Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕೂಡಲಸಂಗಮಕ್ಕೆ ರಾಹುಲ ಗಾಂಧಿ ಭೇಟಿ | ಬಸವ ಐಕ್ಯಮಂಟಪ ದರ್ಶನ | ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗಿ ವಿಜಯಪುರ: ನಗರಕ್ಕೆ ಏ. 23 ರವಿವಾರದಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದು, ಅಂದು ಸಂಜೆ ಬೃಹತ್ ರೋಡ್ ಶೋ ನಡೆಸಲಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಎಂ.ಬಿ ಪಾಟೀಲ ಹೇಳಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ಏ.23 ರಂದು ಕೂಡಲಸಂಗಮದಿAದ ಸಂಜೆ 5 ಗಂಟೆಗೆ ವಿಜಯಪುರ ನಗರಕ್ಕೆ ಆಗಮಿಸಲಿದ್ದು, ನಗರದ ಶಿವಾಜಿ ವೃತ್ತದಿಂದ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಅಲ್ಲಿಂದ ಆರಂಭವಾಗುವ ರೋಡ್ ಷೋ ಗಾಂಧೀ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತದ ಮಾರ್ಗವಾಗಿ ಕನಕದಾಸ ವೃತ್ತಕ್ಕೆ ತಲುಪಿ ಸಂಪನ್ನಗೊಳ್ಳಲಿದೆ. ಅಲ್ಲಿ ಸಾರ್ವಜನಿಕರನ್ನುದ್ದೇಶಿಸಿ ರಾಹುಲ್ ಗಾಂಧೀ ಮಾತನಾಡಲಿದ್ದು, ಅಂದು ವಿಜಯಪುರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ವಿವರಿಸಿದರು.ಸುಮಾರು 1 ಲಕ್ಷಕ್ಕೂ ಅಧಿಕ ಜನರು ಈ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರೊ.ರಾಜು…
Udayarashmi kannada daily newspaper
ವಿಜಯಪುರ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳು ವಿಜಯಪುರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿಜಯಪುರ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಸಿದ 122 ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ವಿವಿಧ ಕಾರಣಗಳಿಂದ ತಿರಸ್ಕೃತಗೊಂಡು 103 ಪುರುಷ ಹಾಗೂ 12 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 115 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.ಮುದ್ದೇಬಿಹಾಳ ಮತಕ್ಷೇತ್ರದಲ್ಲಿ 02, ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ 01, ಬಿಜಾಪುರ ನಗರ ಮತಕ್ಷೇತ್ರದಲ್ಲಿ 02, ನಾಗಠಾಣ ಮೀಸಲು ಮತಕ್ಷೇತ್ರದಲ್ಲಿ 02 ಸೇರಿದಂತೆ ಒಟ್ಟು 07 ನಾಮಪತ್ರಗಳು ತಿರಸ್ಕೃತಗೊಂಡಿದ್ದು, ದೇವರಹಿಪ್ಪರಗಿ, ಬಬಲೇಶ್ವರ, ಇಂಡಿ ಹಾಗೂ ಸಿಂದಗಿ ಮತಕ್ಷೇತ್ರದಲ್ಲಿ ಯಾವುದೇ ನಾಮಪತ್ರಗಳು ತಿರಸ್ಕೃತಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.
ಮುದ್ದೇಬಿಹಾಳ: ತಾಲೂಕಿನ ಹಿರೇಮುರಾಳದಲ್ಲಿ ಶುಕ್ರವಾರ ಚುನಾವಣಾ ಕಾರ್ಯನಿಮಿತ್ಯ ಆಗಮಿಸಿದ ಯೋಧರಿಗೆ ಹೂಮಾಲೆ ಅರ್ಪಿಸಿ ಸ್ವಾಗತಿಸಿದ ಮಹಿಳೆಯರು ಆರತಿ ಬೆಳಗಿ ಗೌರವಿಸಿದರು.ಈ ವೇಳೆ ಹವಾಲ್ದಾರ ಬಿ.ಜೆ.ಕಾಸರ, ಮಲ್ಲಪ್ಪ ಬೋಳರೆಡ್ಡಿ ಗ್ರಾಪಂ ಅಧ್ಯಕ್ಷೆ ಇಮಾಂಬಿ ಮುಲ್ಲಾ, ಗಿರೀಶಗೌಡ ಪಾಟೀಲ್, ಬಸವಂತ್ರಾಯ ನಾಗರತ್ತಿ, ರಷೀದ ಮುಲ್ಲಾ, ಗೌಡಪ್ಪ ಯಾಳವಾರ, ಶೇಖಪ್ಪ ನಾರಾಯಣಪೂರ, ಅಪ್ಪಣ್ಣ ಧನ್ನೂರ, ಅಂಬರೀಶ ನಾಗರತ್ತಿ, ಶ್ರೀದೇವಿ ಬಾಗೇವಾಡಿ, ಕವಿತಾ ಇಂದವಾಲ, ಅಮೃತಾ ನಾಗರತ್ತಿ ಮೊದಲಾದವರು ಇದ್ದರು.
ಕಾರ್ಯಕ್ರಮದ ಸಾನಿಧ್ಯವಹಿಸಿದ ಮುಸ್ಲಿಂ ಧರ್ಮಗುರು ಡಾ.ಸೈಯದ ಎಫ್.ಎಚ್.ಇನಾಮದಾರ, ಸೈಯದ ಶಾಹಾ ಹುಸೇನಿಪೀರ ಖಾದ್ರಿ ಚಿಪ್ತಿ ಮನಗೂಳಿ ಮಾತನಾಡಿ, ನಮ್ಮ ದೇಶ ಪ್ರಜಾಪ್ರಭುತ್ವ ದೇಶ. ಇಲ್ಲಿ ಹಲವಾರು ಜಾತಿ, ಮತ, ಪಂಗಡಗಳು ವಾಸಿಸುತ್ತಿದ್ದು ಶುಭ ಅಶುಭ ಕಾರ್ಯಕ್ರಮಗಳಲ್ಲಿ ಒಬ್ಬರಿಗೊಬ್ಬರು ಸೇರಿಕೊಂಡು ಜೀವನ ನಡೆಸುತ್ತಿರುವುದೇ ಅಂತರಧರ್ಮೀಯ ಜೀವನ. ಹಿಂದು ಬಾಂಧವರಿಗೆ ಶ್ರಾವಣ ಮಾಸ ಪವಿತ್ರವಾದರೆ, ಮುಸ್ಲಿಂ ಬಾಂಧವರಿಗೆ ರಂಜಾನ ಮಾಸ. ಹಾಗೆಯೇ ಕ್ರೆöÊಸ್ಥ ಬಾಂಧವರು ಸಹ ಒಂದು ತಿಂಗಳ ಉಪವಾಸ ಮಾಡಿ ಗುಡ್ಪ್ರೆöÊಡೆ ದಿನವನ್ನು ಹಬ್ಬವನ್ನಾಗಿ ಆಚರಿಸುತ್ತಾರೆ. ಪ್ರತಿಯೊಂದು ಧರ್ಮ ಸತ್ಯ, ಶಾಂತಿಯನ್ನು ಬಯಸುತ್ತದೆ. ಹೀಗಾಗಿ ನಮ್ಮ ದೇಶ ಶಾಂತಿಯ ಹೂ ತೋಟ. ಇವತ್ತಿನ ದಿನ ರಂಜಾನ ಪ್ರಯುಕ್ತ ಅಂತರಧರ್ಮೀಯ ಇಪ್ತಾರ್ ಕೂಟ ಹಮ್ಮಿಕೊಂಡಿದ್ದು, ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ನೀಡುತ್ತದೆಂದು ತಿಳಿಸಿದರು. ಸಂಗೀತಾ ಅಕ್ಕ ರಾಜಯೋಗಿನಿ ಬ್ರಹ್ಮಕುಮಾರಿ ಸಂಸ್ಥೆ, ಮತ್ತು ಪರಮಪೂಜ್ಯ ಫಾದರ ಪ್ರಾನ್ಸಿಸ್ ಮೆನೆಜಸ್ ಮುಖ್ಯಸ್ಥರು, ಜೆಸ್ವಿಟ್ ಸಂಸ್ಥೆಗಳು ವಿಜಯಪುರ ಇವರು ಸಹ ನಾವೆಲ್ಲರು ಭಾರತೀಯರು, ಭಾರತ ಪ್ರಜಾಪ್ರಭುತ್ವ ದೇಶ, ನಾವೆಲ್ಲರು…
ಮತದಾರರಲ್ಲಿ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ಶುಕ್ರವಾರ ತಾಲೂಕಾ ಸ್ವೀಪ್ ಸಮಿತಿ ಮತ್ತು ತಾಲೂಕಾ ಆಡಳಿತ ಸಹಯೋಗದಲ್ಲಿ ವಿಶೇಷ ಚೇತನರ ಬೈಕ ರ್ಯಾಲಿ ಜರುಗಿತು.ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಕಂದಾಯ ಉಪವಿಬಾಗಾಧಿಕಾರಿ ರಾಮಚಂದ್ರ ಗಡದೆ ವಿಶೇಷಚೇತನರಿಗೆ ಮತ ಚಲಾವಣೆಗೆ ಅನುಕೂಲ ವಾಗಲು ತಾಲೂಕಿನ ಎಲ್ಲ ಮತಗಟ್ಟೆಗಳಲ್ಲಿ ವ್ಹೀಲ್ ಚೇರ್ ಹಾಗೂ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ ಎಂದರು.ವಿಧಾನಸಭೆ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದರು.ರ್ಯಾಲಿಯಲ್ಲಿ ಭಾಗವಹಿಸಿದ್ದ ವಿಶೇಷಚೇತನರು ಮತದಾನ ಜಾಗೃತಿಯ ಭಿತಿ ಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗುವ ಮೂಲಕ ಮತದಾನ ಜಾಗೃತಿ ಮೂಡಿಸಿದರು.ರ್ಯಾಲಿ ಮಿನಿ ವಿಧಾನಸೌಧದಿಂದ ಬಸವೇಶ್ವರ ವೃತ್ತ, ಮಹಾವೀರ ವೃತ್ತದ ಮಾರ್ಗವಾಗಿ ಅಂಬೇಡ್ಕರ ವೃತ್ತ ತಲುಪಿ ವೃತ್ತದಲ್ಲಿ ವಿಶೇಷ ಚೇತನರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ತಹಸೀಲ್ದಾರ ನಾಗಯ್ಯ ಹಿರೇಮಠ, ಪುರಸಭೆಯ ಹುಚ್ಚಪ್ಪ ಶಿವಶರಣ, ಸೋಮಾನಾಯಕ, ಚುನಾವಣೆ ರಾಯಭಾರಿ ರಾಜೇಶ ಪವಾರ, ಚಂದು ಕಾಲೇಬಾಗ, ಸುರೇಶ ಅಮರಣ್ಣನವರ, ವಿಶೇಷಚೇತನ ತಾಲೂಕಾ ಅಧ್ಯಕ್ಷ ಸರ್ಪರಾಜ ಮಕಾನದಾರ, ಸಿದ್ದಪ್ಪ ಗುಲೆ, ಶಿವಲಿಂಗಪ್ಪ ನಾಯಿಕೊಡಿ, ಬಾಬು ಸಂಗೊಗಿ,…
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಮುಸ್ಲಿಂ ಬಾಂಧವರು ಶನಿವಾರ ರಂಜಾನ ಹಬ್ಬದ ಆಚರಣೆ ಮಾಡುವ ಹಿನ್ನೆಲೆಯಲ್ಲಿ ಶುಕ್ರವಾರ ಮಾರುಕಟ್ಟೆಯಲ್ಲಿ ಮುಸ್ಲಿಂ ಬಾಂಧವರ ಖರೀದಿ ಭರಾಟೆ ಜೋರಾಗಿತ್ತು.ಪಟ್ಟಣದ ಬಹುತೇಕ ಕಿರಾಣಿ ಅಂಗಡಿಗಳ ಮುಂದೆ, ರಸ್ತೆ ಬದಿಯಲ್ಲಿ ಮಾರಾಟ ಮಾಡುತ್ತಿರುವ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಯಲ್ಲಿ ನಿರತರಾಗಿದ್ದರು.ಕಳೆದ ಎರಡು ದಿನಗಳಿಂದ ಪಟ್ಟಣದಲ್ಲಿರುವ ಬಟ್ಟೆ ಅಂಗಡಿ, ಕಿರಾಣಿ ಅಂಗಡಿ-ಮುಂಗಟ್ಟುಗಳು ತುಂಬಿ ಹೋಗಿದ್ದು. ಖರೀದಿ ಭರಾಟೆ ಜೋರಾಗಿದೆ. ಸಂಪ್ರದಾಯದಂತೆ ಪವಿತ್ರ ಹಬ್ಬ ಇದಾಗಿರುವದರಿಂದಾಗಿ ಮುಸ್ಲಿಂ ಬಾಂಧವರು ಪ್ರತಿಯೊಬ್ಬರು ದಾನ, ಧರ್ಮ ಮಾಡುವುದರ ಜೊತೆಗೆ ಹೊಸ ಬಟ್ಟೆಗಳ ಖರೀದಿಗೆ ಮುಂದಾಗುವುದು ಸಹಜ. ಪಟ್ಟಣದ ಪ್ರಮುಖ ಅಂಗಡಿಗಳಲ್ಲಿ ಬಟ್ಟೆ ಖರೀದಿ ಹೆಚ್ಚಾಗಿರುವುದು ಕಂಡುಬಂದಿತ್ತು. ಮಹಿಳೆಯರು, ಮಕ್ಕಳು, ಯುವಕರು ಹೆಚ್ಚಿನ ಪ್ರಮಾಣದಲ್ಲಿ ಖರೀದಿಯ ಮೊರೆ ಹೋಗಿದ್ದಾರೆ. ತಾಲೂಕಿನ ಕೆಲವೆಡೆಗಳಿಂದ ಹೆಚ್ಚಿನ ಜನರು ಬಂದಿದ್ದರಿಂದಾಗಿ ಜನಸಂದಣಿ ಹೆಚ್ಚಿತ್ತು. ವ್ಯಾಪಾರ ವಹಿವಾಟು ಜೋರಾಗಿ ನಡೆಯಿತು. ಮಹಿಳೆಯರು ತಮಗೆ ಬೇಕಾದ ಬಳೆ, ರಿಬ್ಬನ್ ಇತ್ಯಾದಿ ಖರೀದಿ ಮಾಡಿದರು. ಬಟ್ಟೆಗಳನ್ನು ಖರೀದಿಸುವ ಜೊತೆಗೆ ಚಪ್ಪಲಿ ಮತ್ತಿತರ…
-ಮುರಳಿ.ಆರ್ ಸುಮಾರು 800 ಕಿ.ಮೀ ಉದ್ದದ ವಿಸ್ತಾರ ಹೊಂದಿರುವ ಅಸ್ಸಾಂ-ಅರುಣಾಚಲ ಪ್ರದೇಶದ ಅಂತರರಾಜ್ಯ ಗಡಿ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದ್ದು, ಗೃಹ ಸಚಿವ ಅಮಿತ್ ಶಾ ಅವರ ಈಶಾನ್ಯ ರಾಜ್ಯಗಳ ಅಭಿವೃದ್ಧಿಯ ಪರ್ವಕ್ಕೆ ಮತ್ತೊಂದು ಗರಿ ಮೂಡಿದೆ. ಈ ಐತಿಹಾಸಿಕ ಒಪ್ಪಂದವು ಎರಡು ನೆರೆಯ ರಾಜ್ಯಗಳ ನಡುವೆ ದೀರ್ಘಾವಧಿಯ ಒಪ್ಪಂದವನ್ನು ಖಚಿತಪಡಿಸುವುದಲ್ಲದೇ, ಕೆಲವು ವರ್ಷಗಳಿಂದ ಕಳೆದುಹೋಗಿದ್ದ ವೈಭವವನ್ನು ಮರಳಿ ಪಡೆಯಲು, ಮತ್ತು ಇಡೀ ಈಶಾನ್ಯ ಪ್ರದೇಶದ ಪ್ರಗತಿಗೆ ಮತ್ತಷ್ಟು ಉತ್ತೇಜನ ನೀಡಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾರವರ ಕನಸಿನ ಕೂಸಾದ ಈ ಒಪ್ಪಂದವು, ಯಾವುದೇ ಪ್ರದೇಶ ಅಥವಾ ಗ್ರಾಮಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಉಭಯ ರಾಜ್ಯಗಳ ನಡುವೆ ಯಾವುದೇ ಭವಿಷ್ಯದಲ್ಲಿ ಭಿನ್ನಾಭಿಪ್ರಾಯವನ್ನು ಹೆಚ್ಚಿಸುವ ಅವಕಾಶವನ್ನು ಶಾಶ್ವತವಾಗಿ ತೆಗೆದುಹಾಕುತ್ತದೆ. ಕಳೆದ ನಾಲ್ಕು ವರ್ಷಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಮಾಡಿದ ಎಂಟನೇ ಒಪ್ಪಂದವಾಗಿದ್ದು, ಆರ್ಥಿಕ ಅಭಿವೃದ್ಧಿಗೆ ಅಗಾಧವಾದ ಸಾಮರ್ಥ್ಯವನ್ನು ಹೊಂದಿರುವ ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶಾಶ್ವತಗೊಳಿಸುವ ಗುರಿಯನ್ನು ಹೊಂದಿದೆ. ಶಾರವರ ಸಮ್ಮುಖದಲ್ಲಿ ಒಪ್ಪಂದಕ್ಕೆ…
ಉತ್ತರ ಕರ್ನಾಟಕದಲ್ಲಿ ಅತ್ಯುತ್ತಮ ಹೈ ಎಂಡ್ ಉಪಕರಣಗಳನ್ನು ಒಳಗೊಂಡು ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಜೆ.ಎಸ್.ಎಸ್ ಡೈಗ್ನೊಸ್ಟಿಕ್ಸ್ ಲ್ಯಾಬ್ಸ್ ವತಿಯಿಂದ ಪ್ರತಿ ಭಾನುವಾರ ಬೆಳಿಗ್ಗೆ 7 ರಿಂದ 10 ಗಂಟೆಯವರೆಗೂ ಸಕ್ಕರೆ ಖಾಯಿಲೆಗೆ ಸಂಬAಧಿಸಿದ ರಕ್ತ ತಪಾಸಣಾ ಉಚಿತ ಶಿಬಿರವನ್ನು ಏರ್ಪಡಿಸಲಾಗಿದೆ. ಆದ ಕಾರಣ ಅಗತ್ಯತೆ ಇರುವವರು ಇಟಗಿ ಪೆಟ್ರೋಲ್ ಬಂಕ್, ಆದರ್ಶನಗರ ಆಶ್ರಮ ರಸ್ತೆ, ಸಾಯಿ ಪಾರ್ಕ, ಸಿದ್ಧೇಶ್ವರ ದೇವಸ್ಥಾನ ಹಾಗೂ ಮೆಡಿಕಲ್, ಮೀನಾಕ್ಷಿ ಚೌಕ್, ಸುಕುನ ಕಾಲೋನಿ ಹಾಗೂ ಜಲನಗರ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಪ್ರಾರಂಭಿಸಲಾಗಿರುವ ಜೆ.ಎಸ್.ಎಸ್ ರಕ್ತ ಮಾದರಿ ಸಂಗ್ರಹಣಾ ಘಟಕಗಳಿಗೆ ಭೇಟಿ ಕೊಟ್ಟು ರಕ್ತ ಮಾದರಿಯನ್ನು ನೀಡಿದರೆ ಪರೀಕ್ಷಾ ವರದಿಯನ್ನು ಅವರ ಮೊಬೈಲ್ಗೆ ವಾಟ್ಸಪ್ ಮೂಲಕ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಎಫ್.ಬಿ.ಎಸ್, ಪಿ.ಪಿ.ಬಿ.ಎಸ್ ಹಾಗೂ ಆರ್.ಬಿ.ಎಸ್ ಪರೀಕ್ಷೆಯನ್ನು ನೆರವೇರಿಸಲಾಗುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜೆ.ಎಸ್.ಎಸ್ ಹಾಸ್ಪಿಟಲ್ಸ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶರಣ ಮಳಖೇಡ್ಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈರಣ್ಣ ಕುರ್ಲೆ ಅವರಿಗೆ 9743900067…
Udayarashmi kannada daily newspaper
