Author: editor.udayarashmi@gmail.com

ಸಿಂದಗಿ: ವಿರೋಧ ಪಕ್ಷದವರು ದಾಖಲೆಗಳ ಸಹಿತ ಮಾತನಾಡಬೇಕು. ಸಿಂದಗಿ ಪಟ್ಟಣದ ಕ್ರೀಡಾಂಗಣ ನಿರ್ಮಾಣ ನನ್ನ ಅಧಿಕಾರಾವಧಿಯಲ್ಲಿ ಅನುಮೋದನೆಗೊಂಡ ಅಧಿಕೃತ ದಾಖಲೆಗಳಿವೆ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಹೇಳಿದರು.ಪಟ್ಟಣದಲ್ಲಿ ಸೋಮವಾರದಂದು ಬಿಜೆಪಿ ಕಾರ್ಯಾಲಯ ಉದ್ಘಾಟನೆ ಹಾಗೂ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಕ್ಷೇತ್ರದ ಜನ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟರೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ನಿಷ್ಠೆಯಿಂದ ಈಡೇರಿಸುವೆ ಎಂದರು.ಸಿಂದಗಿಯಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣದ ಕುರಿತು ಈಗಾಗಲೇ ೮ಕೋಟಿ ರೂ ಯೋಜನೆಯನ್ನು ಅನುಮೋದನೆಗೆ ಕಳುಹಿಸಲಾಗಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರೈತರ ಬೇಡಿಕೆಗಳನ್ನು ಈಡೇರಿಸುವೆ. ಮತ್ತು ತಾಂಡಾಗಳನ್ನು ಕಂದಾಯ ಗ್ರಾಮಕ್ಕೆ ಸೇರಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.ಲಿಂಬೆ ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಪ್ರಣಾಳಿಕೆ ಅಂಶಗಳನ್ನು ವಾಚಿಸಿದರು.ಈ ವೇಳೆ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಬಿ.ಹೆಚ್.ಬಿರಾದಾರ, ರಾಜಶೇಖರ ಪೂಜಾರಿ, ಜಿ.ಪಂ ಸದಸ್ಯ ಬಿ ಆರ್ ಯಂಟಮಾನ, ನಾಗಪ್ಪ ಶಿವೂರ, ಸಿದ್ದು ಬುಳ್ಳಾ, ವೀರಭದ್ರ ಕತ್ತಿ, ಬಸವರಾಜ ಹೂಗಾರ, ಡಾ.ಅನೀಲ ನಾಯಕ,…

Read More

ಚಡಚಣ: ಪಕ್ಷ ಗುರುತಿಸಿ ನಾಗಠಾಣ ಮತಕ್ಷೇತ್ರದ ಬಡವ ಹಾಗೂ ಸಾಮಾನ್ಯ ಬಿಜೆಪಿ ಕಾರ್ಯಕರ್ತ ಸಂಜೀವ ಐಹೊಳ್ಳಿ ಅವರನ್ನು ಅಭ್ಯರ್ಥಿ ಮಾಡಿದ್ದಾರೆ. ಅವರ ಗೆಲುವಿನ ಮೇಲೆ ನನ್ನ ಹಾಗೂ ಕಾರಜೋಳ ಭವಿಷ್ಯ ನಿಂತಿದೆ. ಆದ್ದರಿಂದ ನಾವೆಲ್ಲರೂ ಅಭ್ಯರ್ಥಿಗಿಂತ ಪಕ್ಷ ಮುಖ್ಯ ಎಂದುಕೊಂಡು ಬಿಜಿಪಿ ಪಕ್ಷವನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಮನವಿ ಮಾಡಿಕೊಂಡರು.ಸೋಮವಾರ ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿ ಚುನಾವಣೆ ನಿಮಿತ್ಯ ಪ್ರಾರಂಭಿಸಿದ ಬಿಜೆಪಿ ಕಚೇರಿ ಉದ್ಘಾಟಿಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ನಾನು ಯಾವುದೇ ತಪ್ಪು ಮಾಡಿಲ್ಲ.ನನ್ನದೂ ಸೇರಿದಂತೆ ಹಲವಾರು ಆಕಾಂಕ್ಷಿಗಳ ಹೆಸರು ಕೇಳಿ ಬಂದಿತ್ತು. ಪಕ್ಷದ ತತ್ವ ಸಿದ್ದಾಂತದಂತೆ ಕೊನೇ ಕ್ಷಣದಲ್ಲಿ ಪಕ್ಷದ ಮುಖಂಡರಿಂದ ದೂರವಾಣಿ ಕರೆ ಬಂತು, ಅವರು ಯಾರಾದರೂ ಒಬ್ಬ ಸಾಮಾನ್ಯ ಬಿಜೆಪಿ ಕಾರ್ಯಕರ್ತನ ಹೆಸರು ಸೂಚಿಸು ಅಂದಾಗ ನನಗೆ ಹಾಗೂ ಮುಖಂಡರಿಗೆ ಹೊಳೆದಿದ್ದು ಅಗರಖೇಡ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ, ಸೌಮ್ಯ ಸ್ವಭಾವದ ವ್ಯಕ್ತಿ ಸಂಜೀವ ಐಹೊಳ್ಳಿ. ಅವರ ಹೆಸರು ಪಕ್ಷ ಫೈನಲ್ ಮಾಡಿದ್ದಾರೆ.…

Read More

ದೇವರಹಿಪ್ಪರಗಿ: ಏ.25 ಮಂಗಳವಾರದAದು ಮಧ್ಯಾನ್ಹ ದೇವರಹಿಪ್ಪರಗಿ ಪಟ್ಟಣಕ್ಕೆ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಕ್ಯ ಅಮಿತ್ ಶಾ ಆಗಮಿಸಿ ಬಿಜೆಪಿ ಪರ ಬಹಿರಂಗ ಸಭೆಯ ಮೂಲಕ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಬಿಜೆಪಿ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ತಿಳಿಸಿದ್ದಾರೆ.ಮಂಗಳವಾರ ಮಧ್ಯಾನ್ಹ 1 ಗಂಟೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ ಉರ್ದು ಪ್ರೌಡಶಾಲೆಯ ಆವರಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ಮೂಲಕ ಬಿಎಲ್‌ಡಿಇ ಹಳೇ ಪ್ರೌಡಶಾಲಾ ಆವರಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.ಕೇಂದ್ರ ಗೃಹ ಸಚಿವರು ಇದೇ ಪ್ರಥಮ ಬಾರಿಗೆ ದೇವರಹಿಪ್ಪರಗಿಗೆ ಆಗಮಿಸುತ್ತಿದ್ದು, ಸುಮಾರು 20 ಸಾವಿರ ಜನ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಸೇರುವ ನಿರೀಕ್ಷೆಯಿದೆ. ಇವರ ಜೊತೆ ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ಪದಾಧಿಕಾರಿಗಳು, ಆಗಮಿಸಲಿದ್ದಾರೆ. ಮಧ್ಯಾನ್ಹ 2:30 ಗಂಟೆಯವರೆಗೆ ಕಾರ್ಯಕ್ರಮ ಜರುಗಲಿದೆ.ಕಾರ್ಯಕ್ರಮದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಕ್ಷೇತ್ರದ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ನಾಯಕರಿಗೆ ಹೆಚ್ಚಿನ ಭದ್ರತೆ ಇರುವುದರಿಂದ ಕಾರ್ಯಕರ್ತರು, ಸಾರ್ವಜನಿಕರು ಬೇಗನೆ ಬಂದು ಆಸೀನರಾಗಬೇಕು. ಮತಕ್ಷೇತ್ರದ ಎಲ್ಲ ಬಿಜೆಪಿ ಪದಾಧಿಕಾರಿಗಳು,…

Read More

ವಿಜಯಪುರ: ನಗರದಲ್ಲಿ ಭೂಮಾಪಿಯಾದವರದ್ದೆ ದರ್ಬಾರ ಆಗಿತ್ತು. ಅದನ್ನು ಸಂಪೂರ್ಣ ಬಂದ್ ಮಾಡಿರುವೆ. ಎಲ್ಲೇ ಖಾಲಿ ಜಾಗ ಇದ್ದರೂ, ಓಣಿಯ ಜನರನ್ನು ಸೇರಿಸಿ ಉದ್ಯಾನ, ಸಮುದಾಯ ಭವನ, ಓಪನ್ ಮಾಡಲಾಗುವುದು ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಹೇಳಿದರು. ನಗರ ಮತಕ್ಷೇತ್ರ ವ್ಯಾಪ್ತಿಯ ಶಾಸ್ತ್ರೀ ನಗರದಲ್ಲಿ ಸೋಮವಾರ ಮತಯಾಚನೆ ನಡೆಸಿ ಮಾತನಾಡಿದ ಅವರು, ವಿಜಯಪುರಕ್ಕೆ ಕಳೆದ ಐದು ವರ್ಷಗಳಲ್ಲಿ ನೂರಾರು ಕೋಟಿ ಅನುದಾನ ತರುವ ಮೂಲಕ ಜನರ ನಿರೀಕ್ಷೆ ಮೀರಿ ಅಭಿವೃದ್ಧಿ ಕಾರ್ಯ ಮಾಡಿರುವೆ. ದೇಶದಲ್ಲಿ ವಿಜಯಪುರ ಕೂಡ ಸ್ಮಾರ್ಟ್ ಸಿಟಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ಬಿಟ್ಟರೆ, ಅತೀ ಹೆಚ್ಚು ಓಪನ್ ಜಿಮ್ ಇರುವುದು ವಿಜಯಪುರ ನಗರದಲ್ಲೇ. ಮುಖ್ಯ ರಸ್ತೆಗಳಲ್ಲದೇ ಕಾಲೊನಿ/ಬಡಾವಣೆಗಳ ಆಂತರಿಕ ರಸ್ತೆಗಳನ್ನು ಸಿಸಿ ರಸ್ತೆಗಳನ್ನಾಗಿ ಅಭಿವೃದ್ಧಿ ಪಡಿಸುವ ಮೂಲಕ ಸುಗಮ ಸಂಚಾರದ ಜೊತೆಗೆ ಧೂಳಿನಿಂದ ಮುಕ್ತ ಮಾಡಲಾಗಿದೆ. ಇತಿಹಾಸದಲ್ಲೇ ಇಷ್ಟೊಂದು ಅಭಿವೃದ್ಧಿ ಕಾರ್ಯಗಳು ಆಗಿರಲಿಲ್ಲ ಎಂದರು. ಜೀವನದಲ್ಲಿ ಸ್ವಂತ ಮನೆ ಕಟ್ಟಿಕೊಳ್ಳಬೇಕೆಂಬ ಬಡವರ…

Read More

ದೇವರಹಿಪ್ಪರಗಿ: ಪಟ್ಟಣಕ್ಕೆ ಇಂದು(ಮAಗಳವಾರ) ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸ್ಥಳವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಪರಿಶೀಲನೆ ನಡೆಸಿದರು.ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಹಳೆಯ ಪ್ರೌಢಶಾಲಾ ಆವರಣಕ್ಕೆ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಮಧ್ಯಾನ್ಹ ೧ ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಹೆಲಿಪ್ಯಾಡ್ ನಿರ್ಮಾಣದ ಕಾರ್ಯ ಹಾಗೂ ಬಂದೋಬಸ್ತಿ ಜೊತೆಗೆ ಸುಮಾರು ಒಂದುವರೆ ಗಂಟೆಯವರೆಗಿನ ಜಿರೋ ಟ್ರಾಫಿಕ್ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿದರು. ಜೊತೆಗೆ ಸಾರ್ವಜನಿಕರ ನಿಯಂತ್ರಣ, ಜನದಟ್ಟಣೆ ನಿಯಂತ್ರಣ, ಸ್ಥಳದ ಸ್ವಚ್ಛತೆ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಸಿಬ್ಬಂದಿಗೆ ಮಾರ್ಗದರ್ಶನ ಮಾಡಿದರು.ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ಎಸ್.ಎಮ್.ಮಾರಿಹಾಳ, ವಿಜಯಪುರ ಗ್ರಾಮಾಂತರ ಉಪವಿಭಾಗದ ಡಿಎಸ್ಪಿ ಗಿರಿಮಲ್ಲ ತಳಕಟ್ಟಿ, ಸಿಪಿಐ ಆನಂದರಾವ್ ಎಸ್.ಎನ್, ಪಿಎಸ್‌ಐ ಆರ್.ವೈ.ಬೀಳಗಿ ಸೇರಿದಂತೆ ದೇವರಹಿಪ್ಪರಗಿ ಮತಕ್ಷೇತ್ರದ ಉಸ್ತುವಾರಿ ಅನೀಲ ಜಮಾದಾರ,…

Read More

ತಾಳಿಕೋಟಿ: ಮೇ ೧೦ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ನಿಮಿತ್ತ ಸೋಮವಾರ ದೇವರ ಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ಗಡಿಸೋಮನಾಳ, ಕ್ಯಾತನಾಳ, ಮೈಲೇಶ್ವರ, ಬಿಳೇಭಾವಿ, ಮಸ್ಕನಾಳ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಪರ ಸಹೋದರ ಸಾಹೇಬಗೌಡ ಪಾಟೀಲ ಅವರ ಧರ್ಮಪತ್ನಿ ಶ್ರೀಮತಿ ವಿಜಯಲಕ್ಷ್ಮಿ ಪಾಟೀಲ ಅವರು ಮನೆಮನೆಗೆ ತೆರಳಿ ಮತ ಯಾಚನೆ ಮಾಡಿದರು.ಈ ವೇಳೆ ಮಾತನಾಡಿದ ಶ್ರೀಮತಿ ವಿಜಯಲಕ್ಷ್ಮಿ ಪಾಟೀಲ ಅವರು, ಶಾಸಕ ಸೋಮನಗೌಡರು ತಮಗೆ ಸಿಕ್ಕ ಈ ೫ ವರ್ಷಗಳ ಅವಧಿಯಲ್ಲಿ ಹಿಂದೆAದೂ ಆಗದ ರೀತಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಮತಕ್ಷೇತ್ರದ ೧೨೦ ಗ್ರಾಮಗಳಿಗೂ ಅನುದಾನವನ್ನು ಕೊಟ್ಟು ಮೂಲಭೂತ ಸೌಕರ್ಯಗಳನ್ನು ಕೊಡಲು ಶಕ್ತಿಮೀರಿ ಪ್ರಯತ್ನಿಸಿದ್ದಾರೆ. ಈ ಭಾಗದಲ್ಲಿ ಹಲವಾರು ನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಅವರೆಂದೂ ರಾಜಕಾರಣ ಮಾಡಿಲ್ಲ. ಮತ್ತೊಮ್ಮೆ ಅವರಿಗೆ ಅವಕಾಶ ನೀಡಿದರೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ, ನೀವು ಮತ್ತೊಮ್ಮೆ ಅವರಿಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿಕೊಂಡರು.ಈ ಸಮಯದಲ್ಲಿ ಕಾರ್ಯಕÀರ್ತೆಯರಾದ…

Read More

ಕೊಲ್ಹಾರದಲ್ಲಿ ಬಿ.ವೈ.ವಿಜಯೇಂದ್ರ ರೋಡ್ ಶೋ | ಅಪಾರ ಜನಸ್ತೋಮ ಕೊಲ್ಹಾರ: ವಿಧಾನಸಭಾ ಚುನಾವಣೆ ನಿಮಿತ್ಯವಾಗಿ ಪಟ್ಟಣದಲ್ಲಿ ಸೋಮವಾರ ಭಾರತೀಯ ಜನತಾಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ನಾಯಕರ ಬೃಹತ್ ಮೆರವಣಿಗೆಯು ತೆರೆದ ವಾಹನದಲ್ಲಿ ಸಾವಿರಾರು ಕಾರ್ಯಕರ್ತರ ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.ಈ ಸಂದರ್ಭದಲ್ಲಿ ಬಿ.ವಾಯ್.ವಿಜಯೇಂದ್ರ ಮಾತನಾಡಿ, ಈ ಬಾರಿ ಚುನಾವಣೆಯಲ್ಲಿ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಎಸ್.ಕೆ.ಬೆಳ್ಳುಬ್ಬಿಯವರನ್ನು ತಾವುಗಳು ಗೆಲ್ಲಿಸಿ ಕಳಿಸಿದ್ದೇ ಆದರೆ ನನ್ನ ತಂದೆ, ನಿಮ್ಮೆಲ್ಲರ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನೇ ಗೆಲ್ಲಿಸಿದಂತಾಗುತ್ತದೆ. ಮೇ ೧೦ರಂದು ನಡೆಯುವ ಮತದಾನದಲ್ಲಿ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಮತಗಳು ದೊರಕುವಂತೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯನವರು ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡುತ್ತಾ ಲಿಂಗಾಯತ ಧರ್ಮದ ವ್ಯಕ್ತಿಗಳನ್ನು ಹಾಗೂ ನಾಯಕರನ್ನು ಟೀಕೆ ಮಾಡುತ್ತಿರುವದನ್ನು ನಾನು ಖಂಡಿಸುತ್ತೇನೆ ಎಂದರು.ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಟಿಕೆಟ್ ವಂಚಿತ ಪರಮಾನಂದ ತನಿಖೆದಾರ ಅವರು ಜೆಡಿಎಸ್ ಪಕ್ಷವನ್ನು ತೊರೆದು ವಿಜಯೆಂದ್ರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಂಡು…

Read More

ವಿಜಯಪುರ: ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯಪುರ ನಗರಕ್ಕೆ ಏ.29 ರಂದು ಆಗಮಿಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ. (ಕೂಚಬಾಳ) ಹೇಳಿದರು.ಸೋಮವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಅವರು ಮಾಹಿತಿ ವಿವರಿಸಿದರು.ಸೈನಿಕ ಶಾಲೆ ಆವರಣದಲ್ಲಿ ಮೋದಿ ಅವರ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಕಲ ಸಿದ್ದತೆ ನಡೆಸಲಾಗುತ್ತಿದೆ. ಜಿಲ್ಲೆಯ ಎಂಟು ವಿಧಾನ ಸಭಾ ಚುನಾವಣೆಗೆ ಸಂಬಧಿಸಿದಂತೆ ಪ್ರಧಾನಿ ಮೋದಿ ಮತ್ತಿತರ ಗಣ್ಯರು ಪ್ರಚಾರ ಕೈಗೊಳ್ಳಲಿದ್ದಾರೆ ಎಂದರು.ಏ.25 ರಂದು ಕೇಂದ್ರ ಗೃಹ ಖಾತೆ ಸಚಿವ ಅಮೀತ ಶಹಾ ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿರುವರು. ಹಾಗೆಯೇ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೂ ಸಹ ಏ.25ರಂದು ಇಂಡಿ ಮತಕ್ಷೇತ್ರದಲ್ಲಿ ಪ್ರಚಾರ ನಡೆಸುವರು. ಅಂದು ವಿಜಯಪುರದಲ್ಲಿ ವಾಸ್ತವ್ಯ ಹೂಡಿ ಮರುದಿನ ಬಬಲೇಶ್ವರ ಮತಕ್ಷೇತ್ರದ ಕನಮಡಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿರುವರು. ಏ.೨೭ ರಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಜಿಲ್ಲೆಯ ಬಸವನ…

Read More

ವಿಜಯಪುರ: ನಾಗಠಾಣ ಮೀಸಲು ಮತಕ್ಷೇತ್ರದ ಬಿಜೆಪಿಯ ಟಿಕೆಟ್ ಬಯಸಿ ನಾಮಪತ್ರ ಸಲ್ಲಿಸಿದ್ದೆ, ಆದರೆ ಪಕ್ಷದ ಒಂದಿಬ್ಬರು ನಾಯಕರ ಪ್ರಭಾವದಿಂದ ನನಗೆ ಟಿಕೆಟ್ ಸಿಗಲಿಲ್ಲ, ಆದರೂ ಪಕ್ಷದ ಹಿರಿಯ ನಾಯಕರ ಸಲಹೆಯಂತೆ ಇಂದು ನಾನು ನಾಮಪತ್ರ ವಾಪಸ್ಸು ಪಡೆದು ಪಕ್ಷದ ಅಭ್ಯರ್ಥಿ ಸಂಜೀವ. ಐಹೊಳಿಗೆ ಬೆಂಬಲಿಸುವುದಾಗಿ ಮಹೇಂದ್ರಸಿಂಗ್ ನಾಯಕ ಹೇಳಿದರು.ಸೋಮವಾರ ನಗರದ ಖಾಸಗಿ ಹೊಟೇಲಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನನಗೆ ಟಿಕೆಟ್ ಸಿಗುತ್ತದೆ ಎಂಬ ಭರವಸೆ ಇತ್ತು. ಆದರೆ ಕಾರಣಾಂತರಗಳಿಂದ ನನಗೆ ಟಿಕೆಟ್ ಸಿಗಲಿಲ್ಲ. ಪಕ್ಷ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿದ ನಂತರ ನಡೆದ ಕೆಲವು ಅನಿರೀಕ್ಷಿತ ಬೆಳವಣಿಗೆಗಳ ಕಾರಣದಿಂದ ನಮ್ಮ ಪಕ್ಷದ ಹಿರಿಯರು ಕರೆ ಮಾಡಿ ನನಗೂ ನಾಮಪತ್ರ ಸಲ್ಲಿಸುವಂತೆ ಸೂಚಿಸಿದ್ದರಿಂದ ಸಿ ಫಾರ್ಮ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ವರಿಷ್ಠರ ಸೂಚನೆಯಂತೆ ನಾನು ಏ.20 ರಂದು ನಾಮಪತ್ರ ಸಲ್ಲಿಸಿದ್ದೆ. ಆದರೆ ನಿನ್ನೆ ಪಕ್ಷದ ವರಿಷ್ಠರು ನನಗೆ ಕರೆ ಮಾಡಿ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಪಕ್ಷದ ವರಿಷ್ಠರ ಅಣತಿಯಂತೆ ನಾನುಇವತ್ತು…

Read More

ಮುದ್ದೇಬಿಹಾಳ: ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಕಳೆದ 35 ವರ್ಷಗಳಿಂದ ಬಡವರಿಗೆ ದಿನಸಿ ಕಿಟ್ ನೀಡುತ್ತ ಬಂದಿರುವ ಸಮಾಜ ಸೇವಕ ಅಯೂಬ ಮನಿಯಾರ ಈ ವರ್ಷವೂ ಕೂಡ ತಮ್ಮ ನಿವಾಸದ ಎದುರು ೨೫೦ ದಿನಸಿ ಕಿಟ್‌ಗಳನ್ನು ಮತ್ತು ಹಾಲು ಖರೀದಿಸಲೆಂದು ಪ್ರತೀ ಕಿಟ್ ನ ಜೊತೆಗೆ 100 ರೂ.ಗಳನ್ನು ವಿತರಿಸಿ ಮಾನವೀಯತೆ ಮೆರೆದರು.ವಿತರಣಾ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ ಮಾತನಾಡಿ, ಸಾಕಷ್ಟು ಜನರಲ್ಲಿ ಅಪಾರ ಹಣವಿದ್ದರೂ ದಾನ ಮಾಡುವ ಗುಣ ಇರಲ್ಲ. ಕೆಲವರು ದಾನ ಮಾಡಬೇಕೆಂದರೂ ಸ್ವೀಕರಿಸಲು ಯಾರೂ ಮುಂದೆ ಬರಲ್ಲ. ಇಂಥವರ ಮಧ್ಯೆ ಮನಿಯಾರ ಅವರ ಸೇವೆಯನ್ನು ಸ್ವೀಕರಿಸಲು ವರ್ಷದಿಂದ ವರ್ಷಕ್ಕೆ ಹೆಚ್ಚೆಚ್ಚು ತಾಯಂದಿರು ಆಗಮಿಸುತ್ತಿರುವುದು ಮನಿಯಾರ್ ಅವರ ನಿಸ್ವಾರ್ಥ ಸೇವೆಯನ್ನು ಎತ್ತಿ ತೋರಿಸುತ್ತದೆ ಎಂದರು.ಲಾಲ್ ಹುಸೇನ ಕಂದಗಲ್,ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷ ಎಂ.ಎಚ್.ಕ್ವಾರಿ ಮಾತನಾಡಿ,ನ್ಯಾಯವಾದಿ ವಿ.ಎಸ್.ಸಾಲಿಮಠ ಮನಿಯಾರ ಅವರ ಪರೋಪಕಾರ ಕುರಿತು ಶ್ಲಾಘಿಸಿದರು.ಸಮಾಜ ಸೇವಕ ಅಯೂಬ್ ಮನಿಯಾರ್ ಮಾತನಾಡಿ, ಬಡತನದ ಬೇಗೆಯಿಂದ ಬಳಲಿದ ನಾನು…

Read More