Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಏಳಗಿ (ಚಡಚಣ): ಸಜ್ಜನರಾದ ವಿಠ್ಠಲ ಕಟಕದೊಂಡ ಹಾಗೂ ಜಾಣರಾದ ರಾಜು ಆಲಗೂರ್ ನಾಗಠಾಣ ಕ್ಷೇತ್ರದ ಜೋಡೆತ್ತುಗಳು ಎಂದು ಮುಖಂಡ ಎಮ್.ಆರ್. ಪಾಟೀಲ ಮಾರ್ಮಿಕವಾಗಿ ಹೇಳಿದರು.ಇಲ್ಲಿ ಮಂಗಳವಾರ ನಡೆದ ಚುನಾವಣೆ ಸಭೆಯಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಕಟಕದೊಂಡರಿಗೆ ಗೆಲ್ಲಿಸುವ ಮೂಲಕ ಈ ಇಬ್ಬರು ಅನುಭವಸ್ಥರ ಉಪಯೋಗವನ್ನು ಕ್ಷೇತ್ರದ ಜನ ಪಡೆಯಬೇಕು. ಜೆಡಿಎಸ್ ಶಾಸಕ ಹಣದ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಅವರ ದುಡ್ಡು ಪಡೆದು ಕಾಂಗ್ರೆಸ್ಗೆ ಮತ ನೀಡಿ ಎಂದು ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯ ಸಿಎಂ ಆಗುತ್ತಾರೆ, ಎಂ.ಬಿ. ಪಾಟೀಲರು ನೀರಾವರಿ ಸಚಿವರಾಗಿ ಈ ಭಾಗ ಅಭಿವೃದ್ಧಿ ಆಗಲಿದೆ ಎಂದರು.ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಗೌಡೇಶಗೌಡ ಪಾಟೀಲ ಮಾತನಾಡಿ, ಪಕ್ಷ ತೊರೆದು ಹೋಗಿದ್ದೆವು. ಮರಳಿ ಮನೆಗೆ ಬಂದಿದ್ದು ನನಗೆ ಭಾವುಕನಾಗಿಸಿದೆ. ನಾನು ಜೀವಂತ ಇರುವವರೆಗೆ ಕಾಂಗ್ರೆಸ್ ತೊರೆಯಲ್ಲ. ಅತ್ಯಧಿಕ ಬಹುಮತದಿಂದ ಕಟಕದೊಂಡರನ್ನು ಗೆಲ್ಲಿಸುತ್ತೇವೆ ಎಂದರು.ಮಾಜಿ ಶಾಸಕ ರಾಜು ಆಲಗೂರ ಹಾಗೂ ಅಭ್ಯರ್ಥಿ ವಿಠ್ಠಲ ಕಟಕದೊಂಡ ಅವರು ಕಾಂಗ್ರೆಸ್ ಸಾಧನೆಗಳನ್ನು ವಿವರಿಸಿ ಮತಯಾಚಿಸಿದರು.…
ನಂದ್ರಾಳ (ಚಡಚಣ): ಕಾಂಗ್ರೆಸ್ ಅಭ್ಯರ್ಥಿ ವಿಠ್ಠಲ ಕಟಕದೊಂಡ ಅವರು ಮಂಗಳವಾರ ನಂದ್ರಾಳ ಗ್ರಾಮದಲ್ಲಿ ಮತಯಾಚಿಸಿದರು.ಮಾಜಿ ಶಾಸಕ ರಾಜು ಆಲಗೂರ, ಎಂ.ಆರ್.ಪಾಟೀಲ, ಸುರೇಶ ಗೊಣಸಗಿ, ಗ್ರಾಮದ ಮುಖಂಡರಾದ ಖಾಜಾಸಾಬ್ ಪಟೇಲ, ಶಾಂತಪ್ಪ ದೇವದರ, ಶ್ರೀಶೈಲ ನಂದರಾಳ, ರಾಮು ಬನಸೂರೆ, ಪೀರಪ್ಪ ಕಾಂಬಳೆ, ಶಿವರಾಯ ಬತಕುಣಕಿ, ಪರಮೇಶ್ವರ ಕಾಂಬಳೆ ಅನೇಕರಿದ್ದರು.
ವಿಜಯಪುರ: ಬಬಲೇಶ್ವರ ಮತಕ್ಷೇತ್ರದ 20 ಜನವಸತಿ ಪ್ರದೇಶಗಳಿಗೆ ಜಲ ಜೀವನ್ ಮಿಷನ್(ಜೆಜೆಎಂ)ನಡಿ ಕುಡಿಯಲು ನದಿ ನೀರನ್ನು ಒದಗಿಸುವ ಯೋಜನೆ ಪ್ರಗತಿಯಲ್ಲಿದೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬಬಲೇಶ್ವರ ತಾಲೂಕಿನ ಕಾತ್ರಾಳ, ಹಣಮಸಾಗರ, ಹೊಸೂರ, ಜಂಬಗಿ, ಚಿಕ್ಕಗಲಗಲಿ ಗ್ರಾಮಗಳಲ್ಲಿ ಅವರ ಪ್ರಚಾರ ಕೈಗೊಂಡ ಅವರು ಕಾತ್ರಾಳ ಹಳ್ಳಿ ಮುತ್ಯಾನ ವಸ್ತಿ ಮತ್ತು ಕಾತ್ರಾಳ ಗ್ರಾಮದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಮಾತನಾಡಿದರು. ಈ ಭಾಗದ ಜನ ಶ್ರಮಜೀವಿಗಳು, ಈ ಮುಂಚೆ ನೀರಿಲ್ಲದ ಕಾರಣ ಗುಳೆ ಹೋಗುತ್ತಿದ್ದರು. ಈಗ ಈ ಭಾಗದಲ್ಲಿ ಕೆರೆಗಳು ತುಂಬಿವೆ. ನೀರಾವರಿ ಯೋಜನೆಗಳಿಂದಾಗಿ ಈ ಗ್ರಾಮಕ್ಕೆ ಅಂಟಿದ್ದ ಕುಗ್ರಾಮ ಹಣೆಪಟ್ಟಿ ತೊಲಗಿದೆ. ಇಲ್ಲಿ ಈಗ 80 ಸಾವಿರ ಟನ್ ಕಬ್ಬು ಬೆಳೆಯಲಾಗುತ್ತಿದ್ದು, ಕೃಷಿ ಕಾರ್ಮಿಕರಿಗೆ ಉತ್ತಮ ಕೂಲಿ ಸಿಗುತ್ತಿದೆ. ಇಲ್ಲಿನ ಜನ ಸದಾ ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿ, ಅಭಿವೃದ್ದಿಯತ್ತ ದಾಪುಗಾಲು ಹಾಕಿದ್ದಾರೆ. ಇದು ಶಾಸಕನಾದ ನನಗೆ ಹೆಮ್ಮೆ ತಂದಿದೆ ಎಂದು ಅವರು ಹೇಳಿದರು. ನಾವು ಜನರಿಗೆ…
ವಿಜಯಪುರ: ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರ ಪತ್ನಿ ಪ್ರಚಾರಕ್ಕೆ ತೆರಳಿದ ವೇಳೆ ವಿರೋಧ ಪಕ್ಷದವರು ಅಡ್ಡಿ ಪಡಿಸಿದ ಘಟನೆ ತಿಕೋಟಾ ತಾಲೂಕಿನ ಹುಬನೂರ ಎಲ್. ಟಿ. ಯಲ್ಲಿ ನಡೆದಿದೆ.ಆಶಾ ಎಂ. ಪಾಟೀಲ ಅವರು ಹುಬನೂರ ಎಲ್. ಟಿ. ಯಲ್ಲಿ ಪ್ರಚಾರ ನಿರತರಾಗಿದ್ದಾಗ ಬಂದ ಯುವಕರ ಗುಂಪೊಂದು ಬೈಕ್ ಶಬ್ದ ಮಾಡುತ್ತ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ, ಬೆದರಿಕೆ ಹಾಕಿದ್ದಾರೆ.ಮಹಾರಾಷ್ಟ್ರದ ಗಡಿಯಲ್ಲಿರುವ ಈ ತಾಂಡಾಕ್ಕೆ ಬಹುಷಃ ಹೊರ ರಾಜ್ಯದಿಂದ ಆಗಮಿಸಿದ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಪ್ರಚಾರಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿ ಕೆಲಕಾಲ ಆತಂಕದ ವಾತಾವರಣ ಸೃಷ್ಠಿಸಿದ್ದಾರೆ.ಈ ಘಟನೆ ಇಡೀ ಭಾಗದಲ್ಲಿ ಮತದಾರರಲ್ಲಿ ಆತಂಕ ಉಂಟು ಮಾಡಿದ್ದು, ಎಂ. ಬಿ. ಪಾಟೀಲ ಅವರ ಕುಟುಂಬಕ್ಕೆ ಭದ್ರತೆ ನೀಡಬೇಕು. ಮುಂದೆ ಹೀಗಾಗದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿ. ಪಂ. ಮಾಜಿ ಅಧ್ಯಕ್ಷ ಹಾಗೂ ರೆಡ್ಡಿ ಸಮಾಜದ ಮುಖಂಡ ಬಸವರಾಜ ದೇಸಾಯಿ ಆಗ್ರಹಿಸಿದ್ದಾರೆ.ಎಂದಿನಂತೆ ಪ್ರಚಾರಕ್ಕೆ ತೆರಳುವ ಮಹಿಳೆಯರಿಗೆ ಈ…
ಬಸವನಬಾಗೇವಾಡಿ: ಮಾನವೀಯತೆ ಪ್ರೀತಿಸಿ ಜಗತ್ತಿಗೆ ಮಾನವೀಯತೆ ಸಂದೇಶ ಸಾರಿದ ಮಹಾತ್ಮರನ್ನು ಇಂದು ಜಾತಿ ಚೌಕಟ್ಟಿನಲ್ಲಿ ಇಡುತ್ತಿರುವುದು ತುಂಬ ವಿಷಾದನೀಯ ಸಂಗತಿ ಎಂದು ವಿಜಯಪುರದ ಸಾಹಿತಿ ರಾಜೇಂದ್ರಕುಮಾರ ಬಿರಾದಾರ ಹೇಳಿದರು.ಪಟ್ಟಣದ ಬಸವೇಶ್ವರ ದೇವಾಲಯದ ಆವರಣದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯು ಬಸವ ಜಯಂತಿಯಂಗವಾಗಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ವಚನ ಚಿಂತನ ಗೋಷ್ಠಿಯಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಮಹಾತ್ಮರ ತತ್ವಗಳನ್ನು ಹೇಳದೇ ಇರುವುದು ದೊಡ್ಡ ದುರಂತ. ಈ ಭಾಗದ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿಯವರು ಎಂದಿಗೂ ಜಾತಿ ಸಮಾವೇಶಕ್ಕೆ ತೆರಳದೇ ಇದ್ದ ಮಹಾನ್ ಸಂತರಾಗಿದ್ದರು. ಜಾತಿ ವ್ಯವಸ್ಥೆ ನಿರ್ಮೂಲನೆ ಆಗುವುದು ಹಿಂದಿಗಿಂತಲೂ ಇಂದು ಹೆಚ್ಚಿದೆ. ಇಂದಿನ ಯುವಪೀಳಿಗೆಗೆ ಬಸವಣ್ಣ ಅವರ ಕುರಿತು ತಿಳಿಸಿಕೊಡುವ ಕಾರ್ಯ ಮಾಡಬೇಕಿದೆ ಎಂದರು.ಬಸವೇಶ್ವರರ ಸಪ್ತಸೂತ್ರಗಳನ್ನು ಒಳಗೊಂಡ ಕಳಬೇಡ, ಕೊಲಬೇಡ….. ಎಂಬ ವಚನವೊಂದೇ ಜೀವನದಲ್ಲಿ ಅಳವಡಿಸಿಕೊಳ್ಳುವಂತಾದರೆ ಸುಂದರ ಸಮಾಜ ನಿರ್ಮಾಣವಾಗುವುದರಲ್ಲಿ ಸಂದೇಹವಿಲ್ಲ. ಬಸವಣ್ಣನವರು ಆತ್ಮಸಾಕ್ಷಿ, ಆತ್ಮಾವಲೋಕನ ಮಾಡಿಕೊಂಡು ಪರಿಶುದ್ಧ ಮಾಡಿಕೊಂಡಿದ್ದರು. ಎಲ್ಲರಿಗೂ ಬಸವಣ್ಣನವರು ಪರಿಚಯವಾದರೆ ಮಾತ್ರ ಅವರ ತತ್ವಗಳನ್ನು ಅಳವಡಿಸಿಕೊಳ್ಳಲು ಸಾಧ್ಯ…
ಚಡಚಣ: ರಾಜ್ಯದಲ್ಲಿ ರೈತರ ಬೆನ್ನೆಲುಬಾಗಿ ನಿಲ್ಲುವ ಏಕೈಕ ನಾಯಕ ಅಂದ್ರೆ ಕುಮಾರಸ್ವಾಮಿ ಒಬ್ಬರೇ. ಅವರು ರಾಜ್ಯದ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಶಾಸಕ, ಜೆಡಿಎಸ್ ಅಭ್ಯರ್ಥಿ ದೇವಾನಂದ ಚವ್ಹಾಣ ಭವಿಷ್ಯ ನುಡಿದರು.ಮಂಗಳವಾರ ಸಮೀಪದ ಕನ್ನೂರ ಗ್ರಾಮದಲ್ಲಿ ಮತ ಯಾಚಿಸಿ ಅವರು ಮಾತನಾಡಿದರು.ಮತಕ್ಷೇತ್ರದಲ್ಲಿ ಯುವಕರು, ಹಿರಿಯರು ಸೇರಿದಂತೆ ಎಲ್ಲರೂ ನನಗೆ ಬೆಂಬಲಿಸುತ್ತಿದ್ದಾರೆ. ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಚಿರಋಣಿಯಾಗಿದ್ದು, ಖಂಡಿತ ಈ ಸಲದ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ನನಗೆ ಅತೀ ಹೆಚ್ಚು ಮತ ಚಲಾಯಿಸುವ ಮೂಲಕ ಬಹುಮತದೊಂದಿಗೆ ಆಯ್ಕೆ ಮಾಡುವ ವಿಶ್ವಾಸವಿದೆ. ಎಲ್ಲೆಡೆ ಜೆಡಿಎಸ್ ಪಕ್ಷಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ಈರಪ್ಪ ಬೆಳ್ಳುಂಡಗಿ, ಮಲ್ಲಿಕಾರ್ಜುನ ಬರಕಡೆ ಮಾತನಾಡಿ, ಸಮ್ಮಿಶ್ರ ಸರಕಾರದ ಅಧಿಕಾರಾವಧಿಯಲ್ಲಿ ಶಾಸಕ ದೇವಾನಂದ ಮತಕ್ಷೇತ್ರದ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ತಂದರು. ಇನ್ನೇನು ಕೆಲಸ ಪ್ರಾರಂಭವಾದವು. ನಂತರ ಎರಡು ವರ್ಷಗಳ ಕಾಲ ಕೊರೊನಾ ಎಂಬ ಮಹಾಮಾರಿಯಿಂದ ಅಭಿವೃದ್ಧಿ ಕಾರ್ಯ ಕುಂಠಿತವಾಯಿತು. ನಂತರ ಅಧಿಕಾರಕ್ಕೆ ಬಂದ ಸರಕಾರ ಅನುದಾನ…
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆದಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ರಾಜ್ಯ ವಿಧಾನಸಭಾ ಚುನಾವಾಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಆದಿ ಶ್ರೀ ಶಂಕರಾಚಾರ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ,ಆದಿ ಶಂಕರಾಚಾರ್ಯರು ಸಮಾಜದ ಸುಧಾರಣೆಗಾಗಿ ದೇಶಾದ್ಯಂತ ಸಂಚರಿಸಿ, ಭಾರತ ಸಂಸ್ಕೃತಿಯನ್ನು ಎತ್ತಿಹಿಡಿದು, ಭಾರತೀಯ ಸಂಸ್ಕೃತಿ ಬೆಳವಣಿಗೆಗೆ ಕಾರಣರೆನಿಸಿಕೊಂಡರು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ. ನಾಗರಾಜ್, ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ವಿಜಯಪುರ: ಜಲ ಶಕ್ತಿ ಅಭಿಯಾನದಡಿ ನೀರಿನ ಸಂರಕ್ಷಣೆ ಮತ್ತು ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರೆ ಜಲಮೂಲಗಳ ಪುನಃಶ್ಚೇತನ, ನೀರಿನ ಮರುಬಳಕೆ ಮತ್ತು ಮರುಪೂರಣ, ಜಲಾನಯನ ಪ್ರದೇಶ ಅಭಿವೃದ್ಧಿ & ಅರಣ್ಯೀಕರಣ ಕಾಮಗಾರಿಗಳಿಗೆ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿAದು ಜರುಗಿದ ಜಲ ಶಕ್ತಿ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಖ್ಯವಾಗಿ ಮಳೆ ನೀರು ಸಂರಕ್ಷಣೆಗಾಗಿ ಬೋರವೆಲ್ ಇಂಗುಗುAಡಿ, ಚೆಕ್ ಡ್ಯಾಂ ನಿರ್ಮಾಣ, ಸಮಗ್ರ ಕೆರೆ ಅಭಿವೃದ್ಧಿ, ಗೋಕಟ್ಟೆ/ಕಲ್ಯಾಣಿ ಪುನಃಶ್ಚೇತನ, ಬದು ಮತ್ತು ಕೃಷಿ ಹೊಂಡ ನಿರ್ಮಾಣ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವುದು. ಸ್ಥಳಾವಕಾಶವಿರುವ ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳಲ್ಲಿ ಸಸಿಗಳನ್ನು ನೆಡುವುದು, ಅಮೃತ ಸರೋವರದ ಆವರಣದಲ್ಲಿ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಸರಕಾರಿ ಸ್ಥಳಗಳಲ್ಲಿ ಸಸಿಗಳನ್ನು ನೆಡಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಕಲ್ಯಾಣಿ, ಕೆರೆ-ಕಟ್ಟೆಯಂತಹ ವಿವಿಧ ಜಲ ಮೂಲಗಳನ್ನು ಸ್ವಚ್ಛವಾಗಿಡಬೇಕು.ಕುಡಿಯಲು ಬಳಸುವ ಜಲ ಮೂಲಗಳನ್ನು…
ವಿಜಯಪುರ: ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಅತೀ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿ ಮತ್ತು ಸರಕಾರದಲ್ಲಿ ಉನ್ನತ ಸ್ಥಾನಕ್ಕೇರಲಿ ಎಂದು ಪ್ರಾರ್ಥಿಸಿ ಯುವಕರು ದೀರ್ಘದಂಡ ನಮಸ್ಕಾರ ಹಾಕಿ ಗಮನ ಸೆಳೆದಿದ್ದಾರೆ.ಬಬಲೇಶ್ವರ ತಾಲೂಕಿನ ಕಣಬೂರ ಗ್ರಾಮದ 24 ಯುವಕರು ಕೃಷ್ಣಾ ನದಿಯಿಂದ ಗ್ರಾಮದ ಶ್ರೀ ರಾಚೋಟೇಶ್ವರ ದೇವಸ್ಥಾನದ ವರೆಗೆ ದೀರ್ಘದಂಡ ನಮಸ್ಕಾರ ಹಾಕಿದರು. ಅಲ್ಲದೇ, ಎಂ. ಬಿ. ಪಾಟೀಲರು ಉನ್ನತ ಸ್ಥಾನಕ್ಕೇರಲಿ. ಈ ಭಾಗದಲ್ಲಿ ಮತ್ತು ನಾಡಿನಾದ್ಯಂತ ಹೆಚ್ಚೆಚ್ಚು ಅಭಿವೃದ್ಧಿ ಮಾಡಲಿ ಎಂದು ಪ್ರಾರ್ಥಿಸಿದರು.ಈ ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ ಎಂ. ಬಿ. ಪಾಟೀಲ ಅವರು, ಯುವಕರ ಪ್ರೀತಿಗೆ ಕೃತಜ್ಞತೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ನೀವು ತೋರಿದ ಪ್ರೀತಿ ಮತ್ತು ಅಭಿಮಾನಕ್ಕೆ ಹೃತ್ಪೂವರ್ಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಿಮಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಕಡಿಮೆ. ನಿಮ್ಮ ಮ್ಮ ಪ್ರೀತಿ, ವಿಶ್ವಾಸ, ಆಶೀರ್ವಾದ ಸದಾ ನನ್ನ ಮೇಲೆ ಇರಲಿ. ನಾನೂ ಕೂಡ ನಿಮ್ಮೆಲ್ಲರ ಪ್ರೀತಿ ಮತ್ತು ಅಭಿಮಾನವನ್ನು ಉಳಿಸಿಕೊಂಡು…
press meet ವಿಜಯಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ವರದಿಯನ್ನು ರದ್ದು ಮಾಡುವುದಾಗಿ ಹೇಳಿ ಗೊಂದಲ ಸೃಷ್ಠಿಸುತ್ತಿದೆ. ಕಾರಣ ಈ ಚುನಾವಣೆಯಲ್ಲಿ ರಾಜ್ಯದ 33 ಲಕ್ಷ ಮಾದಿಗ ಸಮುದಾಯವು ಕಾಂಗ್ರೆಸ್ನ್ನು ತಿರಸ್ಕರಿಸಿ ಬಿಜೆಪಿಗೆ ಮತನೀಡಿ ಅಧಿಕಾರಕ್ಕೆ ತರಬೇಕೆಂದು ಕರ್ನಾಟಕ ಮಾದಿಗ ಮಹಾಸಭಾ (ಕ್ಷೇಮಾಭಿವೃದ್ಧಿ ಸಂಘ)ದ ರಾಜ್ಯಾಧ್ಯಕ್ಷ ಮುತ್ತಣ್ಣ ಬೆಣ್ಣೂರ ಕರೆ ನೀಡಿದರು.ಮಂಗಳವಾರ ನಗರದ ಖಾಸಗಿ ಹೊಟೇಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಒಳಮೀಸಲು ವರ್ಗೀಕರಣ ಮಾಡುವುದಾಗಿ 2013ರಲ್ಲಿ ಘೋಷಿಸಿಕೊಂಡು ಅಧಿಕಾರಕ್ಕೇರಿದ ಕಾಂಗ್ರೆಸ್ ಸಿದ್ರಾಮಯ್ಯನವರ ಸರಕಾರ ಅಸ್ಪçಷ್ಯರ ಸಬಲೀಕರಣಕ್ಕಾಗಿ ಒಳಮೀಸಲಾತಿ ಕುರಿತು ಚರ್ಚೆ ಮಾಡದೆ ಕಾಲಹರಣ ಮಾಡಿತು. ಶೋಷಿತರಿಗೆ ಸಾಮಾಜಿಕ ನ್ಯಾಯ ವಂಚಿಸಿದ ಡೋಂಗಿ ಕಾಂಗ್ರೆಸ್ ನೀತಿಯ ನಡೆಯು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಆದರೆ ಬಿಜೆಪಿಯ ಬೊಮ್ಮಾಯಿ ಸರಕಾರ ಪರಿಶಿಷ್ಟರ ಜನಸಂಖ್ಯಾ ಆಧಾರಿತ 2011ರ ಜನಗಣತಿ ಆಧಾರದಲ್ಲಿ ಮೀಸಲು ಏರಿಸಿ ಐತಿಹಾಸಿಕ ಒಳಮೀಸಲಾತಿ ನಿರ್ಮಾಣ ಕೈಗೊಂಡು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿ ನಮಗೆ ನ್ಯಾಯ ಒದಗಿಸಿದ ಕಾರಣ ಬಿಜೆಪಿಯನ್ನು ಬೆಂಬಲಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದರು.ಪರಿಶಿಷ್ಟ…
