Author: editor.udayarashmi@gmail.com

ಮುದ್ದೇಬಿಹಾಳ: ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗೋನಾಳ ಎಸ್.ಎಚ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಘಟನೆಯಲ್ಲಿ ಗೋನಾಳ ಗ್ರಾಮದ ನಿವಾಸಿ ಶಾಂತಾ ಇಂಡಿ ಎಂಬುವವರಿಗೆ ತಲೆಗೆ ಕಲ್ಲು ಬಡಿದು ಜೋರಾಗಿ ಪೆಟ್ಟಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ೧೪ ಹೊಲಿಗೆಗಳು ಬಿದ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವಾಗ ಈ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಈ ಕುರಿತು ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ದೂರು ದಾಖಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಇನ್ನುಳಿದವರ ಬಂಧನಕ್ಕಾಗಿ ತನಿಖೆ ನಡೆಸಿದ್ದಾಗಿ ಮಾಹಿತಿ ನೀಡಿದ್ದಾರೆ.ಸರ್ಕಾರಿ ಆಸ್ಪತ್ರೆಗೆ ದೌಡಾಯಿಸಿದ ಸಿ.ಎಸ್.ನಾಡಗೌಡರು ಮತ್ತು ಶಾಂತಗೌಡರು :ಗಾಯಾಳುವನ್ನು ಆಸ್ಪತ್ರೆಗೆ ಸೇರಿಸುತ್ತಿದ್ದಂತೆಯೇ ದೌಡಾಯಿಸಿದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡರು ಮತ್ತು ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಅವರು ಗಾಯಾಳುವಿನ ಯೋಗಕ್ಷೇಮ ವಿಚಾರಿಸಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲು ನೆರವಾದರು.ಈ ವೇಳೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ…

Read More

ದೇವರಹಿಪ್ಪರಗಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದ ಅಲ್ಪಸಂಖ್ಯಾತರು ದೇವರಹಿಪ್ಪರಗಿ: ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಎಲ್ಲರ ಭರವಸೆಯಾಗಿದೆ. ಕ್ಷೇತ್ರದಲ್ಲಿ ಹಿಂದೆAದಿಗಿAತಲೂ ಹೆಚ್ಚಿನ ಕೆಲಸಗಳಾಗಿವೆ ಎಂದು ಬಿಜೆಪಿ ಮುಖಂಡ ಸುರೇಶಗೌಡ ಪಾಟೀಲ ಸಾಸನೂರ ಹೇಳಿದರು.ಪಟ್ಟಣದ ಹೊಸನಗರದಲ್ಲಿ ಗುರುವಾರ ಅಲ್ಪಸಂಖ್ಯಾತರ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಬಿಜೆಪಿ ರಾಜ್ಯದ ಪ್ರಗತಿಗೆ ದಿಟ್ಟ ಹೆಜ್ಜೆ ಇಟ್ಟಿದ್ದು, ಕಳೆದ ಐದು ವರ್ಷಗಳಿಂದ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಕಾಣಬಹುದಾಗಿದೆ. ಅಭಿವೃದ್ಧಿಯೊಂದೇ ನಮ್ಮ ಮೂಲ ಮಂತ್ರವಾಗಿದೆ. ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ ಸಾಕಷ್ಟು ಅನುದಾನ ತಂದು ಕ್ಷೇತ್ರವನ್ನು ಪ್ರಗತಿಪಥದತ್ತ ಕೊಂಡೊಯುವಲ್ಲಿ ಪ್ರಮುಖ ಮಾತ್ರ ವಹಿಸಿದ್ದಾರೆ. ಸಮಗ್ರ ನೀರಾವರಿ, ಉತ್ತಮ ರಸ್ತೆಗಳು, ಮನೆ-ಮನೆಗೆ ಉತ್ತಮ ನೀರು, ಸಿಸಿ ರಸ್ತೆಗಳ ನಿರ್ಮಾಣದಿಂದ ಜೀವನಮಟ್ಟ ಸುಧಾರಿಸುತ್ತಿದೆ. ಕ್ಷೇತ್ರದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಮಾದರಿ ಕ್ಷೇತ್ರ ಮಾಡಲು ಶ್ರಮ ವಹಿಸಿದ್ದು ಇನ್ನೊಂದು ಬಾರಿ ಕ್ಷೇತ್ರದ ಅಭಿವೃದ್ಧಿಗಾಗಿ ತಾವೆಲ್ಲರು ಬೆಂಬಲಿಸಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.ಬಿಜೆಪಿ ಅಲ್ಪಸಂಖ್ಯಾತರ ಮುಖಂಡ ಹುಸೇನ್ ಗೌಂಡಿ,…

Read More

ಕಲಕೇರಿ: ಗ್ರಾಮದ ವಿವಿಧೆಡೆ ಶುಕ್ರವಾರ ಮನೆ ಮನೆಗೆ ತೆರಳಿ ದೇವರಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಅವರ ಪರ ವಿಜಯಲಕ್ಷ್ಮೀ ಸಾಹೇಬಗೌಡ ಪಾಟೀಲ ಅವರು ಮತಯಾಚನೆ ಮಾಡಿದರು.‌ ಬಿಜೆಪಿ ಅಭ್ಯರ್ಥಿ ಸೋಮನಗೌಡರು ಕಳೆದ 5 ವರ್ಷದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.ಈ ವೇಳೆ ಮಹಿಳಾ ಘಟಕದ ಪಧಾಧಿಕಾರಿಗಳು,ಪಕ್ಷದ ನೂರಾರು ಕಾರ್ಯಕರ್ತರು ಇದ್ದರು.

Read More

ವಿಜಯಪುರ: ಕತ್ತಲೆ ಪ್ರತೀಕವಾದ ಅಮವಾಸ್ಯೆಯ ವಿರೋಧವಾಗಿ ಬೆಳಕಿನ ಪ್ರತೀಕವಾದ ಹುಣ್ಣಿಮೆಯು ಬೌದ್ಧ ಧರ್ಮದಲ್ಲಿ ಮಹತ್ವವನ್ನು ಪಡೆಯುತ್ತದೆ. ಗೌತಮ ಬುದ್ಧರ ಹುಟ್ಟಿನಿಂದ ಪರಿನಿಬ್ಬಾಣದವರೆಗೂ ಹುಣ್ಣಿಮೆಯು ಮಹತ್ವವನ್ನು ಪಡೆದಿದ್ದು, ಹುಣ್ಣಿಮೆಯು ಜ್ಞಾನದ ಮತ್ತು ಬೆಳಕಿನ ಸಂಕೇತ ಎಂದು ಪ್ರಗತಿಪರ ಚಿಂತಕ ಡಾ. ಜೆ.ಎಸ್. ಪಾಟೀಲ ಹೇಳಿದರು.ಶುಕ್ರವಾರ ಬೌದ್ಧವಿಹಾರ ನಿರ್ಮಾಣ ಸಮಿತಿ, ಭಾರತೀಯ ಬೌದ್ಧ ಮಹಾಸಭಾದ ಆಶ್ರಯದಲ್ಲಿ ನಗರದ ಸಾರಿಪುತ್ರ ಬುದ್ಧವಿಹಾರದಲ್ಲಿ ಜರುಗಿದ 2546ನೇ ಬುದ್ಧ ಪೂರ್ಣಿಮೆ ಮಹೋತ್ಸವ ಸಮಾರಂಭದಲ್ಲಿ ವಿಶೇಷ ಉಪನ್ಯಾಸಕರಾಗಿ ಅವರು ಮಾತನಾಡಿದರು.ಮಾನವ ಘನತೆಗೆ ಬೇಕಾದ ಬೋಧನೆಗಳನ್ನು ನೀಡಿದ ಭಗವಾನ ಬುದ್ಧರು ಸ್ವಾತಂತ್ರö್ಯ ಚಳುವಳಿಯನ್ನು ಹುಟ್ಟು ಹಾಕಿದರು. ಭಾರತದ ಪರಂಪರೆಯಲ್ಲಿ ವಾರದ ನಡುವೆ, ಜನಗಳ ಮಧ್ಯೆ, ನಕ್ಷತ್ರಗಳಲ್ಲಿ, ಆಹಾರ ಪದಾರ್ಥಗಳಲ್ಲಿ, ಕೀಳು-ಮೇಲು ಎಂಬ ಬೇಧ-ಭಾವವನ್ನು ಮಾಡಲಾಗಿದೆ. ಆದರೆ ಬೌದ್ಧ ಧರ್ಮವು ಶಾಂತಿ ಮತ್ತು ಸಮಾನತೆಯನ್ನು ನೀಡುವ ಮೂಲಕ ಜಗತ್ತಿನಲ್ಲಿಯೇ ಶ್ರೇಷ್ಠ ಧರ್ಮವಾಗಿದೆ ಎಂದು ಹೇಳಿದರು. ಭಾರತದಲ್ಲಿನ ಬೌದ್ಧವಿಹಾರಗಳನ್ನು ಮಂದಿರಗಳನ್ನಾಗಿ ಪರಿವರ್ತಿಸಲಾಯಿತು. ಮಂದಿರಗಳ ಸಂಸ್ಕೃತಿ ಬುದ್ಧ ಪೂರ್ವದಲ್ಲಿರಲಿಲ್ಲ, ಆದರೆ ನಾವುಗಳಿಂದು ಅವರ ಸಿದ್ಧಾಂತಗಳೊAದಿಗೆ ಇದ್ದರೂ…

Read More

ಮುದ್ದೇಬಿಹಾಳ: ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿರುವ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ವಿಜಯಶಾಲಿಯಾಗಬೇಕು ಎಂದು ಪ್ರಾರ್ಥಿಸಿ ತಾಲೂಕಿನ ಸಿದ್ದಾಪೂರ ಗ್ರಾಮದ ಯುವಕರಾದ ಸೋಮನಾಥ ಮಾದರ ಮತ್ತು ಮಲ್ಲು ಮಾದರ ಗ್ರಾಮದ ಮುಖ್ಯ ದ್ವಾರದಿಂದ ಬೂತಾಳ ಸಿದ್ದೇಶ್ವರ ದೇವಸ್ಥಾನದವರೆಗೆ ಮಡಿಯಿಂದ ದೀರ್ಘದಂಡ ನಮಸ್ಕಾರ ಹಾಕಿ ಪ್ರಾರ್ಥಿಸಿದರು.ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಮತಕ್ಷೇತ್ರ ಸರ್ವಾಧಿಕಾರಿಗಳ ಹಿಡಿತದಲ್ಲಿದೆ. ಇದರಿಂದ ಯಾರಿಗೂ ನೆಮ್ಮದಿ ಇಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ ಇವರ ಕೈಯಲ್ಲಿ ಆಡಳಿತ ಸಿಕ್ಕರೆ ಯಾರನ್ನೂ ನೆಮ್ಮದಿಯಿಂದ ಜೀವನ ನಡೆಸಲು ಇವರು ಬಿಡುವದಿಲ್ಲ. ಇವರ ವಿರುದ್ಧ ಹೋರಾಡುವ ಶಕ್ತಿ ನಮ್ಮಲ್ಲಿ ಇಲ್ಲ. ಬಡವರಾದ ನಮಗೆ ಬೂತಾಳ ಸಿದ್ದೆಶ್ವರ ದೇವರ ಮೇಲೆ ಅಪಾರ ನಂಬಿಕೆ ಇದೆ. ಈ ಅಟ್ಟಹಾಸವನ್ನು ಕೊನೆ ಮಾಡಲು ಅವರಿಂದ ಮಾತ್ರ ಸಾಧ್ಯ. ಹಾಗಾಗಿ ನಾವು ಅವರಲ್ಲಿಯೇ ಮೊರೆ ಹೋಗಿ ಶಾಂತಿ, ಸಮಾಧಾನದ ಆಡಳಿತಕ್ಕೆ ಹೆಸರುವಾಸಿಯಾಗಿರುವ ಸಿ.ಎಸ್.ನಾಡಗೌಡ ಅಪ್ಪಾಜಿ ಅವರನ್ನು ಮತಕ್ಷೇತ್ರದ ಎಲ್ಲ ಜನತೆ ಪ್ರಚಂಡ ಬಹುಮತದಿಂದ ಆರಿಸಿ ತರಲಿ…

Read More

ಸಿಂದಗಿ: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅನೇಕ ನ್ಯಾಯವಾದಿಗಳು ವಿವಿಧ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರು, ಇದು ನನ್ನ ಚುನಾವಣೆ ಅಲ್ಲ, ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಚುನಾವಣೆ. ಪಕ್ಷದ ರಾಜ್ಯ ನಾಯಕರಿಗೆ, ರಾಷ್ಟ್ರೀಯ ನಾಯಕರಿಗೆ ಗೌರವ ನೀಡಬೇಕೆಂದರೆ ಸಿಂದಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಾದರೆ ಮಾತ್ರ ಅದು ಸಾಧ್ಯವಾಗುತ್ತದೆ. ಒಂದು ಬಾರಿ ನನಗೆ ಅವಕಾಶ ನೀಡಿ, ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ. ನಮ್ಮ ತಂದೆ ದಿ. ಎಂ.ಸಿ.ಮನಗೂಳಿ ಅವರ ಕನಸಿನ ಅನೇಕ ಅಭಿವೃದ್ಧಿಪರ ಯೋಜನೆಗಳನ್ನು ಕೈಗೆತ್ತಿಕೊಂಡು ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತೇನೆ ಎಂಬ ಪ್ರಾಮಾಣಿಕ ಭರವಸೆ ನೀಡುತ್ತೇನೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಡಿಎಸ್ಎಸ್ ಮುಖಂಡ ವೈ.ಸಿ.ಮಯೂರ್, ವಕೀಲರ ಸಂಘದ ಅಧ್ಯಕ್ಷ ಎಸ್.ಬಿ ದೊಡ್ಡಮನಿ, ಎಸ್.ಎಂ ಪಾಟೀಲ್, ರಾಜಶೇಖರ ಕುಚಬಾಳ, ವಕೀಲರಾದ ರಾಜಶೇಖರ್ ಚೌರ ಮಾತನಾಡಿದರು.ಈ ವೇಳೆ ವಕೀಲರಾದ ಆರ್.ಎಮ್ ಚೌರ, ಎಸ್.ಬಿ ದೊಡಮನಿ, ಎಸ್.ಎಮ್.ಪಾಟೀಲ, ಎಸ್.ಬಿ…

Read More

ಚಡಚಣ: ನಾಗಠಾಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಐಹೊಳ್ಳಿ ಪರ ಚಲನಚಿತ್ರ ನಟಿ ಶ್ರುತಿ ಅವರು ತೆರೆದ ವಾಹನದಲ್ಲಿ ಚಡಚಣ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ರೋಡ್ ಶೋ ನಡೆಸಿದರು.ನಂತರ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ರಾಮನ ಭಕ್ತ ಬಜರಂಗಬಲಿಯ ಆಶೀರ್ವಾದದಿಂದ ಶಕ್ತಿಶಾಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರೋದು ಖಚಿತ. ಸಾಮಾನ್ಯ ಮತ್ತು ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಟಿಕೇಟ್ ನೀಡುವ ಪಕ್ಷ ಯಾವುದಾದರು ಇದ್ದರೆ ಅದು ಬೆಜೆಪಿಯಲ್ಲಿ ಮಾತ್ರ ಸಾಧ್ಯ. ಅಂತಹ ಸಾಮಾನ್ಯ ಕಾರ್ಯಕರ್ತ ಸಂಜೀವ ಐಹೊಳ್ಳಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದಾರೆ. ಅವರನ್ನು ಪ್ರಚಂಡ ಬಹುಮತದಿಂದ ಆರಿಸಿ ತಂದು ಬಿಜೆಪಿಯ ಕಾರ್ಯಕರ್ತರ ಶಕ್ತಿ ತೋರಿಸಬೇಕು. ಚಹಾ ಮಾರುವ ಒಬ್ಬ ಸಾಮಾನ್ಯ ಬಿಜೆಪಿಯ ಕಾರ್ಯಕರ್ತ ಮೋದಿಜಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡಿರುವುದು ಬಿಜೆಪಿ ಪಕ್ಷ ಎಂದರು.ಕಾಂಗ್ರೆಸ್ ಕಸ ಇದ್ದರೆ ರೈತರ ಜಮೀನು ನಾಶವಾಗುತ್ತದೆ. ಹಾಗೆಯೇ ಕಾಂಗ್ರೆಸ್ ಪಕ್ಷ ಇದ್ದರೆ ದೇಶ…

Read More

ವಿಜಯಪುರ: ಎಂ.ಬಿ.ಪಾಟೀಲರು ಕಾಮಧೇನುವಿದ್ದಂತೆ. ಅವರನ್ನು ಬೆಂಬಲಿಸಿ ಆಯ್ಕೆ ಮಾಡಿದರೆ ಮತಕ್ಷೇತ್ರ ಬಂಗಾರದ ಬಬಲೇಶ್ವರ ಆಗಲಿದೆ ಎಂದು ರೈತ ಮುಖಂಡ ಚನ್ನಪ್ಪ ಕೊಪ್ಪದ ಹೇಳಿದರು. ಬಬಲೇಶ್ವರ ತಾಲೂಕಿನ ದಾಶ್ಯಾಳದಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಿರುಪಯುಕ್ತ ಜಾನುವಾರುಗಳಿಗೆ ಮೇವು ಹಾಕಿ ಪ್ರಯೋಜನವಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು. ಎಂ. ಬಿ. ಪಾಟೀಲರ ಬದ್ಧತೆಯಿಂದಾಗಿ ವಿಜಯಪುರ ಜಿಲ್ಲೆ ಮತ್ತು ಬಬಲೇಶ್ವರ ಮತಕ್ಷೇತ್ರ ನಂದನವನವಾಗಿವೆ. ಬರಮುಕ್ತವಾಗಿರುವ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಸಹಾಯ ಮಾಡುತ್ತಿರುವ ಅವರು, ವಿಜಯಪುರದಲ್ಲಿ ಕಿತ್ತೂರ ರಾಣಿ ಚನ್ನಮ್ಮ ಸಮುದಾಯ ಭವನ ನಿರ್ಮಾಣಕ್ಕೆ ರೂ. 3 ಕೋ. ಅನುದಾನ ನೀಡಿದ್ದಾರೆ. ವಿಜಯಪುರ ನಗರದಲ್ಲಿ ಬಸ್ ನಿಲ್ದಾಣದೊಳಗೆ ಕಿತ್ತೂರ ರಾಣಿ ಚನ್ನಮ್ಮ ವೃತ್ತ ನಿರ್ಮಿಸಲು ಸಹಾಯ ಮಾಡಿದ್ದಾರೆ. ಆದರೆ, ಬಿಜೆಪಿಯವರು ನಮ್ಮ ಜಗದ್ಗುಗುರುಗಳನ್ನು ಸತಾಯಿಸಿ ಪಾದಯಾತ್ರೆ ಮಾಡುವಂತೆ ಮಾಡಿ 2ಡಿ ಮೀಸಲಾತಿ ನೀಡಿದ್ದಾರೆ. ಈಗ ಅದಕ್ಕೂ ಕೂಡ ಸುಪ್ರೀಂ ಕೋರ್ಟ…

Read More

ಇಂಡಿ : ರಸ್ತೆ, ಶಿಕ್ಷಣ ಗುಣಮಟ್ಟದ ಸುಸಜ್ಜಿತ ಆಸ್ಪತ್ರೆ ಹಾಗೂ ಮೂಲಭೂತ ಸೌಕರ್ಯದಿಂದ ಇಂಡಿ ಮತಕ್ಷೇತ್ರ ವಂಚಿತವಾಗಿದೆ ಎಂದು ಮಾಜಿ ಶಾಸಕ ರವಿಕಾಂತ್ ಪಾಟೀಲ ದೂರಿದರು. ತಾಲ್ಲೂಕಿನ ಅಗರಖೇಡ ಗ್ರಾಮದ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತಾನಾಡಿದರು.ಸುಮಾರು ಹತ್ತು ವರ್ಷಗಳ ಅವಧಿಯಲ್ಲಿ ಭೀಮಾತೀರ ಸಂಪೂರ್ಣವಾಗಿ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಆರೋಪಿಸಿದರು.ಇದೇ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಡಿ ಪಾಟೀಲ ಮಾತಾನಾಡಿ, ಭೀಮಾ ತೀರದ ಬಹುತೇಕ ಗ್ರಾಮಗಳಲ್ಲಿ ಪ್ರವಾಹದ ಕಾಲದಲ್ಲಿ ಹಲವಾರು ಸಮಸ್ಯೆಗಳು ಇದ್ದು, ನಾನು ಕಣ್ಣಾರೆ ಕಂಡಿದ್ದೇನೆ. ಅಂತಹ ಸಮಸ್ಯೆಗಳು ಪದೆ ಪದೆ ಉದ್ಬವಾಗದಂತಿರಲು ಈ ಬಾರಿ ಜೆಡಿಎಸ್ ಪಕ್ಷಕ್ಕೆ ನಿಮ್ಮ ಮತ ನೀಡಬೇಕು. ಖಚಿತವಾಗಿ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಹೇಳಿದರು.ಮುಖಂಡರಾದ ನೀಲಕಂಠ ಸಾವಳಗಿ, ನಾಗೇಶ ತಳಕೇರಿ, ಶ್ರೀಶೈಲಗೌಡ ಪಾಟೀಲ, ಅಯೂಬ್ ನಾಟೀಕರ, ಡಾ ರಮೇಶ ರಾಠೋಡ ಮಾತನಾಡಿದರು. ವೇದಿಕೆ ಮೇಲೆ ಶಿವಾನಂದಗೌಡ ಪಾಟೀಲ, ಸದ್ದಾಂ ಅರಬ್,…

Read More

ಒಳಮೀಸಲಾತಿ, ಐತಿಹಾಸಿಕ ನಿರ್ಣಯ | ಕೇಂದ್ರ ಸಚಿವ ಎಲ್.ಮುರುಗನ್ ಹೇಳಿಕೆ ವಿಜಯಪುರ: ಸಾಮಾಜಿಕ ನ್ಯಾಯದ ಬದ್ಧತೆಯೊಂದಿಗೆ ನ್ಯಾ.ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಮೂಲಕ ರಾಜ್ಯ ಸರ್ಕಾರ ಐತಿಹಾಸಿಕ ನಿರ್ಣಯ ಸ್ವೀಕರಿಸಿದ್ದು, ಪಂ.ದೀನದಯಾಳ ಉಪಾಧ್ಯಾಯರ ಅಂತ್ಯೋದಯದ ಆಶಯವನ್ನು ಸಾಕಾರಗೊಳಿಸಿದೆ ಎಂದು ಕೇಂದ್ರ ಮೀನುಗಾರಿಕೆ, ವಾರ್ತಾ-ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಹೇಳಿದರು.ಶುಕ್ರವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಸಾಮಾಜಿಕ ನ್ಯಾಯದ ರಿಯಲ್ ಹೀರೋ ಬಸವರಾಜ ಬೊಮ್ಮಾಯಿ ಅವರ ಸಾಮಾಜಿಕ ನ್ಯಾಯ ಸಾಕಾರಗೊಳಿಸಲು ಬಿಜೆಪಿ ಬದ್ಧವಾಗಿದ್ದು, ಕೇಂದ್ರ ಸಚಿವ ಸಂಪುಟದಲ್ಲಿಯೂ ಸಹ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಿದೆ ಎಂದರು.ಬಿಜೆಪಿ ಎಸ್.ಸಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಮಾತನಾಡಿ, ಬಿಜೆಪಿ ದಲಿತ ಪರವಾದ ಪಕ್ಷವಾಗಿದ್ದು, ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಒಳಮೀಸಲಾತಿಯ ಕೂಗಿಗೆ ಸ್ಪಂದಿಸಿದ್ದು ಬಿಜೆಪಿ. ಜೇನು ಕಡಿಸಿಕೊಂಡು ಜೇನಿನ ಸವಿಯನ್ನು ದಲಿತ ಸಮುದಾಯಗಳಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಉಣಬಡಿಸಿದೆ ಎಂದರು.ತೆಲಂಗಾಣ-ಆAಧ್ರಪ್ರದೇಶದ ಹಿರಿಯ ಹೋರಾಟಗಾರ ಮಂದಾಕೃಷ್ಣ ಮಾದಿಗ…

Read More