Author: editor.udayarashmi@gmail.com

ವಿಜಯಪುರ: ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ತಮ್ಮ ರಾಜ್ಯದಲ್ಲಿ ನೀರಾವರಿ ಮಾಡುವುದನ್ನು ಬಿಟ್ಟು ನಮ್ಮ ಕೆಲಸಗಳ ಬಗ್ಗೆ ಟೀಕಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ತಿಕೋಟಾ ತಾಲೂಕಿನ ಕನಮಡಿಯಲ್ಲಿ ಪ್ರಚಾರ ಕೈಗೊಂಡು ಮಾತನಾಡಿದ ಅವರು, ಫಡ್ನವೀಸ್ ಇತ್ತಿಚೆಗೆ ಕನಮಡಿಯಲ್ಲಿ ಇಲ್ಲಸಲ್ಲದ ಮಾತುಗಳನ್ನು ಹೇಳಿದ್ದಾರೆ. ಅವರದೇ ರಾಜ್ಯದ ಮೈಶಾಳ ನೀರಾವರಿ ಯೋಜನೆಯನ್ನು 45 ವರ್ಷ ಕಳೆದರೂ ಕೈಗೆತ್ತಿಕೊಳ್ಳದೇ ಜತ ತಾಲೂಕಿನ ಜನರಿಗೆ ಅನ್ಯಾಯ ಮಾಡಿದ್ದಾರೆ. ಪಾನಿ ಏಣಾರ ಆಹೇ(ನೀರು ಬರಲಿದೆ) ಎಂದು ಸುಳ್ಳು ಹೇಳುತ್ತ ಕಾಲಹರಣ ಮಾಡುತ್ತಿದ್ದಾರೆ. ಆದರೆ ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಮಾಡಿರುವ ನೀರಾವರಿ ಯೋಜನೆಗಳ ಫಲವಾಗಿ ಜತ ತಾಲೂಕಿನ 42 ಗ್ರಾಮಗಳಿಗೆ ಮತ್ತು 9 ಕೆರೆಗಳಿಗೆ ನೀರು ಬಂದಿದೆ. ಈ ಹಿನ್ನಲೆಯಲ್ಲಿ ಆ ಗ್ರಾಮಗಳ ಜನ ತಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಿ ಎಂದು ಹೋರಾಟ ನಡೆಸಿದ್ದಾರೆ. ಇದರ ಅರಿವು ಫಡ್ನವೀಸ್ ಅವರಿಗೆ ಇಲ್ಲ. ಬಾಕಿ ಕಾಮಗಾರಿಗಳು ಪೂರ್ಣಗೊಂಡ ನಂತರ ಈ ಭಾಗ ಮತ್ತಷ್ಟು…

Read More

ಸಿಂದಗಿ: ಮತಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದವರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ; ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೇ ರಾಜಿನಾಮೆ ನೀಡಿ ನಮ್ಮೊಂದಿಗೆ ಕೈಜೋಡಿಸಿದ್ದಾರೆಂದ ಮೇಲೆ ಕಾಂಗ್ರೆಸ್ ಗತಿ ಎಲ್ಲಿಗೆ ಬಂತು ನೋಡಿ ಎಂದು ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ವ್ಯಂಗ್ಯವಾಡಿದರು.ಪಟ್ಟಣದ ಬಿಜೆಪಿ ಪ್ರಚಾರ ಕಾರ್ಯಾಲಯದಲ್ಲಿ ಬುಧವಾರ ಜಿ.ಪಂ ಮಾಜಿ ಸದಸ್ಯರ ಪ್ರತಿನಿಧಿ ಈರಗಂಟೆಪ್ಪ ಮಾಗಣಗೇರಿ, ತಾ.ಪಂ ಸದಸ್ಯ ಅಕ್ಬರ್ ಮುಲ್ಲಾ, ಜೆಡಿಎಸ್ ಹಿರಿಯ ಮುಖಂಡ ಸಲೀಂ ಜುಮನಾಳ ಸೇರಿದಂತೆ ಹಲವು ಗ್ರಾಮಗಳ ಗ್ರಾ.ಪಂ ಸದಸ್ಯರು ಮತ್ತು ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಇವರು ಮಾತನಾಡಿದರು. ಕ್ಷೇತ್ರದಲ್ಲಿ ದಿನೇ ದಿನೇ ಬದಲಾವಣೆ ಕಾವು ಏರುತ್ತಿದ್ದು, ಬಿಜೆಪಿಯ ಬಲ ಹೆಚ್ಚುತ್ತಿದೆ. ಕಾಂಗ್ರೆಸ್‌ಗೆ ಯಾರೂ ಮನಪೂರ್ವಕ ಕೈ ಜೋಡಿಸದಿದ್ದರೂ ಸಹ ಅವರಿಗೆ ಬಲವಂತದಿAದ ಶಾಲು ಹೊದಿಸಿ ಅವರ ಇಡೀ ಸಮಾಜವೇ ಪಕ್ಷ ಸೇರ್ಪಡೆಯಾಗಿದೆ ಎಂದು ಸುದ್ದಿ ಹಬ್ಬಿಸಿ ಪ್ರಚಾರ ಪಡೆಯುತ್ತಿದ್ದಾರೆಂದು ವ್ಯಂಗ್ಯವಾಡಿದರು.ಬಿಜೆಪಿ ಮುಖಂಡ ಡಾ.ಗೌತಮ್ ಚೌಧರಿ ಅವರು, ಡಬಲ್ ಇಂಜಿನ್ ಸರ್ಕಾರದ ಮತ್ತು ಶಾಸಕ…

Read More

ವಿಜಯಪುರ : ಶೇ.೪೦ ರಷ್ಟು ಕಮೀಷನ್ ಪಡೆದುಕೊಳ್ಳುತ್ತಿದ್ದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಲೂಟಿ ಹೊಡೆಯುತ್ತಿದ್ದಾಗ ಸರ್ವಶಕ್ತಿಮಾನ ಮೋದಿ ಅವರು ತಡೆಯಲಿಲ್ಲ, ಅವರು ಕೇವಲ ಕಣ್ಮುಚ್ಚಿ ಕರ್ನಾಟಕದ ವಿಕಾಸದ ಕನಸು ಕಾಣುತ್ತಿದ್ದರು ಎಂದು ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧೀ ವ್ಯಂಗ್ಯವಾಡಿದರು.ಬುಧವಾರ ಇAಡಿ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು.ಕರ್ನಾಟಕದ ಚುನಾವಣಾ ಭಾಷಣ ಮಾಡುವಾಗ ಕರ್ನಾಟಕದ ವಿಕಾಸದ ಕನಸು ಕಂಡಿದ್ದೇನೆ ಎಂದು ಹೇಳುತ್ತಾ ಹೊರಟಿದ್ದಾರೆ, ಜನರ ಹಣವನ್ನು ಬಿಜೆಪಿ ಲೂಟಿ ಹೊಡೆಯುವಾಗ ಅವರಿಗೇಕೆ ಅರಿವಾಗಲಿಲ್ಲ ಎಂದು ವ್ಯಂಗ್ಯವಾಡಿದರು.ದುರಾಸೆ, ಅಧಿಕಾರ ದಾಹಕ್ಕಾಗಿ ಶಾಸಕರನ್ನು ಖರೀದಿಸಿ ರಚನೆಯಾಗಿರುವ ಬಿಜೆಪಿ ಸರ್ಕಾರಕ್ಕೆ ಕೇವಲ ಲೂಟಿ ಹೊಡೆಯುವುದೇ ಉದ್ದೇಶವಾಗಿದೆ, ಕರ್ನಾಟಕದ ವಿಕಾಸದ ಕನಸು ನಾನು ಕಂಡಿದ್ದೇನೆ ಎಂದು ಮೋದಿಜಿ ಹೇಳಿದ್ದಾರೆ, ಆದರೆ ಬಿಜೆಪಿ ನಾಯಕರು ಶೇ.೪೦ ಕಮೀಷನ್ ತೆಗೆದುಕೊಂಡು ಜನತೆಯನ್ನು ಲೂಟಿ ಮಾಡುತ್ತಿದ್ದಾಗ ನಿಮ್ಮ ಕಣ್ಣು ಬಂದಾಗಿತ್ತು, ಏಕೆಂದರೆ ನೀವು ಕನಸು ಕಾಣುವಲ್ಲಿ ಮಗ್ನರಾಗಿದ್ದೀರಿ, ಹೀಗಾಗಿ ಲೂಟಿ ಹೊಡೆಯಲು ಬಿಟ್ಟಿದ್ದೀರಿ, ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ, ಸರ್ವಜ್ಞಾನಿ,…

Read More

ತುಬಚಿ- ಬಬಲೇಶ್ವರ ಏತ ನೀರಾವರಿ ಮೂಲಕ ಈ ಭಾಗದಲ್ಲಿ ನೀರಾವರಿ :ಎಂ.ಬಿ.ಪಾಟೀಲ ಬಿಜ್ಜರಗಿ ಗ್ರಾಮಸ್ಥರು ತಮ್ಮ ಎಲ್ಲ ಬಂಧುಗಳು, ಸ್ನೇಹಿತರು ಮತ್ತು ತಮಗೆ ಪರಿಚಯವಿರುವ ಎಲ್ಲರನ್ನೂ ಸಂಪರ್ಕಿಸಿ ಎಂ.ಬಿ.ಪಾಟೀಲರನ್ನು ಈ ಬಾರಿ 50 ಸಾವಿರಕ್ಕೂ ಹೆಚ್ಚು ಅಂತರದಿಂದ ಆಯ್ಕೆ ಮಾಡಿ, ಉತ್ತರ ಕರ್ನಾಟಕದಲ್ಲಿ ಮತ್ತೊಂದು ಹೊಸ ಇತಿಹಾಸ ನಿರ್ಮಿಸಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕರೆ ನೀಡಿದರು. ಬುಧವಾರ ತಿಕೋಟಾ ತಾಲೂಕಿನ ಬಿಜ್ಜರಗಿಯಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲರ ಪರ ಪ್ರಚಾರ ನಡೆಸಿದ ಅವರು, ಬಿಜ್ಜರಗಿ ಗ್ರಾಮಸ್ಥರ ಮೇಲೆ ವಿಶ್ವಾಸವಿಟ್ಟು ಇಲ್ಲಿಗೆ ಬಂದಿದ್ದೇನೆ. ಲಕ್ಷ್ಮಣ ಸವದಿ ಯಾವುದೇ ಊರಿಗೆ ಹೋಗಬೇಕಾದರೆ ನೂರು ಬಾರಿ ಯೋಚಿಸಿಯೇ ಹೋಗುತ್ತಾರೆ. ಈ ಭಾಗದ ಎಲ್ಲರೂ ಎಂ.ಬಿ.ಪಾಟೀಲರನ್ನು ಅವರ ರಾಜಕೀಯ ಜೀವನದಲ್ಲಿಯೇ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದರು. ಒಬ್ಬ ಒಳ್ಳೆಯ ನಾಯಕ ನಿಮಗೆ ಸಿಕ್ಕಿದ್ದಾರೆ. ಅಂಥ ನಾಯಕರನ್ನು ಬೆಳೆಸುವ ಕೆಲಸವನ್ನು ತಾವೆಲ್ಲರೂ ಮಾಡಬೇಕು. ಶೆ.90…

Read More

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರರಷ್ಟೇ ಸತ್ಯ | ಲಕ್ಷ್ಮಣ ಸವದಿ ಭವಿಷ್ಯ ವಿಜಯಪುರ: ಹಿಂದುತ್ವದ ಬಗ್ಗೆ ಬಿಜೆಪಿಯವರು ಮಾತನಾಡಲು ಅವರೇನು ಅದನ್ನು ಖರೀದಿ ಮಾಡಿಲ್ಲ. ಎಲ್ಲ ಪಕ್ಷದಲ್ಲೂ ಹಿಂದುಗಳಿದ್ದಾರೆ ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.ಬುಧವಾರ ನಗರದ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರ ಹಾಗೂ ಬಿಜೆಪಿ ಆಡಳಿತ ವಿರೋಧಿ ಅಲೆ ಇದೆ. 140ರಿಂದ 150 ಸ್ಥಾನ ಗಳಿಸುತ್ತಿವೆ. ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಯೋಜನೆಗಳಿಗೆ ಜನ ಸ್ಪಂದಿಸುತ್ತಿದ್ದಾರೆ. ಈ ಬಾರಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮತದಾರರು ಕಾಂಗ್ರೆಸ್‌ಗೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ಭವಿಷ್ಯ ನುಡಿದರು.ಬಿಜೆಪಿ ಆಂತರಿಕ ಕಚ್ಚಾಟದಿಂದ ಜರ್ಜರಿತವಾಗಿದ್ದು, 50 ರಿಂದ 60 ಸೀಟು ಬರುವುದು ಕಷ್ಟ ಇದೆ ಎಂದರು.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಬಾಗ್ಯ, ಕೃಷಿ ಭಾಗ್ಯ ಯೋಜನೆ ಜನರಿಗೆ, ರೈತಾಪಿ ವರ್ಗಕ್ಕೆ ಹೆಚ್ಚು ಅನುಕೂಲ ಆಗಿದೆ. ಆದರೆ, ಬಿಜೆಪಿ ಸರ್ಕಾರದ…

Read More

ವಿಜಯಪುರ: ವಿಜಯಪುರ ಜಿಲ್ಲೆಯ ೮ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೇ.೧೦ ರಂದು ಜರುಗುವ ಮತದಾನ ಹಾಗೂ ಮೇ. ೧೩ ರಂದು ನಡೆಯುವ ಮತ ಏಣಿಕೆ ಕಾರ್ಯಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು. ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಎನ್‌ಐಸಿ ಕೇಂದ್ರದಲ್ಲಿ ಚುನಾವಣಾ ಆಯೋಗದೊಂದಿಗೆ ವಿಜಯಪುರ ಜಿಲ್ಲೆಯ ಸಿದ್ಧತೆಗಳ ಕುರಿತು ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ೮ ವಿಧಾನಸಭಾ ಮತಕ್ಷೇತ್ರಗಳಲ್ಲಿ ೯೬೬೫೩೫ ಪುರುಷ, ೯೨೬೦೯೬ ಮಹಿಳಾ ಮತದಾರರು, ೨೨೧ ಇತರರು ಸೇರಿದಂತೆ ಒಟ್ಟು ೧೮,೯೨,೮೫೨ ಮತದಾರರಿದ್ದು, ಜಿಲ್ಲೆಯಾದ್ಯಂತೆ ೨೦೭೨ ಹಾಗೂ ಹೆಚ್ಚುವರಿಯಾಗಿ ೬ ಮತಗಟ್ಟೆಗಳು ಸೇರಿದಂತೆ ೨೦೭೮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ೧,೪೭,೫೫೪ ಎಪಿಕ್ ಕಾರ್ಡ್ಗಳನ್ನು ಪೂರ್ಣ ಪ್ರಮಾಣದಲ್ಲಿ ವಿತರಿಸಲಾಗಿದೆ. ಮತದಾರರಿಗೆ ಓಟರ್ ಸ್ಲೀಪ್‌ಗಳನ್ನು ತಲುಪಿಸಲಾಗುತ್ತಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಾದ ವಿಶ್ರಾಂತಿ ಕೊಠಡಿ, ಶಾಮಿಯಾನಾ, ಆಸನ, ಕುಡಿಯುವ ನೀರು, ಶೌಚಾಲಯಗಳನ್ನು ಸ್ಥಾಪಿಸಲಾಗಿದೆ. ಮತಗಟ್ಟೆ ಮುಂದೆ ಸರತಿ ಸಾಲು…

Read More

ಬಸವನಬಾಗೇವಾಡಿ: ಪಟ್ಟಣದ ವೀರಭದ್ರೇಶ್ವರ ನಗರ ಸೇರಿದಂತೆ ವಿವಿಧೆಡೆ ಬುಧವಾರ ಬಿಜೆಪಿ ಅಭ್ಯರ್ಥಿ ಎಸ್.ಕೆ.ಬೆಳ್ಳುಬ್ಬಿ ಅವರು ಮನೆ ಮನೆಗೆ ತೆರಳಿ ಮತ ಯಾಚಿಸಿದರು.ಈ ಸಂದರ್ಭದಲ್ಲಿ ಸಾವಿತ್ರಿ ಕಲ್ಯಾಣಶೆಟ್ಟಿ, ಸಿದ್ದನಗೌಡ ಪಾಟೀಲ, ಮುತ್ತು ಕಿಣಗಿ, ಶಿವಪುತ್ರಪ್ಪ ಕೆಂಭಾವಿ, ಎಸ್‌.ಎಸ್.ಹಿರೇಮಠ, ರಾಜು ಮುಳವಾಡ, ಬಸವರಾಜ ಬಿಜಾಪುರ,‌ಸಂಗಮೇಶ ವಾಡೇದ, ಸ್ವರೂಪರಾಣಿ ಬಿಂಜಲಭಾವಿ, ಪ್ರವೀಣ ಪವಾರ, ಆನಂದ ಬಿಸ್ಟಗೊಂಡ ಸೇರಿದಂತೆ ಅನೇಕರು ಇದ್ದರು.

Read More

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ (ಡಿವ್ಹಿಬಿಡಿಸಿಪಿ) ಕಾರ್ಯಕ್ರಮದ ಅಡಿಯಲ್ಲಿ ಸಾರ್ವತ್ರಿಕ ಚುನಾವಣೆಗೆ ಆಗಮಿಸಿದ ಸಿಆರ್‌ಪಿಎಫ್ ಯೋಧರಿಗೆ ಮುಂಜಾಗೃತಾ ಕ್ರಮವಾಗಿ ಆರ್‌ಡಿಟಿ ಕಿಟ್ ಹಾಗೂ ರಕ್ತ ಲೇಪನ ತಗೆದು ಮಲೇರಿಯಾ ರಕ್ತ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಲಾಯಿತು.ಈ ವೇಳೆ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ, ಎಸ್.ಆರ್.ಸಜ್ಜನ, ಇಸ್ಮಾಯಿಲ್ ವಾಲಿಕಾರ್ ಹಾಗೂ ಮಲೇರಿಯಾ ಚಿಕಿತ್ಸಾ ಮೇಲ್ವಿಚಾರಕ ಎಸ್.ಸಿ.ರುದ್ರವಾಡಿ ಇದ್ದರು.

Read More

ಮುದ್ದೇಬಿಹಾಳ: ಕಳೆದ ೩೦ ವರ್ಷದ ನನ್ನ ರಾಜಕೀಯ ಪಯಣದಲ್ಲಿ ಯಾವತ್ತೂ ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಿಲ್ಲ. ನಾಡಗೌಡರ ಸಂಭಾವಿತ ರಾಜಕಾರಣಕ್ಕೆ ಮೆಚ್ಚಿ ಮತ್ತು ಸಿದ್ಧರಾಮಯ್ಯನವರನ್ನ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಲು ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸುವುದಾಗಿ ಬಂಜಾರಾ ಸಮುದಾಯದ ಮುಖಂಡ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಚಿದಾನಂದ ಸೀತಿಮನಿ ಹೇಳಿದರು.ಪಟ್ಟಣದ ಹುಡ್ಕೋದಲ್ಲಿರುವ ಮಾಜಿ ಸಚೀವರು, ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ ಅಪ್ಪಾಜಿ ಅವರ ಗೃಹ ಕಚೇರಿಯಲ್ಲಿ ತಮ್ಮ ಸುಮಾರು ೧೫೦೦ ಅಭಿಮಾನಿಗಳೊಂದಿಗೆ ಬಿಜೆಪಿ ತೊರೆದು ಕಾಂಗ್ರೇಸ್ ಸೇರ್ಪಡೆಗೊಂಡು ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.ಬಿಜೆಪಿಯವರ ಭ್ರಷ್ಟಾಚಾರ ಮತ್ತು ದುರಾಡಳಿಕ್ಕೆ ಬೇಸತ್ತು ಹೋಗಿದ್ದೇವೆ. ಮೊದಲಿನಿಂದಲೂ ಕಾಂಗ್ರೇಸ್ ಪಕ್ಷವನ್ನು ಪ್ರಭಲವಾಗಿ ವಿರೋಧಿಸಿದ ನನಗೆ ಕಾಂಗ್ರೇಸ್ ಪಕ್ಷದ ಆಡಳಿತವೇ ಉತ್ತಮವೆನಿಸಿದೆ. ಹಾಗಾಗಿ ನಮ್ಮ ಎಲ್ಲ ಅಭಿಮಾನಿಗಳ ಜೊತೆ ಇಂದು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸಿದ್ದು, ನಾಡಗೌಡರನ್ನು ೨೫ಸಾವಿರ ಮತಗಳ ಅಂತರದಿAದ ಗೆಲ್ಲಿಸುತ್ತೇವೆ ಎಂದರು.ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಮಾತನಾಡಿ, ಕಳೆದ ಕೆಲವು ವರ್ಷಗಳ ಹಿಂದೆಯೇ ಇವರಿಗೆ ಕಾಂಗ್ರೇಸ್ ಪಕ್ಷಕ್ಕೆ ಆವ್ಹಾನಿಸಿದ್ದೆವು. ಅಂದು ನಿರಾಕರಿಸಿದ ಅವರ…

Read More