Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ರವಿವಾರ ತಡರಾತ್ರಿ ಯಂಕAಚಿ ಗ್ರಾಮದ ಮಲ್ಕಪ್ಪ ಸಾಸನೂರ ಮತ್ತು ಶರಣಪ್ಪ ತಳಕೇರಿ ಎಂಬುವರಿಗೆ ಸೇರಿದ ಒಟ್ಟು ೧೨ ಕುರಿಗಳು ಸಿಡಿಲ ಬಡಿತಕ್ಕೆ ಅಸುನೀಗಿವೆ. ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗಿದ್ದು ಇಲ್ಲಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಿಂದಗಿ: ರಾಜ್ಯದಲ್ಲಿ ಈಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಇಲ್ಲಿನ ಅಭ್ಯರ್ಥಿ. ಇಲ್ಲಿ ವ್ಯಕ್ತಿಗಿಂತ ಪಕ್ಷ ದೊಡ್ಡದು. ಎಂದು ಸಿಂದಗಿ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ವಿಠ್ಠಲ ಕೋಳೂರ ಹೇಳಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ, ಏ.19 ರಂದು ಕಾಂಗ್ರೆಸ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ ಮನಗೂಳಿ ನಾಮಪತ್ರ ಸಲ್ಲಿಸಲಿದ್ದಾರೆ.ಗಾಂಧಿ ವೃತ್ತದಿಂದ ಮೆರವಣಿಗೆ ಬೃಹತ್ ಮಟ್ಟದಲ್ಲಿ ಪ್ರಾರಂಭಗೊAಡು ಅಂಬೇಡ್ಕರ ವೃತ್ತ, ಟಿಪ್ಪು ಸುಲ್ತಾನ, ಸ್ವಾಮಿ ವಿವೇಕಾನಂದ ವೃತ್ತ, ಬಸವೇಶ್ವರ ವೃತ್ತದ ಮೂಲಕ ತಹಶೀಲ್ದಾರ ಕಾರ್ಯಾಲಯಕ್ಕೆ ತಲುಪಿ ನಾಮಪತ್ರ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಿದರು.ಚುನಾವಣಾ ಅಭ್ಯರ್ಥಿ ಅಶೋಕ್ ಮನಗೂಳಿ ಮಾತನಾಡಿ, ಸಿಂದಗಿ ಮತಕ್ಷೇತ್ರದಿಂದ ೧೦ ಜನರು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಪಕ್ಷ ನನಗೆ ಟಿಕೆಟ್ ನೀಡಿದೆ. ಎಲ್ಲರೂ ಪಕ್ಷಕ್ಕಾಗಿ ಒಗ್ಗಟ್ಟಾಗಿ ದುಡಿದು ಗೆಲುವನ್ನು ನಮ್ಮದಾಗಿಸಿಕೊಳ್ಳುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರ: ನಗರದ ಬೌದ್ಧ ವಿಹಾರ ನಿರ್ಮಾಣ ಸಮಿತಿಯ ಆಡಳಿತ ಮಂಡಳಿಯ 2022-23ನೆಯ ಸಾಲಿನ ಅಧ್ಯಕ್ಷರಾಗಿ ರಾಜಶೇಖರ ಯಡಹಳ್ಳಿ ಅವರು ಮುಂದುವರೆದಿದ್ದಾರೆ.ಇAದು ನಗರದ ಸಾರಿಪುತ್ರ ಬುದ್ಧವಿಹಾರದಲ್ಲಿ ಕರೆಯಲಾಗಿದ್ದ ಆಡಳಿತ ಮಂಡಳಿಯ ತುರ್ತು ಸಭೆಯಲ್ಲಿ ಸಮಾಜದ ಹಿರಿಯರಾದ ಚಂದ್ರಶೇಖರ ಕೊಡಬಾಗಿ ಅವರು ರಾಜಶೇಖರ ಯಡಹಳ್ಳಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ, ಅಭಿನಂದಿಸಿದರು.ಬುದ್ಧವಿಹಾರ ನಿರ್ಮಾಣಕ್ಕೆ ಸಂಬ0ಧಿಸಿದ0ತೆ ಬಾಕಿ ಉಳಿದ ಕೆಲಸಗಳನ್ನು ಬೇಗನೆ ಪೂರೈಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತಲ್ಲದೆ ವರ್ಷಪೂರ್ತಿ ಬೌದ್ಧ ಧಮ್ಮದ ಕಾರ್ಯಕ್ರಮಗಳನ್ನು ಸಮಾಜದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜಶೇಖರ ಯಡಹಳ್ಳಿ ಅವರು, ಆರೋಗ್ಯಕರ ಮತ್ತು ಆದರ್ಶ ಸಮಾಜ ಕಟ್ಟುವ ದಿಸೆಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ತೋರಿದ ಮಾರ್ಗದಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಲ್ಲಿ ಎಲ್ಲರ ಸಹಕಾರವನ್ನು ಕೋರಿದರು ಮತ್ತು ಸಮಿತಿಯು ತಮ್ಮ ಮೇಲೆ ಇರಿಸಿದ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು.ಅಧ್ಯಕ್ಷರ ಅಪ್ಪಣೆಯ ಮೇರೆಗೆ ಬೌದ್ಧ ವಿಹಾರದ ಅಭಿವೃದ್ಧಿಗೆ ತುರ್ತಾಗಿ…
ತಾಳಿಕೋಟಿ: ಪಟ್ಟಣದ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡ ನದೀಂ ಕಡು ಅವರು ತಮ್ಮ ರಾಜಕೀಯ ಮಾರ್ಗದರ್ಶಕಿಯಾದ ಮಂಗಳಾದೇವಿ ಬಿರಾದಾರ ಅವರೊಂದಿಗೆ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಶಾಸಕ ನಡಹಳ್ಳಿ ಅವರ ಜನಪರ ಕಾಳಜಿಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವವನ್ನು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಾಧನೆಗಳನ್ನು ಮೆಚ್ಚಿ ಅವರು ಜೆಡಿಎಸ್ ಧುರೀಣೆಯಾಗಿದ್ದ ಮಂಗಳಾದೇವಿ ಬಿರಾದಾರ ಹಾಗೂ ಅಪಾರ ಬೆಂಬಲಿಗರೊ0ದಿಗೆ ಸೇರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.ಈ ಸಮಯದಲ್ಲಿ ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎ.ಎಸ್. ಪಾಟೀಲ (ನಡಹಳ್ಳಿ), ಶಾಂತಗೌಡ ಬಿರಾದಾರ, ಪುರಸಭೆ ಸದಸ್ಯೆ ಸಂಗಮ್ಮ ದೇವರಹಳ್ಳಿ, ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದ ಎಲ್ಲ ಆಕಾಂಕ್ಷಿಗಳ ಬೆಂಬಲ ಹಾಗೂ ಸಹಕಾರದಿಂದ ಬರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಜಯಗಳಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಸುಣಗಾರ ಹೇಳಿದರು.ಪಟ್ಟಣದಲ್ಲಿ ಭಾನುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು.ದೇವರಹಿಪ್ಪರಗಿ ಮತಕ್ಷೇತ್ರದ ಆಕಾಂಕ್ಷಿಗಳಲ್ಲಿ ಯಾವುದೇ ಭಿನ್ನಮತವಿಲ್ಲ. ಇದನ್ನು ನಾವೆಲ್ಲ ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ಈಗ ನನಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಸ್ಪರ್ಧೆಗೆ ಅವಕಾಶ ದೊರೆತಿದೆ. ಈ ಅವಕಾಶವನ್ನು ನಾವು ಸದುಪಯೋಗ ಪಡೆಸಿಕೊಳ್ಳುತ್ತೇವೆ.ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ನೀಡಿದ ಭ್ರಷ್ಟಾಚಾರರಹಿತ ಆಡಳಿತ ಹಾಗೂ ಜನಪ್ರೀಯ ಯೋಜನೆಗಳು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಪ್ರಣಾಳಿಕೆಗಳು, ಗ್ಯಾರಂಟಿ ಕಾರ್ಡ ಭರವಸೆಗಳು ಜನರನ್ನು ಸೆಳೆಯುವಲ್ಲಿ ಸಫಲವಾಗಿವೆ ಎಂದು ಹೇಳುತ್ತಾ, ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಾಗುವುದು. ನಂತರ ದಿ:೧೯ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ನಾಯಕರು ಹಾಗೂ ಕ್ಷೇತ್ರದ ಎಲ್ಲ ಆಕಾಂಕ್ಷಿಗಳ ಉಪಸ್ಥಿತಿಯಲ್ಲಿ ಮತ್ತೋಮ್ಮೆ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲಿ ಯಾವುದೇ ಪಕ್ಷ ಪ್ರತಿಸ್ಪರ್ಧಿಯಲ್ಲ. ಎಲ್ಲ ನಾಯಕರ ನಾಯಕತ್ವದಡಿ ಪ್ರಚಾರ ಕೈಗೊಂಡು…
ವಿಜಯಪುರ: ನಗರ ಮತಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಅವರ ಪರವಾಗಿ, ಪುತ್ರ ರಾಮನಗೌಡ ಪಾಟೀಲ ಅವರು ಸೋಮವಾರ ನಗರದ ವಿವಿಧೆಡೆ ಸಂಚರಿಸಿ ಪ್ರಚಾರ ನಡೆಸಿ, ಮತಯಾಚಿಸಿದರು.ಈ ವೇಳೆ ಮಾತನಾಡಿದ ಅವರು, ನಮ್ಮ ತಂದೆ ಕಳೆದ ಚುನಾವಣೆಯಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿದ್ದಾರೆ. ದೂಳಾಪುರವಾಗಿದ್ದ ನಗರವನ್ನು ಸ್ಮಾರ್ಟ್ ಸಿಟಿ ಆಗಿ ಹೊಳೆಯುವಂತೆ ಮಾಡಿದ್ದಾರೆ. ಅವರ ವಿರೊಧಿಗಳು ಕೂಡ ಇದನ್ನು ಒಪ್ಪುತ್ತಾರೆ. ಗುಣಮಟ್ಟದ ಆಂತರಿಕ ಹಾಗೂ ಮುಖ್ಯ ರಸ್ತೆಗಳ ಅಭಿವೃದ್ಧಿ, ಒಳಚರಂಡಿ ನಿರ್ಮಾಣ, ಝಿಮ್, ಚಿಲ್ಡ್ರನ್ ಪಾರ್ಕ್, ಶುದ್ದ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ. ಮೂಲಭೂತ ಸೌಕರ್ಯಗಳ ಜೊತೆಗೆ ವೈನ್ ಪಾರ್ಕ್, ಜವಳಿ ಪಾರ್ಕ್, ಜಿಟಿಟಿಸಿ ಕಾಲೇಜು ಮಂಜೂರು ಮಾಡಿಸಿದ್ದಾರೆ. ಇನ್ನೂ ಹಲವು ಕನಸುಗಳನ್ನು ಹೊತ್ತಿಕೊಂಡಿದ್ದು, ತಾವುಗಳು ಆಶೀರ್ವದಿಸುವ ಮೂಲಕ ಈಡೇರಿಸಲು ನೆರವಾಗಬೇಕು ಎಂದು ಮನವಿ ಮಾಡಿದರು.ಈ ವೇಳೆ ಮುಖಂಡರಾದ ಅಶೋಕ್ ತೊರವಿ, ಸಿದ್ದನಗೌಡ ಬಿರಾದಾರ, ತುಳಸಿರಾಮ್ ಸೂರ್ಯವಂಶಿ, ಚಂದ್ರಕಾAತ ಪತ್ತಾರ, ಭೀಮು ಮಾಶಾಳ, ಶಂಕರ ಹೂಗಾರ…
ಸಿಂದಗಿ: ತಾಲೂಕಿನ ಯಂಕAಚಿ ಗ್ರಾಮದಲ್ಲಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ, ಬೂತ್ ಅಧ್ಯಕ್ಷ ಮತ್ತು ಪೇಜ್ ಪ್ರಮುಖರಿಂದ ಹಮ್ಮಿಕೊಂಡ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಶಾಸಕ ರಮೇಶ ಭೂಸನೂರ ಮಾತನಾಡಿದರು.ಇದೇ ಸಂಧರ್ಭದಲ್ಲಿ ಗ್ರಾಮದ ಚುನಾವಣಾ ಉಸ್ತುವಾರಿಗಳಾದ ಬಾಲಚಂದ್ರ ಜಿ, ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಗುರು ತಳವಾರ ಯಶವತ್ರಾಯಗೌಡ ರೋಗಿ, ಡಾ.ಅನೀಲ ನಾಯಕ ಸಂತೋಷ ಪಾಟೀಲ್, ಜಿ.ಆರ್.ಪಾಟೀಲ್ ಶ್ರೀಶೈಲಗೌಡ ಬಿರಾದಾರ, ಸಿದ್ದು ಬುಳ್ಳಾ, ಮಲ್ಲಿಕಾರ್ಜುನ ಬಿರಾದಾರ, ಶಿವಕುಮಾರ ಬಿರಾದಾರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಉಪಸ್ಥಿತರಿದ್ದರು.
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠವು ಶ್ರೀಗುರು ಮಹಾಂತೇಶ್ವರ ಜಾತ್ರಾ ಮಹೋತ್ಸವದಂಗವಾಗಿ ಈ ವರ್ಷದಿಂದ ಗುರು ಮಹಾಂತೇಶ್ವರಶ್ರೀ ಪ್ರಶಸ್ತಿ ನೀಡಲು ಮುಂದಾಗಿದ್ದು. ಈ ವರ್ಷದ ಪ್ರಶಸ್ತಿಗೆ ವಿಜಯಪುರದ ಹಿರಿಯ ಸಾಹಿತಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಬಿ.ಎಂ.ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೧೧ ಸಾವಿರ ನಗದು, ಕಂಚಿನ ಪ್ರಶಸ್ತಿ, ನೆನಪಿನ ಕಾಣಿಕೆ ಒಳಗೊಂಡಿದೆ. ಈ ಪ್ರಶಸ್ತಿಯನ್ನು ಏ.೨೦ ರಂದು ಬೆಳಗ್ಗೆ ೧೧ ಗಂಟೆಗೆ ಶ್ರೀಮಠದಲ್ಲಿ ನಡೆಯುವ ಶ್ರೀಗುರು ಮಹಾಂತೇಶ್ವರರ ೭೪ ನೇ ಯಾತ್ರಾ ಮಹೋತ್ಸವ ಹಾಗೂ ಗುರು ಸಂಗನಬಸವ ಶಿವಾಚಾರ್ಯ ಸ್ವಾಮೀಜಿಗಳ ೨೨ ನೇ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ೪೦ ಜನ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬರಿಗೆ ಸು.೨ ಸಾವಿರ ಬೆಲೆ ಬಾಳುವ ಬ್ಯಾಗ್, ನೋಟ್ಪುಸ್ತಕ ಮೊದಲಾದ ಪಠ್ಯಪರಿಕರಗಳನ್ನು ವಿದ್ಯಾರ್ಥಿ ವೇತನ ರೂಪದಲ್ಲಿ ನೀಡಲಾಗುತ್ತಿದೆ ಎಂದು ಪಟ್ಟಿಕಂಥಿ ಹಿರೇಮಠದ ಡಾ.ಮಹಾಂತಲಿಂಗ ಶಿವಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಅತಾಲಟ್ಟಿ ಗ್ರಾಮದಲ್ಲಿರುವ ಶಿವಾನಿ ಗಾರ್ಮೆಂಟ್ಸ್ನಲ್ಲಿ ಗುರುವಾರ ಸದರಿ ಘಟಕದ ಎಲ್ಲ ಕಾರ್ಮಿಕರಿಗೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಕಾರ್ಯಕ್ರಮದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎ ವಾಘಮೋರೆ ಅವರು ಮಾತನಾಡಿ ಮತದಾನ ನಮ್ಮ ಹಕ್ಕು. ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಶಿವಾನಿ ಗಾರ್ಮೆಂಟ್ಸ್ ಘಟಕದ ಮಾಲೀಕರಾದ ನಿತೀನ್ ಕೊಕಟನೂರ ಹಾಗೂ ಘಟಕದ ಮಾನವ ಸಂಪನ್ಮೂಲ ಅಧಿಕಾರಿಗಳಾದ ಜೋಶಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕೊಲ್ಹಾರ: ಬಸವನ ಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿಯವರು ಏ.20 ಗುರುವಾರದಂದು ಬಸವನಬಾಗೇವಾಡಿ ತಹಶಿಲ್ದಾರ ಕಚೇರಿಯಲ್ಲಿ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶಂಕರಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ.ಈ ಕುರಿತು ಭಾನುವಾರ ಕೊಲ್ಹಾರ ಪಟ್ಟಣದ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಅಂದು ಬೆಳಿಗ್ಗೆ 11 ಕ್ಕೆ ಬಾಗೇವಾಡಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪಾದಯಾತ್ರೆ ಮೂಲಕ ತಹಶಿಲ್ದಾರ ಕಚೇರಿವರೆಗೂ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಬಸವನ ಬಾಗೇವಾಡಿ, ಕೊಲ್ಹಾರ ಹಾಗೂ ನಿಡಗುಂದಿ ತಾಲ್ಲೂಕುಗಳ ಪಟ್ಟಣ ಹಾಗೂ ಗ್ರಾಮಗಳಿಂದ ಸುಮಾರು 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿ ಬೆಳ್ಳುಬ್ಬಿಯವರಿಗೆ ಬಹಿರಂಗ ಶಕ್ತಿ ತುಂಬಲಿದ್ದಾರೆ ಎಂದು ತಿಳಿಸಿದರು.ಈ ವೇಳೆ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಮಂಡಲ ಸಂಚಾಲಕ ಅರುಣ್ ನಾಯಕ್ ಮಾತನಾಡಿ, ಬೆಳ್ಳುಬ್ಬಿಯವರಿಗೆ ಬಿಜೆಪಿ ಟಿಕೆಟ್ ಘೋಷಿಸಿದ ಬೆನ್ನೆಲೆ ದಿನೇದಿನೇ ಮತಕ್ಷೇತ್ರದ…
