Author: editor.udayarashmi@gmail.com

ಬಳಗಾನೂರ ಗ್ರಾಮದ ರಾಮನಹಳ್ಳಿ ಕೆರೆ ಪರಿಶೀಲಿಸಿದ ಶಾಸಕ ಅಶೋಕ ಮನಗೂಳಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬಳಗಾನೂರ ಕರೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ರೂ.೨೦ ಕೋಟಿ ಮೊತ್ತದ ಅನುದಾನ ಮಂಜೂರಾಗಿದ್ದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಮತಕ್ಷೇತ್ರದ ಬಳಗಾನೂರ ಗ್ರಾಮದ ರಾಮನಹಳ್ಳಿ ಕೆರೆಯನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಭೇಟಿ ನೀಡಿ ಪರಿಶೀಲನೆ ಮಾತನಾಡಿದ ಅವರು, ಬಳಗಾನೂರ ಕೆರೆ ಪ್ರದೇಶದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ವರದಿ ನೀಡುವಂತೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.ಈ ವೇಳೆ ಬೆಳಗಾವಿಯ ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಆನಂದಕುಮಾರ ಎಮ್. ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಚೈತ್ರಾ, ರಾಂಪೂರ ಪಿಎ ಕೆಬಿಜೆಎನ್‌ಎಲ್ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ, ಸತೀಶಬಾಬು, ವಿಜಯಪುರ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅರವಿಂದ ಹೂಗಾರ, ವಿಜಯಪುರ ತೋಟಗಾರಿಕೆ ಇಲಾಖೆ ಶಾಲಿನಿ ತಳಕೇರಿ, ಆಲಮೇಲ ತಹಶೀಲ್ದಾರ್ ಎಮ್.ಎಸ್.ಅರಕೇರಿ, ಸಿಂದಗಿ ಅರಣ್ಯ ಇಲಾಖಾಧಿಕಾರಿ ರಾಜೀವ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಸಿದರು. ಇನ್ನಿತರ ಸಮಸ್ಯೆಗಳನ್ನು ಮುಂದಿನ ದಿನಮಾನಗಳಲ್ಲಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ಪುರಸಭೆ ಮುಖ್ಯಧಿಕಾರಿ ಎಸ್.ರಾಜಶೇಖರ, ಪುರಸಭೆ ಸದಸ್ಯರ ಪ್ರತಿನಿಧಿ ಬಸವರಾಜ ಸಜ್ಜನ, ಸದಸ್ಯ ಗೊಲ್ಲಾಳಪ್ಪ ಬಂಕಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಮುತ್ತಪ್ಪ ಜಂಗಮಶೆಟ್ಟಿ, ಶ್ರೀಮಂತ ಮಲ್ಲೇದ, ಮುಸ್ತಾಕ್ ಮುಲ್ಲಾ, ಪ್ರಕಾಶ ಗುಣಾರಿ, ಆರ್.ಎಮ್.ಸೋಂಪುರ, ರವಿ ನಾವಿ, ರವಿ ಕಟಕೆ ಸೇರಿದಂತೆ ಸ್ಥಳೀಯ ನಿವಾಸಿಗಳು ಇತರರು ಇದ್ದರು.

Read More

ಹಂದಿಗನೂರ ಸಿದ್ರಾಮಪ್ಪ ರಂಗಮಂದಿರಕ್ಕೆ ಭೂಮಿ ಪೂಜೆ | ಜಾನಪದ ವಿದ್ವಾಂಸ ಡಾ.ಎಂ.ಎಂ.ಪಡಶೆಟ್ಟಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಹಂದಿಗನೂರ ಸಿದ್ರಾಮಪ್ಪ ಅವರು ಸಿಂದಗಿ ತಾಲೂಕನ್ನು ರಾಜ್ಯಮಟ್ಟದಲ್ಲಿ ಖ್ಯಾತಿಯನ್ನು ತಂದುಕೊಟ್ಟ ಮಹಾನ್ ಮೇರು ನಟ, ವರನಟ, ನಟಸಾರ್ವಭೌಮ ಡಾ.ರಾಜಕುಮಾರ ಅವರ ಸಮಾನರಾದ ಮಹಾನ್ ನಟ. ರಾಜ್ಯದಲ್ಲಿ ರಂಗಭೂಮಿಗೆ ಬುನಾದಿ ಹಾಕಿದ ಪ್ರಮುಖರಲ್ಲಿ ಹಂದಿಗನೂರ ಸಿದ್ರಾಮಪ್ಪ ಅವರು ಒಬ್ಬರು ಎಂದು ಜಾನಪದ ವಿದ್ವಾಂಸ ಡಾ.ಎಂ.ಎಂ.ಪಡಶೆಟ್ಟಿ ಹೇಳಿದರು.ಸಿಂದಗಿ ಪಟ್ಟಣದ ಜಿ.ಪಿ.ಪೋರವಾಲ ಕಾಲೇಜಿನ ಎದುರುಗಡೆ ಇರುವ ಜಾಗೆಯಲ್ಲಿ ಸಿಂದಗಿ ಪುರಸಭೆ ಕಾರ್ಯಾಲಯ ವತಿಯಿಂದ ಮುಖ್ಯಮಂತ್ರಿ ಅಮೃತ ನಾಗರೋತ್ತಾನ ಯೋಜನೆ (ಹಂತ-೪) ವಿವೇಚನಾ ಅನುದಾನದಡಿಯಲ್ಲಿ ಮೊದಲನೇ ಹಂತದ ಹಂದಿಗನೂರ ಸಿದ್ರಾಮಪ್ಪ ಅವರ ರಂಗಮಂದಿರ ಭೂಮಿ ಪೂಜಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಂದಗಿ ತಾಲೂಕು ಹಂದಿಗನೂರ ಗ್ರಾಮದ ರಂಗಭೂಮಿ ಮೇರು ನಟ, ಕಲಾಸಾಮ್ರಾಟ, ನಟ ಭಯಂಕರ ಎಂದೇ ಪ್ರಖ್ಯಾತಿ ಹೊಂದಿದ್ದ ಹಂದಿಗನೂರ ಸಿದ್ರಾಮಪ್ಪನವರ ಹೆಸರಿನಲ್ಲಿ ಅವರು ಹುಟ್ಟುರಿನ ನೆಲದಲ್ಲಿ ಸ್ಮಾರಕ ರಂಗಮಂದಿರ ನಿರ್ಮಾಣವಾಗಬೇಕು ಎಂಬ ಕನಸನ್ನು ಗದಗ-ಡಂಬಳದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ವಲಯ ಹಾಗೂ ಗ್ರಾಮೀಣ ವಲಯ ವ್ಯಾಪ್ತಿಯಲ್ಲಿ ಬರುವ ಮೂರು ಶಾಲೆಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರಾತಿಗಾಗಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ.ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನಗರ ವಲಯದ ಅಫಜಲಪುರ ಟಕ್ಕೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ.49, ಕೆ.ಎಚ್.ಬಿ ಕಾಲೊನಿಯ ಶಾಸಕರ ಹಿರಿಯ ಪ್ರಾಥಮಿಕ ಶಾಲೆ ನಂ.24 ಹಾಗೂ ಗ್ರಾಮೀಣ ವಲಯದಲ್ಲಿ ಬರುವ ತೊರವಿಯ ಶಾಂತಿ ನಗರದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಗಳು ವಿಶಾಲವಾದ ಜಾಗವನ್ನು ಹೊಂದಿ, ಮೂಲಭೂತ ಸೌಕರ್ಯಗಳ ಜೊತೆಗೆ ಹೆಚ್ಚಿನ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಹೀಗಾಗಿ ಸದರಿ ಶಾಲೆಗಳಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Read More

ಇಂದು (ಡಿಸೆಂಬರ ೨೪) “ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ”ದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ-ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಸೇಥ್ ಗೋಡೀನ್ ಅವರು “ಉತ್ಪಾದಕರು ಗ್ರಾಹಕರನ್ನು ಹುಡುಕಬೇಡಿ. ಗ್ರಾಹಕರಿಗೆ ಏನು ಬೇಕಾಗಿದೆ ಆ ವಸ್ತುವನ್ನು ಅನ್ವೇಷಿಸಿ, ಅವಿಷ್ಕರಿಸಿ ಮತ್ತು ಉತ್ಪಾದಿಸಿ ಅಥವಾ ಸೇವೆ ನೀಡಬೇಕು”ಎಂದು ಹೇಳಿದ್ದಾರೆ. ಇಂದಿನ ಪರಿಪೂರ್ಣ ಪೈಪೋಟಿ ಮಾರುಕಟ್ಟೆಯಲ್ಲಿ ಗ್ರಾಹಕನೇ ಮಹಾಪ್ರಭು. ಉತ್ಪಾದಕರು ಮತ್ತು ಮಾರಾಟಗಾರರು ಗ್ರಾಹಕನ ವರ್ತನೆಯಲ್ಲಾಗುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿ ಅ ಮೂಲಕ ಸರಕು-ಸೇವೆಗಳನ್ನು ಮಾರಾಟ ಮಾಡುವ ತಂತ್ರಗಾರಿಕೆಯಲ್ಲಿ ತೊಡಗಬೇಕು. ಕಂಪನಿಗಳ ಬ್ರ್ಯಾಂಡ್ ಎಂದರೆ ಗ್ರಾಹಕನ ವಿಶ್ವಾಸ-ನಂಬಿಕೆ ಮತ್ತು ವಿಧೇಯತೆಯನ್ನು ಪಡೆಯುವ ಮೂಲಕ ಗ್ರಾಹಕನ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಮತ್ತು ಪರಿಣಾಮಕಾರಿಯಾದ ಮಾರಾಟ ಮಾಡುವ ತಂತ್ರಗಾರಿಕೆಯೇ ಬಹು ಮುಖ್ಯವಾಗಿರುತ್ತದೆ. ಇಂದಿನ ಪಾಶ್ಚಾತ್ಯ ಸಂಸ್ಕೃತಿ ಪ್ರಭಾವದಿಂದಾಗಿ ನಮ್ಮ ದೇಶೀಯ ಗ್ರಾಹಕರ ಬಯಕೆ, ಬೇಕು-ಬೇಡಗಳು, ಆಸೆ-ಆಕಾಂಕ್ಷೆಗಳು, ಅಪೇಕ್ಷೆ-ಕೊಂಡುಕೊಳ್ಳುವಿಕೆ ಮತ್ತು ಬಣ್ಣ, ರಚನೆ, ವಿನ್ಯಾಸಗಳೆಲ್ಲವೂ ಕ್ಷಿಪ್ರವಾಗಿ ಬದಲಾವಣೆಯ ರೂಪವನ್ನು ಪಡೆದುಕೊಳ್ಳುತ್ತಿವೆ. ಇದರಿಂದ ಮಾರುಕಟ್ಟೆಯ ಚಿತ್ರಣವೇ ಸಮಗ್ರವಾಗಿ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಐದು ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ತಪ್ಪದೇ ಹಾಕಿಸಿ ಎಂದು ಅಂಗನವಾಡಿ ಕಾರ್ಯಕರ್ತೆ ಇಂದಿರಾ ಕುಂಬಾರ ಕರೆ ನೀಡಿದರು.ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪೋಲಿಯೋ ಹನಿ ಮಗುವಿನ ಬೆಳವಣಿಗೆಗೆ ಬಹಳ ಮಹತ್ವ. ಎಲ್ಲ ಪಾಲಕರು ತಮ್ಮ ಕೆಲಸಗಳನ್ನು ಬದಿಗೊತ್ತಿ ಮಕ್ಕಳ ಆರೋಗ್ಯದ ಹಾಗೂ ದೇಹದ ಸದೃಢತೆಗಾಗಿ ಪಲ್ಸ್ ಪೊಲೀಯೊ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದರು.ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ ಈಳಗೇರ, ಬಸಮ್ಮ ಸೋಮನಾಳ, ಸಾವಿತ್ರಿ, ಅಶಾ ಕಾರ್ಯಕರ್ತೆಯರಾದ ನೀಲಮ್ಮ ಪಾಟೀಲ, ಸುಮಂಗಲಾ ಹಿರೇಮಠ, ಶಿವಲೀಲಾ ಪತ್ತಾರ, ಅಂಗನವಾಡಿ ಸಹಾಯಕಿರಾದ ಗೌರಮ್ಮ ನಾಲತವಾಡ, ಶಾಂಭವಿ ಪಾಟೀಲ, ಕವಿತಾ ಸೋಮನಾಳ ಸೇರಿದಂತೆ ಪಾಲಕರು ಮಕ್ಕಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮಕ್ಕಳ ಸರ್ವಾಂಗೀಣ ಅಭವೃದ್ಧಿಗೆ ಪಠ್ಯಕ್ರಮದ ಜೊತೆ ಜೊತೆಗೆ ಅನುಭವಾಧಾರಿತ ಶಿಕ್ಷಣವೂ ಅತ್ಯಂತ ಮುಖ್ಯ ಎಂದು ಸಂಸ್ಥಾಪಕ ಎನ್.ಎಸ್.ಹಿರೇಮಠ ಹೇಳಿದರು.ಪಟ್ಟಣದ ಹುಡ್ಕೋ ಬಡಾವಣೆಯ ಶಿರವಾಳ ಲೇಔಟ್ ನಲ್ಲಿರುವ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ಪ್ರವಾಸದ ಬಳಿಕ ಅವರು ಮಾತನಾಡಿದರು.ಇಂತಹ ಟ್ರಿಪ್ ಗಳ ಮೂಲಕ ಮಕ್ಕಳು ಪ್ರಕೃತಿ, ಸಮಾಜ ಹಾಗೂ ಜೀವನದ ವಾಸ್ತವಿಕತೆಯ ಬಗ್ಗೆ ಅನುಭವ ಪಡೆಯುತ್ತಾರೆ. ಪ್ರವಾಸಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಸಹಕಾರ ಮನೋಭಾವ ಹಾಗೂ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸುತ್ತವೆ. ಪಾಲಕರೂ ರಜಾ ದಿನಗಳಲ್ಲಿ ನಿಮ್ಮ ಮಕ್ಕಳನ್ನು ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ಕೊಡಿಸುವಂತೆ ಸಲಹೆ ನೀಡಿದರು.ನಸುಕಿನ ಜಾವ ಶಾಲಾ ಆವರಣದಿಂದಲೇ ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ಸಾಹದಿಂದ ಹೊರಟ ಮಕ್ಕಳು ದಿನಪೂರ್ತಿ ಪ್ರವಾಸವನ್ನು ಆನಂದಿಸಿದರು. ಐತಿಹಾಸಿಕ ಸ್ಥಳಗಳಾದ ಐಹೊಳ್ಳಿ, ಪಟ್ಟದಕಲ್ಲು, ಬಾದಾಮಿ, ಬನಶಂಕರಿ, ಶಿವಯೋಗ ಮಂದಿರ, ಮಹಾಕೂಟ, ಸಿದ್ಧನಕೊಳ್ಳ ಪ್ರಕೃತಿ ಸೌಂದರ್ಯ ಹಾಗೂ ಸಾಂಸ್ಕೃತಿಕ ಮಹತ್ವದ ಸ್ಥಳಗಳ ಬಗ್ಗೆ ಶಾಲೆಯ ಬೋಧಕ ಸಿಬ್ಬಂದಿಗಳು ಮಾಹಿತಿ ನೀಡಿದರು.ಪ್ರವಾಸದ ಸಂದರ್ಭದಲ್ಲೇ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಾತಿಹಾಳ ಗ್ರಾಮದಿಂದ ರಬಿನಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸರ್ಕಾರಿ ರಸ್ತೆ ಮಾರ್ಗವನ್ನು ಸರಿಪಡಿಸಲು ಆಗ್ರಹಿಸಿ ಸಾತಿಹಾಳ ಗ್ರಾಮಸ್ಥರು ಶಿರಸ್ತೇದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಸೋಮವಾರ ತೆರಳಿದ ಸಾತಿಹಾಳ ಗ್ರಾಮಸ್ಥರು ರಸ್ತೆ ಕುರಿತು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ರವಿ ಬೂದಗೂಳಿ ಮಾತನಾಡಿ, ನಮ್ಮ ಗ್ರಾಮದಿಂದ ರಬಿನಾಳಕ್ಕೆ ಸಂಪರ್ಕಿಸುವ ರಸ್ತೆ ಇದು ಗ್ರಾಮದ ಜಮೀನುಗಳಿಗೂ ಸಹ ತೆರಳುವ ರಸ್ತೆಯಾಗಿದೆ. ಈ ರಸ್ತೆ ಮಳೆಯಿಂದ ಸಂಪೂರ್ಣ ಹಾಳಾಗಿದ್ದು ಇದರ ಸುಧಾರಣೆಗಾಗಿ ರೈತರೆಲ್ಲರೂ ಸೇರಿ ರಿಪೇರಿಯ ಕ್ರಮವಹಿಸಿದ್ದು ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಜಮೀನು ಹೊಂದಿರುವ ಸ.ನಂ ೨೩೬ ಹಾಗೂ ಸ.ನಂ೩೫೨ ರ ರೈತರು ಆಕ್ಷೇಪಿಸಿ ರಸ್ತೆ ಸುಧಾರಣೆಗೆ ಅವಕಾಶ ನೀಡುತ್ತಿಲ್ಲ. ಇದರಿಂದ ರೈತರು ತಾವು ಬೆಳೆದ ಬೆಳೆ ಕಠಾವು ಮಾಡದೇ ಇದ್ದು ಬೆಳೆ ಹಾಳಾಗುವ ಹಂತದಲ್ಲಿವೆ. ಆದ್ದರಿಂದ ತಹಶೀಲ್ದಾರ ತಾವೇ ಮಧ್ಯೆ ಪ್ರವೇಶಿಸಿ ನಮ್ಮ ಜಮೀನುಗಳಿಗೆ ತೆರಳುವ ರಸ್ತೆ ದೊರಕಿಸಿ ಬೆಳೆ ಬೆಳೆಯಲು ಅವಕಾಶ ಮಾಡಿಕೊಡಲು…

Read More

ದೇವರಹಿಪ್ಪರಗಿಯಲ್ಲಿ ಜರುಗಿದ ಕಿತ್ತೂರ ಚೆನ್ನಮ್ಮ ಜಯಂತ್ಯುತ್ಸವ & ಹಿಂದೂಗಳ ಸಂಸ್ಕೃತಿ ಸಮಾವೇಶದಲ್ಲಿ ಶಾಸಕ ಯತ್ನಾಳ ಕರೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಎಲ್ಲ ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಅಗತ್ಯವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಪಟ್ಟಣದಲ್ಲಿ ಭಾನುವಾರ ಜರುಗಿದ ಕಿತ್ತೂರ ಚೆನ್ನಮ್ಮನ ೨೦೧ನೇ ವಿಜಯೋತ್ಸವ ಹಾಗೂ ೨೪೭ನೇ ಜಯಂತ್ಯುತ್ಸವ, ಹಿಂದೂಗಳ ಸಂಸ್ಕೃತಿ ಸಮಾವೇಶ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಚಾಲನೆ ನೀಡಿ ಮಾತನಾಡಿದರು.ಇಂದು ಮೀಸಲಾತಿ ವಿಷಯಕ್ಕೆ ಬಂದಾಗ ಸಣ್ಣ ಸಮುದಾಯಗಳು ಸಹ ಸೌಲಭ್ಯಗಳಿಂದ ವಂಚಿತವಾಗುತ್ತಿವೆ. ಅವುಗಳಿಗೂ ಸಹ ನ್ಯಾಯ ದೊರಕಬೇಕು. ಈಗ ನಮ್ಮ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೂ ಒಂದು ದಿನ ಜಯ ದೊರೆಯುತ್ತದೆ. ಸಂಶಯ ಬೇಡ. ನಾವು ಇತಿಹಾಸ ಬಗ್ಗೆ ತಿಳಿಯಬೇಕಾಗಿದೆ. ಸ್ವಾತಂತ್ರ್ಯಕ್ಕಾಗಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ತಂಡದ ಹೋರಾಟ, ಸುಭಾಸ್‌ಚಂದ್ರ ಭೋಸ್‌ರ ತ್ಯಾಗವನ್ನು ಅರಿತು ಹಿಂದೂತ್ವದ ಮೂಲಕ ದೇಶ, ಸಂವಿಧಾನವನ್ನು ಪ್ರೀತಿಸಿ, ಗೌರವಿಸೋಣ ಎಂದರು.ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಮಾತನಾಡಿ, ಸಮುದಾಯದ ಋಣವನ್ನು ತೀರಿಸುವ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ೧ ಮತ್ತು ೨ರ ವಾರ್ಡ್ಗೆ ಸಾರ್ವಜನಿಕರ ಕುಂದು ಕೊರತೆ ಆಲಿಸಲು ಶಾಸಕ ಅಶೋಕ ಮನಗೂಳಿ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಕೆರೆಪ್ಪ ಬೆಳ್ಳಿ, ಪುರಸಭೆ ಮುಖ್ಯಧಿಕಾರಿ ರಾಜಶೇಖರ, ಪುರಸಭೆ ಸದಸ್ಯರ ಪ್ರತಿನಿಧಿ ಶರಣಪ್ಪ ಸುಲ್ಪಿ, ಮಾಜಿ ನಿಂಬೆ ಅಭಿವೃದ್ಧಿ ನಿಗಮ ಅಧ್ಯಕ್ಷ ಅಶೋಕ ಅಲ್ಲಾಪುರ, ಸೇರಿದಂತೆ ವಾರ್ಡಿನ ಹಿರಿಯ ನಾಗರಿಕರು, ಯುವಕರು, ಮಹಿಳೆಯರು, ಸೇರಿದಂತೆ ಅನೇಕರಿದ್ದರು.

Read More