Author: editor.udayarashmi@gmail.com

ವಿಜಯಪುರ: ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರು ಕಡಿಮೆ ಇದ್ದರೂ ವಿಶೇಷವಾಗಿ ಟಾರ್ಗೆಟ್ ಮಾಡಿ ಎಐಎಂಐಎA ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಎಂದು ಹೇಳಿಕೊಳ್ಳುವ ಮೌಲಾನಾ ಒಬ್ಬರು ಇದರ ಹಿಂದೆ ಇದ್ದಾರೆ, ನಮ್ಮ ಪಕ್ಷದವರೂ ಅವರ ಹಿಂದೆ ಇದ್ದಾರೆ ಎಂದು ಭಾಸವಾಗುತ್ತದೆ. ಚುನಾವಣೆ ನಂತರ ಎಲ್ಲವನ್ನೂ ಬಹಿರಂಗಪಡಿಸುವೆ ಎಂದು ಬಸವನ ಬಾಗೇವಾಡಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಬಾಹುಳ್ಯ ಮತದಾರರಿರುವ ಕ್ಷೇತ್ರದಲ್ಲಿಯೇ ಎಐಎಂಐಎಂ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ, ಆದರೆ ಬಸವನ ಬಾಗೇವಾಡಿಯನ್ನು ವಿಶೇಷ ಟಾರ್ಗೆಟ್ ಮಾಡಿ ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ನಮ್ಮವರೇ ಕೆಲವೊಬ್ಬರು ಇವರ ಹಿಂದೆ ಇದ್ದಾರೆ, ಚುನಾವಣೆ ನಂತರ ಎಲ್ಲವನ್ನೂ ಬಹಿರಂಗಪಡಿಸುವೆ ಎಂದರು.ನನ್ನನ್ನು ಸೋಲಿಸಬೇಕೆಂದು ನನ್ನ ವಿರುದ್ಧ ವ್ಯವಸ್ಥಿತ ಹುನ್ನಾರ ನಡೆದಿದೆ. ಕುತಂತ್ರ ರಾಜಕಾರಣ ಏನೇ ನಡೆದರೂ ಜನತೆ ನನ್ನ ಕೈ ಬಿಡೊಲ್ಲ ಎಂಬ ವಿಶ್ವಾಸ ನನಗಿದೆ. ಈ ರೀತಿಯ ರಾಜಕಾರಣ ಕೊನೆಯಾಗಬೇಕು. ಇಡೀ ಜಿಲ್ಲೆಯಲ್ಲಿ ನನ್ನ ಅಭಿಮಾನಿಗಳಿದ್ದಾರೆ, ನಂತರ…

Read More

ಆಲಮೇಲ: ಕ್ಷೇತ್ರದ ಅಲ್ಪಸಂಖ್ಯಾತರ ಹಿತರಕ್ಷಣೆಗೆ ತಾವು ಸದಾ ಬದ್ಧರಿದ್ದು ತಮ್ಮನ್ನು ಮುಕ್ತ ಮನಸ್ಸಿನಿಂದ ಬೆಂಬಲಿಸಿ ಚುನಾವಣೆಯಲ್ಲಿ ಗೆಲ್ಲಿಸುವಂತೆ ಬಿಜೆಪಿ ಅಭ್ಯರ್ಥಿ, ಶಾಸಕ ರಮೇಶ ಭೂಸನೂರ ಮನವಿ ಮಾಡಿದರು.ಆಲಮೇಲದ ಜಾತಗಾರ ಓಣಿಯಲ್ಲಿ ನಡೆದ ಅಲ್ಪಸಂಖ್ಖಾತರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಅಧಿಕಾರಾವಧಿಯಲ್ಲಿ ಅಲ್ಪಸಂಖ್ಯಾತರಿಗೆ ಕೂದಲೆಳೆಯಷ್ಟೂ ನೋವಾಗದಂತೆ ನಡೆದುಕೊಂಡಿರುವೆ. ತಮ್ಮ ಗಲ್ಲಿಗಳಲ್ಲಿ ಒಂದು ಗೇಣು ಜಾಗ ಉಳಿಸದಂತೆ ಸಿಸಿ ರಸ್ತೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.ಬಿಜೆಪಿ ಮುಖಂಡ ಅಯೂಬ ದೇವರಮನಿ ಮಾತನಾಡಿ, ಬಾಬರಿ ಮಸೀದಿ ಧ್ವಂಸಗೊಂಡಿದ್ದು ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಎಂಬುದನ್ನು ಮುಸ್ಲಿಂ ಬಂಧುಗಳು ಮರೆಯಬಾರದು. ತಾಲೂಕಿನ ಅಲ್ಸಂಖ್ಯಾತರೆಲ್ಲ ನಮ್ಮ ಸಮಾಜದ ಹಿತೈಷಿ ಶಾಸಕ ಭೂಸನೂರ ಅವರನ್ನು ಬೆಂಬಲಿಸಬೇಕೆಂದು ಕೋರಿದರು.ಬಿಜೆಪಿ ಮುಖಂಡ ಡಾ.ಗೌತಮ ಚೌಧರಿ ವೇದಿಕೆ ಮೇಲಿದ್ದರು.ಹೆಚ್ಚಿನ ಸಂಖ್ಯೆಯಲ್ಲಿದ್ದ ಮಹಿಳೆಯರು ತಮ್ಮ ಹಲವು ಬೇಡಿಕೆಗಳನ್ನು ಶಾಸಕರ ಮುಂದಿರಿಸಿ ಅವರಿಂದ ಭರವಸೆ ಪಡೆದರು.ಇದೇ ಸಂದರ್ಭದಲ್ಲಿ ಅನೇಕ ಮುಸ್ಲಿಂ ಯುವಕರು ಬಿಜೆಪಿಗೆ ಸೇರ್ಪಡೆಗೊಂಡರು.

Read More

06 ತಾಲೂಕು ವ್ಯಾಪ್ತಿಯಲ್ಲಿ 300ಕ್ಕೂ ಅಧಿಕ ಕೀಲೋಮೀಟರ್ ಸಂಚಾರ | ಡಿಸಿ ದಾನಮ್ಮನವರ ಶ್ಲಾಘನೆ ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವಿಜಯಪುರ ಇವರ ಸಹಯೋಗದಲ್ಲಿ ಮತದಾನ ಜಾಗೃತಿ ಹಮ್ಮಿಕೊಂಡ ಸೈಕಲ್ ಜಾಥಾ ಅಭಿಯಾನ ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಮಾರೋಪಗೊಂಡಿತು.ಮತದಾನ ಜಾಗೃತಿಗಾಗಿ ಹಮ್ಮಿಕೊಂಡ ಸೈಕಲ್ ಜಾಥಾವು ಜಿಲ್ಲೆಯ ವಿವಿಧ ತಾಲೂಕುಗಳಿಗೆ ಮತ್ತು ಗ್ರಾಮಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಿತು. ಈ ಸೈಕಲ್ ಜಾಥಾ ಬಸವನ ಬಾಗೇವಾಡಿ, ನಿಡಗುಂದಿ, ಮುದ್ದೇಬಿಹಾಳ, ತಾಳಿಕೋಟೆ, ಸಿಂದಗಿ ಮತ್ತು ದೇವರ ಹಿಪ್ಪರಗಿ ತಾಲೂಕುಗಳಲ್ಲಿ ಸಂಚರಿಸಿ, ಜಿಲ್ಲೆಯ ೩೦ಕ್ಕೂ ಹೆಚ್ಚಿನ ಸ್ಥಳದಲ್ಲಿ ಕಾರ್ಯಕ್ರಮ ನಡೆಸಿ ಮತದಾರರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಿ ಇಂದು ನಗರದಲ್ಲಿ ಮುಕ್ತಾಯವಾಯಿತು.ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ವಿಜಯಮಹಾಂತೇಶ ದಾನಮ್ಮನವರ ಅವರು ಎಲ್ಲ ಸೈಕಲಿಸ್ಟ್ಗಳಿಗೆ ಸನ್ಮಾನಿಸಿ, ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ವಿವಿಧ ಜಾಗೃತಿ…

Read More

ಬಿಸಿಲ ತಾಪಕ್ಕೆ ಜಾನುವಾರು ನೀರು ಸೀಗದೇ ತತ್ತರ | ರೈತರಿಂದ ನೀರಿಗಾಗಿ ಹೋರಾಟ ವಿಜಯಪುರ : ಮೊದಲಿನಿಂದಲು ಬೆಸಿಗೆ ವೇಳೆ ಜಾನುವಾರುಗಳಿಗೆ ಕುಡಿಯಲು ನೀರಿಗಾಗಿ ಉರಿ ಬಿಸಿಲಿನಲ್ಲಿ ಕುಳಿತು ಅನೇಕ ಬಾರಿ ಹೋರಾಟ ಮಾಡಿ, ಹಲವಾರು ಬಾರಿ ಮನವಿ ಸಲ್ಲಿಸಿದರು ಗೋಳಾಟ ತಪ್ಪಿಲ್ಲ, ವಿಜಯಪುರ ಜಿಲ್ಲೆಯ ಕಾಲುವೆಗಳಿಗೆ ನೀರು ಹರಿಸದೆ ನಾರಾಯಣಪುರ ಕಾಲುವೆಗೆ ನೀರು ಹರಿಸುತ್ತಿರುವುದು ಖಂಡನೀಯ, ವಿಜಯಪುರ ಜಿಲ್ಲೆಯ ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟದ ಕೋಲಾರ ತಾಲುಕಿನ ಅಧ್ಯಕ್ಷರಾದ ಸೋಮು ಬಿರಾದಾರ ರೈತರೊಡನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. ಜಿಲ್ಲೆಯ ಅನೇಕ ರೈತರು ತಮ್ಮ ಬೆಲೆಬಾಳುವ ಫಲವತ್ತಾದ ಭೂಮಿಯನ್ನು ಕಳೆದುಕೊಂಡು ಆಲಮಟ್ಟಿ ಜಲಾಶಯಕ್ಕೆ ಹಾಗೂ ಎನ್.ಟಿ.ಪಿ.ಸಿ ಸೇರಿದಂತೆ ಕೆ.ಐ.ಡಿ.ಬಿ ಗೆ ಸಾವಿರಾರು ಎಕರೆ ಜಮೀನು ಕಳೆದುಕೊಂಡು ಜಿಲ್ಲೆಗೆ ನೀರಾವರಿ ಆಗುವ ಭರವಸೆಯನ್ನು ಹೊಂದಿದ ರೈತರಿಗೆ ಸರಿಯಾದ ಸಮಯಕ್ಕೆ ನೀರು ಸಿಗದೇ ಕಂಗಾಲಾಗಿರುವ ರೈತ ಇದ್ದ ಅಲ್ಪ ಸ್ವಲ್ಪ…

Read More

ಕಲಕೇರಿ: ಗ್ರಾಮದ ಅಂಬೇಡ್ಕರ್ ವ್ರತ್ತದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ‌ ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಶಾಸಕ ಶರಣಪ್ಪ ಸುಣಗಾರ ಮತಯಾಚನೆ ಮಾಡಿದರು‌.ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಲಂಕೃತ ತೆರೆದ ವಾಹನದಲ್ಲಿ ಮೆರವಣಿಗೆಯೊಂದಿಗೆ ರೋಡ್ ಶೋ ನಡೆಸಿದರು.ಗ್ರಾಮದ ಅಂಬೇಡ್ಕರ್ ವೃತ್ತ, ಅಸ್ಕಿ ರಸ್ತೆ, ಹನುಮಾನ ದೇವಸ್ಥಾನ, ವಂಕಟೇಶ್ವರ ನಗರ, ಟಿಪ್ಪುಸುಲ್ತಾನ ಚೌಕ್ ಮಾರ್ಗವಾಗಿ ಮುಖ್ಯ ಬಜಾರದವರೆಗೆ ಮೆರವಣಿಗೆಯಲ್ಲಿ ತೇರಳಿ ನಂತರ ಅಲ್ಲಿ ಬಹಿರಂಗ ಸಭೆಯನ್ನು ನಡೆಸಲಾಯಿತು.‌ ಈ ವೇಳೆ ಕಾಂಗ್ರೇಸ್ ಅಭ್ಯರ್ಥಿ ಶರಣಪ್ಪ ಸುಣಗಾರ ಮಾತನಾಡಿ, ಬಿಜೆಪಿ ಸರಕಾರದ ದುರಾಡಳಿತದಿಂದ ಜನ ಬೇಸತ್ತು ಹೋಗಿದ್ದು, ಈ ಬಾರಿ ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ, ಪೊಳ್ಳು ಭರವಸೆಗಳನ್ನು ನೀಡಿ ಜನರಿಗೆ ದಾರಿ ತಪ್ಪಿಸುವ ಕೆಲಸವನ್ನು ಮಾಡುವುದರಲ್ಲಿ ಬಿಜೆಪಿಯವರು ನಿರತರಾಗಿದ್ದಾರೆ. ಆದ್ದರಿಂದ ಈ ಬಾರಿ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.ಕಾಂಗ್ರೇಸ್ ಪಕ್ಷದ ಮುಖಂಡರಾದ ಡಾ.ಪ್ರಭುಗೌಡ ಲಿಂಗದಳ್ಳಿ ಚಬನೂರ, ಸುಭಾಷ ಛಾಯಾಗೋಳ, ಬಿ ಎಸ್ ಪಾಟೀಲ ಯಾಳಗಿ,…

Read More

ಚಿಮ್ಮಡ: ಭ್ರಷ್ಟಾಚಾರ, ಮಹಿಳೆಯರ ಅಸಹಾಯಕರ ಮೇಲೆ ದಬ್ಬಾಳಿಕೆ ನಡೆಸುವುದೇ ಮೂಲಮಂತ್ರವಾಗಿಸಿಕೊAಡಿರುವ ಬಿಜೆಪಿ ಆಟ ಇನ್ನು ನಡೆಯುವುದಿಲ್ಲವೆಂದು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಕ್ಷಿತಾ ಈಟಿ ಹೇಳಿದರು.ಗುರುವಾರದಂದು ಚಿಮ್ಮಡ ಗ್ರಾಮದ ಪ್ರಮುಖ ಬೀದಿ, ವಿವಿಧ ವಾರ್ಡಗಳ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿ, ತೆರೆದ ವಾಹನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಹೆದರಿಸಿ ಬೆದರಿಸಿ ಮತ ಪಡೆಯುವ ಕಾಲ ಹೋಯಿತು, ಜನತೆ ನೀಡಿದ ಅವಕಾಶವನ್ನು ೪೦ ಫರಸೆಂಟ್ ಭ್ರಷ್ಠಾಚಾರದೊಂದಿಗೆ ಲೂಟಿ ಹೊಡೆದು ಈಗ ಸುಳ್ಳು ಭರವಸೆಗಳನ್ನು ನೀಡುತ್ತ ಮತ್ತೆ ಬಂದಿದೆ. ಪದೇ ಪದೇ ಮತದಾರರನ್ನು ಮೋಸ ಗೊಳಿಸಲಾಗದು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ರೈತರು, ನೇಕಾರರು, ಬಡವರು ನಿಶ್ಚಿಂತೆಯಿAದ ಜೀವನ ನಡೆಸುತಿದ್ದರು ಈ ಭ್ರಷ್ಠ ಬಿಜೆಪಿ ಸರಕಾರ ಎಲ್ಲ ವರ್ಗಗಳ ಜನತೆಯ ಚಿಂತೆಗೀಡು ಮಾಡಿದೆ ಎಂದರು.ತೇರದಾಳ ಮತಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಸಿದ್ದು ಕೊಣ್ಣೂರ ಮಾತನಾಡಿ, ಕ್ಷೇತ್ರದ ಹಿರಿಯರ, ಯುವಕರ ಆಶಯದಂತೆ ಸ್ಥಳೀಯ ಅಭ್ಯರ್ಥಿಯಾಗಿರುವ ನನಗೆ ಕಾಂಗ್ರೆಸ್ ಟಿಕೇಟ ದೊರೆತಿದ್ದು ತಮ್ಮ ಮನೆ…

Read More

ಬಸವನಬಾಗೇವಾಡಿ: ತಾಲೂಕಿನ ಮುಳ್ಳಾಳ ಗ್ರಾಮದಿಂದ ಸುಮಾರು ೧೨ ಕಿಮೀ ಅಂತರದಲ್ಲಿರುವ ಉಕ್ಕಲಿ ಗ್ರಾಮದ ಅವ್ವಪ್ಪ ಮುತ್ಯಾನ ದೇವಸ್ಥಾನದವರೆಗೆ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಶಿವಾನಂದ ಪಾಟೀಲರು ಮತ್ತೊಮ್ಮೆ ಆಯ್ಕೆಯಾಗಲಿ ಎಂದು ಪ್ರಾರ್ಥಿಸಿ ಗುರುವಾರ ಮುಳ್ಳಾಳ ಗ್ರಾಮದ ಶಶಿಧರ ಮುಳ್ಳಾಳ ದೀರ್ಘದಂಡ ನಮಸ್ಕಾರ ಹಾಕಿದರು.ಮುಳ್ಳಾಳ ಗ್ರಾಮದ ತಮ್ಮ ಮನೆಯಿಂದ ಬೆಳಗ್ಗೆ ಎಂಟು ಗಂಟೆಗೆ ದೀರ್ಘದಂಡ ನಮಸ್ಕಾರ ಹಾಕಲು ಆರಂಭಿಸಿದ ಶಶಿಧರ ಮುಳ್ಳಾಳ ಉಕ್ಕಲಿ ಗ್ರಾಮದ ಅವ್ವಪ್ಪ ಮುತ್ಯಾನ ದೇವಸ್ಥಾನಕ್ಕೆ ಮಧ್ಯಾನ್ಹ ೧೨ ಗಂಟೆಗೆ ಸುಮಾರಿಗೆ ತಲುಪಿದರು. ನಂತರ ಮಾತನಾಡಿದ ಅವರು, ಒಂದು ದಶಕದ ಅವಽಯಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಶಾಸಕರು ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಇಂತಹ ಶಾಸಕರು ಮತ್ತೊಮ್ಮೆ ಆಯ್ಕೆಯಾಗಬೇಕೆಂದು ಭಗವಂತನಲ್ಲಿ ಪ್ರಾರ್ಥಿಸಿ ದೀರ್ಘದಂಡ ನಮಸ್ಕಾರ ಹಾಕುತ್ತಿರುವುದಾಗಿ ಹೇಳಿದರು.ನಂತರ ಕಾಂಗ್ರೆಸ್ ವಿಧಾನಸಭಾ ಕಾರ್ಯಾಲಯದಲ್ಲಿ ಜಿಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಡೋಣೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಮ್ಯಾಗೇರಿ ದೀರ್ಘದಂಡ ನಮಸ್ಕಾರ ಹಾಕಿದ ಶಶಿಧರ ಮುಳ್ಳಾಳ ಅವರನ್ನು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಅಬ್ದುಲ ನದಾಫ, ಬಸವರಾಜ…

Read More

ಮುದ್ದೇಬಿಹಾಳ: ಪಕ್ಷವನ್ನು ಅಧಿಕಾರಕ್ಕೆ ತರುವ ದೃಷ್ಠಿಕೋನದಿಂದ ಸ್ವಯಂ ಪ್ರೇರಿತವಾಗಿ ಅನೇಕ ಯುವಕರು ಕಾಂಗ್ರೇಸ್ ಪಕ್ಷದ ತತ್ವಸಿದ್ದಾಂತವನ್ನು ಮೈಗೂಡಿಸಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವದು ನಮ್ಮ ಗೆಲುವಿನ ಮುನ್ಸೂಚನೆ, ನಮ್ಮ ಕಾರ್ಯಕರ್ತರೆ ನಮಗೆ ಜೀವಾಳ ನಮ್ಮ ಪಕ್ಷ ಸಮಾಜಮುಖಿಯಾದ ಕಾರ್ಯವನ್ನು ಮಾಡಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ ಎಂದು ಕಾಂಗ್ರೇಸ್ ಯಂಗ್ ಸೇವಾದಳ ಬ್ರೀಗೇಡ್ ತಾಲೂಕಾ ಅಧ್ಯಕ್ಷ ಅಬ್ದುಲ್‌ಸಲಾಂ ಮುಲ್ಲಾ ಹೇಳಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಮಾಜಿ ಸಚಿವ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ ಅಪ್ಪಾಜಿ ಗೃಹ ಕಚೇರಿಯಲ್ಲಿ ಕಾಂಗ್ರೇಸ್ ಯಂಗ್ ಸೇವಾದಳ ಬ್ರೀಗೇಡ್ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಅವರು ಮಾತನಾಡಿದರು.ಈ ಹಿಂದೆ ನಾಡಗೌಡರು ಮತಕ್ಷೇತ್ರದಲ್ಲಿ ಅನೇಕ ಮಹತ್ತರವಾದ ಅಭಿವೃದ್ಧಿಯನ್ನು ಮಾಡಿದ್ದಾರೆ, ಆದರೆ ಎ.ಎಸ್.ಪಾಟೀಲರು ನಾಡಗೌಡರು ಅಭಿವೃದ್ಧಿಯನ್ನು ಮಾಡಿಲ್ಲಾ ಎಂದು ಹೇಳುತ್ತಾ ಮತಕ್ಷೇತ್ರದಲ್ಲಿ ಬರಿ ಸುಳ್ಳುಗಳ ಆಶ್ವಾಸನೆ ಕೋಡುತ್ತಾ ಹೊರಟಿದ್ದಾರೆ, ೫೦೦೦ ಸಾವಿರ ಮನೆಗಳನ್ನು ಮಂಜೂರು ಮಾಡಿಸಿದ್ದೇನೆಂದು ಹೇಳಿದ್ದಾರೆ, ಆ ಮನೆಗಳು ಎಲ್ಲಿ ಇವೆ ಎಂದು ಪ್ರಶ್ನೆ ಮಾಡಿದ ಅವರು ಕ್ಷೇತ್ರದಲ್ಲಿ ಯುವಕರನ್ನು ಹಾಳು ಮಾಡುವ ರಾಜಕೀಯ…

Read More

ಮುದ್ದೇಬಿಹಾಳ : ಸಧ್ಯದ ರಾಜ್ಯದ ಬಿಜೆಪಿ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಮೂಲಕ ಬಂಜಾರ, ಭೋವಿ, ಕೊರಮ, ಕೊರಚ, ಕೊರವ ಸಮಾಜಗಳನ್ನು ಮೀಸಲಾತಿ ಪಟ್ಟಿಯಿಂದ ಹೊರಗುಳಿವಂತೆ ಮಾಡಿದ್ದು ಈ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಲ್ಲದೇ ಸಂವಿದಾನÀ ವಿರೋಧಿಯಾಗಿದೆ. ಇದು ಕೇವಲ ಬಿಜೆಪಿಯ ಚುನಾವಣಾ ಗಿಮಿಕ್ ಅಷ್ಟೇ. ಕಾರಣ ಬಂಜಾರ ಸಮಾಜ ಬಾಂಧವರು ಇಂತಹ ಡೋಂಗಿ ಬಿಜೆಪಿ ಪಕ್ಷಕ್ಕೆ ಮತ ನೀಡಬಾರದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ವಾಗ್ದಾಳಿ ನಡೆಸಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಮಾಜಿ ಸಚಿವ, ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಗ್ರಹ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂವಿಧಾನ ವಿರೋಧಿ ಒಳ ಮೀಸಲಾತಿಯ ಶಿಫಾರಸ್ಸು ಮಾಡಿದ್ದು, ಪರಿಶಿಷ್ಟ ಜಾತಿಯಲ್ಲಿರುವ ೯೯ ಸಮುದಾಯಗಳ ಬೆನ್ನಿಗೆ ಚೂರಿ ಹಾಕಿ ನಮ್ಮ ನಮ್ಮಲ್ಲಿಯೇ ಒಡಕನ್ನುಂಟು ಮಾಡುವ ಕೆಲಸ ಮಾಡಿದೆ. ಈ ಒಳಮಿಸಲಾತಿ ಸಿಪಾರಸ್ಸು ಮಾಡಲು ಸಂವಿಧಾನದಲ್ಲಿ ಅವಕಾಶ ಇಲ್ಲದಿದ್ದರೂ ರಾಜ್ಯ ಸರ್ಕಾರ…

Read More