Author: editor.udayarashmi@gmail.com

-ಚೇತನ ಶಿವಶಿಂಪಿಮುದ್ದೇಬಿಹಾಳ: ಪೆಂಡಾಲ್ ಇಲ್ಲದ ವೇದಿಕೆ, ಹಳೆಯ ಕಾಲದ ಖರ‍್ಚಿಗಳು, ಸೀದಾ ಸಾದಾ ಕರ‍್ಯಕ್ರಮ. ಸ್ವಯಂ ಪ್ರೇರಿತರಾಗಿ ಸೇರಿದ್ದ ಅಪಾರ ಅಭಿಮಾನಿಗಳ ದಂಡು, ನಾಯಕನ ಕಣ್ಣಲ್ಲಿ ಜಿನುಗಿದ ನೀರು. ಅಕ್ಷರಶಃ ಚಲನಚಿತ್ರವೊಂದರ ತುಣುಕನ್ನು ವೀಕ್ಷಿಸುತ್ತಿದ್ದೆವೇನೋ ಎಂಬ ಭಾವನೆ. ಎಲ್ಲಿ ನೋಡಿದರಲ್ಲಿ ರಾರಾಜಿಸಿದ ಕಾಂಗ್ರೆಸ್ ಪಕ್ಷದ ಬಾವುಟಗಳು. ಇಂಥದ್ದೊಂದು ದೃಶ್ಯ ಕಂಡು ಬಂದಿದ್ದು ತಾಲೂಕಿನ ನಾಲತವಾಡ ಪಟ್ಟಣದ ಮಾಜಿ ಸಚಿವ ದಿ.ಜೆ.ಎಸ್.ದೇಶಮುಖ ಅವರ ವಾಡೆಯಲ್ಲಿ.ನಾಲ್ಕು ದಶಕಗಳಿಂದ ದೂರವಾಗಿದ್ದ ದೇಶಮುಖ ಹಾಗೂ ನಾಡಗೌಡರ ಕುಟುಂಬಗಳು ಒಂದಾಗಿದ್ದೇ ಇಂತಹ ಸನ್ನಿವೇಶಕ್ಕೆ ಕಾರಣವಾಗಿತ್ತು. ಸಾವಿರಾರು ಎಕರೆ ಭೂಮಿಯನ್ನು ದಾನ ಮಾಡಿ ಹಲವಾರು ಕುಟುಂಬಗಳಿಗೆ ಆಸರೆಯಾಗಿದ್ದ ರಾಜ ಮನೆತನಗಳಲ್ಲಿ ಪ್ರಮುಖವಾಗಿದ್ದ ಈ ಕುಟುಂಬಗಳು ಒಂದಾಗಿ ಈ ಬಾರಿಯ ಚುನಾವಣೆಯಲ್ಲಿ ಹೊಸ ಇತಿಹಾಸವನ್ನು ಬರೆಯಲು ಸಜ್ಜಾಗಿವೆ.ಸಧ್ಯ ವಿದಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಈ ಎರಡು ಕುಟುಂಬಗಳು ಒಂದಾಗಿದ್ದು ಈ ಭಾಗದ ಮತದಾರರಿಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ. ಪ್ರತಿ ಚುನಾವಣೆಯಲ್ಲಿ ಈ ಎರಡೂ ಕುಟುಂಬಗಳ ಒಬ್ಬೊಬ್ಬರು ಅಭ್ರ‍್ಥಿಗಳು ಕಣದಲ್ಲಿ ಇರುತ್ತಿದ್ದರು. ಹೀಗಾಗಿ ನಾಡಗೌಡರ…

Read More

ವಿವಿಧೆಡೆ ದಾಳಿ ರೂ.೭೪.೯೦ಲಕ್ಷ ಮೌಲ್ಯದ ಅಬಕಾರಿ ವಸ್ತುಗಳು ವಶಕ್ಕೆ ವಿಜಯಪುರ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ದಿನದಿಂದ ಏಪ್ರಿಲ್ 16ರವರೆಗೆ ಜಿಲ್ಲೆಯಲ್ಲಿ ವಿವಿಧೆಡೆ ಅಬಕಾರಿ ದಾಳಿ ನಡೆಸಿ 74,90,837 ರೂ. ಮೌಲ್ಯದ ಅಬಕಾರಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತರು ತಿಳಿಸಿದ್ದಾರೆ.ಚುನಾವಣೆಯನ್ನು ಅತ್ಯಂತ ನಿಷ್ಪಕ್ಷಪಾತ ಹಾಗೂ ಶಾಂತಿಯುತವಾಗಿ ನಡೆಸುವ ದೃಷ್ಟಿಯಿಂದ ಅಬಕಾರಿ ಇಲಾಖೆಯಿಂದ ವಿವಿಧ ಕ್ರಮ ಕೈಗೊಳ್ಳಲಾಗಿದ್ದು, ಈವರೆಗೆ 510 ಅಬಕಾರಿ ದಾಳಿ ನಡೆಸಿ, 59 ಘೋರ, 10 ಬಿಎಲ್‌ಸಿ ಹಾಗೂ15(ಎ) 379 ಪ್ರಕರಣಗಳು ಸೇರಿದಂತೆ 448ಪ್ರಕರಣಗಳನ್ನು ದಾಖಲಿಸಿ, 535 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 3,25,206 ರೂ. ಮೌಲ್ಯದ 773.37 ಲೀ. ಮದ್ಯ, 6,400 ರೂ. ಮೌಲ್ಯದ 7.2 ಲೀ. ಹೊರ ರಾಜ್ಯದ ಮದ್ಯ, 19,88,881 ರೂ. ಮೌಲ್ಯದ 8,459.30 ಲೀ. ಬೀಯರ್, 11950 ರೂ. ಮೌಲ್ಯದ 119.5ಲೀ. ಕಳ್ಳಭಟ್ಟಿ ಸರಾಯಿ ಹಾಗೂ 400ರೂ.ಮೌಲ್ಯದ ೦೪ ಲೀ.ಸೇಂಧಿ ಸೇರಿದಂತೆ 23,32,837 ರೂ. ಮೌಲ್ಯದ 9363.210…

Read More

ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಬಲೇಶ್ವರದಲ್ಲಿ ನಾಮಪತ್ರ ಸಲ್ಲಿಸಿದರು. ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಅವರು, ನೀರಾವರಿ ಇಲಾಖೆ ಕಛೇರಿಗೆ ತೆರಳಿ ಚುನಾವಣಾಧಿಕಾರಿ ಮಂಜುನಾಥ ಅವರಿಗೆ ಎರಡು ಸೆಟ್ ಗಳಲ್ಲಿ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ದಳವಾಯಿ, ಭೂತಾಳಸಿದ್ಧ ಒಡೆಯರ, ಈರಗೊಂಡ ಬಿರಾದಾರ, ಪುತಳಿಬಾಯಿ ರಾಮು ರಾಠೋಡ, ತಮ್ಮಣ್ಣ ಹಂಗರಗಿ, ಸಿದ್ದು‌ ಗೌಡನವರ, ಮುತ್ತಪ್ಪ‌ ಶಿವಣ್ಣವರ, ಸೋಮನಾಥ ಬಾಗಲಕೋಟಉಪಸ್ಥಿತರಿದ್ದರು. ಇದಕ್ಕೂ ಮುಂಚೆ ಎಂ. ಬಿ. ಪಾಟೀಲ ಅವರು ಪತ್ನಿ ಆಶಾ, ಪುತ್ರ ಬಸನಗೌಡ ಎಂ. ಪಾಟೀಲ, ಸಹೋದರ ಸುನೀಲಗೌಡ ಪಾಟೀಲ ಮತ್ತು ಅವರ ಪತ್ನಿ‌ ರೇಣುಕಾ ಹಾಗೂ‌ ಸಹೋದರಿನ ಕಲ್ಪನಾ ಪಾಟೀಲ ಜೊತೆಗೂಡಿ ಬಬಲೇಶ್ವರ ಪಟ್ಟಣದಲ್ಲಿರುವ ಶ್ರೀ ಗುರುಪಾದೇಶ್ವರ ಮತ್ತು ಶ್ರೀ ಶಾಂತವೀರ ಮಹಾಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಅಲ್ಲದೇ, ಆಲಗೂರ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯರು ಆಶೀರ್ವಾದ ಪಡೆದರು. ಅಲ್ಲದೇ, ತಮ್ಮ‌ ತಾಯಿ ಕಮಲಾಬಾಯಿ ಬಿ. ಪಾಟೀಲ ಅವರಿಂದ…

Read More

-ಕೆ.ಪಿ.ಬೊಳೆಗಾಂವಚಡಚಣ: ನಾಗಠಾಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಅಚ್ಚರಿಯ ಹೆಸರು ಪ್ರಕಟಿಸುವ ಮೂಲಕ ಟಿಕೆಟ್ ಆಕಾಂಕ್ಷಿಗಳಿಗೆ ದಿಗ್ಬ್ರಮೆ ಯಾಗುವಂತೆ ಬಿಜೆಪಿ ವರಿಷ್ಟರು ನಿರ್ಧಾರ ಕೈಗೆ ತೆಗೆದುಕೊಂಡಿದ್ದಾರೆ.ಕಳೆದ ಚುನಾವಣೆಯಲ್ಲಿ ಕೆಲವೇ ಮತಗಳಿಂದ ಪರಾಭವಗೊಂಡ ಹಾಗೂ ಸಚಿವ ಗೋವಿಂದ ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಅವರು ಅಲ್ಲಿಂದ ಇಲ್ಲಿಯವರೆಗೆ ಬಿಜೆಪಿ ಪಕ್ಷದ ಪ್ರಚಾರ, ಸತತ ಜನರ ಸಂಪರ್ಕ ದೊಂದಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಸಿಗುತ್ತದೆಂಬ ಭಾವನೆಯಲ್ಲಿದ್ದರು. ಅಲ್ಲದೆ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಕ್ಷದ ಸಂಘಟನೆ ಮಾಡುತ್ತಾ ಬಂದಿದ್ದರು.ಒಬ್ಬರದು ಈ ಕಥೆಯಾದರೆ ಇನ್ನೊಬ್ಬರ ಕತೆಯೇ ಬೇರೆ. ಕಳೆದ ಕೆಲ ದಿನಗಳ ಹಿಂದೆ ಸಿಪಿಐ ಕೆಲಸಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಅಣಿಯಾಗಿದ್ದ ಮಹೇಂದ್ರ ನಾಯಕ್ ಅವರಿಗೂ ಶಾಕ್ ಆಗಿದೆ. ಪಕ್ಷದ ಹಿರಿಯ ಮುಖಂಡರ ಭರವಸೆಯಿಂದ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಅವರೀಗ ಹೈಕಮಾಂಡ ನಡೆಯಿಂದ ಕೈ ಹಿಸುಕಿಕೊಳ್ಳುವಂತಾಗಿದೆ. ಕಾರ್ಯಕರ್ತರಲ್ಲಿ ಗೊಂದಲ :ಚುನಾವಣೆ ದಿನಾಂಕ ಪ್ರಕಟವಾದಾಗಿನಿಂದ ಇಲ್ಲಿಯವರೆಗೆ ಮತಕ್ಷೇತ್ರದ ಕಾರ್ಯಕರ್ತರು ತಮಗೆ ಬೇಕಾದ ನಾಯಕರ ಹೆಸರು…

Read More

ವಿಜಯಪುರ: ನೀರಾವರಿ ಕೆಲಸಗಳನ್ನು ಮೆಚ್ಚಿ ರೈತನೋರ್ವ ಮಕ್ಕಳೊಂದಿಗೆ ಆಗಮಿಸಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರಿಗೆ ಚುನಾವಣೆ ಖರ್ಚಿಗೆ ಹಣ ನೀಡಿ ಅಭಿಮಾನ ವ್ಯಕ್ತಪಡಿಸಿದ ಘಟನೆ ತಿಕೋಟಾ ತಾಲೂಕಿನ ತಾಜಪುರ(ಎಚ್) ಗ್ರಾಮದಲ್ಲಿ ನಡೆಯಿತು. ಬಬಲೇಶ್ವರದಲ್ಲಿ ನಾಮಪತ್ರ ಸಲ್ಲಿಸದ ಬಳಿಕ ಎಂ. ಬಿ. ಪಾಟೀಲ ಅವರು ತಾಜಪುರ(ಎಚ್) ಗ್ರಾಮಕ್ಕೆ ಭೇಟಿ ನೀಡಿದರು. ಈ ಸುದ್ದಿ ತಿಳಿದ ಗ್ರಾಮದ ರೈತ ಕುಬೇರ ಹಾಲಳ್ಳಿ ತನ್ನ ಪುಟ್ಟ ಮಕ್ಕಳಾದ ಕುಶಾಲ ಮತ್ತು ಓಂಕಾರ ಜೊತೆ ಆಗಮಿಸಿ ಎಂ.ಬಿ.ಪಾಟೀಲ ಅವರನ್ನು ಭೇಟಿ ಮಾಡಿದರು. ನಿಮ್ಮಿಂದಾಗಿ ನಮ್ಮ ಹೊಲಕ್ಕೆ ನೀರು ಬಂದಿದೆ. ಆರ್ಥಿಕ ಪರಿಸ್ಥಿರಿ ಸುಧಾರಿಸಿದೆ. ನಿಮ್ಮ ಋಣ ತಿರಿಸಲು ಸಾಧ್ಯವಿಲ್ಲ. ಆದರೆ, ಅಭಿಮಾನದ ಪ್ರತಿಕವಾಗಿ ಇಬ್ಬರೂ ಮಕ್ಕಳಿಂದ ತಲಾ ರೂ.1001 ರಂತೆ ಒಟ್ಟು ರೂ.2002 ಹಣ ಕಾಣಿಕೆ ನೀಡಿದರು. ಬಳಿಕ ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಜನತೆಗೆ ಯಾವುದೇ ರೀತಿಯಲ್ಲಿ ಒಳಿತಾಗಿಲ್ಲ. ರೂ.3.50 ಕೋ. ಸಾಲ ಮಾಡಿದೆ. ರೈತರ ಆದಾಯಕ್ಕಿಂತ…

Read More

ಸಿಂದಗಿ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಅನುಮೋದನೆಯಂತೆ ಸಿಂದಗಿಯ ಶರಣಮ್ಮ ನಾಯಕ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯಾಧ್ಯಕ್ಷ ಡಾ.ಸಿ.ಇ ರಂಗಸ್ವಾಮಿ ಆದೇಶಿಸಿದ್ದಾರೆ.

Read More

ಸಿಂದಗಿ: ಕಳೆದ 15ತಿಂಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಸಾಕಷ್ಟು ಮಾಡಿದ್ದು ನನಗೆ ಸಂತಸ ತಂದಿದೆ. ಮತಕ್ಷೇತ್ರದ ಜನ ನನಗೆ ಕೈಬೀಡುವುದಿಲ್ಲ. ಏ.19 ರಂದು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಮತಕ್ಷೇತ್ರದ ಅಭ್ಯರ್ಥಿ ರಮೇಶ ಭೂಸನೂರ ಹೇಳಿದರು.ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸೋಮವಾರದಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಏ.೧೯ರಂದು ಅಂಬೇಡ್ಕರ್ ವೃತ್ತದಿಂದ ಸಂಗೊಳ್ಳಿ ರಾಯಣ್ಣ, ಅಂಬಿಗರ ಚೌಡಯ್ಯ ವೃತ್ತ, ಬಸವೇಶ್ವರ ವೃತ್ತದ ಮಾರ್ಗದ ಮೂಲಕ ತಹಶೀಲ್ದಾರ ಕಾರ್ಯಾಲಯಕ್ಕೆ ಬಂದು ಬೆಳಿಗ್ಗೆ 11 ಗಂಟೆಗೆ ಚುನಾವಣಾಧಿಕಾರಿ ಅವರಿಗೆ ನಾಮಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು. ಚುನಾವಣಾ ಉಸ್ತುವಾರಿ ಬಾಲಚಂದ್ರ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಸಿಂದಗಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ, ರಾಜಶೇಖರ ಪೂಜಾರಿ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸಂತೋಷ ಪಾಟೀಲ ಡಂಬಳ, ಎಂ.ಎಸ್. ಮಠ, ಶಿವುಕುಮಾರ ಬಿರಾದಾರ, ಗುರು ತಳವಾರ ಸೇರಿದಂತೆ ಅನೇಕರಿದ್ದರು.

Read More

ಚಿಮ್ಮಡ: ಬೈಕ್ ಟ್ರಾಕ್ಟರ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೋರ್ವರು ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಚಿಮ್ಮಡ ಗ್ರಾಮದಲ್ಲಿ ನಡೆದಿದೆ.ಗ್ರಾಮದ ದೇವಾಂಗ ಸಮಾಜದ ಪ್ರಮುಖ ಬಸಪ್ಪಾ ಮಲ್ಲಪ್ಪ ಯಂಕ0ಚಿಯವರೇ ಮೃತಪಟ್ಟ ದುರ್ದೈವಿ.ಮೃತರು ಸೋಮವಾರ ಮುಂಜಾನೆ 5.30ಕ್ಕೆ ಪತ್ನಿಯನ್ನು ಬೈಕ್ ಮೇಲೆ ಕರೆದುಕೊಂಡು ಗದ್ದೆಗೆ ಹೋಗುವಾರ ಗ್ರಾಮದ ಗುಡ್ಡದ ಪ್ರಭುಲಿಂಗೇಶ್ವರ ದೇವಸ್ಥಾನದ ತಿರುವಿನಲ್ಲಿ ಎದುರಿಗೆ ಬರುತಿದ್ದ ಟ್ರಾಕ್ಟರನ ಎರಡನೆಯ ಟ್ರೆಲರ್ ತಲೆಗೆ ಬಲವಾಗಿ ಬಡಿದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅವರ ಪತ್ನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃರಿಗೆ ಪತ್ನಿ, ಆರು ಜನ ಪುತ್ರಿಯರು, ಓರ್ವ ಪುತ್ರ ಇದ್ದಾರೆ. ಈ ಘಟಣೆ ಕುರಿತು ಬನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Read More

ನಾಗರಬೆಟ್ಟ ಆಕ್ಸಫರ್ಡ್ ಎಕ್ಸಪರ್ಟ ಕಾಲೇಜಿನಲ್ಲಿ ನಡೆದ ಪರೀಕ್ಷೆ ಮುದ್ದೇಬಿಹಾಳ : ತಾಲೂಕಿನ ನಾಗರಬೆಟ್ಟ ಗ್ರಾಮದ ಹೆಸರಾಂತ ಆಕ್ಸ್ಫರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ರವಿವಾರ ಟ್ಯಾಲೆಂಟ್ ಅವಾರ್ಡ್(ಪರೀಕ್ಷೆ ಬರೆಯಿರಿ ಬಹುಮಾನ ಗೆಲ್ಲಿ) ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ದೆಯಲ್ಲಿ ಒಟ್ಟು ೮೮೦ ವಿದ್ಯಾರ್ಥಿಗಳು ಭಾಗಿಯಾಗಿ ಪರೀಕ್ಷೆಯನ್ನು ಎದುರಿಸಿದರು.ರಾಯಚೂರು ಜೆ.ಎನ್.ವಿ ಶಾಲೆಯ ಗುರುರಾಜಗೌಡ ನಾಡಗೌಡ ಪ್ರಥಮ, ಬಿದರಕುಂದಿ ಆದರ್ಶ ವಿದ್ಯಾಲಯದ ಸಂಭ್ರಮ ಹೊಲ್ದೂರ ದ್ವಿತೀಯ, ಮುದ್ದೇಬಿಹಾಳ ಪ್ರಾರ್ಥನಾ ಶಾಲೆ ವಿದ್ಯಾರ್ಥಿನಿ ವಾಣಿಶ್ರೀ ಹಳ್ಳದ ಹಾಗೂ ಬಿದರಕುಂದಿ ಆದರ್ಶ ವಿದ್ಯಾಲಯದ ಪ್ರೀತಮ್ ಮಾಗಿ ತೃತೀಯ, ನಾಗರಬೆಟ್ಟ ಆಕ್ಸಫರ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿಕಾಸ ಕ್ಷತ್ರಿ, ಕಾಲಕಾಲೇಶ್ವರ ಹಿರೇಮಠ ನಾಲ್ಕನೇ ಬಹುಮಾನ ಪಡೆದುಕೊಂಡರು. ಸೃಜನ್ ಕನ್ನೂರ, ನಚಿಕೇತ ಭಾವಿಕಟ್ಟಿ, ಸೃಷ್ಟಿ ಬ್ಯಾಕೋಡ, ಮಂಜುನಾಥ ಕಾಖಂಡಕಿ ಸಮಾಧಾನಕರ ಬಹುಮಾನ ಪಡೆದುಕೊಂಡರು. ಪರೀಕ್ಷೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ವಿಧ್ಯಾರ್ಥಿಗಳು ಹಾಜರಾಗಿದ್ದರು.ನಂತರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ದಿವ್ಯ ಸಾನಿಧ್ಯವಹಿಸಿದ್ದ ಡಾ.ಚನ್ನವೀರ ದೇವರು ಮಾತನಾಡಿ, ವಿದ್ಯಾರ್ಥಿಗಳಾದವರು ಯಾವಾಗಲೂ ಆತ್ಮಬಲವನ್ನು ಹೆಚ್ಚಿಸಿಕೊಳ್ಳಬೇಕು. ದೈನಂದಿನ ಚಟುವಟಿಕೆಯ ದಿನಚರಿಯನ್ನು…

Read More

ಸಿಂದಗಿ: ಪಟ್ಟಣದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಂದಾ ಯಂಪುರೆ ಡಾ.ಶಾಂತವೀರ ಮನಗೂಳಿ ಹಾಗೂ ನಾಗರತ್ನ ಅಶೋಕ ಮನಗೂಳಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.ಈ ವೇಳೆ ಡಾ.ಸಂಧ್ಯಾ ಮನಗೂಳಿ ಸೇರಿದಂತೆ ಕಾರ್ಯಕರ್ತರು ಇದ್ದರು.

Read More