Author: editor.udayarashmi@gmail.com

ವಿಜಯಪುರ: ನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ ಪರವಾಗಿ, ಪುತ್ರ ಹಾಗೂ ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ಅವರು, ಭಾನುವಾರ ನಗರ ಮತಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಪಾದಯಾತ್ರೆ ಹಾಗೂ ಸಭೆ ನಡೆಸಿ ಮತಯಾಚನೆ ಮಾಡಿದರು. ಬೆಳಿಗ್ಗೆ ವಾರ್ಡ್ ನಂ.4ರ ಚಾಲುಕ್ಯ ನಗರ ಪೂರ್ವ ಭಾಗದ ಐಟಿಐ ಕಾಲೇಜು ಬಳಿಯ ಗಾರ್ಡನ್ ದಲ್ಲಿ ವಾಕಿಂಗ್ ಟಿಂ ಭೇಟಿ ಮಾಡಿ ಕೆಲಹೊತ್ತು ಚರ್ಚಿಸಿ, ನಂತರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಾದಯಾತ್ರೆ ಮೂಲಕ ಮತಯಾಚನೆ. ಸಂಜೆ ತೊರವಿ ಗ್ರಾಮ ವ್ಯಾಪ್ತಿಯ ನವರಸಪುರ ಕಾಲೊನಿಯ ಸಿದ್ಧಾರ್ಥ ನಗರದ ಉದ್ಯಾನವನದ ಹತ್ತಿರ ಸಭೆ ನಡೆಸಿದ ಬಳಿಕ ಸೇನಾ ನಗರದ ಶಾಲೆ ನಂ.61ರ ಪಕ್ಕದ ಉದ್ಯಾನವನದಲ್ಲಿ ಹಾಗೂ ಬಾಗಲಕೋಟ ಲೇಔಟ್ ಶಿವಾಲಯ ದೇವಸ್ಥಾನ ಹತ್ತಿರ ಸಭೆ ನಡೆಸಿ ಮತಯಾಚನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಅಭಿವೃದ್ಧಿಗೆ ಜನ ಬೆಂಬಲ ನಿಶ್ಚಿತ ಎಂಬುವುದಕ್ಕೆ ಪ್ರಚಾರಕ್ಕೆ ಆಗಮಿಸಿದಾಗ ಜನ ತೋರಿಸುತ್ತಿರುವ ಅಭೂತಪೂರ್ವ ಬೆಂಬಲವೇ ಸಾಕ್ಷಿ.…

Read More

ಚಿಮ್ಮಡ: ಗ್ರಾಮದ ಆರಾದ್ಯದೇವರಾದ ಶ್ರೀ ಪ್ರಭುಲಿಂಗೇಶ್ವರರ ಹರಿವಾಣೋತ್ಸವ, ಬಸವಜಯಂತಿ ಹಾಗೂ ರುದ್ರಾಭಿಷೇಕ ಮಹಾಮಂಗಲ ಕಾರ್ಯಕ್ರಮ ವಿಜ್ರಂಭನೆಯಿAದ ನಡೆಯಿತು.ಹರಿವಾಣೋತ್ಸವದ ನಿಮಿತ್ಯ ಕಳೆದ ಹತ್ತು ದಿನಗಳಿಂದ ಪ್ರತಿದಿನ ಮುಂಜಾನೆ ೫ ಘಂಟೆಯಿAದ ೭ ಘಂಟೆಗಳವರೆಗೆ ನಡೆಯುತ್ತಿರುವ ರುದ್ರಾಭಿಷೇಕ, ಮಹಾಪೂಜೆಯ ಮಂಗಲೋತ್ಸವಕ್ಕೆ ಗ್ರಾಮದ ರೈತರು ಮಹಿಳೆಯರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನಂತರನಡೆದ ಪಲ್ಲಕ್ಕಿ ಉತ್ಸವದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಭಾವಚಿತ್ರವನ್ನು ಅಲಂಕ್ರತ ಪಲ್ಲಕ್ಕಿಯಲ್ಲಿಟ್ಟು, ಮಹಿಳೆಯರಿಂದ ಆರತಿ, ಕುಂಭಮೇಳ, ಸಕಲ ವಾದ್ಯ ವೃಂದಗಳೊAದಿಗೆ ಬಸ್ ನಿಲ್ದಾನದ ಹತ್ತಿರವಿರುವ ಬಸವೇಶ್ವರ ವೃತ್ತದಿಂದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ವರೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತ ಬಸವಣ್ಣನವರಿಗೆ ಜಯಘೋಷ ಮಾಡಲಾಯಿತು. ನಂತರ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಹರಿವಾಣ ತುಂಬುವ ಕಾರ್ಯಕ್ರಮದಲ್ಲಿ ಗ್ರಾಮದ ರೈತರು ತಾವು ಬೆಳೆದ ಕಬ್ಬು, ಬಾಳೆ, ತೆಂಗು ಸೇರಿದಂತೆ ವಿವಿಧ ಹಣ್ಣು ಹಂಫಲಗಳ ರಾಶಿಗಳಿಂದ ಹರಿವಾಣ ತುಂಬಿಸಲಾಗುತ್ತದೆ ಕೆಳಗೆ ಬಿದ್ದ ಹರಿವಾಣ ಯಾರಿಗೆ ದೊರೆಯುವುದೋ ಅವರ ಇಷ್ಠಾರ್ಥಗಳನ್ನು ಶ್ರೀ ಪ್ರಭುಲಿಂಗೇಶ್ವರ, ಬಸವಣ್ಣನವರು ನೆರವೇರಿಸುತ್ತಾರೆಂಬ ಪ್ರತೀತಿ ಇದೆ. ಇದರೊಂದಿಗೆ…

Read More

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ. ವಾಣಿಜ್ಯ ವಿಭಾಗದ ಆದರ್ಶ ಕುಲಕರ್ಣಿ ಶೇ. 98.20(589/600) ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಿಧಿ ಪೋರವಾಲ ಶೇ. 98(588/600) ಜಿಲ್ಲೆಗೆ ದ್ವಿತೀಯ ಮತ್ತು ಮಯೂರ ಚೆಡ್ಡಾ ಶೇ. 97.66(586/600) ಅಂಕ ಪಡೆದು ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾನೆ. ವಿಜ್ಞಾನ ವಿಭಾಗದ ವಿದ್ಯಾರ್ಥಿ ಅನೀಶ ಕುಲಕರ್ಣಿ ಶೇ. 98.20(589) ಜಿಲ್ಲೆಗೆ ದ್ವಿತೀಯ, ಕೀರ್ತಿ ಪಟ್ಟಣಶೆಟ್ಟಿ ಶೇ. 95.80(575/600) ಮತ್ತು ದಿವ್ಯಾ ರುಣವಾಲ ಶೇ. 94.80(569/600) ಅಂಕ ಪಡೆದು ಗಮನ ಸೆಳೆದಿದ್ದಾರೆ. ಶ್ರೀ ಬಿ. ಎಂ. ಪಾಟೀಲ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು 74 ವಿದ್ಯಾರ್ಥಿಗಳು ಉನ್ನತ ಶ್ರೇಣಿ(ಡಿಸ್ಟಿಂಕ್ಷನ್) ಹಾಗೂ 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿಜ್ಞಾನ ವಿಭಾಗದ ಒಟ್ಟು…

Read More

ವಿಜಯಪುರದಲ್ಲಿ ರಾಹುಲ್ ಗಾಂಧಿ ರೋಡ್ ಶೋ | ಅಪಾರ ಜನಸ್ತೋಮ | ದಾರಿಯುದ್ದಕ್ಕೂ ಪುಷ್ಪವೃಷ್ಟಿ ವಿಜಯಪುರ: ಅಣ್ಣ ಬಸವಣ್ಣನವರ ಆಶಯಗಳಿಗೆ ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ, ಧನವನ್ನು ಅದಾನಿಗೆ ನೀಡಿ ಎಂದು ಎಲ್ಲಿಯೂ ಅಣ್ಣ ಬಸವಣ್ಣನವರು ಹೇಳಿಲ್ಲ, ಆದರೆ ಬಿಜೆಪಿ ಜನರ ಧನವನ್ನು ಅದಾನಿಗೆ ನೀಡುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧೀ ಕೇಂದ್ರ ಸರ್ಕಾರವನ್ನು ಲೇವಡಿ ಮಾಡಿದರು.ವಿಜಯಪುರ ನಗರದ ಕನಕದಾಸ ವೃತ್ತದಲ್ಲಿ ಬಾನುವಾರ ಸಂಜೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ತಮ್ಮ ವಿಚಾರ ವ್ಯಕ್ತಪಡಿಸಿದ ಅವರು, ಸಂದೇಶದುದ್ದಕ್ಕೂ ಅಣ್ಣ ಬಸವಣ್ಣನವರ ವಿಚಾರಧಾರೆಗಳನ್ನು ಪ್ರಸ್ತಾಪಿಸುತ್ತಾ, ಈ ವಿಚಾರಧಾರೆಗಳನ್ನು ಬಿಜೆಪಿ ಯಾವ ರೀತಿ ಗಾಳಿಗೆ ತೂರುತ್ತಿದೆ ಎಂಬ ಕುರಿತು ಎಳೆ ಎಳೆಯಾಗಿ ಬಿಡಿಸಿಟ್ಟರು.ಪ್ರತಿ ವ್ಯಕ್ತಿಯೂ ಪ್ರಮುಖ ಎನ್ನುವುದು ಅಣ್ಣ ಬಸವಣ್ಣನವರ ತತ್ವವಾಗಿತ್ತು, ಆದರೆ ಬಿಜೆಪಿಗೆ ಕೇವಲ ಅದಾನಿಯೇ ಪ್ರಮುಖ ಎಂದು ಲೇವಡಿ ಮಾಡಿದರು.ರೈತನ ಮಗ ಉದ್ಯಮಿಯಾಗಬೇಕು, ಪೈಲಟ್ ಆಗಿ ವಿಮಾನ ಹಾರಿಸಬೇಕು ಎಂಬುದು ಅಣ್ಣ ಬಸವಣ್ಣನ ಆಶಯವಾಗಿತ್ತು, ಆದರೆ ಈ ಆಶಯವನ್ನು ಬಿಜೆಪಿ ಹಾಳು…

Read More

ವಿಜಯಪುರ: ಡಬಲ್ ಎಂಜಿನ್ ಸರಕಾರ ಪೆಟ್ರೋಲ್ ಮತ್ತು ದ್ವಿಚಕ್ರ ವಾಹನಗಳ ಬೆಲೆ ಹೆಚ್ಚಿಸುವ ಮೂಲಕ ಯುವಕರಿಗೆ ಟೋಪಿ ಹಾಕಿದೆ. ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ನೀಡದೇ ಬೆಳೆಗಳ ನಿರ್ವಹಣೆ ವೆಚ್ಚ ಮೂರ್ನಾಲ್ಕು ಪಟ್ಟು ಹೆಚ್ಚು ಮಾಡುವ ಮೂಲಕ ಅನ್ನದಾತರಿಗೂ ಅನ್ಯಾಯ ಮಾಡಿದೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ.ಬಬಲೇಶ್ವರ ತಾಲೂಕಿನ ಹಂಚಿನಾಳ ಪಿ. ಎಂ. ಮಂಗಳೂರ, ಕೊಡಬಾಗಿ ಮತ್ತು ಮಮದಾಪುರಗಳಲ್ಲಿ ಅವರು ಪ್ರಚಾರ ಕೈಗೊಂಡು ಮಾತನಾಡಿದರು.ಮಮದಾಪುರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್ ಬೆಲೆ ಏರಿಕೆ, ದ್ವಿಚಕ್ರ ವಾಹನಗಳ ಬೆಲೆ ಹೆಚ್ಚಳ ಮಾಡುವ ಮೂಲಕ ಯುವಕರಿಗೆ ಮೊದಲು ಟೋಪಿ ಹಾಕಿದ್ದಾರೆ. ರೂ. 60 ಇದ್ದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಈಗ ರೂ. 100 ದಾಟಿದೆ. ರೂ. 45 ಸಾವಿರ ಇದ್ದ ದ್ವಿಚಕ್ರ ವಾಹನಗಳ ಬೆಲೆ ಈಗ ರೂ. 1 ಲಕ್ಷ ಮೀರಿದೆ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದ…

Read More

ಸಿದ್ರಾಮಯ್ಯ ಲಿಂಗಾಯತರ ಕ್ಷಮೆ ಯಾಚಿಸಲು ಆಗ್ರಹ | ಕಾಂಗ್ರೆಸ್ ಲಿಂಗಾಯತ ಸಿಎಂ ಘೋಷಿಸಲು ಸವಾಲು ವಿಜಯಪುರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಲಿಂಗಾಯತ ಮುಖ್ಯಮಂತ್ರಿಗಳೆಲ್ಲ ಭ್ರಷ್ಠರು ಎಂದು ಆರೋಪಿಸುವ ಮೂಲಕ ಅವಮಾನಿಸಿದ್ದು ಅಕ್ಷಮ್ಯ ಅಪರಾಧ. ಇದಕ್ಕಾಗಿ ಅವರು ಕೂಡಲೇ ಲಿಂಗಾಯತರ ಕ್ಷಮೆ ಯಾಚಿಸಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು.ಭಾನುವಾರ ವಿಜಯಪುರದ ಬಿಜೆಪಿ ಪ್ರಚಾರ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಲಿಂಗಾಯತರೆಲ್ಲರೂ ಭ್ರಷ್ಟರು ಎಂದು ಸಿದ್ರಾಮಯ್ಯ ಹೇಳಿದ್ದಾರೆ. ಇವರ ದ್ವೇಷ ಇದ್ದರೆ ವ್ಯಕ್ತಿಗತವಾಗಿ ಮತ್ತು ವೈಯಕ್ತಿಕವಾಗಿ ಮಾತನಾಡಬೇಕು. ಅದನ್ನು ಬಿಟ್ಟು ಇಡೀ ಲಿಂಗಾಯತ ಸಿಎಂ ಗಳು ಭ್ರಷ್ಟರು ಎಂಬುದು ಎಷ್ಟು ಸರಿ? ಧರ್ಮ ಒಡೆಯಲು ನಿಂತವರಿಗೆ ಕಳೆದ ಬಾರಿ ಪಾಠ ಕಲಿಸಿದ್ದಾರೆ. ಹೀಗಾಗಿಯೇ ಕಳೆದ ಚುನಾವಣೆಯಲ್ಲಿ ಲಿಂಗಾಯತರು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಸಿದ್ರಾಮಯ್ಯ ಅವರು ನೀಡಿರುವ ಹೇಳಿಕೆಯಿಂದ ಇಡೀ ವೀರಶೈವ ಲಿಂಗಾಯತ ಸಮಾಜಕ್ಕೆ ಅಪಮಾನವಾಗಿದೆ. ಲಿಂಗಾಯತರನ್ನು ಒಡೆಯುವುದು, ಹಿಂದೂ ಧರ್ಮಕ್ಕೆ ಅಪಮಾನ ಮಾಡುವುದಾಗಲಿ ಆಗಬಾರದು. ಈ ಕೂಡಲೇ ಸಿದ್ರಾಮಯ್ಯನವರು ರಾಜ್ಯದ ಜನರ…

Read More

ಸಿಂದಗಿ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರುಸೇನೆ (ಕೋಡಿಹಳ್ಳಿ ಚಂದ್ರಶೇಖರ ಬಣ) ವಿಜಯಪುರ ಜಿಲ್ಲಾಧ್ಯಕ್ಷರಾಗಿ ತಾಲೂಕಿನ ಆಸಂಗಿಹಾಳದ ಚಂದ್ರಗೌಡ ಪಾಟೀಲ ಅವರನ್ನು ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಚಂದ್ರಗೌಡ ಪಾಟೀಲರಿಗೆ ಆದೇಶ ಪತ್ರ ನೀಡಿದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರು, ವಿಜಯಪುರ ಜಿಲ್ಲೆಯಲ್ಲಿ ಸಂಘವನ್ನು ಬಲಪಡಿಸುವುದರೊಂದಿಗೆ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹಿತ ಕಾಯಲು ಶ್ರಮಿಸುವಂತೆ ಸಲಹೆ ನೀಡಿದರು.

Read More

-ಅಲಿ ಮಕಾನದಾರಆಲಮಟ್ಟಿ: ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಭಾನುವಾರ ಆಲಮಟ್ಟಿಯ ರಾಕ್, ಕೃಷ್ಣಾ ಸೇರಿದಂತೆ ಎಲ್ಲಾ ಉದ್ಯಾನಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದವು. ರಂಜಾನ್ ಹಬ್ಬದ ಮರುದಿನವಾದ್ದರಿಂದ ಸಹಸ್ರಾರು ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿ ಉದ್ಯಾನ ವೀಕ್ಷಿಸಿ ಖುಷಿ ಪಟ್ಟರು. ಪ್ರತಿ ವರ್ಷವೂ ರಂಜಾನ್ ಹಬ್ಬದ ಮರುದಿನ ಮತ್ತು ಸಂಕ್ರಾಂತಿಗೆ ಇಲ್ಲಿನ ವಿವಿಧ ಉದ್ಯಾನಗಳಿಗೆ ಸಹಸ್ರಾರು ಪ್ರವಾಸಿಗರು ಭೇಟಿ ನೀಡುವುದು ಸಾಮಾನ್ಯ. ಭಾನುವಾರ ಎಲ್ಲಿ ನೋಡಿದರೂ ಜನವೋ ಜನ, ಬೆಳಗ್ಗೆಯಿಂದಲೇ ಪ್ರಾರಂಭವಾದ ಈ ಬೀಡು ಸಂಜೆಯವರೆಗೂ ಮುಂದುವರಿದಿತ್ತು. ಪ್ರವಾಸಿಗರು ಬೆಳಗ್ಗೆಯಿಂದ ಆಲಮಟ್ಟಿಯ ರಾಕ್ ಉದ್ಯಾನದಲ್ಲಿ ಸುತ್ತಾಡಿ, ನಲಿದಾಡಿ, ನಂತರ ತಾವು ತಂದಿದ್ದ ಬುತ್ತಿ ಬಿಚ್ಚಿ ಊಟ ಮಾಡುವ ದೃಶ್ಯ ಸಾಮಾನ್ಯವಾಗಿತ್ತು. ಮುಸ್ಲಿಂ ಪ್ರವಾಸಿಗರೇ ಅಧಿಕ ಸಂಖ್ಯೆಯಲ್ಲಿದ್ದರು.ಟಿಕೆಟ್ ಪಡೆಯಲು ಸರದಿ ಸಾಲು ಹೆಚ್ಚಾಗಿತ್ತು. ಹೆಚ್ಚುವರಿ ಪೊಲೀಸ್ :ಹೆಚ್ಚು ಪ್ರವಾಸಿಗರುಆಗಮಿಸುವುದನ್ನು ಮೊದಲೇ ಅರಿತಿದ್ದ ನಿಡಗುಂದಿ, ಆಲಮಟ್ಟಿ ಹಾಗೂ ಡಿಆರ್ ಪೊಲೀಸರು ಜಂಟಿಯಾಗಿ ಭದ್ರತೆ ಒದಗಿಸಿದ್ದರು. ಕೆಎಸ್ ಐಎಸ್ ಎಫ್ ನ ಸಹಾಯಕ ಕಮಾಂಡರ್ ಅರುಣ ಡಿವಿ ನೇತೃತ್ವದಲ್ಲಿ…

Read More

ಬ್ರಹ್ಮದೇವನಮಡು: ಸಿಂದಗಿ ತಾಲೂಕು ಹೊನ್ನಳ್ಳಿ – ಬ್ರಹ್ಮದೇವನಮಡು ಗ್ರಾಮದ ಕಲ್ಶಾಣದೇಶ್ವರ ಭವ್ಶ ರಥೋತ್ಸವ ಭಾನುವಾರ ಸಂಜೆ ಅದ್ದೂರಿಯಾಗಿ ಜರುಗಿತು.ಭಕ್ತರು ರಥಕ್ಕೆ ಉತ್ತತ್ತಿ,ಬಾಳೆಹಣ್ಣು ಎಸೆದು ಜಯ ಘೋಷ ಕೂಗಿ ಭಕ್ತಿ ಮೆರೆದರು. ಡೊಳ್ಳು, ವಾಧ್ಶವೈಭವ ರಥೋತ್ಸವಕ್ಕೆ ಮೆರಗು ನೀಡಿತು. ಬೆಳಗ್ಗೆ ಕಲ್ಶಾಣದೇಶ್ವರ ಕತೃ೯ ಗದ್ದುಗೆಗೆ ಅಭಿಷೇಕ ಮತ್ತು ವಿಶೇಷ ಪೂಜೆ ಸಲ್ಲಿಸಲಾಯಿತು. ಆಲೂರು ಕೆಂಚವೃಷಭೇಂದ್ರ ಶಿವಾಚಾಯ೯ರು ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.ಶ್ರೀಮಠದ ಕಲ್ಶಾಣದಯ್ಶ ವೀರಘಂಟಯ್ಶ ಸ್ವಾಮೀಜಿ, ದಂಡಸೋಲಾಪೂರದ ಬಸಯ್ಶ ಸ್ವಾಮೀಜಿ, ವಡಗೇರಿಯ ವೀರಯ್ಶ ಸ್ವಾಮೀಜಿ, ವಡವಡಗಿಯ ಶ್ರೀಗಳು ಸೇರಿದಂತೆ ಕಲ್ಶಾಣದೇಶ್ವರ ಜಾತ್ರಾ ಸಮಿತಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಭಕ್ತರು ಪಾಲ್ಗೊಂಡಿದ್ದರು.

Read More

ಮುದ್ದೇಬಿಹಾಳ: ಬಡತನ ರೇಖೆಗಿಂತ ಕಡಿಮೆ ಇರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಪ್ರಥಮ ಪಿಯುಸಿ ಪಾದಾರ್ಪಣೆ ಮಾಡುವ ವಿದ್ಯಾರ್ಥಿಗಳಿಗೆ ಟ್ಯಾಲೇಂಟ್ ಅವಾರ್ಡ್ ಸ್ಪರ್ದೆ (ಅರ್ಹತಾ ಪರೀಕ್ಷೆ) ನಡೆಸುವ ಮೂಲಕ ಪ್ರವೇಶಾತಿ ಪಡೆಯಲಾಗುತ್ತಿದ್ದು, ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮೊದಲನೇ ೧೦ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿ ಸೌಲಭ್ಯ ಕೂಡ ನೀಡಲು ತೀರ್ಮಾನಿಸಿದ್ದೇವೆ ಎಂದು ಅಭ್ಯೂದಯ ಪಿಯು ಸಾಯಿನ್ಸ್ ಕಾಲೇಜಿನ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ ಹೇಳಿದರು.ಪಟ್ಟಣದ ಅಹಿಲ್ಯಾದೇವಿ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆಯ ಅಭ್ಯೂದಯ ಪಿಯು ಸಾಯ್ಸ್ ಕಾಲೇಜಿನಲ್ಲಿ ನಡೆದ ಟ್ಯಾಲೆಂಟ್ ಅವಾರ್ಡ್ ಸ್ಪರ್ದೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮೊದಲ ೫ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.ಕೊರೋನಾ ಸಂದರ್ಭದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣ ಕೊಡಿಸುವುದೇ ಒಂದು ದೊಡ್ಡ ಸಮಸ್ಯೆಯಾಗಿತ್ತು. ಆ ವೇಳೆ ಸುಮಾರು ಎರಡು ಸಾವಿರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿದ ಹೆಮ್ಮೆ ನಮ್ಮ ಅಹಿಲ್ಯಾದೇವಿ ಶಿಕ್ಷಣ ಸಂಸ್ಥೆಗಿದೆ. ಪ್ರತಿವರ್ಷ ಎಸ್.ಎಸ್.ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ ಟ್ಯಾಲೆಂಟ್…

Read More