Author: editor.udayarashmi@gmail.com

“ನಮ್ಮ ನಡೆ ಮತಗಟ್ಟೆ ಕಡೆ” ಕಾರ್ಯಕ್ರಮಕ್ಕೆ ಡಿಸಿ ದಾನಮ್ಮನವರ ಚಾಲನೆ ವಿಜಯಪುರ: ಸುಭದ್ರ ರಾಷ್ಟç ನಿರ್ಮಾಣ ಹಾಗೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಾಗಿ ಮತಾಧಿಕಾರದಿಂದ ವಂಚಿತರಾಗದೇ ಪ್ರತಿಯೊಬ್ಬರೂ ಮೇ.೧೦ ರಂದು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಕರೆ ನೀಡಿದರು.ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಅಂಗವಾಗಿ ಭಾನುವಾರ ‘ನಮ್ಮ ನಡೆ ಮತಗಟ್ಟೆ ಕಡೆ’ ಎಂಬ ಧ್ಯೇಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಇವರ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಚುನಾವಣಾ ಧ್ವಜಾರೋಹಣ ನೆರವೇರಿಸಿ, ಪ್ರತಿಜ್ಞಾ ವಿಧಿ ಬೋಧನೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಹಾಗೂ ಜವಾಬ್ದಾರಿ. ಪ್ರಜಾಪ್ರಭುತ್ವದಲ್ಲಿ ಇಂತಹ ಅವಕಾಶ ಸಂವಿಧಾನ ಕಲ್ಪಿಸಿದೆ. ಸಂವಿಧಾನ ಕೊಡಮಾಡಿದ ಮತಾಧಿಕಾರವನ್ನು ಕಳೆದುಕೊಳ್ಳದೇ ತಪ್ಪದೇ ಮತಗಟ್ಟೆಗೆ ಬಂದು ಮತದಾನ ಮಾಡಬೇಕು. ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಹಬ್ಬ ಆಚರಿಸಬೇಕು. 18 ವರ್ಷ ತುಂಬಿದ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ…

Read More

ಕೊಲ್ಹಾರ: ಜಾತಿಯೇ ಇಲ್ಲದ, ಸರ್ವಸಮಾಜದವರನ್ನು ಗೌರವಿಸುವ ರಾಜ್ಯದ ಏಕೈಕ ಪಕ್ಷ ಜಾತ್ಯಾತೀತ ಜನತಾದಳ ಪಕ್ಷವಾಗಿದ್ದು, ಅದನ್ನು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕೆಂದರೆ ನನ್ನನ್ನು ಗೆಲ್ಲಿಸಲು ಜೆಡಿಎಸ್ ಪಕ್ಷಕ್ಕೆ ತಮ್ಮ ಅಮೂಲ್ಯವಾದ ಮತವನ್ನು ಕೊಡಬೇಕೆಂದು ಸೋಮನಗೌಡ (ಅಪ್ಪುಗೌಡ) ಬ ಪಾಟೀಲ ಮನವಿ ಮಾಡಿದರು.ಪಟ್ಟಣದಲ್ಲಿ ಜೆಡಿಎಸ್ ಪಕ್ಷದ ಪ್ರಚಾರ ಕಾರ್ಯಲಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಬಿಜೆಪಿ ಪಕ್ಷದವರು ನನಗೆ ಟಿಕೆಟ್ ಕೊಡುವದಿಲ್ಲ ಎಂದು ಮೊದಲೆ ಹೇಳಿದ್ದರೆ ನನಗೆ ನೋವಾಗುತ್ತಿರಲಿಲ್ಲ. ಕೊನೆಯ ಘಳಿಗೆಯವರೆಗೂ ಬಿ ಪಾರಂ ನಿಮಗೆ ಕೊಡಲಾಗುವುದು ಎಂದು ನಂಬಿಸಿ ಕೈಕೊಟ್ಟು ನಂಬಿಕೆ ದ್ರೋಹಮಾಡಿದ ಬಿಜೆಪಿ ನಾಯಕರ ಕುತಂತ್ರ ಬುದ್ದಿಗೆ ಬಲಿಯಾಗಬೇಕಾಯಿತು ಎಂದು ನೋವು ತೋಡಿಕೊಂಡರು.ಆರು ಬಾರಿ ಶಾಸಕರಾದರೂ ನನ್ನ ತಂದೆ ಕ್ಷೇತ್ರದ ಜನತೆಗೆ ಎಂದೂ ಅಪಚಾರವೆಸಗಿದವರಲ್ಲ. ಅದರಂತೆ ನಮ್ಮ ಮನೆತನವೂ ಕೂಡ ನಂಬಿದ ಜನತೆಗೆ ದ್ರೋಹ ಬಗೆದಿಲ್ಲ. ಬಸವನ ಬಾಗೇವಾಡಿ ಮತಕ್ಷೇತ್ರದ ಜನ ಕಳೆದ ಮೂರು ಅವಧಿಯಲ್ಲಿ ನನ್ನನ್ನು ಗೆಲುವಿನ ಸಮೀಪ ತಂದು ನಿಲ್ಲಿಸಿದ್ದೀರಿ, ನಿಮ್ಮ ಅಭಿಮಾನಕ್ಕೆ ನಾನು ಚಿರಋಣಿಯಾಗಿದ್ದು ಈ ಬಾರಿಯಾದರೂ ತಾವುಗಳು…

Read More

ವಿಜಯಪುರ: ನಗರದ ವಾರ್ಡ ನಂ 11 ರಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರ ಪರವಾಗಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಬಿರುಸಿನ ಪ್ರಚಾರ ನಡೆಸಿದರು.ಈ ವೇಳೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸ್ವತಂತ್ರ ದೊರೆತು 75 ವರ್ಷಗಳಾದರೂ ಸಹ ಎಂದಿಗೂ ಅಭಿವೃದ್ದಿ ಕಾಣದ ನಗರವನ್ನು ಇಂದು ಸ್ಮಾರ್ಟಸಿಟಿಯನ್ನಾಗಿ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ಯತ್ನಾಳ ಅವರು ಎಂದಿಗೂ ಅಧಿಕಾರಕ್ಕೆ ಮುಗಿಬೀಳದೇ ಅಭಿವೃದ್ದಿಯನ್ನೇ ತಮ್ಮ ಮಂತ್ರವನ್ನಾಗಿ ಮಾಡಿಕೊಂಡವರು. ಇಂತಹ ನಿಷ್ಠಾವಂತ ವ್ಯಕ್ತಿಗೆ ತಮ್ಮ ಮತವನ್ನು ಹಾಕುವುದರ ಮೂಲಕ ಹೆಚ್ಚಿನ ಮತಗಳಿಂದ ಆರಿಸಿತರಬೇಕೆಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ವಿಠ್ಠಲ ಹೊಸಪೇಟೆ, ಮುಖಂಡರಾದ ಅಶೋಕ ಬೆಲ್ಲದ, ಪಿಂಟು ಚೋರಗೆ, ಈರಣ್ಣ ಪಾಟೀಲ, ಮಹೇಶ ವಡಂಕರ, ವಿಶಾಲ ಧಾರವಾಡಕರ, ಮಲ್ಲನಗೌಡ ಪಾಟೀಲ, ಪರಶುರಾಮ ಹೊಸಪೇಟಿ, ವಿಲಾಸ ರೇಶ್ಮಿ, ಗಣೇಶ ರಣದೇವಿ, ಅಶೋಕ ತಳಕೇರಿ, ರಾಜು ಮಾಳೆಗಾಂವ,ಪಾAಡುರAಗ, ಸನ್ನಿ ಕ್ಷೀರಸಾಗರ, ಭಾಗಪ್ಪ ಕನ್ನೊಳ್ಳಿ, ಮುತ್ತು…

Read More

ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರನ್ನು ಬೆಂಬಲಿಸಿ, ಬಬಲೇಶ್ವರ ಪಕ್ಷೇತರ ಅಭ್ಯರ್ಥಿ ದುಂಡಸಿ ಅಬ್ದುಲ್‍ರಹಿಮಾನ ಮಹಮ್ಮದ ಹನೀಫ್ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ನೀಡಿರುವ ಅವರು, ನಾನು ಬಬಲೇಶ್ವರ ಮತಕ್ಷೇತ್ರಕ್ಕೆ ಪ್ರಚಾರಕ್ಕೆ ತೆರಳಿದಾಗ ಅಲ್ಲಿನ ಮತದಾರರು ಎಂ. ಬಿ. ಪಾಟೀಲ ಅವರ ಅಭಿವೃದ್ಧಿಯ ಜಪ ಮಾಡುತ್ತಿದ್ದಾರೆ. ಹೀಗಾಗಿ ನಾನು ಕೂಡ ಅವರನ್ನು ಬೆಂಬಲಿಸಿ ಚುನಾವಣೆ ಕಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಇನ್ನು ಮುಂದೆ ನಾನು ಕಾಂಗ್ರೆಸ್‍ನ್ನು ಬೆಂಬಲಿಸುತ್ತೇನೆ. ಅಲ್ಲದೇ, ನನ್ನ ಬೆಂಬಲಿಗರು ಕೂಡಾ ಕಾಂಗ್ರೆಸ್ ಪರ ಪ್ರಚಾರ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Read More

ಬಿಜೆಪಿಯಿಂದ ರಾಜಕೀಯ ದುರ್ಲಾಭ | ಎಂಎಲ್ಸಿ ಸುನೀಲಗೌಡ ಪಾಟೀಲ ಆರೋಪ ವಿಜಯಪುರ: ವಿರೋಧಿಗಳು ಬಬಲೇಶ್ವರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮನೆಗಳಿಗೆ ತೆರಳಿ ಬಲವಂತವಾಗಿ ತಮ್ಮ ಪಕ್ಷದ ಶಾಲ್ ಹಾಕಿ ಫೋಟೋ ಕ್ಲಿಕ್ಕಿಸಿ ರಾಜಕೀಯ ದುರ್ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ, ಅವರ ಈ ಪ್ರಯತ್ನ ಫಲ ನೀಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಮನೆ ಮನೆಗೆ ತೆರಳಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಮತಯಾಚಿಸಿದ ಅವರು ವಿರೋಧಿಗಳ ನಡೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿಯವರು ಮತಕ್ಷೇತ್ರದ ಎಲ್ಲ ಕಡೆ ಕಾಂಗ್ರೆಸ್ ಕಾರ್ಯಕರ್ತ ಮನೆಗಳಿಗೆ ತೆರಳಿ ಅವರು ಬೇಡವೆಂದರೂ ಒತ್ತಾಯ ಪೂರ್ವಕವಾಗಿ ತಮ್ಮ ಪಕ್ಷದ ಶಾಲ್ ಹಾಕಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಅವರಿಗೆ ಎಷ್ಟು ಮತಗಳು ಬರುತ್ತವೆ ಗೊತ್ತಿಲ್ಲ. ಆದರೆ, ಆ ಕುಟುಂಬಗಳ ಮನಸ್ಸು ನೋಯಿಸುತ್ತಿದ್ದಾರೆ. ಹಲವಾರು ಜನ ಕಾಂಗ್ರೆಸ್ ಕಾರ್ಯಕರ್ತರು…

Read More

ವಿಜಯಪುರ: ನನ್ನ ಕೊನೆಯ ಚುನಾವಣೆ ಮತ ಕೊಡಿ ಎಂದು ಅನುಕಂಪದ ಅಲೆಯಲ್ಲಿ ಕಾಂಗ್ರೆಸ್ ನಾಯಕರು ಮತ ಕೇಳುತ್ತಿದ್ದಾರೆ, ಆದರೆ ನಾಡಿನ ಎಲ್ಲ ಜಾತಿ-ಮತ ವರ್ಗಗಳ ಜನರು ಉತ್ಸಾಹದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಬಾರಿ ಬಹುಮತದ ಬಿಜೆಪಿ ಸರ್ಕಾರ ರಚನೆಗೆ ಖಚಿತ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.ವಿಜಯಪುರದ ಸೈನಿಕ ಶಾಲೆಯಲ್ಲಿ ಶನಿವಾರ ನಡೆದ ಭಾರತೀಯ ಜನತಾ ಪಕ್ಷದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು.ತಮ್ಮ ಭಾಷಣದುದ್ದಕ್ಕೂ ಅವರು ಡಬಲ್ ಇಂಜಿನ್ ಸರ್ಕಾರದ ಯಶಸ್ಸುಗಳನ್ನು ಉಲ್ಲೇಖಿಸಿದರು. ಬಸವಣ್ಣನವರ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಡಬಲ್ ಇಂಜಿನ್ ಸರ್ಕಾರದ ಸಾರ್ಥಕತೆ ಕುರಿತು ಸುದೀರ್ಘವಾಗಿ ವಿವರಿಸಿದರು.ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ 1 ರೂ. ಅನುದಾನ ಫಲಾನುಭವಿಗೆ ತಲುಪುವ ಹೊತ್ತಿಗೆ 15 ಪೈಸೆಯಾಗಿರುತ್ತದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನಮಂತ್ರಿಯೊಬ್ಬರು ಗಂಭೀರವಾಗಿ ಹೇಳಿದ್ದರು. ಆದರೆ ಈಗ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗುವ ಸಂಪೂರ್ಣ ಹಣ ಪೂರ್ಣ ಪ್ರಮಾಣದಲ್ಲಿ ಫಲಾನುಭವಿಗೆ ತಲುಪುತ್ತಿದೆ.ಗರೀಬಿ ಹಟಾವೋ ಹೆಸರಿನಲ್ಲಿ…

Read More

ವಿಜಯಪುರ: ಎಂ.ಬಿ.ಪಾಟೀಲರು ಜಾತ್ಯತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈ ಕೆಲಸಗಳನ್ನು ಪರಿಗಣಿಸಿ ಮತ ಹಾಕಬೇಕು ಎಂದು ಆಶಾ ಎಂ. ಪಾಟೀಲ ಕರೆ ನೀಡಿದ್ದಾರೆ. ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಮನೆ ಮನೆಗೆ ತೆರಳಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ವಿರೋಧಿಗಳಲ್ಲಿ ಈಗ ಪ್ರಸ್ಥಾಪಿಸಲು ಯಾವುದೇ ವಿಷಯಗಳಿಲ್ಲ. ಎಲ್ಲ ಅಸ್ತ್ರಗಳು ಮುಗಿದಿರುವ ಹಿನ್ನಲೆಯಲ್ಲಿ ಅಳುವ ಹೊಸ ನಾಟಕ ಶುರುವಿಟ್ಟುಕೊಂಡಿದ್ದಾರೆ. ಕಳೆದ ಮೂರು ಚುನಾವಣೆಗಳಲ್ಲಿ ಗುಂಡಾಗಿರಿ ನಡೆಸಿದರು. ಅದು ವರ್ಕೌಟ್ ಆಗದ ಕಾರಣ ಈಗ ಅಳುವ ತಂತ್ರ ಅನುಸರಿಸುತ್ತಿದ್ದಾರೆ. ಇದು ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದರು. ಎಂ. ಬಿ. ಪಾಟೀಲರು ಕೆಲಸದ ತೀವ್ರ ಒತ್ತಡದ ನಡೆವೆಯೂ ಸಾಮಥ್ರ್ಯ ಮೀರಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಎಲ್ಲರನ್ನು ಪ್ರೀತಿಯಿಂದ ಕಾಣುತ್ತ ಮತಕ್ಷೇತ್ರದ ಜನರ ಬದುಕು ಬಂಗಾರವಾಗಿಸಲು ಶ್ರಮ ಪಡುತ್ತಿದ್ದಾರೆ. ಎಲ್ಲರೂ ಒಗ್ಗಟ್ಟಿನಿಂದ ಅವರನ್ನು ಬೆಂಬಲಿಸಿ ಪ್ರಚಂಡ ಬಹುಮತದಿಂದ ಆರಿಸಿ ತರಬೇಕು. ಆತ್ಮಸಾಕ್ಷಿಗೆ ಅನುಗುಣವಾಗಿ ಮತ…

Read More

ಕೊಲ್ಹಾರ: ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ಶುಕ್ರವಾರ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ, ಮಸೂತಿ ಗ್ರಾ.ಪಂ ಮಾಜಿ ಅಧ್ಯಕ್ಷ ರಮೇಶ ಬೀಳಗಿ ಹಾಗೂ ಅವರ ಸಹಸ್ರಾರು ಸಂಖ್ಯೆಯ ಬೆಂಬಲಿಗರು ಬಸವನ ಬಾಗೇವಾಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ‌ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಈ ವೇಳೆ ಬಿಜೆಪಿ ಮುಖಂಡರಾದ ಸಿ.ಎಂ ಗಣಕುಮಾರ, ಸಿದ್ದಪ್ಪ ಬಾಲಗೊಂಡ, ಶಿವಪ್ಪ ಹಂಗರಗಿ, ಅಖಿಲಗೌಡ ಪಾಟೀಲ್ ಹಾಗೂ ಹಲವರಿದ್ದರು.

Read More