Author: editor.udayarashmi@gmail.com

ವಿಜಯಪುರ: ಕಾಂಗ್ರೆಸ್ ನವರು ಯಾರ ಕೈಗೆ ಹಣ ಕೊಟ್ಟಿದ್ದಾರೋ, ಅವರೆಲ್ಲರೂ ಎಲ್ಲೆಲ್ಲಿ ಹಣ ಹಂಚುತ್ತಿದ್ದಾರೆ ಎಂಬ ಬಗ್ಗೆ ನಿಗಾ ಇಡಲು ಜನರನ್ನು ಬಿಟ್ಟಿದ್ದಾರೆ. ಹಣ ಪಡೆದವರು ಹುಷಾರ್ ಆಗಿರಬೇಕು. ಚುನಾವಣೆ ಬಳಿಕ ತೊಂದರೆ ಕೊಡಬಹುದು ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಕಿವಿಮಾತು ಹೇಳಿದರು.ನಗರದಲ್ಲಿ ಶುಕ್ರವಾರ ರಾತ್ರಿ ನಡೆದ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿದ ನಂತರ ಹಿಂದಿನ ಚುನಾವಣೆ ಬಳಿಕ ಮಾಡಿದಂತೆ, ಈ ಬಾರಿಯೂ ಹಣ ಪಡೆದವರ ಮನೆಗೆ ನುಗ್ಗಿ ಹೊಡೆದು ಹಣ ಮರಳಿ ಪಡೆಯುತ್ತಾರೆ ಎಚ್ಚರ ಇರಲಿ ಎಂದರು.ಮುಂದಾಗುವ ಸಮಸ್ಯೆ ಅರಿತ ಹಲವರು ಹಣ ಮರಳಿ ನೀಡಿರುವುದು ತಿಳಿದು ಬಂದಿದೆ. ಗೂಂಡಾಗಿರಿ ಪ್ರವೃತ್ತಿಯ ಕಾಂಗ್ರೆಸ್ ಅಭ್ಯರ್ಥಿ ಈ ಹಿಂದೆಯೂ ನೀಡಿದ ಹಣ, ಬಾಂಡೆ ಸಾಮಾನುಗಳನ್ನು ಹೆದರಿಸಿ, ಒದ್ದು ಮರಳಿ ಪಡೆದ ಉದಾಹರಣೆಗಳಿವೆ. ಇಂಟಲಿಜೆನ್ಸ್ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಸೋಲುವುದು ಖಚಿತವಾಗಿದೆ. ಬಿಜೆಪಿ 12,000-15,000…

Read More

ಢವಳಗಿ: ಸಮೀಪದ ರೂಢಗಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ (ಅಪ್ಪಾಜಿ)ಅವರು ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ಅಪಾರ ಅಭಿಮಾನಿಗಳೊಂದಿಗೆ ಬಹಿರಂಗ ಪ್ರಚಾರ ಮಾಡಿ ಮತ ಯಾಚಿಸಿದರು.ಬಳಿಕ ರೂಢಗಿ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ನಾಡಗೌಡ ಅವರು, ದೇಶದ ಅಭಿವೃದ್ದಿಗಾಗಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರವಿದೆ. ಪ್ರತಿ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ಎರಡುಸಾವಿರ ರೂಪಾಯಿಗಳು,ಪ್ರತಿ ತಿಂಗಳಿಗೆ ಪ್ರತಿ ವ್ಯಕ್ತಿಗೆ 10ಕೆಜಿ ಅಕ್ಕಿ ಪ್ರತಿ ಮನೆಗೂ ಪ್ರತಿ ತಿಂಗಳು ಎರಡು ನೂರು ಯೂನಿಟ್ ವಿದ್ಯುತ್ ಉಚಿತ ಗೃಹ ಜ್ಯೋತಿ ಯೋಜನೆ, ಗ್ಯಾಸ್ ಸಿಲಿಂಡರಗೆ ಐದುನೂರು ರೂಪಾಯಿ, ಜಿ ಎಸ್ ಟಿ ಪರಿಹಾರಕ್ಕೆ ಐದುನೂರು ರೂಪಾಯಿ,ಬೆಲೆ ಏರಿಕೆಯ ಪರಿಹಾರಕ್ಕೆ ಒಂದುಸಾವಿರ ರೂಪಾಯಿಗಳು,ಕೊಡುವ ಸರ್ಕಾರ ಅದು ಕಾಂಗ್ರೇಸ್ ಸರ್ಕಾರ ಸದೃಢ ಹಾಗೂ ಸುರಕ್ಷಿತ ಕುಟುಂಬಕ್ಕಾಗಿ ಕಾಂಗ್ರೇಸನ್ನು ಗೆಲ್ಲಿಸಿ.ಮೊದಲು ಗ್ಯಾಸ್ ಸಿಲಿಂಡರ್ ಬೆಲೆ ನಾಲ್ಕುನೂರ ಐವತ್ತು ರೂಪಾಯಿಗೆ ಸಿಗುವ ಸಿಲಿಂಡರ್ ಇವಾಗ ಹನ್ನೆರಡು ನೂರಐವತ್ತು ರೂಪಾಯಿಗೆ…

Read More

ಸಿಂದಗಿ: ಈ ಬಾರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ರಾಜ್ಯದ ಜನತೆ ಆಯ್ಕೆ ಮಾಡುತ್ತಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಮಹಾಂತೇಶ ಹಟ್ಟಿ ಹೇಳಿದರು.ಶನಿವಾರ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕಕ್ಕೆ ನೂರು ಬಾರಿ ಮೋದಿ ಬಂದರೂ ಕೂಡಾ ರಾಜ್ಯದ ಜನ ಬಿಜೆಪಿಯನ್ನು ಗೆಲ್ಲಲು ಬಿಡುವುದಿಲ್ಲ. ಬೆಲೆ ಏರಿಕೆಗೆ ಜನತೆ ಬೇಸತ್ತಿದ್ದಾರೆ. ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಜನ ಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಿಂದಗಿ ಕ್ಷೇತ್ರದಲ್ಲಿ ಎಂ.ಸಿ.ಮನಗೂಳಿಯವರ ನೀರಾವರಿ ಕಾಂತ್ರಿಯನ್ನು ಮೆಚ್ಚಿ ಈ ಬಾರಿ ಸಿಂದಗಿಯಲ್ಲಿ ಕಾಂಗ್ರೆಸ್ ಪಕ್ಷವು ೩೦ ಸಾವಿರಕ್ಕೂ ಅಧಿಕ ಮತಗಳ ಅಂತರದ ಗೆಲುವನ್ನು ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.ಈ ವೇಳೆ ಶ್ರೀಶೈಲ ಕವಲಗಿ, ಬಾಬಾಸಾಹೇಬ ಜಿಗಳಕರ, ನಿಂಗಣ್ಣ ಬುಳ್ಳಾ, ಸಂತೋಷ ಉಪ್ಪಿನ ಇದ್ದರು.

Read More

ದೇವರಹಿಪ್ಪರಗಿ: ಕಳೆದ ಐದು ವರ್ಷಗಳಲ್ಲಿ ಸಾವಿರಾರು ಕೋಟಿ ರೂ. ಅನುದಾನ ತಂದು ಮತಕ್ಷೇತ್ರದ ಅಭಿವೃದ್ಧಿ ಮಾಡಿರುವುದೇ ನನಗೆ ಶ್ರೀರಕ್ಷೆಯಾಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನನಗೆ ಮತ್ತೊಮ್ಮೆ ಬೆಂಬಲಿಸಿ ಆಶೀರ್ವಾದ ಮಾಡಬೇಕೆಂದು ಶಾಸಕ, ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಮನವಿ ಮಾಡಿದರು.ದೇವರಹಿಪ್ಪರಗಿ ಮತಕ್ಷೇತ್ರದ ಕೋರವಾರ ಗ್ರಾಮದಲ್ಲಿ ವಿಧಾನಸಭಾ ಚುನಾವಣಾ ನಿಮಿತ್ಯ ಬಿಜೆಪಿಯ ನೂರಾರು ಪದಾಧಿಕಾರಿಗಳು, ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ಕಳೆದ ಐದು ವರ್ಷಗಳಲ್ಲಿ ಪ್ರತಿಯೊಂದು ಇಲಾಖೆಯ ಸಚಿವರನ್ನು ಸಂಪರ್ಕಿಸಿ ಅನುದಾನ ತಂದು ಅಭಿವೃದ್ಧಿ ಪಡಿಸಿರುವೆ. ನಮ್ಮ ಕ್ಷೇತ್ರದ ಪ್ರತಿಯೊಬ್ಬ ರೈತನ ಜಮೀನಿಗೆ ನೀರು ಹರಿಯಬೇಕೆಂಬ ಸಂಕಲ್ಪದಿAದ ನೀರಾವರಿ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ತಂದು ಚಾಲನೆ ನೀಡಲಾಗಿದೆ. ಸುಮಾರು ೨.೫೦ ಲಕ್ಷ ಎಕರೆ ಭೂಮಿ ನೀರಾವರಿಯಾಗಲಿದ್ದು, ಬಹುತೇಕ ಎಲ್ಲ ಕೆರೆಗಳಿಗೆ ಕಾಯಕಲ್ಪ ನೀಡಲಾಗಿದ್ದು, ಕಾಲವೆಗಳ ಮುಖಾಂತರ ನೀರು ತುಂಬಿಸಲಾಗಿದೆ. ರಸ್ತೆಗಳ ಸುಧಾರಣೆಗೆ ಸಾಕಷ್ಟು ಅನುದಾನ ನೀಡಲಾಗಿದೆ. ಅದಕ್ಕಾಗಿ ಅಭಿವೃದ್ಧಿ ಪರ್ವ ಮುಂದುವರೆಯಲು ಜಾತಿ ಬೇಧ ಮಾಡದೆ…

Read More

ವಿಜಯಪುರ: ಬಸವಣ್ಣನವರ ಕಾಯಕ ತತ್ವದಡಿ ಜನಸೇವೆ ಮಾಡುತ್ತಿರುವ ಎಂ. ಬಿ. ಪಾಟೀಲರು ಕರ್ನಾಟಕದ ಆಸ್ತಿಯಾಗಿದ್ದಾರೆ ಎಂದು ಖ್ಯಾತ ಚಲನಚಿತ್ರ ನಟಿ ರಮ್ಯ ಹೇಳಿದ್ದಾರೆ. ತಿಕೋಟಾ ತಾಲೂಕಿನ ಜಾಲಗೇರಿ, ಜಾಲಗೇರಿ ಎಲ್.ಟಿ.1, ತಿಕೋಟಾ, ನಿಡೋಣಿ, ಬಬಲೇಶ್ವರಗಳಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಪ್ರಚಾರ ಕೈಗೊಂಡು ರೋಡ್ ಶೋ ಕಾರ್ನರ್ ಮಿಟಿಂಗ್‍ನಲ್ಲಿ ಅವರು ಮಾತನಾಡಿದರು. ಶ್ರೀ ಸಿದ್ಧೇಶ್ವರ ಸ್ವಾಮೀಜಿ ಬೊಗಸೆ ನೀರನ್ನು ಕೇಳಿದರು. ಆದರೆ, ಎಂ. ಬಿ. ಪಾಟೀಲರು ಹೊಳೆಯನ್ನು ಈ ಕಡೆ ಹರಿಸಿ ಜಲಕ್ರಾಂತಿ ಮಾಡಿದ್ದಾರೆ. ಈ ಮೂಲಕ ಜನರ ಜೀವನ ಮಟ್ಟವನ್ನು ಶಾಶ್ವತವಾಗಿ ಸುದಾರಿಸಿದ್ದಾರೆ. ಇಂಥ ನಾಯಕರನ್ನು ಆಶೀರ್ವದಿಸಿ ಗೆಲ್ಲಿಸಿದರೆ ವಿಜಯಪುರ ಜಿಲ್ಲೆ ಅಷ್ಟೇ ಅಲ್ಲ. ಇಡೀ ನಾಡಿಗೆ ಒಳ್ಳೆಯದಾಗಲಿದೆ ಎಂದು ಹೇಳಿದರು. ನಾನು ತಂದೆಯನ್ನು ಕಳೆದುಕೊಂಡಾಗ ಮಂಡ್ಯಕ್ಕೆ ಬಂದಿದ್ದ ಎಂ. ಬಿ. ಪಾಟೀಲರು ನೈತಿಕವಾಗಿ ಧೈರ್ಯ ತುಂಬಿದ್ದರು. ಅಲ್ಲದೇ ಚುನಾವಣೆಯಲ್ಲಿ ನಾನು ಸಂಸತ್ ಸದಸ್ಯೆಯಾಗಲು ಸಹರಿಸಿದ್ದಾರೆ. ಅಷ್ಟೇ ಅಲ್ಲ, ಇಡೀ ನಾಡಿನಾದ್ಯಂತ ಕೆಲಸ ಮಾಡಿ…

Read More

ಬಸ್ ಏರಿ ಮತದಾನ ಕರ ಪತ್ರ ಹಂಚಿದ ಜಿಪಂ ಸಿಇಓ ರಾಹುಲ ಶಿಂಧೆ ವಿಜಯಪುರ: ಕಳೆದ ಚುನಾವಣೆಗಿಂತ ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಮತದಾನ ಪ್ರಮಾಣ ಹೆಚ್ಚಾಗಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಸಂಚರಿಸುವ ಬಸ್‌ಗಳಿಗೆ ಮತದಾನ ಜಾಗೃತಿ ಸ್ವೀಕರ್ಸ್ಗಳನ್ನು ಅಂಟಿಸುವುದು, ಬಸ್ ನಿಲ್ದಾಣದಲ್ಲಿ ಸೇಲ್ಪಿ ಸ್ಟ್ಯಾಂಡ್ ಅಳವಡಿಸಿ, ಕರ ಪತ್ರ ಹಂಚಿ, ಜಾಗೃತಿ ಗೀತೆಗಳನ್ನು ಹಾಡಿ, ಮತದಾನದ ಮಹತ್ವವುಳ್ಳ ಘೋಷಣೆಗಳನ್ನು ಕೂಗಿ ಜನರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರತಿಯೊಬ್ಬ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಮೇ.೧೦ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆಗೆ ತೆರಳಿ ಮತ ಚಲಾಯಿಸುವುದರ…

Read More

ಚಿಮ್ಮಡ: ಚಲನಚಿತ್ರ ನಟಿ ತಾರಾ ಅನುರಾಧ ಚಿಮ್ಮಡ ಗ್ರಾಮದಲ್ಲಿ ಭರ್ಜರಿ ರೋಡ ಷೋ ನಡೆಸಿ ಬಿಜೆಪಿ ಅಭ್ಯರ್ಥಿ ಶಾಸಕ ಸಿದ್ದು ಸವದಿ ಪರ ಮತಯಾಚನೆ ಮಾಡಿದರು.ಸಾಯಂಕಾಲ ನಾಲ್ಕು ಘಂಟೆಗೆ ತೆರೆದ ವಾಹನದಲ್ಲಿ ಗ್ರಾಮಕ್ಕಾಗಮಿಸಿದ ತಾರಾ ಹಾಗೂ ಸಿದ್ದು ಸವದಿ ಅವರಿಗೆ ನೆರೆದ ನೂರಾರು ಜನ ಕಾರ್ಯಕರ್ತರು ಪುಷ್ಪವೃಷ್ಠಿ ಮಾಡುವ ಮೂಲಕ ಅವರನ್ನು ಬರಮಾಡಿಕೊಂಡರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ ಅವರು ಅಭಿವೃದ್ದಿ, ಹಾಗೂ ದೇಶದ ಭವಿಷ್ಯಕ್ಕಾಗಿ ಸಿದ್ದು ಸವದಿಯವರನ್ನು ಬೆಂಬಲಿಸುವAತೆ ಮತದಾರರಲ್ಲಿ ಮನವಿ ಮಾಡಿದರು. ಚಿತ್ರ ನಟಿಯನ್ನು ಕಾಣಲು ಗ್ರಾಮದ ಮಹಿಳೆಯರು ರಸ್ತೆಯುದ್ದಕ್ಕೂ ನಿಂತು ತಾರಾ ಅವರಿಗೆ ಕೈಬೀಸಿದರು. ಗ್ರಾಂ.ಪA. ಅಧ್ಯಕ್ಷ ಆನಂದ ಕವಟಿ, ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಪರಪ್ಪಾ ಪಾಲಭಾವಿ, ವಿಜಯಕುಮಾರ ಪೂಜಾರಿ, ಎಪಿಎಂಸಿ ನಿರ್ದೆಶಕ ಪ್ರಭು ಮುಧೋಳ, ಪರಪ್ಪಾ ನೇಸೂರ, ಗ್ರಾ.ಪಂ. ಸದಸ್ಯ ಮನೋಜ ಹಟ್ಟಿ ಸೇರಿದಂತೆ ಹಲವಾರು ಪ್ರಮುಖರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.

Read More

ಸಿಂದಗಿ: ಮತಕ್ಷೇತ್ರದಲ್ಲಿ ಶಾಸಕ ರಮೇಶ ಭೂಸನೂರ ಅವರ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ಶಕೆ ಆರಂಭವಾಗಿದ್ದು ಅದು ಮುಂದುವರೆಯಲು ಭೂಸನೂರ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕೆಂದು ಬಿಜೆಪಿ ಮುಖಂಡ ಡಾ.ಗೌತಮ್ ಚೌಧರಿ ಮನವಿ ಮಾಡಿದರು.ಶನಿವಾರ ತಾಲೂಕಿನ ಗಬಸಾವಳಗಿ, ಯರಗಲ್ ಕೆ.ಡಿ, ಹಂಚಿನಾಳ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿ ಅವರು ಮಾತನಾಡಿದರು.ಜಾತ್ಯಾತೀತ ನಿಲುವಿನ ರಮೇಶ ಭೂಸನೂರ ಸರ್ವರನ್ನೂ ಸಮಾನವಾಗಿ ಕಾಣುವ ಮನೋಭಾವವುಳ್ಳ ಸರಳ ವ್ಯಕ್ತಿಯಾಗಿದ್ದಾರೆ. ಕಳೆದ ೧೬ತಿಂಗಳ ಅವಧಿಯಲ್ಲಿ ಅತಿ ಹೆಚ್ಚು ಅನುದಾನ ತಂದು ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಸೇವೆಗೆ ತಾವು ಮತ ನೀಡುವ ಮೂಲಕ ಗೆಲ್ಲಿಸಬೇಕೆಂದು ಕೋರಿದರು.ಗ್ರಾಪಂ ಮಾಜಿ ಸದಸ್ಯ ಗಾಲೀಬಸಾಬ ನಾಗಾವಿ ಕರಪತ್ರ ವಿತರಿಸಿದರು.ಗಬಸಾವಳಗಿ ಗ್ರಾಮಸ್ಥರಾದ ಸಾಹೇಬಗೌಡ ಬಳುಂಡಗಿ, ಶಾಂತಗೌಡ ಬಿರಾದಾರ, ಬಂಗಾರೆಪ್ಪಗೌಡ ಬಿರಾದಾರ, ಸಿದ್ದನಗೌಡ ಬಿರಾದಾರ, ರಾಮನಗೌಡ ನಂದರ್ಗಿ, ಬೀರಪ್ಪ ಪೂಜಾರಿ, ಶರಣಗೌಡ ಬಿರಾದಾರ, ಬಸಣ್ಣ ತೇಲಿ, ನಾಗಪ್ಪ ಹೂಗಾರ ಸೇರಿದಂತೆ ಹಲವರಿದ್ದರು. ಬಿಜೆಪಿ ಪರ ಡಾ.ಗೌತಮ್ ಚೌಧರಿ ಪ್ರಚಾರ ಮೋರಟಗಿ: ಸಮೀಪದ ಯರಗಲ್ ಕೆ.ಡಿ ಗ್ರಾಮದಲ್ಲಿ…

Read More

ಮುದ್ದೇಬಿಹಾಳ: ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಸರಳ ಸಜ್ಜನಿಕೆಯ ರಾಜಕಾರಣವನ್ನು ಮೆಚ್ಚಿ ಅವರಿಗೆ ಎಲ್ಲ ಹಿರಿಯ ವಕೀಲರು ಸೇರಿದಂತೆ ಅಂದಾಜು 15೦ ಕ್ಕೂ ಹೆಚ್ಚು ವಕೀಲರು ಬೆಂಬಲಿಸಿದ್ದಾರೆ ಎಂದು ಹಿರಿಯ ವಕೀಲರಾದ ಎಂ.ಎಚ್.ಹಾಲಣ್ಣನವರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ತಿಳಿಸಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ನಾಡಗೌಡರ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ ಮನೆತನದವರಾದ ನಾಡಗೌಡರು ಅಧಿಕಾರಕ್ಕೆ ಬಂದರೆ ನೀರಾವರಿ, ಶಿಕ್ಷಣ, ಮಹಿಳೆಯರ ಆರ್ಥಿಕ ಸುಧಾರಣೆ, ಹಿಂದುಳಿದ ವರ್ಗಗಳ ಕಲ್ಯಾಣ ಸೇರಿದಂತೆ ಮತಕ್ಷೇತ್ರವನ್ನು ಸಾಕಷ್ಟು ಅಭಿವೃದ್ಧಿ ಮಾಡುತ್ತಾರೆ. ಯಾವುದೇ ಸ್ಥಳೀಯ ಸಂಸ್ಥೆಗಳಲ್ಲಿ ಹಸ್ತಕ್ಷೇಪ ಮಾಡುವದಿಲ್ಲ. ಈ ಹಿಂದೆಯೂ ಹೊಸ ನ್ಯಾಯಾಲಯ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಬಿಜೆಪಿ ಸರ್ಕಾರ ಕಡು ಬಡವರನ್ನೂ ನೋಡದೇ ಸಾಸಿವೆ, ಜೀರಿಗೆ ಗೂ ಜಿಎಸ್‌ಟಿ ಹಾಕಿ ಹೈರಾಣು ಮಾಡಿದೆ. ಮುಂದಿನ ದಿನಗಳಲ್ಲಿ ಬಡವರು ಸೇರಿದಂತೆ ಮಧ್ಯಮ ವರ್ಗದ ಜನತೆ ಜೀವನ ನಡೆಸಲು ಕಾಂಗ್ರೇಸ್ ಪಕ್ಷಕ್ಕೆ ಮತ ನೀಡುವುದು ಅನಿವಾರ್ಯವಾಗಿದೆ ಎಂದರು.ಈ…

Read More

ಕಲಕೇರಿ: ಸಮಿಪದ ಕೋರವಾರ ಹಾಗೂ ವಿವಿಧ ಗ್ರಾಮಗಳಲ್ಲಿ ದೇವರಹಿಪ್ಪರಗಿ‌ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಮತಯಾಚನೆ ಮಾಡಿದರು.ಗ್ರಾಮಸ್ಥರು, ಅಭಿಮಾನಿಗಳು ಶಾಸಕ ಸೋಮನಗೌಡರನ್ನು ತೆರೆದ ಜೀಪಿನಲ್ಲಿ ರೋಡ್ ಶೋ ಮಾಡುವ ಮೂಲಕ ಭವ್ಯವಾಗಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಪಕ್ಷದ ನೂರಾರು ಕಾರ್ಯಕರ್ತರು ಇದ್ದರು.

Read More