Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ೨೦೨೩ ರ ವಿಧಾನಸಭೆಯ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಜಯಗಳಿಸುವಲ್ಲಿ ಕಾರ್ಯಕರ್ತರ ಪಾತ್ರ ಬಹುಮುಖ್ಯವಾಗಿದೆ ಎಂದು ಉತ್ತರಪ್ರದೇಶದ ಮಾಜಿ ಸಚಿವ ಆನಂದ ಸ್ವರೂಪ ಶುಕ್ಲಾಜೀ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಜೆಪಿಯ ಕಾರ್ಯಕರ್ತರು ಕ್ಷೇತ್ರದ ಮತದಾರರನ್ನು ಪಕ್ಷದೊಂದಿಗೆ ಜೋಡಿಸುವ ಕಾರ್ಯವನ್ನು ಅಭಿಮಾನ ಹಾಗೂ ಪ್ರೇಮದೊಂದಿಗೆ ಮಾಡಬೇಕು. ಎಲ್ಲಿ ಅಭಿಮಾನ ಹಾಗೂ ಪ್ರೇಮ ಇರುತ್ತದೆಯೋ ಅಲ್ಲಿ ದೋಷಣೆಗೆ ಅವಕಾಶವಿಲ್ಲ. ನಾಯಕರ ಕೆಲವು ತಪ್ಪು ನಡೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೇ ದೇಶ ಹಾಗೂ ರಾಜ್ಯದ ಒಳಿತಿಗಾಗಿ ಚುನಾವಣೆಯಲ್ಲಿ ಕನಿಷ್ಠ ೧೫ ಗಂಟೆಗಳವರೆಗೆ ಕಾರ್ಯನಿರ್ವಹಿಸೋಣ. ಬಿಜೆಪಿಯ ಏಳು ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಮುಖರೊಂದಿಗೆ ಸೇರಿ ಮನೆಮನೆ, ಓಣಿ, ಗ್ರಾಮಗಳಿಗೆ ತೆರಳಿ ಮತಯಾಚಿಸೋಣ ಎಂದರು.ಮ0ಡಲ ಅಧ್ಯಕ್ಷ ಭೀಮನಗೌಡ ಸಿದರಡ್ಡಿ ಮಾತನಾಡಿ, ಸ್ಥಳೀಯ ಶಾಸಕರ ಸಾಧನೆ ಹಾಗೂ ರಾಜ್ಯ, ಕೇಂದ್ರ ಸರ್ಕಾರಗಳ ಜನಪ್ರೀಯ ಯೋಜನೆಗಳ ಕುರಿತು ಮತದಾರರಿಗೆ ಮನವರಿಕೆ ಮಾಡಿಸಿ ಚುನಾವಣೆಗೆ ಉಳಿದಿರುವ ಅಲ್ಪ ಸಮಯದಲ್ಲಿ ಜಯದ ಗುರಿ ಮುಟ್ಟಲು ಶ್ರಮಿಸೋಣ ಎಂದರು.ಬಿಜೆಪಿ ಜಿಲ್ಲಾ…
ಕೊಲ್ಹಾರ: ನಂಜುಡಪ್ಪ ವರದಿ ಪ್ರಕಾರ ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಅಖಂಡ ಬಸವನ ಬಾಗೇವಾಡಿ ತಾಲೂಕನ್ನು ಇಂದು ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿ ಅಭಿವೃದ್ದಿ ಪಡಿಸಲು ಮತದಾರರಿಗೆ ಮಾತುಕೊಟ್ಟಂತೆ ನಡೆದುಕೊಂಡಿದ್ದೇನೆ. ದುಡಿದಿರುವ ನನಗೆ ಮತ್ತೊಮ್ಮೆ ತಾವುಗಳು ಹೆಚ್ಚಿನ ಮತಗಳಿಂದ ಆರಿಸಿ ತಮ್ಮೆಲ್ಲರ ಸೇವೆ ಮಾಡಲು ಅನುಕೂಲಮಾಡಿಕೊಡಬೇಕೆಂದು ಶಾಸಕ ಶಿವಾನಂದ ಪಾಟೀಲ ಮನವಿ ಮಾಡಿದರು.ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಗೆದ್ದುಬಂದರೆ ಜನರಿಗೆ ನೀರಿನ ಬದಲು ಬಿಯರ್, ಸಾರಾಯಿ ಕುಡಿಸುತ್ತಾರೆ ಎಂದು ವಿರೋಧಿಗಳು ಅಪಪ್ರಚಾರ ಮಾಡಿದ್ದರು. ಆದರೆ ಅಪಪ್ರಚಾರ ಮಾಡಿದ ವ್ಯಕ್ತಿಗಳು ಇಂದು ತಮ್ಮ ಸ್ವಂತ ಊರಿನಲ್ಲಿ, ತಾಲೂಕಿನಲ್ಲಿ ಬಾರ್ ಗಳನ್ನು ನಡೆಸುತ್ತಿದ್ದಾರೆ. ಈಗ ಯಾರು ಜನರಿಗೆ ಬಿಯರ್ ಕುಡಿಸುತ್ತಿದ್ದಾರೆ ಎನ್ನುವ ಸತ್ಯ ಮತದಾರರು ಮನಗಾಣಬೇಕು ಎಂದರು.ನನ್ನ ಅಧಿಕಾರಾವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವೆ. ಸಂಪರ್ಕ ರಸ್ತೆಗಳ ನಿರ್ಮಾಣ, ೧೧೦*೧೧ ಕೆವಿ ವಿದ್ಯುತ್ ಘಟಕಗಳ ಪ್ರಾರಂಭ, ಸರಕಾರಿ ಪದವಿ, ತಾಂತ್ರಿಕ, ಮಾಧ್ಯಮಿಕ, ಪದವಿಪೂರ್ವ ಕಾಲೇಜುಗಳ ಮಂಜೂರಾತಿ ಜೊತೆಗೆ ಕಟ್ಟಡಗಳ ನಿರ್ಮಾಣ,…
ವಿಜಯಪುರ: ನಗರದಲ್ಲಿ ನಿರೀಕ್ಷೆಗೂ ಮೀರಿ ಆದ ಅಭಿವೃದ್ಧಿ ಹಾಗೂ ಸುರಕ್ಷತೆಯಿಂದ ಜನ ಈ ಬಾರಿ ಬಿಜೆಪಿಗೆ ಮತ ಹಾಕಲು ಉತ್ಸಾಹ ಹೊಂದಿದ್ದಾರೆ ಎಂದು ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಕೆಎಚ್ ಬಿ ಕಾಲೊನಿಯ ಯೋಗಾ ಗಾರ್ಡನ್ ದಲ್ಲಿ ಶನಿವಾರ ವಾಯು ವಿಹಾರಿಗಳನ್ನು ಭೇಟಿ ಮಾಡಿದ ಅವರು, ಕಳೆದ ೨೫ ವರ್ಷಗಳಲ್ಲಿ ಆಗದ ಅಭಿವೃದ್ಧಿ ಕಾರ್ಯವನ್ನು, ಕೊರೊನಾದಿಂದ ಎರಡು ವರ್ಷ ಅಭಿವೃದ್ಧಿ ಕುಂಠಿತಗೊAಡರೂ, ಉಳಿದ ಕೇವಲ ಮೂರು ವರ್ಷದಲ್ಲಿ ವಿಜಯಪುರ ಮಾದರಿ ನಗರವಾಗಿ ಅಭಿವೃದ್ಧಿ ಮಾಡಿರುವ ತೃಪ್ತಿ ಇದೆ ಎಂದರು.ಅಭಿವೃದ್ಧಿ ಜೊತೆಗೆ ದೌರ್ಜನ್ಯ, ಗೂಂಡಾಗಿರಿ ನಿಲ್ಲಿಸಿ, ಹಿಂದೂ ಬಾಂಧವರು ನೆಮ್ಮದಿಯಿಂದ ಬದುಕುವಂತೆ ಮಾಡಿರುವೆ. ಕಾಯಿಪಲ್ಲೆ ಮಾರುಕಟ್ಟೆಯಲ್ಲಿ ನಮ್ಮ ಹೆಣ್ಣು ಮಕ್ಕಳಿಗೆ ಆಗುತ್ತಿರುವ ಅವಮಾನ ತಪ್ಪಿಸಲು ೩೫ ಕಡೆ ಮಾರುಕಟ್ಟೆ ಮಾಡಿರುವೆ ಎಂದರು.ವಿಧಾನಸಭೆಯಲ್ಲಿ ಧ್ವನಿ ಎತ್ತಿದಕ್ಕೆ ಮತ್ತೆ ಹೆಚ್ಚುವರಿ ರೂ.೨೫೦ ಕೋಟಿ ಅನುದಾನ ಬಿಡುಗಡೆಗೊಂಡಿದ್ದರಿAದ ಅತ್ಯುನ್ನತ ವಿಮಾನ ನಿಲ್ದಾಣ ಆಗಲು ಸಾಧ್ಯವಾಯಿತು. ವೈನ್ ಪಾರ್ಕ, ಟೆಕ್ಸಟೈಲ್ಸ್ ಪಾರ್ಕ, ಜಿಟಿಟಿಸಿ…
ಇಂಡಿ: ಇಂಡಿ ಮತಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಕಾಸುಗೌಡ ಬಿರಾದಾರ ಶನಿವಾರ ಪಟ್ಟಣದಲ್ಲಿ ಚುನಾವಣಾಧಿಕಾರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಸರಳವಾಗಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಆಡಳಿತ ಸೌಧಕ್ಕೆ ತೆರಳಿ ಅಲ್ಲಿನ ಚುನಾವಣೆ ಅಧಿಕಾರಿ ಹಾಗೂ ಕಂದಾಯ ಉಪ ಅಧಿಕಾರಿಯಾಗಿರುವ ರಾಮಚಂದ್ರ ಗಡದೆ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ನಂತರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಹಾಗೂ ಅಭ್ಯರ್ಥಿ ಕಾಸುಗೌಡ ಬಿರಾದಾರ ಮಾತಾನಾಡಿ, ಇಂದು ಸರಳವಾಗಿ ನಾಮಪತ್ರ ಸಲ್ಲಿಸಿರುವೆ. ಇದೇ ಏ.19 ರಂದು ಬೃಹತ್ ಪ್ರಮಾಣದಲ್ಲಿ ರಾಜ್ಯದ, ಜಿಲ್ಲೆಯ ಹಾಗೂ ತಾಲ್ಲೂಕು ಮುಖಂಡರು ಮತ್ತು ಕಾರ್ಯಕರ್ತರ ಜೊತೆಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಆಕಾಂಕ್ಷಿಗಳ ಪಟ್ಟಿ ದೊಡ್ಡದು ಇರಬಹುದು. ಆದರೆ ಎಲ್ಲರ ಜೊತೆಗೆ ಸೌಹಾರ್ದ ಬೇಟಿ ಮಾಡಿದ್ದೇವೆ. ಅವರನ್ನು ಕರೆದುಕೊಂಡು ಎಲ್ಲರೂ ಸೇರಿ ಬಿಜೆಪಿ ಪಕ್ಷಕ್ಕೆ ಪಕ್ಕಾ ಗೆಲುವು ತರುತ್ತೆವೆ ಎಂದು ಹೇಳಿದರು.ಸದ್ಯ ಕ್ಷೇತ್ರದಲ್ಲಿ ಸುಮಾರು 86 ಹಳ್ಳಿಗಳಿಗೆ…
Udayarashmi kannada daily newspaper
Udayarashmi kannada daily newspaper
ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನ ಆಚರಣೆ ವಿಜಯಪುರ: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟçವಾಗಿ ವಿಶ್ವದ ಗಮನ ಸೆಳೆಯುತ್ತಿದೆ. ಸಂವಿಧಾನದಲ್ಲಿ ಎಲ್ಲ ಆದರ್ಶಗಳನ್ನು ಅಳವಡಿಸುವ ಮೂಲಕ ಜನತೆಗೆ ಸಮಾನತೆಯನ್ನು ಒದಗಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು. ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು. ಬೆಳಿಗ್ಗೆ ೯ ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಇಡೀ…
ವಿಜಯಪುರ: ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಹಿನ್ನಲೆಯಲ್ಲಿ ವಿಜಯಪುರ ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಿಗೆ 5 ಜನ ವೆಚ್ಚ ವೀಕ್ಷಕರು ಹಾಗೂ 4 ಜನ ಸಾಮಾನ್ಯ ವೀಕ್ಷಕರನ್ನು ಭಾರತ ಚುನಾವಣಾ ಆಯೋಗ ನೇಮಕ ಮಾಡಿದ್ದು, ಈ ವೀಕ್ಷಕರಿಗೆ ಲೈಸನ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.ವೆಚ್ಚ ವೀಕ್ಷಕರ ವಿವರ :ಮುದ್ದೇಬಿಹಾಳ ಮತ್ತು ದೇವರಹಿಪ್ಪರಗಿ ಮತಕ್ಷೇತ್ರದ ವೆಚ್ಚ ವೀಕ್ಷಕರಾಗಿ ಶ್ರೀಮತಿ ಗೋಲಾಪ್ ಪ್ರಜ್ಞಾ ರಾಜೇಂದ್ರ (ಮೊ:7588182953) ಅವರನ್ನು ನೇಮಕ ಮಾಡಲಾಗಿದ್ದು, ಲೈಸನ್ ಅಧಿಕಾರಿಗಳಾಗಿ ಪರಶುರಾಮ ಚಲವಾದಿ (ಮೊ:9110888518), ಶೀಘ್ರಲಿಪಿಗಾರರನ್ನಾಗಿ ರಾಜಕುಮಾರ ಚವ್ಹಾಣ (ಮೊ:9902103931), ವಾಹನ ಚಾಲಕ ಶಿವಪ್ಪ ಪೂಜಾರಿ (ಮೊ:9900559373) ಹಾಗೂ ಗನ್ಮ್ಯಾನ್ ಚನ್ನು ಗುರು ಶೆಟ್ಟಿ (ಮೊ:82174-26633) ಇವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.ಬಸವನಬಾಗೇವಾಡಿ ಮತ್ತು ಬಬಲೇಶ್ವರ ಮತಕ್ಷೇತ್ರದ ವೆಚ್ಚ ವೀಕ್ಷಕರಾಗಿ ಹರ್ಮಾ ಧರ್ಮೇಂದ್ರಕುಮಾರ (ಮೊ:9925460500) ಅವರನ್ನು ನೇಮಕ ಮಾಡಲಾಗಿದ್ದು, ಲೈಸನ್ ಅಧಿಕಾರಿಗಳಾಗಿ ಲಕ್ಷö್ಮಣ ಮೋರೆ (ಮೋ:9980098836), ಟೈಪಿಸ್ಟ್ ಪ್ರಭಾಕರ…
ವಿಜಯಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿನ ಪುತ್ಥಳಿಗೆ ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಗರ ಶಾಸಕರು ತಮ್ಮ ಅವಧಿಯಲ್ಲಿ ನಿರ್ಮಾಣ ಮಾಡಲಾದ ಅತ್ಯಾಕರ್ಷಕ ಅಂಬೇಡ್ಕರ್ ಪುತ್ಥಳಿಗೆ, ಜಯಂತಿ ಅಂಗವಾಗಿ ಮಾಲಾರ್ಪಣೆ ಸಲ್ಲಿಸಿ, ಜಗತ್ತಿಗೆ ಮಾದರಿಯಾದ ಸಂವಿಧಾನದ ಕೊಡುಗೆ ನೀಡಿರುವ ಅಂಬೇಡ್ಕರ ಅವರ ವಿಚಾರದಾರೆಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವುದಲ್ಲದೆ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು, ಶೋಷಿತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ ಅಂಬೇಡ್ಕರರು ಎಂದು ಹೇಳಿದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪರಶುರಾಮಸಿಂಗ್ ರಜಪುತ, ಸದಸ್ಯರಾದ ಮಡಿವಾಳ ಯಾಳವಾರ, ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ರಾಜಶೇಖರ ಕುರಿಯವರ ಸೇರಿದಂತೆ ದಲಿತ ಮುಖಂಡರು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.ಪ್ರಚಾರ ಕಾರ್ಯಾಲಯದಲ್ಲಿ ಜಯಂತಿ ಆಚರಣೆನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ ಚುನಾವಣಾ ಪ್ರಚಾರ ಕಾರ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.ಬಿಜೆಪಿ…
ವಿಜಯಪುರ: ನಗರದ ವೀಣಾ ಕೋತವಾಲ ಅವರು ಬೆಂಗಳೂರಿನಲ್ಲಿ ಏರ್ಪಡಿಸಿದ ಜಗನ್ನಾಥ ದಾಸ ವಿರಚಿತ ಹರಿ ಕಥಾಮೃತಸಾರ ಕೃತಿಯನ್ನು ಸಂಪೂರ್ಣ ಬಾಯಿಪಾಠ ಒಪ್ಪಿಸಿದ್ದಕ್ಕಾಗಿ ಅವರಿಗೆ ದಾಸಪ್ರಿಯ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಶ್ರೀ ವ್ಯಾಸಮಧ್ವ ಸಂಶೋಧನ ಪ್ರತಿಷ್ಠಾನದವರು ಏರ್ಪಡಿಸಿದ ಹರಿಕಥಾಮೃತಸಾರ ಕಂಠಪಾಠ ಹಾಗೂ ಎಲ್ಲ ಸಂಧಿಗಳ ತಾರತಮ್ಯ ಹಾಗೂ ಪ್ರಶ್ನೋತ್ತರಗಳಿಗೆ ಉತ್ತರಿಸಿ ದಾಸಪ್ರಿಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಶ್ರೀ ಉತ್ತರಾಧಿಮಠದ ಮಠಾಧೀಶ ಸತ್ಯಾತ್ಮತೀರ್ಥರಿಂದ ಪ್ರಶಸ್ತಿ ಪ್ರಧಾನ ಹಾಗೂ ಬಹುಮಾನವನ್ನು ವೀಣಾ ಕೋತವಾಲ ಪಡೆದುಕೊಂಡಿದ್ದಾರೆ.
