Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಸಿಂದಗಿ ವಲಯ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಹೆಗ್ಗೆರೇಶ್ವರ ದೇವಸ್ಥಾನ, ನಗರಸಭೆ, ಕಾಳಿಕಾದೇವಿ ವಿಶ್ವಕರ್ಮ ಸಮಾಜ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಡಾ.ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ೨೦೨೨ನೇ ವ್ಯಸನಮುಕ್ತ ಶಿಬಿರದ ಸಮಾರೋಪ ಸಮಾರಂಭವನ್ನು ಡಿ.೨೩ರಂದು ಬೆಳಿಗ್ಗೆ ೧೨ಗಂಟೆಗೆ ಹೆಗ್ಗೆರೇಶ್ವರ ದೇವಸ್ಥಾನ ಸಬಾಭವನದಲ್ಲಿ ಜರುಗಲಿದೆ ಎಂದು ಎಂದು ಮದ್ಯವರ್ಜನಾ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ ಅಲ್ಲಾಪೂರ ತಿಳಸಿದ್ದಾರೆ.ಸಿಂದಗಿ ಪಟ್ಟಣದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಬೆಳ್ತಂಗಡಿ, ಸಿಂದಗಿ ತಾಲೂಕು ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯವನ್ನು ಬೋರಗಿ-ಪುರದಾಳ ವಿಶ್ವರಾಧ್ಯ ಶ್ರೀಮಠದ ತಪೋರತ್ನಂ ಮಹಾಲಿಂಗೇಶ್ವರ ಸ್ವಾಮಿಗಳು ವಹಿಸುವರು. ಉದ್ಘಾಟನೆಯನ್ನು ಶಾಸಕ ಅಶೋಕ ಮನಗೂಳಿ ನೇರವೇರಿಸುವರು. ಅಧ್ಯಕ್ಷತೆಯನ್ನು ಅಶೋಕ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಶಾಖಾ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಎಫ್-೧೩ ಕಲ್ಯಾಣ ನಗರ ಮಾರ್ಗದ ಮೇಲೆ ಬರುವ ಕೋರ್ಟ್ ಸುತ್ತಮುತ್ತಲಿನ ಪ್ರದೇಶ , ಡಾಲ್ಫಿನ್ ದಾಬಾ, ಪ್ರೇರಣಾ ಶಾಲೆ, ದೊಡಮನಿ, ಮನಗೂಳಿ ಮತ್ತು ಬಿ.ಟಿ.ಸುಣಗಾರ ಅವರ ಕಡಿಮಿಷನ್ ಪ್ರದೇಶಗಳಲ್ಲಿ ಡಿ.೨೩ರಂದು ಬೆಳಿಗ್ಗೆ ೧೦ಗಂಟೆಯಿಂದ ಸಾಯಂಕಾಲ ೫ಗಂಟೆಯವರೆಗೆ ವಿದ್ಯುತ್ ವ್ಯತ್ಯೆಯವಾಗುವುದರಿಂದ ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪವಿಭಾಗದ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Read More

ಇಂದು (ಡಿಸೆಂಬರ ೨೩) “ರಾಷ್ಟ್ರೀಯ ರೈತ ದಿನ”ದ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ “ನೇಗಿಲ ಕುಲದೊಳಗಡದಿದೆ ಕರ್ಮ ನೇಗಿಲ ಮೇಲೆಯೇ ನಿಂತಿದೆ ಧರ್ಮ”ಎಂಬ ರೈತ ಗೀತೆಯ ಸಾಲುಗಳು ನಮ್ಮ ಭಾರತದ ಆರ್ಥಿಕತೆಯ ಜೀವಾಳ, ಬೆನ್ನೆಲುಬು ಮತ್ತು ಗ್ರಾಮೀಣ ಸಮೃದ್ಧಿಗೆ ಗಮನಾರ್ಹ ಕೊಡುಗೆ ನೀಡುವವ ರೈತರ ಶ್ರಮವನ್ನು ಬಿಂಬಿಸುತ್ತದೆ. ಇಂದು ಎಲ್ಲ ರಂಗಗಳು ಅತ್ಯಂತ ಲಾಭದಾಯಕತ್ವವನ್ನು ಸಾಧಿಸುತ್ತಿದ್ದರೂ ಕೃಷಿ ಕ್ಷೇತ್ರದಲ್ಲಿ ರೈತರು ಬೆಳೆದ ಫಸಲಿಗೆ ಮಾರುಕಟ್ಟೆಯಲ್ಲಿ ಉತ್ತಮ ದರವಿಲ್ಲದೇ ಕಂಗಾಲಾಗಿದ್ದಾರೆ. ಆದರೆ ರಸಗೊಬ್ಬರ, ಕೀಟನಾಶಕಗಳ ಬೆಲೆ, ಕೆಲಸಗಾರ ಕೂಲಿ ಮತ್ತು ಇನ್ನಿತರ ಕೃಷಿ ಪರಕರಗಳು ದುಬಾರಿಯಾಗುತ್ತಿವೆ ಆದರೆ ಅವರ ಉತ್ಪನ್ನಕ್ಕೆ ಸೂಕ್ತ ಬೆಲೆ ದೊರಕದೇ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿರುವುದು ತೀರ ಕಳವಳಕಾರಿ ಸಂಗತಿಯಾಗಿದೆ. ಇಂದಿನ ದಿನಗಳಲ್ಲಿ ರೈತರೆಂದರೆ ಹೆಣ್ಣು ಕೊಡಲು ಮೂಗು ಮೂರಿಯುವ ಮತ್ತು ಅನ್ನದಾತನನ್ನು ತಿರಸ್ಕಾರ ಭಾವ ತಾಳುತ್ತಿರುವ ಅದೇಷ್ಟೋ ಜನರಿಗೆ ಈ ಜಗತ್ತು ಎಷ್ಟೇ ವಿಜ್ಞನ-ತಂತ್ರಜ್ಞಾನದಲ್ಲಿ ಮುಂದುವರೆದರೂ ಅಥವಾ ಅಭಿವೃದ್ಧಿ…

Read More

ವಿಜಯಪುರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗಾಗಿ ನಿಗದಿತ ಗುರಿ ಸಾಧಿಸಬೇಕು. ಯಾವುದೇ ಸಬೂಬು ನೀಡದೆ ಭೌತಿಕ ಪ್ರಗತಿ ಸಾಧಿಸಿ ಮಾಹಿತಿ ಒದಗಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಸೂಚಿಸಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಕುಡಿಯುವ ನೀರು ಪೂರೈಕೆ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಸೂಕ್ತ ಚಾರ್ಟ್ ಹಾಕಿಕೊಂಡು, ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಲು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಕುಡಿಯುವ ನೀರಿನ ಕಾಮಗಾರಿಗೆ ಯಾವುದೇ ತಾಂತ್ರಿಕ ಸಮಸ್ಯೆ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಸುಮಾರು 1040 ನೇ ಇಸವಿಯಲ್ಲಿನ ಶಾಸನ ಇಲ್ಲಿನ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಕಾಣಬಹುದಾಗಿದೆ. ಕೆಂಭಾವಿ ಎಂದರೇನೆ ಸಮಸಮಾಜದ ಕನಸು ಕಂಡ ಶರಣ ಭೋಗಣ್ಣ ಮತ್ತು‌ ರಾಜಾ ಚಂದಿಮರಸನ ನೆನಪಾಗುತ್ತದೆ ಎಂದು ಹಿರಿಯ ಸಂಶೋಧಕಿ ಹನುಮಾಕ್ಷಿ ಗೋಗಿ ಹೇಳಿದರು.ಪಟ್ಟಣದ ಭೋಗೇಶ್ವರ ದೇವಸ್ಥಾನಕ್ಕೆ ಪ್ರಾಚ್ಯವಸ್ತು ಸಂಶೋಧನಾ ಇಲಾಖೆಯ ನಿವೃತ್ತ ಮುಖ್ಯಸ್ಥರಾದ ಎಸ.ವಿ ವೆಂಕಟೇಶಯ್ಯ ನವರು ಹಾಗೂ ಸಂಶೋದಕಿ ಡಾ. ಕಾಶಿಬಾಯಿ ಭೊಗಶಟ್ಟಿ ರವರ ಸಮೇತ ಅವರ ತಂಡ ಸೋಮವಾರ ಭೇಟಿ ನಿಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಭೋಗಣ್ಣ ಬಸವಾದಿ ಪ್ರಮಥರ ಹಿರಿಯ ಸಮಕಾಲಿನವರಾಗಿದ್ದರು. ಆ ಕಾಲದಲ್ಲಿ ಭೋಗಣ್ಣ ಲಿಂಗಭೇದ ರಹಿತ, ಜಾತಿಭೇದ ರಹಿತ ಸಮಾಜವನ್ನು ನಿರ್ಮಾಣ ಮಾಡಲು ಹೋರಾಡಿದ ಮಹಾನ್ ಶರಣ ಎಂಬುವುದಾಗಿ ಐತಿಹಾಸಿಕವಾಗಿ ಕಾಣಬಹುದಾಗಿದೆ. ಕೆಂಭಾವಿ ಬೋಗಣ್ಣವರ ಹೆಸರು ಈ ಭೋಗೆಶ್ವರ ದೇವಾಸ್ಥಾನದಿಂದ ಬಂತೋ ಅಥವಾ ಭೋಗಣ್ಣನವರ ನಂತರ ದೇವಸ್ಥಾನ ರಚನೆಯಾತೊ ಮತ್ತು ಆತನ ವಚನಗಳ ಕುರಿತು ಸಂಶೋಧನೆಗಳು ನಡೆಯಬೇಕಾಗಿದೆ ಎಂಬ ಅಭಿಪ್ರಾಯ ಪಟ್ಟ ಅವರು ಭೋಗಣ್ಣನ ದೇವಸ್ಥಾನ ಅತ್ಯಂತ…

Read More

ಚಿರತೆ ಮನುಷ್ಯರನ್ನು ಕೊಲ್ಲಬಹುದೆಂಬ ಆತಂಕದಲ್ಲಿ ತದ್ದೇವಾಡಿ ಗ್ರಾಮಸ್ಥರು ಉದಯರಶ್ಮಿ ದಿನಪತ್ರಿಕೆ ಚಡಚಣ: ಪದೇ ಪದೇ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿಯಿಂದ ತದ್ದೇವಾಡಿ ಗ್ರಾಮದ ಜನರಲ್ಲಿ ಆತಂಕದ ವಾತವಾರಣ ಸೃಷ್ಠಿಯಾಗಿದೆ.ಈ ಮೊದಲು ಚಿರತೆ ದಾಳಿಯಿಂದ ಜಾನುವಾರು ಸಾವನಪ್ಪಿದ ಘಟನೆ ನಡೆದು ಒಂದು ವಾರದಲ್ಲಿಯೆ ಎರಡನೆಯ ಬಾರಿ ಮತ್ತೆ ಚಿರತೆ ದಾಳಿಯಿಂದ ಮತ್ತೊಂದು ಜಾನುವಾರ ಕಳೆದುಕೊಂಡ ಘಟನೆ ರವಿವಾರ ನಡೆದಿದೆ.ತದ್ದೇವಾಡಿ, ಮಣಕಂಲಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಕಳೆದ ಬಹುದಿನಗಳಿಂದ ಚಿರತೆ ದಾಳಿಗೆ ಸಾಕು ಪ್ರಾಣಿಗಳು ಬಲಿಯಾಗುತ್ತಿದ್ದು, ಒಂದಾದ ಮೇಲೊಂದರಂತೆ ದನ, ಕರು, ಆಡು, ಕುರಿಗಳನ್ನು ಚಿರತೆ, ಕೊಂದು ಹಾಕುತ್ತಿರುವುದರಿಂದ ಮತ್ತು ಮನುಷ್ಯರ ಮೇಲೂ ದಾಳಿ ಮಾಡಬಹುದು ಎಂದು ಈ ಭಾಗದ ಗ್ರಾಮಸ್ಥಗಳು ಆತಂಕಕ್ಕೊಳಗಾಗಿದ್ದಾರೆ.ಪದೇ ಪದೇ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿಯಿಂದ ಜನ ಭಯಭೀತರಾಗಿದ್ದಾರೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಮತ್ತು ಪತ್ರಿಕೆಗಳಲ್ಲಿಯು ಪ್ರಕಟವಾಗಿದೆ ಆದರೂ ಇಲ್ಲಿಯವರಗೆ ಚಿರತೆ ಪತ್ತೆಯಾಗಿಲ್ಲ, ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ ಎದ್ದು ಕಾಣುತ್ತಿದೆ ಮತ್ತು ನಮ್ಮ ಜೀವ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ಕುಮಸಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು. ಶಾರದಾ ಬಟವಾಲ ಮಿಮಿಕ್ರಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ವಿಜಯಪುರ ತಾಲೂಕಿನ ಕಗ್ಗೋಡ ಗ್ರಾಮದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದು ಈ ವಿದ್ಯಾರ್ಥಿನಿ ಸಾಧನೆಯನ್ನು ಮಾಡಿದ್ದಾರೆವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರು ಹಾಗೂ ಮುಖ್ಯ ಗುರುಗಳು ಸರ್ವ ಸಿಬ್ಬಂದಿ ವರ್ಗದವರು ಹಾಗೂ ಊರಿನ ಪ್ರಮುಖ ಗಣ್ಯರು ಸಂತಸ ವ್ಯಕ್ತಪಡಿಸಿ ವಿದ್ಯಾರ್ಥಿನಿಯ ಸಾಧನೆ ಹೇಗೆ ಮುಂದುವರೆಯಲೆಂದು ಹಾರೈಸಿದ್ದಾರೆ.

Read More

ಡಿಸೆಂಬರ್ 24ರಂದು ಆಲಮೇಲದಲ್ಲಿ ನಡೆಯುವ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಿ.ಆರ್.ನಾಡಗೌಡ ಅವರ ಕುರಿತ ವಿಶೇಷ ಲೇಖನ ಉದಯರಶ್ಮಿ ದಿನಪತ್ರಿಕೆ ಲೇಖನ: ಗುರು ಆರ್ ಹಿರೇಮಠಆಲಮೇಲ: ಮಕ್ಕಳ ಸಾಹಿತ್ಯದ ತೊಟ್ಟಿಲು ಎಂದು ಕರೆಸಿಕೊಳ್ಳುವ ವಿಜಯಪುರ ಜಿಲ್ಲೆಯು ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೆ ಅನೇಕ ಪ್ರತಿಭಾವಂತ ಮಕ್ಕಳ ಸಾಹಿತಿಗಳನ್ನು ಕೊಟ್ಟಿದೆ. ಪ್ರಮುಖವಾಗಿ ಶಂ.ಗು .ಬಿರಾದಾರ, ಶಿಶು ಸಂಗಮೇಶ , ಈಶ್ವರ್ ಚಂದ್ರ ಚಿಂತಾಮಣಿ, ಶರಣಪ್ಪ ಕಂಚಾಣಿ, ಪ.ಗು.ಸಿದ್ದಾಪುರ, ಹ.ಮ. ಪೂಜಾರ, ಜಂಬುನಾಥ್ ಕಂಚಾಣಿ, ರಾ.ಶಿ.ವಾಡೇದ, ಬಾ.ಈ. ಕುಮುಟೆ ಮುಂತಾದ ಹಿರಿಯ ಮಕ್ಕಳ ಸಾಹಿತಿಗಳನ್ನು ಹೆಸರಿಸಬಹುದಾಗಿದೆ. ಇಂತಹ ಹಿರಿಯ ಮಕ್ಕಳ ಸಾಹಿತಿಗಳ ಸಾಲಿನಲ್ಲಿ ಶ್ರೀ ಬಿ. ಆರ್. ನಾಡಗೌಡರು ಸಹ ಪ್ರಮುಖರಾಗಿದ್ದಾರೆ.ಇದೇ ಡಿಸೆಂಬರ 24 ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ವಿಜಯಪುರ ಹಾಗೂ ವಿಶ್ವೇಶ್ವರ ಬಾಲ ಭಾರತಿ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಆಲಮೇಲದಲ್ಲಿ ಜರುಗಲಿರುವ 12ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಮಕ್ಕಳ ಬಿ. ಆರ್.…

Read More

ವಿಜಯಪುರದಲ್ಲಿ ೧೦೨ ನೂತನ ನಗರ ಸಾರಿಗೆ ವಾಹನಗಳಿಗೆ ಚಾಲನೆ | ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ಒಂದು ಸಾವಿರ ಹಾಗೂ ನೇರ ನೇಮಕಾತಿ ೯೦೦೦ ಸೇರಿದಂತೆ ಹತ್ತು ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಹೇಳಿದರು.ನಗರದ ದರಬಾರ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ೧೦೨ ನೂತನ ನಗರ ಸಾರಿಗೆ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಪತ್ರಿಕಾಗೋಷ್ಠಿ ಉದ್ಧೇಶಿಸಿ ಅವರು ಮಾತನಾಡಿದರು.ರಾಜ್ಯದಲ್ಲಿ ನಗರಗಳ ವ್ಯಾಪ್ತಿ ವೃದ್ಧಿಸುತ್ತಿದೆ. ಬೆಳೆಯುತ್ತಿರುವ ನಗರಗಳಲ್ಲಿನ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಸುಸಜ್ಜಿತ ಮತ್ತು ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚುವರಿ ೧೧೨ ಬಸ್‌ಗಳನ್ನು ಹಂಚಿಕೆ ಮಾಡಲಾಗಿದೆ. ಪ್ರಸ್ತುತವಾಗಿ ನೂತನ ೧೦೨ ಹೊಸ ನಗರ ಸಾರಿಗೆ ವಾಹನ ಬಸ್‌ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಆಯ-ವ್ಯಯ (ಬಜೆಟ್) ಅಂದಾಜು ಪತ್ರಿಕೆ ತಯಾರಿಸಲು ಸಾರ್ವಜನಿಕರಿಮದ ಸಲಹೆ-ಸೂಚನೆ ಪಡೆದುಕೊಳ್ಳಲು ದಿನಾಂಕ:೨೩-೧೨-೨೦೨೫ ರಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆ ಮುಖ್ಯ ಕಚೇರಿಯಲ್ಲಿ ದ್ವೀತಿಯ ಸುತ್ತಿನ ಆಯ-ವ್ಯಯ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.ಸಾರ್ವಜನಿಕರು, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು, ವ್ಯಾಪಾರ ಮತ್ತು ಕೈಗಾರಿಕೆ ಸಂಸ್ಥೆ ಒಕ್ಕೂಟಗಳ ಸದಸ್ಯರು ಮತ್ತು ಇತರೆ ಸಂಘ-ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿ ಸಲಹೆ-ಸೂಚನೆಗಳನ್ನು ನೀಡುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯ ಮೂಲಕ ಕೋರಿದ್ದಾರೆ.

Read More