Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ಪಟ್ಟಣದ ವಿವೇಕಾನಂದ ವೃತ್ತದ ಬಳಿಯ ಮುಂಡೇವಾಡಗಿ ಬಿಲ್ಡಿಂಗ್ ನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಚಾರ ಕಾರ್ಯಾಲಯ ಏ.೨೧ ಶನಿವಾರ ಉದ್ಘಾಟನೆಗೊಳ್ಳಲಿದೆ.ಕಾರಣ ಸಿಂದಗಿ ಮತಕ್ಷೇತ್ರದ ಎಲ್ಲ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಪಕ್ಷದ ಅಭಿಮಾನಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಕೋರಿದ್ದಾರೆ.
ಶಾಸಕ ನಡಹಳ್ಳಿಯವರಿಂದ ಮತದಾರರಿಗೆ ಆಮಿಷ | ಸಿ.ಎಸ್.ನಾಡಗೌಡ ಆರೋಪ ಮುದ್ದೇಬಿಹಾಳ: ಬಿಜೆಪಿ ಅಭ್ಯರ್ಥಿ ಎ.ಎಸ್.ಪಾಟೀಲ(ನಡಹಳ್ಳಿ) ಅವರು ಭ್ರಷ್ಟಾಚಾರ, ಅನೈತಿಕ, ದ್ವೇಷದ ರಾಜಕಾರಣ ನಡೆಸುವ ಮೂಲಕ ಮತಕ್ಷೇತ್ರದ ಜನರನ್ನು ದುಡ್ಡುಕೊಟ್ಟು ಕೊಂಡುಕೊಳ್ಳುತ್ತೇನೆ ಎಂಬ ಆಲೋಚನೆಯಲ್ಲಿದ್ದಾರೆ. ಚುನಾವಣಾ ಅಕ್ರಮಗಳು ಪೊಲೀಸರ ಕಣ್ಣೆದುರಿಗೇ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮಹಿಳಾ ಸಂಘಗಳ (ಎಂಬಿಕೆ) ಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು ಚುನಾವಣಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಸತ್ಯಾಗ್ರಹ ನಡೆಸುವದಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಎಸ್.ನಾಡಗೌಡ (ಅಪ್ಪಾಜಿ) ಎಚ್ಚರಿಸಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.ಕಳೆದ ೩೫ ವರ್ಷಗಳ ಆಡಳಿತದಲ್ಲಿ ಬಿಜೆಪಿಯಂತಹ ಭ್ರಷ್ಟಾಚಾರ, ದುರಾಡಳಿತವನ್ನು ನಾನೆಂದೂ ಕಂಡಿರಲಿಲ್ಲ. ದೇಶಮುಖರಾಗಲಿ ಅಥವಾ ನಾನಾಗಲಿ ಯಾವತ್ತಿಗೂ ಸ್ವಚ್ಛ ರಾಜಕಾರಣ ಮಾಡುತ್ತಲೇ ಬಂದಿದ್ದೇವೆ. ಸಧ್ಯ ಮತಕ್ಷೇತ್ರದಲ್ಲಿ ನಡಹಳ್ಳಿಯವರು ವ್ಯಾಪಕ ಭ್ರಷ್ಟಾಚಾರದಿಂದ ತಾವು ಗಳಿಕೆ ಮಾಡಿದ ಹಣದಲ್ಲಿ ಒಂದು ಭಾಗದ ಹಣವನ್ನು ಮತಕ್ಷೇತ್ರದ ಜನರಿಗೆ ಹಣ-ಹೆಂಡದ ಆಮಿಷಗಳನ್ನು ನೀಡಿ ಜನರಿಗೆ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಮತಕ್ಷೇತ್ರದ ಎಲ್ಲೆಡೆ…
ವಿಜಯಪುರ: ನಗರ ಮತಕ್ಷೇತ್ರದಿಂದ ಈ ಬಾರಿ ಭಾರತೀಯ ಜನತಾ ಪಕ್ಷದಿಂದ ನನಗೇ ಟಿಕೆಟ್ ಸಿಗುತ್ತದೆಂಬ ನನ್ನ ಅಪಾರ ನಿರೀಕ್ಷೆ ಹುಸಿಯಾಯಿತು. ಇದರಿಂದ ನಾನು ಸಾಕಷ್ಟು ನೊವು, ಮಾನಸಿಕ ತೊಂದರೆ ಅನುಭವಿಸಿದರೂ ಪಕ್ಷ ತೊರೆಯದೇ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವುದಾಗಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸ್ಪಷ್ಠಪಡಿಸಿದರು.ಶುಕ್ರವಾರ ನಗರದ ಖಾಸಗಿ ಹೊಟೇಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದಿಂದ ಟಿಕೆಟ್ ಸಿಗದಿದ್ದಾಗ ನನ್ನ ಬೆಂಬಲಿಗರಿಗೆ, ಕಾರ್ಯಕರ್ತರಿಗೂ ನೋವಾಗಿದ್ದು ನಿಜ. ಬೆಂಬಲಿಗರ ಸಭೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವಂತೆ ಒತ್ತಡವೂ ಹೆಚ್ಚಾಗಿತ್ತು. ಅಲ್ಲದೇ ಬೇರೆ ಪಕ್ಷದಿಂದ ಟಿಕೆಟ್ ನೀಡುವ ಪ್ರಸ್ತಾಪವೂ ಬಂದಿತ್ತು. ಆದರೆ ನಾನು ದೇಶ ಮೊದಲು ಎಂಬ ಸಿದ್ಧಾಂತ ನಂಬಿಯೇ ಬಿಜೆಪಿ ಪಕ್ಷವನ್ನು ಸೇರಿದವನು. ಕಳೆದ ಬಾರಿ ಟಿಕೆಟ್ ನಿರಾಕರಣೆಯಾದರೂ ನನಗೆ ಪಕ್ಷವೇ ಮುಖ್ಯ; ಅಧಿಕಾರವಲ್ಲ ಎಂಬ ಸಿದ್ಧಾಂತ ನನ್ನದು. ಕಳೆದ 30ವರ್ಷಗಳಿಂದ ನಿರಂತರ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿರುವೆ. ಪಕ್ಷದ ಟಿಕೆಟ್ ಸಿಗದಿದ್ದಾಗ ನೋವಾದರೂ ಉಳಿದ ನಾಯಕರಂತೆ ಪಕ್ಷಾಂತರ ಮಾಡಲು ಮನಸ್ಸು ಒಪ್ಪಲಿಲ್ಲ.…
ವಿಜಯಪುರ: ನಗರದ ಅನೇಕ ಕಡೆ ಉದ್ಯಾನಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ವಾಯು ವಿಹಾರಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಯುವ ನಾಯಕ ರಾಮನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ ಗೋಳಗುಮ್ಮಟ ಆವರಣ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ವಾಯು ವಿಹಾರಿಗಳ ಜೊತೆಗೆ ಸಭೆ ಹಾಗೂ ಕನಕದಾಸ ಬಡಾವಣೆಯಲ್ಲಿ ಪಾದಯಾತ್ರೆ ಮೂಲಕ ವಿಜಯಪುರ ನಗರ ಮತಕ್ಷೇತ್ರದ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು. ನಗರದ ವಿವಿಧೆಡೆ ಹೊಸ ಉದ್ಯಾನಗಳು ನಿರ್ಮಿಸಿದಲ್ಲದೆ, ಹಾಳಾಗಿದ್ದ ಉದ್ಯಾನಗಳನ್ನು ಮರು ಅಭಿವೃದ್ಧಿ ಪಡಿಸಲಾಗಿದೆ. ಮಕ್ಕಳಿಗೆ ಚಿಲ್ಡ್ರನ್ ಪಾರ್ಕ್, ಯುವಕರಿಗಾಗಿ ಓಪನ್ ಜಿಮ್ ಸಹ ಸ್ಥಾಪಿಸಲಾಗಿದೆ. ಇದರಿಂದ ವಾಯು ವಿಹಾರಿಗಳು ಮಕ್ಕಳೊಂದಿಗೆ ತೆರಳಿ ಸಮಯ ಕಳೆಯಲು ಅನುಕೂಲವಾಗಿದೆ. ತಂದೆ ಶ್ರಮದಿಂದ ವಿಜಯಪುರ ಉದ್ಯಾನ ನಗರವಾಗಿದೆ ಎಂದು ತಿಳಿಸಿದರು. ನಗರದಲ್ಲಿ ಮಕ್ಕಳು, ಮಹಿಳೆಯರು ನಿರ್ಭಯವಾಗಿ ಓಡಾಡುವ ವಾತಾವರಣ ಸೃಷ್ಟಿಸಿದ್ದಾರೆ. ಅವಮಾನಕ್ಕೆ ಒಳಗಾಗುತ್ತಿದ್ದ ನಮ್ಮ ಮಹಿಳೆಯರ ಅನುಕೂಲಕ್ಕಾಗಿ ಹಾಗೂ ರೈತರ ಹಿತದೃಷ್ಟಿಯಿಂದ ನಗರದ 35 ಕಡೆ…
Udayarashmi kannada daily newspaper
ಶರಣು ಚೆಟ್ಟಿ ಅವರ ವ್ಯಂಗ್ಯಚಿತ್ರ ಪ್ರದರ್ಶನ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ವಿಜಯಪುರ ಇವರ ಸಹಯೋಗದಲ್ಲಿ ಗುರುವಾರ ನಗರದ ಲಾಲಬಹಾದ್ದೂರ ಶಾಸ್ತಿçà ಮಾರುಕಟ್ಟೆಯಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಕುರಿತ ಏಕವ್ಯಕ್ತಿ ವ್ಯಂಗ್ಯ ಚಿತ್ರಕಲಾ ಪ್ರದರ್ಶನಕ್ಕೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್.ವಸ್ತçದ ಹಾಗೂ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿ ರಾಹುಲ್ ಶಿಂಧೆ ಅವರು ಚಾಲನೆ ನೀಡಿದರು.ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇಂದು ವ್ಯಂಗ್ಯ ಚಿತ್ರಕಲೆ ಮೂಲಕ ಮತದಾರರನ್ನು ಆಕರ್ಷಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಪ್ರದರ್ಶನದಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ.ಎಸ್.ವಸ್ತçದ ಅವರು ಮಾತನಾಡಿ, ಮತಗಟ್ಟೆ ಕೇಂದ್ರಗಳಲ್ಲಿ ಮತದಾನಕ್ಕೆ ಆಗಮಿಸುವ ಮತದಾರರು ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ. ಮತದಾರರ ಅನುಕೂಲಕ್ಕಾಗಿ ಶಾಮಿಯಾನ, ನೆರಳು, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಮತಗಟ್ಟೆಗಳಲ್ಲಿ ಕಲ್ಪಿಸಲಾಗುತ್ತಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ…
ಢವಳಗಿ: ಗ್ರಾಮದ ಹಾಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುರೇಶಗೌಡ ಪಾಟೀಲ ಅವರು ತಮ್ಮ ಅಪಾರ ಅಭಿಮಾನಿಗಳೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಎಸ್ ನಾಡಗೌಡ, ಶಂಕರಗೌಡ ಹೀರೆಗೌಡ, ಸಿದ್ದನಗೌಡ ಬಿರಾದಾರ ಮತ್ತು ಶಾಂತಗೌಡ ಪಾಟೀಲ ನಡಹಳ್ಳಿ, ಬಾಪುಗೌಡ ಪಾಟೀಲ ಅಂಗಡಗೇರಿ, ನಾನಾಗೌಡ ಕೊಣ್ಣುರ, ಹುಲಗಪ್ಪ ನಾಯಕಮಕ್ಕಳ, ಮಲ್ಲಿಕಾರ್ಜುನ ಸಿದರೆಡ್ಡಿ, ದುಂಡಪ್ಪ ಅರಸುಣಗಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ತೊರೆದು ಢವಳಗಿ, ಹಳ್ಳೂರ, ಅಗಸಬಾಳ, ಚೊಂಡಿ, ಬಳವಾಟ, ತಾರನಾಳ ಗ್ರಾಮಗಳ ೧೫೦ಕ್ಕೂ ಹೆಚ್ಚು ಜನರು ಕಾಂಗ್ರೆಸ್ ಪಕ್ಷಕ್ಕೆ ಸೆರ್ಪಡೆಯಾದರು.
ಆಲಮೇಲ: ರಾಷ್ಟಿಯ ಕಾಂಗ್ರೇಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ರಾಷ್ಟಾçಧ್ಯಕ್ಷರಾದ ಇಮ್ರಾನ್ ಪ್ರತಾಪಗರಿರವರ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೇಸ್ ಪಕ್ಷದ ಅಲ್ಪ ಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾದ ಕೆ.ಅಬ್ದುಲಜಬ್ಬಾರ್ ರವರ ಅನುಮೋದನೆ ಮತ್ತು ಆದೇಶದ ಮೂಲಕ ಪಟ್ಟಣದ ಯುವ ಮುಖಂಡ ಬಶೀರ ಎಂ. ಯಲಗಾರ(ತಾಂಬೋಳಿ)ರವರನ್ನು ಆಲಮೇಲ ಬ್ಲಾಕ್ ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ವಿಜಯಪುರ ಜಿಲ್ಲಾಧ್ಯಕ್ಷ ಶಬ್ಬೀರ ಜಾಗೀರದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲೆಯ 30-ಬಿಜಾಪುರ ನಗರ ಹಾಗೂ ೩೧-ನಾಗಠಾಣ ಮತಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಉದೀತ್ ಪ್ರಕಾಶ ರೈ ಅವರು ನಗರದ ಗಾಂಧಿ ಭವನಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಎಲ್.ರೂಪಾ, ವಿಜಯಪುರ ತಹಶೀಲ್ದಾರರಾದ ಸುರೇಶ ಮುಂಜೆ ಉಪಸ್ಥಿತರಿದ್ದರು
ಮುದ್ದೇಬಿಹಾಳ: ಬಡವರ, ರೈತರ, ಹಿಂದುಳಿದವರ, ದೀನ ದಲಿತರ ಪಾಲಿನ ಬೆಳಕಾಗಿರುವ ಜೆಡಿಎಸ್ ಪಕ್ಷ ಈ ಬಾರಿ ಮತಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳನ್ನು ಪಡೆದು ವಿಜಯಶಾಲಿಯಾಗಲಿದೆ ಎಂದು ಅಭ್ಯರ್ಥಿ ಬಸವರಾಜ ಭಜಂತ್ರಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಎದುರು ತಮ್ಮ ಬೆಂಬಲಿಗರೊAದಿಗೆ ನಾಮಪತ್ರ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅತೀ ಹೆಚ್ಚು ಸ್ಥಾನಗಳನ್ನು ಗೆದ್ದು ಈ ಬಾರಿಯ ಅಧಿಕಾರದ ಚುಕ್ಕಾಣಿ ಹಿಡಿಯುವ ದಿನಗಳು ಬಹಳÀ ದೂರ ಇಲ್ಲ. ಮುದ್ದೇಬಿಹಾಳ ಮತಕ್ಷೇತ್ರ ಸಾಮಾನ್ಯ ಮತಕ್ಷೇತ್ರವಾಗಿದ್ದು ಇಲ್ಲಿ ಕುಮಾರಸ್ವಾಮಿಯವರು ಹಿಂದುಳಿದ ವರ್ಗದವನಾದ ನನ್ನ ಮೇಲೆ ವಿಶ್ವಾಸವಿಟ್ಟು ಟಿಕೆಟ್ ನೀಡಿದ್ದು ಅಪಾರ ಅಭಿಮಾನಿಗಳಿಗೆ ಸಂತಸ ತಂದಿದೆ. ಮತಕ್ಷೇತ್ರದ ಜನತೆ ನನ್ನನ್ನು ನಿಮ್ಮ ಮಗನೆಂದು ಭಾವಿಸಿ ಅಮೂಲ್ಯ ಮತಗಳನ್ನು ನೀಡಿ ಪ್ರಚಂಡ ಬಹುಮತದಿಂದ ಆರಿಸಿ ತರಬೇಕು ಎಂದರು.ತಾಲೂಕು ಅಧ್ಯಕ್ಷ ಪವಾಡೆಪ್ಪ ಹವಾಲ್ದಾರ ಮಾತನಾಡಿ, ಪಕ್ಷದ ಗೆಲುವಿಗಾಗಿ ಹಗಲಿರುಳು ಶ್ರಮಿಸುವುದಾಗಿ ತಿಳಿಸಿದರು.ಪ್ರಮುಖರಾದ ಅರವಿಂದ ಕಾಶಿನಕುಂಟಿ, ಸಂತೋಷ ಶಿವಯೋಗಿಮಠ, ಬುಡ್ಡಾ ನಾಯ್ಕೋಡಿ, ನೂರ ಅಹಮ್ಮದ ಹಡಗಲಿ, ಶಿವು ಹೊಸಮನಿ,…
