Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷರನ್ನಾಗಿ ಎಂ.ಎಸ್.ಲೋಣಿ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕಾತಿ ಆದೇಶ ಪ್ರತಿಯನ್ನು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಎಂ.ಎಸ್.ಲೋಣಿ ಅವರಿಗೆ ನೀಡಿದರು. ನಂತರ ಮಾತನಾಡಿದ ಎಂ.ಬಿ.ಪಾಟೀಲ ಅವರು, ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ. ಕಾಂಗ್ರೆಸ್ ಪಕ್ಷದ ಕೊಡುಗೆಗಳು, ಗ್ಯಾರಂಟಿ ಸ್ಕೀಂ ಗಳು ಮತ್ತು ಬಿಜೆಪಿಯ ವೈಫಲ್ಯಗಳ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಸ್.ಲೋಣಿ ನನ್ನನ್ನು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಎಂ.ಬಿ.ಪಾಟೀಲರು ಆದೇಶ ಪ್ರತಿ ನೀಡಿರುವುದು ಅತೀವ ಸಂತೋಷ ಉಂಟು ಮಾಡಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸಂಘಟನೆಗಾಗಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಎಲ್ಲ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ನನ್ನ ಬೆಂಬಲಿಗರನ್ನು ಪಕ್ಷಕ್ಕೆ ಕರೆ ತರುತ್ತೇನೆ. ಅಲ್ಲದೇ, ಎರಡೂ ಜಿಲ್ಲೆಗಳ ಎಲ್ಲ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ಹೇಳಿದರು. ಈ ಮುಂಚೆ…
ವಿಜಯಪುರ: ಆರ್ಥಿಕವಾಗಿ ಹಿಂದುಳಿದ ಮತ್ತು ಸರ್ವ ಜನರೊಂದಿಗೆ ಸಹಬಾಳ್ವೆ ನಡೆಸುತ್ತಿರುವ ಎಲ್ಲ ಸ್ವಾಭಿಮಾನಿ ಜನರ ಕಲ್ಯಾಣಕ್ಕೆ ಶ್ರಮಿಸುತ್ತಿದ್ದೇನೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದ್ದಾರೆ. ನಗರದಲ್ಲಿ ನಡೆದ ನಾನಾ ಸಮುದಾಯಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕಾಯಕ ನಿಷ್ಠೆಯಿಂದ ಕೆಲಸ ಮಾಡುತ್ತ ಇತರ ಸಮುದಾಯಗಳೊಂದಿಗೆ ಸಹಬಾಳ್ವೆ ನಡೆಸುತ್ತಿರುವವರು ಯಾವುದೇ ಹಿಂಜರಿಕೆ ಇಲ್ಲದೆ ನಿರಾತಂಕವಾಗಿ ತಮ್ಮ ಕಾಯಕ ಮುಂದುವರೆಸಬೇಕು ಎಂದು ಹೇಳಿದರು. ಹಿಂದುಳಿದವರು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಆರ್ಥಿಕವಾಗಿ ಸ್ವಾವಲಂಭಿಯಾಗಬೇಕು. ಈ ಹಿಂದಿನಿಂದಲೂ ನಮ್ಮ ಕುಟುಂಬದೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಈ ಜನರ ಬಗ್ಗೆ ನಮಗೂ ಹೆಮ್ಮೆ ಮತ್ತು ಕಾಳಜಿ ಇದೆ ಎಂದು ಅವರು ಹೇಳಿದರು. ಕುಡಿಯಲು ನೀರಿಗಾಗಿ ಪರದಾಡುತ್ತಿದ್ದ ರೈತರ ಭೂಮಿಗೆ ನೀರೊದಗಿಸುವ ಮೂಲಕ ಮುಂದಿನ ಪೀಳಿಗೆಗೂ ನೆಮ್ಮದಿಯಿಂದ ಬದುಕು ಸಾಗಿಸಲು ಶಾಶ್ವತ ಪರಿಹಾರ ಒದಗಿಸಿದ್ದೇವೆ. ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸುವಂತೆ ಮಾಡಿದ್ದೇವೆ. ರೈತರು ವೈಜ್ಞಾನಿಕವಾಗಿ ಕೃಷಿ ಮಾಡಲು ಮಾಹಿತಿ…
ಎಂ.ಬಿ.ಪಾಟೀಲರು ಮಾಡಿದ ನೀರಾವರಿ ಕೆಲಸಗಳಿಂದ ಸಂತಸಗೊಂಡ ರೈತ ಶೇಖಪ್ಪ ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿ ಕೆಲಸಗಳಿಂದ ಸಂತಸನಾದ ರೈತರೊಬ್ಬರು ಎಂ. ಬಿ. ಪಾಟೀಲರ ಚುನಾವಣೆ ಖರ್ಚಿಗೆ ಕಾಣಿಕೆಯಾಗಿ ರೂ.50 ಸಾವಿರ ಚೆಕ್ನ್ನು ನೀಡಿ ಅಭಿಮಾನ ತೋರಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಬೆಳಿಗ್ಗೆ ಎಂ.ಬಿ.ಪಾಟೀಲರ ನಿವಾಸಕ್ಕೆ ರೈತ ಸ್ನೇಹಿತರೊಂದಿಗೆ ಆಗಮಿಸಿದ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್.ಎಚ್. ಗ್ರಾಮದ ರೈತ ಶೇಖಪ್ಪ ಚಿಕ್ಕಗಲಗಲಿ ಚೆಕ್ ನೀಡಿ ಸಂಭ್ರಮಿಸಿದರು. ಬಳಿಕ ಮಾತನಾಡಿದ ಶೇಖಪ್ಪ ಚಿಕ್ಕಗಲಗಲಿ, ನಮ್ಮ ಭಾಗದಲ್ಲಿ ಈ ಮುಂಚೆ ಕುಡಿಯುವ ನೀರಿಗೆ ಹಾಹಾಕಾರವಿತ್ತು. ಕೆರೆಗಳಿಗೂ ನೀರು ಸಿಗುತ್ತಿರಲಿಲ್ಲ. ಎಂ. ಬಿ. ಪಾಟೀಲರು ಜಲಸಂಪನ್ಮೂಲ ಸಚಿವರಾದ ನಂತರ ನಮ್ಮ ಭಾಗದಲ್ಲಿ ಸಂಪೂರ್ಣ ನೀರಾವರಿ ಮಾಡಿ ಎಲ್ಲವನ್ನು ಸಮೃದ್ಧಿ ಮಾಡಿದ್ದಾರೆ. ಈ ಮುಂಚೆ ಪ್ರತಿ ಎಕರೆ ಭೂಮಿಯ ಬೆಲೆ ರೂ.10 ಸಾವಿರ ಮಾತ್ರ ಇತ್ತು. ಈಗ ಪ್ರತಿ ಎಕರೆಗೆ ಕನಿಷ್ಠ ರೂ.50 ಸಾವಿರರಂತೆ ಬೆಳೆ ಬೆಳೆಯುತ್ತಿದ್ದೇವೆ. ಎಲ್ಲ…
ಎಂ.ಪಿ.ನಾಡಗೌಡ ನಾಮಪತ್ರ ಸಲ್ಲಿಕೆ | ರೋಡ್ ಶೋ | ಅಪಾರ ಜನಸ್ತೋಮ ಮುದ್ದೇಬಿಹಾಳ : ಈ ಬಾರಿ ಮತಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಜೋರಾಗಿಯೇ ಬೀಸಿದೆ. ನನ್ನ ನಿರೀಕ್ಷೆಗಿಂತ ಎರಡು ಮೂರು ಪಟ್ಟು ಹೆಚ್ಚಿನ ಜನ ಇಂದು ನನಗೆ ಬೆಂಬಲಿಸಿದ್ದಾರೆ. ಇಷ್ಟೊಂದು ಜನ ಕಾಂಗ್ರೇಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟಿದ್ದು ನೋಡಿದರೆ ಈ ಬಾರಿ ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷ ವಿಜಯೋತ್ಸವ ಆಚರಿಸುವುದರಲ್ಲಿ ಸಂಶಯವೇ ಇಲ್ಲ ಎಂದು ಮಾಜಿ ಸಚಿವ, ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಮ್ಮ ಅಪಾರ ಅಭಿಮಾನಿಗಳ ಬೆಂಬಲದೊAದಿಗೆ ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರನ್ನುದ್ದೇಶಿಸಿ ಅವರು ಮಾತನಾಡಿದರು.ನನ್ನ ಜೀವನದಲ್ಲಿಯೇ ಇಷ್ಟೊಂದು ಅಪಾರÀ ಸಂಖ್ಯೆಯಲ್ಲಿ ಜನರು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲವನ್ನು ನೀಡಿರುವುದನ್ನು ನೋಡಿರಲಿಲ್ಲ. ಸ್ವಯಂಪ್ರೇರಿತರಾಗಿ 25 ಸಾವಿರಕ್ಕೂ ಅಧಿಕ ಜನ ಭಾಗಿಯಾಗಿದ್ದಾರೆ. ನನ್ನ ಮೇಲೆ ಮತ್ತು ಕಾಂಗ್ರೇಸ್ ಪಕ್ಷದ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಯಾವತ್ತೂ ಧಕ್ಕೆ ಬರದ ಹಾಗೆ ಜನತೆಯ ಸೇವೆ ಮಾಡುತ್ತೇನೆ. ಜನರನ್ನು…
ವಿಜಯಪುರ: ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾಗಿ, ನಿಷ್ಕಾಳಜಿತನ ತೋರಿ ಕರ್ತವ್ಯಲೋಪವೆಸಗಿರುವ ಆಲಮೇಲದ ಕಾಡಾ ಕಚೇರಿಯ ಲೆಕ್ಕ ಸಹಾಯಕ ರಮೇಶ ಬಗಲಿ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ ಕರ್ನಾಟಕ ನಾಗರೀಕ ಸೇವಾ ನಿಯಮಗಳನ್ವಯ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶಿಸಿದ್ದಾರೆ.ಅಮಾನತ್ತಾದ ಲೆಕ್ಕ ಸಹಾಯಕ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಡುವಂತಿಲ್ಲ ಹಾಗೂ ಕರ್ನಾಟಕ ನಾಗರೀಕ ಸೇವಾ ನಿಯಮ ೯೮ರನ್ವಯ ಜೀವನಾಂಶ ಭತ್ಯೆ ಪಡೆಯಲು ಅರ್ಹತೆ ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ರಾಹುಲ್ ಶಿಂಧೆ ಅವರ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ವಿಭಿನ್ನವಾಗಿ ಹಾಗೂ ವಿಶಿಷ್ಟವಾಗಿ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.ಈ ನಿಟ್ಟಿನಲ್ಲಿ ಮಂಗಳವಾರ ತಾಳಿಕೋಟಿ ತಾಲ್ಲೂಕಿನ ಅಸ್ಕಿ ಗ್ರಾಮ ಪಂಚಾಯತಿಯ ಅಸ್ಕಿ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ, ಕೂಲಿಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆರೆ ಅಂಗಳದಲ್ಲಿ ಮತದಾನ ಜಾಗೃತಿ ಸಂಬAಧಿಸಿದ “ನನ್ನ ಮತ ನನ್ನ ಹಕ್ಕು” ಘೋಷಣೆಯೊಂದಿಗೆ ಕೂಲಿಕಾರ್ಮಿಕರಿಗೆ “ಮತದಾನ ಪ್ರತಿಜ್ಞಾವಿಧಿ” ಬೋಧಿಸಲಾಯಿತು.ಈ ಸಂದರ್ಭ ಪಂಚಾಯತ ಅಭಿವೃದ್ಧಿ ಅಧಿಕಾರಿ ನಿಂಗಣ್ಣ ದೊಡಮನಿ ಅವರು ಮಾತನಾಡಿ, ಮೇ ೧೦ರಂದು ನಡೆಯುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ನಿಮ್ಮ ಮತ ಅಮೂಲ್ಯವಾಗಿದ್ದು, ಯಾರೂ ಸಹ ಮತದಾನದಿಂದ ಹೊತಗುಳಿಯಬಾರದು.ತಮ್ಮ ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸಿ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಮಲಕಪ್ಪ ಬಿ.ಎಮ್, ಪಂಚಾಯತ ಕಾರ್ಯದರ್ಶಿ ಮಲ್ಲಿಕಾರ್ಜುನ, ಗ್ರಾಮ ಪಂಚಾಯತಿಯ ಸಿಬ್ಬಂದಿಗಳು,…
ದೇವರಹಿಪ್ಪರಗಿಯಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ | ಮೆರವಣಿಗೆ ದೇವರಹಿಪ್ಪರಗಿ: ಜೆಡಿಎಸ್ ಅಭ್ಯರ್ಥಿ ಭೀಮನಗೌಡ(ರಾಜುಗೌಡ) ಪಾಟೀಲ, ಕುದರಿ ಸಾಲವಾಡಗಿ ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.ಪಟ್ಟಣದ ಟಿಪ್ಪುಸುಲ್ತಾನ ವೃತ್ತದಲ್ಲಿ ಮಂಗಳವಾರ ರಾಜುಗೌಡ ಪಾಟೀಲ ನೇತೃತ್ವದಲ್ಲಿ ಸಭೆ ಸೇರಿದ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೆರವಣಿಗೆಯ ಮೂಲಕ ಹೋರಟು ತಹಶೀಲ್ದಾರ ಕಚೇರಿ ತಲುಪಿ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿಯಾದ ರಾಜುಗೌಡ ಪಾಟೀಲ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ 20 ತಿಂಗಳ ಅಧಿಕಾರವಧಿಯಲ್ಲಿ ಕೈಗೊಂಡ ಜನಪರ ಕಾರ್ಯಕ್ರಮಗಳು, ಪಂಚರತ್ನ ಯೋಜನೆಗಳು ಈ ಬಾರಿ ಜೆಡಿಎಸ್ ಗೆಲುವಿಗೆ ಸಹಕಾರಿಯಾಗಲಿವೆ. ಜೊತೆಗೆ ಕಳೆದ ಎರಡು ಚುನಾವಣೆಯಲ್ಲಿ ಕೆಲವೇ ಅಂತರದ ಮತಗಳ ಸೋಲು ನನಗೆ ಸಾಕಷ್ಟು ಪಾಠ ಕಲಿಸಿದೆ. ಈ ಬಾರಿ ಕ್ಷೇತ್ರದ ಮತದಾರರು ಅಭಿವೃದ್ಧಿ ಹಾಗೂ ಅನುಕಂಪದ ಮೂಲಕ ನನಗೆ ಅಪಾರ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ನನಗೂ ಸಹ ಕ್ಷೇತ್ರದ ಜನತೆಯ ನಾಡಿಮಿಡಿತ ಅರ್ಥವಾಗಿದ್ದು, ಖಂಡಿತವಾಗಿಯೂ ಈ ಬಾರಿ 10…
ವಿಜಯಪುರ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಹಿನ್ನಲೆಯಲ್ಲಿ ಮೇ.10ರಂದು ಮತದಾನ ಜರುಗಲಿದ್ದು, ಮತದಾನ ಮುಕ್ತಾಯವಾಗುವ 48ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಸುಗಮ ಹಾಗೂ ಪಾರದರ್ಶಕ ಚುನಾವಣೆ ನಡೆಸುವ ದೃಷ್ಟಿಯಿಂದ ದಂಡ ಸಂಹಿತೆ 1973 ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.ಪ್ರತಿಬಂಧಕಾಜ್ಞೆ ಆದೇಶದಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆ ಜನರು ಸೇರುವಂತಿಲ್ಲ ಎಂದು ಆದೇಶಿಸಲಾಗಿದೆ.ಕಲ್ಲುಗಳನ್ನು ಮತ್ತು ಕ್ಷಾರಪದಾರ್ಥ ಇಲ್ಲವೇ ಸ್ಪೋಟಕ್ ವಸ್ತುಗಳು, ಯಾವುದೇ ದಾಹಕ ವಸ್ತುಗಳು, ಶಸ್ತç, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡುವ ಮಾರಕಾಸ್ತçಗಳನ್ನು ತೆಗೆದುಕೊಂಡು ಹೋಗುವುದು ಹಾಗೂ ತಿರುಗಾಡುವುದನ್ನು ನಿಷೇಧಿಸಲಾಗಿದೆ.ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಡೆಸುವುದನ್ನು…
ವಿಜಯಪುರ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರ | ನಾಮಪತ್ರ ಸಲ್ಲಿಸುವ 4ನೇ ದಿನ ವಿಜಯಪುರ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಾಮಪತ್ರ ಸಲ್ಲಿಸಲು ನಾಲ್ಕನೇ ದಿನವಾದ ಏಪ್ರಿಲ್ 18ರ ಮಂಗಳವಾರ ದ0ದು ವಿಜಯಪುರ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಲ್ಲಿ 24 ಅಭ್ಯರ್ಥಿಗಳಿಂದ ಒಟ್ಟು 25 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.26-ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದಿಂದ 02, 27-ದೇವರಹಿಪ್ಪರಗಿ ಮತಕ್ಷೇತ್ರದಿಂದ 02, 28-ಬಸವನಬಾಗೇವಾಡಿ ಮತಕ್ಷೇತ್ರದಿಂದ 02, 29-ಬಬಲೇಶ್ವರ ಮತಕ್ಷೇತ್ರದಿಂದ 04, 30-ಬಿಜಾಪುರ ನಗರ ಮತಕ್ಷೇತ್ರದಿಂದ 01, 31-ನಾಗಠಾಣ (ಎಸ್ಸಿ) ಮತಕ್ಷೇತ್ರದಿಂದ 07, 32-ಇಂಡಿ ಮತಕ್ಷೇತ್ರದಿಂದ 03 ಹಾಗೂ 33-ಸಿಂದಗಿ ಮತಕ್ಷೇತ್ರದಿಂದ 04 ನಾಮಪತ್ರಗಳು ಸೇರಿದಂತೆ ಒಟ್ಟು 25 ನಾಮಪತ್ರಗಳು ಇಂದು ಸಲ್ಲಿಕೆಯಾಗಿವೆ.ಮುದ್ದೇಬಿಹಾಳ ಮತಕ್ಷೇತ್ರದಿಂದ ಕಾಶಿನಾಥ ದೊಡಮನಿ ( ಬಹುಜನ ಸಮಾಜ ಪಕ್ಷ), ಚನ್ನಬಸಪ್ಪ ಸೋಲಾಪುರ (ಜನತಾ ದಳ ಜಾತ್ಯಾತೀತ) ಅವರು ನಾಮಪತ್ರ ಸಲ್ಲಿಸಿದ್ದಾರೆ.ದೇವರಹಿಪ್ಪರಗಿ ಮತಕ್ಷೇತ್ರದಿಂದ ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ (ಜನತಾ ದಳ (ಜಾತ್ಯಾತೀತ)), ದುಂಡಸಿ…
ಮುದ್ದೇಬಿಹಾಳ: ಸಿಮೆಂಟ್ ಹೇರಿಕೊಂಡು ಬಂದಿದ್ದ ಲಾರಿ ಹಾಯ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಪಟ್ಟಣದ ಎಪಿಎಂಸಿ ಬಳಿ ನಡೆದಿದೆ.ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮದ ಬುಡ್ಡೇಸಾ ಹಸನಸಾಬ ನದಾಫ (55) ಮೃತ ದುರ್ದೈವಿ. ಘಟನೆ ಕುರಿತು ಮೃತರ ಮಗ ಮಲ್ಲಿಕಸಾಬ ನದಾಫ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
