Subscribe to Updates
Get the latest creative news from FooBar about art, design and business.
Author: editor.udayarashmi@gmail.com
ರೈತ ಸಂಘದ ಮಟ್ಟಿಹಾಳ ಗ್ರಾಮ ಘಟಕ ಉದ್ಘಾಟನೆ ಕೋಲಾರ: ಮಾನವ ಕುಲಕ್ಕೆ ಅನ್ನ ನೀಡುವ ಅನ್ನದಾತನು ದಿನನಿತ್ಯ ಅನೇಕ ಸಂಕಷ್ಟಗಳೊಡನೆ ಹೆಚ್ಚಿನ ದರಕ್ಕೆ ಬೀಜ, ಗೊಬ್ಬರ, ಕೀಟನಾಶಕಗಳನ್ನು ತಂದು ಬೆಳೆ ಬೆಳೆದರೆ, ಸರಿಯಾದ ಬೆಲೆ ಸಿಗದೇ ನಷ್ಟಗೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಉದಾಹರಣೆಗಳನ್ನು ನೊಡುತ್ತಿದ್ದೇವೆ, ಆದ್ದರಿಂದ ರೈತರೆಲ್ಲರೂ ಜಾತಿ, ಮತ, ಪಕ್ಷಗಳನ್ನು ಮರೆತು ಒಂದಾಗಬೇಕು ಎಂದು ನಾಗರದಿನ್ನಿಯ ತಪೋನಿಷ್ಠ ಪ.ಪೂ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ರೈತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಬ್ಬು ಬೆಳೆಗಾರರ ಒಕ್ಕೂಟದ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದ ಗ್ರಾಮ ಘಟಕದ ಉದ್ಘಾಟನಾ ಸಮಾರಂಭದಲ್ಲಿ ರೈತ ಮುಖಂಡರೊಡನೆ ದೀಪ ಬೆಳಗಿಸಿ ಶ್ರೀಗಳು ಮಾತನಾಡಿದರು.ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಕೋಲ್ಹಾರ ತಾಲೂಕಾ ಅಧ್ಯಕ್ಷ ಸೋಮು ಬಿರಾದಾರ ಮಾತನಾಡುತ್ತಾ, ಚುನಾವಣಾ ಸಂದರ್ಭದಲ್ಲಿ ಎಲ್ಲಾ ರಾಜಕೀಯ ನಾಯಕರು ಹಸಿರು ಶಾಲು ಹಿಡಿದು ನಾನು ರೈತನ ಮಗ ಎಂದು ಮತ ಕೇಳಲು ನಮ್ಮೆಲ್ಲರ ಮನೆ ಬಾಗಿಲಿಗೆ ಬರುವರು,…
ವಿಜಯಪುರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳು ವಿಜಯಪುರ: ಜಿಲ್ಲೆಯ ಎಂಟು ವಿಧಾನಸಭಾ ಮತಕ್ಷೇತ್ರಗಳಲ್ಲಿ 80 ವರ್ಷ ಮೇಲ್ಪಟ್ಟ 3574, ವಿಶೇಷ ಚೇತನ 1078 ಮತದಾರರು ಮನೆಯಿಂದಲೇ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ ಒಟ್ಟು 38727 ಮತದಾರರು, 20273 ವಿಶೇಷಚೇತನ ಮತದಾರರಿಗೆ ಏಪ್ರಿಲ್ 29ರಿಂದ ಮೇ.01ರವರೆಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಈ ಪೈಕಿ 80 ವರ್ಷ ಮೇಲ್ಪಟ್ಟ 3574, ವಿಶೇಷ ಚೇತನ 1078 ಮತದಾರರು ಮನೆಯಿಂದ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡಲಿದ್ದಾರೆ.ಈಗಾಗಲೇ 80ಡಿ ರಡಿ ಅರ್ಜಿ ನೀಡಿರುವ ಜಿಲ್ಲೆಯ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನ ಮತದಾರರ ಮನೆ ಮನೆಗೆ ತೆರಳಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. 30-ಬಿಜಾಪೂರ ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಹಿರಿಯ ನಾಗರಿಕರ ಮನೆಗೆ ಶನಿವಾರ ಭೇಟಿ ನೀಡಿ, 80 ವರ್ಷ ಮೇಲ್ಪಟ್ಟ ಮತದಾರರು…
ಇಂಡಿ: ಹಿಂದುಳಿದ ತಾಲೂಕನ್ನು ಮುಂದುವರಿದ ತಾಲೂಕನ್ನಾಗಿ ಮಾರ್ಪಡಿಸಿದ್ದೇನೆ. ಈ ಬಾರಿ ಇನ್ನೊಮ್ಮೆ ಆಶೀರ್ವದಿಸಿದರೆ ತಾಲೂಕಿನ ಚಿತ್ರಣವನ್ನೇ ಬದಲಾವಣೆ ಮಾಡಿ ಜಿಲ್ಲಾ ಕೇಂದ್ರವನ್ನಾಗಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ ಭರವಸೆ ನೀಡಿದರು.ಶನಿವಾರ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ಹಮ್ಮಿಕೊಂಡ ಕಾಂಗ್ರೆಸ್ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಜಿಲ್ಲಾ ಕೇಂದ್ರಕ್ಕೆ ಅಗತ್ಯವಿರುವ ಎಲ್ಲ ಇಲಾಖೆಗಳನ್ನು ಈಗಾಗಲೇ ಕೇಂದ್ರ ಸ್ಥಾನದಲ್ಲಿ ತರಲಾಗಿದೆ. ತಾಲೂಕಿನ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಶೈಕ್ಷಣಿಕ ರಂಗವನ್ನು ಮಾರ್ಪಾಡು ಮಾಡಿದ್ದೇನೆ. ದಶಕಗಳ ಕಾಲ ನೆನೆಗುದಿಗೆ ಬಿದ್ದಿರುವ ಹಲವು ಯೋಜನೆಗಳನ್ನು ಪೂರ್ಣ ಮಾಡಿದ್ದೇನೆ. ಕೆರೆ ತುಂಬುವುದು, ಕಾಲುವೆಗಳಿಗೆ ನೀರು ಹರಿಸುವುದು ಸೇರಿದಂತೆ ಇನ್ನಿತರ ಕಾರ್ಯಗಳನ್ನು ಮಾಡಿದ್ದೇನೆ. ಮತ್ತೊಮ್ಮೆ ನನಗೆ ಆಶೀರ್ವಾದ ಮಾಡಿದರೆ ಇಂಡಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿ ರಾಜ್ಯದಲ್ಲಿಯೇ ಮಾದರಿ ಆಡಳಿತ ನೀಡುತ್ತೇನೆ ಎಂದು ತಿಳಿಸಿದರುಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಆರ್. ಪಾಟೀಲ್ ಬಳ್ಳೊಳ್ಳಿ, ಸಂಭಾಜಿ ಮಿಸಾಳೆ, ಬಿ.ಎಮ್. ಕೋರೆ, ಅಣ್ಣಪ್ಪ ಬೀದರಕೋಟಿ, ಜಾವಿದ್ ಮೊಮಿನ್, ಇಲಿಯಾಸ ಬೋರಾಮಣಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಚಿಮ್ಮಡ; ಗ್ರಾಮದ ರೈತರ ಆರಾದ್ಯ ದೇವತೆ ಸೀಮಿ ಲಕ್ಕವ್ವದೇವಿ ಜಾತ್ರಾ ಮಹೋತ್ಸವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶುಕ್ರವಾರ ವಿಜ್ರಂಬಣೆಯಿAದ ಜರುಗಿತು.ಗ್ರಾಮದಿಂದ ಜಗದಾಳ ರಸ್ತೆಗೆ ಹೊಂದಿಕೊAಡಿರುವ ದೇವಸ್ಥಾನದಲ್ಲಿ ಬೆಳಿಗ್ಗೆ ೬ ಘಂ,ಗೆ ನಡೆಯುವ ವಿಶೇಷ ಅಭಿಷೇಕದೊಂದಿಗೆ ಪ್ರಾರಂಭಗೊAಡ ಜಾತ್ರಾ ಮಹೋತ್ಸವದಲ್ಲಿ ಮದ್ಯಾಹ್ನ ದೇವಿಯ ಉಡಿ ತುಂಬುವ ಕಾರ್ಯಕ್ರಮ ನಡೆಯಿತು ನಂತರ ನಡೆದ ಮಹಾಪ್ರಸಾದ ವಿತರಣೆಯಲ್ಲಿ ಜಾತ್ರಾ ಸಮೀತಿಯ ಪ್ರಮುಖರು ಸೇರಿದಂತೆ ಸಾವಿರಾರು ಜನ ರೈತರು ಪಾಲ್ಗೊಂಡು ತಮ್ಮ ಆರಾದ್ಯ ದೇವತೆಗೆ ಹರಕೆ ಸಲ್ಲಿಸಿದರು. ಜಾತ್ರೆಯ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಡೊಳ್ಳಿನ ಪದಗಳ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಹೊನ್ನುಟಿಗಿ ಗೌಡಪ್ಪಾ ಮಾಸ್ತರ ನೇತ್ರತ್ವದ ಶ್ರೀ ಬೀರದೇವರ ಗಾಯಣ ಸಂಘ ಹಾಗೂ ವಿಜಯಪೂರ ಜಿಲ್ಲೆಯ ಜಿಗಜಿನಗಿಯ ಮಧುಮಾರಯ ನವರ ನೇತ್ರತ್ವದ ಅಮೋಘಸಿದ್ದೇಶ್ವರ ಗಾಯಣ ಸಂಘದಿAದ ಪ್ರಸಿದ್ದ ಡೊಳ್ಳಿನ ಪದಗಳ ಸ್ಪರ್ಧಾ ಜುಗಲ್ಬಂದಿ ಕಾರ್ಯಕ್ರಮ ತಡ ರಾತ್ರಿಯ ವರೆಗೆ ನಡೆಯಿತು. ಇದರಲ್ಲಿ ವಿಜೇತ ತಂಡಕ್ಕೆ ವಿಶೇಷ ಬಹುಮಾನಗಳ£ರಿಸಿದ್ದೇಶ್ವgಕ್ನು ಸ್ಥಳೀಯ ಸೀಮಿ ಲಕ್ಕವ್ವದೇವಿ ಜಾತ್ರಾ ಸಮೀತಿ ಕೊಡಮಾಡಿದರು. ಇದೇ ವೇಳೆ…
ತಿಕೋಟಾ: ಬರುವ ವಿಧಾನಸಭೆ ಸಾರ್ವಜನಿಕ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಎತ್ತಿನ ಬಂಡಿಗಳ ಜಾಥಾ ಮಾಡುವ ಮೂಲಕ ಮತದಾನ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಮಟ್ಟದ ಸ್ವೀಪ್ ಸಮಿತಿ ವತಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಈ ಜಾಗೃತಿ ಕಾರ್ಯಕ್ರಮ ನಡೆಯಿತು. ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಪಿಡಿಓ ಜೆ.ಎ.ದಶವಂತ ಸಾರ್ವಜನಿಕರು ಈ ಭಾರಿ ನಡೆಯುವ ಚುಣಾವಣೆಯಲ್ಲಿ ಪ್ರತಿಯೊಬ್ಬರು ಮತ ಚಲಾಯಿಸಬೇಕು. ಮತದಾನವು ನಮ್ಮ ಭವ್ಯ ಭಾರತದ ನಿರ್ಮಾಣಕ್ಕಾಗಿ, ಬಲಿಷ್ಟ ಭಾರತವನ್ನು ಕಟ್ಟುವದಕ್ಕಾಗಿ ಹಾಗೂ ಉತ್ತಮ ಸಮಾಜಕ್ಕಾಗಿ ಪ್ರತಿಯೊಬ್ಬ ಪ್ರಜೆ ಮತದಾನ ಮಾಡುವುದು ಅವಶ್ಯವಾಗಿದೆ. ಯಾರೊಬ್ಬರೂ ಮತದಾನದಿಂದ ವಂಚಿತರಾಗಬೇಡಿ ಎಂದರು. ಮತದಾನ ಜಾಗೃತಿ ಮೂಡಿಸಲು ಭಾಗವಹಿಸಿದ್ದ ಎತ್ತಿನ ಬಂಡಿಗಳಿಗೆ ತೆಂಗಿನ ಗರಿ, ಬಣ್ಣದ ಬಲೂನ್ಗಳ ಮೂಲಕ ಸಿಂಗಾರಗೊಳಿಸಲಾಗಿತ್ತು. ಮತದಾನ ಅರಿವು ಮೂಡಿಸುವ ಮಾಹಿತಿ ಫಲಕಗಳನ್ನು ಹಾಕಲಾಗಿತ್ತು. ಎತ್ತಿನ ಬಂಡಿಯಲ್ಲಿ ಮಾದರಿ ವಿವಿಪ್ಯಾಟ್ ಮಶೀನ್ ಹಾಗೂ ಬ್ಯಾಲೇಟ್ ಯುನಿಟ್ ತಯಾರಿಸಿ ಗ್ರಾಮದಲ್ಲಿ…
ಸಿಂದಗಿ: ರಾಜ್ಯ ರಾಜಕಾರಣ ಮತ್ತು ವಿಧಾನ ಸಭಾಕ್ಷೇತ್ರಗಳಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಅದರಂತೆ ಮೇ.೧೦ರಂದು ಮತದಾರರು ಸಹ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಗೆಲ್ಲಿಸುತ್ತಾರೆ ಎಂದು ಬಸವನ ಬಾಗೇವಾಡಿಯ ಶಾಸಕ ಹಾಲಿ ಅಭ್ಯರ್ಥಿ ಶಿವಾನಂದ ಪಾಟೀಲ ಹೇಳಿದರು.ನಗರದ ಮಾಂಗಲ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ನಾವೆಲ್ಲ ಒಗ್ಗಟ್ಟಾಗಿ ಗೆಲ್ಲಬೇಕಾಗಿತ್ತು. ಆದರೆ ಕೆಲವು ವೈಮನಸ್ಸಿನಿಂದ ಸಾಧ್ಯವಾಗಲಿಲ್ಲ. ಮತ್ತು ಆಗಿನ ಬಿಜೆಪಿ ಸರಕಾರ ದುಡ್ಡಿನ ಮಳೆಯನ್ನು ಹರಿಸಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಕಾರಣ ಆ ಗೆಲುವು ನಿರಂತರವಲ್ಲ. ಈ ಬಾರಿ ಸಿಂದಗಿ ಕಾಂಗ್ರೆಸ್ ಮತಕ್ಷೇತ್ರದ ಅಭ್ಯರ್ಥಿಯಾದ ಅಶೋಕ ಮನಗೂಳಿ ಗೆದ್ದರೆ ಅದು ಇಡೀ ರಾಜ್ಯದ ಗೆಲುವಾಗುತ್ತದೆ ಎಂದರು.ಈ ವೇಳೆ ಇಂಡಿ ಶಾಸಕ ಹಾಲಿ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ ಮಾತನಾಡಿ, ಕಳೆದ ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಸರಕಾರ ಹಣವನ್ನು ನೀರು ಹರಿದ ಹಾಗೆ ದುಡ್ಡಿನ ಸುರಿಮಳೆಯಲ್ಲಿ ಸುರಿಸುವುದರ ಜೊತೆಗೆ ಲಕ್ಷö್ಮಣ ಸವದಿ ಅವರ ಪರಿಶ್ರಮದಿಂದ…
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಮ್ಮ ನಾಯಕ ರಾಹುಲ ಗಾಂಧಿ ಅವರಿಗೆ ‘ಹುಚ್ಚ’ ಎಂದು ಶ್ರೀಮತಿ ಸೋನಿಯಾಗಾಂಧಿ ಅವರಿಗೆ ವಿಷಕನ್ಯೆ, ಪಾಕಿಸ್ತಾನ ಎಜೆಂಟ್ ಎಂಬ ಪದ ಬಳಕೆ ಮಾಡಿದ್ದು ಅವರ ಕೆಟ್ಟ ನಡವಳಿಕೆಯನ್ನು ಬಿಂಬಿಸುತ್ತದೆ. ಅವರ ಹೇಳಿಕೆ ತೀವ್ರ ಖಂಡನೀಯವಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಎಂ.ಬಿ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು. ಶನಿವಾರ ನಗರದ ತಮ್ಮ ಗೃಹ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಳೆದ ೫ ವರ್ಷಗಳಿಂದ ನಿರಂತರವಾಗಿ ದ್ವೇಷ ಬಿತ್ತುವ, ಅವಮಾನಕರ, ಅಶ್ಲೀಲ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿತ್ಯ ಬೆಳಗ್ಗೆ, ಮದ್ಯಾಹ್ನ, ಸಾಯಂಕಾಲ, ರಾತ್ರಿ ಹೀಗೆ ದಿನಕ್ಕೆ ೪ ಬಾರಿ ವಿಷ ಕಾರುವ ಕೆಲಸ ಮಾಡುತ್ತಿದ್ದಾರೆ. ಇವರ ಕಳೆದ ೫ವರ್ಷದ ಹೇಳಿಕೆಗಳನ್ನು ಕ್ರೋಡೀಕರಿಸಿದರೆ ದೊಡ್ಡ ಗ್ರಂಥವೇ ಆಗುತ್ತದೆ. ಸದಾ ವಿಷ ಕಾರುವ ಇವರನ್ನು ರಾಜ್ಯದ ಜನತೆ ಏನನ್ನುತ್ತಿದ್ದಾರೆ ಎಂಬುದನ್ನು ಯತ್ನಾಳರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಕುಟುಕಿದರು.ಸೋನಿಯಾ ಗಾಂಧಿಯವರು ಈ ದೇಶದ…
ಸಿಂದಗಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ ೧೧ ದಿನ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ.ಈ ಬಾರಿ ತಾಲೂಕಿನ ಚಾಂದಕವಟೆ ಗ್ರಾಮದ ಬಿಜೆಪಿ ಮುಖಂಡರಾದ ಪ್ರವೀಣ ಕಂಟಿಗೊAಡ, ಸಂತೋಷ ಕಂಟಿಗೊAಡ, ಧರೆಪ್ಪ ಕಂಟಿಗೊAಡ, ರಾಕೇಶ ಕಂಟಿಗೊAಡ, ಪರಮಾನಂದ ಕಂಟಿಗೊAಡ, ನಾಗಪ್ಪ ಕಂಟಿಗೊAಡ ಅವರು ಬಿಜೆಪಿಯನ್ನು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿ ಅಶೋಕ ಮನಗೂಳಿ ಮತ್ತು ಮುಖಂಡರಾದ ಬಸನಗೌಡ ಪಾಟೀಲ, ಗುರಣ್ಣಗೌಡ ಪಾಟೀಲ ಅವರ ನೇತೃತ್ವದಲ್ಲಿ ಸೇರ್ಪಡೆಯಾದರು.ಇದೇ ಸಂದರ್ಭದಲ್ಲಿ ಅವರೊಂದಿಗೆ ಕಬೂಲ ಮುಲ್ಲಾ, ಚಾಂದಸಾಬ ಮುಲ್ಲಾ, ಯಾಸೀನ ಚಟ್ಟರಕಿ, ಪರಮಾನಂದ ಗಾಳಿ, ಯಲ್ಲಾಲಿಂಗ ಬಮ್ಮನಳ್ಳಿ, ಶಿವಯೋಗೆಪ್ಪ ಸಾಲೋಟಗಿ, ಶಿವಶಂಕರ ಸಿನ್ನೂರ, ಬಾಬು ತಳವಾರ, ಶಂಕರಗೌಡ ಪಾಟೀಲ ಸೇರಿದಂತೆ ನೂರಾರು ಕಾರ್ಯಕರ್ತರು ಪಕ್ಷ ಸೇರ್ಪಡೆಗೊಂಡರು.
ಸಿಂದಗಿ: ಪಟ್ಟಣದ ಕಲ್ಯಾಣ ನಗರದ ವಾರ್ಡ ನಂ.೨೦ ರಲ್ಲಿ ಬಿಜೆಪಿ ಪಕ್ಷದ ಮಹಿಳಾ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಮನೆ ಮನೆಗೆ ತೆರಳಿ ವಾರ್ಡಿನ ಮಹಿಳೆಯರಿಗೆ ಅರಿಶಿಣ, ಕುಂಕುಮ ಹಚ್ಚುವುದರ ಮೂಲಕ ವಿನೂತನವಾಗಿ ಮತದಾರರಲ್ಲಿ ರಮೇಶ ಭೂಸನೂರ ಅವರನ್ನು ಬಹುಮತದಿಂದ ಜಯಗಳಿಸಲು ಸಹಕರಿಸಿ ಎಂದು ಮನವಿ ಮಾಡಿಕೊಂಡರು.ಈ ವೇಳೆ ಪಾರ್ವತಿ ನಾವಿ, ಶಶಿಕಲಾ ನಾವಿ, ಶಾಂತಮ್ಮ ಹಡಪದ, ರಾಜೇಶ್ವರಿ, ರೇಖಾ ಆರ್ ಕೆ, ಬೋರಮ್ಮ ನಾವಿ, ರವಿಕಿರಣ ಕಟಕೆ, ಸಂತೋಷ ತುಪ್ಪದ, ಬಸವರಾಜ ಹಡಪದ, ಶ್ರೀಧರ್ ಪತ್ತಾರ, ಸದಾನಂದ ಈಳಗೇರ, ರಾಘವೇಂದ್ರ ಹಡಪದ, ವಿದ್ಯಾಧರ್ ಹಿರೇಮಠ್, ಸಂತೋಷ್ ಮಲಘಾಣ, ಷಣ್ಮುಖ ಘಾಳಿ ಸೇರಿದಂತೆ ವಾರ್ಡಿನ್ ನಿವಾಸಿಗಳು ಮತ್ತು ಕಾರ್ಯಕರ್ತರು ಇದ್ದರು.
ಮುದ್ದೇಬಿಹಾಳ : ತಾಲೂಕಿನ ಬಸರಕೋಡ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ.ಪರೀಕ್ಷೆಗೆ ಹಾಜರಾದ ಒಟ್ಟು 65 ವಿದ್ಯಾರ್ಥಿಗಳ ಪೈಕಿ 13 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 35 ವಿದ್ಯಾರ್ಥಿಗಳು ಪ್ರಥಮ ಮತ್ತು 11 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗುವ ಮೂಲಕ ಒಟ್ಟು ಕಾಲೇಜಿನ ಫಲಿತಾಂಶ ಶೇ.90.76 ಪಡೆಯುವದರೊಂದಿಗೆ ಉತ್ತಮ ಸಾಧನೆ ಮಾಡಿದೆ.ಬಾಂಧವ್ಯ ಹಿಪ್ಪರಗಿ 569(94.83%) ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಭಾಗ್ಯಶ್ರೀ ಹಿರೇಮಠ 563(93.83%) ಅಂಕ ಪಡೆದು ದ್ವಿತೀಯ ಮತ್ತು ಬಸಮ್ಮ ಮಂಕಣಿ 553(92.11%) ಅಂಕ ಪಡೆದು ತೃತೀಯ ಸ್ಥಾನದಲ್ಲಿದ್ದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿ ಪ್ರಾಚಾರ್ಯ ಎಸ್.ಎಂ.ಕಮತರ ಹಾಗೂ ಸಿಬ್ಬಂದಿ ವರ್ಗದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
