯಲ್ಲಿ ತಳವಾರ ಸಮಾಜಕ್ಕೆ ಎಸ್‌ಟಿ ಸರ್ಟಿಫಿಕೇಟ್ ನೀಡುವದು, ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸುವದು, ಸೇರಿದಂತೆ ಅನೇಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿರುವದರಿAದ ಜನರು ಮತ್ತೆ ನನ್ನ ಕೈ ಬಲಪಡಿಸಬೇಕೆಂದು ಕೇಳಿಕೊಂಡರು.ಮಂಡಲ ಅಧ್ಯಕ್ಷ ಈರಣ್ಣಾ ರಾವೂರ, ಮುಖಂಡ ಮಲ್ಲಿಕಾರ್ಜುನ ಜೋಗೂರ, ಜಿಪಂ ಮಾಜಿಸದಸ್ಯ ಬಿ.ಆರ್.ಎಂಟಮಾನ, ಅಯೂಬ ದೇವರಮನಿ, ವೀರಭದ್ರ ಕತ್ತಿ, ರಾಜಶೇಖರ ಪೂಜಾರ, ಗುರು ತಳವಾರ, ಸಿದ್ದಯ್ಯ ಮಠ, ರೇವಣಸಿದ್ದಯ್ಯ ಹಿರೇಮಠ, ಗಾಲಿಬ ನಾಗಾವಿ, ಅಮರೇಶ ಸಾಲಕ್ಕಿ, ಶಿವು ನಾಗಾವಿ, ಹಣಮಂತ ಹಾಳಕಿ ಇದ್ದರು.ಇದೇ ಸಂದರ್ಭದಲ್ಲಿ ಕಡಣಿ, ಹೊಸತಾವರಖೇಡ, ಹಳೆತಾವರಖೇಡ, ಹಳೆತಾರಾಪುರ ಗ್ರಾಮದಲ್ಲಿ ಪಾದಯಾತ್ರೆಯ ಮೂಲಕ ಮತಯಾಚಿಸಿದರು.

Read More

ವಿಜಯಪುರ: ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮ ಪಂಚಾಯತ ವತಿಯಿಂದ ಮದುವೆಯ ಆಮಂತ್ರಣ ಪತ್ರಿಕೆ ರೀತಿಯಲ್ಲಿ ಮತದಾನದ ಕರೆಯೋಲೆ ಪತ್ರ ತಯಾರಿಸಿ ಮತದಾರರನ್ನು ಜಾಗೃತಿ ಮೂಡಿಸುವ ಮೂಲಕ ವಿನೂತನ ಪ್ರಯೋಗ ಮಾಡಿ ವಿಶಿಷ್ಠ ರೀತಿಯಲ್ಲಿ ಮತದಾನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಆಮಂತ್ರಣ ಪತ್ರಿಕೆಯಲ್ಲಿ , ದಿನದ ವೈಶಿಷ್ಟತೆ ದಿನಾಂಕ, ಮಹೂರ್ತವನ್ನು ಮತಗಟ್ಟೆಯ ವಿಳಾಸ ಸಮೇತ ಉಲ್ಲೇಖಿಸಿ. ಈ ಚುನಾವಣಾ ಉತ್ಸವವನ್ನು ಮೇ-೧೦ರಂದು ಕರ್ನಾಟಕ ಚುನಾವಣಾ ಆಯೋಗ ನಿಶ್ಚಯಿಸುವುದರಿಂದ ಸಹ ಕುಟುಂಬ ಸಮೇತರಾಗಿ ಆಗಮಿಸಿ ತಮ್ಮ ಸ್ವ ಇಚ್ಛೆಯಂತೆ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಭಾರತದ ಭವಿಷ್ಯವನ್ನು ರೂಪಿಸಬೇಕೆಂದು ಆಮಂತ್ರಣ ಪತ್ರಿಕೆಯಲ್ಲಿ ಸಾರ್ವಜನಿಕರಿಗೆ ವಿನಂತಿಸಲಾಗಿದೆ. ಮತದಾರ ಸೆಳೆಯಲು ಗ್ರಾಮ ಪಂಚಾಯಿತಿ ವತಿಯಿಂದ ಮನೆ-ಮನೆಗೆ ಭೇಟಿ ನೀಡಿ, ವಾರದ ಸಂತೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಜನರಿಗೆ ಭೇಟಿಯಾಗಿ ಮತದಾನದ ಕರೆಯೋಲೆ ಪತ್ರ ನೀಡಿ ಆಮಂತ್ರಿಸಿ ಮತದಾನ ಮಾಡುವಂತೆ ಜನರಿಗೆ ವಿನಂತಿಸುವ ಮೂಲಕ ವಿನೂತನವಾಗಿ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿ ಮಹೇಶ ಕಗ್ಗೊಡದವರ್, ತಾಲೂಕು ಐಇಸಿ ಸಂಯೋಜಕರಾದ…

Read More

ನೀರಾವರಿ ವಿಷಯವಾಗಿ ಎಂ.ಬಿ.ಪಾಟೀಲರ ಬದ್ಧತೆ ಪ್ರಶ್ನಾತೀತ ಎಂದ ಮೋಹಕತಾರೆ ವಿಜಯಪುರ: ಡಬಲ್ ಇಂಜಿನ್ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದ್ದು, ಬಿಜೆಪಿ ರಾಜ್ಯ ಸರ್ಕಾರ ಟ್ರಬಲ್ ಇಂಜಿನ್ ಸರ್ಕಾರ ಎಂದು ಮಾಜಿ ಸಂಸದೆ ಹಾಗೂ ಚಿತ್ರನಟಿ ರಮ್ಯಾ ದಿವ್ಯಸ್ಪಂದನ ಲೇವಡಿ ಮಾಡಿದರು. ಶನಿವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಜರಂಗದಳ ಇರಲಿ ಏನೇ ಇರಲಿ ಬ್ಯಾನ್ ಎನ್ನುವುದು ಸರಿಯಲ್ಲ, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮುಕ್ತ ಅವಕಾಶವಿದೆ, ಧಾರ್ಮಿಕ ವಿಷಯವಾಗಿ ಮಾತನಾಡಿದರೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸುವ ಅಧಿಕಾರವನ್ನು ನ್ಯಾಯಾಲಯ ಈಗಾಗಲೇ ನಿರ್ದೇಶನ ನೀಡಿದೆ, ಭಜರಂಗದಳ ಅಷ್ಟೇ ಎಲ್ಲ ಯಾರೇ ಧಾರ್ಮಿಕ ಅರಾಜಕತೆ, ಧಾರ್ಮಿಕ ವಿರೋಧಿ ಹೇಳಿಕೆ ನೀಡುವವರ ಮೇಲೆ ಕ್ರಮವಾಗಬೇಕು ಹೊರತು ಸಂಪೂರ್ಣವಾಗಿ ಬ್ಯಾನ್ ಮಾಡುವುದು ಸರಿಯಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಘಟನೆಗಳಿಗೆ ಅವಕಾಶವಿದೆ, ಆದರೆ ಶಾಂತಿ ಯಾರೇ ಕದಡಿದರೂ ಅದರ ಮೇಲೆ ಕ್ರಮವಾಗಬೇಕು ಎಂದರು. ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುತ್ರರು ಗಾಳಿಯಲ್ಲಿ ಗುಂಡು ಹಾರಿಸುವ ದೃಶ್ಯಗಳು ಮೈ ಜುಂ ಎನಿಸುವಂತಹದ್ದು, ಈ…

Read More

ನಾಗಠಾಣ: ಬಿಜೆಪಿ ಅಭ್ಯರ್ಥಿ ಗೆಲುವು ಸೂರ್ಯ-ಚಂದ್ರರಿರುವುದಷ್ಟೇ ಸತ್ಯ. ಆದರೆ ಕೆಲವರು ವಿನಾಕಾರಣ ಕ್ಷೇತ್ರದಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿ ಚುನಾವಣಾ ಪ್ರಚಾರಕ್ಕೆ ತೊಂದರೆ ಕೊಡುತ್ತಿದ್ದಾರೆ ಎಂದು ಸಂಸದರಾದ ಶ್ರೀ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.ಶನಿವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾರತೀಯ ಜನತಾ ಪಕ್ಷ ಸಾಮಾನ್ಯ ಕಾರ್ಯಕರ್ತನಿಗೆ ಮಣೆ ಹಾಕಿದೆ, ಬಿಜೆಪಿ ಅಭ್ಯರ್ಥಿಯಾಗಿರುವ ಸಂಜೀವ ಐಹೊಳ್ಳಿ ಬಿಜೆಪಿ ಅಭ್ಯರ್ಥಿಯಾಗಿದ್ದು ಇವರು ಒಬ್ಬ ಸಾಮಾನ್ಯ ಬಡ ಕುಟುಂಬದಿAದ ಬಂದ ಪ್ರಾಮಾಣಿಕ ವ್ಯಕ್ತಿಯಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರೀಯ ಸದಸ್ಯರಾಗಿ ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ, ಇಂತಹ ಬೇರುಮಟ್ಟದ ಕಾರ್ಯಕರ್ತನನ್ನು ಗುರುತಿಸಿ ಬಿಜೆಪಿ ಚುನಾವಣೆಗೆ ನಿಲ್ಲಿಸಿದೆ. ಆದರೆ ಐಹೋಳೆಯವರ ಸರಳತೆ, ಪಕ್ಷನಿಷ್ಠೆ ಗುರುತಿಸಿ ನಾಗಠಾಣ ಮತಕ್ಷೇತ್ರದ ಎಲ್ಲ ವರ್ಗದ ಮತದಾರ ಬಾಂಧವರು ಅವರನ್ನು ಬೆಂಬಲಿಸಿ ಅಭೂತಪೂರ್ವ ಜಯಕ್ಕೆ ಪಣ ತೊಟ್ಟಿದ್ದಾರೆ. ಆದರೆ ಕೆಲವೊಂದು ಅತೃಪ್ತ ಆತ್ಮಗಳಿಗೆ ಇದು ನುಂಗಲಾರದ ಬಿಸಿ ತುಪ್ಪವಾಗಿದೆ, ಇಂತಹ ಕೆಲವೊಂದು ಮುಖಂಡರು ಕ್ಷೇತ್ರದಲ್ಲಿ ಸುಳ್ಳು ಸುದ್ದಿ ಹರಡಿಸುವುದು, ಚುನಾವಣೆ…

Read More