Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಬಿಜೆಪಿಯವರ ಕುತಂತ್ರದಿಂದಾಗಿ ಬಬಲೇಶ್ವರ ಮತಕ್ಷೇತ್ರದ ಇಬ್ಬರು ಆಶಾ ಕಾರ್ಯಕರ್ತೆಯರನ್ನು ಅಮಾನತು ಮಾಡಲಾಗಿದ್ದು, ಅಧಿಕಾರಿಗಳು ಕೂಡಲೇ ಇವರ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಡ ಆಶಾ ಕಾರ್ಯಕರ್ತೆಯರಿಗೆ ಬಿಜೆಪಿಯವರು ಬಲವಂತವಾಗಿ ಶಾಲು ಹಾಕಿ, ಪೋಟೋ ಕ್ಲಿಕ್ಕಿಸಿ ಪ್ರಚಾರ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಕೂಡಲೇ ಅಧಿಕಾರಿಗಳು ಇಬ್ಬರು ಆಶಾ ಕಾರ್ಯಕರ್ತೆಯರ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ತಿಳಿಸಿದ್ದಾರೆ. ಬಬಲೇಶ್ವರದ ಬಿಜೆಪಿ ಅಭ್ಯರ್ಥಿ ಬಡವರ ಹೊಟ್ಟೆ ಮೇಲೆ ಕಾಲಿಡುವ ನಡೆ ಅನುಸರಿಸುತ್ತಿದ್ದು, ಭಗವಂತ ಬಿಜೆಪಿ ಅಭ್ಯರ್ಥಿಗೆ ಸದ್ಬುದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತದ್ದೇವಾಡಿ: ಕಾಂಗ್ರೆಸ್ ಮುಕ್ತ ಮಾಡಲು ಹೊರಟಿರುವ ಬಿಜೆಪಿಯೇ ಮೇ.೧೩ರ ನಂತರ ರಾಜ್ಯದಿಂದಲೇ ಮುಕ್ತವಾಗಲಿದೆ ಎಂದು ನಾಗಠಾಣದ ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ ಕಟಕದೊಂಡ ಅವರು ಹೇಳಿದರು.ಗ್ರಾಮ ಮತ್ತು ಮಣಂಕಲಿಯಲ್ಲಿನ ಪ್ರಚಾರ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಎಲ್ಲರ ಅಭಿವೃದ್ಧಿ, ಬದುಕು ಬಯಸುವ ಪಕ್ಷ. ಬಿಜೆಪಿ ಉದ್ಯೋಗ ಕಸಿದುಕೊಳ್ಳುವ ಪಾರ್ಟಿ. ಬೆಲೆ ಹೆಚ್ಚಳ ಮಾಡಿ ಬಡವರ ಜೀವನ ಹಾಳು ಮಾಡಿರುವ ಇದು ಯಾವ ನೈತಿಕತೆಯಿಂದ ಕಾಂಗ್ರೆಸ್ ಮುಕ್ತ ಮಾಡುತ್ತದೆ ಎಂದು ಪ್ರಶ್ನಿಸಿದ ಅವರು, ಬಿಜೆಪಿಯನ್ನು ಹೇಗೆ ಕಟ್ಟಿದ್ದೇವೆ ಅಂತ ನಮಗೆ ಗೊತ್ತು. ಅಂತಹ ಪಕ್ಷ ಈಗ ನೆಲ ಕಚ್ಚಿದೆ. ಪ್ರಾಮಾಣಿಕತೆಯಿಂದ ಇರುವ ನನಗೆ ಇದು ಕೊನೆಯ ಚುನಾವಣೆ. ಅವಕಾಶ ನೀಡಿದರೆ ನೀರಾವರಿಗೆ ಒತ್ತು ನೀಡುವುದಾಗಿ ಹೇಳಿದರು.ಹಿರೇಮಠದ ಮಹಾಂತೇಶ ಶ್ರೀ ಮಾತನಾಡಿ, ಕಾಂಗ್ರೆಸ್ ಅಭಿವೃದ್ಧಿ ಪರವಾದ ಗೆಲ್ಲುವ ಪಕ್ಷ. ಕಟಕದೊಂಡರಿಗೆ ಉತ್ತಮ ಭವಿಷ್ಯವಿದೆ. ಅವರನ್ನು ಗೆಲ್ಲಿಸಿದರೆ ಕ್ಷೇತ್ರಕ್ಕೂ ಭವಿಷ್ಯವಿದೆ ಎಂದರು.ಪಕ್ಷದ ಜಿಲ್ಲಾಧ್ಯಕ್ಷ ರಾಜು ಆಲಗೂರ, ಎಂ.ಆರ್.ಪಾಟೀಲ್, ಗ್ರಾಮದ ಹಿರಿಯ ಬಿ.ಎಮ್. ಕೋರೆ, ಸುರೇಶ ಗೊಣಸಗಿ, ಪ್ರಕಾಶ ಪಾಟೀಲ,…
ಬ್ರಹ್ಮದೇವನಮಡು: ಕಾಂಗ್ರೆಸ್ ಪಕ್ಷದ ಬಗ್ಗೆ ಜನರ ಒಲವು ಇದೆ. ದಿ.ಎಂ.ಸಿ.ಮನಗೂಳಿ ಅವರ ಕನಸಿನ ಯೋಜನೆಗಳನ್ನು ಮುಂದುವರಿಸಲು ನನಗೆ ಈ ಬಾರಿ ಗೆಲ್ಲಿಸುವ ಮೂಲಕ ಸಿಂದಗಿ ಮತದಾರರು ಭ್ರಷ್ಟ ಬಿಜೆಪಿ ಪಕ್ಷಕ್ಕೆ ಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಅಭ್ಶಥಿ೯ ಅಶೋಕ ಮನಗೂಳಿ ಹೇಳಿದರು.ಸಿಂದಗಿ ತಾಲೂಕು ಖಾನಾಪೂರ ತೋಟ, ಖಾನಾಪೂರ, ಕರವಿನಾಳ ತಾಂಡಾ, ಕರವಿನಾಳದ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಸಂಜೆ ಮತಯಾಚಿಸಿ ಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಶ ಬಿಜೆಪಿ ಸಕಾ೯ರಗಳು ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ಈ ಸಕಾ೯ರದಲ್ಲಿ ಭ್ರಷ್ಟಾಚಾರ ಜಾಸ್ತಿಯಾಗಿದೆ. ರೈತರ ಸಾಲ ಮನ್ನಾ ಮಾಡಿಲ್ಲ. ಇಲ್ಲಿಯವರೆಗೆ ಯಾವುದೇ ಕಾಯ೯ಕ್ರಮ ಮಾಡದೆ ಚುನಾವಣೆ ಸಂದಭ೯ದಲ್ಲಿ ಭರವಸೆ ಕೊಡುತ್ತಿದ್ದಾರೆ ಎಂದರು. ಮುಖಂಡರಾದ ಗುರಣ್ಣಗೌಡ ಪಾಟೀಲ ನಾಗಾವಿ, ತಮ್ಮನಗೌಡ ಪಾಟೀಲ, ಮಲ್ಲಣ್ಣ ಸಾಲಿ, ಯಂಕನಗೌಡ ಪಾಟೀಲ, ಶಿವು ಹತ್ತಿ, ರವಿರಾಜ ದೇವರಮನಿ, ಬಸವರಾಜ ಮಾರಲಭಾವಿ, ಆರ್.ಜಿ.ಮಾನಶೆಟ್ಟಿ, ಸಲೀಮ್ ಮೇಲಿನಮನಿ, ಬಿ.ವೈ.ಅಮರಗೋಳ, ಶ್ರೀಶೈಲ್ ಜಾಲವಾದಿ, ಬಸನಗೌಡ ಉಳ್ಳೆಸೂರ,ಹಣಮಂತ್ರಾಯಗೌಡ ಬಿರಾದಾರ, ಮಹೇಶ ಮನಗೂಳಿ, ಕುಮಾರ…
ದೇವರಹಿಪ್ಪರಗಿ: ಕೆರೂಟಗಿ ಗ್ರಾಮದಲ್ಲಿ ಆನಂದ ಚಟ್ಟರಕಿ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಸೋಮನಗೌಡ ಪಾಟೀಲ ಸಾಸನೂರ ಉಪಸ್ಥಿತಿಯಲ್ಲಿ ಬಿಜೆಪಿ ಸೇರಿದರು.ತಾಲ್ಲೂಕಿನ ಕೆರೂಟಗಿ ಗ್ರಾಮದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರನ್ನು ಗ್ರಾಮಕ್ಕೆ ಸ್ವಾಗತಿಸಿ ವಿಧ್ಯುಕ್ತವಾಗಿ ಬಿಜೆಪಿ ಸೇರಿದರು. ಈ ಸಂದರ್ಭದಲ್ಲಿ ಶಾಸಕ ಸೋಮನಗೌಡ ಮಾತನಾಡಿ, ಕ್ಷೇತ್ರದಲ್ಲಿ ಯಾವುದೇ ಜಾತಿ, ಮತ ಪಂಥಗಳಿಗೆ ಸೀಮಿತಗೊಳ್ಳದೇ ಅಭಿವೃದ್ಧಿಯೇ ಮೂಲಮಂತ್ರವನ್ನಾಗಿಸಿ ಕಾರ್ಯ ಮಾಡಿದ ತೃಪ್ತಿ ನನಗಿದೆ. ಇಂದು ನೀವೆಲ್ಲಾ ಬಿಜೆಪಿ ಸೇರುವುದರ ಮೂಲಕ ಪಕ್ಷಕ್ಕೆ ಹಾಗೂ ನನಗೆ ಇನ್ನಷ್ಟು ಶಕ್ತಿ ತುಂಬಿದ್ದೀರಿ ಎಂದರು.ಗ್ರಾಮದ ಆನಂದ ಚಟ್ಟರಕಿ ಮಾತನಾಡಿ, ಬಿಜೆಪಿ ಶಾಸಕರ ಅಭಿವೃದ್ಧಿಪರ ವಿಚಾರ ಹಾಗೂ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಇಂದು ಯಾವುದೇ ಷರತ್ತುಗಳಿಲ್ಲದೇ ಪಕ್ಷಕ್ಕೆ ಸೇರುತ್ತಿದ್ದೇವೆ ಎಂದರು.ಈ ಸಂದರ್ಭದಲ್ಲಿ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಮಲಕಾಜಯ್ಯ ಹಿರೇಮಠ, ಬಸಯ್ಯ ಹಿರೇಮಠ, ನಾನಾಗೌಡ ಚಟ್ಟರಕಿ, ಕೆ.ಸಿ.ಚಟ್ಟರಕಿ, ಮಡಿವಾಳಪ್ಪ ಹುಡೇದ, ಮಲ್ಲು ಕರತಪ್ಪಗೋಳ, ಮಲ್ಲಿಕಾರ್ಜುನ ಚಟ್ಟರಕಿ, ಕಂಠೆಪ್ಪ ಹುಡೇದ,…
ದೇವರಹಿಪ್ಪರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸುಭದ್ರ ಸರಕಾರ ರಚನೆಗೆ ಕ್ಷೇತ್ರದ ಮತದಾರ ಪ್ರಭುಗಳು ಬೆಂಬಲಿಸಿ ಆಶೀರ್ವಾದ ಮಾಡಬೇಕು. ಉತ್ತಮ ಆಡಳಿತಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ ಮನವಿ ಮಾಡಿದರು.ದೇವರಹಿಪ್ಪರಗಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ಪ್ರತಿಯೊಂದು ಗ್ರಾಮಗಳಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸ್ವಯಂಪ್ರೇರಣೆಯಿAದ ಪಕ್ಷದ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳೆಲ್ಲ ಮುಂದಾಳತ್ವ ವಹಿಸಿ ಪ್ರತಿಯೊಂದು ಸಮುದಾಯದ ಮತ ಪಡೆಯುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಡೀ ಕ್ಷೇತ್ರದ ಜನ ಹೋದಲ್ಲಿ ಪ್ರೀತಿ ವಿಶ್ವಾಸ, ಅಭಿಮಾನದಿಂದ ಬರಮಾಡಿಕೊಂಡು ಶುಭ ಹರಸುತ್ತಿದ್ದಾರೆ. ಅದಕ್ಕಾಗಿ ಈ ಸಲ ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಬಾವುಟ ಹಾರಾಡುವುದು ಗ್ಯಾರಂಟಿಯಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದು ಕ್ಷೇತ್ರದ ಅಭಿವೃದ್ದಿಗೆ ಕಾಂಗ್ರೆಸ್ಗೆ ಮತ ನೀಡಿ, ಪ್ರತಿಯೊಬ್ಬರು ಬೆಂಬಲಿಸಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.ಕೆಪಿಸಿಸಿ ಸದಸ್ಯ ಬಿ ಎಸ್ ಪಾಟೀಲ ಯಾಳಗಿ, ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಷ ಛಾಯಾಗೋಳ ಮಾತನಾಡಿ, ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು…
ಆಲಮೇಲ: ಮತಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಸಂಕಲ್ಪ ಮಾಡಿಕೊಂಡು ಜನರ ಸೇವೆ ಸಲ್ಲಿಸುತ್ತಿರುವೆ ಎಂದು ಬಿಜೆಪಿ ಅಭ್ಯರ್ಥಿ ಶಾಸಕ ರಮೇಶ ಭೂಸನೂರ ಹೇಳಿದರು.ಅವರು ಸಮೀಪದ ದೇವರನಾವದಗಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದರು.ದೊರೆತಿರುವ ಹದಿನಾರು ತಿಂಗಳಲ್ಲಿ ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ರಸ್ತೆನಿರ್ಮಾಣ ಮಾಡಲಾಗಿದೆ, ನೀರು, ವಿಧ್ಯುತ್ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ ರೈತರಿಗೆ ಅನುಕೂಲ ಮಾಡಿರುವೆ. ಮುಂದಿನ ದಿನಗಳಲ್ಲಿ ನೂತನ ಆಲಮೇಲ ತಾಲೂಕಿಗೆ ಪ್ರತಿಯೊಂದು ಇಲಾಖೆಗಳ ಕಛೇರಿಗಳ ಪ್ರಾರಂಭ, ಮಿನಿ ವಿಧಾನಸೌಧ ನಿರ್ಮಾಣಮಾಡುವ ಗುರಿ ಹೊಂದಲಾಗಿದೆ ಎಂದರು.ಜಿಪಂ ಮಾಜಿಉಪಾಧ್ಯಕ್ಷ ಸಿದ್ದಾರಾಮ ಪಾಟೀಲ, ಶ್ರೀಮಂತಗೌಡ ನಾಗೂರ, ಯಶವಂತ್ರಾಯಗೌಡ ರೂಗಿ, ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಬಿ.ಎಚ್.ಬಿರಾದಾರ, ರಮೇಶಗೌಡ ಹವಳಗಿ, ಗುರಣ್ಣಗೌಡ ಗುಗ್ಗರಿ ಇದ್ದರು.ಇದೇ ಸಂದರ್ಭದಲ್ಲಿ ಚಿಕ್ಕಹವಳಗಿ, ಕುಳೇಕುಮಟಗಿ, ಶಿರಸಗಿ ಗ್ರಾಮಗಳಲ್ಲಿ ಮನೆಮನೆಗೆ ಸಂಚರಿಸಿ ಮತಯಾಚನೆ ಮಾಡಿದರು
ವಿಜಯಪುರ: ತಂದೆಯ ಅಭಿವೃದ್ಧಿ ಮೆಚ್ಚಿರುವ ಜನ ನಿರೀಕ್ಷೆಗೂ ಮೀರಿ ಬೆಂಬಲ ನೀಡುತ್ತಿದ್ದು, ಅತೀ ಹೆಚ್ಚು ಮತಗಳಿಂದ ಗೆಲುವು ನಿಶ್ಚಿತ ಎಂದು ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ ನಂ.29, 30 ಹಾಗೂ 24 ರ ಕಾಸಗೇರಿ, ಬಸವನಗರ, ಗೌಡರ ಓಣಿ, ಮಣೂರ ಕಾಲೊನಿ, ಸುಹಾಗ ಕಾಲೊನಿ, ಗಿರೀಶ ನಗರ, ಕುಂಬಾರ ಓಣಿ, ಕಮಾನಖಾನ ಬಜಾರ, ತೇಕಡೆ ಗಲ್ಲಿ, ಯಡವಣ್ಣವರ ಗಲ್ಲಿ ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸಿ ಅವರು ಮಾತನಾಡಿದರು. ಕೊರೊನಾ ಮಹಾಮಾರಿಯಿಂದ ಎರಡು ವರ್ಷ ಅಭಿವೃದ್ಧಿ ಕುಂಠಿತಗೊಂಡರೂ, ಉಳಿದ ಕೇವಲ ಮೂರು ವರ್ಷಗಳಲ್ಲಿ ಎರಡೂವರೆ ಸಾವಿರ ಕೋಟಿಗೂ ಹೆಚ್ಚು ಅನುದಾನ ತರುವ ಮೂಲಕ ರಸ್ತೆ ಗಳ ಅಭಿವೃದ್ಧಿ, ಒಳಚರಂಡಿ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ, ಸಮರ್ಪಕ ಕಸ ವಿಲೇವಾರಿ, ಉದ್ಯಾನಗಳ ಅಭಿವೃದ್ಧಿ, ಓಪನ್ ಜಿಮ್, ಚಿಲ್ಡ್ರನ್ ಪಾರ್ಕ್, ಮಹಾಪುರುಷರ ವೃತ್ತಗಳು ನಿರ್ಮಾಣ ಹಾಗೂ ಮಾರ್ಗಗಳಿಗೆ ಹೆಸರು ನಾಮಕರಣ ಸೇರಿದಂತೆ ಹಲವು…
ಮುದ್ದೇಬಿಹಾಳ: ಹಿಂದೂ ಧರ್ಮದಲ್ಲಿ ಪದ್ಧತಿಗಳು ಬಹಳ ಇವೆ. ಆ ಪದ್ಧತಿಗಳನ್ನು ಕಲಿಸಲೆಂದೇ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಪಟ್ಟಣದ ಜಂಗಮ ಗೆಳೆಯರ ಬಳಗದಿಂದ ಹತ್ತು ದಿನಗಳ ಕಾಲ ವೇದ ಅಧ್ಯಯನದ ಶಿಬಿರ ಏರ್ಪಡಿಸಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದು ಹಿರೂನಿನ ಜಯಸಿದ್ದೇಶ್ವರ ಶಿವಾಚಾರ್ಯರು ಹೇಳಿದರು.ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈದಿಕ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದ ಧಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಸಮಾಜದಲ್ಲಿ ಜನನದಿಂದ ಮರಣದವರೆಗೆ ಬರುವ ಎಲ್ಲ ತರಹದ ಪೂಜಾ ಕಾರ್ಯಕ್ರಮಗಳಲ್ಲಿ ಪುರೋಹಿತ ಅಥವಾ ಶಾಸ್ತಿçಗಳಾಗಿ ಜೀವನ ನಡೆಸುವದಕ್ಕೆ ಇಂತಹ ಶಿಬಿರಗಳು ನೆರವಾಗಲಿವೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಶಿಬಿರಗಳನ್ನು ಗೆಳೆಯರ ಬಳಗ ನಡೆಸಲಿ ಎಂದರು.ಢವಳಗಿ ಗದ್ದುಗೆಮಠದ ಘನಮಠ ಶ್ರೀಗಳು ಮಾತನಾಡಿ, ಮಕ್ಕಳು ಸಮಾಜಮುಖಿಯಾಗಿ ಬೆಳೆಯಲು ಈಗಿನ ಕಾಲಘಟ್ಟದಲ್ಲಿ ಮಕ್ಕಳಿಗಿಂತ ಮೊದಲು ಅವರ ತಂದೆ ತಾಯಿಗೆ ಸಂಸ್ಕಾರ ಕೊಡಬೇಕಾದ ಅಗತ್ಯವಿದೆ. ಸಧ್ಯದ ದಿನಮಾನಗಳಲ್ಲಿ ಜಂಗಮರೆAದರೆ ಕೊರಳಲ್ಲಿ ಲಿಂಗವಿರುವುದಿಲ್ಲ. ಮತ್ತೊಬ್ಬರಿಗೆ ಉಪದೇಶ ಮಾಡುವ ಮುನ್ನ ನಮ್ಮಲ್ಲಿ ಸಂಸ್ಕಾರವಿದೆಯೇ…
ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಬುಧವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ‘ಸಖಿ’ ಬೂತ್ ಮತದಾನ ಕೇಂದ್ರದ ಮುಂಭಾಗದಲ್ಲಿ ಬಿಡಿಸಿರುವ ಸುಂದರ ಕಲಾಕೃತಿಗಳನ್ನು ವೀಕ್ಷಿಸಿದರು. ಪ್ರಗತಿಯಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಾಂತ್ರಿಕ ಸಿಬ್ಬಂದಿಗಳಿಗೆ ಸೂಚಿಸಿದರು.ಕಂಬಾಗಿ ಗ್ರಾಮದ ಪ್ರಗತಿಯಲ್ಲಿರುವ ಅಮೃತ ಸರೋವರ ಯೋಜನೆಯ ಕೆರೆ ಹೂಳೆತ್ತಿ ಅಭಿವೃದ್ಧಿಪಡಿಸುತ್ತಿರುವ ಹಿನ್ನೆಲೆಯಲ್ಲಿ,ಸುತ್ತ-ಮುತ್ತಲಿನ ರೈತರಿಗೆ ಅನುಕೂಲವಾಗಿರುವ ಕುರಿತು ರೈತರೊಂದಿಗೆ ಸಮಾಲೋಚಿಸಿದರು. ಕಾಮಗಾರಿಯಲ್ಲಿ ತೊಡಗಿರುವ ಕೂಲಿಕಾರ್ಮಿಕರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಮತ್ತು ಕ್ಯಾಪ್ ವಿತರಿಸಲು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಮದರಕಂಡಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಿರ್ಮಿಸಿರುವ ಬಾಸ್ಕೆಟ್ ಬಾಲ್ ಕ್ರೀಡಾಂಗಣದ ಕಾಮಗಾರಿ ಪರಿಶೀಲನೆ ನಡೆಸಿ, ಬಾಸ್ಕೆಟ್ ಬಾಲ್ ಕಂಬಗಳಿಗೆ ೩ ಎಂಎA ಫೈಬರ್ ಗ್ಲಾಸ್ ಅಳವಡಿಸುವಂತೆಯೂ, ಕ್ರೀಡಾಂಗಣದ ಸುತ್ತ ಗುಣಮಟ್ಟದ ಕೆಂಪು ಮರಳು ಹಾಕುವ ವ್ಯವಸ್ಥೆ ಮಾಡುವಂತೆ ತಾಂತ್ರಿಕ…
ವಿಜಯಪುರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವಿಜಯಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ ಅವರ ಅನುಮೋದನೆಯ ಮೇರೆಗೆ ಫಯಾಜ ಕಲಾದಗಿ ಅವರನ್ನು ವಿಜಯಪುರ ಜಿಲ್ಲಾ ಪ್ರಚಾರ ಸಮಿತಿಯ ಜಂಟಿ ಸಂಯೋಜಕರನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಮಹ್ಮದ ರಫೀಕ ಟಪಾಲ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು ಫಯಾಜ ಅವರು ಕೂಡಲೇ ಈ ಆದೇಶ ತಕ್ಷಣದಿಂದ ಜಾರಿಗೆ ಬರುತ್ತಿದ್ದು, ಅಧಿಕಾರವನ್ನು ವಹಿಸಿಕೊಂಡು ಪಕ್ಷದ ಮುಖಂಡರ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ.
